ದಕ್ಷಿಣ ಕನ್ನಡ

ಸೆ.3 ರಂದು ಬೆಳ್ತಂಗಡಿಯಲ್ಲಿ ನಡೆಯುವ ಸೌಜನ್ಯ ಕೊಲೆ ಪ್ರಕರಣ ಹೋರಾಟಕ್ಕೆ ಸಕಲ ಸಿದ್ಧತೆ | ಶ್ರೀ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ಭಾಗಿ

ಬೆಳ್ತಂಗಡಿ : ಸೌಜನ್ಯ ಅತ್ಯಾಚಾರ ಹತ್ಯಾ ಪ್ರಕರಣದ ಹೋರಾಟಕ್ಕೆ ಸಂಬಂಧಿಸಿದಂತೆ ಸೆ.3 ರಂದು ಭಾನುವಾರ ಬೆಳ್ತಂಗಡಿಯಲ್ಲಿ ನಡೆಸಲು ಉದ್ದೇಶಿಸಲಾಗಿರುವ ಬೃಹತ್ ಜನಸಮ್ಮೇಳನಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿದ್ದು ಒಕ್ಕಲಿಗ ಸಮಾಜದ ಮಂಗಳೂರಿನ ಕಾವೂರು ಮಠದ ಸ್ವಾಮೀಜಿ ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಬೆಳ್ತಂಗಡಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದ ಜನಪರ ಸಂಘಟನೆಗಳ ಮಹಾ ಸಭೆಗೆ ಭಾಗವಹಿಸಲಿದ್ದಾರೆ. ಜಗದ್ಗುರು ಆದಿಚುಂಚನಗಿರಿಯ ಶ್ರೀ ಶ್ರೀ ಡಾ. ನಿರ್ಮಲಾನಂದ ಸ್ವಾಮೀಜಿಯವರ ಸ್ಪಷ್ಟ ನಿರ್ದೇಶನದ ಮೇರೆಗೆ ಮಂಗಳೂರಿನ […]

ಸೆ.3 ರಂದು ಬೆಳ್ತಂಗಡಿಯಲ್ಲಿ ನಡೆಯುವ ಸೌಜನ್ಯ ಕೊಲೆ ಪ್ರಕರಣ ಹೋರಾಟಕ್ಕೆ ಸಕಲ ಸಿದ್ಧತೆ | ಶ್ರೀ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ಭಾಗಿ Read More »

ಕಾರ್ಮಿಕರಿಗೆ ಕಾರು ಡಿಕ್ಕಿ : ಒರ್ವ ಮೃತ್ಯು, ಮೂವರು ಗಂಭೀರ ಗಾಯ

ಸುಳ್ಯ : ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರು ಡಿಕ್ಕಿ ಹೊಡೆದ ಕಾರಣ ಒಬ್ಬ ಮೃತಪಟ್ಟು 3 ಮಂದಿ ಗಂಭೀರ ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಅಡ್ಕಾರಿನಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಗಂಭೀರ ಗಾಯಗೊಂಡ ಇಬ್ಬರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಒಬ್ಬರು ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಡ್ಕಾರಿನ ಹೊಟೇಲ್ ಒಂದರ ಮುಂಭಾಗದಲ್ಲಿ ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಹುಣಸೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರೊಂದು ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ. ಒಬ್ಬರು ಮೃತಪಟ್ಟು 3

ಕಾರ್ಮಿಕರಿಗೆ ಕಾರು ಡಿಕ್ಕಿ : ಒರ್ವ ಮೃತ್ಯು, ಮೂವರು ಗಂಭೀರ ಗಾಯ Read More »

