ದಕ್ಷಿಣ ಕನ್ನಡ

ನಾರಾವಿ : ಬೈಕ್‌ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಸಾವು

ಬೆಳ್ತಂಗಡಿ: ಬೈಕೊಂದು ನಿಯಂತ್ರಣ ಕಳೆದುಕೊಂಡು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಸಾವಿಗೀಡಾದ ದಾರುಣ ಘಟನೆ ನಾರಾವಿಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ.ನಾರಾವಿ ಸಮೀಪ ಕುತ್ಲೂರಿನಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಮೃತರನ್ನು ಪ್ರಶಾಂತ್ ಹಾಗೂ ದಿನೇಶ್ ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಕಾರ್ಯಕ್ರಮ ಮುಗಿಸಿ ಹಿಂತಿರುಗುವ ವೇಳೆ ರಾತ್ರಿ ಹನ್ನೆರಡು ಗಂಟೆಯ ಸುಮಾರಿಗೆ ಕುತ್ಲೂರು ಪುರುಷಗುಡ್ಡೆ ಸಮೀಪ ಕೊಕ್ರಾಡಿ ನಾರಾವಿ ರಸ್ತೆಯಲ್ಲಿ ಅಪಘಾತ ಸಂಭವಿಸಿರುವುದಾಗಿ ತಿಳಿದು ಬಂದಿದೆ.ಪ್ರಶಾಂತ್‌ ಬೆಳ್ತಂಗಡಿ ಮತ್ತು ದಿನೇಶ್‌ ಕಾರ್ಕಳ ಸಮೀಪದ […]

ನಾರಾವಿ : ಬೈಕ್‌ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಸಾವು Read More »

ಬೈಕ್‍ ಅಪಘಾತ : ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು

ಬೆಳ್ತಂಗಡಿ; ಭೀಕರ ಬೈಕ್‍ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಾರಾವಿ ಕುತ್ಲೂರಿನಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಬೈಕ್ ಸವಾರರಾದ ಪ್ರಶಾಂತ್ ಹಾಗೂ ದಿನೇಶ್ ಎಂಬವರೇ ಮೃತಪಟ್ಟವರು. ಕುತ್ಲೂರು ಪುರುಷ ಗುಡ್ಡೆ ಸಮೀಪ ಕೊಕ್ರಾಡಿ ನಾರಾವಿ ರಸ್ತೆಯಲ್ಲಿ ಬೈಕ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಇಬ್ಬರು ಸವಾರರು ಸ್ಥಳದಲ್ಲಿಯೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ರಾತ್ರಿಯ ವೇಳೆ ಯಾವುದೋ ಕಾರ್ಯಕ್ರಮ ಮುಗಿಸಿ ಹಿಂತಿರುಗುವ ವೇಳೆ ರಾತ್ರಿ ಹನ್ನೆರಡು ಗಂಟೆಯ

ಬೈಕ್‍ ಅಪಘಾತ : ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು Read More »

ಮಂಗಳೂರು: ಬೀಚ್‌ನಲ್ಲಿ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಮೂವರು ಸೆರೆ

ಮಾದಕವಸ್ತು, ಕಾರು ಸಹಿತ 9.24 ಲ.ರೂ. ಸೊತ್ತು ವಶ ಮಂಗಳೂರು ‌: ನಗರದ ಸುರತ್ಕಲ್‌ ಬೀಚ್‌ನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರನ್ನು ಮಂಗಳೂರು ನಗರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಿಂದ ನಿಷೇಧಿತ ಎಂಡಿಎಂಎಯನ್ನು ತಂದು ಸುರತ್ಕಲ್ ಸುತ್ತಮುತ್ತ ಕಾಲೇಜು ವಿದ್ಯಾರ್ಥಿಗಳು ಮತ್ತು ಯುವಕರನ್ನು ಗುರಿಮಾಡಿಕೊಂಡು ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಬಂಧಿತರನ್ನು ಸುರತ್ಕಲ್ ನಿವಾಸಿಗಳಾದ ಮೊಹಮ್ಮದ್ ಆಸಿಫ್ (24), ಅಸ್ಕರ್ ಅಲಿ (31) ಮತ್ತು ಹಳೆಯಂಗಡಿಯ ಮೊಹಮ್ಮದ್ ರಶೀಮ್ (24)

ಮಂಗಳೂರು: ಬೀಚ್‌ನಲ್ಲಿ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಮೂವರು ಸೆರೆ Read More »

ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ವರ್ಷಾವಧಿ ಉತ್ಸವ, ಶ್ರೀ ಉಳ್ಳಾಕುಲು ನೇಮೋತ್ಸವ

ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ವರ್ಷಾವಧಿ ಉತ್ಸವ ಹಾಗೂ ನೇಮೋತ್ಸವ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಗುರುವಾರ ಹಾಗೂ ಶುಕ್ರವಾರ ನಡೆಯಿತು. ಗುರುವಾರ ಬೆಳಿಗ್ಗೆ 8 ಕ್ಕೆ ಕವಾಟೋದ್ಘಾಟನೆ, 9 ಕ್ಕೆ ಗಣಹೋಮ, ಕಲಶ ಪೂಜೆ, 10 ಕ್ಕೆ ಪಂಚಾಮೃತಾಭಿಷೇಕ, ಕಲಶಾಭಿಷೇಕ, 11 ಕ್ಕೆ ಬ್ರಹ್ಮರ ಮೂಲಸ್ಥಾನದಲ್ಲಿ ಪೂಜೆ, 11.30 ಕ್ಕೆ ಮೂಲ ನಾಗದ ಕಟ್ಟೆಯಲ್ಲಿ ತಂಬಿಲ ಸೇವೆ, 12 ಕ್ಕೆ ಪರಿವಾರ ದೈವಗಳಿಗೆ ತಂಬಿಲ ಸೇವೆ, 12.30 ಕ್ಕೆ ನಾಗಬ್ರಹ್ಮ ದೇವರ ಪೂಜೆ, ಮಧ್ಯಾಹ್ನ 1 ಕ್ಕೆ

ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ವರ್ಷಾವಧಿ ಉತ್ಸವ, ಶ್ರೀ ಉಳ್ಳಾಕುಲು ನೇಮೋತ್ಸವ Read More »

ದ್ವಿತೀಯ ಪಿಯುಸಿ ವಿಜ್ಞಾನ ಪರೀಕ್ಷೆಯಲ್ಲಿ 5 ನೇ ರಾಂಕ್ ಪಡೆದ ಶ್ರೀವಿದ್ಯಾಳಿಗೆ ಸನ್ಮಾನ

ಪುತ್ತೂರು: ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕಾಲೇಜು ಅಭಿವೃದ್ಧಿ ಸಮಿತಿ ಮತ್ತು ವಿದ್ಯಾಭಿಮಾನಿ ಸಂಘಗಳ ವತಿಯಿಂದ ದ್ವಿತೀಯ ಪಿಯುಸಿ ವಿಜ್ಞಾನ ಪರೀಕ್ಷೆಯಲ್ಲಿ 5 ನೇ ರಾಂಕ್ ಪಡೆದ ಶ್ರೀವಿದ್ಯಾ ಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಸಿಡಿಸಿ ಸದಸ್ಯ ವೆಂಕಟೇಶ್‍ ಭಟ್‍ ಕೊಯಕುಡೆ ಶ್ರೀವಿದ್ಯಾಳ ಸಾಧನೆಯನ್ನು ವಿವರಿಸಿ, ನಮ್ಮ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮ ಸ್ಪೂರ್ತಿ ನೀಡಲಿ ಎಂದರು. ಸಿಡಿಸಿ ಸದಸ್ಯ ಪ್ರವೀಣ್‍ ಕುಮಾರ್ ಕೆಡೆಂಜಿ ಮಾತನಾಡಿ, ಒಂದನೇ ತರಗತಿಯಿಂದ ಪಿಯುಸಿ ವರೆಗೆ ಸರಕಾರಿ ಶಾಲೆಗಳಲ್ಲಿ ಓದಿ ರಾಂಕ್

ದ್ವಿತೀಯ ಪಿಯುಸಿ ವಿಜ್ಞಾನ ಪರೀಕ್ಷೆಯಲ್ಲಿ 5 ನೇ ರಾಂಕ್ ಪಡೆದ ಶ್ರೀವಿದ್ಯಾಳಿಗೆ ಸನ್ಮಾನ Read More »

