ದಕ್ಷಿಣ ಕನ್ನಡ

ಡಿ.21 : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 4ನೇ ಜಿಲ್ಲಾ ಸಮ್ಮೇಳನ | ಲಾಂಛನ ಬಿಡುಗಡೆ

ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆಯಲಿರುವ 4ನೇ ಜಿಲ್ಲಾ ಸಮ್ಮೇಳನದ ಲಾಂಛನ ಬಿಡುಗಡೆ ನ.11 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಲಾಯಿತು. ಡಿ.21ರಂದು ಮಂಗಳೂರಿನ ಕುದ್ಮುಲ್ ರಂಗ ರಾವ್ ಪುರಭವನದಲ್ಲಿ ಜಿಲ್ಲಾ ಸಮ್ಮೇಳನ ನಡೆಯಲಿದ್ದು, ಲಾಂಛನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ […]

ಡಿ.21 : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 4ನೇ ಜಿಲ್ಲಾ ಸಮ್ಮೇಳನ | ಲಾಂಛನ ಬಿಡುಗಡೆ Read More »

ತಲವಾರು ಝಳಪಿಸಿದ 9 ಮಂದಿ ಪೊಲೀಸ್ ವಶಕ್ಕೆ!!!

ಪುತ್ತೂರು: ಪುತ್ತಿಲ ಪರಿವಾರದ ಕಚೇರಿ ಮುಂಭಾಗ ತಲವಾರು ಝಳಪಿಸಿದ ಪ್ರಕರಣದಲ್ಲಿ 9 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆ‌‌ ನಡೆಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ

ತಲವಾರು ಝಳಪಿಸಿದ 9 ಮಂದಿ ಪೊಲೀಸ್ ವಶಕ್ಕೆ!!! Read More »

ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಆಗಮಿಸಿದ ಅಪರೂಪದ ಪ್ರಾಣಿ ಪಕ್ಷಿಗಳು ಕ್ಯಾಮರಾ ಕಣ್ಣಲ್ಲಿ ಸೆರೆ!!

ಮಂಗಳೂರು: ದೇಶದ ಪ್ರಮುಖ ಮೃಗಾಲಯಗಳಲ್ಲಿ ಒಂದಾಗಿರುವ ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಅಳಿವಿನಂಚಿನಲ್ಲಿರುವ ತೋಳಗಳ ಸೇರ್ಪಡೆಯಾಗಿವೆ. ಪ್ರಾಣಿ ವಿನಿಮಯ ಯೋಜನೆಯಲ್ಲಿ ಆಂಧ್ರ ಪ್ರದೇಶದ ವಿಶಾಖಪಟ್ಟಣದ ಮೃಗಾಲಯದಿಂದ ಒಂದು ಜತೆ ತೋಳ ಪಿಲಿಕುಳ ಮೃಗಾಲಯಕ್ಕೆ ತರಿಸಲಾಗಿದೆ. ಹೊಸ ಜಗತ್ತಿನ ಮಂಗಗಳೆಂದು ಕರೆಯಲ್ಪಡುವ 4 ಜತೆ ಅಳಿಲು ಮಂಗ ಮಾರ್ಮಸೆಟ್, ಟಾಮರಿಂನ್ ಗಳು ಕೂಡ ಸೇರ್ಪಡೆಯಾಗಿದ್ದು, ಇವು ಮಧ್ಯ ಮತ್ತು ದಕ್ಷಿಣ ಅಮೆರಿಕದಲ್ಲಿ ಕಂಡು ಬರುವ ಚಿಕ್ಕ ಜಾತಿಯ ಮಂಗಗಳಾಗಿವೆ. ಮೆಕ್ಸಿಕೋ ದೇಶದಲ್ಲಿ ಕಂಡು ಬರುವ ಬ್ಲೂ ಗೋಲ್ಡ್ ಮಕಾವ್, ಆಸ್ಟ್ರೇಲಿಯಾದಲ್ಲಿ

ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಆಗಮಿಸಿದ ಅಪರೂಪದ ಪ್ರಾಣಿ ಪಕ್ಷಿಗಳು ಕ್ಯಾಮರಾ ಕಣ್ಣಲ್ಲಿ ಸೆರೆ!! Read More »

ಕಾರಿಗೆ ಡಿಕ್ಕಿ ಹೊಡೆದ ಜಲ್ಲಿ ಸಾಗಾಟದ ಲಾರಿ; ಸ್ಥಳೀಯರಿಂದ ಪ್ರತಿಭಟನೆ! | ಈಯರ್ ಫೋನ್ ಹಾಕಿ ಹಾಡು ಕೇಳುತ್ತಾ ಸಾಗುವ ಲಾರಿ ಚಾಲಕರು: ಸ್ಥಳೀಯರ ಆರೋಪ!

