ದಕ್ಷಿಣ ಕನ್ನಡ

ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಪಕ್ಷ | ಹೊರಗಡೆ ಚರ್ಚೆಗೆ ಉತ್ತರ ನೀಡುವ ಸ್ಥಿತಿ ಭಾರತೀಯ ಜನತಾ ಪಾರ್ಟಿಗಿಲ್ಲ | ಪುತ್ತಿಲ ಪರಿವಾರದ ಶ್ರೀಕೃಷ್ಣ ಉಪಾಧ್ಯಾಯ ಸವಾಲಿಗೆ ಪ್ರತಿಕ್ರಿಯೆ ನೀಡಿದ ಸತೀಶ್ ಕುಂಪಲ

ಮಂಗಳೂರು: ಭಾರತೀಯ ಜನತಾ ಪಾರ್ಟಿ ಒಂದು ರಾಷ್ಟ್ರೀಯ ಪಕ್ಷ. ಹೊರಗಡೆ ಆಗಿರುವ ಯಾವುದೇ ಚರ್ಚೆಗೆ ಉತ್ತರ ನೀಡುವ ಸ್ಥಿತಿ ಭಾರತೀಯ ಜನತಾ ಪಾರ್ಟಿಗೆ ಇಲ್ಲಾ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಎಲ್ಲವನ್ನೂ ಗಮನಿಸುವುದು, ಅದಕ್ಕೆ ಏನು ಮಾಡಬೇಕು ಎಂಬುದರ ಕುರಿತು ರಾಜ್ಯದಲ್ಲಿ ತೀರ್ಮಾನ ಮಾಡುತ್ತಾರೆ. ಬಿಜೆಪಿಯಲ್ಲಿ ನನ್ನದು ಏನಿದ್ದರೂ ಭಾರತೀಯ ಜನತಾ ಪಾರ್ಟಿ ದೊಡ್ಡ ಪ್ರಮಾಣದಲ್ಲಿ ಗೆಲ್ಲಬೇಕು, ಅದಕ್ಕೆ ಬೇಕಾದ ಪೂರ್ವಸಿದ್ಧತೆ ಏನು ಮಾಡಬೇಕು ಎಂಬುದಷ್ಟೇ ನನ್ನ ಅಭಿಪ್ರಾಯ […]

ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಪಕ್ಷ | ಹೊರಗಡೆ ಚರ್ಚೆಗೆ ಉತ್ತರ ನೀಡುವ ಸ್ಥಿತಿ ಭಾರತೀಯ ಜನತಾ ಪಾರ್ಟಿಗಿಲ್ಲ | ಪುತ್ತಿಲ ಪರಿವಾರದ ಶ್ರೀಕೃಷ್ಣ ಉಪಾಧ್ಯಾಯ ಸವಾಲಿಗೆ ಪ್ರತಿಕ್ರಿಯೆ ನೀಡಿದ ಸತೀಶ್ ಕುಂಪಲ Read More »

ಎಂ.ಡಿ.ಎಸ್. ನಲ್ಲಿ ಡಾ.ಸಂದೀಪ್ ಬಿರ್ಮುಕಜೆಯವರಿಗೆ ರಾಜ್ಯಮಟ್ಟದ ಚಿನ್ನದ ಪದಕ

ರಾಜೀವಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯ 2023ರಲ್ಲಿ ನಡೆಸಿದ ಎಂ.ಡಿ.ಎಸ್ (Oral and Maxillofacial Surgery)ನಲ್ಲಿ ಡಾ.ಸಂದೀಪ್ ಬಿರ್ಮುಕಜೆಯವರು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಮೊದಲ ಸ್ಥಾನ ಪಡೆದು ರಾಜ್ಯ ಮಟ್ಟದ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ದಾವಣಗೆರೆಯ ಬಾಪೂಜಿ ದಂತ ವೈದ್ಯಕೀಯ ಕಾಲೇಜಿನಲ್ಲಿ ಎಂ.ಡಿ.ಎಸ್ ಸ್ನಾತಕೋತ್ತರ ಪದವಿ ಪೂರೈಸಿರುವ ಅವರು ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದಲ್ಲಿ ವಾಸ್ತವ್ಯವಿರುವ ಬಿರ್ಮುಕಜೆ ಸುಧಾಕರ ಗೌಡ ಮತ್ತು  ಉದಯಗೌರಿ ದಂಪತಿ ಪುತ್ರ. ಅವರು ಸುಳ್ಯದ ಕೆ.ವಿ.ಜಿ ದಂತ ವೈದ್ಯಕೀಯ ಕಾಲೇಜಿನಲ್ಲಿ ಬಿ.ಡಿ.ಎಸ್ ಪದವಿ ಪಡೆದಿದ್ದಾರೆ. ಪ್ರಸ್ತುತ

