ದಕ್ಷಿಣ ಕನ್ನಡ

ಆನ್‌ಲೈನ್‌ ಮೂವಿ ಟಿಕೆಟ್‌ ರೇಟಿಂಗ್‌ ಕೆಲಸದ ಕುರಿತು 1.14 ಲಕ್ಷ ರೂ. ವಂಚನೆ – ದೂರು ದಾಖಲು

ಮಂಗಳೂರು : ಪಾರ್ಟ್‌ಟೈಂ ಕೆಲಸದ ಕುರಿತು ಟೆಲಿಗ್ರಾಂ ಖಾತೆಯಲ್ಲಿ ಬಂದ ಸಂದೇಶವನ್ನು ನಂಬಿ ವ್ಯಕ್ತಿಯೊಬ್ಬರು 1,14,901 ರೂ. ಮೋಸ ಹೋಗಿರುವ ಕುರಿತು ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಫಲ್ಗುಣಿ ಎಂಬ ಹೆಸರಿನಿಂದ ಪಾರ್ಟ್‌ ಟೈಂ ಕೆಲಸದ ಬಗ್ಗೆ ಸಂದೇಶ ಬಂದಿದ್ದು, ಈ ಕುರಿತು ವಿಚಾರಿಸಿದಾಗ, ಆನ್‌ಲೈನ್‌ ಮೂವಿ ಟಿಕೆಟ್‌ ರೇಟಿಂಗ್‌ ಉದ್ಯೋಗ ಎಂದು ತಿಳಿಸಿದ್ದಾರೆ. ಇನ್ನು ಲಿಂಕ್‌ ಕಳುಹಿಸಿ ಆ್ಯಪ್‌ ಇನ್‌ಸ್ಟಾಲ್‌ ಮಾಡಿ ಖಾತೆ ತೆರೆದು ಅದರಲ್ಲಿ ಪ್ರಸಾರವಾಗುವ ವೀಡಿಯೋ ನೋಡಿ ರೇಟಿಂಗ್‌ ಹಾಕಿ ಕಮೀಷನ್‌ ಹಣ […]

ಆನ್‌ಲೈನ್‌ ಮೂವಿ ಟಿಕೆಟ್‌ ರೇಟಿಂಗ್‌ ಕೆಲಸದ ಕುರಿತು 1.14 ಲಕ್ಷ ರೂ. ವಂಚನೆ – ದೂರು ದಾಖಲು Read More »

ಪುಟ್ಟ ಬಾಲಕನ ಚಿಕಿತ್ಸೆಗೆ ನೇರವಾದ ವಿಶ್ವಹಿಂದೂ ಪರಿಷದ್, ಭಜರಂಗದಳ

ಬಂಟ್ವಾಳ: ಕಂಬ್ಳ ಪೋಡಿಕಲ ಹನುಮಾನ್ ನಗರ ಶ್ರೀ ರಾಮ ಭಕ್ತ ಆಂಜನೇಯ ಟ್ರಸ್ಟ್ ಸದಸ್ಯರು  ಒಟ್ಟು ಸೇರಿ ವಿಶ್ವಹಿಂದೂ ಪರಿಷದ್, ಭಜರಂಗದಳ ಹನುಮಾನ್ ಶಾಖೆ ನೇತೃತ್ವದಲ್ಲಿ ಕಾರಣಿಕ ಕ್ಷೇತ್ರ ಪೊಳಲಿ ರಾಜರಾಜೇಶ್ವರಿ ದೇವಿಯ ಜಾತ್ರೋತ್ಸವದ ಸಂದರ್ಭದಲ್ಲಿ ಭವತಿ ಬಿಕ್ಷಾಂದೇಹಿ ಸಹಾಯ ಯೋಜನೆಯ0ತೆ ಪುಟ್ಟ ಬಾಲಕನಿಗೆ ಧನ ಸಹಾಯ ಮಾಡಿದರು. ಮಂಗಳೂರು ತಾಲೂಕಿನ ಕುಪ್ಪೆಪದವು ಸಮೀಪದ ಕೊಳವೂರು ಗ್ರಾಮದ ಜಯಶೀಲಾ ಸದಾಶಿವ ಆಚಾರ್ಯ ದಂಪತಿ 2ವರ್ಷ 3ತಿಂಗಳ ಶಮಿತ್  ಎಂಬ ಮಗುವಿಗೆ ಹುಟ್ಟುವಾಗಲೇ ಮಲ ವಿಸರ್ಜನೆ ಮಾಡುವ ಅಂಗವಿರಲಿಲ್ಲ

ಪುಟ್ಟ ಬಾಲಕನ ಚಿಕಿತ್ಸೆಗೆ ನೇರವಾದ ವಿಶ್ವಹಿಂದೂ ಪರಿಷದ್, ಭಜರಂಗದಳ Read More »