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಗುತ್ತಿಗೆ ವಹಿಸಿಕೊಂಡ ಕಂಪೆನಿಯ ಜಲ್ಲಿ ಸಾಗಾಟದ ಲಾರಿಯೊಂದು ಕಾರಿಗೆ ಢಿಕ್ಕಿ ಹೊಡೆದ ಘಟನೆ ಬಂಟ್ವಾಳದ ಲೊರೆಟ್ಟೋ ಎಂಬಲ್ಲಿ ನಡೆದಿದೆ. ಬೃಹತ್ ಗಾತ್ರದ ಲಾರಿಗಳ ಅಟ್ಟಹಾಸದಿಂದ ಬೇಸತ್ತಿದ್ದ ಸ್ಥಳೀಯರು, ಇದೇ ಸಂದರ್ಭ ಪ್ರತಿಭಟನೆ ನಡೆಸಿದರು. ಮೂಡುಬಿದರೆ ಆಳ್ವಾಸ್ ಕಾಲೇಜಿಗೆ ತೆರಳುತ್ತಿದ್ದ ಮೈಸೂರು ಮೂಲದ ಕೃಷ್ಣ ಅರಸ ಅಪಾಯದಿಂದ ಪಾರಾಗಿದ್ದಾರೆ. ಕಾರಿಗೆ ಲಾರಿ ಮುಖಾಮುಖಿ ಢಿಕ್ಕಿ ಹೊಡೆದಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಬಿಸಿರೋಡಿನಿಂದ ಅಡ್ಡಹೊಳೆವರೆಗೆ ರಾಷ್ಟ್ರೀಯ ಹೆದ್ದಾರಿ ಚತುಷ್ಪತ ಕಾಮಗಾರಿ ಗುತ್ತಿಗೆಯನ್ನು ಕೆ.ಎನ್.ಆರ್.ಸಿ. ಕಂಪೆನಿ

ಕಾರಿಗೆ ಡಿಕ್ಕಿ ಹೊಡೆದ ಜಲ್ಲಿ ಸಾಗಾಟದ ಲಾರಿ; ಸ್ಥಳೀಯರಿಂದ ಪ್ರತಿಭಟನೆ! | ಈಯರ್ ಫೋನ್ ಹಾಕಿ ಹಾಡು ಕೇಳುತ್ತಾ ಸಾಗುವ ಲಾರಿ ಚಾಲಕರು: ಸ್ಥಳೀಯರ ಆರೋಪ! Read More »

ಉದ್ಯಮಿ ಸೊಸೆ ಆತ್ಮಹತ್ಯೆ | ಆರೋಪಿಗಳಿಗೆ ಜಾಮೀನು !

ಸುಳ್ಯ; ಉದ್ಯಮಿ ಸೊಸೆ ಐಶ್ವರ್ಯಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳಿಗೆ ಬೆಂಗಳೂರಿನ ಸಿಟಿ ಏಳನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿ ಐಶ್ವರ್ಯಾ ಮಾವ ಗಿರಿಯಪ್ಪ ಗೌಡ ಕಾಪಿಲ, ಅತ್ತೆ ಸೀತಮ್ಮ, ಗಂಡ ರಾಜೇಶ್, ಮೈದುನ ವಿಜಯ್, ಮೈದುನನ ಪತ್ನಿ ತಸ್ಮಯ್ ಅವರನ್ನು ಪೊಲೀಸರು ಗೋವಾದಲ್ಲಿ ಬಂಧಿಸಿದ್ದರು. ಇನ್ನುಳಿದ ಆರೋಪಿಗಳಾದ ಐಶ್ವರ್ಯಾ ಅವರ ತಂದೆಯ ಅಕ್ಕ ಗೀತಾ, ಅವರ ಪತಿ ರವೀಂದ್ರನಾಥ ಕೇವಳ ಹಾಗೂ

ಉದ್ಯಮಿ ಸೊಸೆ ಆತ್ಮಹತ್ಯೆ | ಆರೋಪಿಗಳಿಗೆ ಜಾಮೀನು ! Read More »

