ದಕ್ಷಿಣ ಕನ್ನಡ

ದ.ಕ. ಬಂದ್‍ ಕರೆ ಹಿನ್ನಲೆ ಹಿಂದೂ ಮುಖಂಡ ಶರಣ್ ಪಂಪ್ ವೇಲ್ ವಿರುದ್ಧ ಎಫ್‍.ಐ.ಆರ್‍

ಮಂಗಳೂರು : ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆಯ ಬಳಿಕ  ದಕ್ಷಿಣ ಕನ್ನಡ ಜಿಲ್ಲಾ ಬಂದ್‍ ಕರೆ ಗೆ ನೀಡಿದ ಬೆನ್ನಲ್ಲೇ ಹಿಂದೂ ಮುಖಂಡ ಶರಣ್ ಪಂಪ್ ವೇಲ್ ವಿರುದ್ಧ  ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಕರೆ ನೀಡಿದ್ದು, ಈ ಸಂದರ್ಭದಲ್ಲಿ ಸರ್ಕಾರಿ ಬಸ್ ಗಳಿಗೆ ಕಲ್ಲೆಸೆದು ಹಾನಿ ಮಾಡಲಾಗಿದೆ. ಈ ವೇಳೆ BNS ಕಾಯ್ದೆ 353 (2) 196 (b) (1) 49 ಹಾಗೂ 324 […]

ದ.ಕ. ಬಂದ್‍ ಕರೆ ಹಿನ್ನಲೆ ಹಿಂದೂ ಮುಖಂಡ ಶರಣ್ ಪಂಪ್ ವೇಲ್ ವಿರುದ್ಧ ಎಫ್‍.ಐ.ಆರ್‍ Read More »

ಮಂಗಳೂರು ಹೈ ಅಲರ್ಟ್‍ | ವೈರಲ್‍ ಪೋಸ್ಟ್ ನಿಂದ ರಾತ್ರಿ 9:30ರೊಳಗೆ ವ್ಯಾಪಾರಗಳು ಬಂದ್‍

ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಹತ್ಯೆಯ ಪ್ರಕರಣದ ಕುರಿತಾಗಿ ಸೋಶಿಯಲ್‍ ಮೀಡಿಯಾದಲ್ಲಿ ಪೋಸ್ಟ್ ಗಳನ್ನು ಹಬ್ಬಿರುವ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೋಲಿಸರು ಕಠಿಣಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.  ‘ರಾತ್ರಿ 9.30ಕ್ಕೆ ಭರತ್ ಕುಮೇಲ್ ಕೊಲ್ಲುತ್ತೇವೆ’ ಎಂಬ ಸಂದೇಶ ರವಾಣೆಯಾದ ಹಿನ್ನಲೆಯಲ್ಲಿ ಮಂಗಳೂರು ನಗರದಾದ್ಯಂತ ಪೋಲಿಸರು ಹೈ ಅಲರ್ಟ್‍ ಆಗಿದ್ದಾರೆ.  ಸೋಮವಾರ ರಾತ್ರಿ 9.30ರೊಳಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಲಾಗಿದೆ. ಜನರನ್ನು ಬೇಗನೆ ಮನೆ ಸೇರಿಸುವ ಯತ್ನದಲ್ಲಿ ಹೋಟೆಲ್, ಪಬ್, ಬಾರ್ಗಗಳು, ಫುಟ್ ಪಾತ್

ಮಂಗಳೂರು ಹೈ ಅಲರ್ಟ್‍ | ವೈರಲ್‍ ಪೋಸ್ಟ್ ನಿಂದ ರಾತ್ರಿ 9:30ರೊಳಗೆ ವ್ಯಾಪಾರಗಳು ಬಂದ್‍ Read More »

ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಕಡಬ: ಮನೆಯ ತೋಟದಲ್ಲಿದ್ದ ತೆಂಗಿನಕಾಯಿ ಕೀಳಲು ಮರಕ್ಕೆ ಹತ್ತಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದ ಘಟನೆ ಕಡಬ ತಾಲೂಕು ಬಲ್ಯ ಗ್ರಾಮದ ಪಲ್ಲತಡ್ಕದಲ್ಲಿ ನಡೆದಿದೆ. ಆಯ ತಪ್ಪಿ ಬಿದ್ದಿದ್ದರಿಂದ ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.   ಮೃತಪಟ್ಟ ವ್ಯಕ್ತಿಯನ್ನು ದಿ। ಐತಪ್ಪ ಪೂಜಾರಿ ಅವರ ಪುತ್ರ ಉಮೇಶ್ ಪೂಜಾರಿ (46) ಎಂದು ತಿಳಿದುಬಂದಿದೆ. ತೆಂಗಿನ ಮರದಿಂದ ಬಿದ್ದು ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಉಮೇಶ್ ಪೂಜಾರಿ

ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಹತ್ಯೆ ನಡೆದ ಸ್ಥಳದಲ್ಲಿದ್ದ ಇಬ್ಬರು ಮಹಿಳೆಯರ ವಿಚಾರಣೆ

ಆರೋಪಿಯೊಬ್ಬನ ಸಂಬಂಧಿಕ ಮಹಿಳೆಯರು ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಕೊಲೆ ಮಾಡುವಾಗ ಸ್ಥಳದಲ್ಲಿದ್ದ ಇಬ್ಬರು ಬುರ್ಖಾಧಾರಿ ಮಹಿಳೆಯರನ್ನು ವಿಚಾರಣೆಗೊಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಕೊಲೆ ಮಾಡಿ ಕಾರಿನಲ್ಲಿ ಪರಾರಿಯಾಗುತ್ತಿದ್ದಾಗ ಸ್ಥಳದಲ್ಲಿದ್ದ ಇಬ್ಬರು ಬುರ್ಖಾ ಧರಿಸಿದ ಮಹಿಳೆಯರು ಕಾರಿನ ಸಮೀಪ ಬಂದಿದ್ದರು. ಈ ಪೈಕಿ ಓರ್ವ ಮಹಿಳೆ ಫೋನಿನಲ್ಲಿ ಯಾರೊಂದಿಗೋ ಮಾತನಾಡುತ್ತಾ ಆರೋಪಿಯೊಬ್ಬನ ಸಮೀಪ ಸಾಗಿ ಬಂದಿದ್ದಳು. ಈ ಹಿನ್ನೆಲೆಯಲ್ಲಿ ಕೊಲೆಯಲ್ಲಿ ಇವರ ಪಾತ್ರವಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು. ಈ ಮಹಿಳೆಯರು ಘಟನೆಯಲ್ಲಿ ನೇರವಾಗಿ

ಹತ್ಯೆ ನಡೆದ ಸ್ಥಳದಲ್ಲಿದ್ದ ಇಬ್ಬರು ಮಹಿಳೆಯರ ವಿಚಾರಣೆ Read More »

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ : ಹೆಡ್‌ಕಾನ್‌ಸ್ಟೆಬಲ್‌ ಮೇಲೆ ಅನುಮಾನದ ದೃಷ್ಟಿ

ಆಯುಧ ಇಟ್ಟುಕೊಳ್ಳದಂತೆ ಮಾಡಿ ಹಂತಕರಿಗೆ ಓಡಾಟದ ಸುಳಿವು ನೀಡಿದ್ದಾರೆಂದು ಗುಮಾನಿ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಬಜಪೆ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್‌ ಒಬ್ಬರ ಕೈವಾಡ ಇದೆ ಎಂಬ ಗಂಭೀರವಾದ ಆರೋಪ ಕೇಳಿ ಬಂದಿದೆ. ಸುಹಾಸ್ ಶೆಟ್ಟಿ ಹತ್ಯೆಯಾದ ಕ್ಷಣದಿಂದ ದಿನಕ್ಕೊಂದು ಅನುಮಾನ ಹುಟ್ಟುತ್ತಲೇ ಇದೆ. ಮೊದಲಿಗೆ ಸೇಡು ತೀರಿಸಲು ಫಾಝಿಲ್ ತಮ್ಮ ಆದಿಲ್ ಮೆಹರೂಫ್ ಸುಫಾರಿ ಕೊಟ್ಟು ಹತ್ಯೆ ನಡೆಸಿದ್ದಾನೆಂದು ಹೇಳಲಾಗಿತ್ತು. ಬಳಿಕ ನಿಷೇಧಿತ ಪಿಎಫ್‌ಐ ಸಂಘಟನೆ ಭಾಗಿಯಾಗಿದೆ ಎಂಬ ಅನುಮಾನ ಹುಟ್ಟಿಕೊಂಡಿತ್ತು.

