ದಕ್ಷಿಣ ಕನ್ನಡ

ಮಂಗಳೂರು : ಮೂರು ಶೂಟೌಟ್‌ ಪ್ರಕರಣದಲ್ಲಿ ಬನ್ನಂಜೆರಾಜ ಖುಲಾಸೆ

ಮಂಗಳೂರು : ಕುಖ್ಯಾತ ಪಾತಕಿ ಬನ್ನಂಜೆರಾಜನ ವಿರುದ್ದ ಮಂಗಳೂರಿನಲ್ಲಿ ದಾಖಲಾಗಿದ್ದ 3 ಶೂಟೌಟ್‌ ಪ್ರಕರಣಗಳಲ್ಲಿ ಖುಲಾಸೆಗೊಂಡಿದೆ. ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮೂರೂ ಪ್ರಕರಣಗಳಲ್ಲಿ ಖುಲಾಸೆಗೊಳಿಸಿ ತೀರ್ಪು ನೀಡಿದೆ.ಈತನ ವಿರುದ್ದ ಪಾಂಡೇಶ್ವರ ಪೊಲೀಸ್‌ ಠಾಣೆ, ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಮೂರೂ ಪ್ರಕರಣಗಳಲ್ಲಿ ಪೊಲೀಸರು ತನಿಖೆ ನಡೆಸಿ ಬನ್ನಂಜೆರಾಜ ಮತ್ತು ಆತನ ಸಹಚರರ ಮೇಲೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಈ ಘಟನೆಗಳ ವೇಳೆಯಲ್ಲಿ ಬನ್ನಂಜೆರಾಜ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. 2015 ನೇ ಇಸವಿಯಲ್ಲಿ […]

ಮಂಗಳೂರು : ಮೂರು ಶೂಟೌಟ್‌ ಪ್ರಕರಣದಲ್ಲಿ ಬನ್ನಂಜೆರಾಜ ಖುಲಾಸೆ Read More »

ಹಿರಿಯ ದೈವಪಾತ್ರಿ ಅಣ್ಣು ಶೆಟ್ಟಿ ದೈವಾಧೀನ

ಮೂಡುಬಿದಿರೆ : ಹಿರಿಯ ದೈವಪಾತ್ರಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಾಡಿ ಅಣ್ಣು ಶೆಟ್ಟಿ(78) ಅವರು ಅಲ್ಪಕಾಲದ ಅಸೌಖ್ಯದಿಂದ ಏ. 7 ರಂದುನ ನಿಧನ ಹೊಂದಿದರು. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಇವರು ಶುಕ್ರವಾರದ ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಲಾಡಿ ಹಜಂಕಾಲಬೆಟ್ಟು, ಮಾರ್ನಾಡು, ತೋಡಾರು ಸಹಿತ ದ.ಕ ಜಿಲ್ಲೆಯ ಕಾರ್ಕಳ ತಾಲೂಕಿನ ಹಲವಾರು ದೈವಸ್ಥಾನಗಳಲ್ಲಿ ದೈವಪಾತ್ರಿಯಾಗಿ ಸೇವೆ ಸಲ್ಲಿಸಿದ್ದರು. ಮೂಡಬಿದಿರೆಯ ಮಾಸ್ತಿಕಟ್ಟೆಯಲ್ಲಿ ವಾಸವಾಗಿದ್ದ ಇವರ ಅಂತ್ಯಸಂಸ್ಕಾರವು ಮಾರ್ನಾಡು ಕಲ್ಲಬೆಟ್ಟು ಗುತ್ತುಮನೆಯಲ್ಲಿ ನಡೆಯಿತು. ಅವರು ಪತ್ನಿ, ಇಬ್ಬರು ಹೆಣ್ಣು ಮಕ್ಕಳು

ಹಿರಿಯ ದೈವಪಾತ್ರಿ ಅಣ್ಣು ಶೆಟ್ಟಿ ದೈವಾಧೀನ Read More »

