ದಕ್ಷಿಣ ಕನ್ನಡ

ಗಾಳಿಯಲ್ಲಿ ತೇಲಿದ ಕಲ್ಲು: ಕಳಂಜದಲ್ಲೊಂದು ವಿಸ್ಮಯ!!

ಕೆಲವು ಸೆಕೆಂಡುಗಳ ಕಾಲ ಕಲ್ಲೊಂದು ಗಾಳಿಯಲ್ಲಿ ತೇಲಾಡುವ ಘಟನೆ ಸುಳ್ಯ ತಾಲೂಕಿನ ಕಳಂಜದ ತಂಟೆಪ್ಪಾಡಿಯಲ್ಲಿ ನಡೆದಿದೆ. ಈ ಘಟನೆ ವಿಸ್ಮಯ ಮೂಡಿಸಿದ್ದು, ಇದು ಹೇಗೆ ಸಾಧ್ಯ ಎಂಬ ಚರ್ಚೆಯೂ ನಡೆಯುತ್ತಿದೆ. ತಂಟೆಪ್ಪಾಡಿಯ ಧನುಶ್ರೀ ಎಂಬವರು ಮೊಬೈಲಿನಲ್ಲಿ ಸೆರೆ ಹಿಡಿದಿರುವ ಚಿತ್ರ ಇದಾಗಿದೆ. ಎಂದಿನಂತೆ ಕಾಲೇಜಿಗೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ರಸ್ತೆ ಬದಿಯ ಕಲ್ಲೊಂದು ನೆಲ ಬಿಟ್ಟು, ಗಾಳಿಯಲ್ಲಿ ತೇಲಾಡುತ್ತಿರುವುದನ್ನು ಕಂಡಿದ್ದಾರೆ. ಅಚ್ಚರಿ ಪಟ್ಟ ಅವರು, ತಮ್ಮ ಮೊಬೈಲಿನಲ್ಲಿ ಅದನ್ನು ಸೆರೆ ಹಿಡಿದಿದ್ದಾರೆ. ಇದೀಗ ಈ ಫೊಟೋ ಸಾಮಾಜಿಕ […]

ಗಾಳಿಯಲ್ಲಿ ತೇಲಿದ ಕಲ್ಲು: ಕಳಂಜದಲ್ಲೊಂದು ವಿಸ್ಮಯ!! Read More »

ಕಂಬಳ ಕೋಣಗಳ ಯಜಮಾನ ಕಟ್ಟಡದಿಂದ ಬಿದ್ದು ಸಾವು !

ಪೂಂಜಾಲಕಟ್ಟೆ: ಹಳೆಯ ಕಟ್ಟಡದ ಮೇಲ್ಚಾವಣಿ ಕೆಡಹುವ ಸಂದರ್ಭದಲ್ಲಿ ಕೆಳಗೆ ಬಿದ್ದು ಕಂಬಳ ಕೋಣಗಳ ಯಜಮಾನ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಬಡಗಕಜೆಕಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ತೆಂಕಕಜೆಕಾರು ಎಂಬಲ್ಲಿ ನಡೆದಿದೆ. ಬಡಗಕಜೆಕಾರು ಗ್ರಾಮದ ಕುಲೆಂಜಿಕೋಡಿ ನಿವಾಸಿ ಸುಂದರ ಪೂಜಾರಿ (55) ಮೃತಪಟ್ಟವರು. ವೃತ್ತಿಯಲ್ಲಿ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಸುಂದರ ಪೂಜಾರಿ ತೆಂಕಕಜೆಕಾರಿನ ವಿಜಯಾ ಎಂಬವರ ದೈವಸ್ಥಾನ ಕಟ್ಟಡ ಕೆಡಹುವ ಕೆಲಸಕ್ಕೆ ಹೋಗಿದ್ದು ಗೋಡೆಯ ಮೇಲಿನಿಂದ ಸ್ಲಾಬ್‌ ತೆಗೆಯುವ ವೇಳೆ ಸ್ಲಾಬ್‌ ಸಹಿತ ಕೆಳಕ್ಕೆ ಬಿದ್ದಿದ್ದರು. ಗಂಭೀರ ಗಾಯಗೊಂಡ

ಕಂಬಳ ಕೋಣಗಳ ಯಜಮಾನ ಕಟ್ಟಡದಿಂದ ಬಿದ್ದು ಸಾವು ! Read More »

ಬಸ್ಸಿಗೆ ಹತ್ತುವ ವೇಳೆ ಚಿನ್ನದ ಸರ ಕಳವು !

