ಸೆ.3 ರಂದು ಬೆಳ್ತಂಗಡಿಯಲ್ಲಿ ನಡೆಯುವ ಸೌಜನ್ಯ ಕೊಲೆ ಪ್ರಕರಣ ಹೋರಾಟಕ್ಕೆ ಸಕಲ ಸಿದ್ಧತೆ | ಶ್ರೀ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ಭಾಗಿ
ಬೆಳ್ತಂಗಡಿ : ಸೌಜನ್ಯ ಅತ್ಯಾಚಾರ ಹತ್ಯಾ ಪ್ರಕರಣದ ಹೋರಾಟಕ್ಕೆ ಸಂಬಂಧಿಸಿದಂತೆ ಸೆ.3 ರಂದು ಭಾನುವಾರ ಬೆಳ್ತಂಗಡಿಯಲ್ಲಿ ನಡೆಸಲು ಉದ್ದೇಶಿಸಲಾಗಿರುವ ಬೃಹತ್ ಜನಸಮ್ಮೇಳನಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿದ್ದು ಒಕ್ಕಲಿಗ ಸಮಾಜದ ಮಂಗಳೂರಿನ ಕಾವೂರು ಮಠದ ಸ್ವಾಮೀಜಿ ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಬೆಳ್ತಂಗಡಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದ ಜನಪರ ಸಂಘಟನೆಗಳ ಮಹಾ ಸಭೆಗೆ ಭಾಗವಹಿಸಲಿದ್ದಾರೆ. ಜಗದ್ಗುರು ಆದಿಚುಂಚನಗಿರಿಯ ಶ್ರೀ ಶ್ರೀ ಡಾ. ನಿರ್ಮಲಾನಂದ ಸ್ವಾಮೀಜಿಯವರ ಸ್ಪಷ್ಟ ನಿರ್ದೇಶನದ ಮೇರೆಗೆ ಮಂಗಳೂರಿನ […]










