ದಕ್ಷಿಣ ಕನ್ನಡ

ಮಂಗಳೂರು : ಆರ್‌ಟಿಒ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಪರಿಶೀಲನೆ

ತೆರಿಗೆ ವಂಚಿಸಿ ಐಷರಾಮಿ ಕಾರು ನೋಂದಣಿ ಮಾಡಿದ ಪ್ರಕರಣ ಮಂಗಳೂರು : ತೆರಿಗೆ ವಂಚಿಸಿ ಐಷಾರಾಮಿ ಕಾರು ನೋಂದಣಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಮಂಗಳೂರು ಮತ್ತು ಉಡುಪಿಯ ಆರ್ ಟಿಒ ಕಚೇರಿಯಲ್ಲಿ ಮಂಗಳವಾರ ಕಡತ ಪರಿಶೀಲನೆ ನಡೆಸಿದ್ದಾರೆ. ಉಡುಪಿ ಆರ್‌ಟಿಒ ಕಚೇರಿಯಲ್ಲಿ ತೆರಿಗೆ ಕಡಿಮೆ ಮಾಡಿ ಬಿಎಂಡಬ್ಲ್ಯು ಕಾರೊಂದನ್ನು ನೋಂದಣಿ ಮಾಡಲಾಗಿದೆ. ಇದರಿಂದ ಸರ್ಕಾರಕ್ಕೆ ಸಂದಾಯ ಆಗಬೇಕಾಗಿದ್ದ ಸುಮಾರು 85 ಲಕ್ಷ ರೂ. ತೆರಿಗೆ ವಂಚನೆಯಾಗಿತ್ತು. ನೋಂದಣಿಗೆ ಸಂಬಂಧಿಸಿದಂತೆ ಮಂಗಳೂರು ಆರ್‌ಟಿಒ ಕಚೇರಿಯಲ್ಲೂ […]

ಮಂಗಳೂರು : ಆರ್‌ಟಿಒ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಪರಿಶೀಲನೆ Read More »

ನ.28ರಂದು ಕಡಬದಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ

ಕಡಬ: ಲೋಕಾಯುಕ್ತ ಜನಸಂಪರ್ಕ ಸಭೆ ನವೆಂಬರ್ 28ರಂದು ಬೆಳಿಗ್ಗೆ 11 ಗಂಟೆಯಿಂದ ಕಡಬ ತಾಲೂಕು ಕಚೇರಿಯಲ್ಲಿ ನಡೆಯಲಿದೆ. ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ನವೆಂಬರ್ 28ರಂದು ರಂದು ಕಡಬ ತಾಲೂಕು ಕಚೇರಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರಕಾರಿ

ನ.28ರಂದು ಕಡಬದಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ Read More »

ಜಾನುವಾರು ಅಕ್ರಮ ಸಾಗಾಟ : ಮೂವರು ಆರೋಪಿಗಳು ಸೆರೆ

ಮಂಗಳೂರು: ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮೂಡಬಿದಿರೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಅದ್ಯಪಾಡಿ ಅಲಿಯಾಸ್‌ ಮೊಹಮ್ಮದ್ ಮನ್ಸೂರ್ ವಿರುದ್ಧ ಮಾತ್ರ ಈಗಾಗಲೇ 29ಕ್ಕೂ ಹೆಚ್ಚು ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದು, ಇದು 30ನೇ ಪ್ರಕರಣವಾಗಿದೆ. ಮೂಡಬಿದಿರೆ ತಾಲೂಕು ಹೊಸ್ಮಾರು – ನೆಲ್ಲಿಕಾರು ರಸ್ತೆಯಲ್ಲಿ ಟಾಟಾ ಎಸಿ ಕಂಟೈನರ್ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತುತು. ತಕ್ಷಣ ದಾಳಿ ನಡೆಸಿ ಆರೋಪಿಗಳಾದ ಮನ್ಸೂರ್ ಅದ್ಯಪಾಡಿ @

ಜಾನುವಾರು ಅಕ್ರಮ ಸಾಗಾಟ : ಮೂವರು ಆರೋಪಿಗಳು ಸೆರೆ Read More »

ಬಂಟ್ವಾಳ : ಅಕ್ರಮ ಕಸಾಯಿಖಾನೆಗೆ ದಾಳಿ, ಓರ್ವ ಆರೋಪಿ ಬಂಧನ

ಮನೆಯ ಶೆಡ್‌ನ್ನು ಕಸಾಯಿಖಾನೆಯಾಗಿ ಪರಿವರ್ತಿಸಿ ಜಾನುವಾರು ವಧೆ ಬಂಟ್ವಾಳ : ಇಲ್ಲಿನ ಅರಳ ಗ್ರಾಮದಲ್ಲಿ ಕಾರ್ಯಾಚರಿಸುತ್ತಿದ್ದ ಅಕ್ರಮ ಕಸಾಯಿಖಾನೆಗೆ ಪೊಲೀಸರು ಭಾನುವಾರ ದಾಳಿ ಮಾಡಿ ನಾಲ್ಕು ಜಾನುವಾರುಗಳನ್ನು ರಕ್ಷಿಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಅರಳ ಗ್ರಾಮದ ನಿವಾಸಿ ಮಯ್ಯದ್ದಿ (57) ಬಂಧಿತ ಆರೋಪಿ. ಇತರ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಮನೆಯ ಆವರಣದಲ್ಲಿರುವ ಶೆಡ್ ಬಳಿ ಜಾನುವಾರುಗಳನ್ನು ವಧೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಸಿಕ್ಕಿದ ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ದಾಳಿ ನಡೆಸಿದ್ದಾರೆ.

