ದಕ್ಷಿಣ ಕನ್ನಡ

ಪ್ರವಾಸಿತಾಣಕ್ಕೆ ಹೋಗಿ ನಾಪತ್ತೆಯಾಗಿದ್ದ ಯುವಕ ಮೋರಿ ಪಕ್ಕ ಪತ್ತೆ!

ಕೊಟ್ಟಿಗೆಹಾರ: ಪ್ರವಾಸಿತಾಣಕ್ಕೆ ಹೋಗಿ ನಾಪತ್ತೆಯಾಗಿದ್ದ ಯುವಕನೋರ್ವ, ಇದೀಗ ಮನೆ ಸಮೀಪದ ಮೋರಿ ಸಮೀಪ ಪತ್ತೆಯಾಗಿದ್ದಾನೆ. ಮೂಡಿಗೆರೆ ತಾಲೂಕಿನ ಐತಿಹಾಸಿಕ ಹಾಗೂ ಪ್ರವಾಸಿ ತಾಣ ದೇವರ ಮನೆ ಪ್ರವಾಸಕ್ಕೆ ಬಂದಿದ್ದ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ದೀಕ್ಷಿತ್ (27) ಅಕ್ಟೋಬರ್ 10 ರಂದು ಮಂಗಳವಾರ ಸಂಜೆ ನಾಪತ್ತೆಯಾಗಿದ್ದ. ಇದೀಗ ಆಕ್ಟೋಬರ್ 11 ರಂದು ಬೆಳಗ್ಗೆ ಮನೆಯ ಹತ್ತಿರದ ಮೋರಿ ಬಳಿ ಕುಳಿತಿದ್ದನ್ನು ಊರವರು ಪತ್ತೆ ಹಚ್ಚಿ ಮನೆಗೆ ಸೇರಿಸಿದ್ದಾರೆ. ಪ್ರಕರಣ ಸಂಬಂಧಿಸಿದಂತೆ ಸ್ಥಳೀಯರು ಹಾಗೂ ಬಣಕಲ್ ಪೊಲೀಸರು ಹಾಗೂ […]

ಪ್ರವಾಸಿತಾಣಕ್ಕೆ ಹೋಗಿ ನಾಪತ್ತೆಯಾಗಿದ್ದ ಯುವಕ ಮೋರಿ ಪಕ್ಕ ಪತ್ತೆ! Read More »

ದೈವಸ್ಥಾನದಲ್ಲಿ ನೇಣು ಬಿಗಿದು ಆತ್ಮಹತ್ಯೆ

ಪಣಂಬೂರು: ವ್ಯಕ್ತಿಯೊಬ್ಬರು ಪಣಂಬೂರು ಸಮೀಪದ ಬಬ್ಬುಸ್ವಾಮಿ ದೈವಸ್ಥಾನದ ಪ್ರಾಂಗಣದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಗೋಪಾಲ (64) ಈ ಕೃತ್ಯ ಎಸಗಿದವರು. ಗೋಪಾಲ ಅವರು ಮಡಿಕೇರಿಯಿಂದ ತಣ್ಣೀರು ಬಾವಿ ಬೀಚ್ ಗೆ ಬಂದಿದ್ದು, ಬಳಿಕ ದೈವಸ್ಥಾನ ಪ್ರಾಂಗಣದಲ್ಲಿ ನೈಲಾನ್ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಘಟನೆಗೆ ಸಂಬಂಧಿಸಿ ಪಣಂಬೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ದೈವಸ್ಥಾನದಲ್ಲಿ ನೇಣು ಬಿಗಿದು ಆತ್ಮಹತ್ಯೆ Read More »

