ದಕ್ಷಿಣ ಕನ್ನಡ

ಸುಳ್ಯ ಎಂ.ಎಸ್. ರಾಮಕೃಷ್ಣ ಕೊಲೆ ಪ್ರಕರಣದ ತೀರ್ಪು ಪ್ರಕಟ | ಡಾ. ರೇಣುಕಾ ಪ್ರಸಾದ್ ಸಹಿತ ಐವರಿಗೆ ಜೀವಾವಧಿ ಶಿಕ್ಷೆ

ಮಂಗಳೂರು: ಸುಳ್ಯದ ಕೆವಿಜಿ ಪಾಲಿಟೆಕ್ನಿಟ್ ಪ್ರಾಂಶುಪಾಲರಾಗಿದ್ದ ಎಂ.ಎಸ್. ರಾಮಕೃಷ್ಣ ಅವರ ಕೊಲೆ ಪ್ರಕರಣದಲ್ಲಿ ಕುರುಂಜಿ ವೆಂಕಟರಮಣ ಗೌಡರ ಪುತ್ರ ಡಾ| ರೇಣುಕಾ ಪ್ರಸಾದ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಹೈಕೋರ್ಟ್ ಆದೇಶಿಸಿದೆ. ಮಂಗಳೂರಿನ ಜಿಲ್ಲಾ ನ್ಯಾಯಾಲಯದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಹೈ ಕೋರ್ಟ್ ನ್ಯಾಯಧೀಶರಾದ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ಬಸವರಾಜ ಅವರನ್ನೊಳಗೊಂಡ ವಿಭಾಗೀಯ ಪೀಠ ಶಿಕ್ಷೆ ಪ್ರಮಾಣ ಪ್ರಕಟ ಮಾಡಿದೆ. ಕೆಲ ದಿನಗಳ ಹಿಂದೆ ರೇಣುಕಾ ಪ್ರಸಾದ್ ಸೇರಿ ಆರು ಮಂದಿ ದೋಷಿಗಳೆಂದು ಹೈಕೋರ್ಟ್ ತೀರ್ಪು […]

ಸುಳ್ಯ ಎಂ.ಎಸ್. ರಾಮಕೃಷ್ಣ ಕೊಲೆ ಪ್ರಕರಣದ ತೀರ್ಪು ಪ್ರಕಟ | ಡಾ. ರೇಣುಕಾ ಪ್ರಸಾದ್ ಸಹಿತ ಐವರಿಗೆ ಜೀವಾವಧಿ ಶಿಕ್ಷೆ Read More »

ಸಾಕುಪ್ರಾಣಿಗಳ ಬಂಧನ, ಮಾಲಕರಿಗೆ ಶಿಕ್ಷೆ: ಎಚ್ಚರಿಕೆ! | ಸಾರ್ವಜನಿಕ ಸ್ಥಳದಲ್ಲಿ ಸಾಕುಪ್ರಾಣಿ ಬಿಟ್ಟರೆ ಶಿಕ್ಷೆ ಗ್ಯಾರೆಂಟಿ!!

