ದಕ್ಷಿಣ ಕನ್ನಡ

ಬೆಳ್ಳಾರೆ ಮಸೂದ್ ಕೊಲೆ ಪ್ರಕರಣ | ಜೈಲಿನಲ್ಲಿದ್ದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್‍ ನಿಂದ ಜಾಮೀನು

ಮಂಗಳೂರು: ಸುಳ್ಯದ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಜೈಲು ಸೇರಿದ್ದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ನೀಡಿದೆ. 2022 ರ ಜುಲೈಯಲ್ಲಿ ಬೆಳ್ಳಾರೆ ಸಮೀಪದ ಕಳೆಂಜ ಎಂಬಲ್ಲಿ ಮಸೂದ್ ಕೊಲೆ ಕೃತ್ಯ ನಡೆದಿತ್ತು. ಎಂಟು ಆರೋಪಿಗಳ ಪೈಕಿ ಅಭಿಲಾಷ್ ಮತ್ತು ಸುನಿಲ್ ಇವರಿಗೆ ಈಗ ಜಾಮೀನು ಲಭಿಸಿದೆ. ಆರು ಮಂದಿಗೆ ಈ ಮೊದಲೇ ಜಾಮೀನು ಸಿಕ್ಕಿತ್ತು. ಜಾಮೀನು ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ, […]

ಬೆಳ್ಳಾರೆ ಮಸೂದ್ ಕೊಲೆ ಪ್ರಕರಣ | ಜೈಲಿನಲ್ಲಿದ್ದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್‍ ನಿಂದ ಜಾಮೀನು Read More »

ನಾಡು ನುಡಿಯ ಅಭಿಮಾನ ಹೊಂದುವುದು ಮನದಾಳದ ಸಂಕಲ್ಪವಾಗಲಿ | ಎಸ್‌ಎಸ್‌ಪಿಯು ಕಾಲೇಜಿನ ಕನ್ನಡ ರಾಜ್ಯೋತ್ಸವ ದಿನಾಚರಣೆಯಲ್ಲಿ ಸೋಮಶೇಖರ್ ನಾಯಕ್

ಸುಬ್ರಹ್ಮಣ್ಯ: ಸ್ಪರ್ಧಾತ್ಮಕ ಜಗತ್ತಿನಲ್ಲಿ ಬಹು ಭಾಷೆಗಳಲ್ಲಿ ಪರಿಣಿತರಾದರೆ ಮಾತ್ರ ಯಶ ಗಳಿಸಲು ಸಾಧ್ಯ. ನಾವು ನಮ್ಮ ನಾಡಭಾಷೆಯ ಬಗ್ಗೆ ಪ್ರೀತಿಯನ್ನು ಬೆಳೆಸಿಕೊಳ್ಳಬೇಕು. ಕನ್ನಡವನ್ನು ಪ್ರೀತಿಸುತ್ತಾ ಇತರ ಭಾಷೆಗಳ ಮೇಲೆ ಅಭಿಮಾನ ಹೊಂದಬೇಕು. ನಾಡು ನುಡಿಯ ಮೇಲೆ ಅಭಿಮಾನ ಹೊಂದುವುದು ಮನದಾಳದ ಸಂಕಲ್ಪವಾಗಬೇಕು ಎಂದು ಎಸ್ ಎಸ್‌ಪಿಯು ಕಾಲೇಜಿನ ಪ್ರಾಂಶುಪಾಲ ಸೋಮಶೇಖರ ನಾಯಕ್ ಹೇಳಿದರು. ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾದ ಆಡಳಿತಕ್ಕೊಳಪಟ್ಟ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು

ನಾಡು ನುಡಿಯ ಅಭಿಮಾನ ಹೊಂದುವುದು ಮನದಾಳದ ಸಂಕಲ್ಪವಾಗಲಿ | ಎಸ್‌ಎಸ್‌ಪಿಯು ಕಾಲೇಜಿನ ಕನ್ನಡ ರಾಜ್ಯೋತ್ಸವ ದಿನಾಚರಣೆಯಲ್ಲಿ ಸೋಮಶೇಖರ್ ನಾಯಕ್ Read More »

ಅಪ್ರಾಪ್ತ ಬಾಲಕಿಯ ಅತ್ಯಾಚಾರ | ಆಟೋ ಚಾಲಕನ ಬಂಧನ !

