ದಕ್ಷಿಣ ಕನ್ನಡ

ಎಡಮಂಗಲ: ಸಾಯಿ ಮೆಡಿಕಲ್ಸ್ ಶುಭಾರಂಭ

ಸುಳ್ಯ: ಎಡಮಂಗಲ ಕೆ.ಜಿ.ಜೆ. ಕಾಂಪ್ಲೆಕ್ಸ್ ನಲ್ಲಿ ಸಾಯಿ ಮೆಡಿಕಲ್ಸ್ ಶನಿವಾರ ಶುಭಾರಂಭಗೊಂಡಿತು. ಶಾಸಕಿ ಭಾಗೀರಥಿ ಮುರುಳ್ಯ ಅವರು ಉದ್ಘಾಟಿಸಿ, ಸಂಸ್ಥೆಗೆ ಶುಭಹಾರೈಸಿದರು. ತಾಲೂಕು ಮಹಿಳಾ ಬಿಜೆಪಿ ಅಧ್ಯಕ್ಷೆ ಶುಭದಾ ರೈ, ಪಂಜಿಮುಗೇರು ರಘುನಾಥ್ ರೈ ಮೊದಲಾದವರು ಉಪಸ್ಥಿತರಿದ್ದರು. ಮಾಲಕರಾದ ಭಾರತಿ ಶೆಟ್ಟಿ ಹಾಗೂ ರಘುಪ್ರಸಾದ್ ಶೆಟ್ಟಿ ಎಣ್ಮೂರುಗುತ್ತು ಅತಿಥಿಗಳನ್ನು ಸ್ವಾಗತಿಸಿ, ವಂದಿಸಿದರು.

ಎಡಮಂಗಲ: ಸಾಯಿ ಮೆಡಿಕಲ್ಸ್ ಶುಭಾರಂಭ Read More »

ನೀರಿನಲ್ಲಿ ಮುಳುಗಿ ಮೃತ್ಯು ! ಮೃತದೇಹ ಪತ್ತೆ

ಸುಳ್ಯ: ಸ್ನಾನಕ್ಕೆ ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಆರಂಬೂರು ಬಳಿಯ ಪಯಸ್ವಿನಿ ನದಿಯಲ್ಲಿ ಇಂದು ನಡೆದಿದೆ. ಮಡಿಕೇರಿ ಮದೆನಾಡು ಮೂಲದ ವೆಂಕಟರಮಣ ಮೃತಪಟ್ಟವರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಆಗಮಿಸಿ ಮೃತದೇಹ ಹುಡುಕಾಟದಲ್ಲಿ ತೊಡಗಿಕೊಂಡಿದ್ದರು. ಇದೀಗ ಬಂದ ಮಾಹಿತಿಯಂತೆ, ಪೈಚಾರ್ ಮುಳುಗು ತಜ್ಞರು ಆಗಮಿಸಿ ಮೃತದೇಹವನ್ನು ಹೊರ ತೆಗೆದಿದ್ದಾರೆ ಎಂದು ಹೇಳಲಾಗಿದೆ.

ನೀರಿನಲ್ಲಿ ಮುಳುಗಿ ಮೃತ್ಯು ! ಮೃತದೇಹ ಪತ್ತೆ Read More »

ಸಂಭ್ರಮಾಚರಣೆ ಮುನ್ನದಿನವೇ ಸುರತ್ಕಲ್ ಟೋಲ್ ಗೇಟ್ ಬೂತ್ ತೆರವು!!

