ದಕ್ಷಿಣ ಕನ್ನಡ

ಬೃಹತ್ ಉಚಿತ ವೈದ್ಯಕೀಯ ತಪಾಸಣೆ, ಆರೋಗ್ಯ ಮಾಹಿತಿ ಶಿಬಿರ ಮತ್ತು ಉಚಿತ ಓದುವ ಕನ್ನಡಕ ವಿತರಣೆ

ಪುತ್ತೂರು: ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.), ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನ (ರಿ), ಎನ್.ಜಿ. ವಲ್ಡ್ ಚಾರಿಟೇಬಲ್ ಟ್ರಸ್ಟ್ (ರಿ), ಮಂಗಳೂರು ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ, ಮಂಗಳೂರು ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಶಾಲಾಭಿವೃದ್ಧಿ ಸಮಿತಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುದ್ಮಾರು ಇವುಗಳ ಸಹಯೋಗದೊಂದಿಗೆ ಬೃಹತ್ ಉಚಿತ ವೈದ್ಯಕೀಯ ತಪಾಸಣೆ, ಆರೋಗ್ಯ ಮಾಹಿತಿ ಶಿಬಿರ ಮತ್ತು ಉಚಿತ ಓದುವ ಕನ್ನಡಕ ವಿತರಣೆ ಕಾರ್ಯಕ್ರಮ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ […]

ಬೃಹತ್ ಉಚಿತ ವೈದ್ಯಕೀಯ ತಪಾಸಣೆ, ಆರೋಗ್ಯ ಮಾಹಿತಿ ಶಿಬಿರ ಮತ್ತು ಉಚಿತ ಓದುವ ಕನ್ನಡಕ ವಿತರಣೆ Read More »

ಅಕ್ರಮವಾಗಿ ಸಾಗಿಸುತ್ತಿದ್ದ 35 ಜಾನುವಾರುಗಳ ರಕ್ಷಣೆ

ಮಂಗಳೂರು: ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕದ್ರಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಪತ್ತೆಹಚ್ಚಿದ್ದಾರೆ. ಮಂಗಳೂರು ಪಡವು ಹೈವೇ ಬಳಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಕಂಟೈನರ್ ಲಾರಿಯನ್ನು ತಡೆದು ಪರಿಶೀಲನೆ ನಡೆಸಿದ ವೇಳೆ 35 ಜಾನುವಾರುಗಳನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಬಜರಂಗದಳ ಕಾರ್ಯಕರ್ತರು ನೀಡಿದ ಮಾಹಿತಿಯ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ವಾಹನವನ್ನು ತಡೆದರು. ಪರಿಶೀಲನೆಯ ವೇಳೆ ಯಾವುದೇ ಸಮರ್ಪಕ ದಾಖಲೆಗಳಿಲ್ಲದೆ ಜಾನುವಾರುಗಳನ್ನು ಸಾಗಿಸಲಾಗುತ್ತಿದ್ದುದಾಗಿ ತಿಳಿದುಬಂದಿದೆ. ಜಾನುವಾರುಗಳನ್ನು ರಕ್ಷಿಸಿ ಸಂಬಂಧಿತ ಇಲಾಖೆಗೆ ಹಸ್ತಾಂತರಿಸಲಾಗಿದೆ. ಈ ಸಂಬಂಧ

ಅಕ್ರಮವಾಗಿ ಸಾಗಿಸುತ್ತಿದ್ದ 35 ಜಾನುವಾರುಗಳ ರಕ್ಷಣೆ Read More »

