ದಕ್ಷಿಣ ಕನ್ನಡ

ಡಾ. ಅನುರಾಧಾ ಕುರುಂಜಿಯವರ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ಪ್ರಸಾರ

ಸುಳ್ಯದ ಉಪನ್ಯಾಸಕರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ಪ್ರಸ್ತುತ ಪಡಿಸಿದ **ಮನಸ್ಸು – ಮನುಷ್ಯನ ವ್ಯಕ್ತಿತ್ವದ ತಳಹದಿ” ವಿಷಯದ ಕುರಿತ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ಏ. 25 ಶುಕ್ರವಾರದಂದು ರಾತ್ರಿ 8.30ಕ್ಕೆ ಬಿತ್ತರಗೊಳ್ಳಲಿದೆ.  ಇದನ್ನು ಮಂಗಳೂರು ಆಕಾಶವಾಣಿಯ  100.3FM ನಲ್ಲಿ ಆಲಿಸಬಹುದು. ಈ ಹಿಂದೆ ಮಂಗಳೂರು ಹಾಗೂ ಮಡಿಕೇರಿ ಆಕಾಶವಾಣಿಗಳಲ್ಲಿ ಹಲವು ಬಾರಿ ಇವರ ಭಾಷಣಗಳು,ಕವಿತೆಗಳು, ಅರೆಭಾಷೆ ಹಾಗೂ ತುಳು ಕಾರ್ಯಕ್ರಮಗಳು ಬಿತ್ತರಗೊಂಡುದುದಲ್ಲದೇ ಡಿ ಡಿ ಚಂದನದಲ್ಲೂ ತರಬೇತಿ ನೀಡಿದ ಹೆಗ್ಗಳಿಕೆ […]

ಡಾ. ಅನುರಾಧಾ ಕುರುಂಜಿಯವರ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ಪ್ರಸಾರ Read More »

ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ದಾಳಿ | ಆಲಂಕಾರಿನಲ್ಲಿ ಬೃಹತ್ ಪ್ರತಿಭಟನಾ ಸಭೆ

ಅಲಂಕಾರು : ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಪ್ರತಿಭಟನಾ ಸಭೆ ಇಂದು ಆಲಂಕಾರಿನಲ್ಲಿ ನಡೆಯಿತು. ಈ ವೇಳೆ ನವೀನ್‍ ನೆರಿಯ ಹಾಗೂ ಆಲಂಕಾರಿನ ಎಲ್ಲಾ ಹಿಂದೂ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದರು.

ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ದಾಳಿ | ಆಲಂಕಾರಿನಲ್ಲಿ ಬೃಹತ್ ಪ್ರತಿಭಟನಾ ಸಭೆ Read More »

ಬಸ್‌ನಲ್ಲಿ ಯುವತಿಗೆ ಕಿರುಕುಳ ನೀಡಿದ ಕಂಡಕ್ಟರ್‌

ವೀಡಿಯೊ ವೈರಲ್‌ ಆದ ಬಳಿಕ ನಿರ್ವಾಹಕನನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು ಮಂಗಳೂರು: ಮುಡಿಪು -ಸ್ಟೇಟ್‌ ಬ್ಯಾಂಕ್‌ ಮಧ್ಯೆ ಸಂಚರಿಸುವ ಕೆಎಸ್​ಆರ್​ಟಿಸಿ ಬಸ್‌ ನಿರ್ವಹಕ ಚಲಿಸುತ್ತಿರುವ ಬಸ್ಸಿನಲ್ಲೇ ಯುವತಿಗೆ ಕಿರುಕುಳ ನೀಡಿದ ಘಟನೆ ಸಂಭವಿಸಿದೆ. ನಿದ್ರಿಸುತ್ತಿದ್ದ ಯುವತಿಗೆ ನಿರ್ವಾಹಕ ಕಿರುಕುಳ ನೀಡಿದ್ದು, ಪ್ರಯಾಣಿಕರೊಬ್ಬರು ಇದನ್ನು ವೀಡಿಯೊ ಮಾಡಿದ್ದರು. ಈ ವೀಡಿಯೊ ವೈರಲ್‌ ಆದ ಬಳಿಕ ಎಚ್ಚೆತ್ತುಕೊಂಡಿರುವ ಪೊಲೀಸರು, ಆರೋಪಿ ನಿರ್ವಾಹಕ ಬಾಗಲಕೋಟೆ ಮೂಲದ ಪ್ರದೀಪ್‌ (40) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಏಪ್ರಿಲ್ 22ರಂದು ಮುಡಿಪುವಿನಿಂದ ಸ್ಟೇಟ್‌ ಬ್ಯಾಂಕ್​​ನತ್ತ ತೆರಳುತ್ತಿದ್ದ

