ದಕ್ಷಿಣ ಕನ್ನಡ

ಎಸ್‌ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌

ತಿಮರೋಡಿ, ಮಟ್ಟಣ್ಣವರ್‌ ಸೇರಿ ನಾಲ್ವರ ವಿಚಾರಣೆಗೆ ಎಸ್‌ಐಟಿ ಸಿದ್ಧತೆ ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದ ಮುಂದಿನ ಎಲ್ಲ ಪ್ರಕ್ರಿಯೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದ್ದು ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ನಾಲ್ವರ ವಿಚಾರಣೆ ನಡೆಸಲು ಎಸ್.ಐ.ಟಿ ತಂಡ ಸಿದ್ಧತೆ ನಡೆಸುತ್ತಿದೆ. ಹೈಕೋರ್ಟ್ ಬುಧನಾರ ನೀಡಿದ ಈ ಆದೇಶದಿಂದ ಎಸ್‌ಐಟಿ ತನಿಖೆಗೆ ಹಾಗೂ ಮಹೇಶ್ ಶೆಟ್ಟಿ ಹಾಗೂ ಇತರರ ವಿಚಾರಣೆಗೆ ಇದ್ದ ಅಡೆತಡೆ […]

ಎಸ್‌ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌ Read More »

ಬಂಟ್ವಾಳ : ಅತ್ತೆ ಮನೆಯಲ್ಲಿದ್ದ ಮುಂಬೈಯ ಯುವತಿ ನಾಪತ್ತೆ

ಬಂಟ್ವಾಳ : ಬೆಂಜನಪದವಿನಲ್ಲಿರುವ ಅತ್ತೆಯ ಮನೆಯಲ್ಲಿ ವಾಸವಾಗಿದ್ದ ಮುಂಬೈ ಮೂಲದ ಅವಿವಾಹಿತ ಯುವತಿಯೊಬ್ಬರು ನವೆಂಬರ್ 9ರಿಂದ ಕಾಣೆಯಾಗಿರುವ ಕುರಿತು ದೂರು ದಾಖಲಾಗಿದೆ. ಬೆಂಜನಪದವಿನ ಶಿವಾಜಿನಗರದ ನಿವಾಸಿ ಮರಿಯಾ ಆಲ್ಬರ್ಟ್ ಡಿಸೋಜಾ ನಾಪತ್ತೆಯಾದ ಯುವತಿ. ಮರಿಯಾ ಒಂದು ವರ್ಷದ ಹಿಂದೆ ತನ್ನ ತಾಯಿಯನ್ನು ಕಳೆದುಕೊಂಡಿದ್ದು, ನಂತರ ಬೆಂಜನಪದವಿನಲ್ಲಿರುವ ತನ್ನ ಅತ್ತೆ ಮೊಲ್ಲಿ ಟೆಲ್ಲಿಸ್ ಅವರೊಂದಿಗೆ ವಾಸವಾಗಿದ್ದಳು. ಆಕೆಯ ತಂದೆ ಆಲ್ಬರ್ಟ್ ಡಿಸೋಜಾ ಮುಂಬೈಯಲ್ಲಿ ನೆಲೆಸಿದ್ದಾರೆ. ನವೆಂಬರ್ 9ರಂದು, ಆಕೆಯ ಅತ್ತೆ ಚರ್ಚ್‌ಗೆ ಹೋಗಿದ್ದರು. ಈ ವೇಳೆ ಮರಿಯಾ ಮನೆಯಿಂದ

ಬಂಟ್ವಾಳ : ಅತ್ತೆ ಮನೆಯಲ್ಲಿದ್ದ ಮುಂಬೈಯ ಯುವತಿ ನಾಪತ್ತೆ Read More »

ಮಂಗಳೂರು: ಅಧಿಕ ಲಾಭಾಂಶದ ಆಮಿಷಕ್ಕೆ ಬಲಿಯಾಗಿ 2 ಕೋ. ರೂ. ಕಳೆದುಕೊಂಡ ವ್ಯಕ್ತಿ

ದೂರು ನೀಡಿದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಸಿದ ವಂಚಕರು ಮಂಗಳೂರು : ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿ ಅಧಿಕ ಲಾಭಗಳಿಸಬಹುದು ಎಂದು ಆಮಿಷವೊಡ್ಡಿ 2 ಕೋ.ರೂ. ವಂಚನೆ ಮಾಡಿರುವ ಬಗ್ಗೆ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪರಿಚಿತ ವ್ಯಕ್ತಿಯೊಬ್ಬ 2022ರ ಮೇ 1ರಂದು ವಾಟ್ಸ್‌ಆ್ಯಪ್ ಸಂದೇಶ ಕಳುಹಿಸಿ ತಾನು ಡೆಲ್ಟಿನ್ ರೋಯಲ್ ಕಂಪನಿಯ ಅಂಕಿತ್ ಎಂದು ಪರಿಚಯಿಸಿಕೊಂಡಿದ್ದ. ಆ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ದುಪ್ಪಟ್ಟು ಹಣ ಹಾಗೂ ಲಾಭಾಂಶವನ್ನು ನೀಡುವುದಾಗಿ ತಿಳಿಸಿದ್ದ.