ಎಂ.ಡಿ.ಎಸ್. ನಲ್ಲಿ ಡಾ.ಸಂದೀಪ್ ಬಿರ್ಮುಕಜೆಯವರಿಗೆ ರಾಜ್ಯಮಟ್ಟದ ಚಿನ್ನದ ಪದಕ Read More »

ನೇಣು ಬಿಗಿದು ಯುವತಿ ಆತ್ಮಹತ್ಯೆ !

ಬೆಳ್ತಂಗಡಿ: ಯುವತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾಯರ್ತಡ್ಕದಲ್ಲಿ ಗುರುವಾರ ನಡೆದಿದೆ. ಕಾಯರ್ತಡ್ಕ ಕುರುಂಬುಡೇಲು ನಿವಾಸಿ ವನಿತಾ ಯಾನೆ ರೇವತಿ (30) ಆತ್ಮಹತ್ಯೆ ಮಾಡಿಕೊಂಡವರು. ಮಂಗಳೂರಿನಲ್ಲಿ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ವನಿತಾ ಅನಾರೋಗ್ಯ ಹಿನ್ನಲೆಯಲ್ಲಿ ಒಂದು ತಿಂಗಳು ಮನೆಯಲ್ಲಿದ್ದರು. ಬುಧವಾರ ಮುಂಜಾನೆ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಡೆತ್ ನೋಟ್ ದೊರಕಿದ್ದು, ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿದೆ. ಧರ್ಮಸ್ಥಳ ಪೊಲೀಸರು

ನೇಣು ಬಿಗಿದು ಯುವತಿ ಆತ್ಮಹತ್ಯೆ ! Read More »

ಫೆ.11 : ಕಡಬ ಸ್ಪಂದನಾ ಸಮುದಾಯ ಸಹಕಾರ ಸಂಘದ ಶುಭಾರಂಭ ಸಮಾರಂಭ | ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಘದ ಅಧ್ಯಕ್ಷ ಕೇಶವ ಅಮೈ ಕಲಾಯಿಗುತ್ತು

ಕಡಬ: ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘ ಪ್ರವರ್ತಿತ ಸ್ಪಂದನಾ ಸಮುದಾಯ ಸಹಕಾರ ಸಂಘದ ಶುಭಾರಂಭ ಸಮಾರಂಭ ಫೆ.11 ಭಾನುವಾರ ಮಧ್ಯಾಹ್ನ 3.30ಕ್ಕೆ ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಕೇಶವ ಅಮೈ ಕಲಾಯಿಗುತ್ತು ತಿಳಿಸಿದ್ದಾರೆ. ಅವರು ಗುರುವಾರ ಕಡಬ ಸ್ಪಂದನಾ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ದಿವ್ಯ ಹಸ್ತದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಖಜಾನೆಗೆ ಹಣ ತುಂಬಿಸುವ ಮೂಲಕ

ಫೆ.11 : ಕಡಬ ಸ್ಪಂದನಾ ಸಮುದಾಯ ಸಹಕಾರ ಸಂಘದ ಶುಭಾರಂಭ ಸಮಾರಂಭ | ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಘದ ಅಧ್ಯಕ್ಷ ಕೇಶವ ಅಮೈ ಕಲಾಯಿಗುತ್ತು Read More »

