ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಪಕ್ಷ | ಹೊರಗಡೆ ಚರ್ಚೆಗೆ ಉತ್ತರ ನೀಡುವ ಸ್ಥಿತಿ ಭಾರತೀಯ ಜನತಾ ಪಾರ್ಟಿಗಿಲ್ಲ | ಪುತ್ತಿಲ ಪರಿವಾರದ ಶ್ರೀಕೃಷ್ಣ ಉಪಾಧ್ಯಾಯ ಸವಾಲಿಗೆ ಪ್ರತಿಕ್ರಿಯೆ ನೀಡಿದ ಸತೀಶ್ ಕುಂಪಲ
ಮಂಗಳೂರು: ಭಾರತೀಯ ಜನತಾ ಪಾರ್ಟಿ ಒಂದು ರಾಷ್ಟ್ರೀಯ ಪಕ್ಷ. ಹೊರಗಡೆ ಆಗಿರುವ ಯಾವುದೇ ಚರ್ಚೆಗೆ ಉತ್ತರ ನೀಡುವ ಸ್ಥಿತಿ ಭಾರತೀಯ ಜನತಾ ಪಾರ್ಟಿಗೆ ಇಲ್ಲಾ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಎಲ್ಲವನ್ನೂ ಗಮನಿಸುವುದು, ಅದಕ್ಕೆ ಏನು ಮಾಡಬೇಕು ಎಂಬುದರ ಕುರಿತು ರಾಜ್ಯದಲ್ಲಿ ತೀರ್ಮಾನ ಮಾಡುತ್ತಾರೆ. ಬಿಜೆಪಿಯಲ್ಲಿ ನನ್ನದು ಏನಿದ್ದರೂ ಭಾರತೀಯ ಜನತಾ ಪಾರ್ಟಿ ದೊಡ್ಡ ಪ್ರಮಾಣದಲ್ಲಿ ಗೆಲ್ಲಬೇಕು, ಅದಕ್ಕೆ ಬೇಕಾದ ಪೂರ್ವಸಿದ್ಧತೆ ಏನು ಮಾಡಬೇಕು ಎಂಬುದಷ್ಟೇ ನನ್ನ ಅಭಿಪ್ರಾಯ […]










