ದಕ್ಷಿಣ ಕನ್ನಡ

ವಿದ್ಯುತ್‍ ಕಂಬಕ್ಕೆ ಬೈಕ್‍ ಡಿಕ್ಕಿಯಾಗಿ ಯುವಕರಿಬ್ಬರ ದುರ್ಮರಣ

ಮಂಗಳೂರು:  ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಯುವಕರಿಬ್ಬರು ಸಾವನ್ನಪ್ಪಿರುವ ಘಟನೆ ಕಿನ್ನಿಗೋಳಿಯ ಬಟ್ಟಕೋಡಿಯಲ್ಲಿ ನಡೆದಿದೆ. ಧಾರವಾಡದ ಕಲ್ಲೂರು ನಿವಾಸಿ ಆತ್ಮಾನಂದ ಅಂಬಿಗರ (27) ಹಾಗೂ ನವೀನ್ ಹೂಗಾರ (26) ಮೃತ ದುರ್ದೈವಿಗಳು. ಅತೀ ವೇಗವಾಗಿ ಬಂದ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಆತ್ಮಾನಂದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನವೀನ್ ಹೂಗಾರ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಪಘಾತ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯುತ್‍ ಕಂಬಕ್ಕೆ ಬೈಕ್‍ ಡಿಕ್ಕಿಯಾಗಿ ಯುವಕರಿಬ್ಬರ ದುರ್ಮರಣ Read More »

ಮರ್ಧಾಳದ ಜೀವನ್ ಜ್ಯೋತಿ ವಿಶೇಷ ಶಾಲೆಗೆ ಭೇಟಿ ನೀಡಿದ  ಕುಕ್ಕೆ ಶ್ರೀ  ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ವಿದ್ಯಾರ್ಥಿಗಳು

ಕುಕ್ಕೆ ಶ್ರೀ  ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ವಿದ್ಯಾರ್ಥಿಗಳು ಮರ್ದಾಳ ದಲ್ಲಿರುವ ಜೀವನ್ ಜ್ಯೋತಿ ವಿಶೇಷ  ಶಾಲೆಗೆ ಭೇಟಿ ನೀಡಿದ್ದಾರೆ. ಅಲ್ಲಿಯ ವಿದ್ಯಾರ್ಥಿಗಳಿಗೆ ಮನರಂಜನ ಸ್ಪರ್ಧೆಗಳನ್ನು ನಡೆಸಿ  ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಗಿದೆ. ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಗಳನ್ನು ಹೊರ ಹುಮ್ಮಿಸಿ, ಲವಲವಿಕೆಯಿಂದ ಸ್ಪರ್ಧೆಗಳಲ್ಲಿ ತೊಡಗಿಕೊಂಡರು. ಎನ್ಎಸ್ಎಸ್ ಘಟಕದ ಕಾರ್ಯಕ್ರಮಾಧಿಕಾರಿ ಆರತಿ ಕೆ ಅವರು ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಮರ್ಧಾಳದ ಜೀವನ್ ಜ್ಯೋತಿ ವಿಶೇಷ ಶಾಲೆಯ ಮುಖ್ಯೋಪಾಧ್ಯಾಯರಾದ ಶೈಲಾ  ಅವರು ಸಂಸ್ಥೆಯ ಉದ್ದೇಶವನ್ನು  ಹಾಗೂ ವಿದ್ಯಾರ್ಥಿಗಳು ನ್ಯೂನತೆಯನ್ನು ಹೊಂದಿದ್ದರು

ಮರ್ಧಾಳದ ಜೀವನ್ ಜ್ಯೋತಿ ವಿಶೇಷ ಶಾಲೆಗೆ ಭೇಟಿ ನೀಡಿದ  ಕುಕ್ಕೆ ಶ್ರೀ  ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ವಿದ್ಯಾರ್ಥಿಗಳು Read More »

