ದಕ್ಷಿಣ ಕನ್ನಡ

ಧರ್ಮಸ್ಥಳ ಪ್ರಕರಣ : ಸುಜಾತ ಭಟ್‌ ವಿಚಾರಣೆಗೆ ಹಾಜರು

ಇಂದು ಎಸ್‌ಐಟಿಯಿಂದ ನಾಲ್ವರ ಮಹತ್ವದ ವಿಚಾರಣೆ ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಪ್ರಕರಣ ಸಂಬಂಧ ಎಸ್.ಐ‌.ಟಿ ವಿಚಾರಣೆಗೆ ಸುಜಾತ ಭಟ್‌ ಆಗಮಿಸಿದ್ದಾರೆ. ಬೆಂಗಳೂರಿನಿಂದ ಇಂದು ಬೆಳಗ್ಗೆ ಆಗಮಿಸಿದ ಸುಜಾತ ಭಟ್ ಎಸ್‌ಐಟಿ ಅಧಿಕಾರಿಗಳ ಎದುರು ಹಾಜರಾಗಿದ್ದಾರೆ. ಧರ್ಮಸ್ಥಳ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಚಿನ್ನಯ್ಯ, ಜಯಂತ್ ಟಿ, ಗಿರೀಶ್ ಮಟ್ಟಣ್ಣವರ್ ಜೊತೆ ಸುಜಾತ ಭಟ್ ದೆಹಲಿಗೆ ಹೋಗಿದ್ದ ಪ್ರಕರಣ ಮತ್ತು ಚಿನ್ನಯ್ಯನಿಗೆ ಬೆಂಗಳೂರು ಮನೆಯಲ್ಲಿ ಆಶ್ರಯ ನೀಡಿದ್ದ ಹಿನ್ನೆಲೆಯಲ್ಲಿ ವಿಚಾರಣೆಗೆ ಅ.27 ರಂದು ಸೋಮವಾರ ಬೆಳಗ್ಗೆ ಎಸ್.ಐ.ಟಿ ಕಚೇರಿಗೆ […]

ಧರ್ಮಸ್ಥಳ ಪ್ರಕರಣ : ಸುಜಾತ ಭಟ್‌ ವಿಚಾರಣೆಗೆ ಹಾಜರು Read More »

ಸುಳ್ಯ : ಚಪ್ಪಲಿಯೊಳಗೆ ಸೇರಿಕೊಂಡಿದ್ದ ಹಾವು ಕಚ್ಚಿ ಮಹಿಳೆ ಅಸ್ವಸ್ಥ

ಸುಳ್ಯ: ಚಪ್ಪಲಿಯೊಳಗೆ ಸೇರಿಕೊಂಡಿದ್ದ ವಿಷದ ಹಾವು ಕಚ್ಚಿ ಮಹಿಳೆ ಅಸ್ವಸ್ಥರಾದ ಘಟನೆ ಭಾನುವಾರ ಅಲೆಟ್ಟಿಯಲ್ಲಿ ಸಂಭವಿಸಿದೆ. ಅಲೆಟ್ಟಿ ಗ್ರಾಮದ ಕೋಲ್ಚಾರಿನ ವಿನುತಾ ಹಾವಿನ ಕಡಿತಕ್ಕೊಳಗಾದವರು. ವಿನುತಾ ನಿನ್ನೆ ಬೆಳಗ್ಗೆ ಮನೆಯ ಅಂಗಳದಲ್ಲಿಟ್ಟಿದ್ದ ಚಪ್ಪಲಿ ಧರಿಸಲು ಹೋದಾಗ ಅದರೊಳಗೆ ಸೇರಿಕೊಂಡಿದ್ದ ವಿಷದ ಹಾವು ಕಾಲಿಗೆ ಕಚ್ಚಿದೆ. ಕೂಡಲೇ ಅವರನ್ನು ಮನೆಯವರು ಆಸ್ಪತ್ರೆಗೆ ಕರೆದೊಯ್ದಿದ್ದು, ಚಿಕಿತ್ಸೆ ಬಳಿಕ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸುಳ್ಯ : ಚಪ್ಪಲಿಯೊಳಗೆ ಸೇರಿಕೊಂಡಿದ್ದ ಹಾವು ಕಚ್ಚಿ ಮಹಿಳೆ ಅಸ್ವಸ್ಥ Read More »

