ದಕ್ಷಿಣ ಕನ್ನಡ

ಬಿಳಿನೆಲೆ ಯುವಕ ಮಂಡಲದಿಂದ ಸ್ವಚ್ಚತಾ ಕಾರ್ಯ

ಬಿಳಿನೆಲೆ: ಬಿಳಿನೆಲೆ ಯುವಕ ಮಂಡಲದ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಸೋಮವಾರ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವಠಾರದಲ್ಲಿ ಹಾಗೂ ಗ್ರಾಮದ ಹಲವೆಡೆ ಸ್ವಚ್ಚತಾ ಆಂದೋಲನ ನಡೆಯಿತು. ಪ್ರತಿ ವರ್ಷದಂತೆ  ಈ ಬಾರಿಯು ಯುವಕ ಮಂಡಲದ ಸದಸ್ಯರು ಸ್ವಚ್ಛತಾ ಕಾರ್ಯಕ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಬಿಳಿನೆಲೆ ಯುವಕ ಮಂಡಲದಿಂದ ಸ್ವಚ್ಚತಾ ಕಾರ್ಯ Read More »

ಮಹೇಶ್ ಬಸ್ ಮಾಲಕ ಆತ್ಮಹತ್ಯೆಗೆ ಶರಣು!!

ಮಂಗಳೂರು : ಮಂಗಳೂರಿನ ಖಾಸಗಿ ಬಸ್ ನ ಮಾಲೀಕರೊಬ್ಬರು ತಾವು ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ಮಹೇಶ್ ಬಸ್ ಮಾಲೀಕ ಪ್ರಕಾಶ್ (40) ಎಂದು ಗುರುತಿಸಲಾಗಿದೆ. ಅವರು ಕದ್ರಿ ಕಂಬಳ ಸಮೀಪ ಇರುವ ಅಪಾರ್ಟ್ ಮೆಂಟ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಹೇಶ್ ಹೆಸರಿನಲ್ಲಿ ಹಲವಾರು ಸಿಟಿ ಬಸ್ ಗಳು ದಿನನಿತ್ಯ ಸಂಚರಿಸುತ್ತಿದ್ದು, ಜನಮನ್ನಣೆ ಪಡೆದಿದೆ. ಕದ್ರಿ ಪೊಲೀಸ್

ಮಹೇಶ್ ಬಸ್ ಮಾಲಕ ಆತ್ಮಹತ್ಯೆಗೆ ಶರಣು!! Read More »

ಸುಬ್ರಹ್ಮಣ್ಯ ಲಯನ್ಸ್ ಕ್ಲಬ್’ನಿಂದ ಕುಟುಂಬ ಸಮ್ಮಿಲನ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ವತಿಯಿಂದ ಗುರುವಾರ ಕುಟುಂಬ ಸಮ್ಮಿಲನ ಕಾರ್ಯಕ್ರಮ ಕುಲ್ಕುಂದ ಕುಮಾರಧಾರ ಹೋಂ ಸ್ಟೇ ರೆಸಾರ್ಟಿನಲ್ಲಿ ಜರಗಿತು. ಮುಖ್ಯ ಅತಿಥಿಗಳಾಗಿದ್ದ ಲಯನ್ಸ್ ಜಿಲ್ಲಾ ಎಕ್ಸ್’ಟೆನ್ಷನ್ ಚೇಯರ್ಮೆನ್ ಜಯರಾಮ ದೇರಪ್ಪಜ್ಜನ ಮನೆ ಮಾತನಾಡಿ, ಅಂತರಾಷ್ಟ್ರೀಯ ಲಯನ್ಸ್ ಸಂಸ್ಥೆಯೇ ಒಂದು ದೊಡ್ಡ ಕುಟುಂಬ. ಈ ಕುಟುಂಬದಲ್ಲಿರುವ ಎಲ್ಲಾ ಲಯನ್ಸ್ ಸದಸ್ಯರು ಸೇವಾ ಮನೋಭಾವನೆಯನ್ನು ಹೊಂದಿದ್ದಾರೆ. ಅಶಕ್ತರಿಗೆ, ಅಗತ್ಯ ಉಳ್ಳವರಿಗೆ, ಬಡತನದಲ್ಲಿರುವವರಿಗೆ ಸಹಾಯ ಮಾಡುವುದೇ ನಮ್ಮ ಉದ್ದೇಶ. ಲಯನ್ಸ್ ಸಂಸ್ಥೆಯಲ್ಲಿ ಹಿಂದಿಗಿಂತಲೂ ಅಧಿಕ ಸದಸ್ಯರು ಸೇರ್ಪಡೆಯಾಗುತ್ತಾರೆ. ಸುಬ್ರಮಣ್ಯ