ಬಂಟ್ವಾಳ : ಜೂಜಾಟವಾಡುತ್ತಿದ್ದ ಇಬ್ಬರ ಬಂಧನ  

ಬಂಟ್ವಾಳ : ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಆಟ ಆಡುತ್ತಿದ್ದ ವೇಳೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಪೋಲಿಸರು ಇಬ್ಬರನ್ನು ಬಂಧಿಸಿದ ಘಟನೆ ಬಿ.ಸಿ.ರೋಡು ಸಮೀಪದ ಕೈಕಂಬ ಎಂಬಲ್ಲಿ ನಡೆದಿದೆ. ಬಂಟ್ವಾಳ ಮೂಡ ಗ್ರಾಮದ ಕೈಕಂಬ ಎಂಬಲ್ಲಿ ಖಾಸಗಿ ಕಟ್ಟಡವೊಂದರ ಬಳಿಯಲ್ಲಿ ಆಟಕ್ಕೆ ತಯಾರು ನಡೆಸುತ್ತಿದ್ದ ವೇಳೆ ದಾಳಿ ನಡೆಸಿದ ಪೋಲೀಸರು ಪ್ರಮುಖ ಆರೋಪಿಗಳಾದ ನಾವೂರ ನಿವಾಸಿ ಸುರೇಶ್ ಹಾಗೂ ಮಿತ್ತಬೈಲು ನಿವಾಸಿ ಭಾಸ್ಕರ ಎಂಬವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 3.500 ರೂ ನಗದು ಹಾಗೂ ಆಟಕ್ಕೆ

ಬಂಟ್ವಾಳ : ಜೂಜಾಟವಾಡುತ್ತಿದ್ದ ಇಬ್ಬರ ಬಂಧನ   Read More »

ಪ್ರತಿನಿತ್ಯ ಸುಳ್ಯ ಶಾಸಕರು ಓಡಾಡುವ ರಸ್ತೆ ಅಭಿವೃದ್ಧಿಗೆ ಮೀನಮೇಷ | ಹೊಂಡ ಗುಂಡಿಗಳಿಂದ ಕೂಡಿದ ನಿಂತಿಕಲ್ಲು-ಬೆಳ್ಳಾರೆ-ಐವರ್ನಾಡು ಮುಖ್ಯರಸ್ತೆ

ಸುಳ್ಯ: ನಿಂತಿಕಲ್ಲು-ಬೆಳ್ಳಾರೆ-ಐವರ್ನಾಡು ಮುಖ್ಯರಸ್ತೆ ಹೊಂಡಗುಂಡಿಗಳಿಂದ ಕೂಡಿದ್ದು, ಈ ರಸ್ತೆಯಲ್ಲಿ ಸುಳ್ಯ ಶಾಸಕರೇ ಪ್ರತಿನಿತ್ಯ ಬಂದು ಹೋಗುವ ರಸ್ತೆಯಾಗಿದೆ. ಆದರೆ ಅಭಿವೃದ್ಧಿ ಕಡೆ ಈ ವರೆಗೂ ಗಮನ ನೀಡದಿರುವುದು ದುರಾದೃಷ್ಟ. ಈ ರಸ್ತೆಯ ದುರಸ್ತಿಗಾಗಿ ಕಳೆದ ಮಳೆಗಾಲದಲ್ಲೇ ಅನುದಾನ ಮಂಜೂರಾಗಿದ್ದರೂ ಇದೀಗ ಮತ್ತೊಂದು ಮಳೆಗಾಲ ಹತ್ತಿರ ಬರುತ್ತಿದ್ದರೂ ದುರಸ್ತಿ ಕಾರ್ಯ ಮಾತ್ರ ಮುಗಿದಿಲ್ಲ. ಶಾಸಕರು ಇದೇ ರಸ್ತೆಯಲ್ಲಿ ಪ್ರತಿನಿತ್ಯ ಓಡಾಡುತ್ತಿದ್ದರೂ ಇದಕ್ಕೆ ಸಮಸ್ಯೆ ಕಂಡುಕೊಳ್ಳಲು ಸಾಧ್ಯವಾಗದಿದ್ದರೆ ಇತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವೇ ಎಂದು ಜನಸಾಮಾನ್ಯರು ಪ್ರಶ್ನಿಸುವಂತಾಗಿದೆ. ಇದಕ್ಕೆ