ಬೆಳ್ತಂಗಡಿ: ಬಸ್ಸಿಗೆ ಹತ್ತುವ ವೇಳೆ ಚಿನ್ನ ಕಳವು ಮಾಡಿರುವ ಘಟನೆ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಉಜಿರೆ ಗ್ರಾಮದ ವಾರಿಜ ಟಿ. (53) ಮಂಗಳವಾರ ಸಂಜೆ ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಧರ್ಮಸ್ಥಳಕ್ಕೆ ಹೋಗುವ ಕೆಎಸ್ಸಾಆರ್ಟಿಸಿ ಬಸ್ ಗೆ ಹತ್ತುವ ವೇಳೆ ಘಟನೆ ನಡೆದಿದೆ. ವಾರಿಜ ಅವರು ಕೊರಳಿನಲ್ಲಿ ಧರಿಸಿದ್ದ ಚಿನ್ನದ ಸರವನ್ನು ಯಾರೋ ಅನಾಮಿಕರು ಎಳೆದು ತೆಗೆದಿದ್ದಾರೆ. ಈ ಸಂದರ್ಭ ಅವರು ಬೊಬ್ಬೆ ಹೊಡೆದಿದ್ದಾರೆ. ಆದರೆ ಬಸ್ಸಿನಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಿದ್ದುದರಿಂದ ಕಳ್ಳ ಯಾರೆಂದು ಪತ್ತೆಯಾಗಿಲ್ಲ ಎಂದು

ಬಸ್ಸಿಗೆ ಹತ್ತುವ ವೇಳೆ ಚಿನ್ನದ ಸರ ಕಳವು ! Read More »

ಕುಕ್ಕೆಯಲ್ಲಿ ಮಳೆಯ ನಡುವೆ ಲಕ್ಷದೀಪೋತ್ಸವ ಸಡಗರ

ಸುಬ್ರಹ್ಮಣ್ಯ: ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ಲಕ್ಷದೀಪೋತ್ಸವ ವೈಭವದಿಂದ ಜರಗಿತು. ಇದರ ನಡುವೆ ವರುಣ ಸಿಂಚನ ಶುರುವಾಗಿತ್ತು. ಲಕ್ಷದೀಪೋತ್ಸವದ ಸಡಗರ ಹೆಚ್ಚುತ್ತಿದ್ದಂತೆ, ಮಳೆಯ ಅಬ್ಬರವೂ ಇಮ್ಮಡಿಸಿತು. ದೀಪೋತ್ಸವದ ಸಡಗರಕ್ಕೆ ಸ್ವಲ್ಪ ತಡೆಯಾದರೂ, ಭಕ್ತರ ಉತ್ಸಾಹಕ್ಕೆ ತಡೆಯಾಗಲಿಲ್ಲ. ಲಕ್ಷದೀಪೋತ್ಸವದ ಪ್ರಯುಕ್ತ ಕುಣಿತ ಭಜನೆ ಭಕ್ತರ ಗಮನ ಸೆಳೆಯಿತು. ಕುಕ್ಕೆ ಆಸುಪಾಸಿನ ಪ್ರದೇಶದಲ್ಲಿ ಭಾರೀ ಮಳೆ ಸುರಿದಿದೆ.

ಕುಕ್ಕೆಯಲ್ಲಿ ಮಳೆಯ ನಡುವೆ ಲಕ್ಷದೀಪೋತ್ಸವ ಸಡಗರ Read More »

ದಂಪತಿ ಆತ್ಮಹತ್ಯೆ!! | ನೇಣಿಗೆ ಕೊರಳೊಡ್ಡಿದ ರಂಗಿತರಂಗ ನಾಟಕ ಸಂಸ್ಥೆಯ ಸ್ಥಾಪಕ, ಸಮಾಜ ಸೇವಕ ಲೀಲಾಧರ ಶೆಟ್ಟಿ ದಂಪತಿ!