ಗಡಿಯಿಂದ ಘಾಟ್’ವರೆಗೆ ಸ್ವಚ್ಛತೆ, ಬೀಜ ಬಿತ್ತುವ ಅಭಿಯಾನ

ಸುಬ್ರಹ್ಮಣ್ಯ: ಇಲ್ಲಿನ ರೋಟರಿ, ಲಯನ್ಸ್, ಇನ್ನರ್ ವ್ಹೀಲ್ ಕ್ಲಬ್, ಅರಣ್ಯ ಇಲಾಖೆ ಆಶ್ರಯದಲ್ಲಿ ಬೀಜ ಬಿತ್ತುವ ಹಾಗೂ ಬೃಹತ್ ಸ್ವಚ್ಚತಾ ಅಭಿಯಾನಕ್ಕೆ ಕುಲುಕುಂದ ಶ್ರೀ ಚಾಮುಂಡೇಶ್ವರಿ ಗಡಿಯಲ್ಲಿ ಚಾಲನೆ ನೀಡಲಾಯಿತು. ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ವಿಮಲ್ ಬಾಬು ಅವರು ಗಿಡ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವಿಮಲ್ ಬಾಬು, ಅರಣ್ಯ ಪೋಷಣೆ, ಬೆಳವಣಿಗೆ ಹಾಗೂ ಸಂರಕ್ಷಣೆ ಬಗ್ಗೆ ಹೆಚ್ಚಿನ ಕಾಳಜಿ ಅಗತ್ಯ. ಇದರೊಂದಿಗೆ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ

ಗಡಿಯಿಂದ ಘಾಟ್’ವರೆಗೆ ಸ್ವಚ್ಛತೆ, ಬೀಜ ಬಿತ್ತುವ ಅಭಿಯಾನ Read More »

ಶರಣ್ ಪಂಪ್‌ವೆಲ್’ಗೆ ಉಡುಪಿ ಜಿಲ್ಲಾ ಪ್ರವೇಶ ನಿರ್ಬಂಧ! | ಹೆಜಮಾಡಿಯಿಂದಲೇ ವಾಪಾಸ್ಸಾದರೇ ವಿ.ಎಚ್.ಪಿ. ಪ್ರಾಂತ ಸಹಕಾರ್ಯದರ್ಶಿ!!

ಉಡುಪಿ: ವಿಎಚ್ ಪಿ- ಬಜರಂಗದಳ ವತಿಯಿಂದ ಉಡುಪಿಯಲ್ಲಿ ಮಂಗಳವಾರ ಹಮ್ಮಿಕೊಳ್ಳಲಾದ ಶೌರ್ಯ ಜಾಗರಣ ರಥಯಾತ್ರೆ ಸಮಾರೋಪ ಹಾಗೂ ಹಿಂದೂ ಸಮಾಜೋತ್ಸವ ಹಿನ್ನೆಲೆಯಲ್ಲಿ ಹೈಕೋರ್ಟ್‌ ಆದೇಶದಂತೆ ವಿಎಚ್ ಪಿ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್ ಗೆ ಉಡುಪಿ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಇತ್ತೀಚೆಗೆ ನಡೆದ ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ಪ್ರತಿಭಟನೆಯಲ್ಲಿ ಶರಣ್ ಪಂಪ್‌ವೆಲ್ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದರು. ಈ ಸಂಬಂಧ ಅವರ ವಿರುದ್ಧ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ

ಶರಣ್ ಪಂಪ್‌ವೆಲ್’ಗೆ ಉಡುಪಿ ಜಿಲ್ಲಾ ಪ್ರವೇಶ ನಿರ್ಬಂಧ! | ಹೆಜಮಾಡಿಯಿಂದಲೇ ವಾಪಾಸ್ಸಾದರೇ ವಿ.ಎಚ್.ಪಿ. ಪ್ರಾಂತ ಸಹಕಾರ್ಯದರ್ಶಿ!! Read More »

400 ಕೆ.ವಿ. ಕಾಮಗಾರಿ ವಿರೋಧಿಸಿ ಪ್ರತಿಭಟನೆ: ಸ್ಥಳಕ್ಕೆ ಭೇಟಿ ನೀಡಿ ರೈತರಿಗೆ ಧೈರ್ಯ ತುಂಬಿದ ಅರುಣ್ ಕುಮಾರ್ ಪುತ್ತಿಲ

