ದಕ್ಷಿಣ ಕನ್ನಡ

ಬಾಲಕನಿಗೆ ಸ್ಕೂಟರ್‌ ನೀಡಿದ ವ್ಯಕ್ತಿಗೆ 32 ಸಾವಿರ ರೂ. ದಂಡ

ವಿಟ್ಲ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ಕಾರಣಕ್ಕೆ ವಾಹನ ಮಾಲಕನಿಗೆ ಬಂಟ್ವಾಳ ನ್ಯಾಯಾಲಯ 32 ಸಾವಿರ ರೂ. ದಂಡ ವಿಧಿಸಿದೆ. ಕಳೆದ ಸೆಪ್ಟಂಬರ್‌ನಲ್ಲಿ ಪುತ್ತೂರು ಕಡೆಯಿಂದ ವಿಟ್ಲದತ್ತ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಅಪ್ರಾಪ್ತ ವಯಸ್ಸಿನ ಬಾಲಕ ಚಲಾಯಿಸುತ್ತಿದ್ದ ಇನ್ನೊಂದು ದ್ವಿಚಕ್ರ ವಾಹನ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಬಂಟ್ವಾಳ ಎಸಿಜೆ ಮತ್ತು ಜೆಎಂಎಫ್ ಸಿ ನ್ಯಾಯಾಲಯ ವಿಚಾರಣೆ ನಡೆಸಿ ಬಾಲಕ […]

ಬಾಲಕನಿಗೆ ಸ್ಕೂಟರ್‌ ನೀಡಿದ ವ್ಯಕ್ತಿಗೆ 32 ಸಾವಿರ ರೂ. ದಂಡ Read More »

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಕಸಾಯಿಖಾನೆ ಸ್ಥಳಗಳು ಜಪ್ತಿ

ಗೋಹತ್ಯೆ ನಡೆಸಿದ ಸ್ಥಳಗಳೆಂದು ಗುರುತಿಸಿ ಮುಟ್ಟುಗೋಲು ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ ಗ್ರಾಮಾಂತರ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ದಾಖಲಾಗಿರುವ ಜಾನುವಾರು ಹತ್ಯೆ ಪ್ರಕರಣಗಳ ತನಿಖೆಯ ಭಾಗವಾಗಿ ಕಸಾಯಿಖಾನೆಗಳಿದ್ದ ಸ್ಥಳಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ ಮತ್ತು ಜಾನುವಾರು ಹತ್ಯಾ ಪ್ರತಿಬಂಧಕ ಸಂರಕ್ಷಣಾ ಕಾಯ್ದೆಯಡಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮದ ಕೆರೆಬಳಿ ಪ್ರದೇಶದಲ್ಲಿ ಆರೋಪಿಗಳಾದ ನಾಸೀರ್ ಮತ್ತು ಇತರರು ದನವನ್ನು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಕಸಾಯಿಖಾನೆ ಸ್ಥಳಗಳು ಜಪ್ತಿ Read More »

ಪಿಲಿಕುಳ ನಿಸರ್ಗಧಾಮ ಕಚೇರಿಗೆ ಲೋಕಾಯುಕ್ತ ದಾಳಿ

ಪ್ರಾಣಿಗಳ ಆಹಾರ ಪೂರೈಕೆ ಸಹಿತ ವಿವಿಧ ವ್ಯವಹಾರಗಳಲ್ಲಿ ಲೋಪದೋಷದ ಆರೋಪ ಮಂಗಳೂರು : ನಗರದ ಹೊರವಲಯದ ಪಿಲಿಕುಳ ನಿಸರ್ಗಧಾಮ ಕಚೇರಿಗೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಕಚೇರಿಗೆ ದಾಳಿ ನಡೆಸಿದ್ದು, ಕಡತಗಳ ಪರಿಶೀಲನೆಯನ್ನು ಲೋಕಾಯುಕ್ತ ಅಧಿಕಾರಿಗಳು ನಡೆಸಿದ್ಡಾರೆ. ಡಿವೈಎಸ್‌ಪಿ ಡಾ.ಗಾನ ಪಿ ಕುಮಾರ್ ನೇತೃತ್ವದ ತಂಡ ಪ್ರಾಧಿಕಾರದ ಆಡಳಿತದಲ್ಲಿ ಸಾಕಷ್ಟು ಲೋಪದೋಷ ಕಂಡುಬಂದ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆಸಿದೆ. ಅನುದಾನ ದುರುಪಯೋಗ, ಆದಾಯ ಮತ್ತು ವೆಚ್ಚದ ಬಗ್ಗೆ ಪರಿಶೀಲನೆ ಹಾಗೂ ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ,

