ದಕ್ಷಿಣ ಕನ್ನಡ

ರೇಶನ್ ಮಾಫಿಯಾ : ಗೋಣಿ ಚೀಲ ಬದಲಿಸಿ ಅಕ್ರಮ ಪಡಿತರ ಅಕ್ಕಿ ಸಾಗಾಟ

ವಿಟ್ಲ : ಗೋಣಿ ಚೀಲ ಬದಲಿಸಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು‌ ಜೀತೋ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಉಕ್ಕುಡ ಸಮೀಪ ವಿಟ್ಲ ಪೋಲಿಸರು ಬಂಧಿಸಿದ್ದು, ವಾಹನ ಸಹಿತ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ.ಬಂಧಿತನಾಗಿರುವ ವಾಹನದ ಚಾಲಕ ಕುದ್ದುಪದವು ಸುರುಳಿಮೂಲೆ ನಿವಾಸಿ ಅಲಿ ಎಂಬಾತನ ವಿಚಾರಣೆ ವೇಳೆ ಪಡಿತರ ಅಕ್ಕಿಯ ಮಾಫಿಯಾ ದಂಧೆ ಬಯಲಾಗಿದೆ.ಆರೋಪಿಯನ್ನು ವಿಚಾರಣೆ ನಡೆಸಿ ಆ ಬಳಿಕ ಅಕ್ರಮ ಪಡಿತರ ಅಕ್ಕಿ ದಾಸ್ತಾನು ಅಡ್ಡೆಗೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದಾರೆ. ಅಡ್ಯನಡ್ಕ ಸಮೀಪದ ಮರಕ್ಕಿಣಿ ನಿವಾಸಿ JSW […]

ರೇಶನ್ ಮಾಫಿಯಾ : ಗೋಣಿ ಚೀಲ ಬದಲಿಸಿ ಅಕ್ರಮ ಪಡಿತರ ಅಕ್ಕಿ ಸಾಗಾಟ Read More »

ತೆಂಗಿನಮರದಿಂದ ಬಿದ್ದು ವ್ಯಕ್ತಿ ಸಾವು

ಸುಳ್ಯ : ತೆಂಗಿನಮರದಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಕೆಮ್ರಾಜೆ ಗ್ರಾಮದ ಬೊಳ್ಳಾಜೆ ಕಂದೂರು ಎಂಬಲ್ಲಿ ಎ. 11 ರಂದು ಸಂಭವಿಸಿದೆ. ಹರೀಶ್ ಜಿ ಎಂಬವರೇ ಮೃತಪಟ್ಟ ವ್ಯಕ್ತಿ. ಇವರು ನೆಮ್ಮೂರು ಕೆಮ್ರಾಜೆ ಗ್ರಾಮದ ಬೊಳ್ಳಾಜೆ ಕಂದೂರು ಎಂಬಲ್ಲಿಗೆ ತೆಂಗಿನಕಾಯಿ ಕೊಯ್ಯುವ ಕೆಲಸಕ್ಕೆ ಹೋಗಿದ್ದು, ತೆಂಗಿನಕಾಯಿ ಕೊಯ್ದು ಮರದಿಂದ ಇಳಿಯುತ್ತಿದ್ದಂತೆ ಆಕಸ್ಮಿಕವಾಗಿ ಮರದಿಂದ ನೆಲಕ್ಕೆ ಬಿದ್ದು ಸ್ಮೃತಿ ಕಳೆದುಕೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಅಂಬ್ಯುಲೆನ್ಸ್‌ನಲ್ಲಿ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು ಹರೀಶ್‌ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ತೆಂಗಿನಮರದಿಂದ ಬಿದ್ದು ವ್ಯಕ್ತಿ ಸಾವು Read More »