ಸುಬ್ರಹ್ಮಣ್ಯ ಲಯನ್ಸ್ ಕ್ಲಬ್’ನಿಂದ ಕುಟುಂಬ ಸಮ್ಮಿಲನ Read More »

ಕುಮಾರ ಪರ್ವತ ಚಾರಣ ನಿರ್ಬಂಧ ಮುಕ್ತ! | ಬೃಹತ್ ಸಂಖ್ಯೆಯಲ್ಲಿ ಜಮಾಯಿಸಿದ ಚಾರಣಿಗರು

ಸುಬ್ರಹ್ಮಣ್ಯ: ಅರಣ್ಯ ಇಲಾಖೆ ಮೇ ತಿಂಗಳಿನಿಂದ ಕುಕ್ಕೆ ಸುಬ್ರಹ್ಮಣ್ಯದ ಕುಮಾರ ಪರ್ವತ ಚಾರಣಕ್ಕೆ ಹೇರಿದ್ದ ನಿರ್ಬಂಧವನ್ನು ಇದೀಗ ಮುಕ್ತಗೊಳಿಸಿದೆ. ಮೇ ತಿಂಗಳಿನಿಂದ ಕುಕ್ಕೆ ಸುಬ್ರಹ್ಮಣ್ಯದಿಂದ ಕುಮಾರ ಪರ್ವತಕ್ಕೆ ಪ್ರತಿ ವರ್ಷ ಚಾರಣಿಗರ ಸಂಖ್ಯೆ ಜಾಸ್ತಿಯಾಗುತ್ತದೆ. ಈ ವರ್ಷ ಮೇ ತಿಂಗಳಿನಿಂದ ಅರಣ್ಯ ಇಲಾಖೆಯವರು ಚಾರಣಕ್ಕೆ ಪ್ರವಾಸಿಗರಿಗೆ /ಚಾರಣಿಗರಿಗೆ ನಿರ್ಬಂಧ ಗೋಳಿಸಿದ್ದರು. ಇದೀಗ ನಿರ್ಬಂಧ ಮುಕ್ತಗೊಳಿಸಿ ಚಾರಣಿಗರಿಗೆ ಅರಣ್ಯ ಇಲಾಖೆಯವರು ಅವಕಾಶ ನೀಡಿರುತ್ತಾರೆ. ನಿರ್ಬಂಧ ಮುಕ್ತಗೊಳಿಸಿದ ಬೆನ್ನಲ್ಲೇ ಶನಿವಾರ ಬೃಹತ್ ಸಂಖ್ಯೆಯಲ್ಲಿ ಅಂದರೆ ಸುಮಾರು 750ಕ್ಕೂ ಅಧಿಕ ಚಾರಣಿಗರು

ಕುಮಾರ ಪರ್ವತ ಚಾರಣ ನಿರ್ಬಂಧ ಮುಕ್ತ! | ಬೃಹತ್ ಸಂಖ್ಯೆಯಲ್ಲಿ ಜಮಾಯಿಸಿದ ಚಾರಣಿಗರು Read More »

