ದಕ್ಷಿಣ ಕನ್ನಡ

ಅಂಬುಲೆನ್ಸ್‌ ಡಿಕ್ಕಿಯಾಗಿ ರಿಕ್ಷಾ ಚಾಲಕ ಸಾವು

ಮೂಡುಬಿದಿರೆ : ಇಲ್ಲಿಗೆ ಸಮೀಪದ ಬನ್ನಡ್ಕ ಎಂಬಲ್ಲಿ ಅಂಬುಲೆನ್ಸ್ ಮತ್ತು ಆಟೋರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆಟೋ ಚಾಲಕ ಜಾನ್ ಕೊರೆಯಾ ಎಂಬವರು ಸ್ಥಳದಲ್ಲೇ ಮೃತಪಟ್ಟ ದುಘ೯ಟನೆ ಭಾನುವಾರ ನಡೆದಿದೆ. ಬನ್ನಡ್ಕ ಮಠದಲ್ಲಿ ನಡೆಯುತ್ತಿದ್ದ ಸಮಾರಂಭವೊಂದಕ್ಕೆ ಪ್ರಯಾಣಿಕರನ್ನು ಬಿಟ್ಟು ಆಟೋರಿಕ್ಷಾವನ್ನು ಹಿಂದಕ್ಕೆ (ರಿವರ್ಸ್) ತೆಗೆಯುತ್ತಿದ್ದ ಸಂದರ್ಭದಲ್ಲಿ, ಮೂಡುಬಿದಿರೆ ಕಡೆಯಿಂದ ಕಾರ್ಕಳಕ್ಕೆ ಅತಿವೇಗವಾಗಿ ತೆರಳುತ್ತಿದ್ದ ಅಂಬುಲೆನ್ಸ್ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಆಟೋ ರಿಕ್ಷಾದ ಮೇಲ್ಬಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅಂಬುಲೆನ್ಸ್‌ನ ಮುಂಭಾಗ ಕೂಡ ಜಖಂಗೊಂಡಿದೆ ಎಂದು ತಿಳಿದುಬಂದಿದೆ.

ಅಂಬುಲೆನ್ಸ್‌ ಡಿಕ್ಕಿಯಾಗಿ ರಿಕ್ಷಾ ಚಾಲಕ ಸಾವು Read More »

ಬಂಟ್ವಾಳ : ವಾಹನ ಸಹಿತ 42 ಲ.ರೂ. ಡ್ರಗ್ಸ್‌ ವಶ; ಇಬ್ಬರ ಬಂಧನ

ಬಂಟ್ವಾಳ: ಎಂ.ಡಿ.ಎಂ.ಎ ಮಾದಕವಸ್ತು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದು, ಅವರಿಂದ 42,30,000 ರೂ. ಮೌಲ್ಯದ 423 ಗ್ರಾಂ ಎಂ.ಡಿ.ಎಂ.ಎ ವಶಪಡಿಸಿಕೊಂಡಿದ್ದಾರೆ. ಮೇ 2ರಂದು ಸಂಜೆ ಪೊಲೀಸ್ ಉಪನಿರೀಕ್ಷಕ ಮಂಜುನಾಥ ಟಿ ಅವರಿಗೆ ಎಂ.ಡಿ.ಎಂ.ಎ ಸಾಗಾಟದ ಬಗ್ಗೆ ಖಚಿತ ಮಾಹಿತಿ ದೊರಕಿದ ಹಿನ್ನೆಲೆಯಲ್ಲಿ ಸಿಬ್ಬಂದಿಯೊಂದಿಗೆ ಮಂಚಿ ಗ್ರಾಮದ ಪಂಜಾಲ ಕ್ರಾಸ್ ಬಳಿ ತಪಾಸಣೆ ನಡೆಸಿದರು. ಈ ವೇಳೆ KA-20-Z-9585 ಸಂಖ್ಯೆಯ ಬೊಲೆರೋ ವಾಹನವನ್ನು ತಡೆದು ಪರಿಶೀಲಿಸಿ ಅದರಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರನ್ನು ವಿಚಾರಣೆಗೊಳಪಡಿಸಲಾಯಿತು. ಅವರು

