ದಕ್ಷಿಣ ಕನ್ನಡ

ಸುಳ್ಯದ ವಿವಾಹಿತೆ ಬೆಂಗಳೂರಿನಲ್ಲಿ ಆತ್ಮಹತ್ಯೆ

ಸುಳ್ಯ: ಉದ್ಯಮಿಯೊಬ್ಬರ ಸೊಸೆ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಡೈರಿ ರಿಚ್ ಐಸ್‍ ಕ್ರೀಂ ಉದ್ಯಮಿ ಕನಕಮಜಲಿನ ಗಿರಿಯಪ್ಪ ಗೌಡರ ಸೊಸೆ, ರಾಜೇಶ್ ಎಂಬವರ ಪತ್ನಿ ಐಶ್ವರ್ಯ (26) ಈ ಕೃತ್ಯ ಎಸಗಿದವರು. ಉಬರಡ್ಕ ಮಿತ್ತೂರು ಗ್ರಾಮದ ಮದುವೆಗದ್ದೆ ಸುಬ್ರಹ್ಮಣ್ಯ ಗೌಡ ಹಾಗೂ ಉಷಾ ದಂಪತಿ ಪುತ್ರಿಯಾಗಿರುವ ಐಶ್ವರ್ಯ ನಾಲ್ಕು ವರ್ಷಗಳ ಹಿಂದೆ ರಾಜೇಶ್‍ ಅವರನ್ನು ವಿವಾಹವಾಗಿದ್ದು, ಬೆಂಗಳೂರಿನ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದರು. ಪತಿ ರಾಜೇಶ್ ಐಸ್‍ ಕ್ರೀಂ ಪಾರ್ಲರ್ ನಡೆಸಿಕೊಂಡು ಬೆಂಗಳೂರಿನಲ್ಲೇ ವಾಸವಾಗಿದ್ದರು. ಅವರ ತಾಯಿಯೂ […]

ಸುಳ್ಯದ ವಿವಾಹಿತೆ ಬೆಂಗಳೂರಿನಲ್ಲಿ ಆತ್ಮಹತ್ಯೆ Read More »

ಹುಲಿ ವೇಷದ ತಂಡಗಳ ವಿಚಾರಕ್ಕೆ ಗಲಾಟೆ: ಮೂವರಿಗೆ ಚೂರಿ ಇರಿತ | ಮೆಲ್ಕಾರ್ ನಲ್ಲಿ ಘಟನೆ

ಬಂಟ್ವಾಳ: ಹುಲಿ ವೇಷದ ತಂಡಗಳ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಮೂವರಿಗೆ ಚೂರಿ ಇರಿತವಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೋಳಂಗಡಿ ನಿವಾಸಿಗಳಾದ ದೇವದಾಸ್, ಸಂದೀಪ್, ಶಂಕರ್ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರು. ಶೋಧನ್, ಯತೀಶ್, ಚೇತನ್, ಪ್ರಸನ್ನ, ಪ್ರದೀಪ್ ಮತ್ತು ಪ್ರಕಾಶ್ ತಂಡದವರು ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ. ಮೆಲ್ಕಾರ್ ನಲ್ಲಿ ಎರಡು ತಂಡಗಳ ನಡುವೆ ಕೆಲ ದಿನಗಳ ಹಿಂದೆ ನಡೆದಿದ್ದ ಜಗಳ ನಡೆದಿತ್ತು. ನಿನ್ನೆ ತಂಡಗಳ ನಡುವೆ ಕಲಹ ಮುಂದುವರಿದು ಮೂವರ ಮೇಲೆ ಮತ್ತೊಂದು

ಹುಲಿ ವೇಷದ ತಂಡಗಳ ವಿಚಾರಕ್ಕೆ ಗಲಾಟೆ: ಮೂವರಿಗೆ ಚೂರಿ ಇರಿತ | ಮೆಲ್ಕಾರ್ ನಲ್ಲಿ ಘಟನೆ Read More »

ಕಾವೇರುತ್ತಿರುವ ಹುಲಿಉಗುರು ಪೆಂಡೆಂಟ್ ಧಾರಣೆ ಪ್ರಕರಣ | ವನ್ಯಜೀವಿ ಅಂಗಗಳ ಸಂಗ್ರಹ ಪ್ರಕರಣ ತನಿಖೆಗೆ ವಿಶೇಷ ತಂಡ ರಚನೆ

