ದಕ್ಷಿಣ ಕನ್ನಡ

ಕ್ರೀಡಾಕೂಟದಲ್ಲಿ ಯುವಕರು ಮುತುವರ್ಜಿಯಿಂದ ಭಾಗವಹಿಸಿ ಸಮುದಾಯದ ಏಳಿಗೆಗೆ ಕೈಜೋಡಿಸಬೇಕು | ಮಂಗಳೂರು ಯುವ ಘಟಕ-ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ವತಿಯಿಂದ ಒಕ್ಕಲಿಗರ ಪ್ರೀಮಿಯರ್ ಲೀಗ್-2024 ಕ್ರಿಕಟ್ ಪಂದ್ಯಾಟದಲ್ಲಿ ಅಕ್ಷಯ ಕುರುಂಜಿ

ಮಂಗಳೂರು: ಮಂಗಳೂರು ಯುವ ಘಟಕ-ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ವತಿಯಿಂದ ಒಕ್ಕಲಿಗರ ಪ್ರೀಮಿಯಾರ್ ಲೀಗ್-2024 ಮಂಗಳೂರು (ವಿಪಿಎಲ್) ಅಂತರ್ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಮೈದಾನದಲ್ಲಿ ಪ್ರಥಮ ಬಾರಿಗೆ ಅದ್ಧೂರಿಯಾಗಿ ನಡೆಯಿತು. ಸುಳ್ಯ ಅಕಾಡೆಮಿ ಆಫ್‍ ಲಿಬರಲ್ ಎಜುಕೇಶನ್ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕುರುಂಜಿ ಉದ್ಘಾಟನಾ ಸಮಾರಂಭಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿ ಮಾತನಾಡಿ, ಯುವ ಸಮುದಾಯದ ಸಂಘಟನೆಗಾಗಿ ಹಮ್ಮಿಕೊಂಡ ಇಂತಹ ಪಂದ್ಯಾಟಗಳಲ್ಲಿ ಯುವಕರು ಮುತುವರ್ಜಿಯಿಂದ ಭಾಗವಹಿಸಿ ಸಮುದಾಯದ […]

ಕ್ರೀಡಾಕೂಟದಲ್ಲಿ ಯುವಕರು ಮುತುವರ್ಜಿಯಿಂದ ಭಾಗವಹಿಸಿ ಸಮುದಾಯದ ಏಳಿಗೆಗೆ ಕೈಜೋಡಿಸಬೇಕು | ಮಂಗಳೂರು ಯುವ ಘಟಕ-ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ವತಿಯಿಂದ ಒಕ್ಕಲಿಗರ ಪ್ರೀಮಿಯರ್ ಲೀಗ್-2024 ಕ್ರಿಕಟ್ ಪಂದ್ಯಾಟದಲ್ಲಿ ಅಕ್ಷಯ ಕುರುಂಜಿ Read More »

ನಾಳೆ (ಫೆ.24): ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬೆಳ್ಳಿ ಹಬ್ಬದ ಅಂಗವಾಗಿ ಶಾಲಾ ಕೊಠಡಿಗಳಿಗೆ ಗುದ್ದಲಿಪೂಜೆ, ಕ್ರೀಡಾ ಸಮ್ಮಿಲನ