ಕಡಬ: ಸಾಕುಪ್ರಾಣಿಗಳನ್ನು ಸಾರ್ವಜನಿಕ ಸ್ಥಳದಲ್ಲಿ ಬಿಟ್ಟಿದ್ದೇ ಆದರೆ, ಆ ಸಾಕುಪ್ರಾಣಿಗಳನ್ನು ಬಂಧಿಸಲಾಗುವುದು. ಮಾತ್ರವಲ್ಲ, ಅದರ ಮಾಲಕರಿಗೆ ದಂಡ ವಿಧಿಸಲಾಗುವುದು. ಹೀಗೆಂದು ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಫಕೀರ ಮೂಲ್ಯ ಅವರು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಸಾಕುಪ್ರಾಣಿಗಳನ್ನು ಸಾರ್ವಜನಿಕ ಪ್ರದೇಶದಲ್ಲಿ ಬಿಡುವುದರಿಂದ ನೂರಾರು ಸಮಸ್ಯೆಗಳು ಕಾಣಿಸಿಕೊಂಡಿದೆ. ಸಾರ್ವಜನಿಕರಿಗೆ ತೊಂದರೆ ಆಗುವ ಜೊತೆಗೆ, ಅಪಘಾತಗಳು ಸಂಭವಿಸುವ ಸಾಧ್ಯತೆಯೂ ಇದೆ. ಕೃಷಿ ಹಾನಿ ಆದ ಬಗ್ಗೆಯೂ ವರದಿಯಾಗಿದೆ. ಆದ್ದರಿಂದ ಸಾರ್ವಜನಿಕ ಸ್ಥಳದಲ್ಲಿ ಸಾಕುಪ್ರಾಣಿಗಳನ್ನು ಬಿಡದಂತೆ ಪಟ್ಟಣ ಪಂಚಾಯತ್ ಎಚ್ಚರಿಕೆಯ ಸಂದೇಶ ರವಾನಿಸಿದೆ.

ಸಾಕುಪ್ರಾಣಿಗಳ ಬಂಧನ, ಮಾಲಕರಿಗೆ ಶಿಕ್ಷೆ: ಎಚ್ಚರಿಕೆ! | ಸಾರ್ವಜನಿಕ ಸ್ಥಳದಲ್ಲಿ ಸಾಕುಪ್ರಾಣಿ ಬಿಟ್ಟರೆ ಶಿಕ್ಷೆ ಗ್ಯಾರೆಂಟಿ!! Read More »

ಕೊರಗ ಭಾಷೆಯಲ್ಲಿ ಮೂಡಿಬಂದ ಮದುವೆ ಆಮಂತ್ರಣ! | ಪ್ರಶಂಸೆಗೆ ಪಾತ್ರವಾದ ಆಹ್ವಾನ ಪತ್ರಿಕೆಯ ದೇಸಿ ಭಾಷೆ | ಹೀಗಿದೆ ನೋಡಿ ಆಮಂತ್ರಣ

ಮಂಗಳೂರು: ದೇಸಿ ಭಾಷೆಗಳಿಗೆ ಬೆಂಬಲ ಸಿಗುತ್ತಿಲ್ಲ ಎನ್ನುವ ಕೊರಗಿನ ನಡುವೆ, ಇಲ್ಲೊಂದು ಜೋಡಿ ತಮ್ಮ ಮದುವೆ ಆಮಂತ್ರಣವನ್ನು ತಮ್ಮ ಮಾತೃಭಾಷೆಯಾದ ಕೊರಗ ಭಾಷೆಯಲ್ಲಿ ಮುದ್ರಿಸಿ ಗಮನ ಸೆಳೆದಿದೆ. ಮಂಗಳೂರಿನ ಕೋಡಿಬೆಟ್ಟುವಿನ ಅಕ್ಷತಾ ಹಾಗೂ ಬಾರ್ಕೂರಿನ ಅಮಿತ್ ಕುಮಾರ್ ಅವರ ವಿವಾಹ ನವಂಬರ್ 19ರಂದು ನಡೆಯಲಿದ್ದು, ಮದುವೆಯ ಆಮಂತ್ರಣ ಪತ್ರಿಕೆಯನ್ನು ಕೊರಗ ಭಾಷೆಯಲ್ಲೇ ಮುದ್ರಿಸಲಾಗಿದೆ. ಇದೀಗ ಈ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಎಲ್ಲೆಡೆಯಿಂದ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಅರುಣ್ ಜೋಳದ ಕೂಡ್ಲಿಗಿ ಎನ್ನುವವರು ತಮ್ಮ