ಕೈತಪ್ಪಿದ ಟಿಕೆಟ್​ಗಾಗಿ ಬಹಿರಂಗ ಪತ್ರದ ಮೂಲಕ ಅಭಿಮಾನಿಗಳಿಗೊಂದು ಮನವಿ ಮಾಡಿದ ದತ್ತಾ

ಚಿಕ್ಕಮಗಳೂರು : ಟಿಕೆಟ್​ ಖಚಿತ ಎಂದು ಭರವಸೆ ಸಿಕ್ಕ ಮೇಲೆಯೇ ಜೆಡಿಎಸ್​ ಬಿಟ್ಟು ಕಾಂಗ್ರೆಸ್​ ಸೇರ್ಪಡೆಯಾಗಿದ್ದ ಮಾಜಿ ಶಾಸಕ ವೈಎಸ್​ವಿ ದತ್ತಾಗೆ ಕಾಂಗ್ರೆಸ್ ಟಿಕೆಟ್​ ತಪ್ಪಿದೆ. ಕಾಂಗ್ರಸ್ ಸಿಗುತ್ತೆ ಎಂದು ಬಹಳ ನಿರೀಕ್ಷೆಗಳೊಂದಿಗೆ ದತ್ತಾ ಜೆಡಿಎಸ್ ಬಿಟ್ಟುಬಂದಿದ್ದರು. ಆದ್ರೆ, ಅಂತಿಮವಾಗಿ ಕಾಂಗ್ರೆಸ್​, ಆನಂದ್​ ಅವರಿಗೆ ಮಣೆ ಹಾಕಿದೆ. ಇದರಿಂದ ದತ್ತಾ ಅಸಮಾಧಾನಗೊಂಡಿದ್ದು, ಅಭಿಮಾನಿಗಳಿಗೆ ಒಂದು ಬಹಿರಂಗಪತ್ರ ಬರೆದಿದ್ದಾರೆ. ಇದರೊಂದಿಗೆ ಕಾಂಗ್ರೆಸ್​ ನಾಯಕರ ವಿರುದ್ಧ ಸಿಡಿದೆದ್ದಿದ್ದು, ಮುಂದಿನ ರಾಜಕೀಯ ನಡೆ ಬಗ್ಗೆ ತೀರ್ಮಾನಿಸಲು ಅಭಿಮಾನಿಗಳ ಸಭೆ ಕರೆದಿದ್ದಾರೆ.ನನ್ನ ಮತ್ತು

ಕೈತಪ್ಪಿದ ಟಿಕೆಟ್​ಗಾಗಿ ಬಹಿರಂಗ ಪತ್ರದ ಮೂಲಕ ಅಭಿಮಾನಿಗಳಿಗೊಂದು ಮನವಿ ಮಾಡಿದ ದತ್ತಾ Read More »

ವಿಮಾನ ಲ್ಯಾಂಡಿಂಗ್‌ ವೇಳೆ ತೊಡಕು

ಪ್ರಯಾಣಿಕರು ಪಾರು ಮಂಗಳೂರು : ಬೆಂಗಳೂರಿನಿಂದ ಮಂಗಳೂರಿಗೆ ಬಂದ ಇಂಡಿಗೋ ವಿಮಾನ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್‌ ಆಗುವ ವೇಳೆ ತೊಡಕು ಉಂಟಾದ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.ಬೆಂಗಳೂರಿನಿಂದ ಮಂಗಳೂರಿಗೆ ಬಂದಿದ್ದ ಇಂಡಿಗೋ 6E6858 ವಿಮಾನ ಲ್ಯಾಂಡಿಂಗ್‌ ಆಗುವ ವೇಳೆ ತೊಂದರೆ ಉಂಟಾಗಿದೆ. ಈ ವೇಳೆ ಮತ್ತೊಮ್ಮೆ ವಿಮಾನವನ್ನು ಟೇಕ್‌ ಆಫ್‌ ಮಾಡಿ ಪುನಃ ಲ್ಯಾಂಡ್‌ ಮಾಡಲಾಗಿದೆ. ಪ್ರಯಾಣಿಕರು ಸುರಕ್ಷಿತವಾಗಿ ಬಂದಿಳಿದಿದ್ದಾರೆ.

