ದಕ್ಷಿಣ ಕನ್ನಡ

ಬಜಪೆ : ನೈತಿಕ ಪೊಲೀಸ್‌ಗಿರಿ ಆರೋಪದಲ್ಲಿ ಇಬ್ಬರ ಬಂಧನ

ಗೋಮಾಂಸ ಸಾಗಿಸುತ್ತಿದ್ದ ಬೈಕ್‌ ಅಡ್ಡಗಟ್ಟಿ ಹಲ್ಲೆಗೈದ ಪ್ರಕರಣ ಮಂಗಳೂರು: ಬಜಪೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಸಂಭವಿಸಿದ ಘಟನೆಯೊಂದಕ್ಕೆ ಸಂಬಂಧಿಸಿ ನೈತಿಕ ಪೊಲೀಸ್‌ಗಿರಿ ನಡೆಸಿದ ಆರೋಪದಡಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಎಡಪದವು ನಿವಾಸಿಗಳಾದ ಸುಮಿತ್ ಭಂಡಾರಿ (21) ಹಾಗೂ ರಜತ್ ನಾಯ್ಕ್ (30) ಎಂದು ಗುರುತಿಸಲಾಗಿದೆ. ಗೋಮಾಂಸ ಸಾಗಿಸುತ್ತಿದ್ದ ಅಬ್ದುಲ್ ಸತ್ತಾರ್ ಹಾಗೂ ಅವರ 11 ವರ್ಷದ ಪುತ್ರಿಯ ಮೇಲೆ ಹಲ್ಲೆ ನಡೆಸಿದ ಆರೋಪ ಅವರ ಮೇಲೆ ಇದೆ. ಅಬ್ದುಲ್ ಸತ್ತಾರ್ ಎಂಬವರು ತಮ್ಮ ಪುತ್ರಿಯೊಂದಿಗೆ […]

ಬಜಪೆ : ನೈತಿಕ ಪೊಲೀಸ್‌ಗಿರಿ ಆರೋಪದಲ್ಲಿ ಇಬ್ಬರ ಬಂಧನ Read More »

ಬೈಕ್‌ ಮೇಲೆ ಕಾಡುಕೋಣ ದಾಳಿ : ಸವಾರನಿಗೆ ಗಂಭೀರ ಗಾಯ

ಬೆಳ್ತಂಗಡಿ : ಸಂಚರಿಸುತ್ತಿದ್ದ ಬೈಕ್ ಮೇಲೆ ಕಾಡುಕೋಣ ದಾಳಿ ಮಾಡಿದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿಯ ಲಾಯಿಲದಲ್ಲಿ ಸಂಭವಿಸಿದೆ. ಬೈಕ್‌ ಸವಾರನನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕೂಡೇಲು ನಿವಾಸಿ ವೆಂಕಪ್ಪ ಪೂಜಾರಿಯವರ ಮಗ ಸುಕೇಶ್(31) ಎಂಬವರು ಬೈಕ್ ಶೋರೂಂನಲ್ಲಿ ಕೆಲಸ ಮಾಡುತ್ತಿದ್ದು, ಎಂದಿನಂತೆ ಬೆಳ್ತಂಗಡಿಯಿಂದ ಕೆಲಸ ಮುಗಿಸಿ ಡಿ.26ರಂದು ರಾತ್ರಿ ಸುಮಾರು 8.45ಕ್ಕೆ ಮನೆಗೆ ಬೈಕ್‌ನಲ್ಲಿ ಬರುತ್ತಿದ್ದಾಗ ಲಾಯಿಲ ಗ್ರಾಮದ ಅಲೆಕ್ಕಿ ರಸ್ತೆಯಲ್ಲಿ ಏಕಾಏಕಿ ಕಾಡುಕೋಣ

ಬೈಕ್‌ ಮೇಲೆ ಕಾಡುಕೋಣ ದಾಳಿ : ಸವಾರನಿಗೆ ಗಂಭೀರ ಗಾಯ Read More »

ಧರ್ಮಸ್ಥಳ ಪ್ರಕರಣ : ವರದಿ ಮೇಲಿನ ತೀರ್ಪು ಮತ್ತೆ ಮುಂದೂಡಿಕೆ

ವರದಿಯ ಕೆಲವು ಭಾಗಗಳನ್ನು ಜಯಂತ್‌ಗೆ ನೀಡಿದ ನ್ಯಾಯಾಲಯ ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ಬಗ್ಗೆ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ಕೋರ್ಟ್‌ಗೆ ಸಲ್ಲಿಸಿದ್ದ ವರದಿಯ ಬಗ್ಗೆ ಡಿ.26ಕ್ಕೆ ನಿಗದಿಪಡಿಸಲಾಗಿದ್ದ ಆದೇಶವನ್ನು ಡಿ.29ಕ್ಕೆ ಬೆಳ್ತಂಗಡಿ ನ್ಯಾಯಾಲಯ ಮುಂದೂಡಿದೆ ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆ ನ.20ರಂದು ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ವಿಠಲ್ ಗೌಡ, ಸುಜಾತ ಭಟ್ ವಿರುದ್ಧ ಸುಳ್ಳು ಸಾಕ್ಷಿ ವರದಿಯನ್ನು ಸೆಕ್ಷನ್‌ 215ರ ಅಡಿಯಲ್ಲಿ ಸಲ್ಲಿಸಿದ್ದರು. ಈ ವರದಿಯ ಬಗ್ಗೆ ಬೆಳ್ತಂಗಡಿ

ಧರ್ಮಸ್ಥಳ ಪ್ರಕರಣ : ವರದಿ ಮೇಲಿನ ತೀರ್ಪು ಮತ್ತೆ ಮುಂದೂಡಿಕೆ Read More »

