ದಕ್ಷಿಣ ಕನ್ನಡ

ಆಕಸ್ಮಿಕವಾಗಿ ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಪನ್ಯಾಸಕಿ ಗ್ಲೋರಿಯಾ ಆಶಾ ರೋಡ್ರಿಗಸ್ ನಿಧನ

ಮಂಗಳೂರು: ಕಾಲೇಜಿನಲ್ಲಿ ಆಕಸ್ಮಿಕವಾಗಿ ಬಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಉಪನ್ಯಾಸಕಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಂಗಳೂರು  ಅಲೋಶಿಯಸ್ ಪದವಿ ಕಾಲೇಜಿನ ಉಪನ್ಯಾಸಕಿ ಗ್ಲೋರಿಯಾ ಆಶಾ ರೋಡ್ರಿಗಸ್ (23) ಮೃತಪಟ್ಟವರು. ಬಜೆ ಪಡು ಪೆರಾರ ನಿವಾಸಿ ಗೋರಿಯಾ ಆಶಾ ರೋಡ್ರಿಗಸ್ ಒಂದು ವರ್ಷದ ಹಿಂದಷ್ಟೇ ಅಲೋಶಿಯಸ್‌ ಕಾಲೇಜಿನಲ್ಲಿಯೇ ಸ್ನಾತಕೋತ್ತರ ಪದವಿ ಪೂರೈಸಿದ್ದರು. ಬಳಿಕ ಅಲೋಶಿಯಸ್ ಕಾಲೇಜಿನಲ್ಲಿಯೇ ಬಿಕಾಂ ಪದವಿಗೆ ಕಾಮರ್ಸ್ ವಿಷಯದಲ್ಲಿ ಉಪನ್ಯಾಸಕಿಯಾಗಿ ಸೇರ್ಪಡೆಗೊಂಡಿದ್ದರು ನ.9ರಂದು ಕಾಲೇಜಿನಲ್ಲಿ ತಲೆಸುತ್ತು ಬಂದು ಬಿದ್ದ ಅವರಿಗೆ ಗಾಯವಾಗಿತ್ತು. ಅವರನ್ನು ಕಂಕನಾಡಿ […]

ಆಕಸ್ಮಿಕವಾಗಿ ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಪನ್ಯಾಸಕಿ ಗ್ಲೋರಿಯಾ ಆಶಾ ರೋಡ್ರಿಗಸ್ ನಿಧನ Read More »

ನ.15 : ಕಸ್ತೂರಿ ರಂಗನ್ ವರದಿ ವಿರೋಧಿಸಿ ಗುಂಡ್ಯದಲ್ಲಿ ಪ್ರತಿಭಟನೆ | ಜನರ ಭವಿಷ್ಯದ ಮೇಲಾಗುವ ಪರಿಣಾಮಕ್ಕೆ ಪರಿಹಾರ ಕಂಡುಕೊಳ್ಳುವಲ್ಲಿ ಸಮುದಾಯದವರು ಪಾಲ್ಗೊಳ್ಳಿ : ಸುರೇಶ್‍ ಬೈಲು

ಕಡಬ: ನ.15 ಶುಕ್ರವಾರ ಕಸ್ತೂರಿರಂಗನ್ ವರದಿ ವಿರೋಧಿಸಿ ಗುಂಡ್ಯದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಈ ಭಾಗದ ಜನರು ಭಾಗವಹಿಸುವ ಮೂಲಕ ಜನರ ಭವಿಷ್ಯದ ಮೇಲಾಗುವ ಪರಿಣಾಮಕ್ಕೆ ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂದು ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು ಕರೆ ನೀಡಿದ್ದಾರೆ. ವರದಿ ಜಾರಿಗೆ ತುದಿಕಾಲಲ್ಲಿ ನಿಂತಿರುವ ವ್ಯವಸ್ಥೆಯ ವಿರುದ್ಧ ನಾವು ಸಂಘಟಿತವಾಗಿ ಹೋರಾಟ ಮಾಡಬೇಕಾಗಿತ್ತು. ಈ ಹಿನ್ನಲೆಯಲ್ಲಿ ನ.15ರಂದು ಗುಂಡ್ಯದಲ್ಲಿ ನಡೆಯುವ ಬೃಹತ್ ಪ್ರತಿಭಟನೆಗೆ ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ

ನ.15 : ಕಸ್ತೂರಿ ರಂಗನ್ ವರದಿ ವಿರೋಧಿಸಿ ಗುಂಡ್ಯದಲ್ಲಿ ಪ್ರತಿಭಟನೆ | ಜನರ ಭವಿಷ್ಯದ ಮೇಲಾಗುವ ಪರಿಣಾಮಕ್ಕೆ ಪರಿಹಾರ ಕಂಡುಕೊಳ್ಳುವಲ್ಲಿ ಸಮುದಾಯದವರು ಪಾಲ್ಗೊಳ್ಳಿ : ಸುರೇಶ್‍ ಬೈಲು Read More »

ಕಡಬ : ಮನೆ ಕೆಡವಿದ ಅಧಿಕಾರಿಗಳು; ದಯಾಮರಣ ಯಾಚಿಸಿದ ವೃದ್ಧ ದಂಪತಿ

ಆರು ವರ್ಷಗಳಿಂದ ವಾಸವಾಗಿದ್ದ ಮನೆಯನ್ನು ದಿಢೀರ್‌ ತೆರವುಗೊಳಿಸಿದ ಕಾರಣ ವೃದ್ಧರು ಅತಂತ್ರ ಮಂಗಳೂರು : ಅಧಿಕಾರಿಗಳು ದಿಢೀರ್‌ ಎಂದು ಮನೆಯನ್ನು ಧ್ವಂಸ ಮಾಡಿದ ಕಾರಣ ಅತಂತ್ರವಾಗೊರುವ ವೃದ್ಧ ದಂಪತಿ ಮನೆ ನಿರ್ಮಿಸಕೊಡಿ ಅಥವಾ ಸಾಯಲು ಅನುಮತಿ ಕೊಡಿ ಎಂದು ಯಾಚಿಸಿ ರಾಷ್ಟ್ರಪತಿಗೆ ಪತ್ರ ಬರೆದಿರುವ ಘಟನೆ ಕಡಬದಲ್ಲಿ ಸಂಭವಿಸಿದೆ.ಕಡಬ ತಾಲೂಕಿನ ಕೌಕ್ರಾಡಿಯಲ್ಲಿ ವಾಸವಾಗಿರುವ ರಾಧಮ್ಮ ಮತ್ತು ಮುತ್ತುಸ್ವಾಮಿ ದಂಪತಿಯ ಮನೆಯನ್ನು ಇಂದು ಏಕಾಏಕಿ ಧ್ವಂಸಗೊಳಿಸಲಾಗಿದೆ. ಇದರಿಂದ ಕಂಗಾಲು ಆಗಿರುವ ದಂಪತಿ ದಯಾಮರಣಕ್ಕಾಗಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ. ದಂಪತಿ

ಕಡಬ : ಮನೆ ಕೆಡವಿದ ಅಧಿಕಾರಿಗಳು; ದಯಾಮರಣ ಯಾಚಿಸಿದ ವೃದ್ಧ ದಂಪತಿ Read More »

ಅನಾರೋಗ್ಯದಿಂದ ವಿದ್ಯಾರ್ಥಿ ಚಿನ್ಮಯಿ ನಿಧನ

ಬೆಳ್ತಂಗಡಿ: ಅನಾರೋಗ್ಯದಿಂದ ವಿದ್ಯಾರ್ಥಿ ಚಿನ್ಮಯಿ ಮೃತಪಟ್ಟ ಘಟನೆ ನಡೆದಿದೆ. ಚಿನ್ಮಯಿ ಎರಡು ದಿನದ ಹಿಂದೆ ಮೈಸೂರಿನಲ್ಲಿ ನಡೆದ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಎನ್ನಲಾಗಿದೆ. ಮೃತರು ತಂದೆ ತಾಯಿ ಹಾಗೂ ಅಪಾರ ಬಂಧು ಮಿತ್ರರನ್ನು ಆಗಲಿದ್ದಾರೆ.