ವಿಟ್ಲ: 400 ಕೆ.ವಿ. ಹೈಟೆನ್ಷನ್ ಮಾರ್ಗದ ಕಾಮಗಾರಿಗೆ ಮುಂದಾಗುತ್ತಿದ್ದ ಘಟನೆಯನ್ನು ಪುಣಚ ಗ್ರಾಮಸ್ಥರು ವಿರೋಧಿಸಿದ್ದು, ಸ್ಥಳಕ್ಕೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿದರು. ಅಧಿಕಾರಿಗಳ ಜೊತೆ ಮಾತನಾಡಿದ ಅರುಣ್ ಕುಮಾರ್ ಪುತ್ತಿಲ ಅವರು, ಯಾವುದೇ ಕಾರಣಕ್ಕೂ 400 ಕೆ.ವಿ. ಯೋಜನೆ ಅನುಷ್ಠಾನಕ್ಕೆ ಬಿಡುವುದಿಲ್ಲ. ಆದರೆ ಶಾಂತಿ – ಸುವ್ಯವಸ್ಥೆಗೆ ಧಕ್ಕೆ ಆಗದಂತೆ ನೋಡಿಕೊಳ್ಳಬೇಕು ಎಂದರು. ರೈತರ ಜೊತೆ ಮಾತಕತೆ ನಡೆಸಿದ ಪುತ್ತಿಲ ಅವರು, ಯಾವಾಗಲೂ ರೈತರ ಜೊತೆ ನಾನಿದ್ದೇನೆ ಎಂದು ಭರವಸೆ ತುಂಬಿದರು. 400

400 ಕೆ.ವಿ. ಕಾಮಗಾರಿ ವಿರೋಧಿಸಿ ಪ್ರತಿಭಟನೆ: ಸ್ಥಳಕ್ಕೆ ಭೇಟಿ ನೀಡಿ ರೈತರಿಗೆ ಧೈರ್ಯ ತುಂಬಿದ ಅರುಣ್ ಕುಮಾರ್ ಪುತ್ತಿಲ Read More »

ವಿಶ್ವಕರ್ಮ ಕುಲಶಾಸ್ತ್ರೀಯ ಅಧ್ಯಯನದ ಸಮಾಲೋಚನಾ ಸಭೆ | ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಆರೋಗ್ಯ, ರಾಜಕೀಯ ಸ್ಥಿತಿ ದಾಖಲು

ಬೆಳ್ತಂಗಡಿ: ಕರ್ನಾಟಕ ಸರಕಾರದ ಆದೇಶದ ಅನ್ವಯ ವಿಶ್ವಕರ್ಮ ಮತ್ತು ಅದರ ಉಪಜಾತಿಗಳ ಕುಲಶಾಸ್ತ್ರೀಯ ಅಧ್ಯಯನದ ಸಮಾಲೋಚನಾ ಸಭೆ ಬೆಳ್ತಂಗಡಿ ಶ್ರೀ ವಿಶ್ವಕರ್ಮಭ್ಯುದಯ ಸಭಾ ಭವನದಲ್ಲಿ ಜರಗಿತು. ಮೈಸೂರು ವಿಶ್ವವಿದ್ಯಾಲಯದ ನೀತಿ ಅಧ್ಯಯನ ಕೇಂದ್ರದ ಸಹಾಯಕ ಸಂಶೋಧಕ ಡಾ.ಮಹಾದೇವ ಮತ್ತು ಡಾ. ಕೃಷ್ಣಮೂರ್ತಿ ಅವರು ಅಧ್ಯಯನದ ಉದ್ದೇಶ ಮತ್ತು ಸ್ವರೂಪದ ಬಗ್ಗೆ ಮಾಹಿತಿ ನೀಡಿ, ವಿಶ್ವಕರ್ಮ ಸಮುದಾಯದ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಆರೋಗ್ಯ ಮತ್ತು ರಾಜಕೀಯ ಸ್ಥಿತಿಗಳ ಹೇಳಿಕೆಗಳನ್ನು ದಾಖಲೀಕರಣ ಮಾಡಿಕೊಂಡರು. ವೈಯಕ್ತಿಕ ಪ್ರಶ್ನಾವಳಿ ಮತ್ತು ಸೂಕ್ತ

ವಿಶ್ವಕರ್ಮ ಕುಲಶಾಸ್ತ್ರೀಯ ಅಧ್ಯಯನದ ಸಮಾಲೋಚನಾ ಸಭೆ | ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಆರೋಗ್ಯ, ರಾಜಕೀಯ ಸ್ಥಿತಿ ದಾಖಲು Read More »