ಸುಳ್ಯ: ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸುಳ್ಯ ಸಂಸ್ಥೆಯ ಬೆಳ್ಳಿಹಬ್ಬ ಆಚರಣೆ ಅಂಗವಾಗಿ ಸೊಸೈಟಿಯ ಸಹ ಸಂಸ್ಥೆಯಾದ ಮಹಾತ್ಮಗಾಂಧಿ ಮಲ್ನಾಡ್ ವಿದ್ಯಾಸಂಸ್ಥೆಗಳ 2 ನೂತನ ಕೊಠಡಿಗಳಿಗೆ ಗುದ್ದಲಿಪೂಜೆ ಹಾಗೂ ಕ್ರೀಡಾ ಸಮ್ಮಿಲನ ಫೆ.24 ಶನಿವಾರ ಬೆಳಗ್ಗೆ 8.30 ರಿಂದ ಕೊಡಿಯಾಲಬೈಲು ಎಂ.ಜಿ.ಎಂ. ಶಿಕ್ಷಣ ಸಂಸ್ಥೆಗಳ ಕ್ರೀಡಾಂಗಣದಲ್ಲಿ ನಡೆಯಲಿದೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಇತರ ಸಹಕಾರಿ ಸಂಘ, ಶ್ರೀ ವೆಂಕಟರಮಣ ಸೊಸೈಟಿಯ ಸದಸ್ಯರಿಗೆ, ಆಡಳಿತ ಮಂಡಳಿ- ಸಲಹಾ ಸಮಿತಿ ಹಾಗೂ ಸಿಬ್ಬಂದಿಗಳಿಗೆ ನಡೆಯುವ ಕ್ರೀಡಾಕೂಟದ

ನಾಳೆ (ಫೆ.24): ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬೆಳ್ಳಿ ಹಬ್ಬದ ಅಂಗವಾಗಿ ಶಾಲಾ ಕೊಠಡಿಗಳಿಗೆ ಗುದ್ದಲಿಪೂಜೆ, ಕ್ರೀಡಾ ಸಮ್ಮಿಲನ Read More »

ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಕುಡಿದು ತೂರಾಡಿದ ಗ್ರಾಮಕರಣಿಕ

ಕಡಬ: ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಕಂಠಪೂರ್ತಿ ಕುಡಿದು ಬಿದ್ದು ಹೊರಳಾಡುತ್ತಿದ್ದ ಗ್ರಾಮಕರಣಿಕನನ್ನು ಬಸ್ ಚಾಲಕ ಪೊಲೀಸ್‌ ಠಾಣೆಗೆ ಕರೆದೊಯ್ದ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಕಂಠಪೂರ್ತಿ ಕುಡಿದು ನಶೆಯಲ್ಲಿದ್ದ ವ್ಯಕ್ತಿಯನ್ನು ಕಡಬ ತಾಲೂಕು ಗೋಳಿತೊಟ್ಟು ಗ್ರಾಮಕರಣಿಕ ನಾಗಸುಂದರ ಎಂದು ಗುರುತಿಸಲಾಗಿದೆ. ಈ ಹಿಂದೆಯು ಕರ್ತವ್ಯದ ವೇಳೆಯೇ ಮದ್ಯಪಾನದ ಚಟ ಹೊಂದಿರುವ ನಾಗಸುಂದರನ ಬಗ್ಗೆ ಮೇಲಾಧಿಕಾರಿಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿತ್ತು. ನಾಗಸುಂದರನ ಮೇಲೆ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಸೂಚನೆ ನೀಡಿದ್ದರು. ಈ ಬಗ್ಗೆ ಪೋಲಿಸ್ ಠಾಣೆಯಲ್ಲಿ

ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಕುಡಿದು ತೂರಾಡಿದ ಗ್ರಾಮಕರಣಿಕ Read More »