ಅನ್ಯ ಮತೀಯ ಯುವಕನಿಂದ ಯುವತಿಗೆ ಕಿರುಕುಳ | ಆರೋಪಿ ಬಂಧನ

ಸುಳ್ಯ: ಅನ್ಯಮತೀಯ ಯುವಕನೊಬ್ಬ ಯುವತಿಗೆ ಕಿರುಕುಳ ನೀಡಿದ ಘಟನೆ ನಿಂತಿಕಲ್ಲಿನಲ್ಲಿ ಇಂದು ರಾತ್ರಿ ನಡೆದಿದೆ. ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಯುವತಿಯ ಮೈಗೆ ಕೈ ಹಾಕಿರುವುದಾಗಿ ಯುವತಿ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದು, ಯುವಕನನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಹಿಂದೂ ಕಾರ್ಯಕರ್ತರು ಠಾಣೆ ಎದುರು ಜಮಾಯಿಸಿರುವುದಾಗಿ ತಿಳಿದು ಬಂದಿದೆ.

ಅನ್ಯ ಮತೀಯ ಯುವಕನಿಂದ ಯುವತಿಗೆ ಕಿರುಕುಳ | ಆರೋಪಿ ಬಂಧನ Read More »

ಧರ್ಮಸ್ಥಳದ ಧರ್ಮಾಧಿಕಾರಿ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಪ್ರತಿಷ್ಠಿತ ‘ಚಾಂಪಿಯನ್ಸ್ ಆಫ್ ಚೇಂಜ್ ಕರ್ನಾಟಕ 2023’ ಪ್ರಶಸ್ತಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಪ್ರತಿಷ್ಠಿತ ‘ಚಾಂಪಿಯನ್ಸ್ ಆಫ್ ಚೇಂಜ್ ಕರ್ನಾಟಕ 2023’ ಪ್ರಶಸ್ತಿ ಲಭಿಸಿದೆ.  ಕೇಂದ್ರ ಸರಕಾರದಿಂದ ಪರಿಗಣಿಸಲ್ಪಟ್ಟ ಇಂಟರಾಕ್ಟಿವ್ ಫೋರಮ್ ಆನ್ ಇಂಡಿಯನ್ ಎಕಾನಮಿ (IFIE) ಸಂಸ್ಥೆಯು ಹೆಗ್ಗಡೆ ಅವರ ಸಮಾಜ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಿದೆ. ಬೆಂಗಳೂರಿನ ಮಾರತಹಳ್ಳಿಯ ರಾಡಿಸನ್ ಬ್ಲೂ ಹೋಟೆಲ್’ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ಪ್ರಶಸ್ತಿ ಪ್ರದಾನ ಮಾಡಿದರು.

ಧರ್ಮಸ್ಥಳದ ಧರ್ಮಾಧಿಕಾರಿ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಪ್ರತಿಷ್ಠಿತ ‘ಚಾಂಪಿಯನ್ಸ್ ಆಫ್ ಚೇಂಜ್ ಕರ್ನಾಟಕ 2023’ ಪ್ರಶಸ್ತಿ Read More »

ವೃತ್ತಿ ಜೀವನದ ಬಿಝಿ ಶೆಡ್ಯೂಲ್‍ ನಲ್ಲೂ ಕ್ರೀಡಾ ಕ್ಷೇತ್ರಕ್ಕೆ ಸಮಯ ಮೀಸಲು | ಎರಡನೇ ಬಾರಿ ರಾಷ್ಟ್ರ,ಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾದ ಕೋಡಿಂಬಾಳದ ಮಣಿಕಂಠನ್

ಸುಳ್ಯ: ತನ್ನ ವೃತ್ತಿ ಜೀವನದ ಬಿಝಿ ಶೆಡ್ಯೂಲ್ ಮಧ್ಯೆಯೂ ತನ್ನ ಆಸಕ್ತಿಯ ಕ್ರೀಡಾ ಕ್ಷೇತ್ರಕ್ಕೆ ಒಂದಿಷ್ಟು ಸಮಯವನ್ನು ಮೀಸಲಿಡುವ ಈ ಇಂಜಿನಿಯರ್ ಎರಡನೇ ಬಾರಿಯೂ ರಾಷ್ಟ್ರಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾಗುವ ಮೂಲಕ ಗಮನ ಸೆಳೆದಿದ್ದಾರೆ. ಸುಳ್ಯದ ಇಂಜಿನಿಯರ್ ಮಣಿಕಂಠನ್ ಸ್ಪೋರ್ಟ್ಸ್ ಇಂಜಿನಿಯರಿಂಗ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಸುಳ್ಯ ಉಪವಿಭಾಗದಲ್ಲಿ ಸಹಾಯಕ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿರುವ ಮಣಿಕಂಠನ್ ಬಾಲ್ಯದಿಂದಲೇ ಕ್ರೀಡಾಪಟು. ಸರಕಾರಿ ಹುದ್ದೆಯಲ್ಲಿದ್ದರೂ ತನ್ನ ಕ್ರೀಡಾ ಅಸಕ್ತಿಯನ್ನು ಮುಂದುವರಿಸುತ್ತಿರುವ ರಾಜ್ಯಮಟ್ಟದ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ

ವೃತ್ತಿ ಜೀವನದ ಬಿಝಿ ಶೆಡ್ಯೂಲ್‍ ನಲ್ಲೂ ಕ್ರೀಡಾ ಕ್ಷೇತ್ರಕ್ಕೆ ಸಮಯ ಮೀಸಲು | ಎರಡನೇ ಬಾರಿ ರಾಷ್ಟ್ರ,ಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾದ ಕೋಡಿಂಬಾಳದ ಮಣಿಕಂಠನ್ Read More »

ಆಟೋ ರಿಕ್ಷಾ-ಓಮ್ನಿ ಡಿಕ್ಕಿ : ರಿಕ್ಷಾ ಚಾಲಕ ಮೃತ್ಯು

ಸುಳ್ಯ: ಓಮ್ನಿ ಹಾಗೂ ಅಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟ ಘಟನೆ ಹಳೆಗೇಟಿನಲ್ಲಿ ಭಾನುವಾರ ರಾತ್ರಿ ನಡೆದಿದೆ. ಜಾಲ್ಸೂರು ಗ್ರಾಮದ ಅರಿಯಡ್ಕ ನಿವಾಸಿ ಬಾಬು ಪಾಟಾಳಿ ಅಪಘಾತದಿಂದ ಮೃತಪಟ್ಟವರು. ಜಾಲ್ಲೂರಿನಿಂದ ಸುಳ್ಯಕ್ಕೆ ಪ್ರಯಾಣಿಕರೋರ್ವರನ್ನು ಬಿಟ್ಟು ಹಿಂತಿರುಗುತ್ತಿದ್ದ ಬಾಬು ಪಾಟಾಳಿಯವರು ಚಲಾಯಿಸುತ್ತಿದ್ದ ಅಟೋರಿಕ್ಷಾ ಹಳೆಗೇಟು ಪೆಟ್ರೋಲ್ ಪಂಪ್ ಬಳಿ ಮುಂಭಾಗದಿಂದ ಬರುತ್ತಿದ್ದ ಓಮ್ಮಿಗೆ ಢಿಕ್ಕಿ ಹೊಡೆದಿದ್ದು, ಚಾಲಕ ಬಾಬು ಪಾಟಾಳಿ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ

ಆಟೋ ರಿಕ್ಷಾ-ಓಮ್ನಿ ಡಿಕ್ಕಿ : ರಿಕ್ಷಾ ಚಾಲಕ ಮೃತ್ಯು Read More »

ಪಂಜದ ಯುವಕ ಪಾಂಡಿಚೇರಿಯಲ್ಲಿ ಸಮುದ್ರಪಾಲು

ಸುಳ್ಯ, ನ.5: ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ ಸುಳ್ಯ ತಾಲೂಕಿನ ಪಂಜದ ಯುವಕನೊಬ್ಬ ಪಾಂಡಿಚೇರಿಯಲ್ಲಿ ಸಮುದ್ರ ಪಾಲಾದ ಘಟನೆ ಸಂಭವಿಸಿದೆ. ಪಂಜದ ಕೂತ್ಕುಂಜ ಗ್ರಾಮದ ಚಿದ್ಗಲ್ಲು ಗೋಪಾಲ್ ಎಂಬವರ ಪುತ್ರ ಬಿಪಿನ್ ನೀರುಪಾಲಾದ ಯುವಕ. ಬಿಪಿನ್ ಬೆಂಗಳೂರಿನ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ಶನಿವಾರ ಗೆಳೆಯರೊಂದಿಗೆ ಪಾಂಡಿಚೇರಿಗೆ ಹೋಗಿದ್ದು ಬಳಿಕ ಅಲ್ಲಿನ ಬೀಚ್‌ಗೆ ತೆರಳಿದ್ದ ವೇಳೆ ಸಮುದ್ರಪಾಲಾಗಿದ್ದಾರೆ. ರವಿವಾರ ಯುವಕನ ಮೃತದೇಹ ಪತ್ತೆಯಾಗಿದೆ. ಮೃತರು ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ.

ಪಂಜದ ಯುವಕ ಪಾಂಡಿಚೇರಿಯಲ್ಲಿ ಸಮುದ್ರಪಾಲು Read More »

error: Content is protected !!
Scroll to Top