ದಕ್ಷಿಣ ಕನ್ನಡ

ಪತಿ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದ ಪತ್ನಿ ಪೊಲೀಸ್‌ ಕಸ್ಟಡಿಗೆ

ಬಿ.ಸಿ.ರೋಡ್‌ ಬಟ್ಟೆ ಮಳಿಗೆಯಲ್ಲಿ ಪತಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ ಪತ್ನಿ ಬಂಟ್ವಾಳ : ಬಿ.ಸಿ.ರೋಡ್‌ನಲ್ಲಿ ಗ್ರಾಹಕಳಂತೆ ಸೋಗುಹಾಕಿ ಬುರ್ಖಾ ಧರಿಸಿಕೊಂಡು ಬಂದು ಕ್ಯಾಶ್‌ ಕೌಂಟರ್‌ನಲ್ಲಿ ಕುಳಿತಿದ್ದ ಅಂಗಡಿಯ ಮಾಲೀಕ ತನ್ನ ಪತಿಗೆ ಚಾಕುವಿನಿಂದ ಹಲ್ಲೆ ಮಾಡಿದ್ದ ಪತ್ನಿ ಜ್ಯೋತಿ ಕೆ.ಟಿ.ಯನ್ನು ನ್ಯಾಯಾಲಯ ಪೊಲೀಸ್‌ ಕಸ್ಟಡಿಗೊಪ್ಪಿಸಿದೆ. ಆಕೆ ಪತಿ ಕೃಷ್ಣಕುಮಾರ್ ಸೋಮಯಾಜಿ ಅವರ ತಲೆ, ಎದೆ ಮತ್ತು ಕೈಗಳಿಗೆ ಚಾಕುವಿನಿಂದ ಹಲ್ಲೆ ಮಾಡಿದ್ದಳು. ಸೋಮಯಾಜಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಿ.ಸಿ.ರೋಡ್‌ನ ಸೋಮಯಾಜಿ ಟೆಕ್ಸ್‌ಟೈಲ್ಸ್‌ನ ಮಾಲೀಕರಾದ ಕೃಷ್ಣಕುಮಾರ್ ನವೆಂಬರ್ 19ರಂದು […]

ಪತಿ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದ ಪತ್ನಿ ಪೊಲೀಸ್‌ ಕಸ್ಟಡಿಗೆ Read More »

ರಸ್ತೆ ಕಾಮಗಾರಿಯ ವಾಹನದಡಿಗೆ ಬಿದ್ದು ವೃದ್ಧ ಸಾವು

ಬೆಳ್ತಂಗಡಿ: ಮದ್ದಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಕಾಮಗಾರಿಯ ವಾಹನದ ಅಡಿಗೆ ಸಿಲುಕಿ ವೃದ್ಧರೊಬ್ಬರು ಮೃತಪಟ್ಟ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಮೃತ ವ್ಯಕ್ತಿ ಬಂಗಾಡಿ ನಿವಾಸಿ ಎಂದು ತಿಳಿದು ಬಂದಿದೆ. ಕಾಮಗಾರಿ ನಡೆಯುತ್ತಿರುವ ಪ್ರದೇಶದಲ್ಲಿ ವೃದ್ಧ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾಮಗಾರಿಯ ಯಂತ್ರವೊಂದನ್ನು ಚಲಾಯಿಸುತ್ತಾ ಬಂದ ಚಾಲಕ ವೃದ್ಧನನ್ನು ಗಮನಿಸದೆ ವಾಹನ ಚಲಾಯಿಸಿದ್ದು ವೃದ್ಧ ವಾಹನದ ಅಡಿಗೆ ಸಿಲುಕಿಕೊಂಡು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

ರಸ್ತೆ ಕಾಮಗಾರಿಯ ವಾಹನದಡಿಗೆ ಬಿದ್ದು ವೃದ್ಧ ಸಾವು Read More »

