ದಕ್ಷಿಣ ಕನ್ನಡ

ಹಲ್ಲೆ ನಡೆದದ್ದು ಕಟ್ಟಿಗೆಯಿಂದ, ತಲ್ವಾರಿನಿಂದಲ್ಲ: ಎಸ್ಪಿ‌ ಸ್ಪಷ್ಟನೆ

ಮಾಣಿ : ಬಜರಂಗದಳ, ಬಿಜೆಪಿ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಮಾಣಿಯಲ್ಲಿ ನಡೆದ ಜಗಳದಲ್ಲಿ ಕಟ್ಟಿಗೆಯಿಂದ ಹಲ್ಲೆ ನಡೆಸಲಾಗಿದೆಯೇ ಹೊರತು, ತಲವಾರಿನಿಂದಲ್ಲ ಎಂದು ಜಿಲ್ಲಾ‌ ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ. ಘಟನೆಯಲ್ಲಿ ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಗಾಯಗೊಂಡಿದ್ದು, ಇಬ್ಬರು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚುನಾವಣಾ ಫಲಿತಾಂಶದ ದಿನ ಬಂಟ್ವಾಳ ಶಾಸಕರ ಗೆಲುವಿನ ಹರ್ಷ ಆಚರಣೆ ವೇಳೆ ಪಟಾಕಿ ಸಿಡಿಸಿ ಸಂಭ್ರಮ ಮಾಡುವ ವೇಳೆ ಇದೇ ತಂಡಗಳ […]

ಹಲ್ಲೆ ನಡೆದದ್ದು ಕಟ್ಟಿಗೆಯಿಂದ, ತಲ್ವಾರಿನಿಂದಲ್ಲ: ಎಸ್ಪಿ‌ ಸ್ಪಷ್ಟನೆ Read More »

ಸಿ.ಆರ್.ಝಡ್. ಮರಳುಗಾರಿಕೆ ಇನ್ನೇನಿದ್ದರೂ ಮಳೆಗಾಲದ ನಂತರ!

ಮಂಗಳೂರು : ಸಿಆರ್‌ಝಡ್‌ ಪ್ರದೇಶದಲ್ಲಿ ಮರಳುಗಾರಿಕೆ ಮಳೆಗಾಲ ಆರಂಭವಾಗುವ ಎರಡು ತಿಂಗಳ ಮೊದಲೇ ಪೂರ್ಣಗೊಂಡಿದೆ. ಚುನಾವಣೆ ಕಾರಣದಿಂದಾಗಿ ಮತ್ತೆ ಪರಿಸರ ಇಲಾಖೆಯ ಕ್ಲಿಯರೆನ್ಸ್‌ ಪಡೆಯುವ ಪ್ರಕ್ರಿಯೆಗಳು ತಡವಾಗಿರುವ ಕಾರಣ ಈ ಬಾರಿ ಸಿಆರ್‌ಝಡ್‌ ಮರಳುಗಾರಿಕೆ ಇನ್ನೇನಿದ್ದರೂ ಮಳೆಗಾಲದ ಬಳಿಕವೇ ನಡೆಯಬೇಕಷ್ಟೆ. ಪರವಾನಿಗೆಯ ಅವಧಿ ಪೂರ್ಣ ಗೊಂಡ ಹಿನ್ನೆಲೆಯಲ್ಲಿ ಮಾ. 4ಕ್ಕೇ ಸಿಆರ್‌ಝಡ್‌ ವ್ಯಾಪ್ತಿಯ ಮರಳು ದಿಣ್ಣೆಗಳಲ್ಲಿ ಮರಳುಗಾರಿಕೆ ನಿಂತಿದೆ. ಆ ಬಳಿಕ ಇಸಿ ಮತ್ತೆ ಪಡೆಯುವುದಕ್ಕೆ ಬೇಕಾದ ಬೆಥಮೆಟ್ರಿ ಸರ್ವೇ ಪೂರ್ಣಗೊಂಡಿದೆ. ಆದರೆ ವರದಿ ಬರಲು ಬಾಕಿ

ಸಿ.ಆರ್.ಝಡ್. ಮರಳುಗಾರಿಕೆ ಇನ್ನೇನಿದ್ದರೂ ಮಳೆಗಾಲದ ನಂತರ! Read More »