ಬಂಟ್ವಾಳ : ವಾಹನ ಸಹಿತ 42 ಲ.ರೂ. ಡ್ರಗ್ಸ್‌ ವಶ; ಇಬ್ಬರ ಬಂಧನ Read More »

ಪುತ್ತೂರು, ಕಡಬ ತಾಲೂಕಿನಲ್ಲಿ ತಾಪಮಾನ ಇನ್ನಷ್ಟು ಏರಿಕೆ

ಈ ತಿಂಗಳ ಮಧ್ಯಭಾಗದವರೆಗೆ ಕರಾವಳಿಯಲ್ಲಿ ಬಿಸಿಲ ತಾಪ ಅಧಿಕ ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂಬರುವ ದಿನಗಳಲ್ಲಿ ತಾಪಮಾನ ಗಣನೀಯವಾಗಿ ಏರಿಕೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ. ನಿರ್ದಿಷ್ಟವಾಗಿ ಜಿಲ್ಲೆಯ ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ತಾಪಮಾನ ಹೆಚ್ಚಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ತನ್ನ ಮಾಸಿಕ ವರದಿಯಲ್ಲಿ ಮೇ ತಿಂಗಳಲ್ಲಿ ದೇಶದ ಹಲವು ಭಾಗಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಿರಲಿದೆ ಎಂದು ಈ ಹಿಂದೆಯೇ

ಪುತ್ತೂರು, ಕಡಬ ತಾಲೂಕಿನಲ್ಲಿ ತಾಪಮಾನ ಇನ್ನಷ್ಟು ಏರಿಕೆ Read More »

ಬಂಟ್ವಾಳ : 2.38 ಲಕ್ಷ ರೂ. ನಕಲಿ ನೋಟು ವಶ, ಇಬ್ಬರ ಬಂಧನ

ಬಂಟ್ವಾಳ: 2.38 ಲಕ್ಷ ರೂ. ಮುಖಬೆಲೆಯ ನಕಲಿ ನೋಟುಗಳನ್ನು ವಶಪಡಿಸಿಕೊಂಡಿರುವ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು ಮೊಹಮ್ಮದ್ ಸಮೀರ್ (28) ಮತ್ತು ಮೊಹಮ್ಮದ್ ಇರ್ಫಾನ್ (26) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಟ್ವಾಳ ತಾಲೂಕಿನಲ್ಲಿ ನಕಲಿ ನೋಟುಗಳ ಚಲಾವಣೆಯ ಬಗ್ಗೆ ದೊರೆತ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ನಡೆಸಿದ ಕಾರ್ಯಾಚರಣೆಯ ನಂತರ ಬಂಧಿಸಲಾಗಿದೆ. ಹೆಚ್ಚಿನ ಮೌಲ್ಯದ ನಕಲಿ ನೋಟುಗಳನ್ನು ಹೊಂದಿದ್ದ ಆರೋಪಿಗಳು ಚಲಾವಣೆ ಮಾಡಲು ಪ್ರಯತ್ನಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಕಾರ್ಯಾಚರಣೆ ವೇಳೆ ಮೂರು

ಬಂಟ್ವಾಳ : 2.38 ಲಕ್ಷ ರೂ. ನಕಲಿ ನೋಟು ವಶ, ಇಬ್ಬರ ಬಂಧನ Read More »