ಧರ್ಮಸ್ಥಳ ಪ್ರಕರಣ : ಎಸ್‌ಐಟಿಯಿಂದ ಕೋರ್ಟ್‌ಗೆ ವರದಿ ಸಲ್ಲಿಕೆ

ಸುಳ್ಳು ಸಾಕ್ಷಿ ಕುರಿತು ತನಿಖೆಯಿಂದ ಕಂಡುಕೊಂಡ ಮಾಹಿತಿಗಳ ವರದಿ ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್.ಐ.ಟಿ ಅಧಿಕಾರಿಗಳ ತಂಡ ಬೆಳ್ತಂಗಡಿ ನ್ಯಾಯಾಲಯಕ್ಕೆ ಆರು ಮಂದಿ ಆರೋಪಿಗಳ ವಿರುದ್ಧ ನ.20 ರಂದು ‘ಸುಳ್ಳು ಸಾಕ್ಷಿ’ ನೀಡಿರುವ ಬಗ್ಗೆ ತನಿಖೆಯಿಂದ ಕಂಡು ಬಂದ ಮಾಹಿತಿಗಳ ಬಗ್ಗೆ ವರದಿಯನ್ನು ಸಲ್ಲಿಸಿದ್ದಾರೆ. ಎಸ್.ಐ.ಟಿ ಅಧಿಕಾರಿಗಳು ಪ್ರಕರಣದಲ್ಲಿ ಜೈಲಿನಲ್ಲಿರುವ ಚಿನ್ನಯ್ಯ ಸೇರಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ಸೌಜನ್ಯ ಮಾವ ವಿಠಲ್ ಗೌಡ, ಸುಜಾತ ಭಟ್

ಧರ್ಮಸ್ಥಳ ಪ್ರಕರಣ : ಎಸ್‌ಐಟಿಯಿಂದ ಕೋರ್ಟ್‌ಗೆ ವರದಿ ಸಲ್ಲಿಕೆ Read More »

ಚೌಕಿಯಲ್ಲಿ ವೇಷ ಕಳಚುತ್ತಿರುವಾಗಲೇ ಯಕ್ಷಗಾನ ಕಲಾವಿದ ಕುಸಿದು ಬಿದ್ದು ಸಾವು

ಮಂದಾರ್ತಿ ಮೇಳದ ಮಹಿಷಾಸುರ ವೇಷಧಾರಿ ಈಶ್ವರ ಗೌಡ ನೆಮ್ಮಾರ್‌ ಮುಖದ ಬಣ್ಣ ತೆಗೆಯುವ ಮುನ್ನವೇ ಸೆಳೆದೊಯ್ದ ವಿಧಿ ಉಡುಪಿ: ಯಕ್ಷಗಾನ ಕಲಾವಿದರೊಬ್ಬರು ಚೌಕಿಯಲ್ಲಿ ಬಣ್ಣ ಕಳಚುತ್ತಿರುವಾಗಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಬುಧವಾರ ತಡರಾತ್ರಿ ಸಂಭವಿಸಿದೆ. ಮಂದಾರ್ತಿ ಮೇಳದ ಬಣ್ಣದ ವೇಷಗಾರ ಈಶ್ವರ ಗೌಡ ನೆಮ್ಮಾರ್‌ ತೀರಿಕೊಂಡಿರುವ ಕಲಾವಿದ. ಕುಂದಾಪುರ ಸಮೀಪ ಸೌಡ ಎಂಬಲ್ಲಿ ನಿನ್ನೆ ರಾತ್ರಿ ದೇವಿ ಮಹಾತ್ಮೆ ಪ್ರಸಂಗ ಯಕ್ಷಗಾನವಿತ್ತು. ಈಶ್ವರ ಗೌಡ ನೆಮ್ಮಾರ್‌ ಮಹಿಷಾಸುರನ ಪಾತ್ರ ಮಾಡಿದ್ದರು. ಪಾತ್ರ ಮುಗಿದ ಬಳಿಕ ತಡರಾತ್ರಿ ಚೌಕಿಯಲ್ಲಿ

