ದಕ್ಷಿಣ ಕನ್ನಡ

ನೆಟ್ಟಣ: ಗಾಳಿ ಮಳೆಗೆ ಎರಡು ಕಾರುಗಳ ಮೇಲೆ ಬಿದ್ದ ಮರ, ಸಂಚಾರ ಅಸ್ತವ್ಯಸ್ತ

ನೆಟ್ಟಣ: ಸೋಮವಾರ ರಾತ್ರಿ ಸುರಿದ ಗುಡುಗು ಸಹಿತ ಗಾಳಿ ಮಳೆಗೆ ಕಡಬ ತಾಲೂಕಿನ ನೆಟ್ಟಣದಲ್ಲಿ ಹೆದ್ದಾರಿ ಬದಿಯಲ್ಲಿದ್ದ ಮರಗಳು ಎರಡು ಕಾರುಗಳ ಮೇಲೆ ಬಿದ್ದ ಪರಿಣಾಮ ಕಾರುಗಳು ಜಖಂಗೊಂಡಿದ್ದು,ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡ ಬಗ್ಗೆ ವರದಿಯಾಗಿದೆ. ಕಡಬದ ನೆಟ್ಟಣದ ಕೇಂದ್ರೀಯ ನಾಟಾ ಸಂಗ್ರಹ ಘಟಕದ ಬಳಿ ಈ ಘಟನೆ ಸಂಭವಿಸಿದೆ. ಭಾರೀ ಗಾಳಿಗೆ ಹೆದ್ದಾರಿ ಬದಿಯ ದೂಪದ ಹಲವು ಮರಗಳು ರಸ್ತೆಗೆ ಬಿದ್ದಿವೆ. ಈ ವೇಳೆ ಸಂಚರಿಸುತ್ತಿದ್ದ ನ್ಯಾನೋ ಹಾಗೂ ಆಮ್ನಿ ಕಾರುಗಳ ಮೇಲೆ ಮರ ಬಿದ್ದಿದೆ. […]

ನೆಟ್ಟಣ: ಗಾಳಿ ಮಳೆಗೆ ಎರಡು ಕಾರುಗಳ ಮೇಲೆ ಬಿದ್ದ ಮರ, ಸಂಚಾರ ಅಸ್ತವ್ಯಸ್ತ Read More »

ಅಭಿಮಾನಿಗಳಿಗೆ ಅಶೋಕ್ ರೈ ಬುದ್ಧಿವಾದ ಹೇಳಲಿ | ಸುಳ್ಯದ ಪ್ರಮಿತ್ ರಾವ್ ಮನೆಗೆ ಭೇಟಿ ನೀಡಿ ಶಾಸಕಿ ಭಾಗೀರಥಿ ಮುರುಳ್ಯ

ಸುಳ್ಯ: ಫೇಸ್ ಬುಕ್ ಬರವಣಿಗೆಯನ್ನು ಆಕ್ಷೇಪಿಸಿ ಅಶೋಕ್ ಕುಮಾರ್ ರೈ ಅವರ ಅಭಿಮಾನಿಗಳು ಹೆಂಗಸು – ಮಕ್ಕಳಿರುವ ಮನೆಗೆ ಭೇಟಿ ನೀಡಿ ಜಗಳ ಮಾಡಿದ್ದು, ಇದು ಸರಿಯಾದ ಕ್ರಮವಲ್ಲ. ಆ ಅಭಿಮಾನಿಗಳಿಗೆ ಶಾಸಕ ಅಶೋಕ್ ಕುಮಾರ್ ರೈ ಅವರು ಬುದ್ಧಿವಾದ ಹೇಳಲಿ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ತಿಳಿಸಿದ್ದಾರೆ. ಸುಳ್ಯದ ಜಯನಗರ ನಿವಾಸಿ ಪ್ರಮೀತ್ ರಾವ್ ಅವರು ಫೇಸ್ ಬುಕಿನಲ್ಲಿ ಬರಹ ಬರೆದಿದ್ದು, ಇದನ್ನು ಆಕ್ಷೇಪಿಸಿ ಅಶೋಕ್ ಕುಮಾರ್ ರೈ ಅಭಿಮಾನಿಗಳು ಮೇ 24ರಂದು ತಡರಾತ್ರಿ