ಅನಾರೋಗ್ಯದಿಂದ ವಿದ್ಯಾರ್ಥಿ ಚಿನ್ಮಯಿ ನಿಧನ Read More »

ಬಿ.ವೈ.ವಿಜಯೇಂದ್ರ ಅಂಬೆಗಾಲಿಡುವ ಕೂಸು ಎಂದು ಟೀಕಿಸಿದ ಸಿದ್ಧರಾಮಯ್ಯ | ಶ್ರೀ ಕೃಷ್ಣ ಪರಮಾತ್ಮ ಅಂಬೆಗಾಲಿಡುವಾಗಲೇ ಅಸುರೀ ಶಕ್ತಿಗಳನ್ನು ನಾಶಪಡಿಸಿರುವುದನ್ನ ಸಿದ್ಧರಾಮಯ್ಯನವರು ನೆನಪಿಸಿಕೊಳ್ಳಲಿ : ತಿರುಗೇಟು ನೀಡಿದ ಕಿಶೋರ್ ಕುಮಾರ್ ಪುತ್ತೂರು

ಸಂಡೂರು: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಉದ್ದೇಶಿಸಿ ‘ಅಂಬೆಗಾಲಿಡುವ ಕೂಸು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಖಡಕ್ ತಿರುಗೇಟು ನೀಡಿದ್ದಾರೆ. ‘ಶ್ರೀ ಕೃಷ್ಣ ಪರಮಾತ್ಮ ಅಂಬೆಗಾಲಿಡುವಾಗಲೇ ಅಸುರೀ ಶಕ್ತಿಗಳನ್ನು ನಾಶಪಡಿಸಿರುವುದನ್ನ ಸಿದ್ಧರಾಮಯ್ಯನವರು ನೆನಪಿಸಿಕೊಳ್ಳಲಿ” ಎಂದು ತೀಕ್ಷವಾಗಿ ಪ್ರತಿಕ್ರಿಯಿಸಿದ್ದಾರೆ. ಸಂಡೂರಿನಲ್ಲಿ ಮಾತನಾಡಿದ ಅವರು, ತಮ್ಮ ಪಕ್ಷದ ರಾಜ್ಯಾಧ್ಯಕ್ಷರ ಕುರಿತು ಸಿಎಂ ನೀಡಿದ ಹೇಳಿಕೆಯನ್ನು ಭಾರೀ ತರಾಟೆಗೆ ತೆಗೆದುಕೊಂಡರು. ಶ್ರೀಕೃಷ್ಣನನ್ನು ವಿಜಯೇಂದ್ರನಿಗೆ ಹೋಲಿಸಿ ಮಾತನಾಡಿದ ವಿಧಾನ ಪರಿಷತ್‌

ಬಿ.ವೈ.ವಿಜಯೇಂದ್ರ ಅಂಬೆಗಾಲಿಡುವ ಕೂಸು ಎಂದು ಟೀಕಿಸಿದ ಸಿದ್ಧರಾಮಯ್ಯ | ಶ್ರೀ ಕೃಷ್ಣ ಪರಮಾತ್ಮ ಅಂಬೆಗಾಲಿಡುವಾಗಲೇ ಅಸುರೀ ಶಕ್ತಿಗಳನ್ನು ನಾಶಪಡಿಸಿರುವುದನ್ನ ಸಿದ್ಧರಾಮಯ್ಯನವರು ನೆನಪಿಸಿಕೊಳ್ಳಲಿ : ತಿರುಗೇಟು ನೀಡಿದ ಕಿಶೋರ್ ಕುಮಾರ್ ಪುತ್ತೂರು Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಅಂತರ್ ಪದವಿಪೂರ್ವ ಕಾಲೇಜು  ಫೆಸ್ಟ್

