ಎ ಪ್ಲಾಸ್ಟಿಕ್ ಅನೆಮಿಯ ಖಾಯಿಲೆಗೆ ತುತ್ತಾದ ಲಲಿತಾ ಪೂಜಾರಿ | ಚಿಕಿತ್ಸೆ ವೆಚ್ಚಕ್ಕೆ ಧನ ಸಹಾಯಕ್ಕಾಗಿ ವಿನಂತಿ
ಬೆಳ್ತಂಗಡಿ: ಲಲಿತಾ ಪೂಜಾರಿ ತೋಟತ್ತಾಡಿ ಕಾಯಿಲೆಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆಗೆ ಧನಸಹಾಯ ಕೋರಿದ್ದಾರೆ. ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ನಿವಾಸಿಯಾಗಿರುವ ಲಲಿತಾ ಪೂಜಾರಿ ಎ ಪ್ಲಾಸ್ಟಿಕ್ ಅನೆಮಿಯ ಖಾಯಿಲೆಗೆ ತುತ್ತಾಗಿದ್ದು, ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈಗಾಗಲೇ ಅವರ ಚಿಕಿತ್ಸೆಗೆ ಲಕ್ಷಗಟ್ಟಲೆ ವೆಚ್ಚವಾಗಿದ್ದು, ಇನ್ನೂ 10 ಲಕ್ಷಕ್ಕಿಂತಲೂ ಅಧಿಕ ಖರ್ಚು ತಗಲಬಹುದು ಎಂದು ಅಂದಾಜಿಸಲಾಗಿದೆ. ಬಡ ಕುಟುಂಬದವರಾಗಿದ್ದ ಅವರು ಈಗಾಗಲೇ ಸಾಲದಿಂದ ನೊಂದಿದ್ದು, ಚಿಕಿತ್ಸೆ ಖರ್ಚು ಭರಿಸಲು ದಾನಿಗಳಿಂದ ಸಹಾಯ ನಿರೀಕ್ಷಿಸುತ್ತಿದ್ದಾರೆ. ತಮ್ಮಿಂದಾದ ಸಹಾಯ ನೀಡುವಂತೆ ದುರ್ಗಾವಾಹಿನಿ […]









