ದಕ್ಷಿಣ ಕನ್ನಡ

ಡಿ.16 : ಧರ್ಮಸ್ಥಳದಲ್ಲಿ ಮಹಿಳಾ ನ್ಯಾಯ ಸಮಾವೇಶ

ಕೊಂದವರು ಯಾರು ಅಭಿಯಾನ ಸಮಿತಿಯಿಂದ ಮೌನ ಮೆರವಣಿಗೆ ಮಂಗಳೂರು: ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅತ್ಯಾಚಾರ, ಕೊಲೆ, ಅಸಹಜ ಸಾವುಗಳಿಗೆ ಕಾರಣ ಯಾರು ಎಂದು ಪತ್ತೆಹಚ್ಚಲು ಒತ್ತಾಯಿಸಿ ವಿವಿಧ ಮಹಿಳಾ ಸಂಘಟನೆಗಳ ಸಹಭಾಗಿತ್ವದಲ್ಲಿ ಕೊಂದವರು ಯಾರು ಅಭಿಯಾನ ಸಮಿತಿಯ ವತಿಯಿಂದ ಮಹಿಳೆಯರ ಮೌನ ಮೆರವಣಿಗೆ ಹಾಗೂ ಮಹಿಳಾ ನ್ಯಾಯ ಸಮಾವೇಶ ಡಿ.16ರಂದು ಬೆಳ್ತಂಗಡಿಯಲ್ಲಿ ನಡೆಯಲಿದ್ದು, ರಾಜ್ಯದ ವಿವಿಧ ಭಾಗಗಳಿಂದ 1,000ದಷ್ಟು ಮಹಿಳೆಯರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಅಭಿಯಾನದ ಪ್ರಮುಖರಾದ ಜ್ಯೋತಿ ಎ. ತಿಳಿಸಿದ್ದಾರೆ. ಶುಕ್ರವಾರ […]

ಡಿ.16 : ಧರ್ಮಸ್ಥಳದಲ್ಲಿ ಮಹಿಳಾ ನ್ಯಾಯ ಸಮಾವೇಶ Read More »

ಜಾತಕ ತೋರಿಸಲು ಬಂದ ಯುವತಿಯ ಬೆನ್ನುಬಿದ್ದ ಜ್ಯೋತಿಷಿ!

ಮದುವೆಯಾಗುವಂತೆ ಒತ್ತಾಯಿಸಿ ಮಾಟಮಂತ್ರ ಮಾಡಿದ ಜ್ಯೋತಿಷಿಯನ್ನು ಬಂಧಿಸಿದ ಪೊಲೀಸರು ಬೆಳ್ತಂಗಡಿ: ಜಾತಕ ತೋರಿಸಲು ಬಂದ ಯುವತಿಯೋರ್ವಳ ಹಿಂದೆ ಬಿದ್ದ ಜ್ಯೋತಿಷಿಯೊಬ್ಬ ಯುವತಿಗೆ ಮದುವೆಯಾಗುವಂತೆ ನಿರಂತರ ಕಿರುಕುಳ ನೀಡಿದ್ದಲ್ಲದೆ ಅವರ ಮನೆಗೆ ತೆರಳಿ ವಾಮಾಚಾರ ಮಾಡಿದ್ದು ಈ ಬಗ್ಗೆ ಪೊಲೀಸರಿಗೆ ಮನೆಯವರು ದೂರು ನೀಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರಿನಲ್ಲಿ ನಡೆದಿದೆ. ಮೂಲತಃ ಶಿರಸಿ ಮೂಲದವನಾದ, ಸ್ಥಳೀಯ ದೇವಸ್ಥಾನದಲ್ಲಿ ಅರ್ಚಕನಾಗಿ ಕೆಲಸ ಮಾಡಿಕೊಂಡಿದ್ದ ಶೇಷಾದ್ರಿ ಎಂಬಾತನೇ ಆರೋಪಿ ಜ್ಯೋತಿಷಿಯಾಗಿದ್ದಾನೆ. ಸಂತ್ರಸ್ತ ಯುವತಿಯ ಮನೆಯವರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು

ಜಾತಕ ತೋರಿಸಲು ಬಂದ ಯುವತಿಯ ಬೆನ್ನುಬಿದ್ದ ಜ್ಯೋತಿಷಿ! Read More »

