ದಕ್ಷಿಣ ಕನ್ನಡ

ಕ್ರಿಮಿನಾಶಕ ಸೇವಿಸಿ ವ್ಯಕ್ತಿ ಸಾವು

ಸುಳ್ಯ : ಕ್ರಿಮಿನಾಶಕ ಸೇವಿಸಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸಂಪಾಜೆ ಗ್ರಾಮದ ಗೂನಡ್ಕ ಎಂಬಲ್ಲಿ ಏ.13 ರಂದು ಸಂಭವಿಸಿದೆ. ವಸಂತ್‌ ಕುಮಾರ್‌ ಎಂಬವರೇ ಮೃತಪಟ್ಟ ವ್ಯಕ್ತಿ. ಮದ್ಯಪಾನ ದುಶ್ಚಟ ಹೊಂದಿದ್ದ ಇವರು ಏ.13 ರಂದು ಕ್ರಿಮಿನಾಶಕ ಸೇವಿಸಿದ್ದು, ಚಿಕಿತ್ಸೆಗಾಗಿ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್‌ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಅವರು ಆಸ್ಪತ್ರೆಯಲ್ಲೇ ಮೃತಪಟ್ಟಿರುತ್ತಾರೆ. ಈ ಕುರಿತು ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕ್ರಿಮಿನಾಶಕ ಸೇವಿಸಿ ವ್ಯಕ್ತಿ ಸಾವು Read More »

ಕುಂದಾಪುರ ಶಾಸಕ ಹಾಲಾಡಿಯವರಿಂದ ಆಶೀರ್ವಾದ ಪಡೆದ ಬೈಂದೂರು ಶಾಸಕ ಗಂಟಿಹೊಳೆ

ಉಡುಪಿ : ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಪ್ರಚಾರ ಕಾರ್ಯಗಳನ್ನು ಚುರುಕುಗೊಳಿಸುತ್ತಿವೆ. ಸಭೆ-ಸಮಾರಂಭಗಳನ್ನು ಏರ್ಪಡಿಸುವುದು, ರಾಜಕೀಯ ಮುಖಂಡರನ್ನು ಭೇಟಿ ಮಾಡಿ ಸಹಕಾರ ಕೋರುತ್ತಿದ್ದಾರೆ. ಈಗ ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಮನೆಗೆ ಭೇಟಿ ನೀಡಿ ಆಶೀರ್ವಾದ ಕೋರಿದ್ದಾರೆ. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಸುಕಮಾರ ಶೆಟ್ಟಿ ಬದಲಾಗಿ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಗುರುರಾಜ್ ಗಂಟಿಹೊಳೆ ಅವರು ಈಗ ಹಿರಿಯ ನಾಯಕರನ್ನು ಭೇಟಿ ಮಾಡಿ ಆಶೀರ್ವಾದ

ಕುಂದಾಪುರ ಶಾಸಕ ಹಾಲಾಡಿಯವರಿಂದ ಆಶೀರ್ವಾದ ಪಡೆದ ಬೈಂದೂರು ಶಾಸಕ ಗಂಟಿಹೊಳೆ Read More »

ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ಸ್‌ ಮಧ್ಯೆ ಭೀಕರ ಅಪಘಾತ : 6 ಮಂದಿ ಸಾವು

ಸಂಪಾಜೆ : ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ಸ್‌ ನಡುವೆ ಭೀಕರ ಅಪಘಾತವು ಮಾಣಿ-ಮೈಸೂರು ರಾ.ಹೆದ್ದಾರಿಯ ಸಂಪಾಜೆ ಎಂಬಲ್ಲಿ ಸಂಭವಿಸಿದೆ. ರಾಜ್ಯ ರಸ್ತೆ ಸಾರಿಗೆ ಬಸ್ಸು ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಮಕ್ಕಳು, ಇಬ್ಬರು ಮಹಿಳೆಯರು, ಓರ್ವ ಗಂಡಸು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.ಸುಳ್ಯದಿಂದ ವಿರಾಜಪೇಟೆಗೆ ತೆರಳುತ್ತಿದ್ದ ಬಸ್ ಹಾಗೂ ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಆರು ಜನ ಸಾವನ್ನಪ್ಪಿದ್ದು, ಮೃತದೇಹವನ್ನು ಸುಳ್ಯದ ಖಾಸಗಿ ಆಸ್ಪತ್ರೆ

ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ಸ್‌ ಮಧ್ಯೆ ಭೀಕರ ಅಪಘಾತ : 6 ಮಂದಿ ಸಾವು Read More »