ಕ್ರಿಮಿನಾಶಕ ಸೇವಿಸಿ ವ್ಯಕ್ತಿ ಸಾವು

ಸುಳ್ಯ : ಕ್ರಿಮಿನಾಶಕ ಸೇವಿಸಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸಂಪಾಜೆ ಗ್ರಾಮದ ಗೂನಡ್ಕ ಎಂಬಲ್ಲಿ ಏ.13 ರಂದು ಸಂಭವಿಸಿದೆ. ವಸಂತ್‌ ಕುಮಾರ್‌ ಎಂಬವರೇ ಮೃತಪಟ್ಟ ವ್ಯಕ್ತಿ. ಮದ್ಯಪಾನ ದುಶ್ಚಟ ಹೊಂದಿದ್ದ ಇವರು ಏ.13 ರಂದು ಕ್ರಿಮಿನಾಶಕ ಸೇವಿಸಿದ್ದು, ಚಿಕಿತ್ಸೆಗಾಗಿ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್‌ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಅವರು ಆಸ್ಪತ್ರೆಯಲ್ಲೇ ಮೃತಪಟ್ಟಿರುತ್ತಾರೆ. ಈ ಕುರಿತು ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕ್ರಿಮಿನಾಶಕ ಸೇವಿಸಿ ವ್ಯಕ್ತಿ ಸಾವು Read More »

ಕುಂದಾಪುರ ಶಾಸಕ ಹಾಲಾಡಿಯವರಿಂದ ಆಶೀರ್ವಾದ ಪಡೆದ ಬೈಂದೂರು ಶಾಸಕ ಗಂಟಿಹೊಳೆ

ಉಡುಪಿ : ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಪ್ರಚಾರ ಕಾರ್ಯಗಳನ್ನು ಚುರುಕುಗೊಳಿಸುತ್ತಿವೆ. ಸಭೆ-ಸಮಾರಂಭಗಳನ್ನು ಏರ್ಪಡಿಸುವುದು, ರಾಜಕೀಯ ಮುಖಂಡರನ್ನು ಭೇಟಿ ಮಾಡಿ ಸಹಕಾರ ಕೋರುತ್ತಿದ್ದಾರೆ. ಈಗ ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಮನೆಗೆ ಭೇಟಿ ನೀಡಿ ಆಶೀರ್ವಾದ ಕೋರಿದ್ದಾರೆ. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಸುಕಮಾರ ಶೆಟ್ಟಿ ಬದಲಾಗಿ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಗುರುರಾಜ್ ಗಂಟಿಹೊಳೆ ಅವರು ಈಗ ಹಿರಿಯ ನಾಯಕರನ್ನು ಭೇಟಿ ಮಾಡಿ ಆಶೀರ್ವಾದ

ಕುಂದಾಪುರ ಶಾಸಕ ಹಾಲಾಡಿಯವರಿಂದ ಆಶೀರ್ವಾದ ಪಡೆದ ಬೈಂದೂರು ಶಾಸಕ ಗಂಟಿಹೊಳೆ Read More »

ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ಸ್‌ ಮಧ್ಯೆ ಭೀಕರ ಅಪಘಾತ : 6 ಮಂದಿ ಸಾವು

ಸಂಪಾಜೆ : ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ಸ್‌ ನಡುವೆ ಭೀಕರ ಅಪಘಾತವು ಮಾಣಿ-ಮೈಸೂರು ರಾ.ಹೆದ್ದಾರಿಯ ಸಂಪಾಜೆ ಎಂಬಲ್ಲಿ ಸಂಭವಿಸಿದೆ. ರಾಜ್ಯ ರಸ್ತೆ ಸಾರಿಗೆ ಬಸ್ಸು ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಮಕ್ಕಳು, ಇಬ್ಬರು ಮಹಿಳೆಯರು, ಓರ್ವ ಗಂಡಸು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.ಸುಳ್ಯದಿಂದ ವಿರಾಜಪೇಟೆಗೆ ತೆರಳುತ್ತಿದ್ದ ಬಸ್ ಹಾಗೂ ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಆರು ಜನ ಸಾವನ್ನಪ್ಪಿದ್ದು, ಮೃತದೇಹವನ್ನು ಸುಳ್ಯದ ಖಾಸಗಿ ಆಸ್ಪತ್ರೆ

ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ಸ್‌ ಮಧ್ಯೆ ಭೀಕರ ಅಪಘಾತ : 6 ಮಂದಿ ಸಾವು Read More »

