ದಕ್ಷಿಣ ಕನ್ನಡ

ಸುಬ್ರಹ್ಮಣ್ಯದಲ್ಲಿ ಸ್ವಚ್ಛತಾ ಕಾರ್ಯಕ್ರಮ    

ಸುಬ್ರಹ್ಮಣ್ಯ: ಡಾlರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್ ವತಿಯಿಂದ ಭಾನುವಾರ ಸುಬ್ರಹ್ಮಣ್ಯದ ಸ್ಥಾನಘಟ್ಟ, ಪರ್ವತಮಕಿ, ಪಾರ್ಕಿಂಗ್ ಸ್ಥಳ ,ಹಾಗೂ ಕುಲುಕುಂದ ರಸ್ತೆ ಭಾಗಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ಏರ್ಪಡಿಸಲಾಯಿತು. ಪ್ರತಿ ವಾರದ ಭಾನುವಾರ ಹಾಗೂ ವಿಶೇಷ ದಿನಗಳಲ್ಲಿ ಈ ಸ್ಥಾನಘಟ್ಟ ಹಾಗೂ ಆಸುಪಾಸಿನಲ್ಲಿ ಭಕ್ತಾದಿಗಳು ಪ್ಲಾಸ್ಟಿಕ್, ಕಸಕಡ್ಡಿಗಳು, ಬ್ಯಾಗ್, ಕಾಗದ, ನೀರಿನ ಬಾಟಲಿಗಳು ಹಾಗೂ ಇನ್ನಿತರ ಕಚ್ಚಾ ವಸ್ತುಗಳನ್ನ ಎಲ್ಲೆಂದರಲ್ಲಿ ಬಿಸಾಡಿ ಇಡೀ ಪರಿಸರ ಮಾಲಿನ್ಯವಾಗಿದ್ದು, […]

ಸುಬ್ರಹ್ಮಣ್ಯದಲ್ಲಿ ಸ್ವಚ್ಛತಾ ಕಾರ್ಯಕ್ರಮ     Read More »

ಸತ್ಯಕ್ಕೆ ದೂರವಾದ ವರದಿ ಬಿತ್ತರ : ಕನ್ನಡ ನ್ಯೂಸ್ ಚಾನೆಲ್ ವಿರುದ್ಧ ಜಿಲ್ಲೆಯ ಸಮಸ್ತ ಒಕ್ಕಲಿಗ ಸಮುದಾಯದಿಂದ ಖಂಡನೆ | ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಗುರುದೇವ್ ಯು.ಬಿ.

ಮಂಗಳೂರು: ಜಿಲ್ಲೆಯಲ್ಲಿ ಒಕ್ಕಲಿಗ ಸಮುದಾಯ 3.75 ಲಕ್ಷಕ್ಕಿಂತ ಅಧಿಕ ಮತದಾರರನ್ನು ಹೊಂದಿದ್ದು, ಇದು ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ ಆಯೋಗ ನೀಡಿದ ವರದಿ ಹಾಗೂ ಒಕ್ಕಲಿಗರ ಸಂಘವು ನೀಡಿದ ಆಂತರಿಕ ಅಂಕಿಅಂಶವಾಗಿದೆ. ಆದರೆ ಕನ್ನಡ ನ್ಯೂಸ್ ಚಾನೆಲ್ ಒಂದು ತನ್ನ ವರದಿಯಲ್ಲಿ ದ.ಕ.ಜಿಲ್ಲೆಯಲ್ಲಿ ಕೇವಲ 80 ಸಾವಿರ ಅಂತ ಬಿಂಬಿಸಿ ನಿಕೃಷ್ಟ ಮತ್ತು ತಾತ್ಸಾರ ವರದಿ ನೀಡಿರುವುದು ಸಮುದಾಯದಲ್ಲಿ ಆಕ್ರೋಶ ಮತ್ತು ತಳಮಳಕ್ಕೆ ಕಾರಣವಾಗಿದೆ. ಅಧ್ಯಯನ ಪೂರಕ, ವಸ್ತುನಿಷ್ಠ ಸಂತ್ಯಾಂಶರಹಿತ ವರದಿ ಪ್ರಕಟಿಸಿರುವುದು ಮಾಧ್ಯಮದ ಘನತೆಗೆ ತಕ್ಕುದಲ್ಲ ಎಂದು