ಮಂಗಳೂರು: ಅಧಿಕ ಲಾಭಾಂಶದ ಆಮಿಷಕ್ಕೆ ಬಲಿಯಾಗಿ 2 ಕೋ. ರೂ. ಕಳೆದುಕೊಂಡ ವ್ಯಕ್ತಿ Read More »

ಡ್ರಗ್ಸ್‌ ದಂಧೆ : ಮೆಡಿಕಲ್‌ ವಿದ್ಯಾರ್ಥಿ ಸೇರಿ ಮೂವರು ಸೆರೆ

ಉಳ್ಳಾಲ: ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಕೋಟೆಕಾರು ಗ್ರಾಮದ ಬಗಂಬಿಲ ಗೌಂಡ್ ಮತ್ತು ಪೆರ್ಮನ್ನೂರು ಗ್ರಾಮದ ಗಂಡಿ ಎಂಬಲ್ಲಿ ನ.9ರಂದು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 59,300 ರೂ. ಬೆಲೆಬಾಳುವ 1.511 ಕೆಜಿ ತೂಕದ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ 2 ತೂಕ ಮಾಪಕ, 2 ಮೊಬೈಲ್, 1 ಸ್ಕೂಟರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಾಸಗಿ ಆಯುರ್ವೇದ ಕಾಲೇಜಿನಲ್ಲಿ ಬಿಎಎಂಎಸ್ ವಿದ್ಯಾರ್ಥಿ ಆಗಿರುವ ಮಹಾರಾಷ್ಟ್ರದ ಧುಲೆ ನಿವಾಸಿ ಮೊಹಮ್ಮದ್ ನಿಗಾರೀಸ್ (22) ವಿಲಾಸಿ ಜೀವನಕ್ಕಾಗಿ

ಡ್ರಗ್ಸ್‌ ದಂಧೆ : ಮೆಡಿಕಲ್‌ ವಿದ್ಯಾರ್ಥಿ ಸೇರಿ ಮೂವರು ಸೆರೆ Read More »

ಜನವರಿ 16ರಿಂದ 25ರ ವರೆಗೆ ಕಾಜೂರು ಉರೂಸ್‌

ಬೆಳ್ತಂಗಡಿ: ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಕಾಜೂರು ಮಖಾಂ ಶರೀಫ್ ಉರೂಸ್ 2026ರ ಜನವರಿ 16 ರಿಂದ 25ರ ವರೆಗೆ ನಡೆಯಲಿದೆ.‌ ಖಾಝಿ ಶೈಖುನಾ ಸುಲ್ತಾನುಲ್ ಉಲಮಾ, ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ನೇತೃತ್ವದಲ್ಲಿ, ಸಯ್ಯಿದ್ ಕಾಜೂರು ತಂಙಳ್ ಮಾರ್ಗದರ್ಶನದೊಂದಿಗೆ ನಡೆಯುವ ಈ ಆಧ್ಯಾತ್ಮಿಕ ಅನುಭೂತಿಯ ಕಾರ್ಯಕ್ರಮಗಳ ಅಧಿಕೃತ ಘೋಷಣೆಯನ್ನು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಗೌರವಾಧ್ಯಕ್ಷರೂ, ಸಮಸ್ತ ಕೇರಳ ಕೇಂದ್ರ ಮುಶಾವರ ಉಪಾಧ್ಯಕ್ಷರೂ ಆದ ಖುದುವತುಸ್ಸಾದಾತ್ ಅಸಯ್ಯಿದ್

ಜನವರಿ 16ರಿಂದ 25ರ ವರೆಗೆ ಕಾಜೂರು ಉರೂಸ್‌ Read More »