ಸುಳ್ಯ : ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಯುವಕ ಸಾವು

ಸುಳ್ಯ : ಮೈಸೂರಿನ ಮಳವಳ್ಳಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸುಳ್ಯದ ಯುವಕ ಮೃತಪಟ್ಟ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಸುಳ್ಯ ಉಬರಡ್ಕ ಮಿತ್ತೂರು ಗ್ರಾಮದ ಕಲ್ಟಾರ್ ನಿವಾಸಿ ಶೇಷಪ್ಪ ನಾಯ್ಕ ಎಂಬವರ ಪುತ್ರ ದೀಕ್ಷಿತ್ (25) ಮೃತಪಟ್ಟವರು. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ದೀಕ್ಷಿತ್ ಬೆಂಗಳೂರಿನಿಂದ ಕಂದಡ್ಕದ ಕಲ್ಟಾರಿನ ತನ್ನ ಮನೆಗೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಮೈಸೂರು ಸಮೀಪದ ಮಳವಳ್ಳಿಯಲ್ಲಿ ಅಪರಿಚಿತ ವಾಹನವೊಂದು ಬೈಕ್‌ಗೆ ಢಿಕ್ಕಿ ಹೊಡೆದು ಪರಾರಿಯಾಗಿದೆ. ಗಂಭೀರ ಗಾಯಗೊಂಡ ದೀಕ್ಷಿತ್‌ರನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ

ಸುಳ್ಯ : ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಯುವಕ ಸಾವು Read More »

ಉಪ್ಪಿನಂಗಡಿ : ಅಂಗಡಿ ಡ್ರಾಯರ್‌ನಿಂದ 5 ಲ.ರೂ. ಕದ್ದಿದ್ದ ಆರೋಪಿಗಳು ಸೆರೆ

ಉಪ್ಪಿನಂಗಡಿ : ಇಲ್ಲಿನ ಗಾಂಧಿಪಾರ್ಕ್ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿರುವ ಅಡಿಕೆ ಮತ್ತು ಕಾಡುತ್ಪತ್ತಿ ಖರೀದಿ ಕೇಂದ್ರದೊಳಗೆ ಹಾಡಹಗಲೇ ನುಗ್ಗಿ ಡ್ರಾಯರ್‌ನಲ್ಲಿದ್ದ 5 ಲಕ್ಷ ರೂ ಹಾಗೂ ದಾಖಲೆ ಪತ್ರ, ಚೆಕ್‌ಗಳಿದ್ದ ಬ್ಯಾಗ್ ಅನ್ನು ದೋಚಿದ ಪ್ರಕರಣದ ಆರೋಪಿಗಳು ಸೆರೆಯಾಗಿದ್ದಾರೆ. ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಈ ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಕಸ್ಟಡಿಗೆ ತೆಗೆದುಕೊಂಡು ಪ್ರಕರಣ ದಾಖಲಿಸಿದ್ದಾರೆ. ಮೂಡಿಗೆರೆ ನಿವಾಸಿಗಳಾದ ಮುಹಮ್ಮದ್ ಶಹಬಾದ್ (26) ಮತ್ತು ಜಂಶೀದ್ (25) ಬಂಧಿತ ಆರೋಪಿಗಳು.

ಉಪ್ಪಿನಂಗಡಿ : ಅಂಗಡಿ ಡ್ರಾಯರ್‌ನಿಂದ 5 ಲ.ರೂ. ಕದ್ದಿದ್ದ ಆರೋಪಿಗಳು ಸೆರೆ Read More »

ಉಪ್ಪಿನಂಗಡಿ: ಕಾರು-ಬೈಕ್‌ ಡಿಕ್ಕಿಯಾಗಿ ಸವಾರನಿಗೆ ಗಂಭೀರ ಗಾಯ

ಉಪ್ಪಿನಂಗಡಿ : ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಗುರುವಾರ ರಾತ್ರಿ ನೆಕ್ಕಿಲಾಡಿಯಲ್ಲಿ ನಡೆದಿದೆ. ಮಠ ನಿವಾಸಿ ಬದ್ರುದ್ದೀನ್ ಎಂಬವರು ಗಾಯಗೊಂಡವರು. ಬದ್ರುದ್ದೀನ್ ಕೂಟೇಲಿನಲ್ಲಿರುವ ಹೋಟೆಲೊಂದರಲ್ಲಿ ಕೆಲಸಕ್ಕಿದ್ದರೆನ್ನಲಾಗಿದೆ. ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಪ್ಪಿನಂಗಡಿಯಿಂದ ನೆಕ್ಕಿಲಾಡಿಗೆ ರಾಂಗ್ ಸೈಡ್‌ನಲ್ಲಿ ಸಾಗುತ್ತಿದ್ದಾಗ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರು ಢಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಬದ್ರುದ್ದೀನ್‌ಗೆ ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲಾಗಿದೆ.