ಖಾಸಗಿ ಬಸ್ ನಿರ್ವಾಹಕ ಬಸ್ಸಿನಿಂದ ಬಿದ್ದು ಮೃತ್ಯು

ಮಂಗಳೂರು: ಖಾಸಗಿ ಬಸ್ಸಿನ ಫುಟ್ ಬೋರ್ಡ್‍ ನಲ್ಲಿ ನಿಂತಿದ್ದ ಬಸ್ ನಿರ್ವಾಹಕರೊಬ್ಬರು ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಮಂಗಳೂರಿನ ನಂತೂರು ವೃತ್ತದ ಬಳಿ ನಡೆದಿದೆ. ಮೃತಪಟ್ಟ ನಿರ್ವಾಹಕರನ್ನು ಹೀರಯ್ಯ (23) ಎಂದು ಗುರುತಿಸಲಾಗಿದೆ. ಕಾಟಿಪಳ್ಳದಿಂದ ನಂತೂರು ವೃತ್ತವಾಗಿ ಮಂಗಳಾದೇವಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿನ ಮುಂಭಾಗದ ಫುಟ್ ಬೋರ್ಡ್‍ ನಲ್ಲಿ ನಿಂತಿದ್ದಾಗ ಆಯತಪ್ಪಿ ಕೆಳಗೆ ಬಿದ್ದಾಗ ಸಂಚಾರಿ ಪೊಲೀಸರು ಸಾರ್ವಜನಿಕರ ಸಹಕಾರದಿಂದ ಆಸ್ಪತ್ರೆಗೆ ದಾಖಲಿಸಿದರೂ ಆದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

ಖಾಸಗಿ ಬಸ್ ನಿರ್ವಾಹಕ ಬಸ್ಸಿನಿಂದ ಬಿದ್ದು ಮೃತ್ಯು Read More »

ಉರುಳಿಗೆ ಬಿದ್ದ ಚಿರತೆ ಮರಿ ಸಾವು | ಇಬ್ಬರ ವಿರುದ್ಧ ಪ್ರಕರಣ ದಾಖಲು

ಸುಳ್ಯ : ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿ ಒಂದೂವರೆ ವರ್ಷದ ಚಿರತೆ ಮರಿಯೊಂದು ಉರುಳಿಗೆ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಜಯರಾಮ ಪಡ್ಡಂಬೈಲು ಹಾಗೂ ಪೃಥ್ವಿ ಪಡ್ಡಂಬೈಲು ಎಂಬವರಿಗೆ ಸಂಬಂಧಿಸಿ ಉರುಳು ಪತ್ತೆಯಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಮಂಗಳವಾರ ಮಧ್ಯಾಹ್ನ ವೇಳೆ ಚಿರತೆ ಉರುಳಿಗೆ ಬಿದ್ದಿದ್ದು, ಅರಣ್ಯಾಧಿಕಾರಿಗಳಿಗೆ ಮಾಹಿತಿ ತಿಳಿದ ತಕ್ಷಣ ಪರಿಶೀಲನೆ ನಡೆಸಿದ್ದಾರೆ. ಆದಾಗಲೇ ಚಿರತೆ ಮೃತಪಟ್ಟಿರುವುದು ಗಮನಕ್ಕೆ ಬಂದಿದೆ.

ಉರುಳಿಗೆ ಬಿದ್ದ ಚಿರತೆ ಮರಿ ಸಾವು | ಇಬ್ಬರ ವಿರುದ್ಧ ಪ್ರಕರಣ ದಾಖಲು Read More »

ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರಿಗೆ  ಪ್ರತಿಷ್ಠಿತ  “ಡಾ. ಸರ್ವಪಲ್ಲಿ ರಾಧಾಕೃಷ್ಣನ್” ರಾಷ್ಟ್ರೀಯ ಪ್ರಶಸ್ತಿ-2023″

ಸುಳ್ಯ : ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರು ನಾಡಿನ ಸಮಾಚಾರ ಸೇವಾ ಸಂಘ ಗೋಕಾಕ, ಬೆಳಗಾವಿ  ಇವರು ಶಿಕ್ಷಕರ ದಿನಾಚರಣೆ ನಿಮಿತ್ಯ ಪ್ರತೀ ವರ್ಷ ಶಿಕ್ಷಕರ ಅತ್ಯುತ್ತಮ ಸಾಧನೆಗಾಗಿ ಕೊಡ ಮಾಡುವ ಪ್ರತಿಷ್ಠಿತ “ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ-2023” ಕ್ಕೆ ಆಯ್ಕೆಯಾಗಿದ್ದಾರೆ. ಶಿಕ್ಷಣ, ಸಾಹಿತ್ಯ, ಸಮಾಜ ಸೇವೆ, ಸಂಘಟನಾ ಕ್ಷೇತ್ರದ ಕಾರ್ಯಗಳನ್ನು ಗಮನಿಸಿ ಇವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದ್ದು,  ಸೆ. 24ರಂದು ಬೆಳಗಾವಿಯ ಕುಮಾರ ಗಂಧರ್ವ ಕಲಾಮಂದಿರದಲ್ಲಿ ನಡೆಯುವ

ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರಿಗೆ  ಪ್ರತಿಷ್ಠಿತ  “ಡಾ. ಸರ್ವಪಲ್ಲಿ ರಾಧಾಕೃಷ್ಣನ್” ರಾಷ್ಟ್ರೀಯ ಪ್ರಶಸ್ತಿ-2023″ Read More »