ಅಭಿಮಾನಿಗಳಿಗೆ ಅಶೋಕ್ ರೈ ಬುದ್ಧಿವಾದ ಹೇಳಲಿ | ಸುಳ್ಯದ ಪ್ರಮಿತ್ ರಾವ್ ಮನೆಗೆ ಭೇಟಿ ನೀಡಿ ಶಾಸಕಿ ಭಾಗೀರಥಿ ಮುರುಳ್ಯ Read More »

ಮುರುಳ್ಯ: ಯಶಸ್ವಿಯಾಗಿ ನಡೆದ ಬೇಸಗೆ ಶಿಬಿರ, ಶಾಸಕಿಗೆ ಅಭಿನಂದನೆ

ಕಾಣಿಯೂರು: ಮುರುಳ್ಯ ಗ್ರಾಮ ಪಂಚಾಯಿತಿಯ ಬೇಸಗೆ ಶಿಬಿರವು ಗ್ರಾಮ ಪಂಚಾಯತ್ ಆವರಣದಲ್ಲಿ ನಡೆಯಿತು. ಶಿಬಿರವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಾನಕಿ ಮುರುಳ್ಯ ಉದ್ಘಾಟಿಸಿದ್ದು, ವಿವಿಧ ಚಟುವಟಿಕೆಗಳನ್ನು ನಡೆಸಲಾಯಿತು. ಕ್ರೀಯಾಶೀಲ ಮಕ್ಕಳಿಗೆ ಬಹುಮಾನ ನೀಡಿ ಪುರಸ್ಕರಿಸಲಾಯಿತು. ಗ್ರಾಮ ಪಂಚಾಯಿತಿಯ ಅಮೃತ ಸರೋವರ ಪೂದೆಕೆರೆ, ಸಂಜೀವಿನಿ ಸದಸ್ಯೆಯರ ಹೈನುಗಾರಿಕೆ, ಮಲ್ಲಿಗೆ ಕೃಷಿ ಹಾಗೂ ವಿಶೇಷ ಚೇತನ ನವೀನ ಕಳತ್ತಜೆ ಅವರ ಜೇನುಕೃಷಿ ಮತ್ತಿತರ ಸ್ಥಳೀಯ ಕೃಷಿ ಉದ್ಯಮಗಳ ವೀಕ್ಷಣೆಗೆ ಹೊರಸಂಚಾರ ಚಟುವಟಿಕೆಯನ್ನು ನಡೆಸಲಾಯಿತು. ಶಿಬಿರಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ನೀಡಿದ್ದು, ಅವರನ್ನು

ಮುರುಳ್ಯ: ಯಶಸ್ವಿಯಾಗಿ ನಡೆದ ಬೇಸಗೆ ಶಿಬಿರ, ಶಾಸಕಿಗೆ ಅಭಿನಂದನೆ Read More »

ಜೂ.4 : ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘದ 27ನೇ ವರ್ಷದ ವಾರ್ಷಿಕೋತ್ಸವ : ಪೂರ್ವಭಾವಿಯಾಗಿ ನಡೆದ ಆಟೋಟ ಸ್ಪರ್ಧೆ

ಬೆಳ್ತಂಗಡಿ: ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘದ ವತಿಯಿಂದ ಜೂ.4 ರಂದು ನಡೆಯುವ 27ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮದ ಅಂಗವಾಗಿ ಆಟೋಟ ಸ್ಪರ್ಧೆ ಮೇ 28 ರಂದು ಬೆಳ್ತಂಗಡಿ ಸರಕಾರಿ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಶಿವಶಂಕರ್, ಕಾರ್ಯದರ್ಶಿ ಮೋನಪ್ಪ, ಕೋಶಾಧಿಕಾರಿ ಸತೀಶ್ ಕುತ್ಯಾರ್, ಸಂಘದ ಹಿರಿಯರಾದ ಸೀತಾರಾಮ, ಗೋಪಾಲ ಅಲ್ಲಾಟಬೈಲು, ನವನೀತ್ ಮಾಳವ ಮಂಗಳೂರು, ರವೀಂದ್ರ ಕಲ್ಲಾರೆ, ಕುಶಲ ಕಾವಟೆ, ಪ್ರೇಮ ಕಾಪಿನಡ್ಕ ಹಾಗೂ ಸಮಾಜ