ಕೊರಗ ಭಾಷೆಯಲ್ಲಿ ಮೂಡಿಬಂದ ಮದುವೆ ಆಮಂತ್ರಣ! | ಪ್ರಶಂಸೆಗೆ ಪಾತ್ರವಾದ ಆಹ್ವಾನ ಪತ್ರಿಕೆಯ ದೇಸಿ ಭಾಷೆ | ಹೀಗಿದೆ ನೋಡಿ ಆಮಂತ್ರಣ Read More »

ಅನುಮತಿ ಪಡೆದಿದ್ದರೂ ಸೌಜನ್ಯ ಪ್ರಕರಣದ ಫ್ಲೆಕ್ಸ್ ತೆರವು!! | ಸುಳ್ಯದ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡುವಂತೆ ಜಿಲ್ಲಾ ಹೋರಾಟ ಸಮಿತಿಯಿಂದ ಆಗ್ರಹ

ಸುಳ್ಯ: ಸೌಜನ್ಯ ಪ್ರಕರಣದ ಫ್ಲೆಕ್ಸನ್ನು ಅನುಮತಿ ಪಡೆದೇ ಸುಳ್ಯ ಪೇಟೆಯಲ್ಲಿ ಅಳವಡಿಸಿದ್ದರೂ, ಪೊಲೀಸರೇ ಮುಂದೆ ಬಂದು ಫ್ಲೆಕ್ಸ್ ತೆರವುಗೊಳಿಸಿದ್ದಾರೆ. ಇದು ಸೌಜನ್ಯ ಹೋರಾಟವನ್ನು ಹತ್ತಿಕ್ಕುವ ಷಡ್ಯಂತ್ರ ಎಂದು ಆರೋಪಿಸಿರುವ ಸೌಜನ್ಯ ಪ್ರಕರಣ ಒಕ್ಕಲಿಗರ ಜಿಲ್ಲಾ ಹೋರಾಟ ಸಮಿತಿ, ಫ್ಲೆಕ್ಸ್ ತೆರವಿಗೆ ಕಾರಣವಾದ ಅಧಿಕಾರಿಯನ್ನು ತಕ್ಷಣ ಅಮಾನತು ಮಾಡಬೇಕು ಎಂದು ಎಸ್.ಪಿ. ರಿಷ್ಯಂತ್ ಸಿ.ಬಿ. ಅವರನ್ನು ಒತ್ತಾಯಿಸಿದೆ. ಸುಳ್ಯ ಪೇಟೆಯಲ್ಲಿ ಸೌಜನ್ಯ ಪ್ರಕರಣದ ನ್ಯಾಯಕ್ಕಾಗಿ ಫ್ಲೆಕ್ಸ್ ನ್ನು ಅನುಮತಿ ಪಡೆದು ಅಳವಡಿಸಲಾಗಿತ್ತು. ಆದರೆ ಇಂದು ಸುಳ್ಯಕ್ಕೆ ಕಾರ್ಯಕ್ರಮ ನಿಮಿತ್ತ

ಅನುಮತಿ ಪಡೆದಿದ್ದರೂ ಸೌಜನ್ಯ ಪ್ರಕರಣದ ಫ್ಲೆಕ್ಸ್ ತೆರವು!! | ಸುಳ್ಯದ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡುವಂತೆ ಜಿಲ್ಲಾ ಹೋರಾಟ ಸಮಿತಿಯಿಂದ ಆಗ್ರಹ Read More »

ವಿಷಕಾರಿ ಹಣ್ಣಿನ ಜ್ಯೂಸ್ ಸೇವಿಸಿ ಗೃಹಿಣಿ ಲೀಲಾವತಿ ಮೃತ್ಯು!