ಉಪ್ಪಿನಂಗಡಿ: ಕಾರು-ಬೈಕ್‌ ಡಿಕ್ಕಿಯಾಗಿ ಸವಾರನಿಗೆ ಗಂಭೀರ ಗಾಯ Read More »

ಧರ್ಮಸ್ಥಳ ಷಡ್ಯಂತ್ರದ ಹಿಂದೆ ಅರ್ಬನ್‌ ನಕ್ಸಲರ ಕೈವಾಡ : ಬಿಜೆಪಿ ಆರೋಪ

ಫಾಸ್ಟ್‌ಟ್ರ್ಯಾಕ್‌ ಕೋರ್ಟ್‌ನಲ್ಲಿ ವಿಚಾರಣೆ ನಡೆಸಲು ಒತ್ತಾಯ ಬೆಳಗಾವಿ : ಧರ್ಮಸ್ಥಳ ಪ್ರಕರಣ ಹಿಂದೆ ಷಡ್ಯಂತ್ರವಿದೆ ಎಂದು ನಾವು ಮೊದಲೇ ಹೇಳಿದ್ದೆವು. ಅದು ಈಗ ನಿಜವಾಗಿದ್ದು, ಸತ್ಯಕ್ಕೆ ಜಯವಾಗಿದೆ. ಈ ಬುರುಡೆ ಗ್ಯಾಂಗ್ ಹಿಂದೆ ಯಾರಿದ್ದಾರೆ ಎಂಬುದು ಹೊರಬರಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ. ಸುವರ್ಣ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಧರ್ಮಸ್ಥಳ ವಿಚಾರದಲ್ಲಿ ಅರ್ಬನ್ ನಕ್ಸಲ್ ಕೈವಾಡವಿದೆ ಎಂದು ಆರೋಪಿಸಿದ್ದಾರೆ. ಆರು ಜನ ಸೇರಿ ಷಡ್ಯಂತ್ರ ಮಾಡಿದ್ದಾರೆ ಎಂದು ಬಿಜೆಪಿ

ಧರ್ಮಸ್ಥಳ ಷಡ್ಯಂತ್ರದ ಹಿಂದೆ ಅರ್ಬನ್‌ ನಕ್ಸಲರ ಕೈವಾಡ : ಬಿಜೆಪಿ ಆರೋಪ Read More »

ದ್ವೇಷ ಭಾಷಣ ಪ್ರಕರಣ : ಡಾ.ಪ್ರಭಾಕರ್‌ ಭಟ್‌ಗೆ ಜಾಮೀನು ನೀಡಿದ ನ್ಯಾಯಾಲಯ

ಉಪ್ಪಳಿಗೆ ದೀಪೋತ್ಸವ ಕಾರ್ಯಕ್ರಮದಲ್ಲಿ ಕೋಮು ಪ್ರಚೋದಕ ಭಾಷಣ ಮಾಡಿದ ಆರೋಪ ಪುತ್ತೂರು: ಪುತ್ತೂರು ತಾಲೂಕಿನ ಉಪ್ಪಳಿಗೆಯ ದೀಪೋತ್ಸವ ಕಾರ್ಯಕ್ರಮದಲ್ಲಿ ಕೋಮು ಪ್ರಚೋದಕ, ಮಹಿಳೆಯರ ಘನತೆಗೆ ಧಕ್ಕೆ ತರುವ ಹಾಗೂ ಸಾರ್ವಜನಿಕ ಅಶಾಂತಿ ಉಂಟು ಮಾಡುವ ಭಾಷಣ ಮಾಡಿರುವ ಪ್ರಕರಣದಲ್ಲಿ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿದೆ. ಜಾಮೀನು ಕೋರಿ ಡಾ.ಪ್ರಭಾಕರ ಭಟ್‌ ಸಲ್ಲಿಸಿದ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ಮಂಜೂರುಗೊಳಿಸಿದೆ. ಉಪ್ಪಳಿಗೆಯಲ್ಲಿ

ದ್ವೇಷ ಭಾಷಣ ಪ್ರಕರಣ : ಡಾ.ಪ್ರಭಾಕರ್‌ ಭಟ್‌ಗೆ ಜಾಮೀನು ನೀಡಿದ ನ್ಯಾಯಾಲಯ Read More »