ರಿಕ್ಷಾ-ಕಾರು ಡಿಕ್ಕಿ : ರಿಕ್ಷಾ ಚಾಲಕನಿಗೆ ಗಂಭೀರ ಗಾಯ

ಬಂಟ್ವಾಳ: ರಿಕ್ಷಾ ಹಾಗೂ ಕಾರು ಡಿಕ್ಕಿ ಹೊಡೆದುಕೊಂಡು ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ಬಿ.ಸಿ.ರೋಡು ಸಮೀಪದ ಲಯನ್ಸ್ ಸೇವಾ ಮಂದಿರದ ಬಳಿ ನಡೆದಿದೆ. ರಿಕ್ಷಾ ಚಾಲಕ ಮಹಮ್ಮದ್ ಸಾದಿಕ್ ಗಂಭಿರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಅಮಿತಾ ಅವರಿಗೆ ಅಲ್ಪಸ್ವಲ್ಪ ಗಾಯಗಳಾಗಿವೆ. ಕಾರು ಚಾಲಕನ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಿಕ್ಷಾ-ಕಾರು ಡಿಕ್ಕಿ : ರಿಕ್ಷಾ ಚಾಲಕನಿಗೆ ಗಂಭೀರ ಗಾಯ Read More »

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನಲ್ಲಿ ಖಾಲಿ ಹುದ್ದೆಗಳು | ಅರ್ಜಿ  ಎಲ್ಲಿದೆ ? ಹೇಗೆ ಅರ್ಜಿ ಸಲ್ಲಿಸಬಹುದು ? ಕೊನೆಯ ದಿನಾಂಕದ ಕುರಿತು ಇಲ್ಲಿದೆ ಡಿಟೈಲ್ಸ್

ಪುತ್ತೂರು: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ ನಲ್ಲಿ ಖಾಲಿ ಇರುವ ಈ ಕೆಳಗಿನ ಹುದ್ದೆಗಳನ್ನು ನೇರ ನೇಮಕಾತಿಯಿಂದ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕಂಪ್ಯೂಟರ್ ಪ್ರೋಗ್ರಾಮರ್ 2 ಹಾಗೂ ದ್ವಿತೀಯ ದರ್ಜೆ ಗುಮಾಸ್ತರು 123 ಹೀಗೆ ಒಟ್ಟು 124 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದ್ವಿತೀಯ ದರ್ಜೆ ಗುಮಾಸ್ತರ ಹುದ್ದೆಗೆ ನೀಡಲಾಗಿರುವ ಮೀಸಲಾತಿ ವಿವರ ಈ ಕೆಳಗಿನಂತಿದೆ. ಪರಿಶಿಷ್ಟ ಜಾತಿ ಒಟ್ಟು 18 ಹುದ್ದೆಗಳಿದ್ದು, ಮಹಿಳೆಯರಿಗೆ 6, ಮಾಜಿ ಸೈನಿಕರು 1, ಪರಿಶಿಷ್ಟ

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನಲ್ಲಿ ಖಾಲಿ ಹುದ್ದೆಗಳು | ಅರ್ಜಿ  ಎಲ್ಲಿದೆ ? ಹೇಗೆ ಅರ್ಜಿ ಸಲ್ಲಿಸಬಹುದು ? ಕೊನೆಯ ದಿನಾಂಕದ ಕುರಿತು ಇಲ್ಲಿದೆ ಡಿಟೈಲ್ಸ್ Read More »

ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಅಣ್ಣಪ್ಪ ಬೆಟ್ಟದಲ್ಲಿ ನಡೆದದ್ದು ಕೇವಲ ಪ್ರಾರ್ಥನೆ | ಇಂದು ಅಣ್ಣಪ್ಪ ಬೆಟ್ಟದಲ್ಲಿ ನಡೆದದ್ದು ಪ್ರಮಾಣ ಎಂದಾದರೆ  ಪ್ರಮಾಣ ಹಾಗೂ ಪ್ರಾರ್ಥನೆಗೆ ವ್ಯತ್ಯಾಸವಿಲ್ಲವೆ ? | ಯಾವುದೇ ಕ್ಷೇತ್ರದಲ್ಲಿ ಪ್ರಮಾಣ ಮಾಡುವುದಾದರೂ ಆ ಕ್ಷೇತ್ರದ ಮೊಕ್ತೇಸರ, ಧರ್ಮಾಧಿಕಾರಿ, ಅರ್ಚಕರ ಸಮ್ಮುಖದಲ್ಲಿ ಆಗುವುದು ನಿಜವಾದ ಪ್ರಮಾಣ  | ಅದನ್ನು ಹೊರತುಪಡಿಸಿ ಬೀದಿಯಲ್ಲಿ ಬೇಕಾಬಿಟ್ಟಿಯಾಗಿ ಪ್ರಮಾಣ ಮಾಡಲು ಸಾಧ್ಯವಿಲ್ಲ

