ದಕ್ಷಿಣ ಕನ್ನಡ

ಬಜಪೆ ಪಟ್ಟಣ ಪಂಚಾಯತ್ ಚುನಾವಣೆ : ಬಿಜೆಪಿ ಜಯಭೇರಿ

19ರಲ್ಲಿ 11 ಸ್ಥಾನ ಗೆದ್ದು ನಿಚ್ಚಳ ಬಹುಮತ ಪಡೆದ ಬಿಜೆಪಿ ಮಂಗಳೂರು : ತಾಲೂಕಿನ ಬಜಪೆ ಪಟ್ಟಣ ಪಂಚಾಯತ್‌ಗೆ ಡಿ.21ರಂದು ನಡೆದ ಚುನಾವಣೆಯಲ್ಲಿ ಬಿಜೆಪಿಗೆ ನಿಚ್ಚಳ ಬಹುಮತ ಲಭಿಸಿದೆ.ಒಟ್ಟು 19 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 11 ಸ್ಥಾನಗಳನ್ನು ಗೆದ್ದುಕೊಂಡು ಬೀಗಿದೆ. ಕಾಂಗ್ರೆಸ್-4, ಎಸ್‌ಡಿಪಿಐ-3 ಮತ್ತು ಪಕ್ಷೇತರರು 1 ಸ್ಥಾನಗಳನ್ನು ಪಡೆದಿದ್ದಾರೆ.ಬುಧವಾರ ಮಂಗಳೂರು ಮಿನಿ ವಿಧಾನಸೌಧದಲ್ಲಿ ಮಾತಗಳ ಎಣಿಕೆ ನಡಯಿತು. ಬಜಪೆಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಿದ ಬಳಿಕ ನಡೆದ ಮೊದಲ ಚುನಾವಣೆ ಇದಾಗಿತ್ತು. ವಿಜೇತರ ವಿವರ:ವಾರ್ಡ್ 1. […]

ಬಜಪೆ ಪಟ್ಟಣ ಪಂಚಾಯತ್ ಚುನಾವಣೆ : ಬಿಜೆಪಿ ಜಯಭೇರಿ Read More »

ಷೇರು ಮಾರ್ಕೆಟಿಂಗ್ ಹೂಡಿಕೆಯ ನೆಪದಲ್ಲಿ 85.68 ಲ.ರೂ. ಮೋಸ

ಮಂಗಳೂರು : ಷೇರು ಮಾರ್ಕೆಟಿಂಗ್ ಹೂಡಿಕೆಯ ನೆಪದಲ್ಲಿ ವ್ಯಕ್ತಿಯೊಬ್ಬರಿಗೆ ಆನ್‌ಲೈನ್ ಮೂಲಕ ಬರೋಬ್ಬರಿ 85,68,387 ರೂ. ವಂಚನೆ ಮಾಡಿರುವ ಪ್ರಕರಣವೊಂದು ಮಂಗಳೂರಿನಲ್ಲಿ ಬೆಳಕಿಗೆ ಬಂದಿದ್ದು, ಈ ಕುರಿತು ಸೆನ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದ, ಪ್ರಸ್ತುತ ನಿರುದ್ಯೋಗಿಯಾಗಿರುವ ವ್ಯಕ್ತಿ ಮೋಸ ಹೋಗಿದ್ದಾರೆ. ಇನ್‌ಸ್ಟಾಗ್ರಾಂ ನೋಡುತ್ತಿರುವಾಗ ಷೇರು ಮಾರುಕಟ್ಟೆ ಆನ್‌ಲೈನ್ ಟ್ರೇಡಿಂಗ್ ಕ್ಲಾಸ್‌ಗೆ ಲಿಂಕ್ ಮೂಲಕ ಸೇರ್ಪಡೆಗೊಂಡೆ. ಅ.31ರಂದು ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ತನ್ನ ಮೊಬೈಲ್ ನಂಬರ್ ಸೇರ್ಪಡೆಯಾಗಿದೆ. ಬಳಿಕ ಗ್ರೂಪ್‌ನಲ್ಲಿದ್ದ ಕಾವ್ಯ ಎಂಬಾಕೆ ಅಸಿಸ್ಟೆಂಟ್ ಆಗಿ

ಷೇರು ಮಾರ್ಕೆಟಿಂಗ್ ಹೂಡಿಕೆಯ ನೆಪದಲ್ಲಿ 85.68 ಲ.ರೂ. ಮೋಸ Read More »

ಪತಿಯನ್ನು ಕೊಂದರೂ ಪತ್ನಿ ಅಪರಾಧಿಯಲ್ಲ!

ಕೊಲೆ ಪ್ರಕರಣದಲ್ಲಿ ಮಹಿಳೆಯನ್ನು ಖುಲಾಸೆಗೊಳಿಸಿದ ನ್ಯಾಯಾಲಯ ಮಂಗಳೂರು : ಪತಿಯನ್ನು ಪತ್ನಿಯೇ ಕೊಂದಿರುವುದು ಸಾಬೀತಾಗಿದ್ದರೂ ನ್ಯಾಯಾಲಯ ಪತ್ನಿಯನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ. ಹೀಗೊಂದು ಅಪರೂಪದ ತೀರ್ಪು ನೀಡಿರುವುದು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ. ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದಲ್ಲಿ ನಡೆದ ಪತಿ ಹತ್ಯೆ ಪ್ರಕರಣದಲ್ಲಿ ಈ ಅಪರೂಪದ ನ್ಯಾಯಾಂಗ ನಿರ್ಣಯ ಹೊರಬಿದ್ದಿದೆ. ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮೋಹನ ಜೆ.ಎಸ್. ಅವರು, ಆರೋಪಿಯಾದ ಎಲಿಯಮ್ಮ ಎಂಬವರು ಗಂಡನನ್ನು ಕೊಂದಿರುವುದು ಸಾಬೀತಾದರೂ,

ಪತಿಯನ್ನು ಕೊಂದರೂ ಪತ್ನಿ ಅಪರಾಧಿಯಲ್ಲ! Read More »

ಬಂಟ್ವಾಳ : ಹಿಟ್‌ & ರನ್‌ ಅಪಘಾತದಲ್ಲಿ ಸ್ಕೂಟರ್‌ ಸವಾರನಿಗೆ ಗಂಭೀರ ಗಾಯ

ಡಿಕ್ಕಿ ಹೊಡೆದು ಪರಾರಿಯಾಗಿರುವ ಅಪರಿಚಿತ ವಾಹನ ಬಂಟ್ವಾಳ : ಅಪರಿಚಿತ ವಾಹನವೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದು ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮಲ್‌ಕಟ್ಟೆ ಎಂಬಲ್ಲಿ ನಡೆದಿದೆ. ಗಾಯಗೊಂಡವರು ರಾಮಲ್‌ಕಟ್ಟೆ ನಿವಾಸಿ ಉಸ್ಮಾನ್ ಎಂದು ತಿಳಿದುಬಂದಿದ್ದು, ಗಂಭೀರವಾಗಿ ಗಾಯಗೊಂಡ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಸ್ಮಾನ್ ಅವರು ಅಂಗಡಿಯಿಂದ ಹಾಲು ತೆಗೆದುಕೊಂಡು ಮನೆಗೆ ಹೋಗುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸಂಪೂರ್ಣ ಜಖಂಗೊಂಡಿದ್ದು, ಸವಾರ ಉಸ್ಮಾನ್ ಅವರಿಗೆ ಗಂಭೀರ ಸ್ವರೂಪದ

ಬಂಟ್ವಾಳ : ಹಿಟ್‌ & ರನ್‌ ಅಪಘಾತದಲ್ಲಿ ಸ್ಕೂಟರ್‌ ಸವಾರನಿಗೆ ಗಂಭೀರ ಗಾಯ Read More »

ಸುಳ್ಯದ ವೈದ್ಯಾಧಿಕಾರಿ ರಾಜೀನಾಮೆ : ಸರ್ಕಾರದ ಮೇಲೆ ಮುಗಿಬಿದ್ದ ಬಿಜೆಪಿ

ಆರು ತಿಂಗಳಿಂದ ಸಂಬಳ ಸಿಗದೆ ಬೇಸತ್ತು ರಾಜೀನಾಮೆ ನೀಡಿರುವ ವೈದ್ಯಾಧಿಕಾರಿ ಬೆಂಗಳೂರು: ಆರು ತಿಂಗಳಿಂದ ಸಂಬಳ ಸಿಗದ ಹಿನ್ನೆಲೆಯಲ್ಲಿ ಸುಳ್ಯದ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಜೀನಾಮೆ ನೀಡಿರುವುದು ಸರ್ಕಾರವನ್ನು ಟೀಕಿಸಲು ವಿಪಕ್ಷಕ್ಕೆ ಇನ್ನೊಂದು ಅಸ್ತ್ರವಾಗಿದೆ. ರಾಜ್ಯಮಟ್ಟದಲ್ಲಿ ಈ ವಿಚಾರ ಚರ್ಚೆಯಾಗುತ್ತಿದೆ. ರಾಜ್ಯದ ಕಾಂಗ್ರೆಸ್‌ ಸರ್ಕಾರ ಸಂಪೂರ್ಣ ದಿವಾಳಿಯಾಗಿರುವುದಕ್ಕೆ ಸುಳ್ಯದ ವೈದ್ಯಾಧಿಕಾರಿ ರಾಜೀನಾಮೆಯೇ ಸಾಕ್ಷಿ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಟೀಕಿಸಿದ್ದಾರೆ. ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಸುಳ್ಯದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿ ಸರಿಯಾಗಿ

ಸುಳ್ಯದ ವೈದ್ಯಾಧಿಕಾರಿ ರಾಜೀನಾಮೆ : ಸರ್ಕಾರದ ಮೇಲೆ ಮುಗಿಬಿದ್ದ ಬಿಜೆಪಿ Read More »

ಸುಳ್ಯ: ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಲಾರಿ; ಚಾಲಕನಿಗೆ ಗಾಯ

ಸುಳ್ಯ : ಇಲ್ಲಿನ ಗೂನಡ್ಕ ಬಳಿ ನಿಂತಿದ್ದ ಮಾರುತಿ ಓಮ್ನಿ ಕಾರಿಗೆ ಗುದ್ದಿ ಲಾರಿ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡ ಘಟನೆ ಭಾನುವಾರ ನಡೆದಿದೆ. ಪೈಪ್‌ಗಳನ್ನು ಸಾಗಿಸುತ್ತಿದ್ದ ಲಾರಿ ಮಡಿಕೇರಿಯಿಂದ ಸುಳ್ಯ ಕಡೆಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಗೂನಡ್ಕ ಬಳಿ ಸುಳ್ಯದಿಂದ ಕಲ್ಲಗುಂಡಿ ಕಡೆಗೆ ಹೋಗುತ್ತಿದ್ದ ಓಮ್ನಿ ಕಾರಿಗೆ ಲಾರಿ ಡಿಕ್ಕಿ ಹೊಡೆದು ಲಾರಿ ಪಲ್ಟಿಯಾಗಿದೆ. ಓಮ್ನಿ ಕಾರು ಲಾರಿ ಅಡಿಯಲ್ಲಿ ಸಿಲುಕಿಕೊಂಡಿತ್ತು. ಆದರೆ, ಅಪಘಾತದ ಸಮಯದಲ್ಲಿ ಕಾರು ಚಾಲಕ ಹತ್ತಿರದ ಅಂಗಡಿಯಲ್ಲಿ ನಿಂತಿದ್ದರಿಂದ ಪಾರಾಗಿದ್ದಾರೆ.