ದೇವಸ್ಥಾನದ ಎದುರು ದಫ್‌ ಪ್ರದರ್ಶನಕ್ಕೆ ವಿರೋಧ

ಹಿಂದೂ ಸಂಘಟನೆಗಳ ಆಕ್ರೋಶದ ಬಳಿಕ ಕಾರ್ಯಕ್ರಮ ಕೈಬಿಟ್ಟ ಆಯೋಜಕರು ಸುಳ್ಯ: ಸುಳ್ಯ ತಾಲೂಕಿನ ಚೆನ್ನಕೇಶವ ದೇವಸ್ಥಾನದ ಮುಂಭಾಗ ಆಯೋಜಿಸಲಾಗಿದ್ದ ದಫ್ ಪ್ರದರ್ಶನಕ್ಕೆ ಭಾರಿ ವಿರೋಧ ವ್ಯಕ್ತವಾದ ಬಳಿಕ ಹಿಂದೂಪರ ಸಂಘಟನೆಗಳ ಒತ್ತಡಕ್ಕೆ ಮಣಿದ ಆಯೋಜಕರು ದಫ್ ಪ್ರದರ್ಶನವನ್ನು ಕೈಬಿಟ್ಟಿದ್ದಾರೆ. ಕೆವಿಜಿ ಸುಳ್ಯ ಹಬ್ಬ ಸಮಾಜ ಸಂಘದ ವತಿಯಿಂದ ಸುಳ್ಯ ತಾಲೂಕಿನ ಚೆನ್ನಕೇಶವ ದೇವಸ್ಥಾನದ ಮುಂಭಾಗ ಡಿಸೆಂಬರ್‌ 25 ಮತ್ತು 26ರಂದು ಕೆವಿಜಿ ಸುಳ್ಯ ಹಬ್ಬ-2025 ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮಂಗಳೂರು ಇವರ

ದೇವಸ್ಥಾನದ ಎದುರು ದಫ್‌ ಪ್ರದರ್ಶನಕ್ಕೆ ವಿರೋಧ Read More »

ಅಪಘಾತದಲ್ಲಿ ಯುವ ಉದ್ಯಮಿ ಸಾವು

ನಸುಕಿನ ವೇಳೆ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತ ಮಂಗಳೂರು: ಮಂಗಳೂರಿನ ಹೆಸರಾಂತ ಗೌಜಿ ಇವೆಂಟ್‌ನ ಮಾಲಕ ಅಭಿಷೇಕ್ ಎಂಬವರು ಪಡುಬಿದ್ರಿ ಹೆದ್ದಾರಿಯಲ್ಲಿ ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ. ನಸುಕಿನ ಜಾವ 2.20ರ ಸುಮಾರಿಗೆ ಪಡುಬಿದ್ರಿ ಹೆದ್ದಾರಿಯ ಬಳಿ ಅಪಘಾತ ಸಂಭವಿಸಿದೆ. ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡ ಅಭಿಷೇಕ್ ಅವರನ್ನು ಮುಕ್ಕ ಶ್ರೀನಿವಾಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಅಭಿಷೇಕ್‌ ಕೊನೆಯುಸಿರೆಳೆದಿದ್ದಾರೆ.

ಅಪಘಾತದಲ್ಲಿ ಯುವ ಉದ್ಯಮಿ ಸಾವು Read More »

ದ.ಕ. ಜಿಲ್ಲೆಯ ಕಾಡಂಚು ಪ್ರದೇಶಗಳಲ್ಲಿ ಕಾಡಾನೆ ದಾಳಿ: ಅರಣ್ಯ ಸಚಿವರನ್ನು ತರಾಟೆಗೆ ತೆಗೆದುಕೊಂಡ ಕಿಶೋರ್ ಕುಮಾರ್

ಪುತ್ತೂರು: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಉಡುಪಿ–ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಜಿಲ್ಲೆಯ ಕಾಡಂಚಿನ ಜನರನ್ನು ದಿನದಿಂದ ದಿನಕ್ಕೆ ಸಂಕಷ್ಟಕ್ಕೆ ಒಳಪಡಿಸುತ್ತಿರುವ ಕಾಡಾನೆ ದಾಳಿಯ ಗಂಭೀರ ಸಮಸ್ಯೆ ಕುರಿತು ಅರಣ್ಯ ಸಚಿವರನ್ನು ಪ್ರಶ್ನಿಸಿದರು. ಕಳೆದ ಅಧಿವೇಶನದಲ್ಲಿ ಸಚಿವರು ದಕ್ಷಿಣ ಕನ್ನಡದಲ್ಲಿ ಎಲಿಫಂಟ್ ಟಾಸ್ಕ್ ಫೋರ್ಸ್ (ETF) ಸ್ಥಾಪಿಸುವುದಾಗಿ ಹಾಗೂ ಜಿಲ್ಲೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸುವುದಾಗಿ ಘೋಷಣೆ ಮಾಡಿದ್ದರೂ ಕೂಡ, ಇವತ್ತು ತನಕ ಯಾವುದೇ ಭೇಟಿ ನಡೆದಿಲ್ಲ

ದ.ಕ. ಜಿಲ್ಲೆಯ ಕಾಡಂಚು ಪ್ರದೇಶಗಳಲ್ಲಿ ಕಾಡಾನೆ ದಾಳಿ: ಅರಣ್ಯ ಸಚಿವರನ್ನು ತರಾಟೆಗೆ ತೆಗೆದುಕೊಂಡ ಕಿಶೋರ್ ಕುಮಾರ್ Read More »

error: Content is protected !!
Scroll to Top