ದಕ್ಷಿಣ ಕನ್ನಡ

ಧರ್ಮಸ್ಥಳ ಪ್ರಕರಣ : ದಿಢೀರ್‌ ಎಂದು ಪ್ರಸ್ತಾವಕ್ಕೆ ಬಂದ ನಟನ ಸಹೋದರನ ಹೆಸರು

ಸುಜಾತ ಭಟ್‌ ಪ್ರಹಸನದಲ್ಲಿ ಖ್ಯಾತ ಖಳನಟ, ನಿರ್ದೇಶಕನ ಸಹೋದರನ ಹೆಸರು ಪ್ರಸ್ತಾಪ ಧರ್ಮಸ್ಥಳ : ಧರ್ಮಸ್ಥಳ ವಿರುದ್ಧದ ಷಡ್ಯಂತ್ರ ಪ್ರಕರಣದಲ್ಲಿ ಸುಜಾತಾ ಭಟ್ ಎಂಬ ವೃದ್ಧ ಮಹಿಳೆ ಸೃಷ್ಟಿಸಿದ ಅನನ್ಯ ಭಟ್ ಕಟ್ಟುಕತೆ ಪ್ರಹಸನದಲ್ಲಿ ದಿಢೀರ್‌ ಎಂದು ಖ್ಯಾತ ನಟನೊಬ್ಬನ ಸಹೋದರನ ಹೆಸರು ಪ್ರಸ್ತಾವಕ್ಕೆ ಬಂದಿರುವುದು ಕುತೂಹಲ ಮೂಡಿಸಿದೆ. ದಕ್ಷಿಣ ಭಾರತದ ಖ್ಯಾತ ನಟ, ಖಳನಾಯಕ ಹಾಗೂ ನಿರ್ದೇಶಕನ ಸಹೋದರ ಹೆಸರು ಈಗ ಧರ್ಮಸ್ಥಳ ಪ್ರಕರಣಕ್ಕೆ ತಳಕು ಹಾಕಿಕೊಂಡಿದೆ ಎನ್ನಲಾಗಿದೆ. ಶೀಘ್ರದಲ್ಲೇ ಎಸ್ಐಟಿ ಅವರಿಗೆ ನೋಟಿಸ್ ನೀಡುವ […]

ಧರ್ಮಸ್ಥಳ ಪ್ರಕರಣ : ದಿಢೀರ್‌ ಎಂದು ಪ್ರಸ್ತಾವಕ್ಕೆ ಬಂದ ನಟನ ಸಹೋದರನ ಹೆಸರು Read More »

ಸ್ಪೀಕರ್‌ ಖಾದರ್‌ ಇನ್ನು ಡಾಕ್ಟರ್‌ ಖಾದರ್‌

ಬೆಂಗಳೂರು ವಿವಿಯಿಂದ ಖಾದರ್‌ಗೆ ಗೌರವ ಡಾಕ್ಟರೇಟ್‌ ಘೋಷಣೆ ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ 60ನೇ ವಾರ್ಷಿಕ ಘಟಿಕೋತ್ಸವದಲ್ಲಿ ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಸಹಿತ ಮೂವರು ಗೌರವ ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ. ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಸಮಾಜ ಸೇವಕ ಡಿ. ಮಾದೇಗೌಡ ಹಾಗೂ ಜೆ.ಪಿ. ಅಗ್ರಿ ಜೆನೆಟಿಕ್ಸ್ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿರುವ ಡಾ.ಟಿ.ಬಿ.ಪ್ರಸನ್ನ ಗೌರವ ಡಾಕ್ಟರೇಟ್ ಪದವಿ ಪಡೆಯುವ ಇನ್ನಿಬ್ಬರು ಸಾಧಕರಾಗಿದ್ದಾರೆ. ಅ.8ರಂದು ಪೂರ್ವಾಹ್ನ 11.30ಕ್ಕೆ ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಸೆಂಟ್ರಲ್ ಕಾಲೇಜು

ಸ್ಪೀಕರ್‌ ಖಾದರ್‌ ಇನ್ನು ಡಾಕ್ಟರ್‌ ಖಾದರ್‌ Read More »