ಎಂ.ಜಿ. ಕಾವೇರಮ್ಮನವರಿಗೆ ಅಚಲ ಪ್ರಕಾಶನದಿಂದ ಅಭಿನಂದನೆ

ಸುಳ್ಯ: ಅರೆಭಾಷೆ ಲೇಖಕಿ ಕಾವೇರಮ್ಮ ಎಂ.ಜಿ. ಅವರಿಗೆ ಸುಳ್ಯದ ಅಚಲ ಪ್ರಕಾಶನದಿಂದ ಅಭಿನಂದನೆ ಸಲ್ಲಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಕಾವೇರಮ್ಮ ಎಂ.ಜಿ. ಅವರು ತನ್ನ ಇಳಿವಯಸ್ಸಿನಲ್ಲಿಯೂ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ವಾಟ್ಸಾಪ್, ಫೇಸ್ಬುಕ್ ಗಳಲ್ಲಿ ವ್ಯವಹರಿಸಿ ಅಪಾರ ಅಭಿಮಾನಿಗಳನ್ನು ಗಳಿಸಿದ್ದಾರೆ. ಅವರ ವಿವಿಧ ಕ್ಷೇತ್ರಗಳ ಸಾಧನೆಗಳನ್ನು ಗಮನಿಸಿ ಅವರ ಸ್ವಗೃಹದಲ್ಲಿ ಸನ್ಮಾನಿಸಲಾಯಿತು. ಅಚಲ ಪ್ರಕಾಶನದ ಅಧ್ಯಕ್ಷ ಚಂದ್ರಶೇಖರ ಬಿಳಿನೆಲೆ ಮತ್ತು ಸಂಚಾಲಕಿ ಡಾ. ಅನುರಾಧಾ ಕುರುಂಜಿ ಸನ್ಮಾನಿಸಿದರು. ಅಂಶಲ್ ಬಿಳಿನೆಲೆ ಮತ್ತು ಅಂಕಣಗಾರ್ತಿ ಚಂದ್ರಾವತಿ ಬಡ್ಡಡ್ಕ

ಎಂ.ಜಿ. ಕಾವೇರಮ್ಮನವರಿಗೆ ಅಚಲ ಪ್ರಕಾಶನದಿಂದ ಅಭಿನಂದನೆ Read More »

ಕರಾವಳಿಯಲ್ಲಿ ಭಾರಿ ಮಳೆಯ ಸೂಚನೆ | ಮೀನುಗಾರರಿಗೆ ಸೂಚನೆ ನೀಡಿದ ಐಎಂಡಿ!!

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯಲ್ಲಿ ಮಳೆ ಅಬ್ಬರಿಸಿದ್ದರೆ, ಒಳನಾಡಿನಲ್ಲಿ ಪ್ರತ್ಯೇಕ ಕಡೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಐಎಂಡಿ (ಭಾರತೀಯ ಹವಾಮಾನ ಇಲಾಖೆ) ಏಳು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಬಳ್ಳಾಪುರ, ಬೆಳಗಾವಿ, ಬೀದರ್, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆ ಇದೆ. ಹೀಗಾಗಿ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯ ಒಂದೆರಡು ಕಡೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ

ಕರಾವಳಿಯಲ್ಲಿ ಭಾರಿ ಮಳೆಯ ಸೂಚನೆ | ಮೀನುಗಾರರಿಗೆ ಸೂಚನೆ ನೀಡಿದ ಐಎಂಡಿ!! Read More »

ಸುಳ್ಯ ವೃತ್ತ ನಿರೀಕ್ಷಕರಾಗಿ ಮೋಹನ್ ಕೊಠಾರಿ ಅಧಿಕಾರ ಸ್ವೀಕಾರ

ಸುಳ್ಯ: ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರಾಗಿ ಮೋಹನ್ ಕೊಠಾರಿ ಅಧಿಕಾರ ಸ್ವೀಕರಿಸಿದ್ದಾರೆ. ಈಗಾಗಲೇ ಸುಳ್ಯ ಠಾಣೆಯಿಂದ ವರ್ಗಾವಣೆಯಾಗಿರುವ ನವೀನ್ ಚಂದ್ರ ಜೋಗಿ ಅವರು ಮೋಹನ್ ಕೊಠಾರಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಮಂಗಳೂರಿನವರಾದ ಕೊಠಾರಿ ಅವರು, ಮಂಗಳೂರಿನಲ್ಲಿ ಇನ್ ಸ್ಪೆಕ್ಟರ್ ಆಗಿದ್ದು, ಇದೀಗ ಸುಳ್ಯ ವೃತ್ತ ನಿರೀಕ್ಷಕರಾಗಿ ನೇಮಕಗೊಂಡಿದ್ದಾರೆ. ಕಳೆದ ಮೂರು ವರ್ಷಗಳಿಂದ ಸುಳ್ಯ ವೃತ್ತ ನಿರೀಕ್ಷಕರಾಗಿದ್ದ ನವೀನ್ ಚಂದ್ರ ಜೋಗಿ ರಾಜ್ಯ ಪೊಲೀಸ್ ಗುಪ್ತಚರ ವಿಭಾಗಕ್ಕೆ ವರ್ಗಾವಣೆಗೊಂಡಿದ್ದಾರೆ.