ರಾಜಕೀಯ ನಿವೃತ್ತಿ ಘೋಷಣೆಯಿಂದ ಹಿಂದೆ ಸರಿದ ಅಂಗಾರ

ಸುಳ್ಯ : ಬಿಜೆಪಿ ಅಭ್ಯರ್ಥಿ ಘೋಷಣೆ ವೇಳೆ ಅಭ್ಯರ್ಥಿ ಸ್ಥಾನ ಸಿಗದ ನೋವಿನಿಂದ ಅಂದಿನ ದಿನದ ರಾಜಕೀಯ ನಿವೃತ್ತಿ ಹೇಳಿಕೆ ನೀಡಿದ್ದೇನೆ. ಆದರೆ ಬಳಿಕ ನನ್ನ ನಿರ್ಧಾರ ಬದಲಾಯಿಸಿದ್ದೇನೆ. ಮುಂದೆಯೂ ಬಿಜೆಪಿ ಪಕ್ಷದಲ್ಲಿದ್ದುಕೊಂಡು ಪಕ್ಷದ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಗೆಲುವಿಗೆ ಸಂಪೂರ್ಣವಾಗಿ ತೊಡಗಿಕೊಂಡು ಪೂರಕ ಕೆಲಸ ಮಾಡುತ್ತೇನೆ ಎಂದು ಸಚಿವ ಎಸ್.ಅಂಗಾರ ತಿಳಿಸಿದರು. ಅವರು ಎ.14 ರಂದು ಸುಳ್ಯ ಪ್ರೆಸ್‌ ಕ್ಲಬ್‌ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ಬಗ್ಗೆ ಹೇಳಿಕೆ ನೀಡಿದರು. ನಾನೆಂದೂ ಟಿಕೆಟ್ ಕೊಡಿ

ರಾಜಕೀಯ ನಿವೃತ್ತಿ ಘೋಷಣೆಯಿಂದ ಹಿಂದೆ ಸರಿದ ಅಂಗಾರ Read More »

ಸುಳ್ಯ ವಿಧಾನಸಭಾ ಕ್ಷೇತ್ರ : ನಂದಕುಮಾರ್ ಮತ್ತು ಕೃಷ್ಣಪ್ಪ ಬಣಗಳ ಸಭೆ ಕರೆದ ಡಿ.ಕೆ.ಶಿ

ಸುಳ್ಯ : ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯಲ್ಲಿ ಉಂಟಾಗಿರುವ ಬಿಕ್ಕಟ್ಟು ಪರಿಹರಿಸುವ ನಿಟ್ಟಿನಲ್ಲಿ ಎ. 14 ರ ಸಂಜೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಭೆ ಕರೆಯಲಾಗಿದೆ. ಈಗಾಗಲೇ ಸುಳ್ಯದಲ್ಲಿ ಜಿ. ಕೃಷ್ಣಪ್ಪ ಅವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದ್ದು, ಇದರಿಂದ ನಂದಕುಮಾರ್ ಅಭಿಮಾನಿಗಳಾದ ಕಾಂಗ್ರೆಸ್ ಕಾರ್ಯಕರ್ತರು ಸಿಡಿದೆದ್ದಿದ್ದಾರೆ. ಅಲ್ಲದೇ ನಂದಕುಮಾರ್ ಅವರನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸುವ ಸಿದ್ಧತೆ ಕೂಡ ನಡೆಸಿದ್ದಾರೆ.‌ ಕಾಂಗ್ರೆಸ್ ಬಿಫಾರಂ ನೀಡಬೇಕು ಇಲ್ಲದಿದ್ದರೆ ಪಕ್ಷೇತರರಾಗಿ‌ ಸ್ಪರ್ಧೆ

ಸುಳ್ಯ ವಿಧಾನಸಭಾ ಕ್ಷೇತ್ರ : ನಂದಕುಮಾರ್ ಮತ್ತು ಕೃಷ್ಣಪ್ಪ ಬಣಗಳ ಸಭೆ ಕರೆದ ಡಿ.ಕೆ.ಶಿ Read More »