ಸುಳ್ಯ: ವಿಷಕಾರಿ ಹಣ್ಣಿನ ಜ್ಯೂಸ್ ತಯಾರಿಸಿ ಕುಡಿದ ಪರಿಣಾಮ ಮಹಿಳೆಯೋರ್ವಳು ಮೃತಪಟ್ಟ ಘಟನೆ ಅ. 2ರಂದು ಅಮರಪಡ್ಡೂರು ಗ್ರಾಮದ ಕುಳ್ಳಾಜಿ ಎಂಬಲ್ಲಿ ನಡೆದಿದೆ. ಮೃತರನ್ನು ಜಗನ್ನಾಥ ನಾಯ್ಕ ದೊಡ್ಡೇರಿ ಅವರ ಪತ್ನಿ ಲೀಲಾವತಿ (35) ಎಂದು ಗುರುತಿಸಲಾಗಿದೆ. ಒಂದು ವಾರದ ಹಿಂದೆ ಕಾಡಿನಲ್ಲಿ ಸಿಗುವ ಮೈರೋಳ್ ಹಣ್ಣನ್ನು ಮನೆಗೆ ತಂದು, ಅದರ ರಸ ತೆಗೆದು ಶರ್ಬತ್ ಮಾಡಿ ಲೀಲಾವತಿ ಹಾಗೂ ಅವರ ತಂದೆ ಸೇವನೆ ಮಾಡಿದ್ದರು. ಇದರ ಪರಿಣಾಮ ತಂದೆ ಮಗಳಿಬ್ಬರೂ ಅಸ್ವಸ್ಥರಾಗಿದ್ದರು. ಮಗಳು ಮೂರು ಮಕ್ಕಳ

ವಿಷಕಾರಿ ಹಣ್ಣಿನ ಜ್ಯೂಸ್ ಸೇವಿಸಿ ಗೃಹಿಣಿ ಲೀಲಾವತಿ ಮೃತ್ಯು! Read More »

ಕೆಲಸಕ್ಕೆಂದು ತೆರಳಿದ್ದ ಇಚ್ಲಂಪಾಡಿಯ ಯುವಕ ನಾಪತ್ತೆ; ದೂರು

ಉಪ್ಪಿನಂಗಡಿ: ಇಚ್ಲಂಪಾಡಿ ಗ್ರಾಮದ ಯುವಕನೋರ್ವ ಕಾಣೆಯಾಗಿರುವ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉರೆಜಾಲು ನಿವಾಸಿ  ಜೋಜು ಜೋಸೆಫ್ (35) ನಾಪತ್ತೆಯಾದವರು. ಕೂಲಿ ಕೆಲಸ ಮಾಡುತ್ತಿದ್ದ ಇವರು   ಸೆ. 30ರಂದು ಬೆಳಿಗ್ಗೆ 8 ಗಂಟೆಗೆ ಮನೆಯಿಂದ ಸುಬ್ರಹ್ಮಣ್ಯಕ್ಕೆ ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋಗಿದ್ದು ರಾತ್ರಿಯಾದರೂ ವಾಪಾಸು ಮನೆಗೆ ಬಂದಿಲ್ಲ. ಪೋನ್ ಮಾಡಿ ಸಂಪರ್ಕಿಸಲು ಪ್ರಯತ್ನಿಸಿದಾಗ ಪೋನ್ ಸ್ವಿಚ್ ಆಪ್ ಆಗಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ. ಇವರನ್ನು  ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದ ಮೇಸ್ತ್ರಿ ಪ್ರಶಾಂತ್‌ ಅವರಿಗೆ ರಾತ್ರಿ ಕರೆ

ಕೆಲಸಕ್ಕೆಂದು ತೆರಳಿದ್ದ ಇಚ್ಲಂಪಾಡಿಯ ಯುವಕ ನಾಪತ್ತೆ; ದೂರು Read More »

ಗುತ್ತಿಗಾರಿನಲ್ಲಿ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ!

