ದಕ್ಷಿಣ ಕನ್ನಡ

ಮುಂಡಾಜೆ: ನೆಲಮಾಳಿಗೆಯಲ್ಲಿಟ್ಟಿದ್ದ ಚಿನ್ನಾಭರಣ ಕಳವು | ಕಳವಾದ ಚಿನ್ನಾಭರಣದ ಮೌಲ್ಯ ಸುಮಾರು 5 ಲಕ್ಷ ರೂ.!

ಬೆಳ್ತಂಗಡಿ: ಇಲ್ಲಿನ ಮುಂಡಾಜೆಯ ಮನೆಯೊಂದರಿಂದ ಚಿನ್ನಾಭರಣ ಕಳವಾದ ಘಟನೆ ಸೆ. 12ರಂದು ಬೆಳಕಿಗೆ ಬಂದಿದೆ. ಕಳವಾದ ಚಿನ್ನಾಭರಣದ ಮೌಲ್ಯ 5 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಮುಂಡಾಜೆ ಗ್ರಾಮದ ನಿವಾಸಿ ಕಡಂಬಳ್ಳಿಯ ಪ್ರಮೋದ್ ವಿ. ಭಿಡೆ ಅವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮನೆ ಕೆಲಸಕ್ಕೆ ಬಂದವರ ಮೇಲೆ ಸಂಶಯ ವ್ಯಕ್ತಪಡಿಸಿದ್ದು, ಪ್ರಕರಣ ದಾಖಲಾಗಿದೆ. ಜುಲೈ 5ರಂದು ಮನೆ ಸಾರಣೆ ಹಾಗೂ ಪೈಂಟಿಂಗ್ ಕೆಲಸ ಪ್ರಾರಂಭಿಸಿದ್ದು, ಸುಮಾರು 10ರಿಂದ 13 ಜನ […]

ಮುಂಡಾಜೆ: ನೆಲಮಾಳಿಗೆಯಲ್ಲಿಟ್ಟಿದ್ದ ಚಿನ್ನಾಭರಣ ಕಳವು | ಕಳವಾದ ಚಿನ್ನಾಭರಣದ ಮೌಲ್ಯ ಸುಮಾರು 5 ಲಕ್ಷ ರೂ.! Read More »

ಸೆ. 19ರಂದೇ ರಜೆ ಘೋಷಿಸಲು ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ | ಜಿಲ್ಲಾಧಿಕಾರಿಗೆ ಸೂಚನೆ ನೀಡಿದ ದಿನೇಶ್ ಗುಂಡೂರಾವ್

ಪುತ್ತೂರು: ಗಣೇಶೋತ್ಸವದ ಸಾರ್ವತ್ರಿಕ ರಜೆಯ ಗೊಂದಲಕ್ಕೆ ತೆರೆ ಎಳೆಯಲು ದ.ಕ. ಜಿಲ್ಲಾ ಉಸ್ತುವಾರಿ ಸಚಿವರು, ದ.ಕ. ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ಸೆ. 19ರಂದು ಗಣೇಶೋತ್ಸವ ಹಬ್ಬ ಆಚರಣೆ ನಡೆಯಲಿದ್ದು, ಸೆ. 18ಕ್ಕೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಇದರಿಂದ ಕರಾವಳಿ ಭಾಗದಲ್ಲಿ ಗೊಂದಲ ಉಂಟಾಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗೆ ಸೂಚನೆ ನೀಡಿರುವ ದ.ಕ. ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು, ಸರಕಾರಿ ರಜೆಯನ್ನು ಮಾರ್ಪಡಿಸಿ ಅನುಕೂಲವಾಗುವಂತೆ ಸೆ. 19ರಂದು ರಜೆ ಘೋಷಿಸುವ ಸಂಬಂಧ

ಸೆ. 19ರಂದೇ ರಜೆ ಘೋಷಿಸಲು ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ | ಜಿಲ್ಲಾಧಿಕಾರಿಗೆ ಸೂಚನೆ ನೀಡಿದ ದಿನೇಶ್ ಗುಂಡೂರಾವ್ Read More »