ಬಸ್‌ನಲ್ಲಿ ಯುವತಿಗೆ ಕಿರುಕುಳ ನೀಡಿದ ಕಂಡಕ್ಟರ್‌ Read More »

ಬಾವಿಗೆ ಬಿದ್ದು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ: ಬಾವಿಗೆ ಬಿದ್ದು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.24 ರಂದು ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ನಡೆದಿದೆ. ಮೃತ ವ್ಯಕ್ತಿ ಬೆಳ್ತಂಗಡಿ ನಿವಾಸಿ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷೆ ವೀಣಾರವರ ಪತಿ ವಿನೋದ್ (48) ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಬಾವಿಗೆ ಬಿದ್ದು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣು Read More »

ಎರಡು ಮನೆಗಳಿಗೆ ನುಗ್ಗಿದ ಕಳ್ಳ |  ಬೆಲೆಬಾಳುವ ನಗ- ನಗದು ಕಳವು

ಉಪ್ಪಿನಂಗಡಿ: ಎರಡು ಮನೆಗಳಿಗೆ ನುಗ್ಗಿದ ಕಳ್ಳ ಲಕ್ಷಾಂತರ ರೂ. ಬೆಲೆಬಾಳುವ ನಗ ನಗದನ್ನು ಕಳವು ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ನಡೆದಿದೆ. ತೆಕ್ಕಾರು ಗ್ರಾಮದ ಗುತ್ತುಮನೆ ಮುಸ್ತಾಫ ಅವರ ಮನೆಯಲ್ಲಿ ಪತ್ನಿ ಮತ್ತು ನಾದಿನಿ ಮನೆಯೊಳಗೆ ಮಲಗಿದ್ದರು. ಈ ವೇಳೆ ಮನೆಯೊಳಗೆ ನುಗ್ಗಿದ ಕಳ್ಳ ಒಟ್ಟು 12 ಗ್ರಾಂ ತೂಕವಿರುವ 3 ಉಂಗುರ, ಹಾಗೂ 6 ಗ್ರಾಂ ತೂಕವಿರುವ 4 ಉಂಗುರ ಮತ್ತು 3 ಸಾವಿರ ನಗದು ಹಣ ಕದ್ದೊಯ್ದಿದ್ದಾನೆ. ಇದೇ ಗ್ರಾಮದ ಕೋಡಿ

ಎರಡು ಮನೆಗಳಿಗೆ ನುಗ್ಗಿದ ಕಳ್ಳ |  ಬೆಲೆಬಾಳುವ ನಗ- ನಗದು ಕಳವು Read More »

ಕೊನೆಗೂ ಸುರತ್ಕಲ್‌-ಬಿ.ಸಿ.ರೋಡ್‌ ಹೆದ್ದಾರಿಗೆ ದುರಸ್ತಿ ಭಾಗ್ಯ

28.58 ಕೋ. ರೂ. ವೆಚ್ಚದ ದುರಸ್ತಿ ಕಾಮಗಾರಿಗೆ ಇಂದು ಸಂಸದರಿಂದ ಚಾಲನೆ ಮಂಗಳೂರು : ನವಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್‌-ಬಿ.ಸಿ.ರೋಡ್‌ವರೆಗಿನ ಹದಗೆಟ್ಟ ರಾಷ್ಟ್ರೀಯ ಹೆದ್ದಾರಿಯ ದುರಸ್ತಿಗೆ ಕೊನೆಗೂ ಕಾಲಕೂಡಿ ಬಂದಿದೆ. ಸುಮಾರು 28 ಕೋ. ರೂ. ವೆಚ್ಚದಲ್ಲಿ ಹೆದ್ದಾರಿಯ ಮರುಡಾಂಬರೀಕರಣ ಮತ್ತು ದುರಸ್ತಿ ನಡೆಯಲಿದ್ದು, ಸಂಸದ ಕ್ಯಾ.ಬ್ರಿಜೇಶ್‌ ಚೌಟ ಇಂದು ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಸುರತ್ಕಲ್‌ನ ಗೋವಿಂದದಾಸ್ ಕಾಲೇಜಿನ ಸಮೀಪದ ಹೆದ್ದಾರಿ ಬಳಿ ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಬಹುಬೇಡಿಕೆ ಹಾಗೂ ನಿರೀಕ್ಷೆಯ ಕಾಮಗಾರಿಗೆ ಚಾಲನೆ ದೊರೆಯಲಿದೆ.