ಅಬ್ದುಲ್‌ ರಹಿಮಾನ್‌ ಕೊಲೆ ಆರೋಪಿಗಳ ವಿರುದ್ಧ ಕೋಕಾ ಅನ್ವಯ

ಸೆರೆಯಾಗಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳ ವಿರುದ್ಧ ಕೋಕಾ ಕೇಸ್‌ ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಳತ್ತಮಜಲು ಎಂಬಲ್ಲಿ ಕಳೆದ ಮೇ 27ರಂದು ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಸಂಘಟಿತ ಅಪರಾಧ ತಡೆ ಕಾಯ್ದೆ (ಕೋಕಾ) ಅಡಿ ಕೇಸ್‌ ದಾಖಲಿಸಿಕೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಎಸ್‌ಪಿ ಡಾ.ಅರುಣ್‌ ಕೆ. ತಿಳಿಸಿದ್ದಾರೆ. ದೀಪಕ್, ಚಿಂತನ್, ಪೃಥ್ವಿರಾಜ್ ಜೋಗಿ, ಸುಮಿತ್ ಬಿ.ಆಚಾರ್ಯ, ವಿ.ರವಿರಾಜ ಮೂಲ್ಯ, ಅಭಿನ್ ರೈ, ತೇಜಾಕ್ಷ, ರವಿಸಂಜಯ್ ಜಿ.ಎಸ್, ಶಿವಪ್ರಸಾದ್ ತುಂಬೆ,

ಅಬ್ದುಲ್‌ ರಹಿಮಾನ್‌ ಕೊಲೆ ಆರೋಪಿಗಳ ವಿರುದ್ಧ ಕೋಕಾ ಅನ್ವಯ Read More »

ಹೆಚ್ಚು ಲಾಭ ಗಳಿಸುವ ಹೂಡಿಕೆ ನಂಬಿ 42.50 ಲ.ರೂ. ಕಳೆದುಕೊಂಡ ವ್ಯಕ್ತಿ

ವಾಟ್ಸ್‌ಆ್ಯಪ್‌ ಲಿಂಕ್‌ ಕಳುಹಿಸಿ ವಂಚನೆ ಮಂಗಳೂರು: ಹೂಡಿಕೆ ಮಾಡಿದರೆ ಹೆಚ್ಚು ಲಾಭ ಗಳಿಸುವ ಲಿಂಕ್‌ ನಂಬಿ ವ್ಯಕ್ತಿಯೊಬ್ಬರು ಬರೋಬ್ಬರಿ 42.50 ಲಕ್ಷ ರೂ. ಕಳೆದುಕೊಂಡಿದ್ದಾರೆ. ಅಪರಿಚಿತ ಸಂಖ್ಯೆಯಿಂದ ವಾಟ್ಸ್‌ಆ್ಯಪ್‌ಗೆ ಬಂದ ಲಿಂಕ್ ಕ್ಲಿಕ್ ಮಾಡಿ 42.50 ಲಕ್ಷ ರೂ. ಕಳೆದುಕೊಂಡ ಬಗ್ಗೆ ಅವರು ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಜು.13ರಂದು ಪ್ರಿಯಾ ಅಗರ್ವಾಲ್ ಎಂಬ ಹೆಸರಿನ ಅಪರಿಚಿತ ವ್ಯಕ್ತಿಯು ಹೂಡಿಕೆ ಬಗ್ಗೆ ಮಾಹಿತಿ ಇರುವ ಲಿಂಕ್ ತನಗೆ ಕಳುಹಿಸಿದ್ದರು. ಅದನ್ನು ಕ್ಲಿಕ್ ಮಾಡಿ ನೋಡಿದ ಬಳಿಕ

ಹೆಚ್ಚು ಲಾಭ ಗಳಿಸುವ ಹೂಡಿಕೆ ನಂಬಿ 42.50 ಲ.ರೂ. ಕಳೆದುಕೊಂಡ ವ್ಯಕ್ತಿ Read More »