ಪ್ರತಿನಿತ್ಯ ಸುಳ್ಯ ಶಾಸಕರು ಓಡಾಡುವ ರಸ್ತೆ ಅಭಿವೃದ್ಧಿಗೆ ಮೀನಮೇಷ | ಹೊಂಡ ಗುಂಡಿಗಳಿಂದ ಕೂಡಿದ ನಿಂತಿಕಲ್ಲು-ಬೆಳ್ಳಾರೆ-ಐವರ್ನಾಡು ಮುಖ್ಯರಸ್ತೆ Read More »

ತೆಂಕುತಿಟ್ಟಿನ ಹಿರಿಯ ಮದ್ಲೆಗಾರ ಬಿ.ಗೋಪಾಲಕೃಷ್ಣ ಕುರುಪ್ ನಿಧನ

ಯಕ್ಷಗಾನ ಕ್ಷೇತ್ರದಲ್ಲಿ ಭಾಗವತರಾಗಿ, ಮದ್ದಳೆಗಾರರಾಗಿ  ಮತ್ತು ಯಕ್ಷಗಾನದ ಪರಂಪರೆಯ ಬಗ್ಗೆ ಅಪೂರ್ವ ಜ್ಞಾನವನ್ನು ಹೊಂದಿದ್ದ  ರಾಜ್ಯ ಪ್ರಶಸ್ತಿ ಪುರಸ್ಕೃತ  ಬಿ.ಗೋಪಾಲಕೃಷ್ಣ ಕುರುಪ್ (90ವರ್ಷ) ಮಾರ್ಚ್ 19 ರಂದು ನಿಧನರಾದರು. ಚೆಂಡೆ-ಮದ್ದಲೆ ನುಡಿತಗಳಲ್ಲಿ ಅಪೂರ್ವಜ್ಞಾನವನ್ನು ಪಡೆದುಕೊಂಡಿದ್ದ ಕುರುಪರು ಅದನ್ನು ಪಠ್ಯರೂಪದಲ್ಲಿ ದಾಖಲಿಸಿದ ಮೊದಲಿಗರಾಗಿದ್ದರು. 1952 ರಲ್ಲಿ ಕೂಡ್ಲು ಮೇಳದಲ್ಲಿ ಪೂರ್ವರಂಗಕ್ಕೆ ಹಾಡುವ ಅವಕಾಶದೊಂದಿಗೆ ಮದ್ಲೆಗಾರ ಕುದ್ರೆಕೂಡ್ಲು ರಾಮಭಟ್ ಇವರ ಮಾರ್ಗದರ್ಶನದಲ್ಲಿ ಯಕ್ಷಗಾನ ಕ್ಷೇತ್ರದಲ್ಲಿ ಮುಂದುವರಿದರು.  ಹಿರಿಯ ಬಲಿಪ ನಾರಾಯಣ ಭಾಗವತ,  ಅಗರಿ ಶ್ರೀನಿವಾಸ ಭಾಗವತ,  ಕುದ್ರೆಕೂಡ್ಲು ರಾಮ ಭಟ್ಟ,

ತೆಂಕುತಿಟ್ಟಿನ ಹಿರಿಯ ಮದ್ಲೆಗಾರ ಬಿ.ಗೋಪಾಲಕೃಷ್ಣ ಕುರುಪ್ ನಿಧನ Read More »

ಸರಕಾರಿ ಪ್ರಥಮ ದರ್ಜೆ ಕಾಲೇಜು ಮೆಲಂತಬೆಟ್ಟುವಿನಲ್ಲಿ  ನಡೆದ ಅಂತರ್ ಕಾಲೇಜು ಮಟ್ಟದ  ಫೆಸ್ಟ್ “AVINYA 2025 | ಕರಕುಶಲ ವಸ್ತು ತಯಾರಿ ಸ್ಪರ್ಧೆಯಲ್ಲಿ  ಸರಕಾರಿ ಸರಕಾರಿ ಪ್ರಥಮ ದರ್ಜೆ ಬೆಳಂದೂರು ವಿದ್ಯಾರ್ಥಿಗಳಾದ ರಂಜನ್ ಮತ್ತು ರಶ್ಮಿ ಪ್ರಥಮ