ಮೂಲ್ಕಿ : ನಾಪತ್ತೆಯಾಗಿದ್ದ ಆಟೋ ಚಾಲಕನ ಮೃತದೇಹ ಬಾವಿಯಲ್ಲಿ ಪತ್ತೆ

ಗಡಿಭಾಗದ ಕುಂಜತ್ತೂರು ಪದವು ಎಂಬಲ್ಲಿ ಬಾವಿಯೊಳಗಿದೆ ಶವ- ಕೊಲೆ ಶಂಕೆ ಮೂಲ್ಕಿ‌: ಕಳೆದ ಬುಧವಾರದಿಂದ ನಾಪತ್ತೆಯಾಗಿದ್ದ ಮೂಲ್ಕಿಯ ಆಟೋ ಚಾಲಕನ ಮೃತದೇಹ ಕಾಸರಗೋಡಿನ ಮಂಜೇಶ್ವರ ಸಮೀಪದ ಕುಂಜತ್ತೂರು ಪದವು ಎಂಬಲ್ಲಿ ನಿರ್ಜನ ಪ್ರದೇಶದ ಬಾವಿಯಲ್ಲಿ ಗುರುವಾರ ರಾತ್ರಿ ಪತ್ತೆಯಾಗಿದ್ದು, ಇದು ಕೊಲೆ ಎಂದು ಶಂಕಿಸಲಾಗಿದೆ. ಮೂಲ್ಕಿ ಕೊಳ್ನಾಡಿನ ಮುಹಮ್ಮದ್ ಶರೀಫ್ (52) ಮೃತಪಟ್ಟವರು. ಬುಧವಾರ ಬೆಳಗ್ಗೆ ಎಂದಿನಂತೆ ರಿಕ್ಷಾ ಸಹಿತ ಮನೆಯಿಂದ ತೆರಳಿದ್ದ ಇವರು ಅಂದು ಮನೆಗೆ ಬಾರದೆ ನಾಪತ್ತೆಯಾಗಿದ್ದರು.ಪತ್ನಿ ಕರೆ ಮಾಡಿದಾಗ ಮೊಬೈಲ್ ಸಂಪರ್ಕಕಕ್ಕೆ ಸಿಗದ

ಮೂಲ್ಕಿ : ನಾಪತ್ತೆಯಾಗಿದ್ದ ಆಟೋ ಚಾಲಕನ ಮೃತದೇಹ ಬಾವಿಯಲ್ಲಿ ಪತ್ತೆ Read More »

ಕಾರಿನಲ್ಲಿ ಚಿನ್ನ, ನಗದು, ಮಾರಕಾಯುಧ ಪತ್ತೆ

ಪಲಾಯನ ಮಾಡಲೆತ್ನಿಸಿದ ಕಾರನ್ನು8 ಕಿ.ಮೀ. ಬೆನ್ನಟ್ಟಿ ಹಿಡಿದ ಪೊಲೀಸರು ಕಾಸರಗೋಡು: ಕಾರೊಂದನ್ನು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದಾಗ ಭಾರಿ ಪ್ರಮಾಣದ ಚಿನ್ನಾಭರಣ, ನಗದು ಮತ್ತು ಮಾರಕಾಯುಧಗಳು ಪತ್ತೆಯಾದ ಘಟನೆ ಕೇರಳ-ಕರ್ನಾಟಕ ಗಡಿಯ ಆದೂರು ಚೆಕ್‌ಪೋಸ್ಟ್‌ ಸಮೀಪ ನಡೆದಿದೆ. ವಾಹನ ತಪಾಸಣೆ ಸಂದರ್ಭದಲ್ಲಿ ನಿಲ್ಲಿಸದೆ ಪರಾರಿಯಾಗಿದ್ದ ಕಾರನ್ನು ಬೆನ್ನಟ್ಟಿ ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ ಚಿನ್ನಾಭರಣ , ಬೆಳ್ಳಿ ಹಾಗೂ ಇನ್ನಿತರ ವಸ್ತುಗಳ ಜೊತೆಗೆ ಮಾರಕಾಯುಧಗಳು ಮತ್ತು ಕಳ್ಳತನಕ್ಕೆ ಬಳಸುವ ಪರಿಕರಗಳು ಸಿಕ್ಕಿವೆ. ಕಾರಿನಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ. ಅಬಕಾರಿ

ಕಾರಿನಲ್ಲಿ ಚಿನ್ನ, ನಗದು, ಮಾರಕಾಯುಧ ಪತ್ತೆ Read More »