ಮಂಗಳೂರು ಇಎಸ್ ಐ ಆಸ್ಪತ್ರೆ ಮೇಲ್ದರ್ಜೆಗೇರಿಸಲು ನಳಿನ್ ಕುಮಾರ್ ಕಟೀಲ್ ಮನವಿ

ಮಂಗಳೂರು: ಮಂಗಳೂರಿನಲ್ಲಿರುವ ಇ ಎಸ್ ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಕೇಂದ್ರ ಕಾರ್ಮಿಕ ಸಚಿವ ಭೋಪೇಂದ್ರ ಯಾದವ್ ರನ್ನು ಇಂದು ನಳಿನ್ ಕುಮಾರ್ ಕಟೀಲ್ ನವದೆಹಲಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು. ಜಿಲ್ಲೆಯ ಶ್ರಮಿಕ ವರ್ಗಕ್ಕೆ ಅನುಕೂಲವಾಗುವಂತೆ,  ಮಂಗಳೂರು ಇಎಸ್ಐ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ, ಅತ್ಯಾಧುನಿಕ ವೈದ್ಯಕೀಯ ಉಪಕರಣಗಳು, ಎಂ.ಆರ್.ಐ. ಘಟಕ, ಸಿ.ಟಿ. ಸ್ಕ್ಯಾನಿಂಗ್ ಯಂತ್ರಗಳ ಅಳವಡಿಕೆ, ತಜ್ಞ ವೈದ್ಯರು ಹಾಗೂ ಇತರ ಸಿಬ್ಬಂದಿಗಳ ನೇಮಕಾತಿಯೊಂದಿಗೆ ವಿವಿಧ ವಿಶೇಷ ವೈದ್ಯಕೀಯ ಸೇವೆಗಳು ದೊರೆಯುವಂತಾಗಲು ಇಎಸ್ ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕೆಂದು

ಮಂಗಳೂರು ಇಎಸ್ ಐ ಆಸ್ಪತ್ರೆ ಮೇಲ್ದರ್ಜೆಗೇರಿಸಲು ನಳಿನ್ ಕುಮಾರ್ ಕಟೀಲ್ ಮನವಿ Read More »

ಸುಳ್ಯ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಸ್ನೇಹ ಸಮ್ಮಿಲನ ಕಾರ್ಯಕ್ರಮ

ಸುಳ್ಯ: ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನ 1994-97ರ ಬ್ಯಾಚ್‍ನ ಶಿಕ್ಷಕರ ಸ್ನೇಹ ಸಮ್ಮಿಲನ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿಗಳು ಎಲ್ಲಾ ಶಿಕ್ಷಕರನ್ನು ಸನ್ಮಾನಿಸಿದರು. ಕಾರ್ಯಕ್ರಮದ ವೇದಿಕೆಯಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ಡಾ,ಪ್ರಭಾಕರ ಶಿಶಿಲ, ಡಾ.ಚಂದ್ರಶೇಖರ ದಾಮ್ಲೆ, ಪ್ರೊ.ಕೆ.ದಾಮೋದರ ಗೌಡ, ಪ್ರೊ.ಹೊನ್ನಮ್ಮ ಮೇಡಮ್, ಪ್ರೊ.ಜಾರೇ ಗೌಡ, ಡಾ.ಯಶೋಧ ಮೇಡಮ್, ಪ್ರೊ.ಸಂಜೀವ ಕುತ್ಪಾಜೆ, ಪ್ರೊ.ಪಿ.ಡಿ.ರಾಧಾಕೃಷ್ಣ ಗೌಡ ಮಣಿಬೆಟ್ಟು, ನಿವೃತ್ತ ಪ್ರೊ.ರತ್ನಾವತಿ, ಲೈಬ್ರೇರಿಯನ್ ಉಮಾವತಿ, ಪ್ರಿನ್ಸಿಪಾಲ್ ಡಾ.ರುದ್ರಕುಮಾರ್ ಎಂ.ಎಂ. , ಕುಲದೀಪ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಹಾಯಕ ಪ್ರೊ.

ಸುಳ್ಯ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಸ್ನೇಹ ಸಮ್ಮಿಲನ ಕಾರ್ಯಕ್ರಮ Read More »

343.74 ಕೋಟಿ ವೆಚ್ಚದಲ್ಲಿ ಚಾರ್ಮಾಡಿ ಘಾಟ್ ರಸ್ತೆ ಅಭಿವೃದ್ಧಿ : ನಳಿನ್ ಕುಮಾರ್ ಕಟೀಲ್

ರಾಷ್ಟ್ರೀಯ ಹೆದ್ದಾರಿ-73 ರ ಮಂಗಳೂರು-ಮೂಡಿಗೆರೆ-ತುಮಕೂರು ವಿಭಾಗದ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ 10.8 ಕಿ.ಮೀ.ಉದ್ದದ ಪೇವ್ದ್ ಶೋಲ್ಡರ್ ನೊಂದಿಗೆ  ದ್ವಿಪಥ ರಸ್ತೆಯಾಗಿ ಅಗಲೀಕರಣ ಕಾಮಗಾರಿಗೆ ಇಪಿಸಿ ಆಧಾರದಲ್ಲಿ ಅನುಮೋದನೆ ನೀಡಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವುದಾಗಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರು ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಪತ್ರದ ಮೂಲಕ ತಿಳಿಸಿದ್ದಾರೆ. 2023-24ನೇ ಸಾಲಿನ ವಾರ್ಷಿಕ ಯೋಜನೆಯಡಿ ಸುಮಾರು 343.74 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ರಸ್ತೆ ಬಳಕೆದಾರರಿಗೆ ಉತ್ತಮ ರಸ್ತೆ ಸಂಪರ್ಕ