ಸುರತ್ಕಲ್: ಸುರತ್ಕಲ್ ನಿರುಪಯುಕ್ತ ಟೋಲ್ ಗೇಟ್ ನ ಕೆಲವು ಟೋಲ್ ಸಂಗ್ರಹ ಬೂತ್ ಗಳನ್ನು ಹೆದ್ದಾರಿ ಪ್ರಾಧಿಕಾರ ತೆರವುಗೊಳಿಸಿದೆ. ದು ವರ್ಷದಿಂದ ಪಾಳು ಬಿದ್ದಿರುವ, ಮತ್ತೆ ಸುಂಕ ಸಂಗ್ರಹ ಆರಂಭದ ಕುರಿತು ಜನಸಾಮಾನ್ಯರಲ್ಲಿ ವದಂತಿ, ಆತಂಕಕ್ಕೆ ಇದು ಕಾರಣವಾಗಿತ್ತು. ಈ ಬಗ್ಗೆ ಮಾತನಾಡಿದ ಸುರತ್ಕಲ್‌ ಟೋಲ್ ಗೇಟ್ ತೆರವು ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ, ಡಿ. 1ರಂದು ಸುರತ್ಕಲ್ ಟೋಲ್ ಸಂಗ್ರಹ ರದ್ದು ಗೊಂಡು ಹೋರಾಟ ಗೆಲುವು ಸಾಧಿಸಿದ ದಿನ. ಟೋಲ್ ಗೇಟ್ ವಿರೋಧಿ ಹೋರಾಟ

ಸಂಭ್ರಮಾಚರಣೆ ಮುನ್ನದಿನವೇ ಸುರತ್ಕಲ್ ಟೋಲ್ ಗೇಟ್ ಬೂತ್ ತೆರವು!! Read More »

ರಸ್ತೆಗಡ್ಡವಾಗಿ ಉರುಳಿಬಿದ್ದ ಕೋಳಿ ಸಾಗಾಟದ ಲಾರಿ!!

ಕೋಳಿ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಉರುಳಿಬಿದ್ದ ಘಟನೆ ವಿಟ್ಲ-ಸಾಲೆತ್ತೂರು ರಸ್ತೆಯ ರಾಧಾಕಟ್ಟೆ ಎಂಬಲ್ಲಿ ಶುಕ್ರವಾರ ನಡೆದಿದೆ. ವಿಟ್ಲ ಕಡೆಯಿಂದ ಸಾಲೆತ್ತೂರಿನತ್ತ ತೆರಳುತ್ತಿದ್ದ ಕೋಳಿ ಸಾಗಾಟದ ಈ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡವಾಗಿ ಉರುಳಿಬಿದ್ದಿದೆ. ಘಟನೆಯಲ್ಲಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ರಸ್ತೆಗೆ ಉರುಳಿ ಬಿದ್ದಿದ್ದ ಕೋಳಿಗಳಿದ್ದ ಬಾಕ್ಸ್ ಗಳನ್ನು ಬಳಿಕ ಬೇರೆ ವಾಹನದಲ್ಲಿ ತುಂಬಿಸಿ ಕೊಂಡೊಯ್ಯಲಾಯಿತು.

ರಸ್ತೆಗಡ್ಡವಾಗಿ ಉರುಳಿಬಿದ್ದ ಕೋಳಿ ಸಾಗಾಟದ ಲಾರಿ!! Read More »

ಅಸ್ವಸ್ಥಗೊಂಡು ಮಹಿಳೆ ಮೃತ್ಯು

ಬೆಳ್ತಂಗಡಿ: ದಿಢೀರ್ ಅಸ್ವಸ್ಥಗೊಂಡು ವಿವಾಹಿತ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಚಿಬಿದ್ರೆ ಎಂಬಲ್ಲಿ ನಡೆದಿದೆ. ಚಿಬಿದ್ರೆ ಗ್ರಾಮದ ಅನ್ನಾರು ನಿವಾಸಿ ಚಂದ್ರಕಲಾ (31) ಮೃತಪಟ್ಟವರು. ಹಲವು ವರ್ಷಗಳಿಂದ ಹೃದಯ ಸಂಬಂಧಿ ಖಾಯಿಲೆಗೆ ತುತ್ತಾಗಿ ಅನಾರೋಗ್ಯದಿಂದ ಚಂದ್ರಕಲಾ ಅವರು ಬಳಲುತ್ತಿದ್ದರು. ಸಂಜೆ ವೇಳೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದು ಬಂದಿದೆ.