ಬೆಳಂದೂರು : ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಮಲಂತಬೆಟ್ಟುವಿನಲ್ಲಿ  ಅಂತರ್‍ ಕಾಲೇಜು ಮಟ್ಟದ  “AVINYA 2025” ಕಾರ್ಯಕ್ರಮ ನಡೆಯಿತು. ಇದರಲ್ಲಿ ಸರಕಾರಿ ಸರಕಾರಿ ಪ್ರಥಮ ದರ್ಜೆ ಬೆಳಂದೂರು ಕಾಲೇಜಿನ ವಿದ್ಯಾರ್ಥಿಗಳು  ವಿಶ್ವವಿದ್ಯಾಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ಗಳಲ್ಲಿ ಭಾಗವಹಿಸಿದ್ದು, ಕರಕುಶಲ ವಸ್ತುಗಳ ತಯಾರಿ ಸ್ಪರ್ಧೆ ಯಲ್ಲಿ  ರಂಜನ್ ಮತ್ತು ರಶ್ಮಿ ಪ್ರಥಮ ಬಹುಮಾನ ಪಡೆದಿದ್ದಾರೆ. ವಿಜೇತರಾದ ರಂಜನ್ ಮತ್ತು ರಶ್ಮಿಯವರಿಗೆ ಶಾಲಾ ಪ್ರಾಂಶುಪಾಲರು, ಶಿಕ್ಷಕವೃಂದದವರು ಅಭಿನಂದಿಸಿದ್ದಾರೆ.

ಸರಕಾರಿ ಪ್ರಥಮ ದರ್ಜೆ ಕಾಲೇಜು ಮೆಲಂತಬೆಟ್ಟುವಿನಲ್ಲಿ  ನಡೆದ ಅಂತರ್ ಕಾಲೇಜು ಮಟ್ಟದ  ಫೆಸ್ಟ್ “AVINYA 2025 | ಕರಕುಶಲ ವಸ್ತು ತಯಾರಿ ಸ್ಪರ್ಧೆಯಲ್ಲಿ  ಸರಕಾರಿ ಸರಕಾರಿ ಪ್ರಥಮ ದರ್ಜೆ ಬೆಳಂದೂರು ವಿದ್ಯಾರ್ಥಿಗಳಾದ ರಂಜನ್ ಮತ್ತು ರಶ್ಮಿ ಪ್ರಥಮ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಸಂಶೋಧನಾ ಸಮಿತಿಯ ವತಿಯಿಂದ ಸಂಶೋಧನಾ ಪ್ರಬಂಧ ಬರೆಯುವ ಕುರಿತು ಕಾರ್ಯಾಗಾರ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾಕೋಶದ ಸಹಯೋಗದೊಂದಿಗೆ ಸಂಶೋಧನಾ ಸಮಿತಿಯ ವತಿಯಿಂದ ಮಾ.17, 2024ರಂದು ಸಂಶೋಧನಾ ಪ್ರಬಂಧ ಬರವಣಿಗೆ ಎಂಬ ವಿಷಯದ ಕುರಿತು ಕಾರ್ಯಗಾರ ನಡೆಯಿತು. ಶ್ರೀ  ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥರು ಹಾಗೂ ಸಹ ಪ್ರಾಧ್ಯಾಪಕರಾದ ಡಾ.ಸನ್ಮತಿ ಕುಮಾರ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ದಿನೇಶ ಪಿ .ಟಿ, ಸಂಶೋಧನಾ ಸಮಿತಿಯ ಸಂಯೋಜಕರಾದ ಡಾ. ಪ್ರಸಾದ ಎನ್ ಹಾಗೂ ಸದಸ್ಯರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ,

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಸಂಶೋಧನಾ ಸಮಿತಿಯ ವತಿಯಿಂದ ಸಂಶೋಧನಾ ಪ್ರಬಂಧ ಬರೆಯುವ ಕುರಿತು ಕಾರ್ಯಾಗಾರ Read More »

ನಿಶಾಗೌರಿ ಯೂತ್ ಫೆಸ್ಟಿವಲ್ ಗೆ ಆಯ್ಕೆ

ಕೆ ಎಸ್ ಎಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸ್ವಯಂ ಸೇವಕಿ ನಿಶಾಗೌರಿ ಯೂತ್ ಫೆಸ್ಟಿವಲ್ ಗೆ ಆಯ್ಕೆಯಾಗಿದ್ದಾರೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂ ಸೇವಕಿ ನಿಶಾ ಗೌರಿ ಅವರು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ದಿನಾಂಕ 17.03.2025 ರಿಂದ 21.03.2025 ರವರೆಗೆ ನಡೆಯುವ ಯೂಥ್ ಫೆಸ್ಟಿವಲ್ ನಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾರೆ.