ಜೂ.4 : ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘದ 27ನೇ ವರ್ಷದ ವಾರ್ಷಿಕೋತ್ಸವ : ಪೂರ್ವಭಾವಿಯಾಗಿ ನಡೆದ ಆಟೋಟ ಸ್ಪರ್ಧೆ Read More »

ಜಿಲ್ಲೆಯ ಬಿಜೆಪಿ ಶಾಸಕರಿಗೆ ಅಭಿನಂದನೆ

ಮಂಗಳೂರು: ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆಗೊಂಡ ಬಿಜೆಪಿಯ ಶಾಸಕರಿಗೆ ಅಭಿನಂದನಾ ಸಮಾರಂಭ ಮಂಗಳೂರು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಜನರಿಂದ ಆಯ್ಕೆಯಾದ ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಹರೀಶ್ ಪೂಂಜಾ, ಉಮಾನಾಥ್ ಕೋಟ್ಯಾನ್, ವೇದವ್ಯಾಸ್ ಕಾಮತ್, ಡಾ. ಭರತ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಕೋಟಾ ಶ್ರೀನಿವಾಸ್ ಪೂಜಾರಿ, ಗೋಪಾಲಕೃಷ್ಣ ಹೇರಳೆ, ಸಂತೋಷ್ ಕುಮಾರ್ ರೈ ಮೊದಲಾದವರು

ಜಿಲ್ಲೆಯ ಬಿಜೆಪಿ ಶಾಸಕರಿಗೆ ಅಭಿನಂದನೆ Read More »

ಬರಿದಾಗಿದೆ ಐತಿಹಾಸಿಕ ಕೆದ್ದೊಟ್ಟೆ ಕೆರೆ

ಮಹಾ  ಭಾರತದ ಕುಂತಿ ನಡೆದಾಡಿದ ಮಹಾ ಸರೋವರ  ಮೀನು, ಹಕ್ಕಿ, ಕೃಷಿ ಬದುಕಿನ ಮೂಲಾಧಾರವಾಗಿರುವ ಕಡಬ ತಾಲೂಕಿನ ಕುಂತೂರು ಗ್ರಾಮದ  ಕೆದ್ದೊಟ್ಟೆ ಕೆರೆ ಈ ಬಾರಿಯ ಬೇಸಿಗೆಯ ಝಳಕ್ಕೆ ಬರಿದಾಗಿದೆ.     ಈ ಭಾಗದ ರೈತರ ಕೃಷಿ ಬದುಕಿನ ನೀರು ಯಾವ ಬರಗಾಲದಲ್ಲೂ ಇಲ್ಲಿ ನೀರು ಆರಿಲ್ಲ. ಹತ್ತಕ್ಕೂ ಹೆಚ್ಚು ಪಂಪ್‌ಸೆಟ್‌ಗಳು ನೀರೆತ್ತಿದರೂ ಕೆರೆ ಬತ್ತುತ್ತಿರಲಿಲ್ಲ. ಹತ್ತು ವರ್ಷಗಳ ಹಿಂದೆ ಈ ಪರಿಯ ಸನ್ನಿವೇಶ ನಿರ್ಮಾಣವಾಗಿದ್ದರೂ ಕೆರೆ ಬರಿದಾದ ಉದಾಹರಣೆಗಳು ಇಲ್ಲ ಆದರೆ ಈ ಬಾರಿ ಮಾತ್ರ

ಬರಿದಾಗಿದೆ ಐತಿಹಾಸಿಕ ಕೆದ್ದೊಟ್ಟೆ ಕೆರೆ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವರ ನಿತ್ಯ ಉತ್ಸವಕ್ಕೆ ತೆರೆ

ಸುಬ್ರಹ್ಮಣ್ಯ : ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶ್ರೀದೇವರ ಹೊರಾಂಗಣ ಉತ್ಸವಾದಿಗಳು ಶ್ರೀ ದೇವರ ಪತ್ತನಾಜೆ ಬಲಿ ಉತ್ಸವ ನಡೆದ ಬಳಿಕ ಒಳಾಂಗಣ ಪ್ರವೇಶಿಸುವುದರೊಂದಿಗೆ ಗುರುವಾರ ಸಂಪನ್ನಗೊಂಡಿತು. ಶುದ್ಧ ಷಷ್ಠಿಯ ದಿನವಾದ ಗುರುವಾರ ಹೊರಾಂಗಣದಲ್ಲಿ ಪಾಲಕಿ ಮತ್ತು ಬಂಡಿ ಉತ್ಸವ ನೆರವೇರಿದ ಬಳಿಕ ಶ್ರೀ ದೇವರು ಒಳಾಂಗಣ ಪ್ರವೇಶಿಸಿದರು. ಕುಕ್ಕೆಯಲ್ಲಿ ಮಾತ್ರ ದೀಪಾವಳಿ ಅಮವಾಸ್ಯೆಯಂದು ಉತ್ಸವ ಆರಂಭವಾಗಿ ಜೇಷ್ಠ ಶುದ್ಧಷಷ್ಠಿಯಂದು ಕೊನೆಯ ಉತ್ಸವವು ನಡೆಯುತ್ತದೆ. ಈ ಬಾರಿ ಜೇಷ್ಠ ಶುದ್ಧಷಷ್ಠಿಯ  ದಿನವಾದ  ಗುರುವಾರ ರಾತ್ರಿ ಮಹಾಪೂಜೆಯ ಬಳಿಕ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವರ ನಿತ್ಯ ಉತ್ಸವಕ್ಕೆ ತೆರೆ Read More »

ಸಮುದ್ರ ಕಿನಾರೆಗೆ ಅಪ್ಪಳಿಸಿದ ಮೀನುಗಾರಿಕೆ ಬೋಟ್; 12 ಲಕ್ಷ ನಷ್ಟ

ಕುಂದಾಪುರ: ಮೀನುಗಾರಿಕೆ ನಡೆಸುತ್ತಿರುವಾಗ ತೇಲಿ ಬಂದ ಬಲೆಯು ಬೋಟಿನ ಪ್ಯಾನಿಗೆ ಸಿಲುಕಿದ ಪರಿಣಾಮ ಬೋಟ್ ನ ಇಂಜಿನ್ ಸ್ಥಬ್ಧಗೊಂಡ ಪರಿಣಾಮ ಗಾಳಿಯ ರಭಸಕ್ಕೆ ಮರಳು ದಿಬ್ಬಕ್ಕೆ ಬಡಿದು ಮುಳುಗಿದ ಘಟನೆ ಪಾರಂಪಳ್ಳಿ ಪಡುಕರೆ ಸಮೀಪ ನಡೆದಿದೆ. ಬೆಂಗ್ರೆ ನಿವಾಸಿ ಸಂದೀಪ್ ತೋಳಾರ್ ಮಾಲೀಕತ್ವದ ಶ್ರೀ ದುರ್ಗಾಪರಮೇಶ್ವರಿ ರುಕ್ಮಯ್ಯ ಹೆಸರಿನ ಬೋಟ್ ಇದಾಗಿದ್ದು, ಅವಘಡದ ವೇಳೆ ಅಕ್ಕಪಕ್ಕದ ಬೋಟ್ ಗಳು ಸಹಾಯಕ್ಕೆ ಬಂದರೂ ಕೂಡ ಪ್ರಯೋಜನವಾಗಿಲ್ಲ. ಬೋಟಿನಲ್ಲಿದ್ದ ಕಾರ್ಮಿಕರನ್ನು ಸುರಕ್ಷಿತವಾಗಿ ಬೇರೆ ಬೋಟಿನವರು ದಡಕ್ಕೆ ಸೇರಿಸುವಲ್ಲಿ ಯಶಸ್ವಿಯಾಗಿದ್ದು, ಯಾವುದೇ

ಸಮುದ್ರ ಕಿನಾರೆಗೆ ಅಪ್ಪಳಿಸಿದ ಮೀನುಗಾರಿಕೆ ಬೋಟ್; 12 ಲಕ್ಷ ನಷ್ಟ Read More »