ಹೆಸರಾಂತ ಸಮಾಜ ಸೇವಕ, ಕಾಪು ರಂಗಿತರಂಗ ನಾಟಕ ಸಂಸ್ಥೆಯ ಸ್ಥಾಪಕ ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ ದಂಪತಿ ಜೊತೆಯಾಗಿ ಮನೆಯಲ್ಲೇ ಆತ್ಮಹತ್ಯೆ ಮಾಡಿರುವ ಆಘಾತಕಾರಿ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಒಂದೇ ಸೀರೆಯನ್ನು ನೇಣಾಗಿ ಬಳಸಿಕೊಂಡು, ಅದಕ್ಕೆ ದಂಪತಿ ಕೊರಳೊಡ್ಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸರಳ ಸಜ್ಜನ ವ್ಯಕ್ತಿಯಾಗಿದ್ದ ಲೀಲಾಧರ ಶೆಟ್ಟಿ ಅವರು ಒಂದು ಬಾರಿ ಕಾಪು ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದರು. ಅತ್ಯುತ್ತಮ ನಾಟಕ ತಂಡ ಹೊಂದಿದ್ದರು. ಕಾಪು “ರಂಗಿತರಂಗ” ತಂಡದ

ದಂಪತಿ ಆತ್ಮಹತ್ಯೆ!! | ನೇಣಿಗೆ ಕೊರಳೊಡ್ಡಿದ ರಂಗಿತರಂಗ ನಾಟಕ ಸಂಸ್ಥೆಯ ಸ್ಥಾಪಕ, ಸಮಾಜ ಸೇವಕ ಲೀಲಾಧರ ಶೆಟ್ಟಿ ದಂಪತಿ! Read More »

ಮಾಂಗಲ್ಯ ಸರ ಹಸ್ತಾಂತರಿಸಿ ಪ್ರಾಮಾಣಿಕತೆ ಮೆರೆದ ಲಾಡ್ಜ್ ಮಾಲಕ!

ಸುಬ್ರಹ್ಮಣ್ಯ: ಕಳೆದು ಹೋಗಿದ್ದ ಮಾಂಗಲ್ಯ ಸರವನ್ನು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಡಿ. 9ರಂದು ವಸತಿ ಗೃಹಕ್ಕೆ ಬಂದಿದ್ದ ಮೈಸೂರಿನ ಯಾತ್ರಾರ್ಥಿಗಳು ಡಿ. 10ರಂದು ತೆರಳಿದ್ದರು. ಬಳಿಕ ರೂಮ್ ಶುಚಿ ಮಾಡುವ ಸಂದರ್ಭದಲ್ಲಿ 5 ಲಕ್ಷ ರೂ. ಮೌಲ್ಯದ ಮಾಂಗಲ್ಯ ಸರ ದೊರಕಿದ್ದು, ಅದನ್ನು ಸುಬ್ರಹ್ಮಣ್ಯ ಠಾಣೆಗೆ ಒಪ್ಪಿಸಲಾಯಿತು. ಮಾಂಗಲ್ಯ ಸರ ಮಂಜುನಾಥ್ ಅವರ ಪತ್ನಿಯದ್ದಾಗಿತ್ತು. ಸರದ ವಾರೀಸುದಾರರನ್ನು ಸುಬ್ರಹ್ಮಣ್ಯ ಠಾಣೆಗೆ ಬರಲು ಹೇಳಿ, ಎಸ್.ಐ. ಕಾರ್ತಿಕ್, ನಿವೃತ್ತ ಪ್ರಾಧ್ಯಾಪಕ ತಿಲಕ್ ಎ.ಎ., ಮಹೇಶ್

ಮಾಂಗಲ್ಯ ಸರ ಹಸ್ತಾಂತರಿಸಿ ಪ್ರಾಮಾಣಿಕತೆ ಮೆರೆದ ಲಾಡ್ಜ್ ಮಾಲಕ! Read More »

ಶುಚಿತ್ವ ಕಾಪಾಡುವಂತೆ ಆರೋಗ್ಯ ಇಲಾಖೆಯಿಂದ ವ್ಯಾಪಾರಿಗಳಿಗೆ ನೋಟೀಸ್!