ಚೌಕಿಯಲ್ಲಿ ವೇಷ ಕಳಚುತ್ತಿರುವಾಗಲೇ ಯಕ್ಷಗಾನ ಕಲಾವಿದ ಕುಸಿದು ಬಿದ್ದು ಸಾವು Read More »

ಸ್ಕೂಟಿಗೆ ಕಾರು ಡಿಕ್ಕಿ : ಇಂಜಿನಿಯರಿಂಗ್‌ ವಿದ್ಯಾರ್ಥಿನಿ ಸಾವು

ಬೆಳ್ತಂಗಡಿ: ಇಂಜಿನಿಯರಿಂಗ್‌ ವಿದ್ಯಾರ್ಥಿನಿಯರು ಸಂಚರಿಸುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ವಿದ್ಯಾರ್ಥಿನಿ ಮೃತಪಟ್ಟು ಮತ್ತೋರ್ವ ವಿದ್ಯಾರ್ಥಿನಿ ಗಂಭೀರ ಗಾಯಗೊಂಡ ಘಟನೆ ಕಾವಳಕಟ್ಟೆ ಸಮೀಪದ ಎನ್.ಸಿ.ರೋಡ್ ಬಳಿ ಬುಧವಾರ ಸಂಭವಿಸಿದೆ. ಕಡಬ ನಿವಾಸಿ ಸುನಿಲ್ ಎಂಬವರ ಪುತ್ರಿ ಅನನ್ಯ (21) ಮೃತ ವಿದ್ಯಾರ್ಥಿನಿ. ಗುರುವಾಯನಕೆರೆ ನಿವಾಸಿ ಪೃಥ್ವಿ ರಾವ್ ಎಂಬವರು ಗಾಯಗೊಂಡಿದ್ದಾರೆ. ಗಾಯಾಳು ವಿದ್ಯಾರ್ಥಿಯನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಇವರಿಬ್ಬರೂ ಮಂಗಳೂರಿನ ಕಾಲೇಜಿನಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಘಟನಾ

ಸ್ಕೂಟಿಗೆ ಕಾರು ಡಿಕ್ಕಿ : ಇಂಜಿನಿಯರಿಂಗ್‌ ವಿದ್ಯಾರ್ಥಿನಿ ಸಾವು Read More »

ಧರ್ಮಸ್ಥಳ ಪ್ರಕರಣ : ಬರೋಬ್ಬರಿ 4 ಸಾವಿರ ಪುಟಗಳ ಚಾರ್ಜ್‌ಶೀಟ್‌ ರೆಡಿ

ಇಂದು ನ್ಯಾಯಾಲಯಕ್ಕೆ ಸಲ್ಲಿಕೆ ; ತನಿಖೆ ನಿಲ್ಲಿಸಲು ಬುರುಡೆ ಗ್ಯಾಂಗ್‌ನಿಂದ ಶತ ಪ್ರಯತ್ನ ಧರ್ಮಸ್ಥಳ: ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣದ ತನಿಖೆ ನಡೆಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಬರೋಬ್ಬರಿ 4,000 ಪುಟಗಳ ಚಾರ್ಜ್‌ಶೀಟ್‌ ಸಿದ್ಧಪಡಿಸಿದೆ. ನಾಲ್ಕು ತಿಂಗಳ ಕಾಲ ತನಿಖೆ ನಡೆಸಿರುವ ಪೊಲೀಸರು ಎಲ್ಲ ಅಂಶಗಳನ್ನು ಎಲ್ಲ ಆಯಾಮದಿಂದ ಪರಿಶೀಲಿಸಿದ್ದಾರೆ. ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ ಸಂಬಂಧ ಎಸ್‌ಐಟಿ ಚಾರ್ಜ್‌ಶೀಟ್ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದೆ. ಇಂದು ಬೆಳ್ತಂಗಡಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಎಸ್‌ಐಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್