ಉಪ್ಪಿನಂಗಡಿ : ರೈಲಿನಡಿಗೆ ತಲೆಯಿಟ್ಟು ಯುವಕ ಆತ್ಮಹತ್ಯೆ

ರೈಲಿನಡಿಗೆ ಬಿದ್ದು ಯುವಕ ಮೃತ್ಯು ಎಂದು ವರದಿಯಾಗಿದ್ದ ಪ್ರಕರಣ ಉಪ್ಪಿನಂಗಡಿ : ಕಬಕ ಪುತ್ತೂರು ರೈಲ್ವೆ ನಿಲ್ದಾಣದ ಹಾರಾಡಿ ಸೇತುವೆಯ ಸಮೀಪ ಶುಕ್ರವಾರ ರೈಲು ಢಿಕ್ಕಿಯಾಗಿ ಯುವಕ ಮೃತಪಟ್ಟ ಘಟನೆ ಸಂಭವಿಸಿದ್ದು, ಇದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಎನ್ನುವುದು ತನಿಖೆಯಿಂದ ಗೊತ್ತಾಗಿದೆ. ಉಪ್ಪಿನಂಗಡಿ ಗ್ರಾಮದ ಪುಳಿತ್ತಡಿ ಬಳಿಯ ಗೌಂಡತ್ತಿಗೆ ನಿವಾಸಿ ಪವನ್ ಕುಮಾರ್ (26) ಮೃತ ಯುವಕ. ಸರಕು ಸಾಗಿಸುವ ಹಡಗಿನಲ್ಲಿ ಉದ್ಯೋಗಿಯಾಗಿದ್ದ ಪವನ್ ಕೆಲವು ತಿಂಗಳಿನಿಂದ ಕೆಲಸಕ್ಕೆ ತೆರಳದೆ ಮನೆಯಲ್ಲೇ ಇದ್ದರು. ಶುಕ್ರವಾರ

ಉಪ್ಪಿನಂಗಡಿ : ರೈಲಿನಡಿಗೆ ತಲೆಯಿಟ್ಟು ಯುವಕ ಆತ್ಮಹತ್ಯೆ Read More »

ಕುರ್ಚಿಯಿಂದ ಕುಸಿದು ಬಿದ್ದು ಯುವಕ ಸಾವು

ಕಾರ್ಕಳ: ಮನೆಯಲ್ಲಿ ಕುರ್ಚಿಯಲ್ಲಿ ಕುಳಿತುಕೊಂಡಿದ್ದ ಯುವಕನೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಯರ್ಲಪ್ಪಾಡಿಯಲ್ಲಿ ನಡೆದಿದೆ. ಸುಹೇಶ್ (22) ಎಂಬವರೇ ‌ಮೃತ ದುರ್ದೈವಿ. ಮಧ್ಯಾಹ್ನ ವೇಳೆ ಮನೆಯ ಊಟದ ಕೋಣೆಯಲ್ಲಿ ಕುಳಿತಿದ್ದ ಅವರು ಏಕಾಏಕಿ ಬೊಬ್ಬೆ ಹೊಡೆಯುತ್ತಾ ಕೆಳಕ್ಕೆ ಬಿದ್ದಿದ್ದಾಗಿ ತಿಳಿದು ಬಂದಿದೆ. ಆ ಬಳಿಕ ಅಸ್ವಸ್ಥರಾಗಿ ನರಳಾಡುತ್ತಿದ್ದ ಅವರನ್ನು ಕಾರ್ಕಳದ ‌ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಯಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು ಸುಹೇಶ್ ಅವರು ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಕಾರ್ಕಳ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕುರ್ಚಿಯಿಂದ ಕುಸಿದು ಬಿದ್ದು ಯುವಕ ಸಾವು Read More »

ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು: ಹಿರಿಯ ಪತ್ರಕರ್ತ ಸುಂದರ ಕಬಕ ಅವರು ಅನಾರೋಗ್ಯದ ಕಾರಣ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅವರು ರಾಜ್ಯ ಮಟ್ಟದ ಹಲವು ಟಿವಿ ಚಾನಲ್‌ಗಳಲ್ಲಿ ಕಾರ್ಯ ನಿರ್ವಹಿಸಿದ್ದರು. ಚೆನ್ನೈ, ಹೈದರಾಬಾದ್, ಬೆಂಗಳೂರುಗಳಲ್ಲಿ ಪ್ರಮುಖ ಖಾಸಗಿ ಸ್ಯಾಟಲೈಟ್ ಚಾನೆಲ್‌ಗಳಲ್ಲಿಯೂ ಮುಖ್ಯ ಹುದ್ದೆಗಳನ್ನು ನಿಭಾಯಿಸಿದ್ದರು.