ಇಂದು ಮಂಗಳೂರು ಕಂಬಳ

9ನೇ ವರ್ಷಕ್ಕೆ 9 ವಿಶಿಷ್ಟ ಕಾರ್ಯಕ್ರಮಗಳ ಆಕರ್ಷಣೆ ಮಂಗಳೂರು: ಸಂಸದ ಕ್ಯಾ.ಬ್ರಿಜೇಶ್ ಶೆಟ್ಟಿಯವರ ಸಾರಥ್ಯದಲ್ಲಿ ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ನಡೆಯುವ 9ನೇ ವರ್ಷದ ಮಂಗಳೂರು ಕಂಬಳ ಇಂದು ವಿಶೇಷ ಆಕರ್ಷಣೆಯೊಂದಿಗೆ ನಡೆಯಲಿದೆ. ಶನಿವಾರ ಆಯೋಜಿಸಲಾಗಿರುವ ಈ ವರ್ಷದ ಕಂಬಳದಲ್ಲಿ ಒಟ್ಟು 9 ವಿಭಿನ್ನ ಚಟುವಟಿಕೆಗಳನ್ನು ರೂಪಿಸಲಾಗಿದೆ. ತುಳು ಸಂಸ್ಕೃತಿ ಹಾಗೂ ಕಂಬಳದ ಮಹತ್ವವನ್ನು ನಗರ ಪ್ರದೇಶದಲ್ಲಿ ಬೆಳೆದ ಯುವ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ 9 ವರ್ಷಗಳ ಹಿಂದೆ ಸಣ್ಣ ಪ್ರಯತ್ನವಾಗಿ ಆರಂಭಗೊಂಡ ಮಂಗಳೂರು ಕಂಬಳ

ಇಂದು ಮಂಗಳೂರು ಕಂಬಳ Read More »

ಕಡಬ : ಬಾರ್‌ ಮಾಲೀಕನಿಗೆ 6.5 ಲ.ರೂ. ವಂಚಿಸಿ ಮ್ಯಾನೇಜರ್‌ ಪಲಾಯನ

ಕಡಬ : ಬಾರ್ ಸಿಬ್ಬಂದಿಯೋರ್ವ ವ್ಯವಹಾರದಲ್ಲಿ ವಂಚಿಸಿ ಪರಾರಿಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಳಿನೆಲೆ ಗ್ರಾಮದ ವಿಶಾಲ್ ಸ್ಟೀಫನ್ (25) ಎಂಬವರು ಠಾಣೆಗೆ ದೂರು ನೀಡಿದ್ದಾರೆ. ಸ್ಟೀಫನ್ ಅವರ ತಾಯಿ ನೆಟ್ಟಣ ಎಂಬಲ್ಲಿ ಬಾರ್ ಹೊಂದಿದ್ದು, ಬಾರ್‌ನಲ್ಲಿ ಕಡಬದ ಹುಂಚಪ್ಪಡಿ ನಿವಾಸಿ ಹರ್ಷಿತ್ ಬಿ.ಕೆ. ಎಂಬಾತ ಸುಮಾರು 7 ವರ್ಷಗಳಿಂದ ಕೆಲಸ ಮಾಡುತ್ತಿದ್ದ. ಆತನೇ ನಿತ್ಯದ ಹಣಕಾಸಿನ ವ್ಯವಹಾರ, ಸ್ಟಾಕ್ ನಿರ್ವಹಣೆ ಹಾಗೂ ಮೇಲ್ವಿಚಾರಣೆ ನಿರ್ವಹಿಸುತ್ತಿದ್ದ. ಡಿ.21ರಂದು ಸ್ಟೀಫನ್ ಬಾರಿನ ವಹಿವಾಟು ಬಗ್ಗೆ

ಕಡಬ : ಬಾರ್‌ ಮಾಲೀಕನಿಗೆ 6.5 ಲ.ರೂ. ವಂಚಿಸಿ ಮ್ಯಾನೇಜರ್‌ ಪಲಾಯನ Read More »

ಚಾಲಕನಿಗೆ ಎದೆನೋವು : ಪ್ರಯಾಣಿಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅಪಘಾತ

ಉಪ್ಪಿನಂಗಡಿ: ಬಸ್ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಾಗ ಪ್ರಯಾಣಿಕರೋರ್ವರ ಸಮಯ ಪ್ರಜ್ಞೆಯಿಂದ ಭಾರಿ ಅಪಘಾತ ತಪ್ಪಿಸಿ ಬಸ್ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ಉಪ್ಪಿನಂಗಡಿಯ ಪೆರ್ನೆ ಎಂಬಲ್ಲಿ ನಡೆದಿದೆ. ಗುರುವಾರ ಸುಬ್ರಹ್ಮಣ್ಯದಿಂದ ಕಾರವಾರಕ್ಕೆ ಕೆಎಸ್ಸಾರ್ಟಿಸಿ ಬಸ್ ಚಾಲನೆ ಮಾಡುತ್ತಿದ್ದ ಚಾಲಕ ಗೋವಿಂದ ನಾಯ್ಕ ಎಂಬವರಿಗೆ ಪೆರ್ನೆ ಗ್ರಾಮದ ಕರ್ವೇಲು ಎಂಬಲ್ಲಿ ಸಮೀಪಿಸುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿದ್ದು, ಬಸ್ ಚಾಲನೆಯಲ್ಲಿ ವ್ಯತ್ಯಾಸ ಕಂಡು ಬಂದಿತ್ತು. ಇದನ್ನು ಗಮನಿಸಿದ ಬಸ್ಸಿನಲ್ಲಿದ್ದ ವಕೀಲ ನೆಲ್ಯಾಡಿಯ ