ದಕ್ಷಿಣ ಕನ್ನಡ

ಯುವಕ-ಯುವತಿ ನಾಪತ್ತೆ ! ಹುಡುಕಿಕೊಡಲು ಹೆತ್ತವರಿಂದ ಮನವಿ

ಬಂಟ್ವಾಳ : ಒಂದೇ ವಠಾರದ ಯುವಕ ಮತ್ತು ಯುವತಿ ನಾಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರು ಗ್ರಾಮದ ಉದ್ದೊಟ್ಟು ಎಂಬಲ್ಲಿ ನಡೆದಿದೆ. ಸಜೀಪ ಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿ ಅಬ್ದುಲ್ ಹಮೀದ್ ಎಂಬವರ ಪುತ್ರಿ ಆಯಿಸತ್ ರಸ್ನಾ (18) ಹಾಗೂ ಹೈದರ್ ಎಂಬವರ ಪುತ್ರ ಮಹಮ್ಮದ್ ಸಿನಾನ್ (23) ಕಾಣೆಯಾದವರು. ಇಬ್ಬರೂ ಅಕ್ಕಪಕ್ಕದ ಮನೆಯವರು. ದೇರಳಕಟ್ಟೆಯ ನಡುಪದವು ಪಿ.ಎ.ಕಾಲೇಜಿನಲ್ಲಿ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದ ಆಯಿಸತ್ ರಸ್ಮಾ ಒಂದು ವಾರಗಳ ಕಾಲ ರಜೆಯಿದ್ದ ಹಿನ್ನಲೆಯಲ್ಲಿ ಮನೆಯಲ್ಲಿದ್ದಳು. […]

ಯುವಕ-ಯುವತಿ ನಾಪತ್ತೆ ! ಹುಡುಕಿಕೊಡಲು ಹೆತ್ತವರಿಂದ ಮನವಿ Read More »

ವಂಚನೆ; ಸುಬ್ರಹ್ಮಣ್ಯ ಮೂಲದ ಟಿ.ಎಸ್ ಶ್ರೀನಾಥ್’ಗೆ ಶಿಕ್ಷೆ

ಸುಬ್ರಹ್ಮಣ್ಯ; ಚೆಕ್ ಬೌನ್ಸ್ ಪ್ರಕರಣದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಮೂಲದ ಟಿ.ಎಸ್ ಶ್ರೀನಾಥ ಎಂಬವರ ಆರೋಪವನ್ನು ಸಾಬೀತು ಮಾಡಿರುವ ಚಿಕ್ಕಮಗಳೂರು ಚಿಕ್ಕಮಗಳೂರು ಜೆಎಂಎಸಿ ನ್ಯಾಯಾಲಯ, ನಾಲ್ಕು ತಿಂಗಳ ಶಿಕ್ಷೆ ತಪ್ಪಿದಲ್ಲಿ 5 ಲಕ್ಷ 18 ಸಾವಿರ 100 ರೂ. ದಂಡ ವಿಧಿಸುವಂತೆ ಆದೇಶಿಸಿದೆ. ವ್ಯವಹಾರ ಸಂಬಂಧ ದುಡ್ಡಿಗೆ ಪ್ರತಿಯಾಗಿ ಶ್ರೀನಾಥ್ ಅವರು ಚೆಕ್ ನೀಡಿದ್ದರು. ಖಾತೆ ಬರಿದಾಗಿದ್ದು, ಚೆಕ್ ಬೌನ್ಸ್ ಆಗಿತ್ತು. ಚೆಕ್ ಪಡಕೊಂಡವರು ನ್ಯಾಯಾಲಯದ ಮೆಟ್ಟಿಲು ಹತ್ತಿದ್ದು, ಚಿಕ್ಕಮಗಳೂರು ಸಿವಿಲ್ ಜಡ್ಜ್ ಮತ್ತು ಐಎಂಎಪ್ ಸಿ ಕೋರ್ಟ್

ವಂಚನೆ; ಸುಬ್ರಹ್ಮಣ್ಯ ಮೂಲದ ಟಿ.ಎಸ್ ಶ್ರೀನಾಥ್’ಗೆ ಶಿಕ್ಷೆ Read More »

ಕಡಬ ಒಕ್ಕಲಿಗ ಸೇವಾ ಸಂಘದ ಸಮುದಾಯ ಭವನ ಶಿಲಾನ್ಯಾಸದ ಹಿನ್ನೆಲೆಯಲ್ಲಿ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಭೇಟಿ

ಕಡಬ: ಇಲ್ಲಿನ ಒಕ್ಕಲಿಗ ಸೇವಾ ಸಂಘದ ಪದಗ್ರಹಣ ಹಾಗೂ ಸಮುದಾಯ ಭವನದ ಶಿಲಾನ್ಯಾಸ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರನ್ನು ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಹಾಸ್ಪಿಟಲ್ ಮತ್ತು ರೀಸರ್ಚ್ ಸೆಂಟರಿನಲ್ಲಿ ಭೇಟಿ ಮಾಡಲಾಯಿತು. ಈ ಸಂದರ್ಭ ಕಾರ್ಯಕ್ರಮದ ರೂಪುರೇಷೆ, ತಯಾರಿ ಬಗ್ಗೆ ಮಾಹಿತಿ ಪಡೆದುಕೊಂಡ ಮಹಾಸ್ವಾಮೀಜಿ, ಸಲಹೆ, ಮಾರ್ಗದರ್ಶನ ನೀಡಿದರು. ಬಳಿಕ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ವಿಪಕ್ಷ ನಾಯಕ ಆರ್. ಅಶೋಕ್,

ಕಡಬ ಒಕ್ಕಲಿಗ ಸೇವಾ ಸಂಘದ ಸಮುದಾಯ ಭವನ ಶಿಲಾನ್ಯಾಸದ ಹಿನ್ನೆಲೆಯಲ್ಲಿ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಭೇಟಿ Read More »

ಕೆದಿಲ ವಿದ್ಯಾರ್ಥಿಗಳ ಕೈಯಲ್ಲಿ ಕೊಡಲಿ ರೂಪದ ಪೆನ್ಸಿಲ್: ಕ್ರಮಕ್ಕೆ ಒತ್ತಾಯ!

ಕೆದಿಲ: ಪ್ರಾಥಮಿಕ ಶಾಲಾ ಮಕ್ಕಳ ಕೈಯಲ್ಲಿ ಕೊಡಲಿ ರೂಪದ ಪೆನ್ಸಿಲ್ ಪತ್ತೆಯಾಗಿದ್ದು, ಮಾರಾಟ ಮಾಡುವ ವ್ಯಕ್ತಿಗಳ ವಿರುದ್ದ ಕ್ರಮಕೈಗೊಳ್ಳುವಂತೆ ಪೋಷಕರು ಒತ್ತಾಯ ಮಾಡಿದ ಘಟನೆ ಕೆದಿಲ ಗ್ರಾಮದ ಗಡಿಯಾರ ಎಂಬಲ್ಲಿ ನಡೆದಿದೆ. ಗಡಿಯಾರ ಸರಕಾರಿ ಪ್ರಾಥಮಿಕ ಶಾಲೆಯ ಮಕ್ಕಳ ಕೈಯಲ್ಲಿ ಈ ಪೆನ್ಸಿಲ್ ಕಂಡು ಬಂದಿದ್ದು, ಪೋಷಕರು ಈ ಪೆನ್ಸಿಲ್ ನ ವಿರುದ್ದ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಸರಕಾರಿ ಶಾಲೆಗಳಿಗೆ ಭೇಟಿ ನೀಡುವ ಈ ಮಾರಾಟಗಾರರು ಮಕ್ಕಳಿಗೆ ಬೇಕಾಗುವ ಪೆನ್ಸಿಲ್ ನ ಆರ್ಡರ್ ಪಡೆದುಕೊಂಡು ಹೋಗುತ್ತಾರೆ. ಅದರ ಬೆಲೆಯನ್ನು

ಕೆದಿಲ ವಿದ್ಯಾರ್ಥಿಗಳ ಕೈಯಲ್ಲಿ ಕೊಡಲಿ ರೂಪದ ಪೆನ್ಸಿಲ್: ಕ್ರಮಕ್ಕೆ ಒತ್ತಾಯ! Read More »

ವಿದ್ಯುತ್ ತಂತಿ ಸ್ಪರ್ಶಿಸಿದ ಅಲ್ಯೂಮಿನಿಯಂ ಏಣಿ: ಬಾಲಕೃಷ್ಣ ಶೆಟ್ಟಿ ಮೃತ್ಯು

ಬೆಳ್ತಂಗಡಿ: ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕರೋರ್ವರು ದಾರುಣವಾಗಿ ಮೃತಪಟ್ಟ ಘಟನೆ ಧರ್ಮಸ್ಥಳ ಸಮೀಪದ ಮಲ್ಲರ್ಮಾಡಿ ಎಂಬಲ್ಲಿ ನಡೆದಿದೆ. ಮೃತರನ್ನು ಮಲ್ಲರ್ಮಾಡಿ ನಿವಾಸಿ ಬಾಲಕೃಷ್ಣ ಶೆಟ್ಟಿ (49 ವ) ಎಂದು ಗುರುತಿಸಲಾಗಿದೆ. ಸೊಪ್ಪು ತರಲೆಂದು ಶುಕ್ರವಾರ ಬೆಳಿಗ್ಗೆ ಸ್ಥಳೀಯ ನಿವಾಸಿ ಬೊಮ್ಮಣ್ಣ ಗೌಡ ಅವರ ತೋಟಕ್ಕೆ ಹೋಗಿದ್ದರು. ಈ ಸಂದರ್ಭ ಘಟನೆ ನಡೆದಿದೆ ಎಂದು ಹೇಳಲಾಗಿದೆ. ತೋಟದ ನಡುವಿನಲ್ಲಿ ಹಾದುಹೋಗಿದ್ದ ವಿದ್ಯುತ್ ಲೈನ್ ಗೆ ಅಲ್ಯೂಮಿನಿಯಂ ಏಣಿ ಸ್ಪರ್ಶಿಸಿತ್ತು. ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದ ಬಾಲಕೃಷ್ಣ

ವಿದ್ಯುತ್ ತಂತಿ ಸ್ಪರ್ಶಿಸಿದ ಅಲ್ಯೂಮಿನಿಯಂ ಏಣಿ: ಬಾಲಕೃಷ್ಣ ಶೆಟ್ಟಿ ಮೃತ್ಯು Read More »

ಕಡಬ: ನ. 26ರಂದು ವಿಜ್ಞಾಪನ ಕರಪತ್ರ, ಗೌಡ ಸಮುದಾಯದ ಜನಸಂಖ್ಯಾ ಸಮೀಕ್ಷೆ, ದೇಣಿಗೆ ಸಂಗ್ರಹಕ್ಕೆ ಚಾಲನೆ

ಕಡಬ: ಇಲ್ಲಿನ ಒಕ್ಕಲಿಗ ಗೌಡ ಸೇವಾ ಸಂಘದ ಪದಗ್ರಹಣ, ಸಮುದಾಯ ಭವನ ಶಿಲಾನ್ಯಾಸ, ಸ್ಪಂದನ ಸಮುದಾಯ ಸಹಕಾರ ಸಂಘದ ಉದ್ಘಾಟನೆಗೆ ಪೂರ್ವಭಾವಿಯಾಗಿ ವಿಜ್ಞಾಪನ ಕರಪತ್ರ ಮತ್ತು ಸಮುದಾಯದ ಜನಸಂಖ್ಯಾ ಸಮೀಕ್ಷೆ, ಭವನ ನಿರ್ಮಾಣ ಸಹಾಯಾರ್ಥ ದೇಣಿಗೆ ಸಂಗ್ರಹಕ್ಕೆ ನ. 26ರ ಭಾನುವಾರ ಬೆಳಿಗ್ಗೆ 11ಕ್ಕೆ ಒಕ್ಕಲಿಗ ಗೌಡ ಸೇವಾ ಸಂಘದ ಸಭಾಂಗಣದಲ್ಲಿ ಚಾಲನೆ ಸಿಗಲಿದೆ. ಶ್ರೀ ಆದಿಚುಂಚನಗಿರಿ ಕಾವೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರು ಚಾಲನೆ ನೀಡಲಿದ್ದಾರೆ. ಡಿ. 26ರಂದು ಕಡಬ ಒಕ್ಕಲಿಗ ಗೌಡ

ಕಡಬ: ನ. 26ರಂದು ವಿಜ್ಞಾಪನ ಕರಪತ್ರ, ಗೌಡ ಸಮುದಾಯದ ಜನಸಂಖ್ಯಾ ಸಮೀಕ್ಷೆ, ದೇಣಿಗೆ ಸಂಗ್ರಹಕ್ಕೆ ಚಾಲನೆ Read More »

ಒಕ್ಕಲಿಗ ಗೌಡ ಸಮುದಾಯ ಭವನ ಶಿಲಾನ್ಯಾಸದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗಿ ಖಚಿತ

ಕಡಬ: ಇಲ್ಲಿನ ಒಕ್ಕಲಿಗ ಗೌಡ ಸಮುದಾಯ ಭವನದ ಶಿಲಾನ್ಯಾಸ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸುವುದು ಖಚಿತವಾಗಿದೆ. ಕಡಬ ಒಕ್ಕಲಿಗ ಗೌಡ ಸಂಘದ ನಿಯೋಗ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ, ಡಿ. 26ರಂದು ನಡೆಯುವ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಗಮಿಸುವಂತೆ ವಿನಂತಿಸಿಕೊಂಡರು. ಸಕಾರಾತ್ಮಕವಾಗಿ ಸ್ಪಂದಿಸಿರುವ ಡಿ.ಕೆ. ಶಿವಕುಮಾರ್ ಅವರು, ಆಮಂತ್ರಣದಲ್ಲಿ ತನ್ನ ಹೆಸರು ಹಾಕಲು ಒಪ್ಪಿಕೊಂಡಿದ್ದಾರೆ. ಈ ಸಂದರ್ಭ ನಿಯೋಗದ ಜೊತೆ ಸುದೀರ್ಘ ಮಾತುಕತೆ ನಡೆಸಿರುವ ಅವರು, ಸಂಘದ ಕಾರ್ಯಚಟುವಟಿಕೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ

ಒಕ್ಕಲಿಗ ಗೌಡ ಸಮುದಾಯ ಭವನ ಶಿಲಾನ್ಯಾಸದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗಿ ಖಚಿತ Read More »

ಹರೇಕಳ ಹಾಜಬ್ಬ ಅವರಿಗೆ ಏರ್ ಇಂಡಿಯ ಎಕ್ಸ್ ಪ್ರೆಸ್ ನಲ್ಲಿ ಗೌರವ | ಇಲ್ಲಿದೆ ವೀಡಿಯೋ

ಮಂಗಳೂರು: ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದ ಸಿಬ್ಬಂದಿ ಅಭಿನಂದಿಸಿ ಗೌರವಿಸಿದರು. ಹಿದಾಯ ಫೌಂಡೇಶನ್ ಜುಬೈಲ್ ಘಟಕದ ವತಿಯಿಂದ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಂಗಳೂರಿನಿಂದ ದಮಾಮ್’ಗೆ ಹರೇಕಳ ಹಾಜಬ್ಬ ಅವರು ತೆರಳುತ್ತಿದ್ದರು. ವಿಮಾನದಲ್ಲಿ ಹರೇಕಳ ಹಾಜಬ್ಬ ಅವರನ್ನು ಗುರುತಿಸಿದ ಸಿಬ್ಬಂದಿ, ಕ್ಯಾಪ್ಟನ್ ಗಮನಕ್ಕೆ ತಂದರು. ಕ್ಯಾಪ್ಟನ್ ಅವರು ಹರೇಕಳ ಹಾಜಬ್ಬ ಅವರನ್ನು ಪರಿಚಯಿಸುತ್ತಾ, “ಶಿಕ್ಷಣ ರಂಗದಲ್ಲಿ ಅಪೂರ್ವ ಸೇವೆ ಸಲ್ಲಿಸಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ನಮ್ಮ ವಿಮಾನದಲ್ಲಿ

ಹರೇಕಳ ಹಾಜಬ್ಬ ಅವರಿಗೆ ಏರ್ ಇಂಡಿಯ ಎಕ್ಸ್ ಪ್ರೆಸ್ ನಲ್ಲಿ ಗೌರವ | ಇಲ್ಲಿದೆ ವೀಡಿಯೋ Read More »

ದೇಶ ಸೇವೆಗಾಗಿ ಪ್ರಾಣತೆತ್ತ MRPL ನಿವೃತ್ತ ಎಂ.ಡಿ.ಯ ಸುಪುತ್ರ!