ವರ್ಗಾವಣೆಗೊಂಡಿರುವ ಸಿಬ್ಬಂದಿಗಳಿಗೆ ಬೀಳ್ಕೊಡುಗೆ

ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಡಬ ಯೋಜನಾ ಕಚೇರಿಯಿಂದ ಬಡ್ತಿಗೊಂಡು ವರ್ಗಾವಣೆಯಾಗಿರುವ ಸಿಬ್ಬಂದಿಗಳಿಗೆ ತಾಲೂಕು ಕಚೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು. ಕಡಬ ಯೋಜನಾ ಕಛೇರಿಯಲ್ಲಿ ಸಹಾಯಕ ಪ್ರಭಂದಕರಾಗಿ ಕೆಲಸನಿರ್ವಹಿಸುತ್ತಿದ್ದ ರೂಪಾರವರು ಕೇಂದ್ರ ಕಚೇರಿಯ ಡಾಟಾ ಸೆಂಟರ್ ವಿಭಾಗಕ್ಕೆ ಮ್ಶಾನೇಜರ್ ಆಗಿ ವರ್ಗಾವಣೆಯಾಗಿದ್ದಾರೆ.  ತಾಲೂಕಿನಲ್ಲಿ ನಗದು ಸಹಾಯಕರಾಗಿ ಹಾಗೂ ಪ್ರಭಾರ ಕೃಷಿ ಮೇಲ್ವಿಚಾರಕರಾಗಿ ಕೆಲಸ ನಿರ್ವಹಿಸಿರುವ ರಮ್ಶಾ ಅವರು  ತೀರ್ಥಹಳ್ಳಿ ಯೋಜನಾ ಕಚೇರಿಯ ನಗದು ಸಹಾಯಕಿ ಮೇಲ್ವಿಚಾರಕಿಯಾಗಿ ಬಡ್ತಿಗೊಂಡು ವರ್ಗಾವಣೆಗೊಂಡಿದ್ದಾರೆ. ತಾಲೂಕಿನ ನಗದು ಸಹಾಯಕಿಯಾಗಿ ಕೆಲಸ

ವರ್ಗಾವಣೆಗೊಂಡಿರುವ ಸಿಬ್ಬಂದಿಗಳಿಗೆ ಬೀಳ್ಕೊಡುಗೆ Read More »

ಬೈಕ್-ಕಾರು ಅಪಘಾತ: ಕೆವಿಜಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

ಸುಳ್ಯ: ಬೈಕ್ ಮತ್ತು ಕಾರಿನ ಮಧ್ಯೆ  ಅಪಘಾತ ನಡೆದು ಬೈಕ್ ಸವಾರ ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ. ಸುಳ್ಯ ಕೆ.ವಿ.ಜಿ. ಆಯುರ್ವೇದ ಕಾಲೇಜಿನ ವಿದ್ಯಾರ್ಥಿ ಚಿಕ್ಕಬಳ್ಳಾಪುರದ ಸ್ವರೂಪ್ ಮೃತಪಟ್ಟವರು. ಆದಿತ್ಯವಾರ ರಾತ್ರಿ ಸುಳ್ಯ ಕೆವಿಜಿ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳಾದ ಸಂಭ್ರಮ್ ಮತ್ತು ಸ್ವರೂಪ್ ಸುಳ್ಯ ಕಡೆಯಿಂದ ಸಂಪಾಜೆ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಪೆರಾಜೆ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರು ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಬೈಕ್‌ಗೆ ಡಿಕ್ಕಿಯಾಗಿದೆ. ಇನ್ನೋರ್ವ ಸವಾರ ಸಂಭ್ರಮ್ ಎಂಬವರಿಗೆ

ಬೈಕ್-ಕಾರು ಅಪಘಾತ: ಕೆವಿಜಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು Read More »

ಪುತ್ತೂರಿನಲ್ಲಿ ಮಲೇರಿಯಾ ಡೆಂಗ್ಯೂ ದಿನಾಚರಣೆ | ಮುತ್ತೂಟ್ ಫೈನಾನ್ಸ್, ಕಸ್ವಿ ಹಸಿರು ದಿಬ್ಬಣ, ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಆಶ್ರಯದಲ್ಲಿ ಆಶಾ ಕಾರ್ಯಕರ್ತೆಯರಿಗೆ ಟಾರ್ಚ್ ಲೈಟ್ ವಿತರಣೆ

ಪುತ್ತೂರು: ಮುತ್ತೂಟ್ ಫೈನಾನ್ಸ್, ರೋಟರ್ಯಾಕ್ಟ್ ಕ್ಲಬ್ ಪುತ್ತೂರು, ಕಸ್ವಿ ಹಸಿರು ದಿಬ್ಬಣ ಹಾಗೂ ಪುತ್ತೂರು ತಾಲೂಕು ಆರೋಗ್ಯ ಕೇಂದ್ರದ ಆಶ್ರಯದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಲೇರಿಯಾ – ಡೆಂಗ್ಯು ದಿನಾಚರಣೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ಟಾರ್ಚ್ ಲೈಟ್ ವಿತರಣೆ ಮತ್ತು ತರಬೇತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಎಸ್.ಆರ್.ಕೆ. ಲ್ಯಾಡರ್ಸಿನ ಕೇಶವ್ ಅಮೈ ಮಾತನಾಡಿ, ಮುತ್ತೂಟ್ ಫೈನಾನ್ಸ್ ಹಲವಾರು ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ. ಆಶಾ ಕಾರ್ಯಕರ್ತೆಯರ ಸೇವಾ ಕಾರ್ಯವನ್ನು ಗಮನಿಸಿ ಅವರಿಗೆ ಗೌರವಪೂರ್ವಕವಾಗಿ ಟಾರ್ಚ್ ಲೈಟ್