ಧರ್ಮಸ್ಥಳ : ಹನ್ನೊಂದು ವರ್ಷಗಳ ಹಿಂದೆ ಬೆಳ್ತಂಗಡಿಯಲ್ಲಿ ನಡೆದ ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗಾಗಿ ಪ್ರಕರಣದ ಮರು ತನಿಖೆಗೆ  ಆಗ್ರಹಿಸಿ ಭಾನುವಾರ ವಿಶ್ವಹಿಂದೂ ಪರಿಷತ್ ಬಜರಂಗದಳದ ನೇತೃತ್ವದಲ್ಲಿ ನಡೆದ ಪಾದಯತ್ರೆ ಬಳಿಕ ಧರ್ಮಸ್ಥಳದ ಅಣ್ಣಪ್ಪ ಬೆಟ್ಟದ ಮಂಭಾಗ ಪ್ರಮಾಣ ಮಾಡದೇ ಕೇವಲ ಪ್ರಾರ್ಥನೆ ಮಾತ್ರ ನಡೆಯಿತು. ಪ್ರಕರಣದಲ್ಲಿ ಸೌಜನ್ಯ ತಾಯಿ ಕುಸುಮಾವತಿ ಅವರು ಮೂರು ಹೆಸರುಗಳನ್ನು ಬಹಿರಂಗಪಡಿಸಿದ್ದು, ಧೀರಜ್ ಕೆಲ್ಲ, ಉದಯ್ ಜೈನ್ ಹಾಗೂ ಧೀರಜ್ ಜೈನ್ ಎಂದು ಹೇಳಿದ್ದರು. ಈ ನಿಟ್ಟಿನಲ್ಲಿ ಇಂದು ಅಣ್ಣಪ್ಪ

ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಅಣ್ಣಪ್ಪ ಬೆಟ್ಟದಲ್ಲಿ ನಡೆದದ್ದು ಕೇವಲ ಪ್ರಾರ್ಥನೆ | ಇಂದು ಅಣ್ಣಪ್ಪ ಬೆಟ್ಟದಲ್ಲಿ ನಡೆದದ್ದು ಪ್ರಮಾಣ ಎಂದಾದರೆ  ಪ್ರಮಾಣ ಹಾಗೂ ಪ್ರಾರ್ಥನೆಗೆ ವ್ಯತ್ಯಾಸವಿಲ್ಲವೆ ? | ಯಾವುದೇ ಕ್ಷೇತ್ರದಲ್ಲಿ ಪ್ರಮಾಣ ಮಾಡುವುದಾದರೂ ಆ ಕ್ಷೇತ್ರದ ಮೊಕ್ತೇಸರ, ಧರ್ಮಾಧಿಕಾರಿ, ಅರ್ಚಕರ ಸಮ್ಮುಖದಲ್ಲಿ ಆಗುವುದು ನಿಜವಾದ ಪ್ರಮಾಣ  | ಅದನ್ನು ಹೊರತುಪಡಿಸಿ ಬೀದಿಯಲ್ಲಿ ಬೇಕಾಬಿಟ್ಟಿಯಾಗಿ ಪ್ರಮಾಣ ಮಾಡಲು ಸಾಧ್ಯವಿಲ್ಲ Read More »

ವಿಹಿಂಪ, ಬಜರಂಗದಳದ ನೇತೃತ್ವದಲ್ಲಿ ಪಾದಯಾತ್ರೆ | ಸೌಜನ್ಯ ಕೊಲೆ ಆರೋಪಿಗಳು ನಾವಲ್ಲ ಎಂದು ಅಣ್ಣ ಬೆಟ್ಟದಲ್ಲಿ ಧೀರಜ್ ಜೈನ್, ಉದಯ್‍ ಜೈನ್, ಧೀರಜ್ ಕೆಲ್ಲ ಪ್ರಮಾಣ| ನೈಜ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಪ್ರಾರ್ಥಿಸಿದ ಸೌಜನ್ಯ ತಾಯಿ ಕುಸುಮಾವತಿ