ವಂದೇ ಭಾರತ್ ಎಕ್ಸ್ ಪ್ರೆಸ್ ಮಂಗಳೂರಿಗೂ ವಿಸ್ತರಣೆ | ನಳೀನ್ ಕುಮಾರ್

ಮಂಗಳೂರು: ತಿರುವನಂತಪುರ-ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ರವರ ಮನವಿಯ ಮೇರೆಗೆ ಮಂಗಳೂರಿಗೂ ವಿಸ್ತರಣೆ ಮಾಡಲಾಗಿದೆ. ರೈಲ್ವೆ ಮಂಡಳಿ ಹೊರಡಿಸಿರುವ ಆದೇಶದ ಪ್ರಕಾರ ವಂದೇ ಭಾರತ್ ರೈಲ್ ನಂ. 20632/20631 ಇನ್ನು ಮುಂದೆ ತಿರುವನಂತಪುರ-ಮಂಗಳೂರು ನಡುವೆ ಸಂಚರಿಸಲಿದೆ. ಹೊಸ ರೈಲ್ವೆ ವೇಳಾ ಪಟ್ಟಿಯಂತೆ ಈ ರೈಲು ಮಂಗಳೂರಿನಿಂದ ಬೆಳಿಗ್ಗೆ 6.15ಕ್ಕೆ ಹೊರಟು ಅಪರಾಹ್ನ 3.05 ಕ್ಕೆ ತಿರುವನಂತಪುರವನ್ನು ತಲುಪಲಿದೆ. ಹಾಗೆಯೇ ತಿರುವನಂತಪುರದಿಂದ ಸಂಜೆ 4.05

ವಂದೇ ಭಾರತ್ ಎಕ್ಸ್ ಪ್ರೆಸ್ ಮಂಗಳೂರಿಗೂ ವಿಸ್ತರಣೆ | ನಳೀನ್ ಕುಮಾರ್ Read More »

ಅಪ್ರಾಪ್ತ ಬಾಲಕಿಗೆ ದೈಹಿಕ ಹಿಂಸೆ | ಆರೋಪಿ ಬಂಧನ !

ಬಂಟ್ವಾಳ : ಅಪ್ರಾಪ್ತ ಬಾಲಕಿಗೆ ದೈಹಿಕ ಹಿಂಸೆ ನೀಡಿದ ಆರೋಪದ ಮೇಲೆ ಹೊಟೇಲ್ ಮಾಲಕರೊಬ್ಬರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಸಜೀಪನಡು ಗ್ರಾಮದ ಅಬ್ದುಲ್ಲಾ ಎಂಬಾತನ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈತ ಅಪ್ರಾಪ್ತ ಶಾಲಾ ಬಾಲಕಿಗೆ ದೈಹಿಕ ಹಿಂಸೆ ನೀಡಿದ್ದಾನೆ ಎಂದು ಬಾಲಕಿಯ ತಾಯಿ ಬಂಟ್ವಾಳ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಠಾಣಾ ಎಸ್‍.ಐ. ಮೂರ್ತಿ ಹಾಗೂ ಸಿಬ್ಬಂದಿಗಳು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಅಪ್ರಾಪ್ತ ಬಾಲಕಿಗೆ ದೈಹಿಕ ಹಿಂಸೆ | ಆರೋಪಿ ಬಂಧನ ! Read More »

ಪುತ್ತೂರು ಮೂಲದ ವಿದ್ಯಾರ್ಥಿನಿ ಮಾಡೂರಿನ ಪಿಜಿಯಿಂದ ನಾಪತ್ತೆ !

ಉಳ್ಳಾಲ: ಪುತ್ತೂರು ಮೂಲದ ವಿದ್ಯಾರ್ಥಿನಿಯೋರ್ವಳು ನಾಪತ್ತೆಯಾಗಿರುವ ಕುರಿತು ವರದಿಯಾಗಿದೆ. ಪುತ್ತೂರಿನ ಮುಕ್ವೆ ನಿವಾಸಿ ಪ್ರಸ್ತುತ ಕೋಟೆಕಾರು ಬಳಿಯ ಮಾಡೂರಿನ ಪಿಜಿಯಲ್ಲಿದ್ದು, ದೇರಳಕಟ್ಟೆ ಖಾಸಗಿ ಯುನಿವರ್ಸಿಟಿಯಲ್ಲಿ ಪಿ.ಎಚ್‍.ಡಿ ಅಧ್ಯಯನ ಮಾಡುತ್ತಿರುವ ಚೈತ್ರಾ (27) ನಾಪತ್ತೆಯಾದ ವಿದ್ಯಾರ್ಥಿನಿ. ಚೈತ್ರಾಳ ತಂದೆ ಮೃತರಾಗಿದ್ದು, ಮಂಗಳೂರಿನ ಸಂಬಂಧಿಕರ ಆಶ್ರಯದಲ್ಲಿದ್ದುಕೊಂಡು ಎಂ.ಎ.ಸ್ಸಿ ವ್ಯಾಸಂಗ ಮಾಡಿದ್ದಳು. ಫೆ.17 ರಂದು ಬೆಳಿಗ್ಗೆ ಮಾಡೂರಿನ ಪಿಜಿಯಿಂದ ತನ್ನ ಸ್ಕೂಟರಲ್ಲಿ ತೆರಳಿದ್ದ ಚೈತ್ರಾ ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ ಎಂದು ದೂರಲಾಗಿದೆ. ಈ ಕುರಿತು ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರು ಮೂಲದ ವಿದ್ಯಾರ್ಥಿನಿ ಮಾಡೂರಿನ ಪಿಜಿಯಿಂದ ನಾಪತ್ತೆ ! Read More »