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾಷಷ್ಟಿ ಜಾತ್ರೋತ್ಸವ ನಡೆಯುವ ಸಂದರ್ಭ ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಕ್ಷೇತ್ರಕ್ಕೆ ಆಗಮಿಸುವ ಹಿನ್ನಲೆಯಲ್ಲಿ ಶುಚಿತ್ವ ವಹಿಸುವಂತೆ ವ್ಯಾಪಾರಿಗಳಿಗೆ ಸೂಚನೆ ನೀಡಲಾಗಿದೆ. ಆರೋಗ್ಯ  ಹಾಗೂ ಶುಚಿತ್ವ ಕಾಪಾಡುವ ದೃಷ್ಟಿಯಿಂದ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾl ತ್ರಿಮೂರ್ತಿ ಅವರ ಸೂಚನೆಯಂತೆ ಹಿರಿಯ ಆರೋಗ್ಯ ನಿರೀಕ್ಷಕ ಬಸವರಾಜ್ ಹಾಗೂ ಆರೋಗ್ಯ ನಿರೀಕ್ಷಕ ಉಮ್ಮರ್ ಖಾನ್ ನೋಟೀಸ್ ನೀಡುವ ಮೂಲಕ ಎಚ್ಚರಿಕೆ ನೀಡಿದ್ದಾರೆ. ಜಾತ್ರೋತ್ಸವ ಸಂದರ್ಭದಲ್ಲಿ ಬೇಕರಿ, ಸಣ್ಣ ಚಹಾದ ಅಂಗಡಿ, ಸಣ್ಣ ಪುಟ್ಟ

ಶುಚಿತ್ವ ಕಾಪಾಡುವಂತೆ ಆರೋಗ್ಯ ಇಲಾಖೆಯಿಂದ ವ್ಯಾಪಾರಿಗಳಿಗೆ ನೋಟೀಸ್! Read More »

ನರ್ಸಿಂಗ್ ಕೋರ್ಸಿಗೆ ಸೇರಿ ಒಂದೇ ವಾರದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ!

ಮಂಗಳೂರು: ನರ್ಸಿಂಗ್ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ವಳಚ್ಚಿಲಿನಲ್ಲಿ ನಡೆದಿದ್ದು, ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಮೃತ ವಿದ್ಯಾರ್ಥಿಯನ್ನು ಕೇರಳದ ಅಲೆಪ್ಪಿ ನಿವಾಸಿ ಸಚಿನ್ ಸಾಜು (19) ಎಂದು ಗುರುತಿಸಲಾಗಿದೆ. ಡಿ. 8ರಂದು ಕಾಲೇಜಿನ ಹಾಸ್ಟೆಲಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಥಮ ವರ್ಷದ ನರ್ಸಿಂಗ್ ವಿದ್ಯಾರ್ಥೀಯಾಗಿದ್ದ ಈತ, ನ. 30ರಂದು ಕಾಲೇಜು ಪ್ರವೇಶ ಪಡೆದಿದ್ದ. ಡಿ. 8ರಂದು ಬೆಳಿಗ್ಗಿನ ಹೊತ್ತು ಹಾಸ್ಟೆಲ್ ಕೊಠಡಿಯಲ್ಲಿ ಬೆಡ್ ಶೀಟನ್ನೇ ನೇಣಾಗಿ ಬಳಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ

ನರ್ಸಿಂಗ್ ಕೋರ್ಸಿಗೆ ಸೇರಿ ಒಂದೇ ವಾರದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ! Read More »

ಎನ್‌ಐಟಿಕೆ ಅಕ್ರಮ ಟೋಲ್‌ಗೇಟ್: ಪ್ರತಿಭಟಿಸಿದ್ದ 101 ಮಂದಿ ವಿರುದ್ಧ ಚಾರ್ಜ್ ಶೀಟ್!!