ಧರ್ಮಸ್ಥಳ ಪ್ರಕರಣ : ಬರೋಬ್ಬರಿ 4 ಸಾವಿರ ಪುಟಗಳ ಚಾರ್ಜ್‌ಶೀಟ್‌ ರೆಡಿ Read More »

ಬಂಟ್ವಾಳ : ಬುರ್ಖಾ ಧರಿಸಿಕೊಂಡು ಬಂದು ಜವುಳಿ ಅಂಗಡಿ ಮಾಲಕನ ಮೇಲೆ ಕತ್ತಿಯಿಂದ ಕಡಿದು ಹಲ್ಲೆ ಮಾಡಿದ ಪತ್ನಿ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅಂಗಡಿಯಲ್ಲೇ ನಡೆದ ಘಟನೆ ಬಂಟ್ವಾಳ : ಜವುಳಿ ಅಂಗಡಿಗೆ ಮಾರುವೇಷದಲ್ಲಿ ಬಂದ ಪತ್ನಿ ಗಂಡನಿಗೆ ಕತ್ತಿಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬಿ.ಸಿ.ರೋಡಿನಲ್ಲಿ ಬುಧವಾರ ರಾತ್ರಿ ನಡೆದಿದೆ. ಜವುಳಿ ಅಂಗಡಿ ಮಾಲಕ ಕೃಷ್ಣ ಕುಮಾರ್ ಸೋಮಯಾಜಿ ಎಂಬವರಿಗೆ ಪತ್ನಿ ಜ್ಯೋತಿ ಸೋಮಯಾಜಿ ಎಂಬವರು ಕತ್ತಿಯಿಂದ ಕಡಿದು ಗಾಯಗೊಳಿಸಿದ್ದಾರೆ. ಬಿ.ಸಿ.ರೋಡಿನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಸಮೀಪ ಇರುವ ಸೋಮಯಾಜಿ ಟೆಕ್ಸ್‌ಟೈಲ್ಸ್‌ ಮಳಿಗೆಗೆ ನುಗ್ಗಿದ ಜ್ಯೋತಿ ಕ್ಯಾಶ್ ಕೌಂಟರ್‌ನಲ್ಲಿ ಕುಳಿತಿದ್ದ ಗಂಡನಿಗೆ ಪತ್ನಿ ಕತ್ತಿಯಿಂದ ಕಡಿದು

ಬಂಟ್ವಾಳ : ಬುರ್ಖಾ ಧರಿಸಿಕೊಂಡು ಬಂದು ಜವುಳಿ ಅಂಗಡಿ ಮಾಲಕನ ಮೇಲೆ ಕತ್ತಿಯಿಂದ ಕಡಿದು ಹಲ್ಲೆ ಮಾಡಿದ ಪತ್ನಿ Read More »

ಸುಖಾನಂದ ಶೆಟ್ಟಿ ಕೊಲೆ ಪ್ರಕರಣದ ಆರೋಪಿ 19 ವರ್ಷದ ಬಳಿಕ ಸೆರೆ

ಹಳೆ ಮನೆಯನ್ನು ಕೆಡವಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಆರೋಪಿ ಮಂಗಳೂರು : ಸುರತ್ಕಲ್‌ನಲ್ಲಿ 2006ರಲ್ಲಿ ನಡೆದ ಸುಖಾನಂದ ಶೆಟ್ಟಿ ಕೊಲೆ ಪ್ರಕರಣದ ಓರ್ವ ಆರೋಪಿಯನ್ನು ಪೊಲೀಸರು ಬರೋಬ್ಬರಿ 19 ವರ್ಷಗಳ ಬಳಿಕ ಸೆರೆ ಹಿಡಿದಿದ್ದಾರೆ. ಡಿಸೆಂಬರ್ 1, 2006ರಂದು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಬಳಿ ಸುಖಾನಂದ ಶೆಟ್ಟಿಯನ್ನು ಕಬೀರ್ ಮತ್ತು ಆತನ ಸಹಚರರು ಕೊಲೆ ಮಾಡಿದ್ದರು. ಇದು ಕರಾವಳಿಯಲ್ಲಿ ನಡೆದ ಮೊದಲ ಕೋಮುಹತ್ಯೆ ಪ್ರಕರಣವಾಗಿತ್ತು. ಕರಾವಳಿಯಲ್ಲಿ ನಂತರ ನಡೆದ ಅನೇಕ ಕೋಮು ಹಿಂಸಾಚಾರಗಳಿಗೆ ಇದೇ