ಪತ್ರಕರ್ತ ಸುಂದರ ಕಬಕ ನಿಧನ Read More »

ಶಿಬಾಜೆ ಶ್ರೀಧರ ಕೊಲೆ ಪ್ರಕರಣ ತನಿಖೆಗೆ ಎಸ್‌ಐಟಿ ರಚನೆ

ನಾಲ್ಕು ವರ್ಷದ ಹಿಂದೆ ಶಿಬಾಜೆಯ ತೋಟದಲ್ಲಿ ಕೊಲೆಯಾಗಿದ್ದ ಶ್ರೀಧರ ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಶಿಬಾಜೆಯಲ್ಲಿ ನಡೆದ ಶ್ರೀಧರ ಕೊಲೆ ಪ್ರಕರಣದ‌ ಮರು ತನಿಖೆಗೆ ಎಸ್.ಐ.ಟಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಬೆಂಗಳೂರು ಕೇಂದ್ರ ವಲಯದ ಐಜಿಪಿ ಲಾಂಬೂ ರಾವ್ ನೇತೃತ್ವದಲ್ಲಿ ರಚನೆಯಾಗಿರುವ ಎಸ್‌ಐಟಿ ತಂಡದಲ್ಲಿ ಉಡುಪಿ ಜಿಲ್ಲಾ ಎಸ್‌ಪಿ ಹರಿರಾವ್ ಶಂಕರ್, ಡಿವೈಎಸ್‌ಪಿ ಎಂ.ಆರ್ ಹರೀಶ್ ಅವರಿದ್ದಾರೆ. 2022ರ ಡಿ‌.18ರಂದು ಶಿಬಾಜೆಯ ತೋಟದ ಒಳಗೆ ಶ್ರೀಧರನ ಕೊಲೆ ನಡೆದಿತ್ತು. ಈ ಪ್ರಕರಣದಲ್ಲಿ

ಶಿಬಾಜೆ ಶ್ರೀಧರ ಕೊಲೆ ಪ್ರಕರಣ ತನಿಖೆಗೆ ಎಸ್‌ಐಟಿ ರಚನೆ Read More »

ಗೋವುಗಳನ್ನು ಕದ್ದು ಕಸಾಯಿಖಾನೆಗೆ ಮಾರಲು ಯತ್ನಿಸುತ್ತಿದ್ದ ಇಬ್ಬರು ಕಳ್ಳರ ಬಂಧನ

ಉಡುಪಿ: ದನ ಕರುಗಳನ್ನು ಕಳವು ಮಾಡಿ ಅವುಗಳನ್ನು ಕಸಾಯಿಖಾನೆಗೆ ಮಾರಲು ಪ್ರಯತ್ನಿಸುತ್ತಿದ್ದ ಇಬ್ಬರು ಖದೀಮ ಗೋಕಳ್ಳರನ್ನು ಹಿರಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಪೆರ್ಡೂರಿನ ರಾಘವೇಂದ್ರ ಮತ್ತು ಕುಂಜದಕಟ್ಟೆ ನಿವಾಸಿ ಸುಧೀಂದ್ರ ಶೆಟ್ಟಿ ಎಂದು ಗುರುತಿಸಲಾಗಿದೆ. ಪೆರ್ಡೂರು ದೇಗುಲದ ಸಮೀಪದ ಹೊಲದಿಂದ ಗೋವುಗಳನ್ನು ಕಳ್ಳತನ ಮಾಡಿ, ರಿಕ್ಷಾ ಮೂಲಕ ಅವುಗಳನ್ನು ಸಾಗಿಸಲು ಈ ಇಬ್ಬರು ಕಳ್ಳರು ಪ್ರಯತ್ನ ಮಾಡಿದ್ದಾರೆ. ಹಿರಿಯಡ್ಕ ಪೊಲೀಸರು ಆರೋಪಿಗಳ ಹೆಡೆಮುರಿ ಕಟ್ಟಿ ರಿಕ್ಷಾವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಗೋವುಗಳನ್ನು ಕದ್ದು ಕಸಾಯಿಖಾನೆಗೆ ಮಾರಲು ಯತ್ನಿಸುತ್ತಿದ್ದ ಇಬ್ಬರು ಕಳ್ಳರ ಬಂಧನ Read More »