ಶಾಲಾ ರಜಾ ಅವಧಿಯಲ್ಲಿ ಬಾವಿ ಜಾವಿ ತೋಡಿ ಮೆಚ್ಚುಗೆ ಗಳಿಸಿದ ಬಾಲಕ

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಪಿಯುಸಿ ವಿದ್ಯಾರ್ಥಿಯೋರ್ವ ತನ್ನ ರಜಾ ಅವಧಿಯಲ್ಲಿ ಬಾವಿಯೊಂದನ್ನು ತೋಡಿ ಸುದ್ದಿಯಾಗಿದ್ದಾನೆ. ಬಾಲಕನ‌ ಕಾರ್ಯಕ್ಕೆ ಇದೀಗ ವ್ಯಾಪಕ‌ ಮೆಚ್ಚುಗೆ ವ್ಯಕ್ತವಾಗಿದೆ.ನರಿಕೊಂಬು ನಾಯಿಲದ ಲೋಕನಾಥ್ ಅವರ ಪುತ್ರ, ಪಿಯುಸಿ ವಿದ್ಯಾರ್ಥಿ ಸೃಜನ್ ಬಾವಿ ಕೊರೆದ ವಿದ್ಯಾರ್ಥಿಯಾಗಿದ್ದಾನೆ ಎಂದು ತಿಳಿಯಲಾಗಿದೆ.ಸೃಜನ್ ಮನೆಗೆ ನಳ್ಳಿಯಲ್ಲಿ ನೀರು ಬರುತ್ತಿತ್ತು. ಆದರೆ ಮನೆಗೆ ಆಶ್ರಯವಾಗಿದ್ದ ನಳ್ಳಿ ನೀರು ಕೆಲವೊಮ್ಮೆ ಕೈ ಕೊಡುತ್ತಿತ್ತು. ಇದರಿಂದ ಮನೆಯಲ್ಲಿ ನೀರಿನ ಸಮಸ್ಯೆ ಉಂಟಾಗಿತ್ತು. ಸೃಜನ್ ತಾನು ಬಾವಿ ಕೊರೆಯುವುದಾಗಿ ಹೇಳುತ್ತಿದ್ದ‌

ಶಾಲಾ ರಜಾ ಅವಧಿಯಲ್ಲಿ ಬಾವಿ ಜಾವಿ ತೋಡಿ ಮೆಚ್ಚುಗೆ ಗಳಿಸಿದ ಬಾಲಕ Read More »

ಬಿಜೆಪಿ ಟಿಕೆಟ್‌ ಘೋಷಣೆ ಹಿನ್ನೆಲೆ ಪುತ್ತೂರಿನಲ್ಲಿ ಹೆಚ್ಚಿದ ಅಸಮಾಧಾನ

ಪುತ್ತೂರು : ಬಿಜೆಪಿ ನಿನ್ನೆ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಆಶಾ ತಿಮ್ಮಪ್ಪ ಗೌಡ ಅವರಿಗೆ ಪುತ್ತೂರಿನ ಬಿಜೆಪಿ ಟಿಕೆಟ್ ನೀಡಿದೆ. ಇದರ ಬೆನ್ನಲ್ಲೇ ಪುತ್ತೂರು ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟಗೊಂಡಿದೆ. ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಪುತ್ತೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಬೆಂಬಲಿಗರ ನೇತೃತ್ವದಲ್ಲಿ ತುರ್ತು ಸಭೆ ನಡೆಯಲಿದೆ. ಕಳೆದ ಎರಡು ಅವಧಿಯಲ್ಲಿ ಅರುಣ್ ಅವರ ಹೆಸರು ಅಭ್ಯರ್ಥಿ ಸ್ಥಾನಕ್ಕೆ ಕೇಳಿ ಬಂದಿದ್ದರೂ ಅವಕಾಶ ಸಿಕ್ಕಿರಲಿಲ್ಲ. ಆದರೆ ಈ ಬಾರಿ ಅವರಿಗೆ

ಬಿಜೆಪಿ ಟಿಕೆಟ್‌ ಘೋಷಣೆ ಹಿನ್ನೆಲೆ ಪುತ್ತೂರಿನಲ್ಲಿ ಹೆಚ್ಚಿದ ಅಸಮಾಧಾನ Read More »