ರಾಜಕೀಯ ನಿವೃತ್ತಿ ಘೋಷಣೆಯಿಂದ ಹಿಂದೆ ಸರಿದ ಅಂಗಾರ

ಸುಳ್ಯ : ಬಿಜೆಪಿ ಅಭ್ಯರ್ಥಿ ಘೋಷಣೆ ವೇಳೆ ಅಭ್ಯರ್ಥಿ ಸ್ಥಾನ ಸಿಗದ ನೋವಿನಿಂದ ಅಂದಿನ ದಿನದ ರಾಜಕೀಯ ನಿವೃತ್ತಿ ಹೇಳಿಕೆ ನೀಡಿದ್ದೇನೆ. ಆದರೆ ಬಳಿಕ ನನ್ನ ನಿರ್ಧಾರ ಬದಲಾಯಿಸಿದ್ದೇನೆ. ಮುಂದೆಯೂ ಬಿಜೆಪಿ ಪಕ್ಷದಲ್ಲಿದ್ದುಕೊಂಡು ಪಕ್ಷದ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಗೆಲುವಿಗೆ ಸಂಪೂರ್ಣವಾಗಿ ತೊಡಗಿಕೊಂಡು ಪೂರಕ ಕೆಲಸ ಮಾಡುತ್ತೇನೆ ಎಂದು ಸಚಿವ ಎಸ್.ಅಂಗಾರ ತಿಳಿಸಿದರು. ಅವರು ಎ.14 ರಂದು ಸುಳ್ಯ ಪ್ರೆಸ್‌ ಕ್ಲಬ್‌ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ಬಗ್ಗೆ ಹೇಳಿಕೆ ನೀಡಿದರು. ನಾನೆಂದೂ ಟಿಕೆಟ್ ಕೊಡಿ

ರಾಜಕೀಯ ನಿವೃತ್ತಿ ಘೋಷಣೆಯಿಂದ ಹಿಂದೆ ಸರಿದ ಅಂಗಾರ Read More »

ಸುಳ್ಯ ವಿಧಾನಸಭಾ ಕ್ಷೇತ್ರ : ನಂದಕುಮಾರ್ ಮತ್ತು ಕೃಷ್ಣಪ್ಪ ಬಣಗಳ ಸಭೆ ಕರೆದ ಡಿ.ಕೆ.ಶಿ

ಸುಳ್ಯ : ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯಲ್ಲಿ ಉಂಟಾಗಿರುವ ಬಿಕ್ಕಟ್ಟು ಪರಿಹರಿಸುವ ನಿಟ್ಟಿನಲ್ಲಿ ಎ. 14 ರ ಸಂಜೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಭೆ ಕರೆಯಲಾಗಿದೆ. ಈಗಾಗಲೇ ಸುಳ್ಯದಲ್ಲಿ ಜಿ. ಕೃಷ್ಣಪ್ಪ ಅವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದ್ದು, ಇದರಿಂದ ನಂದಕುಮಾರ್ ಅಭಿಮಾನಿಗಳಾದ ಕಾಂಗ್ರೆಸ್ ಕಾರ್ಯಕರ್ತರು ಸಿಡಿದೆದ್ದಿದ್ದಾರೆ. ಅಲ್ಲದೇ ನಂದಕುಮಾರ್ ಅವರನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸುವ ಸಿದ್ಧತೆ ಕೂಡ ನಡೆಸಿದ್ದಾರೆ.‌ ಕಾಂಗ್ರೆಸ್ ಬಿಫಾರಂ ನೀಡಬೇಕು ಇಲ್ಲದಿದ್ದರೆ ಪಕ್ಷೇತರರಾಗಿ‌ ಸ್ಪರ್ಧೆ

ಸುಳ್ಯ ವಿಧಾನಸಭಾ ಕ್ಷೇತ್ರ : ನಂದಕುಮಾರ್ ಮತ್ತು ಕೃಷ್ಣಪ್ಪ ಬಣಗಳ ಸಭೆ ಕರೆದ ಡಿ.ಕೆ.ಶಿ Read More »