ಸತ್ಯಕ್ಕೆ ದೂರವಾದ ವರದಿ ಬಿತ್ತರ : ಕನ್ನಡ ನ್ಯೂಸ್ ಚಾನೆಲ್ ವಿರುದ್ಧ ಜಿಲ್ಲೆಯ ಸಮಸ್ತ ಒಕ್ಕಲಿಗ ಸಮುದಾಯದಿಂದ ಖಂಡನೆ | ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಗುರುದೇವ್ ಯು.ಬಿ. Read More »

ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕತ್ತು ಹಿಸುಕಿ ಬಾವಿಗೆ ಹಾಕಿದ ಪತಿ

ಬೆಳ್ತಂಗಡಿ:  ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕಿರಾತಕ ಪತಿರಾಯನೇ ಕತ್ತು ಹಿಸುಕಿ ಬಾವಿಗೆ ಹಾಕಿ ಕೊಂದ ಅಮಾನುಷ ಘಟನೆ ಬೆಳ್ತಂಗಡಿ ತಾಲೂಕು, ಬೆಳಾಲು ಗ್ರಾಮದ ಕೆಂಪನೊಟ್ಟು ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಬೆಳಾಲು ನಿವಾಸಿ ಶಶಿಕಲಾ (27) ಎಂದು  ಗುರುತಿಸಲಾಗಿದ್ದು, ಆರೋಪಿ ಕಿರಾತಕ ಪತಿಯನ್ನು ಸುಧಾಕರ ಎಂದು ಗುರುತಿಸಲಾಗಿದೆ. ಸುಧಾಕರ ಏಳು ವರ್ಷಗಳ ಹಿಂದೆ ಶಶಿಕಲಾಳನ್ನು ಪ್ರೀತಿಸಿ ಮದುವೆಯಾಗಿದ್ದು, ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆಂಪನೊಟ್ಟು ಎಂಬಲ್ಲಿ 6 ವರ್ಷದ ಮಗಳೊಂದಿಗೆ ವಾಸವಾಗಿದ್ದರು. ಸುಧಾಕರನಿಗೆ

ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕತ್ತು ಹಿಸುಕಿ ಬಾವಿಗೆ ಹಾಕಿದ ಪತಿ Read More »

ಇಲಿ ಜ್ವರದಿಂದ ಮಹಿಳೆ ಮೃತ್ಯು

ಉಜಿರೆ: ಇಲಿ ಜ್ವರದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಜಿರೆ ಗ್ರಾಮದ ಬೆಳಾಲುನಲ್ಲಿ ನಡೆದಿದೆ. ಬೆಳಾಲು ಗ್ರಾಮದ ತುರ್ಕೆರೊಟ್ಟು ಮನೆಯ ಆಶಾ (27) ಮೃತಪಟ್ಟವರು. ಇಲಿ ಜ್ವರದಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗಿದೆ ಮಂಗಳೂರಿನ ದೇರಳಕಟ್ಟೆ ಖಾಸಗಿ ಅಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

ಇಲಿ ಜ್ವರದಿಂದ ಮಹಿಳೆ ಮೃತ್ಯು Read More »

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರಿಂದ ರಾಜೀವಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕರಿಗೆ ಮನವಿ

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯಲ್ಲಿ ವಿವಿಧ ವಸತಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳ ಸಹಾಯಧನವನ್ನು ನಿಗಮದಿಂದ ತಡೆಹಿಡಿಯಲಾಗಿದ್ದು, ಸಮಸ್ಯೆ ಬಗೆಹರಿಸಿ ಅನುದಾನ ಬಿಡುಗಡೆಗೊಳಿಸುವಂತೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ರಾಜೀವಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕರಿಗೆ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ವ್ಯವಸ್ಥಾಪಕರನ್ನು ಭೇಟಿ ಮಾಡಿದ ಅವರು, ಈ ಕುರಿತು ಸಮಸ್ಯೆ ಬಗೆಹರಿಸಿ ಅನುದಾನ ಬಿಡುಗಡೆಗೊಳಿಸುವಂತೆ ಹಲವಾರು ಬಾರಿ ಮನವಿ ಮಾಡಲಾಗಿದೆ. ಆದರೂ ತಾಂತ್ರಿಕ ಕಾರಣಗಳಿಂದಾಗಿ ನಿಗಮದ ವತಿಯಿಂದ ಸಮಸ್ಯೆ ಈ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರಿಂದ ರಾಜೀವಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕರಿಗೆ ಮನವಿ Read More »

ವೈದ್ಯಾಧಿಕಾರಿ ಹಾಗೂ ಡಯಾಲಿಸಿಸ್ ಟೆಕ್ನಿಷಿಯನ್ ನೇಮಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರಿಂದ ಮನವಿ