ಶಾಸಕ, ಸಚಿವ ಎಸ್.ಅಂಗಾರ ಅವರಿಗೆ ಟಿಕೆಟ್‌ ಮಿಸ್‌ : ವೆಂಕಟ್ ವಳಲಂಬೆ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

ಕಡಬ : ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಹಾಲಿ ಶಾಸಕ, ಸಚಿವ ಎಸ್.ಅಂಗಾರ ಅವರಿಗೆ ಬಿಜೆಪಿ ಟಿಕೆಟ್‌ ದೊರೆಯದೇ ಇರುವುದಕ್ಕಾಗಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ವೆಂಕಟ್ ವಳಲಂಬೆ ಹೇಳಿದ್ದಾರೆ. ಕಳೆದ 30 ವರ್ಷಗಳ ಕಾಲ ಕ್ಷೇತ್ರ ಮತ್ತು ಪಕ್ಷಕ್ಕೆ ಯಾವುದೇ ಚ್ಯುತಿ ಬಾರದ ರೀತಿ ದುಡಿದ, ಸಾಮಾನ್ಯ ಮನೆತನದಿಂದ ಬಂದಿರುವ ಸರಳ ಸಜ್ಜನಿಕೆಯ ಎಲ್ಲರ ಜನಮನ ಗೆದ್ದಿರುವ ಪಕ್ಷಾತೀತವಾಗಿ ಕ್ಷೇತ್ರದ ಅಭಿವೃದ್ಧಿಯನ್ನು ಮಾಡಿರುವ ಎಸ್.ಅಂಗಾರರಂತಹ ಪ್ರಾಮಾಣಿಕ ಕಾರ್ಯಕರ್ತನೊಂದಿಗೆ ಚರ್ಚಿಸದೆ ಏಕಪಕ್ಷೀಯವಾಗಿ ಅಭ್ಯರ್ಥಿ ಘೋಷಣೆ ಮಾಡಿರುವುದರಿಂದ

ಶಾಸಕ, ಸಚಿವ ಎಸ್.ಅಂಗಾರ ಅವರಿಗೆ ಟಿಕೆಟ್‌ ಮಿಸ್‌ : ವೆಂಕಟ್ ವಳಲಂಬೆ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ Read More »

ಪುತ್ತೂರು : ಮಲಗಿದಲ್ಲೇ ಬಟ್ಟೆ ವ್ಯಾಪಾರಿ ಸಾವು

ಪುತ್ತೂರು : ಪುತ್ತೂರಿನ ಬೊಳುವಾರಿನಲ್ಲಿ ವ್ಯಕ್ತಿಯೋರ್ವರು ಮಲಗಿದ್ದಲ್ಲೇ ಮೃತಪಟ್ಟಿರುವ ಘಟನೆ ಎ. 10 ರಂದು ಸಂಭವಿಸಿದೆ. ನಂದಕುಮಾರ್ (50) ಎಂಬವರೇ ಮೃತ ವ್ಯಕ್ತಿ. ಇವರು ಸುಮಾರು 20 ವರ್ಷಗಳ ಹಿಂದೆ ಪುತ್ತೂರಿಗೆ ಬಂದು ಬೊಳುವಾರಿನಲ್ಲಿ ತನ್ನ ಸಂಸಾರದೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದು ಬಟ್ಟೆ ವ್ಯಾಪಾರ ಮಾಡಿಕೊಂಡಿದ್ದರು. ಎ. 3 ರಂದು ನಂದಕುಮಾರ್ ರವರ ಪತ್ನಿ ಗೋಮತಿಯವರು ಮಗನೊಂದಿಗೆ ಸ್ವಂತ ಊರಿಗೆ ಹೋಗುವಾಗ ಅರಿವಳಗನ್(ನಂದಕುಮಾರ್‌ ರವರ ಗೆಳೆಯ) ಅವರಲ್ಲಿ ನಂದಕುಮಾರ್ ರವರನ್ನು ನೋಡಿಕೊಳ್ಳುವಂತೆ ತಿಳಿಸಿದ್ದರು. ಎ.10 ರಂದು ಗೋಮತಿಯವರು