ಧರ್ಮಸ್ಥಳ : ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ಈಗಾಗಲೇ ಧರ್ಮಸ್ಥಳ ಅಣ್ಣಪ್ಪ ಸ್ವಾಮಿ ಬೆಟ್ಟದ ಬಳಿ ತಲುಪಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ನೇತ್ರಾವತಿ ಸ್ನಾನಘಟ್ಟದಿಂದ ಧರ್ಮಸ್ಥಳದಲ್ಲಿರುವ ಅಣ್ಣಪ್ಪ ಸ್ವಾಮಿ ಬೆಟ್ಟದ ವರೆಗೆ ನಡೆದ ಪಾದಯಾತ್ರೆಯಲ್ಲಿ ಸೌಜನ್ಯಳ ತಾಯಿ ಕುಸುಮಾವತಿ ಜತೆ ವಿಹಿಂಪ, ಬಜರಂಗದಳ ಕಾರ್ಯಕರ್ತರು ಪಾಲ್ಗೊಂಡಿದ್ದರು. ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು, ಜಿಲ್ಲಾ ಎಸ್‍ ಪಿ ರಿಷ್ಯಂತ್ ಅವರೇ ಬಂದೋಬಸ್ತಿನ ಉಸ್ತುವಾರಿ ವಹಿಸಿದ್ದಾರೆ. ಧರ್ಮಸ್ಥಳ ಸುತ್ತಮುತ್ತಲಿನ ಜನ ಬೃಹತ್ ಸಂಖ್ಯೆಯಲ್ಲಿ

ವಿಹಿಂಪ, ಬಜರಂಗದಳದ ನೇತೃತ್ವದಲ್ಲಿ ಪಾದಯಾತ್ರೆ | ಸೌಜನ್ಯ ಕೊಲೆ ಆರೋಪಿಗಳು ನಾವಲ್ಲ ಎಂದು ಅಣ್ಣ ಬೆಟ್ಟದಲ್ಲಿ ಧೀರಜ್ ಜೈನ್, ಉದಯ್‍ ಜೈನ್, ಧೀರಜ್ ಕೆಲ್ಲ ಪ್ರಮಾಣ| ನೈಜ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಪ್ರಾರ್ಥಿಸಿದ ಸೌಜನ್ಯ ತಾಯಿ ಕುಸುಮಾವತಿ Read More »

ಬೆಳ್ತಂಗಡಿಯಲ್ಲಿ ಸೌಜನ್ಯ ಕೊಲೆ ಆರೋಪಿಗಳ ಪತ್ತೆಗೆ ಮರು ತನಿಖೆಗೆ ಆಗ್ರಹಿಸಿ ಪ್ರತಿಭಟನೆ | ಬೃಹತ್ ಸಂಖ್ಯೆಯಲ್ಲಿ ಸೇರಿದ ಜನ | ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವ

ಬೆಳ್ತಂಗಡಿ : ಹನ್ನೊಂದು ವರ್ಷಗಳ ಹಿಂದೆ ಬೆಳ್ತಂಗಡಿಯಲ್ಲಿ ನಡೆದ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಬೆಳ್ತಂಗಡಿ ತಾಲೂಕು ಕಚೇರಿ ಎದುರು ಆ.27 ಭಾನುವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಬೃಹತ್ ಸಂಖ್ಯೆಯಲ್ಲಿ ಜನ ಪಾಲ್ಗೊಳ್ಳುತ್ತಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ದ.ಕ. ಹಾಗೂ ಉಡುಪಿ ಜಿಲ್ಲಾ ಶಾಸಕರಿಂದ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆಯಲ್ಲಿ ಬೃಹತ್ ಸಂಖ್ಯೆಯಲ್ಲಿ ಜನ ಭಾಗಿಯಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಸೌಜನ್ಯ ಗೆ ನ್ಯಾಯ ದೊರಕಬೇಕು ಎಂಬ ನಿಟ್ಟಿನಲ್ಲಿ ಬಜರಂಗದಳ, ವಿಶ್ವಹಿಂದೂ

ಬೆಳ್ತಂಗಡಿಯಲ್ಲಿ ಸೌಜನ್ಯ ಕೊಲೆ ಆರೋಪಿಗಳ ಪತ್ತೆಗೆ ಮರು ತನಿಖೆಗೆ ಆಗ್ರಹಿಸಿ ಪ್ರತಿಭಟನೆ | ಬೃಹತ್ ಸಂಖ್ಯೆಯಲ್ಲಿ ಸೇರಿದ ಜನ | ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವ Read More »

error: Content is protected !!
Scroll to Top