ಕೊಡಗು-ದಕ್ಷಿಣ ಕನ್ನಡ ಗೌಡ ಸಮಾಜದ ಅಧ್ಯಕ್ಷರಾಗಿ ರವೀಂದ್ರನಾಥ್ ಕೇವಳ, ಉಪಾಧ್ಯಕ್ಷರಾಗಿ ಪಾಣತ್ತಲೆ ಪಳಂಗಪ್ಪಂ ಆಯ್ಕೆ

ಬೆಂಗಳೂರು: ಕೊಡಗು ಹಾಗೂ ದಕ್ಷಿಣ ಕನ್ನಡ ಗೌಡ ಸಮಾಜದ 2023-25 ನೇ ಸಾಲಿನ ಅಧ್ಯಕ್ಷರಾಗಿ ರವೀಂದ್ರನಾಥ್ ಕೇವಳ ಹಾಗೂ ಉಪಾಧ್ಯಕ್ಷರಾಗಿ ಪಾಣತ್ತಲೆ ಪಳಂಗಪ್ಪಂನವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಗೌರವ ಕಾರ್ಯದರ್ಶಿಗಳಾಗಿ ನಾಗೇಶ್ ಕುಮಾರ್ ಕಲ್ಲುಮುಟ್ಲು, ಖಜಾಂಜಿಯಾಗಿ ಕುಂಭಗೌಡನ ಸೋಮಣ್ಣ, ಜಂಟಿ ಕಾರ್ಯದರ್ಶಿಯಾಗಿ ನಾಗೇಶ್ ಬಂಟೋಡಿ ಉಳುವಾರನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕೊಡಗು-ದಕ್ಷಿಣ ಕನ್ನಡ ಗೌಡ ಸಮಾಜದ ಅಧ್ಯಕ್ಷರಾಗಿ ರವೀಂದ್ರನಾಥ್ ಕೇವಳ, ಉಪಾಧ್ಯಕ್ಷರಾಗಿ ಪಾಣತ್ತಲೆ ಪಳಂಗಪ್ಪಂ ಆಯ್ಕೆ Read More »

ಹರೀಶ್ ಪೂಂಜಾ ನೇತೃತ್ವದ ಪ್ರತಿಭಟನೆಯಲ್ಲಿ ಭಾಗಿಯಾದ ಅರುಣ್ ಕುಮಾರ್ ಪುತ್ತಿಲ

ಬೆಳ್ತಂಗಡಿ : ಬೆಳ್ತಂಗಡಿ ಕಳೆಂಜ ಗ್ರಾಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಸೋಮವಾರ ಸಂಜೆ ಭೇಟಿ ನೀಡಿದರು. ಬೆಳ್ತಂಗಡಿಯ ಕಳೆಂಜ ಗ್ರಾಮದಲ್ಲಿ ಸ್ವಾತಂತ್ರ್ಯ ಪೂರ್ವದಿಂದಲೂ ವಾಸವಾಗಿರುವ ಸುಮಾರು ನೂರಕ್ಕೂ ಹೆಚ್ಚು ಮನೆಗಳಿರುವ ಪ್ರದೇಶದಲ್ಲಿ ತಮ್ಮ ಪೂರ್ವಜರ ಕಾಲದಿಂದಲೂ ಕೃಷಿ ಮಾಡಿಕೊಂಡು ಬಂದಿರುವ ಜಾಗದಲ್ಲಿ ಮನೆಕಟ್ಟಲು ಹಾಕಿದ್ದ ಅಡಿಪಾಯವನ್ನು  ಅರಣ್ಯ ಇಲಾಖೆಯ ಸಿಬ್ಬಂದಿಗಳು ಏಕಾ ಏಕಿ ಬಲತ್ಕಾರದಿಂದ ಕಳೆಂಜದ ದೇವಣ್ಣ ಗೌಡರ ಮನೆ ದ್ವಂಸಗೊಳಿಸಲು ಸಜ್ಜಾದ