ಮಂಗಳೂರು: ಹುಲಿಉಗುರು ಪ್ರಕರಣ ದಿನದಿಂದ ದಿನಕ್ಕೆ ಕಾವೇರುತ್ತಿದ್ದಂತೆ ವನ್ಯಜೀವಿ ಹಾಗೂ ಅದರ ಅಂಗಗಳ ಸಂಗ್ರಹ ಪ್ರಕರಣದ ತನಿಖೆಗೆ ವನ್ಯಜೀವಿ ಸಂರಕ್ಷಣಾಧಿಕಾರಿಗಳನ್ನು ಒಳಗೊಂಡ ಮೂರು ಸದಸ್ಯರ ಸಮಿತಿಯನ್ನು ಅರಣ್ಯ ಇಲಾಖೆ ರಚಿಸಿ ಸೂಕ್ತ ಕ್ರಮಕ್ಕೆ ಇದೀಗ ಮುಂದಾಗಿದೆ. ಈ ಕುರಿತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ ಹೊರಡಿಸಿದ್ದಾರೆ. ಈಗಾಗಲೇ ಸೆಲೆಬ್ರಿಟಿಗಳು ಸೇರಿದಂತೆ ಮತ್ತಿತರರು ಹುಲಿಉಗುರು ಪೆಂಡೆಂಟ್  ಧರಿಸಿರುವುದು ಕಂಡು ಬಂದಿದ್ದು, ಇದು ಕಾನೂನು ಪ್ರಕಾರ ಅಪರಾಧವಾಗಿರುವುದರಿಂದ ಪ್ರಾಣಿಗಳ ವಧೆ ಮಾಡಿ ಅಂಗಾಂಗ ಸಂಗ್ರಹದಂತಹ ಪ್ರಕರಣವನ್ನು ತನಿಖೆಗೊಳಪಡಿಸಿ ಸೂಕ್ತ

ಕಾವೇರುತ್ತಿರುವ ಹುಲಿಉಗುರು ಪೆಂಡೆಂಟ್ ಧಾರಣೆ ಪ್ರಕರಣ | ವನ್ಯಜೀವಿ ಅಂಗಗಳ ಸಂಗ್ರಹ ಪ್ರಕರಣ ತನಿಖೆಗೆ ವಿಶೇಷ ತಂಡ ರಚನೆ Read More »

ನಾರ್ಯ ಪರಿಸರದಲ್ಲಿ ಚಿರತೆ ಓಡಾಟ : ಸ್ಥಳೀಯರಲ್ಲಿ ಭೀತಿ

ಉಜಿರೆ : ಉಜಿರೆ ಸಮೀಪದ ಕನ್ಯಾಡಿ-2ಗ್ರಾಮದ ನಾರ್ಯ ಮೂರು ಮಾರ್ಗ ಎಂಬಲ್ಲಿ ಬುಧವಾರ ರಾತ್ರಿ ಚಿರತೆ ಕಂಡು ಬಂದಿದ್ದು, ಸ್ಥಳೀಯ ಜನತೆ ಭಯಭೀತರಾಗಿದ್ದಾರೆ. ರಾತ್ರಿ ಸಮಯ ಈ ರಸ್ತೆಯಲ್ಲಿ ಪಾಣೇಲಿನ ವ್ಯಕ್ತಿಗೆ ಚಿರತೆ ಕಂಡು ಬಂದಿದೆ ಎಂದು ಹೇಳಲಾಗಿದ್ದು, ಚಿರತೆಯ ಚಿತ್ರ ಸೆರೆಹಿಡಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಾರ್ಯ ಪರಿಸರದಲ್ಲಿ ಹಲವು ಮನೆಗಳು ಇದ್ದು ಇಲ್ಲಿನ ಮಂದಿ ಚಿರತೆ ಓಡಾಟದಿಂದ ಭೀತರಾಗಿದ್ದಾರೆ.  ಈ ಭಾಗದಲ್ಲಿ ಧರ್ಮಸ್ಥಳ ಮೀಸಲು ಅರಣ್ಯ ಹಾಗೂ ಬೆಳಾಲು ವ್ಯಾಪ್ತಿಯ ದಡಂತಮಲೆ ಅರಣ್ಯ ಪ್ರದೇಶ