ಬಾವಿಗೆ ಬಿದ್ದ ಚಿರತೆ | ಅರಣ್ಯಾಧಿಕಾರಿಗಳಿಂದ ರಕ್ಷಣೆ

ಮೂಡುಬಿದಿರೆ: ಚಿರತೆಯೊಂದು ಬಾವಿಗೆ ಬಿದ್ದಿದ್ದರಿಂದ ಅರಣ್ಯಾಧಿಕಾರಿಗಳು ರಕ್ಷಣೆ ಮಾಡಿದ ಘಟನೆ ಮಡುಬಿದಿರೆ ತಾಲೂಕಿನ ಶಿರ್ತಾಡಿ ಗ್ರಾಮದಲ್ಲಿ ನಡೆದಿದೆ. ಮಂಗಳವಾರ ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಮಕ್ಕಿ ನಿವಾಸಿ ರಮೇಶ ಪೂಜಾರಿ ಎಂಬುವರ ಮನೆಯ ಬಾವಿಗೆ ಚಿರತೆಯು ಅಯತಪ್ಪಿ ಬಿದ್ದಿದೆ.  ಇದನ್ನು ರಕ್ಷಿಸಲೆಂದು ಅರಣ್ಯಾಧಿಕಾರಿಗಳು ಮನೆಗೆ ಬಂದಿದ್ದರು. ಮೂಡುಬಿದಿರೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ್‍ ರವರ ನಿರ್ದೇಶನದಂತೆ, ಮೂಡುಬಿದಿರೆ ವಲಯ ಅರಣ್ಯಾಧಿಕಾರಿ ಕಿರಣ್ ಕುಮಾರ್ ಜಿ. ಮಾರ್ಗದರ್ಶನದಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ಕಾವ್ಯಾ ಆರ್., ರಾಘವೇಂದ್ರ ಶೆಟ್ಟಿ, ಬಸಪ್ಪ

ಬಾವಿಗೆ ಬಿದ್ದ ಚಿರತೆ | ಅರಣ್ಯಾಧಿಕಾರಿಗಳಿಂದ ರಕ್ಷಣೆ Read More »

ಹವಮಾನ ಇಲಾಖೆ ಮುನ್ಸೂಚನೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು, ನಾಳೆ ಎಲ್ಲೋ ಅಲರ್ಟ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳಿಗೆ ನಿನ್ನೆ ಸಂಜೆ ಸುರಿದ ಮಳೆಯಿಂದ ವಾತಾವರಣ ಕೊಂಚ ತಂಪಾಗಿದ್ದು, ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ ಪ್ರದೇಶಗಳಲ್ಲಿ ನಿನ್ನೆ ಗಾಳಿ ಸಹಿತ ಉತ್ತಮ ಮಳೆಯಾಗಿದೆ. ಜಿಲ್ಲೆಯಾದ್ಯಂತ ಬೆಳಗ್ಗೆಯಿಂದಲೇ ಮೋಡದಿಂದ ಕೂಡಿದ ವಾತಾವರಣ ಇತ್ತು.  ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಮುಂದಿನ ಎ.9 ಮತ್ತು 10 ರಂದು “ಎಲ್ಲೋ ಅಲರ್ಟ್” ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

ಹವಮಾನ ಇಲಾಖೆ ಮುನ್ಸೂಚನೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು, ನಾಳೆ ಎಲ್ಲೋ ಅಲರ್ಟ್ Read More »

ನಿಯೋಜಿತ ಎವಿಜಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ನಿ.) ಪುತ್ತೂರು ಇದರ ಕಚೇರಿಯ ಸಾಂಕೇತಿಕ ಆರಂಭ

ನಿಯೋಜಿತ ಎವಿಜಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ನಿ.) ಪುತ್ತೂರು ಇದರ ಕಚೇರಿಯ ಸಾಂಕೇತಿಕ ಪ್ರವೇಶ ಕಾರ್ಯಕ್ರಮವು ನೆಲ್ಲಿಕಟ್ಟೆಯ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ಪ್ರಧಾನ ಕಚೇರಿಯ ಪಕ್ಕದ ಕಟ್ಟಡದ ನೆಲಮಹಡಿಯ ಡೋರ್ ನಂಬರ್ 2-842/ ‘ಎ’ಯಲ್ಲಿ ನಡೆಯಿತು. ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಅಧ್ಯಕ್ಷರಾದ ಕಳುವಾಜೆ ವೆಂಕಟ್ರಮಣ ಗೌಡರು ದೀಪ ಪ್ರಜ್ವಲಿಸಿ ಉದ್ಘಾಟನೆಗೈದು ಸಂಸ್ಥೆಯ ಶ್ರೇಯಸ್ಸಿಗಾಗಿ ಪ್ರಾರ್ಥಿಸಿದರು. ಸಂಸ್ಥೆಯ ಮುಖ್ಯ ಪ್ರವರ್ತಕ ಎ. ವಿ. ನಾರಾಯಣ, ಪ್ರವರ್ತಕರುಗಳಾದ ಉಮೇಶ್ ಮಳುವೇಲು, ಸೀತಾರಾಮ ಕೇವಳ,

ನಿಯೋಜಿತ ಎವಿಜಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ನಿ.) ಪುತ್ತೂರು ಇದರ ಕಚೇರಿಯ ಸಾಂಕೇತಿಕ ಆರಂಭ Read More »

error: Content is protected !!
Scroll to Top