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆಡಳಿತಕ್ಕೆ ಒಳಪಟ್ಟ ಮಹಾವಿದ್ಯಾಲಯದಲ್ಲಿ ವಾಣಿಜ್ಯ ಶಾಸ್ತ್ರ ಮತ್ತು ಉದ್ಯಮ ಆಡಳಿತ ವಿಭಾಗದಿಂದ ಅಂತಿಮ ವಾಣಿಜ್ಯ ಪದವಿ ಮತ್ತು ಉದ್ಯಮ ಆಡಳಿತ ಪದವಿ ವಿದ್ಯಾರ್ಥಿಗಳು ಆಯೋಜಿಸಿದ ಅಂತರ್ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ‘ಪ್ರೇರಣ ಫೆಸ್ಟ್ ಹಮ್ಮಿಕೊಳ್ಳಲಾಯಿತು. ಚರಿತ್ರೆ ಯೂಟ್ಯೂಬ್ ಚಾನೆಲ್ ನಲ್ಲಿ ಧ್ವನಿ ನೀಡುವ ನಿತಿನ್ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿ  ವಿದ್ಯಾರ್ಥಿಗಳಲ್ಲಿ ಕಲಿಕೆಯ ಮನೋಭಾವ ಇರಬೇಕು, ನಿರಂತರ ಪರಿಶ್ರಮದಿಂದ ಕಲಿತಾಗ ಯಶಸ್ಸು ಸಾಧ್ಯ ಎಂದರು. ಕಾಲೇಜಿನ ಪ್ರಾಂಶುಪಾಲ ಡಾ ದಿನೇಶ್

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಅಂತರ್ ಪದವಿಪೂರ್ವ ಕಾಲೇಜು  ಫೆಸ್ಟ್ Read More »

ಪತ್ನಿ, ಮಗುವನ್ನು ಕೊಂದು ಆತ್ಮಹತ್ಯೆ ಪ್ರಕರಣ : ಇಬ್ಬರ ಬಂಧನ

ಡೆತ್‌ನೋಟ್‌ನಲ್ಲಿತ್ತು ಪಕ್ಷಿಕೆರೆಯಲ್ಲಿ ನಡೆದ ಬೆಚ್ಚಿಬೀಳಿಸಿದ ಕೃತ್ಯದ ಹಿಂದಿನ ಕಾರಣ ಮಂಗಳೂರು: ಮೂಲ್ಕಿ ಸಮೀಪ ಕೆಮ್ರಾಲ್‌ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಪಕ್ಷಿಕೆರೆಯಲ್ಲಿ ಸಂಭವಿಸಿದ್ದ ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಇಬ್ಬರನ್ನು ಮೂಲ್ಕಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ಮೃತ ಕಾರ್ತಿಕ್‌ನ ತಾಯಿ ಶ್ಯಾಮಲಾ ಭಟ್, ಸಹೋದರಿ ಕಣ್ಮಣಿ ಬಂಧಿತರು. ಆತ್ಮಹತ್ಯೆಗೆ ಮೊದಲು ಕೌಟುಂಬಿಕ ಕಲಹದ ಬಗ್ಗೆ ಕಾರ್ತಿಕ್ ಭಟ್ ಡೆತ್‌ನೋಟ್ ಬರೆದಿದ್ದ. ಈ ಹಿನ್ನೆಲೆಯಲ್ಲಿ ಕಾರ್ತಿಕ್ ಕುಟುಂಬದ ಇಬ್ಬರನ್ನು ಪೊಲೀಸರು

ಪತ್ನಿ, ಮಗುವನ್ನು ಕೊಂದು ಆತ್ಮಹತ್ಯೆ ಪ್ರಕರಣ : ಇಬ್ಬರ ಬಂಧನ Read More »