ನಾರ್ಯ ಪರಿಸರದಲ್ಲಿ ಚಿರತೆ ಓಡಾಟ : ಸ್ಥಳೀಯರಲ್ಲಿ ಭೀತಿ Read More »

ಚಂದ್ರಗ್ರಹಣ : ಕುಕ್ಕೆ ಕ್ಷೇತ್ರದಲ್ಲಿ ದರ್ಶನ ಸಮಯದಲ್ಲಿ ಬದಲಾವಣೆ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅ.28ರಂದು ಶನಿವಾರ ಚಂದ್ರಗ್ರಹಣ ಇರುವುದರಿಂದ ಶ್ರೀ ದೇವಳದ ಪ್ರಧಾನ ಅರ್ಚಕರ ನಿರ್ದೇಶನದಂತೆ ಭಕ್ತಾಧಿಗಳಿಗೆ ಶ್ರೀ ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಅ.28ರಂದು ಶನಿವಾರ ರಾತ್ರಿ ಮಹಾಪೂಜೆ ಸಾಯಂಕಾಲ ಗಂಟೆ 6.30ಕ್ಕೆ ಮುಕ್ತಾಯಗೊಳ್ಳಲಿದೆ. ಆ ಬಳಿಕ ಶ್ರೀ ದೇವರ ದರುಶನಕ್ಕೆ ಅವಕಾಶ ಇರುವುದಿಲ್ಲ. ಅಲ್ಲದೆ ಈ ದಿನ ಸಾಯಂಕಾಲ ಸಂಜೆಯ ಆಶ್ಲೇಷ ಬಲಿ ಸೇವೆ ನೆರವೇರುವುದಿಲ್ಲ. ರಾತ್ರಿ ಪ್ರಸಾದ ಬೋಜನ ಪ್ರಸಾದ ವಿತರಣೆ ಇರುವುದಿಲ್ಲ ಎಂದು ಶ್ರೀ ದೇವಳದ

ಚಂದ್ರಗ್ರಹಣ : ಕುಕ್ಕೆ ಕ್ಷೇತ್ರದಲ್ಲಿ ದರ್ಶನ ಸಮಯದಲ್ಲಿ ಬದಲಾವಣೆ Read More »

ವೇಷ ಧರಿಸಿ ಧನಸಂಗ್ರಹ : ಮಾನವೀಯತೆ ಮೆರೆದ ಯುವಕರು

ಸುಳ್ಯ: ಕಳೆದ ಮೂವತ್ತು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಚಾಂದಿನಿ ಅವರ ಚಿಕಿತ್ಸೆಗಾಗಿ ಸುಳ್ಯದ ಯುವಕರು ಸೇರಿಕೊಂಡು ನವರಾತ್ರಿ ಸಮಯದಲ್ಲಿ ವಿವಿಧ ವೇಷ ಧರಿಸಿ ಪುತ್ತೂರಿನಿಂದ ಸುಳ್ಯದವರೆಗೆ ರಸ್ತೆ ಬದಿ ಧನಸಂಗ್ರಹ ಮಾಡಿ ಹೀಗೊಂದು ಮಾನವೀಯತೆ ಮೆರೆದಿದ್ದಾರೆ. ಕನಕಮಜಲಿನ ಶ್ರೀ ಆತ್ಮಾರಾಮ ಭಜನಾ ಮಂದಿರದಿಂದ ವೇಷ ಧರಿಸಿ ಜೀಪಿನಲ್ಲಿ ಹೊರಟ ಸ್ವಸ್ತಿಕ್ ನರಿಯೂರು, ಸ್ವಪ್ನಿತ್ ನರಿಯೂರು, ನವೀನ್ ಅಡ್ಯಾರು, ತುಷಾರ್ ಕಣಜಾಲು ಹಾಗೂ ಪುನೀತ್ ಸಂಕೇಶ ಎಂಬ ಯುವಕರ ತಂಡ ಚಂಡ ಮುಂಡ, ಋಷಿ, ಹಿಡಿಂಬೆ ಹಾಗೂ ಬೇತಾಳ

ವೇಷ ಧರಿಸಿ ಧನಸಂಗ್ರಹ : ಮಾನವೀಯತೆ ಮೆರೆದ ಯುವಕರು Read More »

ಮಾಲಕರ ವಿಶ್ವಾಸ ಗಿಟ್ಟಿಸಿದ್ದ ಕೆಲಸದವನಿಂದಲೇ ಭಾರೀ ಕಳ್ಳತನ!