ಬಂಟ್ವಾಳ : ರಿಕ್ಷಾ ಡಿಕ್ಕಿ ಹೊಡೆದು ಪಾದಚಾರಿ ಸಾವು

ಬಂಟ್ವಾಳ : ರಸ್ತೆ ದಾಟುವ ವೇಳೆ ರಿಕ್ಷಾ ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಅಮ್ಟೂರು ಕ್ರಾಸ್‌ನಲ್ಲಿ ನಡೆದಿದೆ. ಸಜೀಪ ಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ಲೋಕೇಶ್ ಮೂಲ್ಯ (44) ಮೃತ ದುರ್ದೈವಿ. ಲೋಕೇಶ್ ಅವರು ಕಲ್ಲಡ್ಕದ ನಾಯರ ಪೆಟ್ರೋಲ್ ಪಂಪ್‌ನ ಮುಂಭಾಗದಲ್ಲಿ ರಸ್ತೆ ದಾಟುವ ವೇಳೆ ಅತಿವೇಗದಿಂದ ಬಂದ ರಿಕ್ಷಾ ಡಿಕ್ಕಿ ಹೊಡೆದು ಚಾಲಕನ ನಿಯಂತ್ರಣ ಕಳೆದುಕೊಂಡು ಬಳಿಕ ಪಲ್ಟಿಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲೋಕೇಶ್ ಅವರನ್ನು ಮಂಗಳೂರು ಖಾಸಗಿ

ಬಂಟ್ವಾಳ : ರಿಕ್ಷಾ ಡಿಕ್ಕಿ ಹೊಡೆದು ಪಾದಚಾರಿ ಸಾವು Read More »

ಧರ್ಮಸ್ಥಳ ಪ್ರಕರಣ : ಯೂಟ್ಯೂಬರ್‌ಗಳಿಗೆ ಎಸ್‌ಐಟಿಯಿಂದ ಮತ್ತೆ ನೋಟಿಸ್‌ ಜಾರಿ

ಸಮೀರ್‌ ಎಂಡಿ ಸಹಿತ ಯೂಟ್ಯೂಬರ್‌ಗಳಿಗೆ ಮತ್ತೆ ಸಂಕಷ್ಟ ಧರ್ಮಸ್ಥಳ : ಧರ್ಮಸ್ಥಳ ಪ್ರಕರಣದ ಬೇಕಾಬಿಟ್ಟಿ ವೀಡಿಯೋಗಳನ್ನು ಮಾಡಿ ಹರಿಬಿಟ್ಟಿರುವ ಯೂಟ್ಯೂಬರ್‌ಗಳಿಗೆ ಮತ್ತೆರ ಸಂಕಷ್ಟ ಎದುರಾಗಿದೆ. ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೊಗಳನ್ನು ತಯಾರಿಸಿದ ಹಲವಾರು ಯೂಟ್ಯೂಬರ್‌ಗಳಿಗೆ ಮತ್ತೊಮ್ಮೆ ನೋಟಿಸ್ ಜಾರಿಗೊಳಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಈ ಬೆಳವಣಿಗೆಯಿಂದ ಯೂಟ್ಯೂಬರ್‌ಗಳ ಸಂಕಷ್ಟ ಮುಗಿಯುವ ಲಕ್ಷಣಗಳು ಸದ್ಯಕ್ಕೆ ಕಾಣಿಸುತ್ತಿಲ್ಲ. ವಿವಾದಿತ ಯೂಟ್ಯೂಬರ್ ಸಮೀರ್ ಎಂ.ಡಿ ಸೇರಿದಂತೆ ಐದಕ್ಕೂ ಹೆಚ್ಚು ಯೂಟ್ಯೂಬರ್‌ಗಳಿಗೆ ನೋಟಿಸ್ ಹೋಗಿದ್ದು, ಅವರು ಬೆಳ್ತಂಗಡಿ

ಧರ್ಮಸ್ಥಳ ಪ್ರಕರಣ : ಯೂಟ್ಯೂಬರ್‌ಗಳಿಗೆ ಎಸ್‌ಐಟಿಯಿಂದ ಮತ್ತೆ ನೋಟಿಸ್‌ ಜಾರಿ Read More »