ಸರ್ಕಾರದ ವಿರುದ್ಧ, ವ್ಯವಸ್ಥೆಯ ವಿರುದ್ಧ ಜನರು ತಿರುಗಿಬೀಳುವಂತಾಗಿದೆ: ಸಂಜೀವ ಮಠಂದೂರು | ಹೋರಾಟದ ಕಾವು ತಗ್ಗಿಸಲು ಸಂಘಟನೆಗಳಿಗೆ ಹಣ ಪೂರೈಕೆ: ಪ್ರವೀಣ್ ಕುಂಟ್ಯಾನ ಆರೋಪ | ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಗೆ ಮಂಗಳೂರಿನಲ್ಲಿ ಜಿಲ್ಲಾ ಹೋರಾಟ ಸಮಿತಿಯಿಂದ ಪ್ರತಿಭಟನೆ

ಮಂಗಳೂರು: ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ಜಿಲ್ಲಾ ಹೋರಾಟ ಸಮಿತಿ ವತಿಯಿಂದ ಮಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ಬುಧವಾರ ಎರಡನೇ ದಿನಕ್ಕೆ ಕಾಲಿಟ್ಟಿತು. ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ಸರ್ಕಾರದ ವಿರುದ್ಧ, ವ್ಯವಸ್ಥೆಯ ವಿರುದ್ಧ ಜನರು ತಿರುಗಿ ಬೀಳುವಂತಾಗಿದೆ. ಇಂತಹ ಒಂದು ಹೋರಾಟವನ್ನು ಮಹೇಶ್ ಶೆಟ್ಟಿ ತಿಮರೋಡಿ ಅವರು ಸಂಘಟಿಸಿದ್ದಾರೆ. ನ್ಯಾಯಪರವಾದ ಇಂತಹ ಹೋರಾಟವನ್ನು ವಿರೋಧಿಸುವುದು ಎಷ್ಟು ಸರಿ? ಅಪರಾಧಿ ಯಾರೆಂದು ತಿಳಿಯಬೇಕು ತಾನೇ? ಪ್ರಜಾಪ್ರಭುತ್ವದಲ್ಲಿ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಕೊಡುವ ಕೆಲಸವನ್ನು ಸರ್ಕಾರ

ಸರ್ಕಾರದ ವಿರುದ್ಧ, ವ್ಯವಸ್ಥೆಯ ವಿರುದ್ಧ ಜನರು ತಿರುಗಿಬೀಳುವಂತಾಗಿದೆ: ಸಂಜೀವ ಮಠಂದೂರು | ಹೋರಾಟದ ಕಾವು ತಗ್ಗಿಸಲು ಸಂಘಟನೆಗಳಿಗೆ ಹಣ ಪೂರೈಕೆ: ಪ್ರವೀಣ್ ಕುಂಟ್ಯಾನ ಆರೋಪ | ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಗೆ ಮಂಗಳೂರಿನಲ್ಲಿ ಜಿಲ್ಲಾ ಹೋರಾಟ ಸಮಿತಿಯಿಂದ ಪ್ರತಿಭಟನೆ Read More »

ಸೆ. 15 – 19: ಇತಿಹಾಸ ಪ್ರಸಿದ್ಧ ಸುಳ್ಳಮಲೆ – ಬಲ್ಲಮಲೆಯಲ್ಲಿ ಪುಣ್ಯ ಗುಹಾ ತೀರ್ಥ ಸ್ನಾನ

ಮಾಣಿ: ಪಾಂಡವರು ತಮ್ಮ ಅಜ್ಞಾತವಾಸದ ಸಮಯದಲ್ಲಿ ತಂಗಿದ್ದರು ಎಂದು ನಂಬಲಾಗಿರುವ ಇತಿಹಾಸ ಪ್ರಸಿದ್ಧ ಅನಂತಾಡಿ ಸಮೀಪದ ಸುಳ್ಳಮಲೆ – ಬಲ್ಲಮಲೆಯಲ್ಲಿ ಸೆ. 15ರಿಂದ ಸೆ. 19ರವರೆಗೆ ಗುಹಾ ತೀರ್ಥ ಸ್ನಾನ ನಡೆಯಲಿದೆ. ಸೋಣ ಅಮಾವಾಸ್ಯೆಯಂದು ಗುಹಾ ತೀರ್ಥ ಸ್ನಾನಕ್ಕೆ ಸಂಪ್ರದಾಯ ಪ್ರಕಾರ ಕೇರ್ಪು (ಬಿದಿರಿನ ಏಣಿ) ಇಡುವ ಮೂಲಕ ಗುಹಾ ತೀರ್ಥಸ್ನಾನಕ್ಕೆ ಚಾಲನೆ ದೊರಕಲಿದೆ. ಶುಕ್ಲ ಪಕ್ಷದ ಚೌತಿಯವರೆಗೆ ಅಂದರೆ ಸೆ. 19ರವರೆಗೆ ತೀರ್ಥ ಸ್ನಾನಕ್ಕೆ ಇಲ್ಲಿ ಮುಕ್ತ ಅವಕಾಶ ಕಲ್ಪಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ

ಸೆ. 15 – 19: ಇತಿಹಾಸ ಪ್ರಸಿದ್ಧ ಸುಳ್ಳಮಲೆ – ಬಲ್ಲಮಲೆಯಲ್ಲಿ ಪುಣ್ಯ ಗುಹಾ ತೀರ್ಥ ಸ್ನಾನ Read More »

ಕೇರಳದಲ್ಲಿ ನಿಫಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಳ | ಮಂಗಳೂರು ಸೇರಿದಂತೆ ಕರ್ನಾಟಕ ಗಡಿಗಳಲ್ಲಿ ಕಟ್ಟೆಚ್ಚರ

ಮಂಗಳೂರು: ಕೇರಳದಲ್ಲಿ ನಿಫಾ ವೈರಸ್ ಸೋಂಕಿತರ ಸಂಖ್ಯೆ ನಾಲ್ಕಕ್ಕೇರಿಕೆಗೊಂಡಿದೆ. ಇದರ ಬೆನ್ನಲ್ಲೇ ಮಂಗಳೂರು ಸೇರಿದಂತೆ ಕರ್ನಾಟಕ – ಕೇರಳ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮಂಗಳವಾರ ಕೇರಳದ ಕೋಝಿಕ್ಕೋಡಿನಲ್ಲಿ ನಿಫಾ ವೈರಸ್ ಪತ್ತೆಯಾಗಿತ್ತು. ಇಬ್ಬರಲ್ಲಿ ಸೋಂಕು ಸಾಧ್ಯತೆ ಪತ್ತೆಯಾದ ಬೆನ್ನಲ್ಲೇ, ಅವರ ಸಂಬಂಧಿಕರನ್ನು ಐಸಿಯು ನಿಗಾದಲ್ಲಿರಿಸಲಾಗಿತ್ತು. ಇದೀಗ ಸೋಂಕಿತರ ಸಂಖ್ಯೆ ಹೆಚ್ಚಳಗೊಂಡಿದ್ದು, ಕೇರಳ ಆರೋಗ್ಯ ಇಲಾಖೆ ಹೆಚ್ಚಿನ ನಿಗಾ ವಹಿಸಿದೆ. ಇದರ ಬೆನ್ನಲ್ಲೇ ಕೇರಳ ರಾಜ್ಯಕ್ಕೆ ಹೊಂದಿಕೊಂಡಂತಿರುವ ಕರ್ನಾಟಕದ ಗಡಿಗಳಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಜಾಗೃತಿ ಮಾಹಿತಿ ರವಾನೆ ಮಾಡಿದ್ದು,

ಕೇರಳದಲ್ಲಿ ನಿಫಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಳ | ಮಂಗಳೂರು ಸೇರಿದಂತೆ ಕರ್ನಾಟಕ ಗಡಿಗಳಲ್ಲಿ ಕಟ್ಟೆಚ್ಚರ Read More »

ಸೌಜನ್ಯ ಪ್ರಕರಣದ ತನಿಖಾಧಿಕಾರಿಯನ್ನು ವಿಚಾರಣೆಗೊಳಪಡಿಸಲು ಆಗ್ರಹ | ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ

ಮಂಗಳೂರು: ಸೌಜನ್ಯ ಅತ್ಯಾಚಾರ, ಹತ್ಯೆ ಪ್ರಕರಣ ಮರು ತನಿಖೆ ಮಾಡಬೇಕೆಂದು ಒತ್ತಾಯಿಸಿ ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳೂರಿನ ಮಿನಿ ವಿಧಾನ ಸೌಧದ ಎದುರು ಎರಡು ದಿನಗಳ ಧರಣಿ ಮಂಗಳವಾರ ಆರಂಭಗೊಂಡಿತು. ತನಿಖಾಧಿಕಾರಿಯನ್ನು ವಿಚಾರಣೆಗೆ ಒಳಪಡಿಸಬೇಕು, ಜಿಲ್ಲಾಧಿಕಾರಿಯವರು ಸ್ಥಳಕ್ಕೆ ಬಂದು ಅಹವಾಲು ಕೇಳಬೇಕು ಎಂದು ಧರಣಿ ನಿರತರು ಆಗ್ರಹಿಸಿದ್ದಾರೆ.

ಸೌಜನ್ಯ ಪ್ರಕರಣದ ತನಿಖಾಧಿಕಾರಿಯನ್ನು ವಿಚಾರಣೆಗೊಳಪಡಿಸಲು ಆಗ್ರಹ | ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ Read More »

ಸೌಜನ್ಯ ಮನೆಗೆ ಭೇಟಿ ನೀಡಿದ ವಿಹಿಂಪ, ಬಜರಂಗದಳ ಪ್ರಮುಖರು | ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸಲು 4 ದಿನ ಮಾತ್ರ ಬಾಕಿ

ಬೆಳ್ತಂಗಡಿ: ಸೌಜನ್ಯ ಪ್ರಕರಣದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿ, ಮನೆಯವರೇ ಅರ್ಜಿ ಸಲ್ಲಿಸುವಂತೆ ಸೂಚಿಸಿತ್ತು. ಹೀಗೆ ಮೇಲ್ಮನವಿ ಸಲ್ಲಿಸಲು 4 ದಿನಗಳು ಮಾತ್ರ ಬಾಕಿ ಉಳಿದಿದ್ದು, ದಯಮಾಡಿ ಅರ್ಜಿ ಸಲ್ಲಿಸಿ ಎಂದು ಸೌಜನ್ಯ ಮನೆಗೆ ಭೇಟಿ ನೀಡಿದ ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳ ಪ್ರಮುಖರು ವಿನಂತಿಸಿದರು. ಸೌಜನ್ಯ ಪ್ರಕರಣದ ವಿಚಾರಣೆ ಆಗ್ರಹಿಸಿ, ಗಿರೀಶ ಭಾರದ್ವಾಜ್ , ನವೀನ್ ಕುಮಾರ್ ನೆರಿಯ ಬೆಳ್ತಂಗಡಿ , ವಿನಾಯಕ ಫ್ರೆಂಡ್ಸ್ ಟ್ರಸ್ಟ್ ಬಲ್ನಾಡು ಪುತ್ತೂರು ಒಟ್ಟಾಗಿ ಸಾರ್ವಜನಿಕ ಹಿತಾಸಕ್ತಿ

ಸೌಜನ್ಯ ಮನೆಗೆ ಭೇಟಿ ನೀಡಿದ ವಿಹಿಂಪ, ಬಜರಂಗದಳ ಪ್ರಮುಖರು | ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸಲು 4 ದಿನ ಮಾತ್ರ ಬಾಕಿ Read More »

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ | ರೈತ ವಿರೋಧಿ, ಜನ ವಿರೋಧಿ ನಿಲುವಿಗೆ ಖಂಡನೆ

ಸುಳ್ಯ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ರೈತ ವಿರೋಧಿ ಮತ್ತು ಜನ ವಿರೋಧಿ ನಿಲುವುಗಳನ್ನು ಖಂಡಿಸಿ ಬಿಜೆಪಿ ಸುಳ್ಯ ಮಂಡಲ ರೈತ ಮೋರ್ಚಾ ವತಿಯಿಂದ ಸೆ. 11ರಂದು ಸುಳ್ಯ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನಾ ಸಭೆ ನಡೆಯಿತು. ಜನಪ್ರತಿನಿಧಿಗಳು, ಸಹಕಾರಿ ಸಂಘಗಳ ಪದಾಧಿಕಾರಿಗಳು, ನಿರ್ದೇಶಕರು, ಬಿಜೆಪಿಯ ಪ್ರಮುಖರು, ಬಿಜೆಪಿ ಸುಳ್ಯ ಮಂಡಲ ಸಮಿತಿ ಹಾಗೂ ರೈತ ಮೋರ್ಚಾ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ | ರೈತ ವಿರೋಧಿ, ಜನ ವಿರೋಧಿ ನಿಲುವಿಗೆ ಖಂಡನೆ Read More »