ಬೇಸಗೆಯಲ್ಲಿ ಸಂಪೂರ್ಣ ಬತ್ತಿ ಹೋದ ಬಿಸಿ ನೀರ ಚಿಲುಮೆ

ಉಪ್ಪಿನಂಗಡಿ : ಕರಾವಳಿ ಜಲ್ಲೆಗಳಲ್ಲಿ ಬಿಸಿಲ ಧಗೆ ದಿನದಿಂದ ದಿನಕ್ಕೆ ಏರುತ್ತಿದ್ದು, ರಣಬಿಸಿಲಿನಿಂದ ಜನತೆ ಹೈರಾಣಾಗಿದ್ದಾರೆ. ನದಿ ಕೆರೆಗಳು ಬತ್ತಿ ಹೋಗುತ್ತಿದ್ದು, ಪ್ರಾಣಿ ಪಕ್ಷಿಗಳು ನೀರಿಗಾಗಿ ಪರಿತಪಿಸುವಂತಾಗಿದೆ. ಈ ಬಾರಿಯ ಬಿಸಿಲಿನ ಬೇಗೆಗೆ ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮದಲ್ಲಿರುವ ಬಿಸಿ ನೀರ ಚಿಲುಮೆಯು ಸಂಪೂರ್ಣ ಬತ್ತಿ ಹೋಗಿದ್ದು, ನೀರಿನ ಅಂಶವೇ ಇಲ್ಲದಂತೆ ಒಣಗಿ ಹೋಗಿದೆ. ಸರಿ ಸುಮಾರು 36.6 ಡಿಗ್ರಿ ಉಷ್ಣಾಂಶವನ್ನು ಹೊಂದಿದ್ದ ಇಲ್ಲಿನ ಬಿಸಿ ನೀರ ಚಿಲುಮೆಯು ಚರ್ಮರೋಗ ನಿವಾರಕ ಗುಣವನ್ನು ಹೊಂದಿದ್ದು, ಇಲ್ಲಿ ಸ್ನಾನ

ಬೇಸಗೆಯಲ್ಲಿ ಸಂಪೂರ್ಣ ಬತ್ತಿ ಹೋದ ಬಿಸಿ ನೀರ ಚಿಲುಮೆ Read More »

ಕಾಲೇಜು ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯ ಸೆರೆ

ಯುವಕನ ವಿರುದ್ಧ ಪೋಕ್ಸೊ ಅಡಿ ಪ್ರಕರಣ ದಾಖಲು ಬೆಳ್ತಂಗಡಿ : ಕಾಲೇಜು ವಿದ್ಯಾರ್ಥಿನಿ ಜತೆ ಲೈಂಗಿಕ ಸಂಬಂಧ ಬೆಳೆಸಿ ಆಕೆಯನ್ನು ಗರ್ಭ ಧರಿಸುವಂತೆ ಮಾಡಿದ್ದ ನಾರಾವಿಯ ಮಂಜುನಗರದ ಸಂದೇಶ್‌ (23) ಎಂಬ ಯುವಕನನ್ನು ಪೋಕ್ಸೊ ಕಾಯಿದೆಯಡಿ ಬಂಧಿಸಲಾಗಿದೆ.ದ್ವಿತೀಯ ಪಿಯುಸಿ ಕಲಿಯುತ್ತಿದ್ದ ವಿದ್ಯಾರ್ಥಿನಿಯ ಸ್ನೇಹ ಬೆಳೆಸಿ ಬುಟ್ಟಿಗೆ ಹಾಕಿಕೊಂಡಿದ್ದ ಆರೋಪಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಹೋಗಿ ಮದುವೆಯಾಗುವ ಭರವಸೆ ನೀಡಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಯುವತಿಯ ಆರೋಗ್ಯದಲ್ಲಿ ವ್ಯತ್ಯಾಸವಾದಾಗ ಪೋಷಕರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.

ಕಾಲೇಜು ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯ ಸೆರೆ Read More »

ರೇಶನ್ ಮಾಫಿಯಾ : ಗೋಣಿ ಚೀಲ ಬದಲಿಸಿ ಅಕ್ರಮ ಪಡಿತರ ಅಕ್ಕಿ ಸಾಗಾಟ

ವಿಟ್ಲ : ಗೋಣಿ ಚೀಲ ಬದಲಿಸಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು‌ ಜೀತೋ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಉಕ್ಕುಡ ಸಮೀಪ ವಿಟ್ಲ ಪೋಲಿಸರು ಬಂಧಿಸಿದ್ದು, ವಾಹನ ಸಹಿತ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ.ಬಂಧಿತನಾಗಿರುವ ವಾಹನದ ಚಾಲಕ ಕುದ್ದುಪದವು ಸುರುಳಿಮೂಲೆ ನಿವಾಸಿ ಅಲಿ ಎಂಬಾತನ ವಿಚಾರಣೆ ವೇಳೆ ಪಡಿತರ ಅಕ್ಕಿಯ ಮಾಫಿಯಾ ದಂಧೆ ಬಯಲಾಗಿದೆ.ಆರೋಪಿಯನ್ನು ವಿಚಾರಣೆ ನಡೆಸಿ ಆ ಬಳಿಕ ಅಕ್ರಮ ಪಡಿತರ ಅಕ್ಕಿ ದಾಸ್ತಾನು ಅಡ್ಡೆಗೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದಾರೆ. ಅಡ್ಯನಡ್ಕ ಸಮೀಪದ ಮರಕ್ಕಿಣಿ ನಿವಾಸಿ JSW

ರೇಶನ್ ಮಾಫಿಯಾ : ಗೋಣಿ ಚೀಲ ಬದಲಿಸಿ ಅಕ್ರಮ ಪಡಿತರ ಅಕ್ಕಿ ಸಾಗಾಟ Read More »

error: Content is protected !!
Scroll to Top