ಪಿಲಿಕುಳ ನಿಸರ್ಗಧಾಮ ಕಚೇರಿಗೆ ಲೋಕಾಯುಕ್ತ ದಾಳಿ Read More »

ತೆಂಕುತಿಟ್ಟಿನ ಹಿರಿಯ ಭಾಗವತ ದಿನೇಶ್‌ ಅಮ್ಮಣ್ಣಾಯ ಇನ್ನಿಲ್ಲ

ಪೌರಾಣಿಕ, ತುಳು ಪ್ರಸಂಗಗಳ ಅಮೋಘ ಭಾಗವತಿಕೆಯ ಪರಂಪರೆ ಕೊನೆಯ ಕೊಂಡಿ ಮಂಗಳೂರು : ರಸರಾಗ ಚಕ್ರವರ್ತಿ ಎಂದು ಅರಿಯಲ್ಪಡುತ್ತಿದ್ದ ತೆಂಕುತಿಟ್ಟಿನ ಹಿರಿಯ ಭಾಗವತ ದಿನೇಶ್‌ ಅಮ್ಮಣ್ಣಾಯ ಗುರುವಾರ ನಿಧನರಾಗಿದ್ದಾರೆ. ಅವರಿಗೆ 65 ವರ್ಷ ಪ್ರಾಯವಾಗಿತ್ತು. ಕಂಚಿನ ಕಂಠ ಹಾಗೂ ವಿಶಿಷ್ಟ ರಾಗ ಸಂಯೋಜನೆಯ ಮೂಲಕ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಯಕ್ಷಕಲಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಅವರು ಪೌರಾಣಿಕ ಮತ್ತು ತುಳು ಪ್ರಸಂಗಗಳೆರಡರಲ್ಲೂ ತಮ್ಮ ಛಾಪು ಮೂಡಿಸಿ ಯಕ್ಷಗಾನ ಕ್ಷೇತ್ರಕ್ಕೆ ಹೊಸ ದಿಕ್ಕು ತೋರಿಸಿದ್ದರು. ಯಕ್ಷಗಾನ ಕ್ಷೇತ್ರದ ಹಿರಿಯ

ತೆಂಕುತಿಟ್ಟಿನ ಹಿರಿಯ ಭಾಗವತ ದಿನೇಶ್‌ ಅಮ್ಮಣ್ಣಾಯ ಇನ್ನಿಲ್ಲ Read More »

