ಸತ್ಯ, ಧರ್ಮ, ನಿಷ್ಠೆಯಲ್ಲಿ ನಡೆಯುವ ಒಕ್ಕಲಿಗ ಸಮುದಾಯ ರಾಜಪರಂಪರೆಯ ಹಿನ್ನಲೆಯ ಸಮುದಾಯ : ಡಿ.ಬಿ.ಬಾಲಕೃಷ್ಣ | ಎಲ್ಲ ಸಮುದಾಯವನ್ನು ಅಪ್ಪಿಕೊಂಡು ಒಪ್ಪಿಕೊಂಡು ಬಂದಿರುವಂತಹ ಸಮುದಾಯ |ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಸೇವಾ ಸಂಘ (ರಿ.) ಮಂಗಳೂರು ಅಸ್ಥಿತ್ವಕ್ಕೆ
ಮಂಗಳೂರು: ಸತ್ಯ, ಧರ್ಮ, ನಿಷ್ಠೆಯಲ್ಲಿ ನಡೆಯುವ ಒಕ್ಕಲಿಗ ಸಮುದಾಯ ರಾಜಪರಂಪರೆಯ ಹಿನ್ನಲೆಯ ಸಮುದಾಯವಾಗಿದ್ದು ಕೇವಲ ಕೃಷಿಕರಾಗಿ ಮಾತ್ರ ಗುರುತಿಸಿಕೊಂಡಿಲ್ಲ. ಬದಲಾಗಿ ಶೈಕ್ಷಣಿಕ, ವೈದ್ಯಕೀಯ, ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯವಾಗಿಯೂ ಬಹಳಷ್ಟು ಕೊಡುಗೆ ನೀಡಿದೆ ಎಂದು ಬಾಲಕೃಷ್ಣ ಡಿ.ಬಿ. ತಿಳಿಸಿದ್ದಾರೆ. ಅವರು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಒಕ್ಕಲಿಗ ಸಮುದಾಯ ಪ್ರಪ್ರಥಮ ಸ್ವಾತಂತ್ರ್ಯ ಹೋರಾಟಗಾರರಾಗಿದ್ದು, ಕೆದಂಬಾಡಿ ರಾಮಯ್ಯ ಗೌಡ, ಗುಡ್ಡೆಮನೆ ಅಪ್ಪಯ್ಯ ಗೌಡ, ಬೆಂಗಳೂರು ನಿರ್ಮಾತೃ ನಾಡ ಪ್ರಭು ಕೆಂಪೇಗೌಡ, ದೇಶಕ್ಕೆ ಪ್ರಧಾನಿ, ರಾಜ್ಯದ ಮೊದಲನೇ, ಎರಡನೇ ಮುಖ್ಯಮಂತ್ರಿ ಹಾಗೂ […]