ಬಂಟ್ವಾಳ : ಅಕ್ರಮ ಕಸಾಯಿಖಾನೆಗೆ ದಾಳಿ, ಓರ್ವ ಆರೋಪಿ ಬಂಧನ Read More »

ಬೆಳ್ತಂಗಡಿ : ಆಟೋರಿಕ್ಷಾ ಪಲ್ಟಿಯಾಗಿ ಬಾಲಕ ಸಾವು; 5 ಮಂದಿಗೆ ಗಾಯ

ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಓರ್ವ ಬಾಲಕ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಭಾನುವಾರ ರಾತ್ರಿ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕುತ್ರೋಟ್ಟು ಟಿ.ಬಿ.ಕ್ರಾಸ್ ರಸ್ತೆಯ ಹೊಕ್ಕಿಲ ಎಂಬಲ್ಲಿ ನಡೆದಿದೆ. ನಾವೂರಿನ ಶಶಿ ಎಂಬವರ ಆಟೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಆಟೋದಲ್ಲಿದ್ದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುಂಡಡ್ಕ ನಿವಾಸಿ ಗಣೇಶ್ ಪುತ್ರ ತನ್ವಿತ್(12) ಎಂಬ ಬಾಲಕ ಮೃತಪಟ್ಟಿದ್ದಾನೆ. ಆಟೋ ಪಲ್ಟಿಯಾದ ರಭಸಕ್ಕೆ ಗಾಯಗೊಂಡಿದ್ದ ತನ್ವಿತ್‌ನನ್ನು ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ

ಬೆಳ್ತಂಗಡಿ : ಆಟೋರಿಕ್ಷಾ ಪಲ್ಟಿಯಾಗಿ ಬಾಲಕ ಸಾವು; 5 ಮಂದಿಗೆ ಗಾಯ Read More »

ಸುಳ್ಯ : ಕಾಡುಹಂದಿ ಅಡ್ಡಬಂದು ಕಾರು ಪಲ್ಟಿ

ಸುಳ್ಯ : ಹಂದಿ ಅಡ್ಡ ಬಂದ ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಸುಳ್ಯ ಸಮೀಪದ ಕೋಲ್ಚಾರಿನ ಕಣಕ್ಕೂರು ಎಂಬಲ್ಲಿ ಭಾನುವಾರ ನಡೆದಿದೆ. ಘಟನೆಯಲ್ಲಿ ಕಾರು ಚಾಲಕ ಗಾಯಗೊಂಡಿದ್ದಾರೆ. ಸುಳ್ಯದಿಂದ ಕೇರಳದ ಬಂದಡ್ಕ ಕಡೆಗೆ ಸಂಚರಿಸುತ್ತಿದ್ದ ಕಾರಿನ ಎದುರು ದಿಢೀರ್‌ ಎಂದು ಕಾಡುಹಂದಿ ರಸ್ತೆಗೆ ಜಿಗಿದು ಅಡ್ಡ ಬಂದಿದೆ. ಈ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಮೋರಿಯ ಕೆಳಗೆ ಉರುಳಿದೆ. ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ.

ಸುಳ್ಯ : ಕಾಡುಹಂದಿ ಅಡ್ಡಬಂದು ಕಾರು ಪಲ್ಟಿ Read More »

ಕಡಬ: ಮಹಿಳೆಗೆ ಕಿರುಕುಳ ನೀಡಿದ ಆರೋಪಿ ಬಂಧನ

ಕಡಬ: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ವ್ಯಕ್ತಿಯನ್ನು ಕಡಬ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಡಬ ನಿವಾಸಿ ಉಮೇಶ್ ಗೌಡ ಬಂಧಿತ ಆರೋಪಿ. ನ.13ರಂದು ರಾತ್ರಿ ಸಂತ್ರಸ್ತ ಮಹಿಳೆ ಮನೆಯ ಹೊರ ಭಾಗದ ಕೊಟ್ಟಿಗೆಯಲ್ಲಿ ನಿದ್ರಿಸುತ್ತಿದ್ದ ವೇಳೆ ಆರೋಪಿ ಅಲ್ಲಿಗೆ ಅಕ್ರಮವಾಗಿ ಪ್ರವೇಶಿಸಿ ಲೈಂಗಿಕ ಕಿರುಕುಳ ನೀಡಲು ಯತ್ನಿಸಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ ಈ ವೇಳೆ ಸಂತ್ರಸ್ತೆ ಸಹಾಯಕ್ಕಾಗಿ ಬೊಬ್ಬೆ ಹೊಡೆದಿದ್ದು, ಮನೆಯೊಳಗಿದ್ದ ಆಕೆಯ ಪತಿ, ಮಕ್ಕಳು ಬಂದು ಆರೋಪಿಯನ್ನು ಹಿಡಿಯಲು ಯತ್ನಿಸಿದಾಗ ಆರೋಪಿ ಹಲ್ಲೆ