ಸುಳ್ಯ: ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಲಾರಿ; ಚಾಲಕನಿಗೆ ಗಾಯ Read More »

ಹಾವು ಕಡಿತದಿಂದ ಮಹಿಳೆ ಸಾವು

ಬೆಳ್ತಂಗಡಿ: ಶಿಶಿಲ ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಹಿಳೆಯೊಬ್ಬರು ಹಾವಿನ ಕಡಿತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಡಿ. 21ರಂದು ನಡೆದಿದೆ. ಇಲ್ಲಿನ ಗುಡ್ಡೆತೋಟ ನಿವಾಸಿ ಪ್ರೇಮ ( ವ. 55) ಮೃತ ಮಹಿಳೆ. ಮಧ್ಯಾಹ್ನದ ವೇಳೆ ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಇವರಿಗೆ ನಾಗರಹಾವು ಕಡಿದಿದೆ. ಹಾವು ಕಡಿದ ತಕ್ಷಣ ಪುತ್ತೂರು ಸರ್ಕಾರಿ ಆಸ್ಪತ್ರೆಗೆಶೌರ್ಯ ವಿಪತ್ತು ತಂಡದ ಸದಸ್ಯರ ಸಹಾಯದೊಂದೊಂದಿಗೆ ಕರೆದೋಯ್ಯಲಾಯಿತಾದರೂ ವಿಷ ವಿಪರೀತ ಅವರಿಸಿರುವ ಕಾರಣ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಹಾವು ಕಡಿತದಿಂದ ಮಹಿಳೆ ಸಾವು Read More »

ಕೇಪು ಕೋಳಿಅಂಕ ಅಖಾಡಕ್ಕೆ ಬಿಜೆಪಿ ಎಂಟ್ರಿ : ರಾಜಕೀಯ ಮೇಲಾಟ

ಮಾಜಿ ಶಾಸಕರ ಸಹಿತ 27 ಮಂದಿಯ ವಿರುದ್ಧ ಕೇಸ್‌ ದಾಖಲು ವಿಟ್ಲ: ಕೇಪು ಉಳ್ಳಾಲ್ತಿ ಕಜಂಬು ಉತ್ಸವದಂಗವಾಗಿ ನಡೆಯುವ ಕೋಳಿಅಂಕದ ವಿವಾದ ಈಗ ರಾಜಕೀಯ ಮೇಲಾಟವಾಗಿ ಬದಲಾಗಿದೆ. ಶನಿವಾರ ಶಾಸಕ ಅಶೋಕ್‌ ರೈಯವರು ತಾನೇ ಮುಂದೆ ನಿಂತು ಕೋಳಿಅಂಕ ಮಾಡಿಸಿದ ಬಳಿಕ ಭಾನುವಾರ ಬಿಜೆಪಿಯವರು ಕೋಳಿಅಂಕ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಕೇಪು ಗ್ರಾಮದ ಮುರಳೀಧರ ರೈ ಎಂಬವರ ಗದ್ದೆಯಲ್ಲಿ ಭಾನುವಾರವೂ ಕೋಳಿಅಂಕ ನಡೆದಿದ್ದು, ಈ ಕೋಳಿಅಂಕಕ್ಕೆ ಬಿಜೆಪಿ ನಾಯಕರು ರಕ್ಷಣೆ ಕೊಟ್ಟಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮಾಜಿ

ಕೇಪು ಕೋಳಿಅಂಕ ಅಖಾಡಕ್ಕೆ ಬಿಜೆಪಿ ಎಂಟ್ರಿ : ರಾಜಕೀಯ ಮೇಲಾಟ Read More »