ಪಂಜ: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುತ್ತಿಗಾರಿನಲ್ಲಿ ನಡೆದಿದೆ. ಪ್ರೇಮಾ (55) ಆತ್ಮಹತ್ಯೆ ಮಾಡಿಕೊಂಡವರು. ಪ್ರೇಮಾ ಅವರು ಗುತ್ತಿಗಾರಿನ ವಳಲಂಬೆಯ ಲಕ್ಷ್ಮಣ ಆಚಾರ್ಯ ಅವರ ಪತ್ನಿ. ಮೃತ ಪ್ರೇಮಾ ಅವರು ಮೂವರು ಪುತ್ರರು, ಓರ್ವ ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗುತ್ತಿಗಾರಿನಲ್ಲಿ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ! Read More »

ಮಂಗಳೂರು ಬೆಡಗಿ ಮುಡಿಗೆ ಮಿಸ್ ಟೀನ್ ಗ್ಲೋಬ್ ಇಂಟರ್ ನ್ಯಾಷನಲ್ 2023 ಕಿರೀಟ | ಅಂತಾರಾಷ್ಟ್ರೀಯ ಮಟ್ಟದ ಬ್ಯೂಟಿ ಕಾಂಟೆಸ್ಟ್ ನಲ್ಲಿ ಗೆದ್ದ ಯಶಸ್ವಿನಿ ದೇವಾಡಿಗ

ಮಂಗಳೂರು: ಥಾಯ್ಲೆಂಡ್ ನಲ್ಲಿ ನಡೆದ ಮಿಸ್ ಟೀನ್ ಗ್ಲೋಬ್ ಇಂಟರ್ ನ್ಯಾಷನಲ್ 2023 ಕಿರೀಟವನ್ನು ಕರ್ನಾಟಕದ ಕುವರಿ ಮಂಗಳೂರು ಬೆಡಗಿ ಯಶಸ್ವಿನಿ ದೇವಾಡಿಗ ತನ್ನ ಮುಡಿಗೇರಿಸಿಕೊಂಡಿದ್ದಾರೆ. ವರ್ಷದ ಆರಂಭದಲ್ಲಿ ನಡೆದ ಮಿಸ್ ಟೀನ್ ಇಂಡಿಯಾ ಗ್ಲೋಬ್ ಬ್ಯೂಟಿ ಕಾಂಟೆಸ್ಟ್ ನಲ್ಲಿ ಸ್ಪರ್ಧಿಸಿ ರನ್ನರ್ ಅಪ್ ಪ್ರಶಸ್ತಿ ಪಡೆದು, ಥಾಯ್ಲೆಂಡ್ ನಲ್ಲಿ ನಡೆದ ಫೈನಲ್ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದರು. ಇದೀಗ ಯಶಸ್ವಿನಿ ದೇವಾಡಿಗ ಅವರು ಮಿಸ್ ಟೀನ್ ಗ್ಲೋಬ್ ಇಂಟರ್ ನ್ಯಾಷನಲ್ 2023 ಆಗಿ ಹೊರಹೊಮ್ಮಿದರು. ಇಂಡೋನೇಷ್ಯಾದ

ಮಂಗಳೂರು ಬೆಡಗಿ ಮುಡಿಗೆ ಮಿಸ್ ಟೀನ್ ಗ್ಲೋಬ್ ಇಂಟರ್ ನ್ಯಾಷನಲ್ 2023 ಕಿರೀಟ | ಅಂತಾರಾಷ್ಟ್ರೀಯ ಮಟ್ಟದ ಬ್ಯೂಟಿ ಕಾಂಟೆಸ್ಟ್ ನಲ್ಲಿ ಗೆದ್ದ ಯಶಸ್ವಿನಿ ದೇವಾಡಿಗ Read More »

ಅ. 6 – 7ರಂದು ಮೂಡಬಿದ್ರೆ ಆಳ್ವಾಸ್ ನಲ್ಲಿ ಬೃಹತ್ ಉದ್ಯೋಗ ಮೇಳ | 204 ಕಂಪೆನಿಗಳು, ಸಾವಿರಾರು ಉದ್ಯೋಗ, ಗ್ರಾಮೀಣ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ | ಪುತ್ತೂರು ಶಾಸಕರ ಕಚೇರಿಯಿಂದ ಉದ್ಯೋಗ ಮೇಳಕ್ಕೆ ಬಸ್ ಉಚಿತ ವ್ಯವಸ್ಥೆ ಹೀಗಿರಲಿದೆ…

