ದಕ್ಷಿಣ ಕನ್ನಡ

ಕೆದಿಲ ವಿದ್ಯಾರ್ಥಿಗಳ ಕೈಯಲ್ಲಿ ಕೊಡಲಿ ರೂಪದ ಪೆನ್ಸಿಲ್: ಕ್ರಮಕ್ಕೆ ಒತ್ತಾಯ!

ಕೆದಿಲ: ಪ್ರಾಥಮಿಕ ಶಾಲಾ ಮಕ್ಕಳ ಕೈಯಲ್ಲಿ ಕೊಡಲಿ ರೂಪದ ಪೆನ್ಸಿಲ್ ಪತ್ತೆಯಾಗಿದ್ದು, ಮಾರಾಟ ಮಾಡುವ ವ್ಯಕ್ತಿಗಳ ವಿರುದ್ದ ಕ್ರಮಕೈಗೊಳ್ಳುವಂತೆ ಪೋಷಕರು ಒತ್ತಾಯ ಮಾಡಿದ ಘಟನೆ ಕೆದಿಲ ಗ್ರಾಮದ ಗಡಿಯಾರ ಎಂಬಲ್ಲಿ ನಡೆದಿದೆ. ಗಡಿಯಾರ ಸರಕಾರಿ ಪ್ರಾಥಮಿಕ ಶಾಲೆಯ ಮಕ್ಕಳ ಕೈಯಲ್ಲಿ ಈ ಪೆನ್ಸಿಲ್ ಕಂಡು ಬಂದಿದ್ದು, ಪೋಷಕರು ಈ ಪೆನ್ಸಿಲ್ ನ ವಿರುದ್ದ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಸರಕಾರಿ ಶಾಲೆಗಳಿಗೆ ಭೇಟಿ ನೀಡುವ ಈ ಮಾರಾಟಗಾರರು ಮಕ್ಕಳಿಗೆ ಬೇಕಾಗುವ ಪೆನ್ಸಿಲ್ ನ ಆರ್ಡರ್ ಪಡೆದುಕೊಂಡು ಹೋಗುತ್ತಾರೆ. ಅದರ ಬೆಲೆಯನ್ನು […]

ಕೆದಿಲ ವಿದ್ಯಾರ್ಥಿಗಳ ಕೈಯಲ್ಲಿ ಕೊಡಲಿ ರೂಪದ ಪೆನ್ಸಿಲ್: ಕ್ರಮಕ್ಕೆ ಒತ್ತಾಯ! Read More »

ವಿದ್ಯುತ್ ತಂತಿ ಸ್ಪರ್ಶಿಸಿದ ಅಲ್ಯೂಮಿನಿಯಂ ಏಣಿ: ಬಾಲಕೃಷ್ಣ ಶೆಟ್ಟಿ ಮೃತ್ಯು

ಬೆಳ್ತಂಗಡಿ: ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕರೋರ್ವರು ದಾರುಣವಾಗಿ ಮೃತಪಟ್ಟ ಘಟನೆ ಧರ್ಮಸ್ಥಳ ಸಮೀಪದ ಮಲ್ಲರ್ಮಾಡಿ ಎಂಬಲ್ಲಿ ನಡೆದಿದೆ. ಮೃತರನ್ನು ಮಲ್ಲರ್ಮಾಡಿ ನಿವಾಸಿ ಬಾಲಕೃಷ್ಣ ಶೆಟ್ಟಿ (49 ವ) ಎಂದು ಗುರುತಿಸಲಾಗಿದೆ. ಸೊಪ್ಪು ತರಲೆಂದು ಶುಕ್ರವಾರ ಬೆಳಿಗ್ಗೆ ಸ್ಥಳೀಯ ನಿವಾಸಿ ಬೊಮ್ಮಣ್ಣ ಗೌಡ ಅವರ ತೋಟಕ್ಕೆ ಹೋಗಿದ್ದರು. ಈ ಸಂದರ್ಭ ಘಟನೆ ನಡೆದಿದೆ ಎಂದು ಹೇಳಲಾಗಿದೆ. ತೋಟದ ನಡುವಿನಲ್ಲಿ ಹಾದುಹೋಗಿದ್ದ ವಿದ್ಯುತ್ ಲೈನ್ ಗೆ ಅಲ್ಯೂಮಿನಿಯಂ ಏಣಿ ಸ್ಪರ್ಶಿಸಿತ್ತು. ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದ ಬಾಲಕೃಷ್ಣ