ಸುಖಾನಂದ ಶೆಟ್ಟಿ ಕೊಲೆ ಪ್ರಕರಣದ ಆರೋಪಿ 19 ವರ್ಷದ ಬಳಿಕ ಸೆರೆ Read More »

ಯಕ್ಷಗಾನ ಹೇಳಿಕೆ ವಿವಾದ : ಕ್ಷಮೆ ಯಾಚಿಸಿದ ಪುರುಷೊತ್ತಮ ಬಿಳಿಮಲೆ

ಕಲಾವಿದರ ನೋವನ್ನು ಕಂಡು ಹೇಳಿಕೆ ನೀಡಿದ್ದೆ ಎಂದು ಸ್ಪಷ್ಟನೆ ಬೆಂಗಳೂರು: ಯಕ್ಷಗಾನ ಕಲಾವಿದರಿಗೆ ನಾನು ಅವಮಾನ ಮಾಡಿಲ್ಲ. ನನ್ನ ಹೇಳಿಕೆಯಿಂದ ಬೇಸರವಾಗಿದ್ದರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ. ತನ್ನ ಹೇಳಿಕೆ ವಿವಾದವಾದ ಬೆನ್ನಲ್ಲೇ ಪ್ರತಿಕ್ರಿಯಿಸಿದ ಅವರು, ಈಗ ಸಲಿಂಗಕಾಮ ಇಲ್ಲ. 60-70 ರ ದಶಕದಲ್ಲಿದ್ದಾಗ ಇದು ಯಕ್ಷಗಾನದಲ್ಲಿ ಇತ್ತು. ನಾನು ವಿದ್ಯಾರ್ಥಿಯಾಗಿದ್ದಾಗ ನೋಡಿದ್ದನ್ನು ಹೇಳಿದ್ದೇನೆ. ಯಾರನ್ನೂ ನೋಯಿಸುವ ಉದ್ದೇಶದಿಂದ ಈ ಹೇಳಿಕೆಯನ್ನು ನಾನು ನೀಡಿಲ್ಲ ಎಂದು ಸ್ಪಷ್ಟನೆ

ಯಕ್ಷಗಾನ ಹೇಳಿಕೆ ವಿವಾದ : ಕ್ಷಮೆ ಯಾಚಿಸಿದ ಪುರುಷೊತ್ತಮ ಬಿಳಿಮಲೆ Read More »

ವಿಟ್ಲ: ಸಿಡಿಲು ಬಡಿದು ಮನೆಗೆ ಹಾನಿ

ವಿಟ್ಲ : ಕೊಳ್ನಾಡು ಗ್ರಾಮದ ಬಾರೆಬೆಟ್ಟು ನಿವಾಸಿ ಅಬ್ದುಲ್ ಲತೀಫ್ ಎಂಬವರ ಮನೆಗೆ ನ.18ರಂದು ರಾತ್ರಿ ಸಿಡಿಲು ಬಡಿದು ಹಾನಿಯಾಗಿದೆ. ಸಿಡಿಲು ಬಡಿದ ಸಂದರ್ಭದಲ್ಲಿ ಮನೆಯೊಳಗೆ ಪುಟಾಣಿ ಮಗು ಹಾಗೂ ಇಬ್ಬರು ಮಹಿಳೆಯರಿದ್ದರು. ಮಗುವಿನ ಕಿವಿಗೆ ಗಾಯವಾಗಿದೆ.

ವಿಟ್ಲ: ಸಿಡಿಲು ಬಡಿದು ಮನೆಗೆ ಹಾನಿ Read More »

error: Content is protected !!
Scroll to Top