ಪುತ್ತೂರು: ಅ.6 ಮತ್ತು 7ರಂದು ಮೂಡಬಿದ್ರೆ ಆಳ್ವಾಸ್ ನಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಲಿದ್ದು ವಿದ್ಯಾವಂತ ಯುವಕರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ. ಉದ್ಯೋಗ ಮೇಳದಲ್ಲಿ 204ಕ್ಕೂ ಮಿಕ್ಕಿ ವಿವಿಧ ಕಂಪೆನಿಗಳು ಭಾಗವಹಿಸುತ್ತಿದ್ದು, ಮೇಳದಲ್ಲಿ ಭಾಗವಹಿಸುವ ಸಾವಿರಾರು‌ ಮಂದಿಗೆ ಉದ್ಯೋಗ ದೊರೆಯಲಿದೆ. ಗ್ರಾಮೀಣ ಭಾಗದ ನಿರುದ್ಯೋಗಿ ವಿದ್ಯಾವಂತ ಯುವಕರು ಇದರಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬಹುದು. ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಡಿಗ್ರಿ ಕಾಲೇಜು, ಐಟಿಐ ತರಬೇತಿ ಕೇಂದ್ರಗಳು, ಡಿಪ್ಲೋಮಾ ಕೋರ್ಸು‌ಮಾಡಿದವರು, ಬಿಎ, ಬಿಕಾಂ,

ಅ. 6 – 7ರಂದು ಮೂಡಬಿದ್ರೆ ಆಳ್ವಾಸ್ ನಲ್ಲಿ ಬೃಹತ್ ಉದ್ಯೋಗ ಮೇಳ | 204 ಕಂಪೆನಿಗಳು, ಸಾವಿರಾರು ಉದ್ಯೋಗ, ಗ್ರಾಮೀಣ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ | ಪುತ್ತೂರು ಶಾಸಕರ ಕಚೇರಿಯಿಂದ ಉದ್ಯೋಗ ಮೇಳಕ್ಕೆ ಬಸ್ ಉಚಿತ ವ್ಯವಸ್ಥೆ ಹೀಗಿರಲಿದೆ… Read More »

ಸುಳ್ಯ ಬಿಜೆಪಿ ಮಂಡಲದಿಂದ ಕುಕ್ಕೆಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ | ಅಭಿಯಾನದ ಬಗ್ಗೆ ಶಾಸಕಿ ಭಾಗೀರಥಿ ಮುರುಳ್ಯ ಮಾತು ಇಲ್ಲಿದೆ

ಸುಬ್ರಹ್ಮಣ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಂಡಲ ವತಿಯಿಂದ ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಉದ್ಘಾಟನೆಗೊಂಡಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು, ಗಾಂಧಿ ಜಯಂತಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿಯ ಜನ್ಮ ದಿನಾಚರಣೆಯ ಈ ಶುಭದಿನದಂದು ನಾವು ಸು ಳ್ಯ ಬಿಜೆಪಿ ಮಂಡಲ ವತಿಯಿಂದ ವಿವಿಧ ಸಂಘ-ಸಂಸ್ಥೆಗಳ ನೆರವಿನೊಂದಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ದರ್ಪಣ ತೀರ್ಥ ನದಿಯನ್ನು ಸ್ವಚ್ಛಗೊಳಿಸುವ ಬೃಹತ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಮಹಾತ್ಮಾ

ಸುಳ್ಯ ಬಿಜೆಪಿ ಮಂಡಲದಿಂದ ಕುಕ್ಕೆಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ | ಅಭಿಯಾನದ ಬಗ್ಗೆ ಶಾಸಕಿ ಭಾಗೀರಥಿ ಮುರುಳ್ಯ ಮಾತು ಇಲ್ಲಿದೆ Read More »

error: Content is protected !!
Scroll to Top