ವಿದ್ಯುತ್ ತಂತಿ ಸ್ಪರ್ಶಿಸಿದ ಅಲ್ಯೂಮಿನಿಯಂ ಏಣಿ: ಬಾಲಕೃಷ್ಣ ಶೆಟ್ಟಿ ಮೃತ್ಯು Read More »

ಕಡಬ: ನ. 26ರಂದು ವಿಜ್ಞಾಪನ ಕರಪತ್ರ, ಗೌಡ ಸಮುದಾಯದ ಜನಸಂಖ್ಯಾ ಸಮೀಕ್ಷೆ, ದೇಣಿಗೆ ಸಂಗ್ರಹಕ್ಕೆ ಚಾಲನೆ

ಕಡಬ: ಇಲ್ಲಿನ ಒಕ್ಕಲಿಗ ಗೌಡ ಸೇವಾ ಸಂಘದ ಪದಗ್ರಹಣ, ಸಮುದಾಯ ಭವನ ಶಿಲಾನ್ಯಾಸ, ಸ್ಪಂದನ ಸಮುದಾಯ ಸಹಕಾರ ಸಂಘದ ಉದ್ಘಾಟನೆಗೆ ಪೂರ್ವಭಾವಿಯಾಗಿ ವಿಜ್ಞಾಪನ ಕರಪತ್ರ ಮತ್ತು ಸಮುದಾಯದ ಜನಸಂಖ್ಯಾ ಸಮೀಕ್ಷೆ, ಭವನ ನಿರ್ಮಾಣ ಸಹಾಯಾರ್ಥ ದೇಣಿಗೆ ಸಂಗ್ರಹಕ್ಕೆ ನ. 26ರ ಭಾನುವಾರ ಬೆಳಿಗ್ಗೆ 11ಕ್ಕೆ ಒಕ್ಕಲಿಗ ಗೌಡ ಸೇವಾ ಸಂಘದ ಸಭಾಂಗಣದಲ್ಲಿ ಚಾಲನೆ ಸಿಗಲಿದೆ. ಶ್ರೀ ಆದಿಚುಂಚನಗಿರಿ ಕಾವೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರು ಚಾಲನೆ ನೀಡಲಿದ್ದಾರೆ. ಡಿ. 26ರಂದು ಕಡಬ ಒಕ್ಕಲಿಗ ಗೌಡ

ಕಡಬ: ನ. 26ರಂದು ವಿಜ್ಞಾಪನ ಕರಪತ್ರ, ಗೌಡ ಸಮುದಾಯದ ಜನಸಂಖ್ಯಾ ಸಮೀಕ್ಷೆ, ದೇಣಿಗೆ ಸಂಗ್ರಹಕ್ಕೆ ಚಾಲನೆ Read More »

ಒಕ್ಕಲಿಗ ಗೌಡ ಸಮುದಾಯ ಭವನ ಶಿಲಾನ್ಯಾಸದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗಿ ಖಚಿತ

ಕಡಬ: ಇಲ್ಲಿನ ಒಕ್ಕಲಿಗ ಗೌಡ ಸಮುದಾಯ ಭವನದ ಶಿಲಾನ್ಯಾಸ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸುವುದು ಖಚಿತವಾಗಿದೆ. ಕಡಬ ಒಕ್ಕಲಿಗ ಗೌಡ ಸಂಘದ ನಿಯೋಗ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ, ಡಿ. 26ರಂದು ನಡೆಯುವ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಗಮಿಸುವಂತೆ ವಿನಂತಿಸಿಕೊಂಡರು. ಸಕಾರಾತ್ಮಕವಾಗಿ ಸ್ಪಂದಿಸಿರುವ ಡಿ.ಕೆ. ಶಿವಕುಮಾರ್ ಅವರು, ಆಮಂತ್ರಣದಲ್ಲಿ ತನ್ನ ಹೆಸರು ಹಾಕಲು ಒಪ್ಪಿಕೊಂಡಿದ್ದಾರೆ. ಈ ಸಂದರ್ಭ ನಿಯೋಗದ ಜೊತೆ ಸುದೀರ್ಘ ಮಾತುಕತೆ ನಡೆಸಿರುವ ಅವರು, ಸಂಘದ ಕಾರ್ಯಚಟುವಟಿಕೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ

ಒಕ್ಕಲಿಗ ಗೌಡ ಸಮುದಾಯ ಭವನ ಶಿಲಾನ್ಯಾಸದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗಿ ಖಚಿತ Read More »

ಹರೇಕಳ ಹಾಜಬ್ಬ ಅವರಿಗೆ ಏರ್ ಇಂಡಿಯ ಎಕ್ಸ್ ಪ್ರೆಸ್ ನಲ್ಲಿ ಗೌರವ | ಇಲ್ಲಿದೆ ವೀಡಿಯೋ

ಮಂಗಳೂರು: ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದ ಸಿಬ್ಬಂದಿ ಅಭಿನಂದಿಸಿ ಗೌರವಿಸಿದರು. ಹಿದಾಯ ಫೌಂಡೇಶನ್ ಜುಬೈಲ್ ಘಟಕದ ವತಿಯಿಂದ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಂಗಳೂರಿನಿಂದ ದಮಾಮ್’ಗೆ ಹರೇಕಳ ಹಾಜಬ್ಬ ಅವರು ತೆರಳುತ್ತಿದ್ದರು. ವಿಮಾನದಲ್ಲಿ ಹರೇಕಳ ಹಾಜಬ್ಬ ಅವರನ್ನು ಗುರುತಿಸಿದ ಸಿಬ್ಬಂದಿ, ಕ್ಯಾಪ್ಟನ್ ಗಮನಕ್ಕೆ ತಂದರು. ಕ್ಯಾಪ್ಟನ್ ಅವರು ಹರೇಕಳ ಹಾಜಬ್ಬ ಅವರನ್ನು ಪರಿಚಯಿಸುತ್ತಾ, “ಶಿಕ್ಷಣ ರಂಗದಲ್ಲಿ ಅಪೂರ್ವ ಸೇವೆ ಸಲ್ಲಿಸಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ನಮ್ಮ ವಿಮಾನದಲ್ಲಿ

ಹರೇಕಳ ಹಾಜಬ್ಬ ಅವರಿಗೆ ಏರ್ ಇಂಡಿಯ ಎಕ್ಸ್ ಪ್ರೆಸ್ ನಲ್ಲಿ ಗೌರವ | ಇಲ್ಲಿದೆ ವೀಡಿಯೋ Read More »

ದೇಶ ಸೇವೆಗಾಗಿ ಪ್ರಾಣತೆತ್ತ MRPL ನಿವೃತ್ತ ಎಂ.ಡಿ.ಯ ಸುಪುತ್ರ!

ಮಂಗಳೂರು: ಜಮ್ಮು – ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಉಗ್ರರ ಜತೆಗಿನ ಗುಂಡಿನ ಚಕಮಕಿಯಲ್ಲಿ ಸೇನೆಯ ಇಬ್ಬರು ಕ್ಯಾಪ್ಟನ್‌ಗಳು, ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಮೇಜರ್‌ ಮತ್ತು ಯೋಧ ಗಾಯಗೊಂಡಿದ್ದು, ಅವರನ್ನು ಉಧಂಪುರದ ಕಮಾಂಡ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರಲ್ಲಿ ಓರ್ವರಾದ ಕ್ಯಾ. ಎಂ.ವಿ. ಪ್ರಾಂಜಲ್ (29) ಅವರು ಎಂ.ಆರ್.ಪಿ.ಎಲ್.ನ ನಿವೃತ್ತ ಎಂ.ಡಿ. ಎಂ. ವೆಂಕಟೇಶ್ ಅವರ ಏಕೈಕ ಪುತ್ರ. ಪ್ರಾಂಜಲ್‌ ಎಂ.ವಿ. ಅವರು ಎಸೆಸೆಲ್ಸಿವರೆಗೆ ಎಂಆರ್‌ಪಿಎಲ್‌ ಸಮೀಪವೇ ಇರುವ ಡೆಲ್ಲಿ ಪಬ್ಲಿಕ್‌ ಸ್ಕೂಲ್‌ನಲ್ಲಿ ವಿದ್ಯಾಭ್ಯಾಸ ಮಾಡಿದ್ದರು. ಬಳಿಕ ನ್ಯಾಶನಲ್‌ ಡಿಫೆನ್ಸ್‌