ಸುಬ್ರಹ್ಮಣ್ಯ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆಟೋ ಚಾಲಕನೊಬ್ಬನ ಮೇಲೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕಿನ ಬೆಳ್ಳಾರೆಯ ಆಟೋ ಚಾಲಕ ಮಹೇಶ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿರುವುದು. ಈತ ಪಂಜದ ಪಿಯುಸಿ ವಿದ್ಯಾರ್ಥಿನಿಯೋರ್ವಳನ್ನು ಪ್ರೀತಿಸುವ ನಾಟಕವಾಡಿ ಪುಸಲಾಯಿಸಿ ಲಾಡ್ಜ್‍ ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿ ಬಳಿಕ ವಂಚಿಸಿದ್ದಾನೆ ಎಂದು ಪೋಷಕರು ಆರೋಪಿಸಿದ್ದರು. ಈ ಕುರಿತು ಠಾಣೆಗೆ ದೂರು ನೀಡಿದ್ದರು. ಇದೀಗ ಆರೋಪಿಯನ್ನು ವಶಕ್ಕೆ ಪಡೆದುಕೊಂಡು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು

ಅಪ್ರಾಪ್ತ ಬಾಲಕಿಯ ಅತ್ಯಾಚಾರ | ಆಟೋ ಚಾಲಕನ ಬಂಧನ ! Read More »

ಉಜಿರೆ ಎಸ್‍ಡಿಎಂ ಪಾಲಿಟೆಕ್ನಿಕ್‍ನಲ್ಲಿ ‘ಗೃಹ ಟೆಕ್ನಿಕಲ್ ಎಕ್ಸ್ಪೋ’

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗವು ‘ಗೃಹ ‘ಟೆಕ್ನಿಕಲ್ ಎಕ್ಸ್ಪೋ’ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಆಯೋಜಿಸಿತ್ತು. ಮುಖ್ಯ ಅತಿಥಿಯಾಗಿ ಇಂಜಿನಿಯರ್ ವಿಜಯ ವಿಷ್ಣು ಮಯ್ಯ ಮಾತನಾಡಿ, ಭವಿಷ್ಯದ ಸಿವಿಲ್ ಇಂಜಿನಿಯರಿಂಗ್ ಕ್ಷೇತ್ರದ ಅವಶ್ಯಕತೆಯನ್ನು ಹಾಗೂ ಯುವ ಎಂಜಿನೀಯರುಗಳಿಗೆ    ಶಿಸ್ತು ಮತ್ತು ಕೌಶಲ್ಯಗಳ ಅಗತ್ಯತೆಯನ್ನು ವಿವರಿಸಿದರು . ಇನ್ನೋರ್ವ ಅತಿಥಿಯಾಗಿ ಕಾಂತಾರ ಖ್ಯಾತಿಯ ನಟ ದೀಪಕ್ ರೈ  ಪಾಣಾಜೆ, ಇಂಜಿನಿಯರ್ ಜಗದೀಶ್ ಪ್ರಸಾದ್ ಯುವ ಇಂಜಿನಿಯರ್ ಗಳಿಗೆ ಶುಭಹಾರೈಸಿದರು. ಎಸ್ ಡಿ ಎಂ ಶಿಕ್ಷಣ

ಉಜಿರೆ ಎಸ್‍ಡಿಎಂ ಪಾಲಿಟೆಕ್ನಿಕ್‍ನಲ್ಲಿ ‘ಗೃಹ ಟೆಕ್ನಿಕಲ್ ಎಕ್ಸ್ಪೋ’ Read More »

ಯಕ್ಷಗಾನ ಹಾಸ್ಯ ಕಲಾವಿದ ಪೆರುವೋಡಿ ನಾರಾಯಣ ಭಟ್ ಇನ್ನಿಲ್ಲ

ಪೆರುವೋಡಿ: ಯಕ್ಷಗಾನದ ಹಿರಿಯ ಹಾಸ್ಯ ಕಲಾವಿದ ಪೆರುವೋಡಿ ನಾರಾಯಣ ಭಟ್ (96) ಮಂಗಳವಾರ ನಿಧನರಾದರು. ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ  ಪದ್ಯಾಣದಲ್ಲಿ 1927 ರಲ್ಲಿ ಜನಿಸಿದ ಪೆರುವೋಡಿ ಪ್ರಸಿದ್ಧ ಧರ್ಮಸ್ಥಳ ಮೇಳಕ್ಕೆ ಸೇರಿ ಹಲವಾರು ಮೇಳಗಳಲ್ಲಿ ಕಲಾವಿದರಾಗಿ ಸೇವೆ ಸಲ್ಲಿಸಿದ್ದಾರೆ. ಪಾಪಣ್ಣ ಭಟ್ರು ಎಂದೇ ಖ್ಯಾತಿ ಪಡೆದ ನಾರಾಯಣ ಭಟ್ ಅವರು ಯಕ್ಷಗಾನದ ಹಾಸ್ಯ ಪಾತ್ರಗಳಿಗೆ ವಿಶೇಷ ಮಾನ, ಮಾನ್ಯತೆ ತಂದು ಕೊಟ್ಟಿದ್ದಾರೆ. ‘ಪಾಪಣ್ಣ ವಿಜಯ’ ಪ್ರಸಂಗದ ಪಾಪಣ್ಣ ಪಾತ್ರದ ವಿನ್ಯಾಸ ಹಾಗೂ ಪಾತ್ರಾಭಿವ್ಯಕ್ತಿಯ ಮೂಲಕ ತಮ್ಮ ಕಲ್ಪನಾಶಕ್ತಿಯನ್ನು