ಸುರ್ಯಗುತ್ತು ಮನೆತನದ ಹಿರಿಯರಾದ, ಜೈನ ಸಾಹಿತಿ ಬಂಟ್ವಾಳದ ವಿಜಯ ಜಿ.ಜೈನ್ ನಿಧನ

ಬಂಟ್ವಾಳ:  ಸುರ್ಯ ಗುತ್ತು ಮನೆತನದ ಹಿರಿಯರಾದ ಜೈನ ಸಾಹಿತಿ ಬಂಟ್ವಾಳ ತಾಲೂಕಿನ ಇರುವತ್ತೂರು ಬೀಡಿನ ವಿಜಯ ಜಿ. ಜೈನ್ ಇಂದು ಸ್ವಗ್ರಹದಲ್ಲಿ ನಿಧನ ಹೊಂದಿದರು. ಅವರು ಜೈನ ‘ಭಕ್ತಿ ಸುಮನಾಂಜಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಡೆ ಅವರ ಯಶೋಗಾಥೆ ಗೋಮಟೇಶ ಚರಿತೆ ಸಾಂಗತ್ಯ, ತುಳು ಭಾಷಾಂತರಿತ ಬೃಹತ್ ಸ್ವಯಂಭು ಸ್ತೋತ್ರ, ಜೈನ ಧರ್ಮದ ಧರ್ಮ ಗ್ರಂಥ ಮೋಕ್ಷ ಶಾಸ್ತ್ರ ಅವರ ಪ್ರಕಟಿತ ಸಾಹಿತ್ಯಗಳು. ಜಿನ ಸಹಸ್ರ ನಾಮ, ಪದ್ಮ ಪುರಾಣ ಅವರ ಅಪ್ರಕಟಿತ

ಸುರ್ಯಗುತ್ತು ಮನೆತನದ ಹಿರಿಯರಾದ, ಜೈನ ಸಾಹಿತಿ ಬಂಟ್ವಾಳದ ವಿಜಯ ಜಿ.ಜೈನ್ ನಿಧನ Read More »

ಸ್ಯಾನಿಟೈಸರ್ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ವಿದ್ಯಾರ್ಥಿನಿಯೊಬ್ಬರು ಸ್ಯಾನಿಟೈಸರ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನೆರಿಯದ ಹಾಸ್ಟೇಲ್‍ ನಲ್ಲಿ ಇಂದು ಬೆಳಿಗ್ಗೆ ನಡೆದಿದೆ. ನೆರಿಯ ಗ್ರಾಮದ ಅಲಂಗಾಯಿ ವಾಲ್ಮೀಕಿ ಆಶ್ರಮ ಶಾಲೆಯ ಹಾಸ್ಟೆಲ್ ನ ಎಂಟನೇ ತರಗತಿಯಲ್ಲಿ ಓದುತ್ತಿದ್ದ ವಿಜಯಪುರದ ವಿದ್ಯಾರ್ಥಿನಿ ಇಂದು ಬೆಳಿಗ್ಗೆ, ಸ್ಯಾನಿಟೈಸರ್ ಸೇವಿಸಿ ವಾಂತಿ ಮಾಡಿಕೊಂಡು ಅಸ್ವಸ್ಥಗೊಂಡಿದ್ದರು. ತಕ್ಷಣ ಅವಳನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಕಳೆದ ಕೆಲವು ದಿನಗಳಿಂದ ಮನೆಗೆ ಹೋಗುತ್ತೇನೆ ಇಲ್ಲಿ ಇರುವುದಿಲ್ಲ ಎಂದು ಹೇಳುತಿದ್ದಳು ಎನ್ನಲಾಗಿದ್ದು, ಆತ್ಮಹತ್ಯೆಗೆ ಕಾರಣಗಳು

ಸ್ಯಾನಿಟೈಸರ್ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ Read More »

ಪುಣ್ಚತ್ತಾರಿನಲ್ಲಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ 2ನೇ ನೂತನ  ಶಾಖೆ ಉದ್ಘಾಟನೆ

ಕಾಣಿಯೂರು: ನರಿಮೊಗರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 2ನೇ ನೂತನ ಶಾಖೆಯು ಪುಣ್ಚತ್ತಾರಿನ ಇಡ್ಯಡ್ಕ ಕಾಂಪ್ಲೆಕ್ಸ್ ನಲ್ಲಿ ಇಂದು (ಭಾನುವಾರ) ಉದ್ಘಾಟನೆಗೊಂಡಿತು. ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ, ಸಹಕಾರ ರತ್ನ ಕೆ.ಸೀತಾರಾಮ ರೈ ಕಚೇರಿಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ನರಿಮೊಗರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನ್ಯಾಯವಾದಿ ಮೋಹನ ಗೌಡ ಇಡ್ಯಡ್ಕ ಗಣಕಯಂತ್ರ, ಕಾಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ವಿಶ್ವನಾಥ ಕೊಪ್ಪ ಇ –

ಪುಣ್ಚತ್ತಾರಿನಲ್ಲಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ 2ನೇ ನೂತನ  ಶಾಖೆ ಉದ್ಘಾಟನೆ Read More »

error: Content is protected !!
Scroll to Top