ದೇಶ ಸೇವೆಗಾಗಿ ಪ್ರಾಣತೆತ್ತ MRPL ನಿವೃತ್ತ ಎಂ.ಡಿ.ಯ ಸುಪುತ್ರ! Read More »

ಲಾಡ್ಜ್ ರೂಮ್ ನಲ್ಲಿ ಬೆಂಕಿ, ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿ ಮೃತದೇಹ!!

ಮಂಗಳೂರು: ಇಲ್ಲಿನ ಲಾಡ್ಜ್ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವ್ಯಕ್ತಿಯೋರ್ವರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ. ಮೃತಪಟ್ಟವರನ್ನು ಯಶ್ರಾಜ್ ಎಸ್.‌ ಸುವರ್ಣ (43) ಎಂದು ಗುರುತಿಸಲಾಗಿದೆ. ಯಶ್ರಾಜ್ ಅವರು ಲಾಡ್ಜ್ ರೂಂನಲ್ಲಿ ಮಲಗಿದ್ದು, ಬಾಗಿಲು ತೆರೆದು ಒಳಪ್ರವೇಶಿಸಿದಾಗ ರೂಂ ಪೂರ್ತಿ ಬೆಂಕಿ ಆವರಿಸಿಕೊಂಡಿತ್ತು ಎನ್ನಲಾಗಿದೆ. ಬೆಂದೂರ್ ವೆಲ್ ಸಮೀಪದ ಲಾಡ್ಜಿನಲ್ಲಿ ರಾತ್ರಿ 12.35ರ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದೆ. ಪಾಂಡೇಶ್ವರ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ಶಮನಗೊಳಿಸಿದ್ದಾರೆ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಲಾಡ್ಜ್ ರೂಮ್ ನಲ್ಲಿ ಬೆಂಕಿ, ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿ ಮೃತದೇಹ!! Read More »

ನಳಿನ್ ಕುಮಾರ್ ಕಟೀಲ್ ಗೆಲ್ಲಿಸಿ ಕೊಡಿರೆಂದ ಬಿಜೆಪಿ ರಾಜ್ಯಾಧ್ಯಕ್ಷ!

ಮಂಗಳೂರಿಗೆ ಆಗಮಿಸಿದ್ದ  ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸಂಸದ ನಳಿನ್ ಕುಮಾರ್ ಕಟೀಲ್ ಪರ ಬ್ಯಾಟ್ ಬೀಸಿದ್ದಾರೆ. ಈ ಮೂಲಕ ನಳಿನ್ ಕುಮಾರ್ ಕಟೀಲ್ ಅವರೇ ಮುಂದಿನ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥೀ ಎನ್ನುವುದನ್ನು ಸಾರಿದಂತಾಗಿದೆ. ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮತ್ತೆ ನಳಿನ್ ಕುಮಾರ್ ಕಟೀಲ್ ಅವರನ್ನು ಗೆಲ್ಲಿಸಿ ಕೊಡುವಂತೆ ಮನವಿ ಮಾಡಿಕೊಂಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯನ್ನು ನಾವು ಗಂಭೀರವಾಗಿ ತೆಗೆದುಕೊಳ್ಳಬೇಕಿದೆ. ಮತ್ತೊಮ್ಮೆ ನಮ್ಮ ಪಕ್ಷದ ಅಭ್ಯರ್ಥಿಯಾದ