ಕೊನೆಗೂ ಸುರತ್ಕಲ್‌-ಬಿ.ಸಿ.ರೋಡ್‌ ಹೆದ್ದಾರಿಗೆ ದುರಸ್ತಿ ಭಾಗ್ಯ Read More »

ಅಂಬುಲ ತರವಾಡು ಮನೆಯಲ್ಲಿ ನಡೆದ ನಾಗದೇವರ, ಧರ್ಮದೈವ ರುದ್ರಚಾಮುಂಡಿ ಮತ್ತು ಪರಿವಾರ ದೈವಗಳ ಪುನಃಪ್ರತಿಷ್ಠೆ ಕಾರ್ಯಕ್ರಮ

ಅಂಬುಲ ತರವಾಡು ಮನೆ ಇವರಿಂದ ನಾಗದೇವರ, ಧರ್ಮದೈವ ರುದ್ರಚಾಮುಂಡಿ ಮತ್ತು ಪರಿವಾರ ದೈವಗಳ ಪುನಃಪ್ರತಿಷ್ಠೆ ಕಾರ್ಯಕ್ರಮ ಏ, 20ರಿಂದ ಏ,23ರವರೆಗೆ ನಡೆಯಿತು. ಏ.20 ಭಾನುವಾರ ಸಂಜೆ 6 ಗಂಟೆಗೆ ನಾಗನ ಕಟ್ಟೆಯಲ್ಲಿ ಪ್ರಾಸಾದ ಪರಿಗ್ರಹ, ಪ್ರಾರ್ಥನೆ, ಸ್ಥಳಶುದ್ದಿ, ಪ್ರಾಸಾದ ಶುದ್ದಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಬಲಿ, ಬಿಂಬಾದಿ ವಾಸ ಕಾರ್ಯಕ್ರಮ ನೆರವೇರಿತು. ಏ.21 ಸೋಮವಾರ ಬೆಳಗ್ಗೆ 7 ಗಂಟೆಗೆ ಶ್ರೀ ಮಹಾಗಣಪತಿ ಹೋಮ, ಕಲಶ ಪೂಜೆ, ಬೆಳಗ್ಗೆ 9:30ರ ಶುಭ ಮುಹೂರ್ತದಲ್ಲಿ ನಾಗಪ್ರತಿಷ್ಠೆ, ನಾಗರಕ್ತೇಶ್ವರಿ,

ಅಂಬುಲ ತರವಾಡು ಮನೆಯಲ್ಲಿ ನಡೆದ ನಾಗದೇವರ, ಧರ್ಮದೈವ ರುದ್ರಚಾಮುಂಡಿ ಮತ್ತು ಪರಿವಾರ ದೈವಗಳ ಪುನಃಪ್ರತಿಷ್ಠೆ ಕಾರ್ಯಕ್ರಮ Read More »

ಮಂಗಳೂರಿನ ಬಾಲಕಿಯೋರ್ವಳು  ನಾಪತ್ತೆ | ಪತ್ತೆಗಾಗಿ ಪೋಷಕರ ಮನವಿ..!

ಮಂಗಳೂರು: ಬಾಲಕಿಯೋರ್ವಳು ನಾಪತ್ತೆಯಾದ ಘಟನೆ ಪಕ್ಷಿಕೆರೆಯಲ್ಲಿ ನಡೆದಿದೆ.  ನಾಪತ್ತೆಯಾದವಳು ಸ್ವಾತಿ (17) ಎಂದು ಪತ್ತೆಹಚ್ಚಲಾಗಿದೆ. ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ಪೂರ್ವ ವಿದ್ಯಾರ್ಥಿನಿಯಾಗಿರುವ ಸ್ವಾತಿ, ರಜಾದಿನಗಳಲ್ಲಿ ಪಕ್ಷಿಕೆರೆಯ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಳು. ಅವಳು ಸಾಮಾನ್ಯವಾಗಿ ಬೆಳಿಗ್ಗೆ 9 ಗಂಟೆ ಸುಮಾರಿಗೆ ಮನೆಯಿಂದ ಹೊರಟು ಸಂಜೆ 6 ಗಂಟೆಗೆ ಹಿಂತಿರುಗುತ್ತಿದ್ದಳು. ಆದಾಗ್ಯೂ, ಮಾರ್ಚ್ 25 ರಂದು, ಅಂಗಡಿ ಮಾಲೀಕರು ಬಂದಾಗ ಸ್ವಾತಿ ಕಾಣೆಯಾಗಿದ್ದಾಳೆಂದು ಕಂಡುಕೊಂಡರು. ಆಕೆಯ ಬ್ಯಾಗ್ ಮತ್ತು ಬಟ್ಟೆಗಳು ಅಂಗಡಿಯಲ್ಲಿ ಉಳಿದಿದ್ದವು. ನೆರೆಹೊರೆಯಲ್ಲಿ ವಿಚಾರಿಸಿದಾಗ,