ಸುಳ್ಯ ವೃತ್ತ ನಿರೀಕ್ಷಕರಾಗಿ ಮೋಹನ್ ಕೊಠಾರಿ ಅಧಿಕಾರ ಸ್ವೀಕಾರ Read More »

ಕಡಬದಲ್ಲಿ ಆನೆ ದಾಳಿ: ಗಾಯಾಳು ಚೋಮ ಆಸ್ಪತ್ರೆಗೆ

ಕಡಬ: ಕಡಬ ತಾಲೂಕಿನ ಮರ್ಧಾಳ ಸಮೀಪದ ನೆಲ್ಯಡ್ಕ ಎಂಬಲ್ಲಿ ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ನಡೆದಿದೆ. ಚೋಮ ಎಂಬವರು ಕಾಡಾನೆ ದಾಳಿಯಿಂದ ಗಾಯಗೊಂಡವರು. ಗಾಯಗೊಂಡ ಚೋಮ ಅವರು ಕಡಬ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇದೀಗ ಪರಿಸರದಲ್ಲಿ ಮತ್ತೆ ಜನರಲ್ಲಿ ಆತಂಕ ಶುರುವಾಗಿದೆ.

ಕಡಬದಲ್ಲಿ ಆನೆ ದಾಳಿ: ಗಾಯಾಳು ಚೋಮ ಆಸ್ಪತ್ರೆಗೆ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ತರಬೇತಿ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಸಮಾಜಶಾಸ್ತ್ರ ವಿಭಾಗ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಘಟಕದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಕ್ರಮ ಬುಧವಾರ ನಡೆಯಿತು. ಮಂಗಳೂರು ಸರ್ವಜ್ಞ ಅಕಾಡೆಮಿ ನಿರ್ದೇಶಕ ಸುರೇಶ್ ಎಂ.ಎಸ್. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ದಿನೇಶ ಪಿ.ಟಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕಿ ಆರತಿ ಕೆ. ಉಪಸ್ಥಿತರಿದ್ದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ, ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಘಟಕದ ಸಂಯೋಜಕ ಮನೋಹರ ಪ್ರಾಸ್ತಾವಿಕವಾಗಿ ಮಾತನಾಡಿದರು. ದೀಕ್ಷಿತ್ ಸ್ವಾಗತಿಸಿದರು. ವಿದ್ಯಾರ್ಥಿ ವಿಜ್ಞೇಶ್

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ತರಬೇತಿ Read More »

ಶ್ರೀ ದೇವಿ ಮಹಾತ್ಮೆ ತುಳುವಿನಲ್ಲಿ `ಸಿರಿ ದೇವಿ ಮೈಮೆ ‘!! | ಮೊದಲ ಪ್ರದರ್ಶನಕ್ಕೂ ಸ್ಥಳ, ದಿನಾಂಕ ನಿಗದಿ

ಮಂಗಳೂರು: ತುಳುವೆರೆ ಆಯನೊ ಕೂಟದ ವತಿಯಿಂದ ಪ್ರಥಮ ಬಾರಿಗೆ ತುಳು ಭಾಷೆಯಲ್ಲಿ ಭಾಗವತಿಕೆ ಸಹಿತ ಶ್ರೀದೇವಿ ಮಹಾತ್ಮೆ ಯಕ್ಷಗಾನವು ‘ಸಿರಿ ದೇವಿ ಮೈಮೆ’ ಎಂಬ ಹೆಸರಿನಲ್ಲಿ ಸೆ. 30ರಂದು ನಗರದ ಪುರಭವನದಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ಕೂಟದ ಅಧ್ಯಕ್ಷೆ ಶಮಿನಾ ಆಳ್ವ ತಿಳಿಸಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಪರಾಹ್ನ 2 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಕೂಟದ 2023-24ನೇ ಸಾಲಿನ ಕಾರ್ಯಕಾರಿ ಸಮಿತಿಯ ಪದಗ್ರಹಣ ನಡೆಯಲಿದೆ. ಕಾರ್ಯಕ್ರಮದಲ್ಲಿ

ಶ್ರೀ ದೇವಿ ಮಹಾತ್ಮೆ ತುಳುವಿನಲ್ಲಿ `ಸಿರಿ ದೇವಿ ಮೈಮೆ ‘!! | ಮೊದಲ ಪ್ರದರ್ಶನಕ್ಕೂ ಸ್ಥಳ, ದಿನಾಂಕ ನಿಗದಿ Read More »

error: Content is protected !!
Scroll to Top