ಈಶ್ವರಮಂಗಲದ ಸಾಂತ್ಯದಲ್ಲಿ ಮಾರ್ಗ ಸೂಚಕ ಫಲಕ ಅನಾವರಣ: ಗ್ರಾಮಾಭಿವೃದ್ಧಿಗೆ ಯುವಕರಿಂದ ಅರ್ಥಪೂರ್ಣ ಹೆಜ್ಜೆ

ಈಶ್ವರಮಂಗಲ: ಸಾಂತ್ಯ ಮುಖ್ಯ ರಸ್ತೆಯಿಂದ ಕವಲೊಡೆಯುವ ಪಳನೀರು-ಸಸ್ಪೆಟ್ಟಿ ಮಾರ್ಗದಲ್ಲಿ ಮಾರ್ಗ ಸೂಚಕ ನಾಮಫಲಕವನ್ನು ಅನಾವರಣಗೊಳಿಸುವ ಮೂಲಕ ಸ್ಥಳೀಯ ಯುವಕರು ಸಮಾಜಮುಖಿ ಕಾರ್ಯಕ್ಕೆ ಹೊಸ ಅರ್ಥ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ರಮೇಶ್ ರೈ ಸಾಂತ್ಯ ಅವರು, ಯುವಕರು ತಮ್ಮ ದೈನಂದಿನ ಜೀವನದ ಜವಾಬ್ದಾರಿಗಳ ನಡುವೆಯೂ ಸಮಾಜದ ಹಿತದೃಷ್ಟಿಯಿಂದ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ. ಗ್ರಾಮಾಭಿವೃದ್ಧಿಯಲ್ಲಿ ಸಾರ್ವಜನಿಕರ ಸಕ್ರಿಯ ಭಾಗವಹಿಸುವಿಕೆ ಅತ್ಯಂತ ಅಗತ್ಯವೆಂದು ಅಭಿಪ್ರಾಯಪಟ್ಟರು. ಬಾಲಮುರಳಿ ಸಸ್ಪೆಟ್ಟಿ ಅವರು ಮಾತನಾಡಿ, ಇಂದಿನ ಯುವಕರು ಅತಿಯಾದ ಮೊಬೈಲ್ ಬಳಕೆಯಿಂದ ದಿಕ್ಕುತಪ್ಪುತ್ತಿರುವ ಸಂದರ್ಭದಲ್ಲಿ, ಇಂತಹ ಕಾರ್ಯಗಳು

ಈಶ್ವರಮಂಗಲದ ಸಾಂತ್ಯದಲ್ಲಿ ಮಾರ್ಗ ಸೂಚಕ ಫಲಕ ಅನಾವರಣ: ಗ್ರಾಮಾಭಿವೃದ್ಧಿಗೆ ಯುವಕರಿಂದ ಅರ್ಥಪೂರ್ಣ ಹೆಜ್ಜೆ Read More »