ಬಂಟ್ವಾಳ: ಯುವಕನಿಗೆ ತಂಡದಿಂದ ಹಲ್ಲೆ

ಬಂಟ್ವಾಳ: ಯುವಕನ ಮೇಲೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಬಂಟ್ಟಾಳದ ಮೈಂದಾಳ ಎಂಬಲ್ಲಿ ನಡೆದಿದೆ.. ಮೈಂದಾಳ ನಿವಾಸಿ ನಿಸಾರ್ ಎಂಬವರ ಮೇಲೆ ಅಪರಿಚಿತರು ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ. ಶನಿವಾರ ರಾತ್ರಿ 9.45ರ ಸುಮಾರಿಗೆ ನಿಸಾರ್ ಅಜ್ಜಿ ಮನೆಯಿಂದ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವಾಗ ಗುರಿಮಜಲು ಎಂಬಲ್ಲಿ ಆಟೋ ರಿಕ್ಷಾದ ಬಳಿ ನಿಂತಿದ್ದ 5 ಜನರ ಪೈಕಿ ಇಬ್ಬರು ನಿಸಾರ್ ಅವರನ್ನು ಅಡ್ಡ ಗಟ್ಟಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಇದೇ ಸಂದರ್ಭ ರಿಕ್ಷಾದ ಬಳಿ ತಲವಾರು

ಬಂಟ್ವಾಳ: ಯುವಕನಿಗೆ ತಂಡದಿಂದ ಹಲ್ಲೆ Read More »

3 ದಿನದಿಂದ 40 ಅಡಿ ಆಳದ ಬಾವಿಯಲ್ಲಿದ್ದ ಹೋರಿಯ ರಕ್ಷಣೆ | ಅಗ್ನಿಶಾಮಕ ದಳದಿಂದ ಯಶಸ್ವಿ ಕಾರ್ಯಾಚರಣೆ

ಸುಬ್ರಹ್ಮಣ್ಯ : ಕಳೆದ 3 ದಿನಗಳ ಹಿಂದೆ ಬಾವಿಗೆ ಬಿದ್ದಿದ್ದ ಹೋರಿಯನ್ನು ಅಗ್ನಿಶಾಮಕ ದಳ ರಕ್ಷಿಸಿದ ಘಟನೆ ಸುಬ್ರಹ್ಮಣ್ಯದ ದೇವರಗದ್ದೆ ಬಳಿ ನಡೆದಿದೆ. ದೇವರಗದ್ದೆ ನಿವಾಸಿ ವಿಠಲ ಶೆಟ್ಟಿ ಎಂಬವರ 40 ಅಡಿಯ ಬಾವಿಗೆ ಹೋರಿ ಬಿದ್ದಿತ್ತು. ಗಮನಕ್ಕೆ ಬಂದ ತಕ್ಷಣ ಸ್ಥಳೀಯರ ಸಹಾಯದಿಂದ ಮೇಲಕ್ಕೆತ್ತಲು ಪ್ರಯತ್ನ ನಡೆಸಲಾಗಿತ್ತು. ಆದರೆ ಪ್ರಯೋಜನವಾಗಿರಲಿಲ್ಲ. ಸೆ. 10ರಂದು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಹೋರಿಯನ್ನು ರಕ್ಷಿಸಿದ್ದಾರೆ. ಸಮಾಜ ಸೇವಕ ರವಿ ಕಕ್ಕೆಪದವು ಅವರು ಸುಬ್ರಹ್ಮಣ್ಯ ಪಿ.ಎಸ್.ಐ. ಅವರಿಗೆ ಮಾಹಿತಿ

3 ದಿನದಿಂದ 40 ಅಡಿ ಆಳದ ಬಾವಿಯಲ್ಲಿದ್ದ ಹೋರಿಯ ರಕ್ಷಣೆ | ಅಗ್ನಿಶಾಮಕ ದಳದಿಂದ ಯಶಸ್ವಿ ಕಾರ್ಯಾಚರಣೆ Read More »

error: Content is protected !!
Scroll to Top