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ : ಹೆಡ್‌ಕಾನ್‌ಸ್ಟೆಬಲ್‌ ಮೇಲೆ ಅನುಮಾನದ ದೃಷ್ಟಿ Read More »

ಸುಹಾಸ್‌ ಶೆಟ್ಟಿಯಲ್ಲಿ ಹತ್ಯೆಯಲ್ಲಿ ಪೊಲೀಸರು ಭಾಗಿ : ಉಮಾನಾಥ್‌ ಕೋಟ್ಯಾನ್‌ ಗಂಭೀರ ಆರೋಪ

ಕೊಲೆಗಡುಕರಿಗೆ ಪೊಲೀಸರ ಪೂರ್ಣ ಸಹಕಾರ ಇತ್ತು ಎಂದ ಶಾಸಕ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಪೊಲೀಸರೇ ಭಾಗಿಯಾಗಿದ್ದಾರೆ. ಹೀಗಾಗಿ ಅವರು ನಡೆಸುವ ತನಿಖೆಯಲ್ಲಿ ನನಗೆ ವಿಶ್ವಾಸವಿಲ್ಲ. ಎನ್‌ಐಎ ತನಿಖೆಯಾದರೆ ಮಾತ್ರ ಪೂರ್ಣ ಸತ್ಯ ಹೊರಬರಬಹುದು ಎಂದು ಮೂಲ್ಕಿ-ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಹಾಸ್ ಶೆಟ್ಟಿ ಕೊಲೆಗೆ, ಕೊಲೆಗಡುಕರಿಗೆ ಪೊಲೀಸರು ಸಂಪೂರ್ಣ ಸಹಕಾರ ನೀಡಿದ್ದಾರೆ ಎಂದು ಅಪಾದಿಸಿದರು. ಕೊಲೆ ವ್ಯವಸ್ಥಿತ ರೀತಿಯಲ್ಲಿ ನಡೆದಿದೆ.

ಸುಹಾಸ್‌ ಶೆಟ್ಟಿಯಲ್ಲಿ ಹತ್ಯೆಯಲ್ಲಿ ಪೊಲೀಸರು ಭಾಗಿ : ಉಮಾನಾಥ್‌ ಕೋಟ್ಯಾನ್‌ ಗಂಭೀರ ಆರೋಪ Read More »

ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಬಂಟ್ವಾಳ : ಪಾಣೆಮಂಗಳೂರು ರೈಲ್ವೆ ಮೇಲ್ಸೇತುವೆಯ ಅಡಿಭಾಗದಲ್ಲಿ ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹವೊಂದು ಪತ್ತೆಯಾಗಿದೆ. ಸುಮಾರು 40-45 ವರ್ಷ ವಯಸ್ಸಿನ ಗಂಡಸಿನ ಮೃತದೇಹ ಗಂಡಸಿನ ಮೃತದೇಹ ಇದಾಗಿದೆ. ಈ ಬಗ್ಗೆ ತಲಪಾಡಿ ಪೊನ್ನೋಡಿ ನಿವಾಸಿ ಪ್ರಥಮ್ ಶೆಟ್ಟಿ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ. ಮಂಗಳೂರಿನಲ್ಲಿ ಏರ್ ಕಂಡೀಷನ್ ಟೆಕ್ನಿಶಿಯನ್ ಆಗಿರುವ ಇವರು ಬುಧವಾರ ಕೆಲಸಕ್ಕೆ ರಜೆ ಇದ್ದುದರಿಂದ ಮಂಗಳವಾರ ಸಂಜೆ ವೇಳೆ ಬಿ ಮೂಡ ಗ್ರಾಮದ ಕೈಕುಂಜೆ ರೈಲ್ವೆ ಹಳಿಯ ಬ್ರಿಡ್ಜ್ ಮೇಲೆ ನಂದಾವರಕ್ಕೆ ನಡೆದುಕೊಂಡು

ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ Read More »