ಕಡಬ: ಮಹಿಳೆಗೆ ಕಿರುಕುಳ ನೀಡಿದ ಆರೋಪಿ ಬಂಧನ Read More »

ಎಸ್‌ಐಟಿ ಅಧಿಕಾರಿಗಳ ವಿರುದ್ಧ ಪೊಲೀಸ್‌ ಠಾಣೆಗೆ ದೂರು ನೀಡಿದ ಜಯಂತ್‌ ಟಿ.

ಜಿತೇಂದ್ರ ದಯಾಮ, ಸೈಮನ್‌, ಆರ್‌.ಜಿ.ಮಂಜುನಾಥ ಮತ್ತಿತರರ ವಿರುದ್ಧ ದೂರು ಬೆಳ್ತಂಗಡಿ: ಎಸ್‌ಐಟಿ ತನ್ನ ಮೇಲೆ ಮಾಡಿ, ಬಲವಂತವಾಗಿ ಹೇಳಿಕೆ ಪಡೆದುಕೊಂಡಿದೆ ಎಂದು ಆರೋಪಿಸಿ ರಾಜ್ಯಪಾಲರು ಮತ್ತು ಪೊಲೀಸ್‌ ಮಹಾವರಿಷ್ಠರಿಗೆ ದೂರು ನೀಡಿದ್ದ ಜಯಂತ್‌ ಟಿ. ಈಗ ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತಿಟ್ಟ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳ ವಿರುದ್ಧವೇ ಬೆಳ್ತಂಗಡಿ ಠಾಣೆಗೆ ಜಯಂತ್ ಟಿ. ದೂರು ನೀಡಿದ್ದಾರೆ. ಎಸ್‌ಐಟಿ ಅಧಿಕಾರಿಗಳಾದ ಜಿತೇಂದ್ರ ದಯಾಮ, ಎಸ್.ಪಿ. ಸೈಮನ್, ಡಿವೈಎಸ್ಪಿ ಆರ್ ಜಿ. ಮಂಜುನಾಥ, ಇನ್‌ಸ್ಪೆಕ್ಟ‌ರ್ ಮಂಜುನಾಥ

ಎಸ್‌ಐಟಿ ಅಧಿಕಾರಿಗಳ ವಿರುದ್ಧ ಪೊಲೀಸ್‌ ಠಾಣೆಗೆ ದೂರು ನೀಡಿದ ಜಯಂತ್‌ ಟಿ. Read More »

ಬಿಹಾರ ಗೆಲುವು ವೋಟ್‌ ಚೋರಿ ಸುಳ್ಳಿಗೆ ಸಿಕ್ಕಿದ ಉತ್ತರ : ಕ್ಯಾ.ಬ್ರಿಜೇಶ್‌ ಚೌಟ

ಅಪಪ್ರಚಾರಕ್ಕೆ ತಕ್ಕ ಪಾಠ ಕಲಿಸಿದ ಬಿಹಾರದ ಮತದಾರರು ಎಂದ ಸಂಸದ ಮಂಗಳೂರು: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಮತ್ತೊಮ್ಮೆ ಐತಿಹಾಸಿಕ ಗೆಲುವು ಸಾಧಿಸಿದ್ದು, ಈ ಫಲಿತಾಂಶವು ಬಿಜೆಪಿಗೆ ಮತ್ತಷ್ಟು ಬಲ ನೀಡಲಿದೆ. ಅಷ್ಟೇಅಲ್ಲ, ಕಾಂಗ್ರೆಸ್ ನಾಯಕರ ಸುಳ್ಳು ವೋಟ್ ಚೋರಿ ಆರೋಪಕ್ಕೆ ಬಿಹಾರದ ಮತದಾರರು ತಕ್ಕ ಪಾಠ ಕಲಿಸಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಒಳಗೊಂಡಿರುವ ಎನ್‌ಡಿಎ ಬಹುಮತ ಸಾಧಿಸಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿರುವ ಸಂಸದರು, ಪ್ರಧಾನಮಂತ್ರಿ

ಬಿಹಾರ ಗೆಲುವು ವೋಟ್‌ ಚೋರಿ ಸುಳ್ಳಿಗೆ ಸಿಕ್ಕಿದ ಉತ್ತರ : ಕ್ಯಾ.ಬ್ರಿಜೇಶ್‌ ಚೌಟ Read More »

error: Content is protected !!
Scroll to Top