ಆಲಂಕಾರಿನಲ್ಲಿ ಬಸ್ಸಿನಿಂದ ಎಸೆಯಲ್ಪಟ್ಟು ಮಹಿಳೆಗೆ ಗಾಯ

ಕಡಬ:  ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ಸಿನಿಂದ ಮಹಿಳೆಯೊಬ್ಬರು ರಸ್ತೆಗೆ ಎಸೆಯಲ್ಪಟ್ಟು ಮಹಿಳೆ ಗಂಭೀರ ಗಾಯಗೊಂಡ ಘಟನೆ ಆಲಂಕಾರು ಪೇಟೆಯಲ್ಲಿ ಗುರುವಾರ ನಡೆದಿದೆ. ಗಾಯಗೊಂಡವರನ್ನು ರಾಮಕುಂಜ ಗ್ರಾಮದ ಶಾರದಾನಗರ ನಿವಾಸಿ ಗುಲಾಬಿ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಉಪ್ಪಿನಂಗಡಿ ಮಾರ್ಗವಾಗಿ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆ.ಎಸ್‌.ಆರ್‌.ಟಿ.ಸಿ. ಬಸ್ಸಿಗೆ ಗೋಳಿತ್ತಡಿಯಲ್ಲಿ ಹತ್ತಿದ ಮಹಿಳೆ ಆಲಂಕಾರು ಮುಟ್ಟುತ್ತಿದ್ದಂತೆ ಇಳಿಯಲು ಯತ್ನಿಸಿ ರಸ್ತೆಗೆ ಎಸೆಯಲ್ಪಟ್ಟರು. ರಸ್ತೆಗೆ ಬಿದ್ದ ಪರಿಣಾಮ ಮಹಿಳೆಯ ತಲೆಗೆ ಗಂಭೀರ ಗಾಯವಾಗಿದೆ. ತಕ್ಷಣ ಅವರಿಗೆ ಸ್ಥಳೀಯ ಕ್ಲೀನಿಕ್‌ ನಲ್ಲಿ  ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ

ಆಲಂಕಾರಿನಲ್ಲಿ ಬಸ್ಸಿನಿಂದ ಎಸೆಯಲ್ಪಟ್ಟು ಮಹಿಳೆಗೆ ಗಾಯ Read More »

ಕಡಬ ಪ್ರಾಕೃತಿಕ ವಿಕೋಪ ತಡೆ ಮುಂಜಾಗ್ರತ ಸಭೆ | ವಿಪತ್ತು ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಿ, ಅಧಿಕಾರಿಗಳಿಗೆ ಎ.ಸಿ ಸೂಚನೆ

ಕಡಬ: ಮುಂಬರುವ ಮಳೆಗಾಲದಲ್ಲಿ ಉಂಟಾಗುವ ಪ್ರಾಕೃತಿಕ ವಿಕೋಪವನ್ನು ಎಲ್ಲಾ  ಇಲಾಖಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಮರ್ಪಕವಾಗಿ ನಿರ್ವಹಣೆ ಮಾಡಲು ಎಲ್ಲರೂ ಸಿದದ್ರಗಬೇಕು ಎಂದು ಪುತ್ತೂರು ಸಹಯಕ ಆಯುಕ್ತ ಗಿರೀಶ್ ನಂದನ್ ಸೂಚನೆ ನೀಡಿದರು. ಅವರು ಬುಧವಾರ ಕಡಬ ಅಂಬೇಡ್ಕರ್ ಭವನದಲ್ಲಿ  ಪ್ರಾಕೃತಿಕ ವಿಕೋಪದಡಿ ಹಾನಿಯಾಗುವ ಪ್ರಕರಣಗಳ ಬಗ್ಗೆ ಮುಂಜಾಗ್ರತ ಕ್ರಮ ವಹಿಸಲು ಕಾರ್ಯತಂತ್ರ ರೂಪಿಸುವ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಲ್ಲರೂ ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಾಗ ನೆರೆ, ಭೂ ಕುಸಿತ ಮುಂತಾದ ಪ್ರಾಕೃತಿಕ ವಿಪತ್ತುಗಳನ್ನು  ಸಮರ್ಥವಾಗಿ

ಕಡಬ ಪ್ರಾಕೃತಿಕ ವಿಕೋಪ ತಡೆ ಮುಂಜಾಗ್ರತ ಸಭೆ | ವಿಪತ್ತು ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಿ, ಅಧಿಕಾರಿಗಳಿಗೆ ಎ.ಸಿ ಸೂಚನೆ Read More »

error: Content is protected !!
Scroll to Top