ಜೆರೋಸಾ ಶಾಲಾ ಮುಂಭಾಗ ಪ್ರತಿಭಟನೆ | ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿಸಹಿತ ವಿಹಿಂಪ ಮುಖಂಡರಿಗೆ ನಿರೀಕ್ಷಣಾ ಜಾಮೀನು

ಮಂಗಳೂರು: ಜೆರೋಸಾ ಶಾಲಾ ಶಿಕ್ಷಕಿಯೊಬ್ಬರು ಹಿಂದೂಗಳು ಹಾಗೂ ಶ್ರೀರಾಮ ಮಂದಿರದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಹಿನ್ನಲೆಯಲ್ಲಿ ಶಾಲೆ ಮುಂಭಾಗ ನಡೆದ ಪ್ರತಿಭಟನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಹಾಗೂ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್‌ ಶೆಟ್ಟಿ ಮತ್ತು ಇತರರಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ಜೆರಾಲ್ಡ್‌ ಲೋಬೋ ಎಂಬವರು ನೀಡಿದ್ದ ದೂರಿನಂತೆ ಮಂಗಳೂರಿನಲ್ಲಿ ಶಾಸಕರು ಸಹಿತ  ವಿಶ್ವ ಹಿಂದು ಪರಿಷತ್‌ ಮುಖಂಡ ಶರಣ್‌ ಪಂಪ್‌ವೆಲ್‌ ಕಾರ್ಪೊರೇಟರ್‌ ಗಳಾದ ಸಂದೀಪ್‌ ಹಾಗೂ ಭರತ್

ಜೆರೋಸಾ ಶಾಲಾ ಮುಂಭಾಗ ಪ್ರತಿಭಟನೆ | ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿಸಹಿತ ವಿಹಿಂಪ ಮುಖಂಡರಿಗೆ ನಿರೀಕ್ಷಣಾ ಜಾಮೀನು Read More »

ಆಲಂಕಾರು ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಸ್ವಸ್ಥಿಕ್ ಎ.ಕೆ. ಇನ್‍ಸ್ಪೈರ್ ಅವಾರ್ಡ್‍ ಗೆ ಆಯ್ಕೆ

ಕಡಬ: ಆಲಂಕಾರು ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ  ಸ್ವಸ್ತಿಕ್ ಎ.ಕೆ. ಕೇಂದ್ರ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ನೀಡುವ ಇನ್‍ಸ್ಪೈರ್  ಅವಾರ್ಡ್‍ ಗೆ ಆಯ್ಕೆಯಾಗಿದ್ದಾರೆ. 8ನೇ ತರಗತಿಯಲ್ಲಿ ಓದುತ್ತಿರುವ ಸ್ವಸ್ತಿಕ್ ಕುಶಾಲಪ್ಪ ಅಂಬುಲ ಹಾಗೂ ಜಯಪ್ರಭಾ ದಂಪತಿ ಪುತ್ರ. ಅವರಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಮುಖ್ಯ ಶಿಕ್ಷಕರ ಸಹಕಾರದಲ್ಲಿ ವಿಜ್ಞಾನ ಶಿಕ್ಷಕಿ ಜ್ಯೋತಿ ಬಿ. ಮಾರ್ಗದರ್ಶನ ನೀಡಿದ್ದರು.