ಒಂದೇ ಕಡೆ ಹತ್ತು ಶವ ಹೂತ ಹೊಸ ಕಥೆ : ಧರ್ಮಸ್ಥಳ ಪ್ರಕರಣಕ್ಕೆ ಟ್ವಿಸ್ಟ್‌

ಎಸ್‌ಐಟಿಗೆ ತಿಳಿಸದ ವಿಚಾರವನ್ನು ನ್ಯಾಯಾಲಯಕ್ಕೆ ಹೇಳಿದ ಆರೋಪಿ ಚಿನ್ನಯ್ಯ ಧರ್ಮಸ್ಥಳ : ಧರ್ಮಸ್ಥಳ ಪ್ರಕರಣದ ತನಿಖೆ ಒಂದು ಹಂತಕ್ಕೆ ಬಂತು ಎನ್ನುವಾಗಲೇ ಆರೋಪಿ ಚಿನ್ನಯ್ಯ ಮಂಗಳವಾರ ಹೊಸ ಕಥೆ ಹೇಳಿ ಇಡೀ ಪ್ರಕರಣಕ್ಕೆ ಟ್ವಿಸ್ಟ್‌ ನೀಡಿದ್ದಾನೆ. ಕೋರ್ಟ್‌ ಮುಂದೆ ಚಿನ್ನಯ್ಯ ತಾನು ಒಂದೇ ಜಾಗದಲ್ಲಿ ಹತ್ತು ಮೃತದೇಹ ಹೂತಿದ್ದಾಗಿ ಸ್ಫೋಟಕ ಹೇಳಿಕೆ ಕೊಟ್ಟಿದ್ದಾನೆ. ಆದರೆ, ಯಾವ ಜಾಗದಲ್ಲಿ, ಎಲ್ಲಿ, ಯಾವಾಗ ಎಂದು ಮಾತ್ರ ಹೇಳಿಲ್ಲ. ಎಸ್‌ಐಟಿ ಮುಂದೆ ಇಷ್ಟರ ತನಕ ಕೊಡದ ಈ ಮಾಹಿತಿಯನ್ನು ಕೋರ್ಟ್‌ ಮುಂದೆ

ಒಂದೇ ಕಡೆ ಹತ್ತು ಶವ ಹೂತ ಹೊಸ ಕಥೆ : ಧರ್ಮಸ್ಥಳ ಪ್ರಕರಣಕ್ಕೆ ಟ್ವಿಸ್ಟ್‌ Read More »

ಬಂಟ್ವಾಳ: ಕಾರು ಡಿಕ್ಕಿ ಹೊಡೆದು ಮೆಕ್ಯಾನಿಕ್‌ ಸಾವು

ಬಂಟ್ವಾಳ : ಬಿ.ಸಿ.ರೋಡ್ ಬಳಿಯ ಗಾಣದಪಡ್ಪು ಎಂಬಲ್ಲಿ ಮಂಗಳವಾರ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹೆದ್ದಾರಿ ಬದಿಯಲ್ಲಿ ಕಾರು ದುರಸ್ತಿ ಮಾಡುತ್ತಿದ್ದ ಮೆಕ್ಯಾನಿಕ್‌ ಮತ್ತೊಂದು ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಮೃತರನ್ನು ಬೋಳಾರ್ಂತೂರು ನಿವಾಸಿ ಜಬ್ಬಾರ್ (33) ಎಂದು ಗುರುತಿಸಲಾಗಿದೆ. ಅವರು ಅವಿವಾಹಿತರಾಗಿದ್ದು, ಗಾಣದಪಡ್ಪುವಿನ ಶಿವಗಣೇಶ್ ಬ್ಯಾಟರಿ ಅಂಗಡಿಯಲ್ಲಿ ಆಟೋ ಇಲೆಕ್ಟ್ರಿಕಲ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು. ಜಬ್ಬಾರ್ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಹಾರ್ನ್ ಅಳವಡಿಸುತ್ತಿದ್ದಾಗ ವೇಣೂರಿನ ವ್ಯಕ್ತಿಯೊಬ್ಬರು ಚಲಾಯಿಸುತ್ತಿದ್ದ ಮತ್ತೊಂದು ಕಾರು ಬಂಟ್ವಾಳ ಬೈಪಾಸ್ ಕಡೆಯಿಂದ

ಬಂಟ್ವಾಳ: ಕಾರು ಡಿಕ್ಕಿ ಹೊಡೆದು ಮೆಕ್ಯಾನಿಕ್‌ ಸಾವು Read More »

ಬೆಂಗಳೂರಿನಲ್ಲಿ ಕಂಬಳ ನಡೆಸಲು ಹೈಕೋರ್ಟ್‌ ಅನುಮತಿ

ಕರಾವಳಿಯಿಂದ ಹೊರಗೆ ಕಂಬಳ ನಡೆಸಲು ಇದ್ದ ಅಡ್ಡಿ ನಿವಾರಣೆ ಮಂಗಳೂರು : ಕರಾವಳಿಯಿಂದ ಹೊರಗೆ ಕಂಬಳ ನಡೆಸುವುದಕ್ಕೆ ಇದ್ದ ಅಡ್ಡಿ ನಿವಾರಣೆಯಾಗಿದೆ. ಕಂಬಳ ಆಯೋಜನೆಗೆ ಪೇಟಾದವರು ತಕರಾರು ಮಾಡಿದ ಹಿನ್ನೆಲೆಯಲ್ಲಿ ನಿಂತು ಹೋಗಿದ್ದ ಮೈಸೂರು, ಬೆಂಗಳೂರು ಹಾಗೂ ಶಿವಮೊಗ್ಗ ಕಂಬಳ ನಡೆಸಲು ಹೈಕೋಟ್೯ ನಿನ್ನೆ ಅನುಮತಿ ನೀಡಿದೆ. ಪುತ್ತೂರು ಶಾಸಕ ಅಶೋಕ್‌ ರೈಯವರು ಬೆಂಗಳೂರಿನಲ್ಲಿ ಕಂಬಲ ಆಯೋಜಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದರು. ಆದರೆ ಅದರ ಮರುವರ್ಷ ಬೆಂಗಳೂರಿನಲ್ಲಿ ಮತ್ತೆ ಕಂಬಳ ನಡೆಸಲು ಮುಂದಾದಾಗ ಪೆಟಾ ತಕರಾರು ತೆಗೆದು

ಬೆಂಗಳೂರಿನಲ್ಲಿ ಕಂಬಳ ನಡೆಸಲು ಹೈಕೋರ್ಟ್‌ ಅನುಮತಿ Read More »

ಸುಳ್ಯ : 35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌

ಸುಳ್ಯ : ಕಳೆದ ಸುಮಾರು 35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಕೇರಳದ ತ್ರಿಶ್ಶೂರ್‌ ಜಿಲ್ಲೆಯ ನಾಟಿ ಮನೆಯ ಬಾಲನ್(73) ಎಂದು ಗುರುತಿಸಲಾಗಿದೆ. 1990ರಲ್ಲಿ ಸುಳ್ಯ ತಾಲೂಕಿನ ಅಲೆಟ್ಟಿ ಗ್ರಾಮದ ನಾಗಪಟ್ಟಣ ಎಂಬಲ್ಲಿ ಅಕ್ರಮ ಕೂಟ ಸೇರಿ ಶಾಂತಪ್ಪ ಮತ್ತು ಸುಬ್ಬಯ್ಯ ಎಂಬವರಿಗೆ ತಲ್ವಾರ್‌ನಿಂದ ಹಲ್ಲೆ ಮಾಡಿ ಗಂಭೀರವಾಗಿ ಗಾಯಗೊಳಿಸಿದ ಕೃತ್ಯಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್‌ ರಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಸುಮಾರು 35 ವರ್ಷಗಳಿಂದ ತಲೆಮರೆಸಿಕೊಂಡಿದ್ದು, ಈತನನ್ನು ಕೇರಳ ರಾಜ್ಯದ ತ್ರಿಶ್ಶೂರ್‌ನಿಂದ ಅ.13ರಂದು

ಸುಳ್ಯ : 35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌ Read More »