ಶಾಲಾ ಬಾಲಕಿಯರಿಗೆ ಕಿರುಕುಳ ನೀಡಿದ ಆಟೋ ಚಾಲಕನ ವಿರುದ್ಧ ಕೇಸ್‌

ಮಂಗಳೂರು: ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ಪ್ರಾಯದ ಇಬ್ಬರು ಬಾಲಕಿಯರಿಗೆ ಆಟೋರಿಕ್ಷಾ ಚಾಲಕ ಕಿರುಕುಳ ನೀಡಿದ ಘಟನೆ ಬೆಳಕಿಗೆ ಬಂದಿದೆ.ಅಪ್ರಾಪ್ತ ಪ್ರಾಯದ ಮಗಳು ಹಾಗೂ ಮತ್ತೊಬ್ಬ ವಿದ್ಯಾರ್ಥಿನಿ ಸ್ಥಳೀಯ ಶಾಲೆಗೆ ಹೋಗುವಾಗ ಕೆಲವು ದಿನಗಳ ಹಿಂದೆ ಅವರು ಶಾಲೆಗೆ ತೆರಳುತ್ತಿದ್ದಾಗ, ಒಬ್ಬ ಅಪರಿಚಿತ ವ್ಯಕ್ತಿ ಆಟೋ ರಿಕ್ಷಾದಲ್ಲಿ ಹಿಂಬಾಲಿಸಿ ಕಿರುಕುಳ ನೀಡಿದ್ದಾನೆ ಎಂದು ಓರ್ವ ಬಾಲಕಿಯ ತಂದೆ ದೂರು ನೀಡಿದ್ದಾರೆ. ಈ ಕಿರುಕುಳ ಮುಂದುವರಿದಿದ್ದು ಅ.8ರಂದು ಬೆಳಗ್ಗೆ ಅದೇ ವ್ಯಕ್ತಿ ಮತ್ತೆ ಆಟೋರಿಕ್ಷಾದಲ್ಲಿ ಬಂದು ಇಬ್ಬರು ಬಾಲಕಿಯರಿಗೆ ಕಿರುಕುಳ

ಶಾಲಾ ಬಾಲಕಿಯರಿಗೆ ಕಿರುಕುಳ ನೀಡಿದ ಆಟೋ ಚಾಲಕನ ವಿರುದ್ಧ ಕೇಸ್‌ Read More »

ಎಂಟು ವರ್ಷದ ಹಿಂದೆ ಕಾಣೆಯಾದ ವಿದ್ಯಾರ್ಥಿಯ ಪತ್ತೆಗೆ ಮನವಿ

ಉಳ್ಳಾಲದ ಕಾಲೇಜಿನಿಂದ ನಾಪತ್ತೆಯಾದ ವಿದ್ಯಾರ್ಥಿ ಮಂಗಳೂರು: ಸುಮಾರು ಎಂಟು ವರ್ಷದ ಹಿಂದೆ ಕಾಣೆಯಾಗಿರುವ ನಗರದ ಕಾಲೇಜೊಂದರ ವಿದ್ಯಾರ್ಥಿಯ ಮಾಹಿತಿ ನೀಡುವಂತೆ ಪೊಲೀಸರು ಸಾರ್ವಜನಿಕರಿಂದ ಮನವಿ ಮಾಡಿದ್ದಾರೆ. 18-04-2018ರಂದು ಉಳ್ಳಾಲ ತಾಲೂಕಿನ ಕೈರಂಗಳ ಗ್ರಾಮದ ಪಿ.ಎ ಕಾಲೇಜಿನ ಪ್ರಾಂಶುಪಾಲ ಅಬ್ದುಲ್ ಶರೀಫ್‌ ಅವರು ಕೊಣಾಜೆ ಪೊಲೀಸ್ ಠಾಣೆಗೆ ನೀಡಿದ ದೂರಿನ ಪ್ರಕಾರ, ಅವರ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿ ಕಾಸರಗೋಡು ಪಚ್ಚಕಾಡ್‌ನ ಸಲೀಂ ಕೆ.ಎಂ ಎಂಬವರ ಪುತ್ರ ಮೊಹಮ್ಮದ್ ಶಾಮೀಲ್ (21) 17-04-2018ರಂದು ಬೆಳಗ್ಗೆ 11.34ಕ್ಕೆ ಕಾಲೇಜಿನ ಪಾರ್ಕಿಂಗ್

ಎಂಟು ವರ್ಷದ ಹಿಂದೆ ಕಾಣೆಯಾದ ವಿದ್ಯಾರ್ಥಿಯ ಪತ್ತೆಗೆ ಮನವಿ Read More »