ಆಲಂಕಾರು ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಸ್ವಸ್ಥಿಕ್ ಎ.ಕೆ. ಇನ್‍ಸ್ಪೈರ್ ಅವಾರ್ಡ್‍ ಗೆ ಆಯ್ಕೆ Read More »

ಯುವಕ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ | ಪಾರು ಮಾಡಿದ ಸ್ಥಳೀಯರು

ಬಂಟ್ವಾಳ: ಪುತ್ತೂರಿನ ಯುವಕನೋರ್ವ ಪಾಣೆಮಂಗಳೂರಿನ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ನಡೆದಿದೆ. ಆನಂದ ಎಂಬವರ ಪುತ್ರ ನಿಶ್ಚಿತ್ (25) ಆತ್ಮಹತ್ಯೆಗೆ ಯತ್ನಿಸಿದಾತ. ಪದವೀಧರನಾಗಿದ್ದರೂ ನಿರುದ್ಯೋಗಿಯಾಗಿರುವ ಆತ ಸೂಕ್ತ ಉದ್ಯೋಗ ಸಿಗದ ಹಿನ್ನಲೆಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ. ಸೋಮವಾರ ದ್ವಿಚಕ್ರದಲ್ಲಿ ಬಂದಾತ ನದಿಗೆ ಹಾರುವ ಸಿದ್ಧತೆಯಲ್ಲಿದ್ದಾಗ ಸ್ಥಳೀಯ ನಿವಾಸಿಗಳಾದ  ಹನೀಫ್, ಸಲ್ಮಾನ್ ಫಾರಿಸ್, ಇರ್ಫಾನ್ ಖಲೀಲ್, ನೌಫಲ್, ತಸ್ಲಿಂ, ಮುಖ್ತಾರ್, ಪಿ.ಎಂ.ಆರೀಫ್ ಎಂಬವರು ಗಮನಿಸಿ ಆತ್ಮಹತ್ಯೆ ಯತ್ನವನ್ನು ಮೊಟಕುಗೊಳಿಸಿ ಪಾರು ಮಾಡಿದ್ದಾರೆ. ಬಳಿಕ

ಯುವಕ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ | ಪಾರು ಮಾಡಿದ ಸ್ಥಳೀಯರು Read More »

ಬಸ್-ಬೈಕ್ ಡಿಕ್ಕಿ | ಬೈಕ್ ಸವಾರ ಗಂಭೀರ

ಕಡಬ: ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಮರ್ದಾಳದಲ್ಲಿ ಸೋಮವಾರ ನಡೆದಿದೆ. ಕಡಬ ತಾಲೂಕಿನ ಕೊಂಬಾರು ಮಣಿಭಾಂಡದ ಮೆಕ್ಯಾನಿಕ್ ವಾಸು ಗಾಯಗೊಂಡ ಬೈಕ್ ಸವಾರ. ಕೆಎಸ್‍ ಆರ್‍ ಟಿಸಿ ಬಸ್ ಇನ್ನೊಂದು ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್‍ ಗೆ ಡಿಕ್ಕಿ ಹೊಡೆದಿದೆ. ಎನ್ನಲಾಗಿದೆ. ಗಂಭೀರ ಗಾಯಗೊಂಡ ಬೈಕ್‍ ಸವಾರರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಬಸ್-ಬೈಕ್ ಡಿಕ್ಕಿ | ಬೈಕ್ ಸವಾರ ಗಂಭೀರ Read More »

error: Content is protected !!
Scroll to Top