ವಿಟ್ಲ: ಮದುವೆಗೆ ಹೆಣ್ಣು ತೋರಿಸುವ ನೆಪದಲ್ಲಿ 44.80 ಲಕ್ಷ ರೂ. ಸುಲಿಗೆ

ವಿದೇಶದಲ್ಲಿದ್ದ ವ್ಯಕ್ತಿಯನ್ನು ಕರೆಸಿಕೊಂಡು ವಂಚಿಸಿದ ಪ್ರಕರಣ ವಿಟ್ಲ : ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿರುವ ಕೇರಳ ಮೂಲದ ವ್ಯಕ್ತಿಯೊಬ್ಬರಿಗೆ ಮದುವೆಯಾಗಲು ಹೆಣ್ಣು ತೋರಿಸುವ ನೆಪದಲ್ಲಿ ಕರೆಸಿಕೊಂಡು ಹನಿಟ್ರ್ಯಾಪ್‌ಗೆ ಕೆಡವಿ 44.80 ಲಕ್ಷ ರೂ.ಸುಲಿಗೆ ಮಾಡಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಬ್ಲ್ಯಾಕ್‌ಮೇಲ್ ಮತ್ತು ಹಣಕಾಸು ವಂಚನೆಯ ಪ್ರಕರಣ ದಾಖಲಾಗಿದೆ. 53 ವರ್ಷದ ಮೊಹಮ್ಮದ್ ಅಶ್ರಫ್ ತಾವರಕಡನ್ ಎಂಬವರು 2024ರ ಸೆಪ್ಟೆಂಬರ್‌ನಲ್ಲಿ ಮಂಗಳೂರಿಗೆ ಬಂದಿದ್ದಾಗ ಹೆಣ್ಣು ತೋರಿಸುವ ನೆಪದಲ್ಲಿ ಆರೋಪಿಗಳು ಅವರನ್ನು ಭೇಟಿ ಮಾಡಿ ಸುಲಿಗೆ ಮಾಡಿದ್ದಾರೆ. ಬಶೀರ್

ವಿಟ್ಲ: ಮದುವೆಗೆ ಹೆಣ್ಣು ತೋರಿಸುವ ನೆಪದಲ್ಲಿ 44.80 ಲಕ್ಷ ರೂ. ಸುಲಿಗೆ Read More »

ಮಾಸ್ಕ್‌ಮ್ಯಾನ್ ಚಿನ್ನಯ್ಯನ ಪತ್ನಿ SIT ಕಚೇರಿಗೆ ಹಾಜರ್

ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿ ಮಾಸ್ಕ್‌ಮ್ಯಾನ್ ಚಿನ್ನಯ್ಯ‌ನ ಎರಡನೇ ಪತ್ನಿ SIT ಕಚೇರಿಗೆ ಇಂದು ಹಾಜರಾಗಿದ್ದಾರೆ. ಅವರನ್ನು ಆರೋಪಿ ಚಿನ್ನಯ್ಯನಿಗೆ ಸಂಬಂಧಿಸಿದಂತೆ ಇರುವ ಮಾಹಿತಿಗಳನ್ನು ಸಂಗ್ರಹ ಮಾಡುವ ದೃಷ್ಟಿಯಿಂದ SIT ಅಧಿಕಾರಿಗಳು ಕಚೇರಿಗೆ ಕರೆಸಿಕೊಂಡಿದ್ದರು ಎಂದು ಹೇಳಲಾಗುತ್ತಿದೆ. ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಬಂಗ್ಲಗುಡ್ಡದಲ್ಲಿ ಶವಗಳನ್ನು ಹೂಳಲಾಗಿದೆ ಎಂದು ಚಿನ್ನಯ್ಯ ತೋರಿಸಿದ್ದ ಜಾಗದಲ್ಲಿ ಇತ್ತೀಚೆಗೆ ಮತ್ತೆ SIT ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದರು. ಹಾಗೆಯೇ ಅರಣ್ಯಾಧಿಕಾರಿಗಳ ಜೊತೆಗೂ ಸ್ಥಳಕ್ಕೆ ಭೇಟಿ ನೀಡಿ ಸರ್ವೇ ಕಾರ್ಯ ನಡೆಸಿದ್ದರು.

ಮಾಸ್ಕ್‌ಮ್ಯಾನ್ ಚಿನ್ನಯ್ಯನ ಪತ್ನಿ SIT ಕಚೇರಿಗೆ ಹಾಜರ್ Read More »

error: Content is protected !!
Scroll to Top