ವಿಮಾನ ಲ್ಯಾಂಡಿಂಗ್‌ ವೇಳೆ ತೊಡಕು Read More »

ಬಲ್ಗೇರಿಯಾದಲ್ಲಿ ಉದ್ಯೋಗ ಕೊಡಿಸುವುದಾಗಿ 50 ಲಕ್ಷ ರೂಪಾಯಿ ವಂಚನೆ : ಆರೋಪಿ ಬಂಧನ

ಮಂಗಳೂರು : ಬಲ್ಗೇರಿಯಾದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ, 30ಕ್ಕೂ ಹೆಚ್ಚು ಮಂದಿಗೆ ವಂಚಿಸಿ, 50 ಲಕ್ಷಕ್ಕೂ ಹೆಚ್ಚು ಹಣ ವಸೂಲಿ ಮಾಡಿದ ಆರೋಪದ ಮೇಲೆ ಮಂಗಳೂರಿನ ವ್ಯಕ್ತಿಯೊಬ್ಬನನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಿಜೈ ಮೂಲದ ಸುಧೀರ್ ರಾವ್ ವಿ ಆರ್. ಬಲ್ಗೇರಿಯಾದಲ್ಲಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿ ಹಲವರಿಂದ 50 ಲಕ್ಷ ರೂ.ಗೂ ಹೆಚ್ಚು ಹಣವನ್ನು ವಸೂಲಿ ಮಾಡಿದ್ದನು. ಹಣ ಪಡೆದಿದ್ದ ಆತ ನಂತರ ವೀಸಾ ಕೊಡಿಸಿಲ್ಲ ಅಥವಾ ಹಣವನ್ನು ಹಿಂದಿರುಗಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.ಆರೋಪಿ

ಬಲ್ಗೇರಿಯಾದಲ್ಲಿ ಉದ್ಯೋಗ ಕೊಡಿಸುವುದಾಗಿ 50 ಲಕ್ಷ ರೂಪಾಯಿ ವಂಚನೆ : ಆರೋಪಿ ಬಂಧನ Read More »

ಚುನಾವಣೆಗೆ ಸಂಬಂಧಿಸಿ ಕರ್ತವ್ಯ ನಿರ್ವಹಿಸಲು ನಾಲ್ಕು ಸಿಆರ್ ಪಿಎಫ್‍ ಕಂಪೆನಿಗಳು ಜಿಲ್ಲೆಗೆ

ಪುತ್ತೂರು: ದ.ಕ.ಜಿಲ್ಲಾ ಘಟಕದ ವ್ಯಾಪ್ತಿಯಲ್ಲಿ 2023 ರ ಚುನಾವಣೆಗೆ ಸಂಬಂಧಿಸಿದಂತೆ ಕರ್ತವ್ಯ ನಿರ್ವಹಿಸಲು  4 ಸಿಆರ್ ಪಿಎಫ್ ಕಂಪೆನಿಗಳು ಆಗಮಿಸಿದ್ದು, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಸುಳ್ಯ ವಿಧಾನಸಭಾ ಕ್ಷೇತ್ರಗಳಿಗೆ ತಲಾ ಒಂದರಂತೆ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಚುನಾವಣೆಗೆ ಸಂಬಂಧಿಸಿದಂತೆ ಚೆಕ್ ಪೋಸ್ಟ್, ಸ್ಟ್ರಾಂಗ್ ರೂಮ್, ರೂಟ್ ,ಮಾರ್ಚ್‍, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ಕಂಪೆನಿಗಳು ಕರ್ತವ್ಯ ನಿರ್ವಹಿಸಲಿವೆ. ಇನ್ನಷ್ಟು ಹೆಚ್ಚಿನ ಸಿಆರ್ ಪಿಎಫ್ ಕಂಪೆನಿಗಳು ಜಿಲ್ಲೆಗೆ ಆಗಮಿಸಲಿವೆ ಎಂದು ತಿಳಿದು ಬಂದಿದೆ.