ಪುತ್ತೂರಿನಲ್ಲಿ ಮಲೇರಿಯಾ ಡೆಂಗ್ಯೂ ದಿನಾಚರಣೆ | ಮುತ್ತೂಟ್ ಫೈನಾನ್ಸ್, ಕಸ್ವಿ ಹಸಿರು ದಿಬ್ಬಣ, ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಆಶ್ರಯದಲ್ಲಿ ಆಶಾ ಕಾರ್ಯಕರ್ತೆಯರಿಗೆ ಟಾರ್ಚ್ ಲೈಟ್ ವಿತರಣೆ Read More »

RSS ಪುತ್ತೂರು ಜಿಲ್ಲಾ ಸಂಘಚಾಲಕ್ ಕೊಡ್ಮಣ್ ಕಾಂತಪ್ಪ ಶೆಟ್ಟಿ ನಿಧನ

ಬಂಟ್ವಾಳ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ಜಿಲ್ಲಾ ಸಂಘ ಚಾಲಕ, ಸಾಮಾಜಿಕ, ಧಾರ್ಮಿಕ, ಸಹಕಾರಿ ನೇತಾರ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಮೇ 22ರಂದು ಮಧ್ಯಾಹ್ನ  ನಿಧನರಾದರು. ಕೆಲ ಸಮಯಗಳಿಂದ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಮಧ್ಯಾಹ್ನ ಅವರು ಕೊನೆಯುಸಿರೆಳೆದರು. ಅವರು ಪತ್ನಿ, ತಮ್ಮ ಸಹಿತ ಬಂಧು ಬಳಗವನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಸಂಸದ ನಳಿನ್ ಕುಮಾರ್ ಕಟೀಲ್, ಆರ್ ಎಸ್ ಎಸ್

RSS ಪುತ್ತೂರು ಜಿಲ್ಲಾ ಸಂಘಚಾಲಕ್ ಕೊಡ್ಮಣ್ ಕಾಂತಪ್ಪ ಶೆಟ್ಟಿ ನಿಧನ Read More »

ರಾಮಕುಂಜದಲ್ಲಿ ಮಲೇರಿಯಾ, ಡೆಂಗ್ಯು ದಿನಾಚರಣೆ | ಆಶಾ ಕಾರ್ಯಕರ್ತೆಯರಿಗೆ ಟಾರ್ಚ್ ಲೈಟ್ ವಿತರಣೆ

 ರಾಮಕುಂಜ: ಮುತ್ತೂಟ್ ಫೈನಾನ್ಸ್, ಕಸ್ವಿ ಹಸಿರು ದಿಬ್ಬಣ, ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆ ಹಾಗೂ ಪುತ್ತೂರು ತಾಲೂಕು ಆರೋಗ್ಯಕೇಂದ್ರದ ಆಶ್ರಯದಲ್ಲಿ ಮಲೇರಿಯಾ, ಡೆಂಗ್ಯು ದಿನಾಚರಣೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ಟಾರ್ಚ್ ಲೈಟ್ ವಿತರಣೆ ಮತ್ತು ತರಬೇತಿ ಕಾರ್ಯಕ್ರಮ ಶುಕ್ರವಾರ  ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆಯಿತು. ಸುಳ್ಯ ನೂತನ ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮುತ್ತೂಟ್ ಫೈನಾನ್ಸ್ ಹಲವು ಸಾಮಾಜಿಕ ಕೆಲಸ ಮಾಡುತ್ತಿದೆ. ಕತ್ತಲೆಯಿಂದ ಬೆಳಕಿನೆಡೆ ಬರಬೇಕೆಂಬ ದೃಷ್ಟಿಯಲ್ಲಿ ಆಶಾ ಕಾರ್ಯಕರ್ತೆಯರಿಗೆ

ರಾಮಕುಂಜದಲ್ಲಿ ಮಲೇರಿಯಾ, ಡೆಂಗ್ಯು ದಿನಾಚರಣೆ | ಆಶಾ ಕಾರ್ಯಕರ್ತೆಯರಿಗೆ ಟಾರ್ಚ್ ಲೈಟ್ ವಿತರಣೆ Read More »

ಪಯಸ್ವಿನಿ ಹೊಳೆಯಲ್ಲಿ ಪತ್ತೆಯಾಯ್ತು ಬಿಜೆಪಿ ಮುಖಂಡನ ಶವ!