ಬೇಸಗೆಯಲ್ಲಿ ಸಂಪೂರ್ಣ ಬತ್ತಿ ಹೋದ ಬಿಸಿ ನೀರ ಚಿಲುಮೆ

ಉಪ್ಪಿನಂಗಡಿ : ಕರಾವಳಿ ಜಲ್ಲೆಗಳಲ್ಲಿ ಬಿಸಿಲ ಧಗೆ ದಿನದಿಂದ ದಿನಕ್ಕೆ ಏರುತ್ತಿದ್ದು, ರಣಬಿಸಿಲಿನಿಂದ ಜನತೆ ಹೈರಾಣಾಗಿದ್ದಾರೆ. ನದಿ ಕೆರೆಗಳು ಬತ್ತಿ ಹೋಗುತ್ತಿದ್ದು, ಪ್ರಾಣಿ ಪಕ್ಷಿಗಳು ನೀರಿಗಾಗಿ ಪರಿತಪಿಸುವಂತಾಗಿದೆ. ಈ ಬಾರಿಯ ಬಿಸಿಲಿನ ಬೇಗೆಗೆ ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮದಲ್ಲಿರುವ ಬಿಸಿ ನೀರ ಚಿಲುಮೆಯು ಸಂಪೂರ್ಣ ಬತ್ತಿ ಹೋಗಿದ್ದು, ನೀರಿನ ಅಂಶವೇ ಇಲ್ಲದಂತೆ ಒಣಗಿ ಹೋಗಿದೆ. ಸರಿ ಸುಮಾರು 36.6 ಡಿಗ್ರಿ ಉಷ್ಣಾಂಶವನ್ನು ಹೊಂದಿದ್ದ ಇಲ್ಲಿನ ಬಿಸಿ ನೀರ ಚಿಲುಮೆಯು ಚರ್ಮರೋಗ ನಿವಾರಕ ಗುಣವನ್ನು ಹೊಂದಿದ್ದು, ಇಲ್ಲಿ ಸ್ನಾನ

ಬೇಸಗೆಯಲ್ಲಿ ಸಂಪೂರ್ಣ ಬತ್ತಿ ಹೋದ ಬಿಸಿ ನೀರ ಚಿಲುಮೆ Read More »

ಕಾಲೇಜು ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯ ಸೆರೆ

ಯುವಕನ ವಿರುದ್ಧ ಪೋಕ್ಸೊ ಅಡಿ ಪ್ರಕರಣ ದಾಖಲು ಬೆಳ್ತಂಗಡಿ : ಕಾಲೇಜು ವಿದ್ಯಾರ್ಥಿನಿ ಜತೆ ಲೈಂಗಿಕ ಸಂಬಂಧ ಬೆಳೆಸಿ ಆಕೆಯನ್ನು ಗರ್ಭ ಧರಿಸುವಂತೆ ಮಾಡಿದ್ದ ನಾರಾವಿಯ ಮಂಜುನಗರದ ಸಂದೇಶ್‌ (23) ಎಂಬ ಯುವಕನನ್ನು ಪೋಕ್ಸೊ ಕಾಯಿದೆಯಡಿ ಬಂಧಿಸಲಾಗಿದೆ.ದ್ವಿತೀಯ ಪಿಯುಸಿ ಕಲಿಯುತ್ತಿದ್ದ ವಿದ್ಯಾರ್ಥಿನಿಯ ಸ್ನೇಹ ಬೆಳೆಸಿ ಬುಟ್ಟಿಗೆ ಹಾಕಿಕೊಂಡಿದ್ದ ಆರೋಪಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಹೋಗಿ ಮದುವೆಯಾಗುವ ಭರವಸೆ ನೀಡಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಯುವತಿಯ ಆರೋಗ್ಯದಲ್ಲಿ ವ್ಯತ್ಯಾಸವಾದಾಗ ಪೋಷಕರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.

ಕಾಲೇಜು ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯ ಸೆರೆ Read More »

ರೇಶನ್ ಮಾಫಿಯಾ : ಗೋಣಿ ಚೀಲ ಬದಲಿಸಿ ಅಕ್ರಮ ಪಡಿತರ ಅಕ್ಕಿ ಸಾಗಾಟ

ವಿಟ್ಲ : ಗೋಣಿ ಚೀಲ ಬದಲಿಸಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು‌ ಜೀತೋ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಉಕ್ಕುಡ ಸಮೀಪ ವಿಟ್ಲ ಪೋಲಿಸರು ಬಂಧಿಸಿದ್ದು, ವಾಹನ ಸಹಿತ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ.ಬಂಧಿತನಾಗಿರುವ ವಾಹನದ ಚಾಲಕ ಕುದ್ದುಪದವು ಸುರುಳಿಮೂಲೆ ನಿವಾಸಿ ಅಲಿ ಎಂಬಾತನ ವಿಚಾರಣೆ ವೇಳೆ ಪಡಿತರ ಅಕ್ಕಿಯ ಮಾಫಿಯಾ ದಂಧೆ ಬಯಲಾಗಿದೆ.ಆರೋಪಿಯನ್ನು ವಿಚಾರಣೆ ನಡೆಸಿ ಆ ಬಳಿಕ ಅಕ್ರಮ ಪಡಿತರ ಅಕ್ಕಿ ದಾಸ್ತಾನು ಅಡ್ಡೆಗೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದಾರೆ. ಅಡ್ಯನಡ್ಕ ಸಮೀಪದ ಮರಕ್ಕಿಣಿ ನಿವಾಸಿ JSW