ಬಂಟ್ವಾಳ : ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಯುವಕ ಸಾವು

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಢಿಕ್ಕಿಯಾಗಿ ಕಾರಿನಲ್ಲಿದ್ದ ಹೊಳೆನರಸೀಪುರದ ಸಂಜಯ್‌ (25) ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಉಪ್ಪಿನಂಗಡಿ ಅಡ್ಡಹೊಳೆ ಅಯ್ಯಪ್ಪಸ್ವಾಮಿ ದೇವಸ್ಥಾನದ ಬಳಿ ಸಂಭವಿಸಿದೆ. ಕಾರು ಚಾಲಕ ಅರಕಲಗೂಡು ನಿವಾಸಿ ಸಂದೀಪ್‌, ಕಾರಿನಲ್ಲಿದ್ದ ಶೇಷ, ಮಹೇಶ್‌ ಅವರು ಅಪಾಯದಿಂದ ಪಾರಾಗಿದ್ದಾರೆ. ಸಂಜಯ್‌ ಹಾಗೂ ಇತರರು ತಮ್ಮ ತೋಟದಲ್ಲಿ ಬೆಳೆದ ಹೂಗಳನ್ನು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮಾರಾಟ ಮಾಡಲು ಉಡುಪಿಗೆ ಬಂದಿದ್ದರು. ಹೂವು ಮಾರಾಟ ಮಾಡಿ ಮತ್ತೆ ಊರಿಗೆ ಮರಳುತ್ತಿದ್ದ ವೇಳೆ ಈ ದುರ್ಘ‌ಟನೆ

ಬಂಟ್ವಾಳ : ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಯುವಕ ಸಾವು Read More »

ಚೂರಿ ಇರಿತ ಪ್ರಕರಣ : ಪ್ರಮುಖ ಆರೋಪಿ ಸೆರೆ

ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾರ್ ಎದುರು ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿ ರೌಡಿ ಶೀಟರ್ ಗುರುರಾಜ್ ಆಚಾರಿ ಎಂಬಾತನನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಆರೋಪಿಗಳಿಗೆ ಆಶ್ರಯ ನೀಡಿದ್ದ ಮತ್ತೊಬ್ಬ ಆರೋಪಿ ಅಶೋಕ್ ಎಂಬಾತನಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಬಾರ್‌ನೊಳಗೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯು ತೀವ್ರಗೊಂಡು ಹೊರಗೆ ಚಾಕು ಇರಿತದಲ್ಲಿ ಅಂತ್ಯಗೊಂಡಿತ್ತು. ಈ ಘಟನೆಯಲ್ಲಿ ಗಾಯಗೊಂಡಿರುವ ನಿಝಾಮ್ ಮತ್ತು ಹಸನ್ ಮುಕ್ಷಿತ್ ಸ್ಥಳೀಯ ಆಸ್ಪತ್ರೆಯಲ್ಲಿ

ಚೂರಿ ಇರಿತ ಪ್ರಕರಣ : ಪ್ರಮುಖ ಆರೋಪಿ ಸೆರೆ Read More »

ಅಂತಿಮ ಹಂತಕ್ಕೆ ತಲುಪಿದ ಬುರುಡೆ ಷಡ್ಯಂತ್ರದ ತನಿಖೆ; ಸೋಮವಾರ ನಿರ್ಣಾಯಕ ವಿಚಾರಣೆ

ತಿಮರೋಡಿ ಸಹಿತ ನಾಲ್ವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್‌ ಮಂಗಳೂರು: ಧರ್ಮಸ್ಥಳ ಬುರುಡೆ ಬುರುಡೆ ಷಡ್ಯಂತ್ರ ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ವಿಚಾರಣೆಗಾಗಿ ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಜಯಂತ್‌ ಟಿ. ಮತ್ತು ವಿಠಲ ಗೌಡ ಅವರಿಗೆ ಸೇರಿದಂತೆ ನಾಲ್ವರಿಗೆ ನೋಟಿಸ್ ನೀಡಿದ್ದು, ಈ ನೋಟಿಸ್‌ ಸುತ್ತ ನಾನಾ ರೀತಿಯ ಊಹಾಪೋಹಗಳು ಹುಟ್ಟಿಕೊಂಡಿವೆ. ಸೋಮವಾರ ಬೆಳಿಗ್ಗೆ 10.30ಕ್ಕೆ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ. ಹಾಗೂ ವಿಠಲ ಗೌಡರಿಗೆ ನೋಟಿಸ್ ನೀಡಲಾಗಿದೆ.

ಅಂತಿಮ ಹಂತಕ್ಕೆ ತಲುಪಿದ ಬುರುಡೆ ಷಡ್ಯಂತ್ರದ ತನಿಖೆ; ಸೋಮವಾರ ನಿರ್ಣಾಯಕ ವಿಚಾರಣೆ Read More »

ಮಂಗಳೂರಿನಲ್ಲಿ ಪ್ರಥಮ ಬಾರಿಗೆ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಟೂರ್ನಮೆಂಟ್‌

ಅ.27ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಕ್ರೀಡಾಕೂಟಕ್ಕೆ ಚಾಲನೆ ಮಂಗಳೂರು: ಇದೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಅಂತಾರಾರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ “ಮಂಗಳೂರು ಇಂಡಿಯಾ ಇಂಟರ್‌ನ್ಯಾಷನಲ್ ಚಾಲೆಂಜ್ 2025” ಕ್ರೀಡಾಕೂಟ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಟೋಬರ್ 27ರಂದು ನಗರದ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ಚಾಲನೆ ನೀಡಲಿದ್ದಾರೆ. ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಕ್ರೀಡಾಕೂಟ ನಡೆಯುತ್ತಿದ್ದು, ಯಾವುದೇ ಲೋಪವಾಗದಂತೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಜಿಲ್ಲೆಯ ಕ್ರೀಡಾ ಮೂಲಸೌಲಭ್ಯಗಳು ಜಾಗತಿಕ ಮಟ್ಟದಲ್ಲಿ ಗುರುತಿಸುವಂತಾಗಬೇಕು. ಈ ಕ್ರೀಡಾಕೂಟದಲ್ಲಿ ದೇಶ-ವಿದೇಶಗಳಿಂದ ಕ್ರೀಡಾಪಟುಗಳು

ಮಂಗಳೂರಿನಲ್ಲಿ ಪ್ರಥಮ ಬಾರಿಗೆ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಟೂರ್ನಮೆಂಟ್‌ Read More »

ನಮ್ಮ ಮಾತು ಕೇಳದಿದ್ದರೆ ಬೀಳುತ್ತೆ ಕೇಸ್‌ : ಕ್ರಿಮಿನಲ್‌ಗಳಿಗೆ ಕಮಿಷನರ್‌ ಸುಧೀರ್ ರೆಡ್ಡಿ ವಾರ್ನಿಂಗ್

ಪಟಾಕಿ ಅಂಗಡಿ ಮಾಲಕರಿಂದ ಸುಲಿಗೆ ಮಾಡಿದ ಹಿನ್ನೆಲೆಯಲ್ಲಿ ಎಚ್ಚರಿಕೆ ಮಂಗಳೂರು: ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಗಳ ಜೊತೆಗೆ ತಿರುಗಾಡದಂತೆ ಈ ಮೊದಲೇ ಹೇಳಿದ್ದೆ. ರೌಡಿಗಳ ಜೊತೆಗಿದ್ದು ಅಪರಾಧದಲ್ಲಿ ಸಿಲುಕಬೇಡಿ ಎಂದೂ ಹೇಳಿದ್ದೆ. ನೀವು ನಮ್ಮ ಮಾತು ಕೇಳ್ತಾ ಇಲ್ಲ ಎನಿಸುತ್ತೆ. ನಮ್ಮ ಮಾತು ಕೇಳಲ್ಲಾಂದ್ರೆ ನಾವು ಏನು ಮಾಡಬೇಕೆಂದು ಗೊತ್ತಿದೆ. ನಾವು ನಮ್ಮ ಕೆಲಸ ಮಾಡ್ತೀವಿ. ನಿಮ್ಮ ಇಷ್ಟದಂತೆ ಮಾಡ್ಕೊಂಡ್ರೆ ನಮಗೆ ತೊಂದರೆ ಇಲ್ಲ. ಏನು ಬೇಕಾದರೂ ಮಾಡ್ಕೊಂಡು ಹೋಗಿ‌. ಪೊಲೀಸರು ತಮ್ಮ ಕೆಲಸ ಮಾಡುತ್ತಾರೆ ಎಂದು ಮಂಗಳೂರು

ನಮ್ಮ ಮಾತು ಕೇಳದಿದ್ದರೆ ಬೀಳುತ್ತೆ ಕೇಸ್‌ : ಕ್ರಿಮಿನಲ್‌ಗಳಿಗೆ ಕಮಿಷನರ್‌ ಸುಧೀರ್ ರೆಡ್ಡಿ ವಾರ್ನಿಂಗ್ Read More »

ಬೆಲೆ ಇಳಿಕೆಯಿಂದ ಜನ ಸಂಭ್ರಮಿಸಿದರೆ ಕಾಂಗ್ರೆಸ್‌ನವರಿಗೆ ಹೊಟ್ಟೆಯುರಿ : ಬಿಜೆಪಿ ಲೇವಡಿ

ರಾಜ್ಯದಲ್ಲಿ ಬೆಲೆ ಏರಿಸಿರುವುದಷ್ಟೆ ಕಾಂಗ್ರೆಸ್‌ ಸರ್ಕಾರದ ಸಾಧನೆ ಎಂದು ಟೀಕೆ ಮಂಗಳೂರು: ಕೇಂದ್ರ ಸರ್ಕಾರ ಜಿಎಸ್‌ಟಿ ದರ ಇಳಿಕೆ ಮಾಡಿ ಜನತೆಗೆ ನೆಮ್ಮದಿ ನೀಡಿದರೆ, ರಾಜ್ಯ ಸರ್ಕಾರ ಪ್ರತಿಯೊಂದು ವಸ್ತುಗಳ ಬೆಲೆ ಏರಿಸಿ ಜನರ ಬದುಕಿಗೆ ಸಂಕಷ್ಟ ತಂದೊಡ್ಡಿದೆ. ಕೇಂದ್ರದ ಜಿಎಸ್‌ಟಿ ದರ ಇಳಿಕೆ ಕುರಿತು ಶಾಸಕ ವೇದವ್ಯಾಸ ಕಾಮತ್ ಮನೆಮನೆಗೆ ಕರಪತ್ರ ವಿತರಣೆ ಕಾರ್ಯ ಆರಂಭಿಸಿದಾಗ ಕಾಂಗ್ರೆಸ್ ನಾಯಕರಾದ ಐವನ್ ಡಿಸೋಜ ಮತ್ತು ಪದ್ಮರಾಜ್ ಅವರಲ್ಲಿ ಹೊಟ್ಟೆಕಿಚ್ಚು ಶುರುವಾಗಿದೆ. ಜನರಿಗೆ ಸಿಗುತ್ತಿರುವ ಪ್ರಯೋಜನವೇ ಇವರಿಗೆ ಅಸಹ್ಯ

ಬೆಲೆ ಇಳಿಕೆಯಿಂದ ಜನ ಸಂಭ್ರಮಿಸಿದರೆ ಕಾಂಗ್ರೆಸ್‌ನವರಿಗೆ ಹೊಟ್ಟೆಯುರಿ : ಬಿಜೆಪಿ ಲೇವಡಿ Read More »

ಫೇಸ್‌ಬುಕ್‌ನಲ್ಲಿ ಪ್ರಚೋದನಕಾರಿ ಪೋಸ್ಟ್‌ : ಕೇಸ್‌ ದಾಖಲು

ಮಂಗಳೂರು: ಫೇಸ್‌ಬುಕ್‌ನಲ್ಲಿ ಪ್ರಚೋದನಕಾರಿ ಸಂದೇಶವನ್ನು ಹಂಚಿದ ಆರೋಪದ ಮೇರೆಗೆ ಕಂಕನಾಡಿ ನಗರ ಠಾಣೆಯಲ್ಲಿ ನಝೀರ್ ಮಂಗಳೂರು ಮತ್ತು Gandhian Nehruvian Magar ಎಂಬ ಎರಡು ಫೇಸ್‌ಬುಕ್ ಖಾತೆಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಅ.21ರಂದು ಅಪರಾಹ್ನ 3 ಗಂಟೆಗೆ ತಾನು ಸಾಮಾಜಿಕ ಜಾಲತಾಣಾ ಮಾನಿಟರಿಂಗ್ ನಿಗಾವಣೆ ಕರ್ತವ್ಯದ ಮೇರೆಗೆ ಫೇಸ್‌ಬುಕ್ ವೀಕ್ಷಿಸುತ್ತಿರುವಾಗ ನಝೀರ್ ಮಂಗಳೂರ್ ಎಂಬ ಫೇಸ್‌ಬುಕ್ ಖಾತೆಯಿಂದ Mumthas Abdul Nelyadka ಮತ್ತು Mahesh Vikram Hegde ಎಂಬ ಫೇಸ್‌ಬುಕ್ ಖಾತೆಗಳಿಗೆ ಟ್ಯಾಗ್ ಮಾಡಿರುವ Gandhian Nehruvian

ಫೇಸ್‌ಬುಕ್‌ನಲ್ಲಿ ಪ್ರಚೋದನಕಾರಿ ಪೋಸ್ಟ್‌ : ಕೇಸ್‌ ದಾಖಲು Read More »

ಮಹಿಳೆಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 42 ಲ.ರೂ. ಸುಲಿಗೆ

ಮಂಗಳೂರು : ಡಿಜಿಟಲ್ ಅರೆಸ್ಟ್ ಮಾಡಿ ಮಹಿಳೆಯಿಂದ 42 ಲಕ್ಷ ಸುಲಿಗೆ ಮಾಡಿದ ಪ್ರಕರಣವೊಂದು ಮಂಗಳೂರಿನಲ್ಲಿ ಸಂಭವಿಸಿದೆ. ಮಹಿಳೆ ಅಪರಿಚಿತರು ಕರೆ ಮಾಡಿ 42 ಲಕ್ಷ ರೂ. ಆನ್‌ಲೈನ್ ಮೂಲಕ ವಂಚಿಸಿದ ಬಗ್ಗೆ ನಗರದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಸಿದ್ದಾರೆ. ಅ.7ರಂದು ತನ್ನ ಮೊಬೈಲ್‌ಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ ಮುಂಬೈಯ ಕೊಲಾಬ ಪೊಲೀಸ್ ಠಾಣೆಯಿಂದ ತಾನು ಮಾತನಾಡುತ್ತಿರುವೆ. ನಿಮ್ಮ ಹೆಸರಿನಲ್ಲಿ ಹೊಸ ಸಿಮ್ ಖರೀದಿಸಲಾಗಿದೆ. ಬಳಿಕ ತನ್ನನ್ನು ಮುಂಬೈಗೆ ಬರುವಂತೆ ಹೇಳಿದ್ದಾನೆ. ನನಗೆ ಮುಂಬೈಗೆ ಬರಲು

ಮಹಿಳೆಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 42 ಲ.ರೂ. ಸುಲಿಗೆ Read More »

error: Content is protected !!
Scroll to Top