ಸುಳ್ಯ: ಸುಳ್ಯ ವಿಧಾಸಭಾ ಕ್ಷೇತ್ರದ ಬೆಳ್ಳಾರೆಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯಾಧಿಕಾರಿ ನೇಮಕದ ಜತೆ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಡಯಾಲಿಸಿಸ್ ಟೆಕ್ನಿಷಿಯನ್ ಒದಗಿಸಿಕೊಡಬೇಕೆಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿದ ಶಾಸಕಿ, ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಇಲ್ಲದಿರುವ ಕಾರಣ ಗ್ರಾಮೀಣ ಜನರಿಗೆ ಆರೋಗ್ಯ ಸೇವೆ ಪಡೆಯಲು ತೊಂದರೆ ಪಡುವಂತಾಗಿದೆ. ಅಲ್ಲದೆ ಕಡಬ ಸಮುದಾಯ ಆರೋಗ್ಯ

ವೈದ್ಯಾಧಿಕಾರಿ ಹಾಗೂ ಡಯಾಲಿಸಿಸ್ ಟೆಕ್ನಿಷಿಯನ್ ನೇಮಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರಿಂದ ಮನವಿ Read More »

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ | ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಪಡುಬಿದ್ರೆ : ನಿಂತಿದ್ದ ಬಸ್ಸಿಗೆ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನ ಮೇಲೆ ಟ್ಯಾಂಕರ್ ಹರಿದು ಸ್ಥಳದಲ್ಲೇ ಮೃತಪಟ್ಟ ಘಟನೆ ಪಡುಬಿದ್ರಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಕಂಚಿನಡ್ಕ ನಿವಾಸಿ ಪ್ರಜ್ವಲ್ ಮೃತಪಟ್ಟು ಯುವಕ ಎಂದು ಗುರುತಿಸಲಾಗಿದೆ. ಪ್ರಯಾಣಿಕರನ್ನು ಇಳಿಸಲು ನಿಂತಿದ್ದ ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದು ರಸ್ತೆಗೆ ಎಸೆಲ್ಪಟ್ಟು ಬೈಕ್‌ ಸವಾರನ ಮೇಲೆ ಟ್ಯಾಂಕರ್ ಲಾರಿ ಹರಿದಿದೆ. ಪಡುಬಿದ್ರೆ ಪೊಲೀಸರು ಸ್ಥಳಕ್ಕೆ ಧಾವಿಸಿ ಸ್ಥಳ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ | ಬೈಕ್ ಸವಾರ ಸ್ಥಳದಲ್ಲೇ ಮೃತ್ಯು Read More »

ದೈವದ ಮಂಚದಲ್ಲಿ ವಿರಾಜಮಾನರಾಗಿ ಪೂಜಿಸಲ್ಪಡುವ ಏಕೈಕ ಸ್ವಾಮೀಜಿ | ಮಂಗಳೂರಿನ ಜೋಗಿ ಮಠದ ವಿಶೇಷತೆ

ಮಂಗಳೂರು: ದೈವದ ಮಂಚದಲ್ಲಿ ವಿರಾಜಮಾನರಾಗಿ ಪೂಜಿಸಲ್ಪಡುವ ಏಕೈಕ ಸ್ವಾಮೀಜಿ ಎಂಬುವುದಕ್ಕೆ ಇಲ್ಲಿದೆ ಒಂದು ವಿಶೇಷತೆ. ಇಂತಹ ಒಂದು ವಿಶಿಷ್ಟ ಸಂಪ್ರದಾಯವಿರುವುದು ಮಂಗಳೂರಿನ ಕದ್ರಿಯಲ್ಲಿರುವ ಜೋಗಿ ಮಠದಲ್ಲಿ. ಮರಳು ಧೂಮಾವತಿ ಎಂಬ ದೈವ, ಜೋಗಿ ಮಠ ಕ್ಷೇತ್ರದ ದೈವವಾಗಿದ್ದು,ವರ್ಷಂಪ್ರತಿ ನವರಾತ್ರಿಯ ಕೊನೆಯ ದಿನ ಅಂದರೆ ಮಹಾನವಮಿಯಂದು ನಾಥ ಪಂಥದ ಸ್ವಾಮೀಜಿಯವರು ದೈವದ ಮಂಚದಲ್ಲಿ ವಿರಾಜಮಾನರಾಗುವರು. ಅಲ್ಲದೇ ಆ ಸಂಧರ್ಭದಲ್ಲಿ ಸ್ವಾಮೀಜಿಯವರಿಗೆ ವಿಶೇಷ ಪೂಜೆ ಸಲ್ಲಿಸಲಾಗುವುದು. ಅದರಂತೆ ಈ ಬಾರಿಯೂ ಮಹಾನವಮಿಯಂದು ಜೋಗಿ ಮಠ ನಾಥ ಪಂಥದ ಸ್ವಾಮೀಜಿಗಳಾದ ರಾಜಾ