343.74 ಕೋಟಿ ವೆಚ್ಚದಲ್ಲಿ ಚಾರ್ಮಾಡಿ ಘಾಟ್ ರಸ್ತೆ ಅಭಿವೃದ್ಧಿ : ನಳಿನ್ ಕುಮಾರ್ ಕಟೀಲ್ Read More »

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ಸುಳ್ಯ: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ನಡೆಯುತ್ತಿದ್ದು, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಬುಧವಾರ ಬೆಳಿಗ್ಗೆ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದರು. ಭೇಟಿ ನೀಡಿದ ಅವರು ಶ್ರೀ ದೇವರ ದರ್ಶನ ಪಡೆದು ಬಳಿಕ ಶ್ರೀ ದೇವರ ಬಲಿ ಉತ್ಸವದಲ್ಲಿ ಪಾಲ್ಗೊಂಡರು. ದೇವಸ್ಥಾನದ ಉತ್ಸವ ಸಮಿತಿ ಅಧ್ಯಕ್ಷ ದೇವಿಪ್ರಸಾದ್  ಕಾನತ್ತೂರ್  ಶಾಸಕರನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು, ಸಿಬ್ಬಂದಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ Read More »

ಕುಕ್ಕೇಡಿ ಪಟಾಕಿ ಗೋಡೌನ್ ಸ್ಪೋಟ ಪ್ರಕರಣ | ನಾಲ್ಕನೇ ಆರೋಪಿ ಬಂಧನ

ಬೆಳ್ತಂಗಡಿ: ಕುಕ್ಕೇಡಿಯಲ್ಲಿ ಪಟಾಕಿ ಗೋಡೌನ್ ನಲ್ಲಿ ನಡೆದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದ ಮತ್ತೊಬ್ಬ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಉತ್ತರ ದಿವಾನರ ಪಾಳ್ಯ ನಿವಾಸಿ ಅನಿಲ್ ಎಂ. ಡೇವಿಡ್ (49) ಬಂಧಿತ ವ್ಯಕ್ತಿ. ಈತ ಪಟಾಕಿ ತಯಾರಿಕೆಗೆ ರಾಸಾಯನಿಕಗಳನ್ನು ಸರಬರಾಜು ಮಾಡುತ್ತಿದ್ದ ಎನ್ನಲಾಗಿದೆ. ಜ.28 ರಂದು ಕುಕ್ಕೇಡಿ ಎಂಬಲ್ಲಿ ಸಂಜೆ ಸುಮಾರು 5.30 ರ ಹೊತ್ತಿಗೆ ಪಟಾಕಿ ಗೋಡೌನ್‍ ನಲ್ಲಿ ಸ್ಪೋಟಗೊಂಡ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟಿದ್ದರು. ಈ ಸಂದರ್ಭ ಸ್ಥಳಕ್ಕೇ ಭೇಟಿ ನೀಡಿದ ಪೊಲೀಸರು

ಕುಕ್ಕೇಡಿ ಪಟಾಕಿ ಗೋಡೌನ್ ಸ್ಪೋಟ ಪ್ರಕರಣ | ನಾಲ್ಕನೇ ಆರೋಪಿ ಬಂಧನ Read More »

ಮಹಿಳೆಗೆ ಬಸ್ ಡಿಕ್ಕಿ ಹೊಡೆದು ಮೃತ್ಯು !

ಸುಳ್ಯ: ಮಹಿಳೆಯೊಬ್ಬರಿಗೆ ಕೆಎಸ್‍ ಆರ್‍ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ಕೆಎಸ್ಆರ್ ಟಿ ಸಿ ಬಸ್ ನಿಲ್ದಾಣ ಮುಂಭಾಗದಲ್ಲಿ ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದ್ದು, ರಸ್ತೆ ದಾಟುತ್ತಿದ್ದ ಮಹಿಳೆಗೆ ಲಾರಿ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಮೃತ ದೇಹವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಅಂದಾಜು 40 ವರ್ಷದ ಮಹಿಳೆಯಾಗಿದ್ದು, ಮಹಿಳೆಯ ಗುರುತು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ

ಮಹಿಳೆಗೆ ಬಸ್ ಡಿಕ್ಕಿ ಹೊಡೆದು ಮೃತ್ಯು ! Read More »

error: Content is protected !!
Scroll to Top