ಗಣತಿ ಕರ್ತವ್ಯ ತಪ್ಪಿಸಿದರೆ ಶಿಸ್ತುಕ್ರಮ : ಜಿಲ್ಲಾಧಿಕಾರಿ ಎಚ್ಚರಿಕೆ

ಮಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯವನ್ನು ನಿರ್ವಹಿಸಲು ದ.ಕ. ಜಿಲ್ಲಾಡಳಿತದಿಂದ ಮಂಗಳೂರು ತಾಲೂಕಿನಲ್ಲಿ 1714 ಗಣತಿದಾರರನ್ನು ನೇಮಕ ಮಾಡಲಾಗಿದ್ದು, ಇದುವರೆಗೆ 425 ಗಣತಿದಾರರು ಸಮೀಕ್ಷೆ ಕಾರ್ಯಕ್ಕೆ ಹಾಜರಾಗದೆ ಕರ್ತವ್ಯ ಲೋಪ ತೋರಿಸಿರುವುದನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ತಿಳಿಸಿದ್ದಾರೆ. ಜಿಲ್ಲೆಯಾದ್ಯಂತ ಗಣತಿದಾರರು ಪ್ರತಿಯೊಂದು ಮನೆಗೆ ಭೇಟಿ ನೀಡಿ ಸಮೀಕ್ಷೆ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ. ಈ ಗಣತಿ ಕಾರ್ಯವನ್ನು ಸರ್ಕಾರ ನಿಗದಿಪಡಿಸಿ ಆದೇಶಿಸಿದಂತೆ ಅಕ್ಕೋಬರ್

ಗಣತಿ ಕರ್ತವ್ಯ ತಪ್ಪಿಸಿದರೆ ಶಿಸ್ತುಕ್ರಮ : ಜಿಲ್ಲಾಧಿಕಾರಿ ಎಚ್ಚರಿಕೆ Read More »

ಬಂಟ್ವಾಳ : ಗೋ ಹತ್ಯೆ ಮಾಡಿದ ಆರೋಪಿಯ ಮನೆ ಮುಟ್ಟುಗೋಲು

ಅಕ್ರಮ ಕಸಾಯಿಖಾನೆ ಪ್ರಕರಣದಲ್ಲಿ ಮನೆಯನ್ನು ಜಪ್ತಿ ಮಾಡಿದ ಅಧಿಕಾರಿಗಳು ಬಂಟ್ವಾಳ : ಬಂಟ್ವಾಳ ಗ್ರಾಮಾಂತರ ಪೊಲೀಸ್ ಪೊಲೀಸ್ ಠಾಣಾ ವ್ಯಾಪ್ತಿಯ ಮಾರಿಪಳ್ಳ ಸಮೀಪದ ಪಾಡಿ ಎಂಬಲ್ಲಿ ಅಕ್ರಮ ಕಸಾಯಿಖಾನೆ ನಡೆಸಿದ ಆರೋಪದಲ್ಲಿ ಆರೋಪಿಯ ಮನೆ/ಕಸಾಯಿಖಾನೆಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ದ.ಕ. ಜಿಲ್ಲೆಯಲ್ಲಿ ಹೀಗೆ ಮನೆ/ಕಸಾಯಿಖಾನೆ ಮುಟ್ಟುಗೋಲು ಹಾಕಿಕೊಂಡ ಮೊಪದಲ ಪ್ರಕರಣ ಇದು ಎನ್ನಲಾಗಿದೆ. ಪುದು ಗ್ರಾಮದ ಪಾಡಿ ನಿವಾಸಿ ಹಸನಬ್ಬ ಎಂಬಾತನಿಗೆ ಸೇರಿದ ಮನೆಯನ್ನು ಅಕ್ರಮ ಕಸಾಯಿಖಾನೆ ನಡೆಸಿದ ಆರೋಪದಲ್ಲಿ ಜಪ್ತಿ ಮಾಡಿ ಸರ್ಕಾದದ ವಶಕ್ಕೆ ಪಡೆಯಲಾಗಿದೆ. ಹಸನಬ್ಬ

ಬಂಟ್ವಾಳ : ಗೋ ಹತ್ಯೆ ಮಾಡಿದ ಆರೋಪಿಯ ಮನೆ ಮುಟ್ಟುಗೋಲು Read More »

