ಪುತ್ತೂರು ಮಂಡಲ ಹೊರತುಪಡಿಸಿ ಜಿಲ್ಲೆಯ ಉಳಿದ ಮಂಡಲಗಳಿಗೆ ಅಧ್ಯಕ್ಷರ ನೇಮಕಗೊಳಿಸಿದ ಬಿಜೆಪಿ!! | ಹಸಿರಾಗಿಯೇ ಉಳಿದಿದೆ ಬಿಜೆಪಿ – ಪುತ್ತಿಲ ಪರಿವಾರದ ನಡುವಿನ ಮಾತುಕತೆ!! | ಎಸ್.ಟಿ. ಮೋರ್ಚಾ ಜಿಲ್ಲಾ ಅಧ್ಯಕ್ಷರಾಗಿ ಹರೀಶ್ ಬಿಜತ್ರೆ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಮೂಡುಬಿದರೆ, ಮಂಗಳೂರು, ಮಂ. ಉತ್ತರ, ಮಂ. ದಕ್ಷಿಣ, ಬಂಟ್ವಾಳ, ಸುಳ್ಯ ಮಂಡಲಗಳಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಅಧ್ಯಕ್ಷರನ್ನು ನೇಮಿಸಿದ್ದಾರೆ. ಆದರೆ ಪುತ್ತೂರು ಮಂಡಲದ ಹೆಸರೇ ಪಟ್ಟಿಯಲ್ಲಿಲ್ಲ!! ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರಿನ ಹೆಸರು ರಾಜ್ಯ ರಾಜಕಾರಣದಲ್ಲಿ ಬಹಳ ದೊಡ್ಡದಾಗಿ ಸುದ್ದಿಯಾಗಿತ್ತು. ಅದಕ್ಕೆ ಕಾರಣ ಅರುಣ್ ಕುಮಾರ್ ಪುತ್ತಿಲ ಅವರ ಸ್ಪರ್ಧೆ. ಅರುಣ್ ಕುಮಾರ್ ಪುತ್ತಿಲ ಅವರ ಸ್ಪರ್ಧೆ ಹೊಸ ರಾಜಕೀಯ ಶಕೆಗೂ ಕಾರಣವಾಯಿತು. ನಂತರದ ಬೆಳವಣಿಗೆಯಲ್ಲಿ ಪುತ್ತಿಲ […]