ಕುಕ್ಕೆ ಕಿರುಷಷ್ಠಿ ಉತ್ಸವಕ್ಕೆ ಅನ್ಯಧರ್ಮೀಯರನ್ನು ಆಹ್ವಾನಿಸಿರುವುದಕ್ಕೆ ಆಕ್ಷೇಪ

ಸರ್ಕಾರದ ಶಿಷ್ಟಾಚಾರದಂತೆ ಆಹ್ವಾನ ಪತ್ರದಲ್ಲಿ ಅನ್ಯಧರ್ಮದ ಜನಪ್ರತಿನಿಧಿಗಳ ಹೆಸರು ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರದಿಂದ ನಡೆಯಲಿರುವ ಕಿರುಷಷ್ಠಿ ಮಹೋತ್ಸವಕ್ಕೆ ಅನ್ಯಧರ್ಮೀಯರನ್ನು ಆಹ್ವಾನಿಸಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಇಂದಿನಿಂದ ಡಿ.26ರವರೆಗೆ ನಡೆಯಲಿರುವ ಕಿರುಷಷ್ಠಿ ಮಹೋತ್ಸವದ ಧರ್ಮಸಮ್ಮೇಳನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅತಿಥಿಗಳಾಗಿ ಶಿಷ್ಟಾಚಾರದಂತೆ ಅನ್ಯಧರ್ಮೀಯರನ್ನೂ ಆಹ್ವಾನಿಸಲಾಗಿದೆ. ಹಿಂದೂ ಧಾರ್ಮಿಕ ಕಾರ್ಯಕ್ರಮಕ್ಕೆ ಅನ್ಯಧರ್ಮೀಯರನ್ನು ಆಹ್ವಾನಿಸಿರುವುದು ಸರಿಯಲ್ಲ, ತಕ್ಷಣ ಅದನ್ನ ತಡೆಯಬೇಕೆಂದು ಕ್ಷೇತ್ರ ಸಂರಕ್ಷಣಾ ವೇದಿಕೆಯಿಂದ ಕ್ಷೇತ್ರದ ಆಡಳಿತಾಧಿಕಾರಿಗೆ ಮನವಿ ನೀಡಲಾಗಿದೆ. ಆಹ್ವಾನ ವಾಪಸ್ ಪಡೆಯದೇ ಇದ್ದರೆ ಡಿ.22ರಂದು ಆಡಳಿತ ಕಚೇರಿ

ಕುಕ್ಕೆ ಕಿರುಷಷ್ಠಿ ಉತ್ಸವಕ್ಕೆ ಅನ್ಯಧರ್ಮೀಯರನ್ನು ಆಹ್ವಾನಿಸಿರುವುದಕ್ಕೆ ಆಕ್ಷೇಪ Read More »

ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಪೊಲೀಸ್‌ ವಶ

ಜೇನುಕೃಷಿ ಕಲಿಸುವ ನೆಪದಲ್ಲಿ ಮನೆಗೆ ಕರೆದೊಯ್ದು ಅತ್ಯಾಚಾರ ಉಪ್ಪಿನಂಗಡಿ : ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದ ಫಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಬ್ದುಲ್ ಗಫೂರ್ ವಶವಾಗಿರುವ ಆರೋಪಿ. ಪ್ರಕರಣದ ದೂರುದಾರರಾದ ಬೆಳಗಾವಿ ಮೂಲದ ಮಹಿಳೆ ತನ್ನ ಗಂಡ ಹಾಗೂ ಅಪ್ರಾಪ್ತ ಪ್ರಾಯದ ಮಗಳೊಂದಿಗೆ ಕೆಲಸದ ನಿಮಿತ್ತ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದಾರೆ. ಆರೋಪಿ ಅಬ್ದುಲ್ ಗಫೂರ್ ಮಗಳಿಗೆ ಜೇನು ಕೃಷಿ ಕಲಿಸುತ್ತೇನೆಂದು ಹೇಳಿದ್ದು, ಅದರಂತೆ

ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಪೊಲೀಸ್‌ ವಶ Read More »

error: Content is protected !!
Scroll to Top