ಮಂಗಳೂರಿನ ಬಾಲಕಿಯೋರ್ವಳು  ನಾಪತ್ತೆ | ಪತ್ತೆಗಾಗಿ ಪೋಷಕರ ಮನವಿ..! Read More »

ಮಾದಕವಸ್ತು ಸೇವನೆ ಮಾಡಿದ ಮೂವರು ಆರೋಪಿಗಳು ಅರೆಸ್ಟ್

ಮಣಿಪಾಲ : ಲಾಡ್ಜ್ ಒಂದರಲ್ಲಿ ಮಾದಕ ವಸ್ತು ಸಹಿತ ಮೂವರನ್ನು ಪೊಲೀಸರು ಎ. 22 ಮಂಗಳವಾರದಂದು ಬಂಧಿಸಿರುವ ಘಟನೆ ಮಣಿಪಾಲದ 80 ಬಡಗಬೆಟ್ಟು ಗ್ರಾಮದ ದಶರಥ ನಗರದಲ್ಲಿ ನಡೆದಿದೆ. ಕಾಪುವಿನ ಮಂಚಕಲ್ ಅಜರುದ್ದೀನ್, ಮಹಾರಾಷ್ಟ್ರದ ಪುಣೆಯ ರಾಜೇಶ್ ಪ್ರಕಾಶ್ ಜಾದವ್, ಮತ್ತು ಮಲ್ಪೆಯ ನಾಜೀಲ್ (ಅಶಿಪ್) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಮಾದಕವಸ್ತುವನ್ನು ತೆಗೆದುಕೊಳ್ಳಲು ಉಪಯೋಗಿಸುವ ಸಿರಿಂಜ್‌ಗಳನ್ನು ಹೊಂದಿದ ಬಗ್ಗೆ ಬಂದ ಮಾಹಿತಿ ಆಧರಿಸಿ ಮಣಿಪಾಲ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. 40 ಸಾವಿರ ರೂ ಮೌಲ್ಯದ

ಮಾದಕವಸ್ತು ಸೇವನೆ ಮಾಡಿದ ಮೂವರು ಆರೋಪಿಗಳು ಅರೆಸ್ಟ್ Read More »

ಅರಮನೆ ರಸ್ತೆಯಲ್ಲಿರುವ ಎರಡು ಅಂಗಡಿಗಳಿಗೆ ತಗುಲಿದ ಬೆಂಕಿ

ವಿಟ್ಲ : ಅರಮನೆ ರಸ್ತೆಯ ರಸ್ಕಿನ್ ಕಾಂಪ್ಲೆಕ್ಸ್ ನಲ್ಲಿ ಎರಡು ಅಂಗಡಿಗಳಿಗೆ ಬೆಂಕಿ ತಗುಲಿದ ಘಟನೆ ವಿಟ್ಲದಲ್ಲಿ ನಡೆದಿದೆ. ಮುರುಳಿಧರ್ ನೇತೃತ್ವದ ಫ್ರೆಂಡ್ಸ್ ವಿಟ್ಲ ತಂಡದ ಸದಸ್ಯರು ತಕ್ಷಣ ಪಿಕಪ್ ವಾಹನದಲ್ಲಿ ನೀರು ತಂದು ಬೆಂಕಿ ನಂದಿಸಲು ಪ್ರಯತ್ನಿಸಿದರು. ಬಳಿಕ ಸ್ಥಳಕ್ಕೆ ಪುತ್ತೂರು ವಿಭಾಗದ ಅಗ್ನಿಶಾಮಕದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿಯನ್ನು ನಂದಿಸಿದರು.    ಸದ್ಯ ಅಂಗಡಿಗಳಲ್ಲಿ ಇದ್ದ ಅಡಿಕೆ, ಕರಿಮೆಣಸು ಸುಟ್ಟುಹೋಗಿದೆ ಎಂದು ತಿಳಿದುಬಂದಿದೆ.  

ಅರಮನೆ ರಸ್ತೆಯಲ್ಲಿರುವ ಎರಡು ಅಂಗಡಿಗಳಿಗೆ ತಗುಲಿದ ಬೆಂಕಿ Read More »

error: Content is protected !!
Scroll to Top