ಹೈನುಗಾರರಿಗೆ ಸಿಗಲಿದೆ 1 ರೂ. ಹೆಚ್ಚುವರಿ ಪ್ರೋತ್ಸಾಹಧನ

ಬೇಸಿಗೆಯ ಮೇವಿನ ಸಂಕಷ್ಟ ನಿವಾರಿಸಲು ದ.ಕ. ಹಾಲು ಉತ್ಪಾದಕರ ಒಕ್ಕೂಟ ನೆರವು ಮಂಗಳೂರು : ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ತನ್ನ ಸದಸ್ಯ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಹಾಲಿಗೆ 1 ರೂಪಾಯಿ ಹೆಚ್ಚುವರಿ ಪ್ರೋತ್ಸಾಹಧನ ನೀಡಲು ನಿರ್ಧರಿಸಿದೆ. ಈ ವಿಶೇಷ ಪ್ರೋತ್ಸಾಹಧನ ಫೆಬ್ರವರಿ 21ರಿಂದ ಮೇ 31ರವರೆಗೆ ಅನ್ವಯವಾಗಲಿದೆ. ಬೇಸಿಗೆಯ ಅವಧಿಯಲ್ಲಿ ಹಸಿರು ಹುಲ್ಲು ಮತ್ತು ಒಣ ಹುಲ್ಲಿನ ಕೊರತೆಯಿಂದಾಗಿ ಸಂಕಷ್ಟ ಎದುರಿಸುತ್ತಿರುವ ಹೈನುಗಾರರಿಗೆ ಸಹಾಯ ಮಾಡಲು ವಿಶೇಷ ಪ್ರೋತ್ಸಾಹಧನ ನೀಡಲು ನಿರ್ಧರಿಸಲಾಗಿದೆ.

ಹೈನುಗಾರರಿಗೆ ಸಿಗಲಿದೆ 1 ರೂ. ಹೆಚ್ಚುವರಿ ಪ್ರೋತ್ಸಾಹಧನ Read More »

ಸ್ಕೂಟರ್‌ನಲ್ಲಿ ದಿಢೀರ್ ಬೆಂಕಿ: ಕ್ಷಣಮಾತ್ರದಲ್ಲಿ ಸುಟ್ಟು ಕರಕಲು

ಉಡುಪಿ: ಮನೆಯಂಗಳದಲ್ಲಿ ‌ನಿಲ್ಲಿಸಿದ್ದ ಸ್ಕೂಟರ್ ಬೆಂಕಿಗೆ ಆಹುತಿಯಾದ ಘಟನೆ ಶಿರ್ವದ ಪಂಜಿಮಾರು ಪಾಲಮೆಯಲ್ಲಿ ನಡೆದಿದೆ. ಈ ಸ್ಕೂಟರ್ ಅನ್ನು ಕೇವಲ ಒಂದು ತಿಂಗಳ ಹಿಂದಷ್ಟೇ ಖರೀದಿ ಮಾಡಲಾಗಿತ್ತು. ಮಂಗಳೂರಿನಿಂದ ಕೇವಲ ಒಂದು ತಿಂಗಳ ಹಿಂದಷ್ಟೇ ಸ್ಕೂಟರ್ ಅನ್ನು ಖರೀದಿ ಮಾಡಲಾಗಿತ್ತು. ಮಂಗಳವಾರ ಮಧ್ಯಾಹ್ನ ಮನೆಯ ಅಂಗಳದಲ್ಲಿ ಅದನ್ನು ಮಾಲೀಕರು ಪಾರ್ಕ್ ಮಾಡಿದ್ದರು. ದಿಢೀರ್ ಎಂದು ಅದಕ್ಕೆ ಬೆಂಕಿ ಹಿಡಿದುಕೊಂಡಿದ್ದು, ಕೆಲವೇ ಸಮಯದಲ್ಲಿ ಗಾಡಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವುದಾಗಿ ತಿಳಿದು ಬಂದಿದೆ. ಘಟನೆಯಲ್ಲಿ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ.

ಸ್ಕೂಟರ್‌ನಲ್ಲಿ ದಿಢೀರ್ ಬೆಂಕಿ: ಕ್ಷಣಮಾತ್ರದಲ್ಲಿ ಸುಟ್ಟು ಕರಕಲು Read More »

error: Content is protected !!
Scroll to Top