ಕಲಾಕ್ಷೇತ್ರದ ಸಾಧನೆಗೆ ಮುಂಬೈಯಲ್ಲಿ ಗೌರವಾರ್ಪಣೆ ಪಡೆದ ಅಶ್ವಥ್ ಎನ್ ಪುತ್ತೂರು

ಕಲಾಕ್ಷೇತ್ರದ ಕಲಾವಿದನ ಸಾಧನೆಯನ್ನು ಗುರುತಿಸಿ ಮುಂಬೈ ಚಾರ್ ಕೋಪ್ ಕನ್ನಡಿಗರ ಬಗಳ ಕಾಂದಿವಲಿ(ರಿ.) ಇವರಿದ ನಟ ರಂಗಭೂಮಿ ಕಲಾವಿದ ನಿರ್ದೇಶಕ ಮಚ್ಚಿಮಲೆ ನಿವಾಸಿ ಅಶ್ವಥ್ ಎನ್ ಪುತ್ತೂರು ಇವರಿಗೆ ಮುಂಬೈ ಯಲ್ಲಿ ಗೌರವಾರ್ಪಣೆ ನೀಡಿದರು. ಏಳು ಬೀಳುವಿನ ಜೊತೆ ಜೊತೆ ಸಾಕಷ್ಟು ಕನಸುಗಳನ್ನು ಕಾಣುತ್ತಾ, ಸಾಧನೆಯೇ ನನ್ನ ಹಾದಿ ಎಂದು ತಿಳಿದು. ಹೊಸ ಹೊಸ ಯೋಜನೆಗಳನ್ನು ರೂಪಿಸಿ, ಬರಹ, ನಟನೆ, ನಿರ್ದೇಶನ, ಹಾಡುಗಾರಿಕೆಯಲ್ಲಿಯೂ ತನ್ನದೇ ಆದ ಛಾಪು ಮೂಡಿಸಿದ ಪುತ್ತೂರಿನ ಪ್ರತಿಭೆ ಇವರು. ಇತರರಿಗೆ ಪ್ರೇರಣಾತ್ಮಕವಾಗಿ ಜೀವಿಸಿದಲ್ಲದೆ

ಕಲಾಕ್ಷೇತ್ರದ ಸಾಧನೆಗೆ ಮುಂಬೈಯಲ್ಲಿ ಗೌರವಾರ್ಪಣೆ ಪಡೆದ ಅಶ್ವಥ್ ಎನ್ ಪುತ್ತೂರು Read More »

ಟೈಲರ್‌ ಅಂಗಡಿಗೆ ನುಗ್ಗಿದ ಕಾರು : ಅಪಾರ ಹಾನಿ

ಸುಳ್ಯ : ಅಡ್ಡ ಬಂದ ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರು ನೇರವಾಗಿ ಅಂಗಡಿಯೊಳಗೆ ಘಟನೆ ಸುಳ್ಯ ಅಂಬೆಟಡ್ಕದಲ್ಲಿ ನಿನ್ನೆ ಸಂಭವಿಸಿದೆ. ಕೆರ್ಪಳ ಹೇಮನಾಥ್ ಎಂಬವರು ಚಲಾಯಿಸುತ್ತಿದ್ದ ಕಾರು ಎನ್ನಲಾಗಿದ್ದು, ಕಾರು ನುಗ್ಗಿ ಬಂದ ಟೈಲರ್‌ ಅಂಗಡಿಯ ಒಳಗಿನ ವಸ್ತುಗಳು, ಟೈಲರ್ ಮಿಷನ್, ವಸ್ತ್ರಗಳಿಗೆ ಸಂಪೂರ್ಣ ಹಾನಿಯಾಗಿದೆ. ಮಧ್ಯಾಹ್ನದ ವೇಳೆ ಊಟದ ಸಮಯವಾದ ಕಾರಣ ಅಂಗಡಿಯ ಮಾಲಕಿ ಊಟಕ್ಕೆ ತೆರಳಿದ್ದು, ಸಿಬ್ಬಂದಿ ಅಂಗಡಿಯ ಹಿಂಭಾಗ ಇದ್ದ ಕಾರಣ ದೊಡ್ಡ ಅನಾಹುತ ತಪ್ಪಿದೆ. ಸ್ಥಳದಲ್ಲಿ ಹೆಚ್ಚಿನ ಜನರು

ಟೈಲರ್‌ ಅಂಗಡಿಗೆ ನುಗ್ಗಿದ ಕಾರು : ಅಪಾರ ಹಾನಿ Read More »

error: Content is protected !!
Scroll to Top