ಜಾನುವಾರು ಅಕ್ರಮ ಸಾಗಾಟ ಪ್ರಕರಣ : ಜಪ್ತಿ ಮಾಡಿದ ಮನೆ ವಾಪಸು ನೀಡಲು ಆದೇಶ

ಕರು ಮಾರಾಟ ಮಾಡಿದವರ ಮನೆ ಜಪ್ತಿ ಮಾಡಿದ್ದು ಕಾನೂನು ವ್ಯಾಪ್ತಿ ಮೀರಿದ ಕ್ರಮ ಎಂದ ಪುತ್ತೂರು ಎಸಿ ಬೆಳ್ತಂಗಡಿ : ದನ ಮಾರಾಟ ಮಾಡಿದ ಕಾರಣಕ್ಕೆ ಪಟ್ರಮೆ ಗ್ರಾಮದ ಪಟ್ಟೂರಿನಲ್ಲಿ ಮನೆ ಜಪ್ತಿ ಮಾಡಿದ ಪ್ರಕರಣದಲ್ಲಿ ಧರ್ಮಸ್ಥಳ ಪೊಲೀಸರು ಕಾನೂನು ವ್ಯಾಪ್ತಿಯನ್ನು ಮೀರಿರುವುದು ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆಯಲ್ಲಿ ಜೊಹರಾ ಸಾರಮ್ಮ ಅವರ ವಾಸದ ಮನೆಯನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಪುತ್ತೂರು ಸಹಾಯಕ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಅಕ್ರಮವಾಗಿ ಕಾರಿನಲ್ಲಿ ದನ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ ಧರ್ಮಸ್ಥಳ

ಜಾನುವಾರು ಅಕ್ರಮ ಸಾಗಾಟ ಪ್ರಕರಣ : ಜಪ್ತಿ ಮಾಡಿದ ಮನೆ ವಾಪಸು ನೀಡಲು ಆದೇಶ Read More »

ವಂಚಕ ರೋಷನ್‌ ಸಲ್ಡಾನನ 2.85 ಕೋ. ರೂ. ಮೌಲ್ಯದ ಆಸ್ತಿ ಜಪ್ತಿ

ಉದ್ಯಮಿಗಳಿಗೆ ಸಾಲ ಕೊಡಿಸುವುದಾಗಿ ನಂಬಿಸಿ 200 ಕೋ. ರೂ. ವಂಚಿಸಿದ್ದ ಆರೋಪಿ ಮಂಗಳೂರು: ಉದ್ಯಮಿಗಳಿಗೆ ಸಾಲ ಕೊಡಿಸುವುದಾಗಿ ನಂಬಿಸಿ ಕೋಟಿಗಟ್ಟಲೆ ರೂಪಾಯಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಂಚಕ ರೋಷನ್ ಸಲ್ಡಾನನ 2.85 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಮಂಗಳೂರು ಉಪವಲಯ ಕಚೇರಿ ಅಧಿಕಾರಿಗಳು ರೋಷನ್ ಸಲ್ಡಾನನ ಮನೆ ಮತ್ತು ಬ್ಯಾಂಕ್ ಖಾತೆ ಸೇರಿ 2.85 ಕೋಟಿ ರೂ. ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿದ್ದಾರೆ. ರೋಷನ್ ಸಲ್ಡಾನ ಸಾಲ

ವಂಚಕ ರೋಷನ್‌ ಸಲ್ಡಾನನ 2.85 ಕೋ. ರೂ. ಮೌಲ್ಯದ ಆಸ್ತಿ ಜಪ್ತಿ Read More »

ಇಂಟರ್‌ಲಾಕ್‌ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಚಾಲಕ, ನಿರ್ವಾಹಕನಿಗೆ ಗಾಯ

ಸುಳ್ಯ: ಇಂಟರ್‌ಲಾಕ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಚಾಲಕ ಮತ್ತು ನಿರ್ವಾಹಕ ಗಾಯಗೊಂಡ ಘಟನೆ ಸುಳ್ಯ ಅಜ್ಜಾವರ ಗ್ರಾಮದ ಮುಳ್ಯ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮುಳ್ಯದ ಯತೀಶ್ ಎಂಬವರ ಹೊಸ ಮನೆಯ ಅಂಗಳಕ್ಕೆ ಅಳವಡಿಸಲು ಇಂಟರ್‌ಲಾಕ್ ತುಂಬಿಕೊಂಡು ಹೋಗುತ್ತಿರುವಾಗ ಲಾರಿ ಪಲ್ಟಿಯಾಗಿದೆ.ಘಟನೆಯಲ್ಲಿ ಚಾಲಕ ಮತ್ತು ನಿರ್ವಾಹಕರಿಬ್ಬರು ಗಾಯಗೊಂಡಿದ್ದಾರೆ. ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ನಿರ್ವಾಹಕ ನವೀನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂಟರ್‌ಲಾಕ್‌ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಚಾಲಕ, ನಿರ್ವಾಹಕನಿಗೆ ಗಾಯ Read More »

error: Content is protected !!
Scroll to Top