ಮಂಗಳೂರು: ಜಮ್ಮು – ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಉಗ್ರರ ಜತೆಗಿನ ಗುಂಡಿನ ಚಕಮಕಿಯಲ್ಲಿ ಸೇನೆಯ ಇಬ್ಬರು ಕ್ಯಾಪ್ಟನ್‌ಗಳು, ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಮೇಜರ್‌ ಮತ್ತು ಯೋಧ ಗಾಯಗೊಂಡಿದ್ದು, ಅವರನ್ನು ಉಧಂಪುರದ ಕಮಾಂಡ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರಲ್ಲಿ ಓರ್ವರಾದ ಕ್ಯಾ. ಎಂ.ವಿ. ಪ್ರಾಂಜಲ್ (29) ಅವರು ಎಂ.ಆರ್.ಪಿ.ಎಲ್.ನ ನಿವೃತ್ತ ಎಂ.ಡಿ. ಎಂ. ವೆಂಕಟೇಶ್ ಅವರ ಏಕೈಕ ಪುತ್ರ. ಪ್ರಾಂಜಲ್‌ ಎಂ.ವಿ. ಅವರು ಎಸೆಸೆಲ್ಸಿವರೆಗೆ ಎಂಆರ್‌ಪಿಎಲ್‌ ಸಮೀಪವೇ ಇರುವ ಡೆಲ್ಲಿ ಪಬ್ಲಿಕ್‌ ಸ್ಕೂಲ್‌ನಲ್ಲಿ ವಿದ್ಯಾಭ್ಯಾಸ ಮಾಡಿದ್ದರು. ಬಳಿಕ ನ್ಯಾಶನಲ್‌ ಡಿಫೆನ್ಸ್‌

ದೇಶ ಸೇವೆಗಾಗಿ ಪ್ರಾಣತೆತ್ತ MRPL ನಿವೃತ್ತ ಎಂ.ಡಿ.ಯ ಸುಪುತ್ರ! Read More »

ಲಾಡ್ಜ್ ರೂಮ್ ನಲ್ಲಿ ಬೆಂಕಿ, ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿ ಮೃತದೇಹ!!

ಮಂಗಳೂರು: ಇಲ್ಲಿನ ಲಾಡ್ಜ್ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವ್ಯಕ್ತಿಯೋರ್ವರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ. ಮೃತಪಟ್ಟವರನ್ನು ಯಶ್ರಾಜ್ ಎಸ್.‌ ಸುವರ್ಣ (43) ಎಂದು ಗುರುತಿಸಲಾಗಿದೆ. ಯಶ್ರಾಜ್ ಅವರು ಲಾಡ್ಜ್ ರೂಂನಲ್ಲಿ ಮಲಗಿದ್ದು, ಬಾಗಿಲು ತೆರೆದು ಒಳಪ್ರವೇಶಿಸಿದಾಗ ರೂಂ ಪೂರ್ತಿ ಬೆಂಕಿ ಆವರಿಸಿಕೊಂಡಿತ್ತು ಎನ್ನಲಾಗಿದೆ. ಬೆಂದೂರ್ ವೆಲ್ ಸಮೀಪದ ಲಾಡ್ಜಿನಲ್ಲಿ ರಾತ್ರಿ 12.35ರ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದೆ. ಪಾಂಡೇಶ್ವರ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ಶಮನಗೊಳಿಸಿದ್ದಾರೆ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಲಾಡ್ಜ್ ರೂಮ್ ನಲ್ಲಿ ಬೆಂಕಿ, ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿ ಮೃತದೇಹ!! Read More »

error: Content is protected !!
Scroll to Top