ಪ್ರಚೋದನಕಾರಿ ಪೋಸ್ಟ್‌ : ಪುತ್ತೂರಿನ ಯುವಕನ ವಿರುದ್ಧ ಕೇಸ್‌

ಸುಹಾಸ್‌ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ವಾಟ್ಸಾಪ್‌ ಗ್ರೂಪ್‌ನಲ್ಲಿ ಪೋಸ್ಟ್‌ ಮಂಗಳೂರು: ಬಜ್ಪೆ ಸಮೀಪ ಕಿನ್ನಿಪದವು ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಟ್ಸಾಪ್ ಗ್ರೂಪ್‌ನಲ್ಲಿ ಶಾಂತಿ ಮತ್ತು ಸೌಹಾರ್ದಕ್ಕೆ ಧಕ್ಕೆ ಉಂಟುಮಾಡುವ ಪೋಸ್ಟ್ ಮಾಡಿದ ಪುತ್ತೂರಿನ ಯುವಕನ ವಿರುದ್ಧ ಮಂಗಳೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪುತ್ತೂರಿನ ಮನೀಷ್ ಎಂಬಾತ ವಾಟ್ಸಾಪ್ ಗ್ರೂಪ್‌ನಲ್ಲಿ ಮಹೇಶ್ ಎಸ್. ಎಂಬ ಹೆಸರಿನಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿದ್ದ. ಆತನನ್ನು ಪತ್ತೆ ಹಚ್ಚಿ ವಿಚಾರಣೆ ನಡೆಸಲಾಗಿದೆ. ಮನೀಷ್

ಪ್ರಚೋದನಕಾರಿ ಪೋಸ್ಟ್‌ : ಪುತ್ತೂರಿನ ಯುವಕನ ವಿರುದ್ಧ ಕೇಸ್‌ Read More »

ಪಾತಾಳ ಕಲಾಮಂಗಳ ಪ್ರಶಸ್ತಿ ಪ್ರದಾನ

ಉಪ್ಪಿನಂಗಡಿ ಪಾತಾಳ ಯಕ್ಷಪ್ರತಿಷ್ಠಾನದ  ಕಲಾಮಂಗಳ ಪ್ರಶಸ್ತಿ ಪ್ರದಾನ ಸಮಾರಂಭವು ಪಾತಾಳದ ಪೂರ್ಣ ಶ್ರೀ ಗೃಹದಲ್ಲಿ ಜರಗಿತು. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಿದ್ದರು. ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ, ಉದ್ಯಮಿ, ಕಲಾಪೋಷಕ ಶ್ರೀಪತಿ ಭಟ್ ಮೂಡಬಿದ್ರೆ, ಜನಾರ್ಧನ ಹಂದೆ ಮಂಗಳೂರು ಮುಖ್ಯ ಅಭ್ಯಾಗತರಾಗಿ ಶುಭ ಹಾರೈಸಿದರು. ಅಶ್ವತ್ಥಾಮ ಖ್ಯಾತಿಯ ಕಲಾವಿದ ಗುಂಡಿ ಮಜಲು ಗೋಪಾಲಕೃಷ್ಣ ಭಟ್ ಮತ್ತು ಕಟೀಲು ಮೇಳದ ಕಲಾವಿದ,

ಪಾತಾಳ ಕಲಾಮಂಗಳ ಪ್ರಶಸ್ತಿ ಪ್ರದಾನ Read More »

ಮಂಗಳೂರು: 3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ

ಮಂಗಳೂರು: ಮಂಗಳೂರಿನ ಪಣಂಬೂರಿನಲ್ಲಿ ಮೂರು ವರ್ಷ ಪ್ರಾಯದ ಮಗುವಿನ ಮೇಲೆ 50ರ ಹರೆಯದ ವ್ಯಕ್ತಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಉತ್ತರ ಭಾರತದ ದಂಪತಿಯ 3 ವರ್ಷ ಪ್ರಾಯದ ಮಗುವಿನ ಮೇಲೆ ಅಶೋಕ್‌ ಖಾರ್ವಿ (50) ಎಂಬಾತ ಲೈಂಗಿಕ ದೌರ್ಜನ್ಯ ಎಸಗಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಪಣಂಬೂರಿನ ಬೆಂಗ್ರೆಯಲ್ಲಿ ಘಟನೆ ನಡೆದಿದ್ದು, ಭಾನುವಾರ ದಂಪತಿ ಮನೆಯಲ್ಲಿ ಇಲ್ಲದ ವೇಳೆ ಅರೋಪಿ ಮಗುವನ್ನು ತನ್ನ ಮನೆಗೆ ಕರೆದುಕೊಂಡು ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ದಂಪತಿ ಸಂಜೆ ಮನೆಗೆ ಹಿಂದಿರುಗಿದ

ಮಂಗಳೂರು: 3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ Read More »

error: Content is protected !!
Scroll to Top