ಸುರತ್ಕಲ್: ರಾಷ್ಟ್ರೀಯ ಹೆದ್ದಾರಿ 66ರ ಎನ್‌ಐಟಿಕೆಯಲ್ಲಿ ಕಾರ್ಯಾಚರಿಸುತ್ತಿದ್ದ ಅಕ್ರಮ ಟೋಲ್‌ಗೇಟ್ ವಿರುದ್ಧ ಪ್ರತಿಭಟಿಸಿದ್ದ ಸುಮಾರು 101 ಮಂದಿ ಹೋರಾಟಗಾರರ ಮೇಲೆ ಸುರತ್ಕಲ್ ಪೊಲೀಸರು ಜಾರ್ಜ್ ಶೀಟ್ ಸಲ್ಲಿಸಿದ್ದಾರೆ. ಸೋಮವಾರ ಹಲವು ಹೋರಾಟಗಾರರ ಮೊಬೈಲ್‌ಗಳಿಗೆ ಮೆಸೇಜ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗಲು ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ. 2022ರ ನವೆಂಬರ್‌ನಲ್ಲಿ ಟೋಲ್‌ಗೇಟ್ ತೆರವು ಹೋರಾಟ ಸಮಿತಿ ಟೋಲ್ ಗೇಟ್‌ನ್ನು ತೆರವುಗೊಳಿಸುವ ಕುರಿತು ನೇರ ಕಾರ್ಯಾಚರಣೆಗೆ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಸಾವಿರಾರು ಹೋರಾಟಗಾರರು ಪೊಲೀಸರ ಸರ್ಪಗಾವಲನ್ನು ಹಿಮ್ಮೆಟ್ಟಿಸಿ ಟೋಲ್

ಎನ್‌ಐಟಿಕೆ ಅಕ್ರಮ ಟೋಲ್‌ಗೇಟ್: ಪ್ರತಿಭಟಿಸಿದ್ದ 101 ಮಂದಿ ವಿರುದ್ಧ ಚಾರ್ಜ್ ಶೀಟ್!! Read More »

ಕುಕ್ಕೆ ಜಾತ್ರೆ: ಭಕ್ತರಿಗೆ ಮೂಲಮೃತ್ತಿಕೆ ವಿತರಣೆ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ವಾರ್ಷಿಕ ಚಂಪಾ ಷಷ್ಠಿ ಜಾತ್ರೋತ್ಸವದ ಅಂಗವಾಗಿ ಭಾನುವಾರ ಮೂಲಮೃತಿಕ ಪ್ರಸಾದ ತೆಗೆದು ಭಕ್ತರಿಗೆ ವಿತರಿಸಲಾಯಿತು. ಈ ಮೂಲಕ ಜಾತ್ರೋತ್ಸವಕ್ಕೆ ಚಾಲನೆ ನೀಡಲಾಯಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತಾಯ ದೇವಸ್ಥಾನದ ಗರ್ಭಗುಡಿ ಪ್ರವೇಶಿಸಿ ಮೃತ್ತಿಕೆಯನ್ನು ತಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹಾಗೂ ಸದಸ್ಯರುಗಳು, ಕಾರ್ಯನಿರ್ವಹಣಾಧಿಕಾರಿ, ಸಿಬ್ಬಂದಿ ವರ್ಗ, ಮಾಜಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರುಗಳು ಸದಸ್ಯರುಗಳು ಅಲ್ಲದೆ ನೆರೆದ ಸಾವಿರಾರು ಭಕ್ತಾದಿಗಳಿಗೆ ಮೃತ್ವಿಕೆಯನ್ನು ವಿತರಣೆ ಮಾಡಿದರು.

ಕುಕ್ಕೆ ಜಾತ್ರೆ: ಭಕ್ತರಿಗೆ ಮೂಲಮೃತ್ತಿಕೆ ವಿತರಣೆ Read More »

error: Content is protected !!
Scroll to Top