ರೇಶನ್ ಮಾಫಿಯಾ : ಗೋಣಿ ಚೀಲ ಬದಲಿಸಿ ಅಕ್ರಮ ಪಡಿತರ ಅಕ್ಕಿ ಸಾಗಾಟ Read More »

ತೆಂಗಿನಮರದಿಂದ ಬಿದ್ದು ವ್ಯಕ್ತಿ ಸಾವು

ಸುಳ್ಯ : ತೆಂಗಿನಮರದಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಕೆಮ್ರಾಜೆ ಗ್ರಾಮದ ಬೊಳ್ಳಾಜೆ ಕಂದೂರು ಎಂಬಲ್ಲಿ ಎ. 11 ರಂದು ಸಂಭವಿಸಿದೆ. ಹರೀಶ್ ಜಿ ಎಂಬವರೇ ಮೃತಪಟ್ಟ ವ್ಯಕ್ತಿ. ಇವರು ನೆಮ್ಮೂರು ಕೆಮ್ರಾಜೆ ಗ್ರಾಮದ ಬೊಳ್ಳಾಜೆ ಕಂದೂರು ಎಂಬಲ್ಲಿಗೆ ತೆಂಗಿನಕಾಯಿ ಕೊಯ್ಯುವ ಕೆಲಸಕ್ಕೆ ಹೋಗಿದ್ದು, ತೆಂಗಿನಕಾಯಿ ಕೊಯ್ದು ಮರದಿಂದ ಇಳಿಯುತ್ತಿದ್ದಂತೆ ಆಕಸ್ಮಿಕವಾಗಿ ಮರದಿಂದ ನೆಲಕ್ಕೆ ಬಿದ್ದು ಸ್ಮೃತಿ ಕಳೆದುಕೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಅಂಬ್ಯುಲೆನ್ಸ್‌ನಲ್ಲಿ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು ಹರೀಶ್‌ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ತೆಂಗಿನಮರದಿಂದ ಬಿದ್ದು ವ್ಯಕ್ತಿ ಸಾವು Read More »

ಶಾಲಾ ರಜಾ ಅವಧಿಯಲ್ಲಿ ಬಾವಿ ಜಾವಿ ತೋಡಿ ಮೆಚ್ಚುಗೆ ಗಳಿಸಿದ ಬಾಲಕ

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಪಿಯುಸಿ ವಿದ್ಯಾರ್ಥಿಯೋರ್ವ ತನ್ನ ರಜಾ ಅವಧಿಯಲ್ಲಿ ಬಾವಿಯೊಂದನ್ನು ತೋಡಿ ಸುದ್ದಿಯಾಗಿದ್ದಾನೆ. ಬಾಲಕನ‌ ಕಾರ್ಯಕ್ಕೆ ಇದೀಗ ವ್ಯಾಪಕ‌ ಮೆಚ್ಚುಗೆ ವ್ಯಕ್ತವಾಗಿದೆ.ನರಿಕೊಂಬು ನಾಯಿಲದ ಲೋಕನಾಥ್ ಅವರ ಪುತ್ರ, ಪಿಯುಸಿ ವಿದ್ಯಾರ್ಥಿ ಸೃಜನ್ ಬಾವಿ ಕೊರೆದ ವಿದ್ಯಾರ್ಥಿಯಾಗಿದ್ದಾನೆ ಎಂದು ತಿಳಿಯಲಾಗಿದೆ.ಸೃಜನ್ ಮನೆಗೆ ನಳ್ಳಿಯಲ್ಲಿ ನೀರು ಬರುತ್ತಿತ್ತು. ಆದರೆ ಮನೆಗೆ ಆಶ್ರಯವಾಗಿದ್ದ ನಳ್ಳಿ ನೀರು ಕೆಲವೊಮ್ಮೆ ಕೈ ಕೊಡುತ್ತಿತ್ತು. ಇದರಿಂದ ಮನೆಯಲ್ಲಿ ನೀರಿನ ಸಮಸ್ಯೆ ಉಂಟಾಗಿತ್ತು. ಸೃಜನ್ ತಾನು ಬಾವಿ ಕೊರೆಯುವುದಾಗಿ ಹೇಳುತ್ತಿದ್ದ‌

ಶಾಲಾ ರಜಾ ಅವಧಿಯಲ್ಲಿ ಬಾವಿ ಜಾವಿ ತೋಡಿ ಮೆಚ್ಚುಗೆ ಗಳಿಸಿದ ಬಾಲಕ Read More »

error: Content is protected !!
Scroll to Top