ಚುನಾವಣೆಗೆ ಸಂಬಂಧಿಸಿ ಕರ್ತವ್ಯ ನಿರ್ವಹಿಸಲು ನಾಲ್ಕು ಸಿಆರ್ ಪಿಎಫ್‍ ಕಂಪೆನಿಗಳು ಜಿಲ್ಲೆಗೆ Read More »

ನೈತಿಕ ಪೊಲೀಸ್‌ ಗಿರಿ : ಹಿಂದೂ ಯುವತಿಯೊಂದಿಗೆ ಮಾತನಾಡಿದ ಮುಸ್ಲಿಂ ಯುವಕನ ಮೇಲೆ ಹಲ್ಲೆ

ಮಂಗಳೂರು : ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ ಗಿರಿ ಘಟನೆ ಎ. 5 ರಂದು ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ಬಳಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ಯುವಕನೊಬ್ಬ ಹಿಂದೂ ಸ್ನೇಹಿತೆಯೊಂದಿಗೆ ಮಾತನಾಡಿದ್ದಕ್ಕಾಗಿ ಆತನ ಮೇಲೆ ಗ್ಯಾಂಗ್‌ವೊಂದು ಹಲ್ಲೆ ನಡೆಸಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಸಂತ್ರಸ್ತನನ್ನು ಮೊಹಮ್ಮದ್ ಜಹೀರ್ (22) ಎಂದು ಗುರುತಿಸಲಾಗಿದೆ. ಗಾಯಗೊಂಡ ಯುವಕನನ್ನು ನಂತರ ಆಸ್ಪತ್ರೆಗೆ ದಾಖಲಿಸಲಾಯಿತು. ಈ ಕೃತ್ಯದ ಹಿಂದೆ ಬಜರಂಗದಳದ ಕಾರ್ಯಕರ್ತರು ಇರಬಹುದು ಎಂದು ಶಂಕಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನೈತಿಕ ಪೊಲೀಸ್‌ ಗಿರಿ : ಹಿಂದೂ ಯುವತಿಯೊಂದಿಗೆ ಮಾತನಾಡಿದ ಮುಸ್ಲಿಂ ಯುವಕನ ಮೇಲೆ ಹಲ್ಲೆ Read More »

ದೇವಸ್ಥಾನದ ಪುನರ್‌ನಿರ್ಮಾಣದ ಸಂದರ್ಭ ಬೃಹತ್​ ಪಾಣಿಪೀಠ ಗೋಚರ

ಪುತ್ತೂರು : ಮೂರು ದಿನಗಳ ಹಿಂದೆ ದೇವಸ್ಥಾನದ ಪುಷ್ಕರಣಿ ಮಧ್ಯೆ ಇರುವ ಕಟ್ಟೆಯ ಕೆಳಭಾಗದ ವರುಣ ದೇವರ ವಿಗ್ರಹದ ಬಳಿ ಭೂಗರ್ಭದಲ್ಲಿ ನೀಲಿ-ಬಿಳಿ ಮಿಶ್ರಿತ ಹುಡಿ ಮಣ್ಣಿನೊಂದಿಗೆ ಅಂಟಿಕೊಂಡಿದ್ದ ವರುಣ ದೇವರ ವಿಗ್ರಹದ ಪಾಣಿಪೀಠ ಕಂಡುಬಂದಿತ್ತು. ಇದೀಗ ಅದರ ಕೆಳಗೇ ಬೃಹತ್ ಪಾಣಿಪೀಠ ಪತ್ತೆಯಾಗಿದೆ. ದೇವಸ್ಥಾನದ ಪುಷ್ಕರಣಿಯ ಮಧ್ಯೆ ಇರುವ ಕಟ್ಟೆಯ ಪುನರ್ ನಿರ್ಮಾಣದ ಕೆಲಸ ಕಾರ್ಯ ನಡೆಯುತ್ತಿರುವ ಹಿನ್ನಲೆಯಲ್ಲಿ ಕೆರೆಯ ಮಧ್ಯ ಭಾಗದ ಕಟ್ಟೆಯ ಸುತ್ತ ಕಾಫರ್ ಡ್ರಾಜ್ ಮಾಡಿ ಒಳಗಿನ ನೀರನ್ನು ಹೊರತೆಗೆದಾಗ ಶ್ರೀವರುಣ