ದೈವದ ಮಂಚದಲ್ಲಿ ವಿರಾಜಮಾನರಾಗಿ ಪೂಜಿಸಲ್ಪಡುವ ಏಕೈಕ ಸ್ವಾಮೀಜಿ | ಮಂಗಳೂರಿನ ಜೋಗಿ ಮಠದ ವಿಶೇಷತೆ Read More »

ಉಜಿರೆಯಲ್ಲಿ ಮಹಿಳೆಯೊಬ್ಬರ ಶವ ಬಾವಿಯಲ್ಲಿ ಪತ್ತೆ

ಉಜಿರೆ: ವಿವಾಹಿತ ಮಹಿಳೆಯೊಬ್ಬರ ಶವ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಉಜಿರೆ ಗ್ರಾಮದ ಗಡಿ ಪ್ರದೇಶವಾದ ಮಾಚಾರು ಸಮೀಪದ ಕೆಂಪನೊಟ್ಟುವಿನಲ್ಲಿ ಶುಕ್ರವಾರ ನಡೆದಿದೆ. ಮಾಚಾರು ನಿವಾಸಿ ಶಶಿಕಲಾ ಎಂಬವರ ಶವವೇ ಬಾವಿಯಲ್ಲಿ ಅನುಮಾನಾಸ್ಪದವಾಗಿ  ಪತ್ತೆಯಾಗಿರುವುದು. ಹತ್ಯೆ ಮಾಡಿ ಬಾವಿಗೆ ಹಾಕಿರುವ ಕುರಿತು ಆರೋಪಗಳು ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ. ಇದು ಆಕಸ್ಮಿಕ ಘಟನೆಯೇ ಅಥವಾ ಕೊಲೆಯೇ ಎಂಬ ಬಗ್ಗೆ ಪೊಲೀಸ್ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ. ಧರ್ಮಸ್ಥಳ ಠಾಣಾ ಪೊಲೀಸರು, ಉನ್ನತಾಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಉಜಿರೆಯಲ್ಲಿ ಮಹಿಳೆಯೊಬ್ಬರ ಶವ ಬಾವಿಯಲ್ಲಿ ಪತ್ತೆ Read More »

ಉದ್ಯಮಿ ಸೊಸೆ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ | ವರದಕ್ಷಿಣ ಕಿರುಕುಳ ಆರೋಪದಲ್ಲಿ ಐವರ ಬಂಧನ

ಸುಳ್ಯ :ಸುಳ್ಯದ ಉದ್ಯಮಿ ಕಾಪಿಲ ಗಿರಿಯಪ್ಪ ಗೌಡರ ಸೊಸೆ ಐಶ್ವರ್ಯಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ರಾಜೇಶ್, ಅತ್ತೆ ಸೀತಾ, ಮಾವ ಗಿರಿಯಪ್ಪ ಗೌಡ ಕಾಪಿಲ, ಮೈದುನ, ಮೈದುನನ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ 5 ವರ್ಷಗಳ ಹಿಂದೆ ರಾಜೇಶ್ ಅವರನ್ನು ಐಶ್ವರ್ಯ ಮದುವೆಯಾಗಿದ್ದರು. ಐಶ್ವರ್ಯ ಯುಎಸ್ಎ ನಲ್ಲಿ ಎಂಬಿಎ ಮಾಡಿದ್ದರು. ಪತಿ ರಾಜೇಶ್, ಡೈರಿ ರಿಚ್ ಐಸ್ ಕ್ರೀಮ್ ಕಂಪನಿ ಮಾಲೀಕರಾಗಿದ್ದಾರೆ. ಇದೇ ಕಂಪನಿಯಲ್ಲಿ ಐಶ್ವರ್ಯ ತಂದೆ ಸುಬ್ರಮಣ್ಯ ಅವರ ತಂಗಿ ಗಂಡ ರವೀಂದ್ರ ಆಡಿಟರ್

ಉದ್ಯಮಿ ಸೊಸೆ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ | ವರದಕ್ಷಿಣ ಕಿರುಕುಳ ಆರೋಪದಲ್ಲಿ ಐವರ ಬಂಧನ Read More »

error: Content is protected !!
Scroll to Top