ನಳಿನ್ ಕುಮಾರ್ ಕಟೀಲ್ ಗೆಲ್ಲಿಸಿ ಕೊಡಿರೆಂದ ಬಿಜೆಪಿ ರಾಜ್ಯಾಧ್ಯಕ್ಷ! Read More »

ಜನಪ್ರಿಯತೆ ಕಳೆದುಕೊಂಡ ಕಾಂಗ್ರೆಸ್: ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವ್ಯಂಗ್ಯ

ಮಂಗಳೂರು: ಅಧಿಕಾರಕ್ಕೆ ಬಂದು ಆರೇ ತಿಂಗಳಿಗೆ ಜನಪ್ರಿಯತೆಯನ್ನು ಕಳೆದುಕೊಂಡ ಸರ್ಕಾರ ಎಂದರೆ ಅದು ಕಾಂಗ್ರೆಸ್ ಮಾತ್ರ ಎಂದು ಬಿಜೆಪಿ ನೂತನ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ. ಬಿಜೆಪಿಯ ನೂತನ ರಾಜ್ಯ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿದ ಬಿ.ವೈ.ವಿಜಯೇಂದ್ರ ಅವರಿಗೆ ಸೇಬು ಹಣ್ಣಿನ ಹಾರ ಹಾಕುವ ಮೂಲಕ ಭರ್ಜರಿ ಸ್ವಾಗತ ಮಾಡಲಾಯಿತು. ಈ ವೇಳೆ ಬ್ಯಾಂಡ್‌ನವರು ನುಡಿಸಿದ ಮುದುಡಿದ ತಾವರೆ ಅರಳಿದೆ… ಹಾಡು ಕಾರ್ಯಕರ್ತರಲ್ಲಿ ಹೊಸ ಸಂಚಲನವನ್ನು ಸೃಷ್ಟಿ ಮಾಡಿದೆ. ಈ ವೇಳೆ

ಜನಪ್ರಿಯತೆ ಕಳೆದುಕೊಂಡ ಕಾಂಗ್ರೆಸ್: ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವ್ಯಂಗ್ಯ Read More »

ಸೇತುವೆಯಿಂದ ನೀರಿಗೆ ಹಾರಿ ಆತ್ಮಹತ್ಯೆ ! | ದೇಹಕ್ಕಾಗಿ ಶೋಧ ಕಾರ್ಯ

ಮಂಗಳೂರು: ವ್ಯಕ್ತಿಯೊಬ್ಬರು ಅದ್ದೂರು ಸೇತುವೆಯಿಂದ ಕೆಳಕ್ಕೆ ಹಾರಿ ಆತ್ಮಹತ್ಯೆ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೂಲತಃ ಆಕಾಶಭವನದ ನಿವಾಸಿ ಪ್ರಶಾಂತ್ (41) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಸ್ನೇಹಿತ ದೇವಿಪ್ರಸಾದ್ ಜೊತೆಗೆ ಎರಡು ದಿನಗಳ ಕಾಲ ನಗರದ ವಿವಿಧ ದೇವಸ್ಥಾನಕ್ಕೆ ತೆರಳಿ ಇಂದು ಗುರುಪುರದ ಸೇತುವೆ ಬಳಿ ಬಂದಿದ್ದರು. ಈ ನಡುವೆ ಪ್ರಶಾಂತ್ ಸೇತುವೆಯಿಂದ ನದಿಗೆ ಹಾರಿ ನೀರಿನಲ್ಲಿ ಮುಳುಗುತ್ತಿರುವುದನ್ನು ದೇವಿಪ್ರಸಾದ್ ನೋಡಿದ್ದು, ಕೂಡಲೇ ಬಂಟ್ವಾಳ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಪ್ರಶಾಂತ್

ಸೇತುವೆಯಿಂದ ನೀರಿಗೆ ಹಾರಿ ಆತ್ಮಹತ್ಯೆ ! | ದೇಹಕ್ಕಾಗಿ ಶೋಧ ಕಾರ್ಯ Read More »

error: Content is protected !!
Scroll to Top