ಪುತ್ತೂರು : ಮಲಗಿದಲ್ಲೇ ಬಟ್ಟೆ ವ್ಯಾಪಾರಿ ಸಾವು Read More »

ಪುತ್ತೂರು : ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

ಪುತ್ತೂರು : ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಟ್ಟಂಪಾಡಿಯ ಗುಮ್ಮಟಗದ್ದೆ ಎಂಬಲ್ಲಿ ಸಂಭವಿಸಿದೆ. ಪುಣ್ಯಶ್ರೀ ಎಂಬವರೇ ಆತ್ಮಹತ್ಯೆ ಮಾಡಿಕೊಂಡವರು. ಎ. 4 ರಂದು ಇವರು ತನ್ನ ಇಬ್ಬರು ಮಕ್ಕಳೊಂದಿಗೆ ತವರು ಮನೆಗೆ ಹೋಗಿದ್ದು, ಬಳಿಕ ಅಲ್ಲಿಯೇ ಇದ್ದರು. ಎ. 10 ರಂದು ರಾತ್ರಿ ಸುಮಾರು ಸಂಜೆ 3.55 ರ ವೇಳೆಗೆ ತನ್ನ ಪತಿ ಪುರುಷೋತ್ತಮ ರವರಿಗೆ ಕರೆ ಮಾಡಿ ಮಾತನಾಡಿದ್ದಾರೆ. ನಂತರ ರಾತ್ರಿ ಸುಮಾರು 10.00 ಗಂಟೆಯ ವೇಳೆಗೆ ತಮ್ಮ ಮನೆಯ ಬಳಿಗೆ ಬಂದು

ಪುತ್ತೂರು : ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ Read More »

ಪುಂಜಾಲಕಟ್ಟೆ : ದಾಖಲೆಯಿಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ 10 ಲಕ್ಷ ರೂ. ವಶ

ಬೆಳ್ತಂಗಡಿ : ಪೂಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲೆ ಇಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ 10 ಲಕ್ಷ ರೂ. ಹಣವನ್ನು ಎ. 10 ರಂದು ರಾತ್ರಿ 10 ಗಂಟೆಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆ ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕರ್ತವ್ಯ ನಿರತರಾಗಿದ್ದ ಫ್ಲೈಯಿಂಗ್ ಸ್ಕ್ವಾಡ್ ಕಾರ್ತಿ ಮಧುಬಾಬು ಅವರ ತಂಡ ಕುಕ್ಕಳ ಗ್ರಾಮದ ಬಸವೇಶ್ವರ ದೇವಸ್ಥಾನದ ಬಳಿ ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ KA-53C 2542 ವಾಹನದಲ್ಲಿ ಸಮರ್ಪಕ

ಪುಂಜಾಲಕಟ್ಟೆ : ದಾಖಲೆಯಿಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ 10 ಲಕ್ಷ ರೂ. ವಶ Read More »