ಸುಳ್ಯ: ಬಿಜೆಪಿ ಮುಖಂಡ, ಜಿಲ್ಲಾ ಪಂಚಾಯತಿಯ ಮಾಜಿ ಸದಸ್ಯ ನವೀನ್ ರೈ ಮೇನಾಲ ಅವರ ಮೃತದೇಹ ಸುಳ್ಯದ ಹೊಳೆಯಲ್ಲಿ ಪತ್ತೆಯಾಗಿದೆ. ಪಯಸ್ವಿನಿ ಹೊಳೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಸಾವಿಗೆ ನಿಖರ ಕಾರಣ ಪತ್ತೆಯಾಗಿಲ್ಲ. ಪಂಪ್ ರಿಪೇರಿಗೆ ತೆರಳಿದ್ದ ಅವರು ನೀರಿಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ.

ಪಯಸ್ವಿನಿ ಹೊಳೆಯಲ್ಲಿ ಪತ್ತೆಯಾಯ್ತು ಬಿಜೆಪಿ ಮುಖಂಡನ ಶವ! Read More »

ಪ್ರಚೋದನಾತ್ಮಕ ಪೋಸ್ಟ್‌: ಪೊಲೀಸ್‌ ಕಮೀಷನರ್ ಎಚ್ಚರಿಕೆ

ಮಂಗಳೂರು: ವಿಧಾನಸಭಾ ಚುನಾವಣೆ ಫ‌ಲಿತಾಂಶ ಪ್ರಕಟವಾದ ಬಳಿಕ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ, ಪ್ರಚೋದನಾತ್ಮಕ ಸಂದೇಶಗಳನ್ನು ಪೋಸ್ಟ್‌ ಮಾಡುತ್ತಿರುವುದು ಕಂಡು ಬಂದಿದ್ದು ಇಂತಹ ಪೋಸ್ಟ್‌ಗಳನ್ನು ಹಾಕುವ ಅಥವಾ ಫಾರ್ವರ್ಡ್‌ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಆರ್‌. ಜೈನ್‌ ಎಚ್ಚರಿಕೆ ನೀಡಿದ್ದಾರೆ. ಜಾತಿ, ಧರ್ಮ ಮತ್ತು ಪ್ರದೇಶ ಆಧಾರಿತವಾಗಿ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟು ಮಾಡುವಂತಹ ಮತ್ತು ವೈಯಕ್ತಿಕ ನಿಂದನೆ ಮಾಡುವಂತಹ ದ್ವೇಷಪೂರಿತ ಮತ್ತು

ಪ್ರಚೋದನಾತ್ಮಕ ಪೋಸ್ಟ್‌: ಪೊಲೀಸ್‌ ಕಮೀಷನರ್ ಎಚ್ಚರಿಕೆ Read More »

ಕಟೀಲು ದೇವಳದ ಮುಂಭಾಗ MRPL ಬಸ್ ಬೆಂಕಿಗಾಹುತಿ

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದ ಮುಂಭಾಗದಲ್ಲಿ ಬಸ್ಸೊಂದು ಹೊತ್ತಿ ಉರಿದ ಘಟನೆ ಬುಧವಾರ ಮಧ್ಯಾಹ್ನ ವರದಿಯಾಗಿದೆ. ಬೆಂಕಿಗೆ ಆಹುತಿಯಾದ ಬಸ್ ಎಂಆರ್‌ಪಿಯಲ್ ಗೆ ಸೇರಿದ್ದು ಎನ್ನಲಾಗಿದೆ. ಇದು ಕಟೀಲು ದೇವಸ್ಥಾನದ ಮುಂಭಾಗವಾಗಿ ಮಂಗಳೂರು ಕಡೆ ತೆರಳುತ್ತಿದ್ದ ಸಂದರ್ಭ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ. ಘಟನೆಗೆ ಬಸ್ಸಿನಲ್ಲಿ ನಡೆದ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ. ತಕ್ಷಣ ಎಚ್ಚೆತ್ತುಕೊಂಡ ದೇವಸ್ಥಾನದ ಸಿಬ್ಬಂದಿ ಮತ್ತು ಸ್ಥಳೀಯರು ಬೆಂಕಿಯನ್ನು ನಂದಿಸುವಲ್ಲಿ ಸಫಲರಾಗಿದ್ದು ಯಾವುದೇ ಪ್ರಾಣ ಹಾನಿ

ಕಟೀಲು ದೇವಳದ ಮುಂಭಾಗ MRPL ಬಸ್ ಬೆಂಕಿಗಾಹುತಿ Read More »

error: Content is protected !!
Scroll to Top