ದುಬೈಯಿಂದ ಗಂಡ ಪಾರ್ಸಲ್‌ ಕಳುಹಿಸಿದ ಕಥೆ ನಂಬಿ 6.84 ಲ.ರೂ. ಕಳೆದುಕೊಂಡ ಮಹಿಳೆ

ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡು ಮೋಸ ಮಂಗಳೂರು : ದುಬೈನಿಂದ ಪತಿ ಕಳುಹಿಸಿದ ಪಾರ್ಸೆಲ್ ಪಡೆಯಲು ಹಣ ನೀಡಬೇಕು ಎಂಬ ವಂಚಕರ ಮಾತು ನಂಬಿದ ಮಹಿಳೆಯೊಬ್ಬರು ಬರೋಬ್ಬರಿ 6,84,500 ರೂ. ವಂಚಕರಿಗೆ ನೀಡಿ ಮೋಸ ಹೋಗಿದ್ದಾರೆ. ಈ ಬಗ್ಗೆ ಹಣ ಕಳಕೊಂಡ ಮಹಿಳೆ ನೀಡಿದ ದೂರಿನಂತೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾನು ಮಂಗಳೂರಿನಲ್ಲಿ ವಾಸವಾಗಿದ್ದು ಪತಿ ದುಬೈನಲ್ಲಿ ಕೆಲಸ ಮಾಡುತ್ತಾರೆ. ಅಲ್ಲಿಂದ ತನಗೆ ಬೇಕಾಗುವ ವಸ್ತುಗಳನ್ನು ಪಾರ್ಸೆಲ್ ಮೂಲಕ ಕಳುಹಿಸುತ್ತಿದ್ದರು. ಏ.21ರಂದು ಸಂಜೆ ತಾನು

ದುಬೈಯಿಂದ ಗಂಡ ಪಾರ್ಸಲ್‌ ಕಳುಹಿಸಿದ ಕಥೆ ನಂಬಿ 6.84 ಲ.ರೂ. ಕಳೆದುಕೊಂಡ ಮಹಿಳೆ Read More »

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ 20 ವರ್ಷ ಜೈಲು

ಕೃತ್ಯ ನಡೆದ ಐದೇ ತಿಂಗಳಲ್ಲಿ ಪ್ರಕಟವಾದ ತೀರ್ಪು ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿ ದಯಾನಂದ ಮೂಲ್ಯ (44) ಎಂಬಾತನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿ ಎಸ್‌ಸಿ-2) ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರು 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 40 ಸಾವಿರ ರೂ. ದಂಡ ವಿಧಿಸಿದ್ದಾರೆ. ಕೃತ್ಯ ನಡೆದ ಐದೇ ತಿಂಗಳಲ್ಲಿ ತೀರ್ಪು ಪ್ರಕಟವಾಗಿರುವುದು ವಿಶೇಷವಾಗಿದೆ. 2025ರ ನ.16ರಂದು ಮಧ್ಯಾಹ್ನ 2ಕ್ಕೆ ಏಳು ವರ್ಷ ಪ್ರಾಯದ ಬಾಲಕಿ

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ 20 ವರ್ಷ ಜೈಲು Read More »

ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆ : ಮಟ್ಟಣ್ಣವರ್‌ ವಿರುದ್ಧ ಎಫ್‌ಐಆರ್‌

ಧರ್ಮಸ್ಥಳದ ಸಾಮೂಹಿಕ ವಿವಾಹ ಕಾರ್ಯಕ್ರಮದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಬೆಂಗಳೂರು: ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಾವೇರಿ ಎನ್ನುವವರು ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಯೂಟ್ಯೂಬ್ ಚಾನೆಲ್ ಮೂಲಕ ಧರ್ಮಸ್ಥಳ ಹಾಗೂ ಕ್ಷೇತ್ರದಲ್ಲಿ ಮದುವೆಯಾದ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಧಾರ್ಮಿಕ ಭಾವನೆಗಳು ಹಾಗೂ ಮಹಿಳೆಯರ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. 2023,

ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆ : ಮಟ್ಟಣ್ಣವರ್‌ ವಿರುದ್ಧ ಎಫ್‌ಐಆರ್‌ Read More »