ಬಂಟ್ವಾಳ: ಬಿಲ್ಡರ್ ಓರ್ವರ ಮನೆಯ ಕೆಲಸಕ್ಕಿದ್ದಾತ ಲಕ್ಷಾಂತರ ರೂ ಮೌಲ್ಯದ ನಗ ಹಾಗೂ ನಗದನ್ನು ಕಳುವು ಮಾಡಿ ಪರಾರಿಯಾಗಿರುವ ಘಟನೆ ಫರಂಗಿಪೇಟೆ ಎಂಬಲ್ಲಿ ನಡೆದಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪುದು ಗ್ರಾಮದ ಕೋಡಿಮಜಲು ನಿವಾಸಿಯಾಗಿರುವ ಇಮಾದ್ ಬಿಲ್ಡರ್ ಮಾಲಕ ಮೊಹಮ್ಮದ್ ಝಫರುಲ್ಲಾ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಕಪಾಟಿನೊಳಗೆ ಇರಿಸಲಾಗಿದ್ದ ಲಕ್ಷಾಂತರ ಬೆಲೆ ಬಾಳುವ ಚಿನ್ನಾಭರಣ ಸಹಿತ ಲಕ್ಷಾಂತರ ರೂ ಹಣವನ್ನು ಮನೆಯ ಕೆಲಸದಾತನೇ ಕದ್ದುಕೊಂಡು ಹೋಗಿರುವುದಾಗಿ ಪೋಲೀಸರಿಗೆ ದೂರು ನೀಡಲಾಗಿದೆ. ಸುಮಾರು 2,75,0000

ಮಾಲಕರ ವಿಶ್ವಾಸ ಗಿಟ್ಟಿಸಿದ್ದ ಕೆಲಸದವನಿಂದಲೇ ಭಾರೀ ಕಳ್ಳತನ! Read More »

ಕದ್ರಿ: ವೀಸಾ ಅವಧಿ ಮೀರಿದ ಆರೋಪದಡಿ ವಿದೇಶಿಯರು ವಶಕ್ಕೆ!

ಮಂಗಳೂರು: ವೀಸಾ ಅವಧಿ ಮೀರಿದ ಬಳಿಕವೂ ನಗರದಲ್ಲಿ ವಾಸವಾಗಿದ್ದ ಇಬ್ಬರು ವಿದೇಶಿಯರನ್ನು ಕದ್ರಿ ಪೊಲೀಸರು ವಶಕ್ಕೆ ಪಡೆದಿರುವುದಾಗಿ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಘಾನಾ ದೇಶದ ಸಲಾಂ ಕ್ರಿಸ್ಟೆನ್ ಮತ್ತು ನೈಜೀರಿಯಾದ ಅಂಕಿತೋಲ ವೀಸಾ ಅವಧಿ ಮೀರಿದ ಬಳಿಕವೂ ನಗರದಲ್ಲಿ ಉಳಕೊಂಡಿದ್ದರು ಎನ್ನಲಾಗಿದೆ. ‌ ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಗೆ ಹಸ್ತಾಂತರಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಕದ್ರಿ: ವೀಸಾ ಅವಧಿ ಮೀರಿದ ಆರೋಪದಡಿ ವಿದೇಶಿಯರು ವಶಕ್ಕೆ! Read More »

ಹೈಟೆನ್ಷನ್ ವಿದ್ಯುತ್ ಕಂಬದಲ್ಲಿ ಹಸಿರು ಬಳ್ಳಿಗಳ ಟೆನ್ಷನ್!! | ಅವಘಡ ಸಂಭವಿಸುವ ಮೊದಲೇ ಎಚ್ಚೆತ್ತುಕೊಳ್ಳಬೇಕಿದೆ ಆಡಳಿತ