ಅಸ್ವಸ್ಥಗೊಂಡು ಮಹಿಳೆ ಮೃತ್ಯು Read More »

ಪಾರ್ಕಿಂಗ್ ಮಾಡಿದ್ದ ಬೈಕ್‍ ಕಳವು

ಬೆಳ್ತಂಗಡಿ: ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಕಳವು ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಬಳಿ ನಡೆದಿದೆ. ಚಿಕ್ಕಮಗಳೂರು ಕುರುಬರ ಬೂದಿಹಾಳ ಗ್ರಾಮ ನಿವಾಸಿ ಕೆ ಟಿ ಕೃಷ್ಣಶೆಟ್ಟಿ (54) ಎಂಬವರ ಬೈಕ್ ಕಳವಾಗಿದ್ದು, ತನ್ನ ಬೈಕ್‌ನ್ನು ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ನಿಲ್ಲಿಸಿದ್ದರು. ಸ್ನಾನ ಮಾಡಲು ನದಿಗೆ ತೆರಳಿದ್ದು, ಸ್ನಾನ ಮುಗಿಸಿ ಪಾರ್ಕಿಂಗ್ ಸ್ಥಳಕ್ಕೆ ಬಂದಾಗ ಮೋಟಾರ್ ಸೈಕಲ್ ಅನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರು ನೀಡಿದ್ದಾರೆ.

ಪಾರ್ಕಿಂಗ್ ಮಾಡಿದ್ದ ಬೈಕ್‍ ಕಳವು Read More »

ಅಂತರ್ ಜಿಲ್ಲಾ ಕಳ್ಳನ ಬಂಧನ !

ಉಡುಪಿ: ಹಲವು ತಾಲೂಕುಗಳಲ್ಲಿ ಕಳ್ಳತನ ಪ್ರಕರಣ ಹೊಂದಿದ್ದ ಅಂತ‌ರ್ ಜಿಲ್ಲಾ ಕಳ್ಳನೋರ್ವನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಮಲ್ಲಾರು ಗ್ರಾಮದ ತೌಸೀಫ್ ಅಹಮದ್ (34) ಬಂಧಿತ ಆರೋಪಿ. ಬಡಗುಬೆಟ್ಟು ಗ್ರಾಮದ ಶ್ರೀಮತಿ ಎಂಬವರ ಮನೆಗೆ ಕಳ್ಳರು ನುಗ್ಗಿ 188 ಗ್ರಾಂ ತೂಕದ ಚಿನ್ನಾಭರಣ ಹಾಗೂ 15,500ರೂ. ನಗದು ಕಳವು ಮಾಡಿದ್ದರು. ಮನೆಯವರು ದೂರು ನೀಡಿದ ಹಿನ್ನಲೆಯಲ್ಲಿ ಉಡುಪಿ ಠಾಣಾ ಪೊಲೀಸ್ ನಿರೀಕ್ಷಕ ಮಂಜಪ್ಪಡಿ.ಆರ್, ಎಸ್‍ ಐ ಗಳಾದ ಈರಣ್ಣ ಶಿರಗುಂಪಿ, ಭರತೇಶ್ ಕಂಕಣವಾಡಿ, ಪುನೀತ್ ಕುಮಾ‌ರ್ ಮತ್ತು ಸಿಬ್ಬಂದಿಗಳ

ಅಂತರ್ ಜಿಲ್ಲಾ ಕಳ್ಳನ ಬಂಧನ ! Read More »

ಬಂಟ್ವಾಳದಿಂದ ಕಾಣೆಯಾದ ಜೋಡಿ ಕೇರಳದಲ್ಲಿ ಪತ್ತೆ

ಬಂಟ್ವಾಳ: ಬಂಟ್ವಾಳದಲ್ಲಿ ಅಕ್ಕ-ಪಕ್ಕದ ಮನೆಯಿಂದ ಕಾಣೆಯಾದ ಯುವಕ- ಯುವತಿ ಕೇರಳದ ಕಾಂಞಗಾಡ್ ನಲ್ಲಿ ಪೋಲೀಸರು ಪತ್ತೆಹಚ್ಚಿದ್ದು, ಇಬ್ಬರನ್ನು ವಾಪಾಸು ಕರೆದುಕೊಂಡು ಬಂದಿದ್ದಾರೆ. ನ.24 ರಂದು ಮುಂಜಾನೆ ಮನೆಯವರಿಗೆ ಗೊತ್ತಿಲ್ಲದಂತೆ ಪರಾರಿಯಾಗಿದ್ದ ಈ ಯುವಜೋಡಿ ಕೇರಳ ರಾಜ್ಯದ ಕಾಂಞಗಾಡ್ ಎಂಬಲ್ಲಿ ಪೋಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಸಜೀಪ ಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿ ಅಬ್ದುಲ್‌ ಹಮೀದ್ ಅವರ ಮಗಳು ಆಯಿಸತ್ ರಸ್ಮಾ (18) ಹಾಗೂ ಹೈದ‌ರ್ ಎಂಬವರ ಮಗ ಮಹಮ್ಮದ್ ಸಿನಾನ್ (23) ಕಾಣೆಯಾಗಿರುವ ಜೋಡಿಯಾಗಿದ್ದರು. ಆಸ್ಮಾ ಅವರು ದೇರಳಕಟ್ಟೆ ನಡುಪದವು