ಮಹಿಳೆಯ ಹತ್ಯಾ ಯತ್ನ : ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಮಹಿಳೆಯನ್ನು ಸೂಟ್‌ಕೇಸ್‌ನಲ್ಲಿ ತುಂಬಿಸಿ ಸಾಗಿಸಲೆತ್ನಿಸಿದ್ದ ಅಪರಾಧಿಗಳು ಉಡುಪಿ : ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ ಮಹಿಳೆಯೊಬ್ಬರನ್ನು ಉಸಿರುಗಟ್ಟಿಸಿ ಕೊಲೆ ಮಾಡಲು ಪ್ರಯತ್ನಿಸಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಬೆಳ್ತಂಗಡಿ ನಿವಾಸಿಗಳಾದ ಮಿಥುನ್ ಹಾಗೂ ನಾಗೇಶ್ ಪೂಜಾರಿ ಜೀವಾವಧಿ ಶಿಕ್ಷೆಗೆ ಗುರಿಯಾದ ಆರೋಪಿಗಳು. ಮಂಚಿಕುಮೇರಿ ನಿವಾಸಿ ರಮಾನಾಥ ರೈ ಮಣಿಪಾಲದ ಟೈಗರ್ ಸರ್ಕಲ್ ಬಳಿ ನಂದಿನಿ ಮಿಲ್ಕ್ ಪಾರ್ಲರ್ ನಡೆಸುತ್ತಿದ್ದು, 2022ರ ಫೆ.18ರಂದು ಅವರ ಪತ್ನಿ ಸುಮತಿ ಮನೆಯಲ್ಲಿ ಒಬ್ಬರೇ ಇದ್ದಾಗ ಸಂಜೆ 7

ಮಹಿಳೆಯ ಹತ್ಯಾ ಯತ್ನ : ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ Read More »

ಉಪ್ಪಿನಂಗಡಿ-ಗುರುವಾಯನಕೆರೆ ಹೆದ್ದಾರಿ ಅಭಿವೃದ್ಧಿಗೆ ಅನುಮೋದನೆ

13 ಕೋ. ರೂ. ಅಂದಾಜುಪಟ್ಟಿಗೆ ಸಚಿ ಸಂಪುಟ ಅನುಮೋದನೆ ಮಂಗಳೂರು: ಗುರುವಾಯನಕೆರೆಯಿಂದ ಉಪ್ಪಿನಂಗಡಿವರೆಗಿನ ರಾಜ್ಯ ಹೆದ್ದಾರಿ ಅಭಿವೃದ್ಧಿಪಡಿಸಲು 13 ಕೋಟಿ ರೂ. ಅಂದಾಜುಪಟ್ಟಿಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಅನುಮೋದನೆ ನೀಡಲಾಗಿದೆ. ಗುರುವಾಯನಕೆರೆಯಿಂದ ಉಪ್ಪಿನಂಗಡಿವರೆಗಿನ ರಾಜ್ಯ ಹೆದ್ದಾರಿಯು ಗುಡ್ಡ, ಇಳಿಜಾರು ಮತ್ತು ತಿರುವ ಹೊಂದಿರುವ ರಸ್ತೆಯಾಗಿದೆ. ಬೆಂಗಳೂರು ಹಾಗೂ ಜಿಲ್ಲಾ ಕೇಂದ್ರಕ್ಕೆ ಹಾಗೂ ಧರ್ಮಸ್ಥಳ, ವೇಣೂರು, ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಾಲಯ, ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಗಳಿಗೆ ಸಂಪರ್ಕ

ಉಪ್ಪಿನಂಗಡಿ-ಗುರುವಾಯನಕೆರೆ ಹೆದ್ದಾರಿ ಅಭಿವೃದ್ಧಿಗೆ ಅನುಮೋದನೆ Read More »

ಇಲಿ ಪಾಷಾಣ ಸೇವಿಸಿದ್ದ ಯುವತಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಪ್ರೀತಿಸಿದ ಯುವಕನ ಜೊತೆ ಮದುವೆಯಾಗಲು ಮನೆಯವರು ಅನುಮತಿ ನೀಡಲಿಕ್ಕಿಲ್ಲ ಎಂದು ಭಾವಿಸಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಾಯದ ಬಾಳೆಮಂಡಿಕಲ್ಲು ನಿವಾಸಿ ದಿನೇಶ್ ನಾಯ್ಕ್ ಮತ್ತು ರೇವತಿ ದಂಪತಿ ಎರಡನೇ ಪುತ್ರಿ ರಮಾ (19) ಎಂಬಾಕೆ ಕಳೆದ ಏ.19ರಂದು ರಾತ್ರಿ ಮನೆಯಲ್ಲಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಬಳಿಕ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು,

ಇಲಿ ಪಾಷಾಣ ಸೇವಿಸಿದ್ದ ಯುವತಿ ಚಿಕಿತ್ಸೆ ಫಲಿಸದೆ ಸಾವು Read More »

error: Content is protected !!
Scroll to Top