ಬೆಳ್ತಂಗಡಿ : ತಾಲೂಕಿನ ಗುರುವಾಯನಕೆರೆ ಜಂಕ್ಷನ್’ನಿಂದ ಉಪ್ಪಿನಂಗಡಿಯ ಕಡೆಗೆ ಕವಲೊಡೆಯುವ ರಸ್ತೆ ಮಾರ್ಗದಲ್ಲಿ ಸುಮಾರು 1.8 ಕಿ. ಮೀ. ದೂರ ಕ್ರಮಿಸಿದಾಗ ಸಿಗುವ ಪುಟ್ಟ ಊರು ಪಣೆಜಾಲು. ಅಲ್ಲಿನ ಮುಖ್ಯ ರಸ್ತೆಯ ಪಕ್ಕದಲ್ಲಿ ಹಾದು ಹೋಗುತ್ತಿರುವ ಹೈ ವೋಲ್ಟೇಜ್ ವಿದ್ಯುತ್ ಪ್ರಸರಣ ಮಾರ್ಗದ ಐದಾರು ಭಾರೀ ಗಾತ್ರದ ತಂತಿಗಳನ್ನು ಹೊತ್ತು ನಿಂತಿದೆ ಒಂದು ಅಲಕ್ಷಿತ ಬಡಪಾಯಿ ವಿದ್ಯುತ್ ಕಂಬ. ಹಸಿರುವಾದ ಹೆಚ್ಚುತ್ತಿರುವ ಈ ದಿನಮಾನಗಳಿಗೆ ಪೂರಕವೋ ಎಂಬಂತೆ ಮೈತುಂಬಾ ಹಸಿರು ಬಳ್ಳಿಗಳಿಂದ ಆಚ್ಛಾದಿತವಾಗಿ ನಿಂತಿದೆ ಒಂದು ಸೊರಗಿದ

ಹೈಟೆನ್ಷನ್ ವಿದ್ಯುತ್ ಕಂಬದಲ್ಲಿ ಹಸಿರು ಬಳ್ಳಿಗಳ ಟೆನ್ಷನ್!! | ಅವಘಡ ಸಂಭವಿಸುವ ಮೊದಲೇ ಎಚ್ಚೆತ್ತುಕೊಳ್ಳಬೇಕಿದೆ ಆಡಳಿತ Read More »

ಸುಬ್ರಹ್ಮಣ್ಯದಲ್ಲಿ ‘ಪೂರ್ವಿ ಸಾಮಾನ್ಯ ಸೇವಾ ಕೇಂದ್ರ’ ಶುಭಾರಂಭ

ಸುಬ್ರಹ್ಮಣ್ಯ: ಸರಕಾರಿ ಸೇವೆ ಸಹಿತಿ ಹಲವು ಸೇವೆಗಳನ್ನು ಕ್ಲಪ್ತ ಸಮಯದಲ್ಲಿ ಒದಗಿಸಲಿರುವ ‘ಪೂರ್ವಿ ಸಾಮಾನ್ಯ ಸೇವಾ ಕೇಂದ್ರ’ ಸುಬ್ರಹ್ಮಣ್ಯದ ಕಾಶಿಕಟ್ಟೆ ಬಳಿಯ ಗ್ರಾಮ ಪಂಚಾಯಿತಿ ಕಟ್ಟಡದಲ್ಲಿ ಶುಕ್ರವಾರ ಶುಭಾರಂಭಗೊಂಡಿತು. ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತ ಕಲ್ಲಾಜೆ ಸೇವಾ ಕೇಂದ್ರವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎಚ್.ಎಲ್. ವೆಂಕಟೇಶ್ ಮಾತನಾಡಿ, ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಹಾಗೂ ಸಂಜೀವಿನಿ ಒಕ್ಕೂಟದ ಒಡಂಬಡಿಕೆಯಿಂದ ಸೇವೆ ಸಲ್ಲಿಸಲಿರುವ ಕೇಂದ್ರ ಸರಕಾರದ ಮಹತ್ವದ ಯೋಜನೆ ಇದಾಗಿದೆ. ಮಹಿಳೆಯರು

ಸುಬ್ರಹ್ಮಣ್ಯದಲ್ಲಿ ‘ಪೂರ್ವಿ ಸಾಮಾನ್ಯ ಸೇವಾ ಕೇಂದ್ರ’ ಶುಭಾರಂಭ Read More »

error: Content is protected !!
Scroll to Top