ಶಾಸಕ ಅಂಗಾರ ಕ್ಷೇತ್ರದಲ್ಲಿ ಮತದಾನ ಬಹಿಷ್ಕಾರ : 30 ವರ್ಷಗಳಿಂದ ಈಡೇರದ ಬೇಡಿಕೆ

ಸುಳ್ಯ : ಆರು ಬಾರಿ ಶಾಸಕರಾಗಿರುವ ಸಚಿವ ಎಸ್‌.ಅಂಗಾರ ಪ್ರತಿನಿಧಿಸುತ್ತಿರುವ ಸುಳ್ಯ ತಾಲೂಕಿನ ಅರಂತೋಡು ಗ್ರಾಮದಲ್ಲಿ ಹೊಳೆ ದಾಟಲು ಸೇತುವೆ ಇಲ್ಲದ ಹಿನ್ನೆಲೆಯಲ್ಲಿ ಅರಮನೆಗಯ ಪ್ರದೇಶದ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳು ಮುಂಬರುವ ವಿಧಾನ ಸಭಾ ಚುನಾವಣೆಯನ್ನು ಬಹಿಷ್ಕರಿಸಲು ಏ. 11 ರಂದು ನಿರ್ಧರಿಸಿದ್ದಾರೆ.ಅರಮನೆಗಯ ಅನ್ನುವ ಪ್ರದೇಶ ಅಂಗಾರ ಅವರ ಕ್ಷೇತ್ರವಾಗಿದ್ದು, ಈ ಊರಿನಲ್ಲೇ ನಡುವೆ ಹರಿಯುವ ಹೊಳೆಗೆ ಸೇತುವೆ ಇಲ್ಲ. ಅಲ್ಲೊಂದು ಸೇತುವೆ ಆಗಬೇಕೆಂದು ಪರಿಸರದ ನಿವಾಸಿಗಳು 30 ವರ್ಷಗಳಿಂದ ಬೇಡಿಕೆ ಸಲ್ಲಿಸುತ್ತ ಬಂದಿದ್ದಾರೆ. ಹೊಳೆ

ಶಾಸಕ ಅಂಗಾರ ಕ್ಷೇತ್ರದಲ್ಲಿ ಮತದಾನ ಬಹಿಷ್ಕಾರ : 30 ವರ್ಷಗಳಿಂದ ಈಡೇರದ ಬೇಡಿಕೆ Read More »

ಪುತ್ತೂರಿನಲ್ಲಿ ಒಕ್ಕಲಿಗ ಗೌಡ ಸಮುದಾಯ ಪ್ರಾತಿನಿಧ್ಯಕ್ಕೆ ಒತ್ತಾಯ | ಅವಕಾಶ ನೀಡಿದದ್ದರೆ ಜಿಲ್ಲೆಯ ಒಕ್ಕಲಿಗರು ಒಗ್ಗಟ್ಟಾಗಿ ಸೂಕ್ತ ತೀರ್ಮಾನ | ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲೂ ವ್ಯತಿರಿಕ್ತ ಪರಿಣಾಮ | ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಆಗ್ರಹ

ಮಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಿಂದ ಒಕ್ಕಲಿಗ ಗೌಡ ಸಮುದಾಯದ ಅಭ್ಯರ್ಥಿಗೆ ಅವಕಾಶ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗರ ಗೌಡ ಸೇವಾ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪುತ್ತೂರು ಕ್ಷೇತ್ರದಲ್ಲಿ ಶಾಸಕರಾಗಿರುವ ಸಂಜೀವ ಮಠಂದೂರು ಅವರು ಸಮರ್ಥ ನಾಯಕರು. ಆದರೆ ಅವರಿಗೆ ಟಿಕೇಟ್ ನಿರಾಕರಿಸಲಾಗಿದೆ ಎಂಬ ಮಾತು ಕೇಳಿಬರುತ್ತಿದೆ. ಇದು ನಿಜವೇ ಆಗಿದ್ದಲ್ಲಿ ಟಿಕೇಟ್ ನಿರಾಕರಿಸಲು ಕಾರಣವೇನು? ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ

ಪುತ್ತೂರಿನಲ್ಲಿ ಒಕ್ಕಲಿಗ ಗೌಡ ಸಮುದಾಯ ಪ್ರಾತಿನಿಧ್ಯಕ್ಕೆ ಒತ್ತಾಯ | ಅವಕಾಶ ನೀಡಿದದ್ದರೆ ಜಿಲ್ಲೆಯ ಒಕ್ಕಲಿಗರು ಒಗ್ಗಟ್ಟಾಗಿ ಸೂಕ್ತ ತೀರ್ಮಾನ | ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲೂ ವ್ಯತಿರಿಕ್ತ ಪರಿಣಾಮ | ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಆಗ್ರಹ Read More »

error: Content is protected !!
Scroll to Top