ಹರೀಶ್ ಪೂಂಜಾ ನೇತೃತ್ವದ ಪ್ರತಿಭಟನೆಯಲ್ಲಿ ಭಾಗಿಯಾದ ಅರುಣ್ ಕುಮಾರ್ ಪುತ್ತಿಲ Read More »

ಇಂದು ರಾತ್ರಿ ಕುಕ್ಕೆ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ

ಸುಬ್ರಹ್ಮಣ್ಯ: ಮಾಜಿ ಪ್ರಧಾನಿ ದೇವೆ ಗೌಡ ಅವರು ಇಂದು ರಾತ್ರಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಲಿದ್ದಾರೆ. ಹೆಲಿಕಾಪ್ಟರ್ ನಲ್ಲಿ ಬಂದು ಸಕಲೇಶಪುರದಲ್ಲಿ ಇಳಿದು ಶ್ರೀ ಕ್ಷೇತ್ರಕ್ಕೆ ಬರುವವರಿದ್ದರು. ಆದರೆ ಸಕಲೇಶಪುರ ಭಾಗದಲ್ಲಿ ಮೋಡ ಕವಿದ ವಾತಾವರಣ ಉಂಟಾಗಿದ್ದು, ಹೆಲಿಕಾಪ್ಟರ್ ಬರಲು ಅನಾನುಕೂಲ ವಾತಾವರಣ ಉಂಟಾಗಿದ್ಧ ಹಿನ್ನೆಲೆಯಲ್ಲಿ ಮಂಗಳೂರಿನವರೆಗೆ ವಿಮಾನದಲ್ಲಿ ಆಗಮಿಸಿ, ಅಲ್ಲಿಂದ ಸುಮಾರು ರಾತ್ರಿ 11:30ಕ್ಕೆ ಸುಬ್ರಹ್ಮಣ್ಯ ತಲುಪಲಿದ್ದಾರೆ.

ಇಂದು ರಾತ್ರಿ ಕುಕ್ಕೆ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ Read More »

ಬೈಕ್‍ ಗೆ ಟಿಪ್ಪರ್ ಡಿಕ್ಕಿ : ಬೈಕ್ ಸವಾರ ಸಚಿನ್ ಕುಮಾರ್ ಆಚಾರ್ಯ ಸ್ಥಳದಲ್ಲೇ ಮೃತ್ಯು

ಕೈಕಂಬ: ಬೈಕ್‍ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಮೂಡಬಿದ್ರೆ ರಾಷ್ಟ್ರೀಯ ಹೆದ್ದಾರಿ 169 ರ ಗಂಜಿಮಠ ಮುಚ್ಚಾರು ಕ್ರಾಸ್ ನಲ್ಲಿ ನಡೆದಿದೆ. ಗುರುಪುರ ಹೊಸಮನೆ ನಿವಾಸಿ, ಎಚ್‍ಡಿಎಫ್ ಸಿ ಉದ್ಯೋಗಿ ಸಚಿನ್ ಕುಮಾರ್ ಆಚಾರ್ಯ (33) ಮೃತಪಟ್ಟವರು. ಸಚಿನ್ ಸಂಜೆ ಕೆಲಸ ಮುಗಿಸಿ ಗುರುಪುರಕ್ಕೆ ಬೈಕ್‍ ನಲ್ಲಿ ಬರುತ್ತಿದ್ದ ಸಂದರ್ಭ ಬೈಕನ್ನು ಓವರ್ ಟೇಕ್ ಮಾಡುವ ಭರದಲ್ಲಿ ಟಿಪ್ಪರ್ ಡಿಕ್ಕಿ ಹೊಡೆದಿದೆ. ರಸ್ತೆಗೆ ಬಿದ್ದ ಸಚಿನ್ ನ ತಲೆಗೆ ಗಂಭೀರ

ಬೈಕ್‍ ಗೆ ಟಿಪ್ಪರ್ ಡಿಕ್ಕಿ : ಬೈಕ್ ಸವಾರ ಸಚಿನ್ ಕುಮಾರ್ ಆಚಾರ್ಯ ಸ್ಥಳದಲ್ಲೇ ಮೃತ್ಯು Read More »

error: Content is protected !!
Scroll to Top