ದೇವಸ್ಥಾನದ ಪುನರ್‌ನಿರ್ಮಾಣದ ಸಂದರ್ಭ ಬೃಹತ್​ ಪಾಣಿಪೀಠ ಗೋಚರ Read More »

ಕೆಂಪು ಬಟ್ಟೆಯನ್ನು ಕೈಯಲ್ಲಿ ಪ್ರದರ್ಶಿಸಿ ರೈಲು ಅವಘಡ ತಪ್ಪಿಸಿದ ಮಹಿಳೆ

ಮಂಗಳೂರು : ರೈಲು ಹಳಿ ಮೇಲೆ ಮರ ಬಿದ್ದದ್ದನ್ನು ಗಮನಿಸಿದ ಮಹಿಳೆಯೊಬ್ಬರು ಕೆಂಪುಬಟ್ಟೆ ಯನ್ನು ಕೈಯಲ್ಲಿ ಪ್ರದರ್ಶಿಸಿ ಸಂಭಾವ್ಯ ರೈಲು ಅಪಘಾತವನ್ನು ತಪ್ಪಿಸಿರುವ ಘಟನೆ ಪಡೀಲ್‌ – ಜೋಕಟ್ಟೆ ಮಧ್ಯೆಯ ಪಚ್ಚನಾಡಿ ಸಮೀಪ ಮಂದಾರದಲ್ಲಿ ಏ 04 ರಂದು ನಡೆದಿದೆ. ಚಂದ್ರಾವತಿ (70) ಎಂಬವರೇ ಸಂಭಾವ್ಯ ರೈಲು ಅಪಘಾತವನ್ನು ತಪ್ಪಿಸಿ ಹಲವಾರು ಪ್ರಯಾಣಿಕರ ಪ್ರಾಣವನ್ನು ಉಳಿಸಿದ ಮಹಿಳೆ. ಮಾ. 21ರಂದು ಮಧ್ಯಾಹ್ನ ಸುಮಾರು 2.10ರ ಸುಮಾರಿಗೆ ರೈಲು ಹಳಿಗೆ ಮರ ಬಿದ್ದಿದ್ದು, ಅದೇ ಸಮಯಕ್ಕೆ ಮಂಗಳೂರಿನಿಂದ ಮುಂಬಯಿಗೆ ಮತ್ಸ್ಯಗಂಧ

ಕೆಂಪು ಬಟ್ಟೆಯನ್ನು ಕೈಯಲ್ಲಿ ಪ್ರದರ್ಶಿಸಿ ರೈಲು ಅವಘಡ ತಪ್ಪಿಸಿದ ಮಹಿಳೆ Read More »

ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮುಡ್ನೂರು ಗ್ರಾಮದ ಗುತ್ತಿಕಲ್ಲು ಎಂಬಲ್ಲಿ ಏ. 3 ರಂದು ಸಂಭವಿಸಿದೆ. ಶಿವಪ್ಪ ಗೌಡ ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಕೂಲಿ ಕೆಲಸ ಮಾಡಿಕೊಂಡಿದ್ದು, ಸುಮಾರು 4 ವರ್ಷಗಳ ಹಿಂದೆ ದಂಪತ್ಯದಲ್ಲಿ ಮನಸ್ಧಾಪ ಉಂಟಾಗಿ ಆತನ ಪತ್ನಿ ತವರು ಮನೆಯಲ್ಲಿ ನೆಲೆಸಿದ ಕಾರಣ ಮನೆಯಲ್ಲಿ ಒಬ್ಬರೇ ಇರುತ್ತಿದ್ದರು. ಏ. 1 ರಂದು ಶಿವಪ್ಪ ಗೌಡ ಕಾಣೆಯಾದ ಬಗ್ಗೆ ಅಣ್ಣ ತಿಮ್ಮಪ್ಪ ಗೌಡ ಪುತ್ತೂರು ನಗರ ಪೊಲೀಸ್‌

ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ Read More »

error: Content is protected !!
Scroll to Top