ಬಂಟ್ವಾಳದಿಂದ ಕಾಣೆಯಾದ ಜೋಡಿ ಕೇರಳದಲ್ಲಿ ಪತ್ತೆ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ವತಿಯಿಂದ ಕ್ರೀಡಾಪಟುಗಳಿಗೆ ಸನ್ಮಾನ

ಸುಬ್ರಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ವತಿಯಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ಜರಗಿದ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಹುಡುಗರ ಹಾಗೂ ಹುಡುಗಿಯರ ವಿಭಾಗದಲ್ಲಿ ಕೆ. ಎಸ್. ಎಸ್. ಕಾಲೇಜಿನ ತಂಡ ತೃತೀಯ ಸ್ಥಾನ ಗಳಿಸಿದ್ದು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್‍ ವತಿಯಿಂದ ಸನ್ಮಾನಿಸಲಾಯಿತು. ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜೇತರಾದ ಸುಮಂತ್, ಜೀವನ್, ವರುಣ್, ದಿಶಾಂತ್, ರಕ್ಷಿತ್, ವಿಜಯ್ ಕುಮಾರ್, ಅರ್ಚನಾ, ಪುನೀತ, ಪ್ರತಿಕ್ಷ, ಪ್ರಗತಿ,

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ವತಿಯಿಂದ ಕ್ರೀಡಾಪಟುಗಳಿಗೆ ಸನ್ಮಾನ Read More »

ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದ ಮಹಿಳೆ ಹೃದಯಾಘಾತದಿಂದ ಮೃತ್ಯು

ಸುಬ್ರಹ್ಮಣ್ಯ: ಬೆಂಗಳೂರಿನ ಮಹಿಳೆಯೊಬ್ಬರು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬಂದಿದ್ದ ಸಂದರ್ಭ ಹೃದಯಾತಕ್ಕೊಳಗಾಗಿ ಮೃತಪಟ್ಟ ಘಟನೆ ನಡೆದಿದೆ. ಬೆಂಗಳೂರಿನ ಎಂವಿ ಗಾರ್ಡನ್ ನಿವಾಸಿ ಶಿವಕುಮಾರ್ ಅವರ ಪತ್ನಿ ಲಕ್ಷ್ಮೀ (32) ಮೃತಪಟ್ಟವರು. ಶಿವಕುಮಾ‌ರ್ ಅವರು ಪತ್ನಿ, ಮಕ್ಕಳೊಂದಿಗೆ ಸಕಲೇಶಪುರದಲ್ಲಿ ನಡೆದ ಮದುವೆ ಕಾರ್ಯಕ್ರಮಕ್ಕೆ ಬಂದಿದ್ದರು. ಈ ವೇಳೆ ಲಕ್ಷ್ಮೀ ಹಾಗೂ ಮಕ್ಕಳು ಸಂಬಂಧಿಕರ ಜತೆ ಧರ್ಮಸ್ಥಳಕ್ಕೆ ತೆರಳಿ ಸುಬ್ರಹ್ಮಣ್ಯಕ್ಕೆ ಬಂದಿದ್ದರು. ರಾತ್ರಿ ಲಕ್ಷ್ಮೀ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಕಡಬ ಸರಕಾರಿ ಆಸ್ಪತ್ರೆಗೆ ಕರೆತಂದು, ಬಳಿಕ ಪುತ್ತೂರು

ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದ ಮಹಿಳೆ ಹೃದಯಾಘಾತದಿಂದ ಮೃತ್ಯು Read More »

error: Content is protected !!
Scroll to Top