ನಿಶಾಗೌರಿ ಯೂತ್ ಫೆಸ್ಟಿವಲ್ ಗೆ ಆಯ್ಕೆ Read More »

ಅಪಘಾತದಿಂದ ಚಿಕಿತ್ಸೆ ಫಲಿಸದೆ ಯುವ ನ್ಯಾಯವಾದಿ ಮೃತ್ಯು | ಅಂಗಾಂಗ ದಾನ ಮಾಡಿದ ಕುಟುಂಬ

ಬಂಟ್ವಾಳ : ಕಳೆದ ವಾರ ಬಿ.ಸಿ.ರೋಡಿನಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬಿ.ಸಿ.ರೋಡಿನ ಯುವ ನ್ಯಾಯವಾದಿ ಪ್ರಥಮ್ ಬಂಗೇರ (27) ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತ ಪ್ರಥಮ್ ಅವರ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಅವರ ಕುಟುಂಬ ಮಾನವೀಯತೆಯನ್ನು  ತೋರಿದೆ. ಮೃತರ ಎರಡು ಕಣ್ಣು, ಕಿಡ್ನಿ, ಲಿವರ್ ಮತ್ತು ಕರುಳಿನ ಭಾಗವನ್ನು ದಾನವಾಗಿ ನೀಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.

ಅಪಘಾತದಿಂದ ಚಿಕಿತ್ಸೆ ಫಲಿಸದೆ ಯುವ ನ್ಯಾಯವಾದಿ ಮೃತ್ಯು | ಅಂಗಾಂಗ ದಾನ ಮಾಡಿದ ಕುಟುಂಬ Read More »

ಪುತ್ತೂರಿನಲ್ಲಿ ಭಾವ ತೀರ ಯಾನ ಸಿನಿಮಾ ಮಾ. 18 ರಂದು 10:30 ಕ್ಕೆ ಹಾಗೂ  ಸಂಜೆ  7:15ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ಹಾಗು ತೇಜಸ್‍ ಕಿರಣ್‍ ರವರ ನಿರ್ದೇಶನದಿಂದ ಮೂಡಿಬಂದ “ಭಾವ ತೀರ ಯಾನ” ಸಿನಿಮಾ ರಾಜ್ಯಾದ್ಯಂತ ಅದ್ಭುತವಾಗಿ ಚಿತ್ರ ಪ್ರದರ್ಶನಗೊಳ್ಳುತ್ತಿದೆ ಪುತ್ತೂರಿನ ಭಾರತ್ ಸಿನಿಮಾಸ್‍ನಲ್ಲಿ ಭಾವ ತೀರ ಯಾನ ಮಾ. 18 (ನಾಳೆ) ರಂದು 10:30 ಕ್ಕೆ ಹಾಗೂ  ಸಂಜೆ  7:15ರ ಸಮಯಕ್ಕೆ  ಚಿತ್ರ ಪ್ರದರ್ಶನಗೊಳ್ಳಲಿದೆ.  ಕೌಂಟ‌ರ್’ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ  ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ನಿರ್ಮಾಪಕರು ತಿಳಿಸಿದ್ದಾರೆ.

ಪುತ್ತೂರಿನಲ್ಲಿ ಭಾವ ತೀರ ಯಾನ ಸಿನಿಮಾ ಮಾ. 18 ರಂದು 10:30 ಕ್ಕೆ ಹಾಗೂ  ಸಂಜೆ  7:15ಕ್ಕೆ ಚಿತ್ರ ಪ್ರದರ್ಶನ Read More »

error: Content is protected !!
Scroll to Top