ಯಕ್ಷಗಾನ ಹಾಸ್ಯ ಕಲಾವಿದ ಪೆರುವೋಡಿ ನಾರಾಯಣ ಭಟ್ ಇನ್ನಿಲ್ಲ Read More »

ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಬಿಡುಗಡೆ ಮಾಡಿದ ರಾಜ್ಯ ಸರಕಾರ | ದ.ಕ.ಜಿಲ್ಲೆಯ ನಾಲ್ವರು ಪ್ರಶಸ್ತಿಗೆ ಆಯ್ಕೆ

ಬೆಂಗಳೂರು: ರಾಜ್ಯದ ಪ್ರಮುಖ ಸಾಹಿತಿಗಳು, ತೆರೆಮರೆಯ ಸಾಧಕರು, ಸಮಾಜ ಸೇವಕರು ಸೇರಿದಂತೆ 68 ಸಾಧಕರಿಗೆ 2023-24ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರಕಾರ ಘೋಷಣೆ ಮಾಡಿದ್ದು, ದ.ಕ.ಜಿಲ್ಲೆಯ ನಾಲ್ವರಿಗೆ ಪ್ರಶಸ್ತಿ ಘೋಷಣೆ ಮಾಡಿದೆ. ಕನ್ನಡ ನಾಡಿನ ಪರವಾಗಿ ಗಣನೀಯ ಸೇವೆ ಸಲ್ಲಿಸಿದ 10 ಸಂಘ-ಸಂಸ್ಥೆಗಳನ್ನೂ ಸರಕಾರ ಗುರುತಿಸಿದೆ. ಪತ್ರಕರ್ತರಾದ ದಿನೇಶ್ , ಚಾರ್ಮಾಡಿ ಹಸನಬ್ಬ, ಹಾಜಿ ಅಬ್ದುಲ್ಲ ಪರ್ಕಳ, ಕೆ. ಷರೀಫಾ, ಹುಸೇನಾಬಿ ಬುಡೇನ್ ಸಾಬ್ ಸೇರಿದಂತೆ ಹಲವರು ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇನ್ನು 10 ಸಂಘ-

ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಬಿಡುಗಡೆ ಮಾಡಿದ ರಾಜ್ಯ ಸರಕಾರ | ದ.ಕ.ಜಿಲ್ಲೆಯ ನಾಲ್ವರು ಪ್ರಶಸ್ತಿಗೆ ಆಯ್ಕೆ Read More »

ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಗೆ ಕೇಂದ್ರದ ಅನುಮತಿ | ಟೆಂಡರ್ ಕರೆದ ರಾಷ್ಟ್ರೀಯ ಹೆದ್ದಾರಿ ಇಲಾಖೆ

ಮಂಗಳೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ಧಾರಿ ಚತುಷ್ಪತ ಕಾಮಗಾರಿಗೆ ಕೇಂದ್ರದ ಅನುಮತಿ, ಡಿ.ಪಿ.ಆರ್ ಹಾಗೂ ಸಾಧ್ಯತಾ ವರದಿ ತಯಾರಿಸಲು ಟೆಂಡರ್ ಕರೆದ ರಾಷ್ಟ್ರೀಯ ಹೆದ್ದಾರಿ ಇಲಾಖೆ ಟೆಂಡರ್ ಕರೆದಿದೆ. ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮನವಿ ಮೇರೆಗೆ ಬಹು ನಿರೀಕ್ಷಿತ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ 275 ರ (ಮಾಣಿ-ಮೈಸೂರು-ಬೆಂಗಳೂರು ವಿಭಾಗ) 0.00 ಕಿ.ಮೀ. ನಿಂದ 71.60 ವರೆಗಿನ ರಸ್ತೆಯ ಚತುಷ್ಪಥ ಕಾಮಗಾರಿಗೆ ಯೋಜನಾ ವರದಿ (ಡಿಪಿಆರ್), ಕಾರ್ಯಸಾಧ್ಯತೆಯ ಅಧ್ಯಯನ, ಸಮೀಕ್ಷೆ ಮತ್ತು ಭೂ ಯೋಜನೆಯನ್ನು ಸಿದ್ಧಪಡಿಸಲು ಅರ್ಹ

ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಗೆ ಕೇಂದ್ರದ ಅನುಮತಿ | ಟೆಂಡರ್ ಕರೆದ ರಾಷ್ಟ್ರೀಯ ಹೆದ್ದಾರಿ ಇಲಾಖೆ Read More »

ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಡಾ.ಮೋಹನ್ ಆಳ್ವರ ತಂದೆ ಆನಂದ ಆಳ್ವ ನಿಧನ

ಮಂಗಳೂರು : ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಧ್ಯಕ್ಷ ಡಾ. ಮೋಹನ್ ಆಳ್ವರ ತಂದೆ ಆನಂದ ಆಳ್ವ (106) ತಮ್ಮ ಸ್ವಗೃಹದಲ್ಲಿ ಇಂದು ನಿಧನರಾಗಿದ್ದಾರೆ. ಆನಂದ ಆಳ್ವ ಇಳಿ ವಯಸ್ಸಿನಲ್ಲೂ ಅತ್ಯಂತ ಕ್ರೀಯಾಶೀಲರಾಗಿ ಗುರುತಿಸಿಕೊಂಡಿದ್ದರು. ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆಯುವ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲೂ ಮುಂಚೂಣಿಯಲ್ಲಿ ಭಾಗವಹಿಸುವ ಕೆಲವೇ ಮಂದಿಗಳಲ್ಲಿ ಆನಂದ ಆಳ್ವರೂ ಒಬ್ಬರಾಗಿದ್ದಾರೆ. ದೇವಸ್ಥಾನಗಳ ಜೀರ್ಣೋದ್ಧಾರ ಸೇರಿದಂತೆ ಹಲವು ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಆನಂದ ಆಳ್ವ ಮೂಡಬಿದಿರೆ ಪರಿಸರದಲ್ಲಿ ಜನಾನುರಾಗಿಯಾಗಿ

ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಡಾ.ಮೋಹನ್ ಆಳ್ವರ ತಂದೆ ಆನಂದ ಆಳ್ವ ನಿಧನ Read More »

ಸುಳ್ಯ ಉಬರಡ್ಕ ನಿವಾಸಿ ಅವಿನಾಶ್ ನಾಪತ್ತೆ | ಪ್ರಕರಣ ದಾಖಲು

ಸುಳ್ಯ: ತಾಲೂಕಿನ ಉಬರಡ್ಕ ಗ್ರಾಮದ ಸೂಂತೋಡು ನಿವಾಸಿ ಅವಿನಾಶ್ ಭಂಡಾರ (39) ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿರುವ ಕುರಿತು ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಅವಿನಾಶ್ ಅವರು ಅ.29 ರಂದು ಬೆಳಿಗ್ಗೆ ಕೆಲಸಕ್ಕೆಂದು ಮನೆಯಿಂದ ಹೋಗಿದ್ದವರು ಹಿಂತಿರುಗಿ ಬರಲಿಲ್ಲ ಎಂದು ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಅವರನ್ನು ಯಾರಾದರು ಕಂಡಲ್ಲಿ ಸುಳ್ಯ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುಳ್ಯ ಉಬರಡ್ಕ ನಿವಾಸಿ ಅವಿನಾಶ್ ನಾಪತ್ತೆ | ಪ್ರಕರಣ ದಾಖಲು Read More »

ಹಿರಿಯಡ್ಕದ ಸಂತೋಷ್ ನೇಣು ಬಿಗಿದು ಆತ್ಮಹತ್ಯೆ

ಹಿರಿಯಡ್ಕ: ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರಿಯಡ್ಕದಲ್ಲಿ ನಡೆದಿದೆ. ಹರಿಖಂಡಿಗೆಯ ಸಂತೋಷ್ (38) ಈ ಕೃತ್ಯ ಎಸಗಿದವರು. ಸರಿಯಾದ ಕೆಲಸ ಇಲ್ಲದೆ ಮಾಡಿದ ಸಾಲ ಮರುಪಾವತಿಸಲು ಆಗದ ಚಿಂತೆಯಲ್ಲಿ ಮಾನಸಿಕವಾಗಿ ನೊಂದು ಮನೆಯ ಬಾವಿಯ ರಾಟೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ. ಈ ಕುರಿತು ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿರಿಯಡ್ಕದ ಸಂತೋಷ್ ನೇಣು ಬಿಗಿದು ಆತ್ಮಹತ್ಯೆ Read More »

error: Content is protected !!
Scroll to Top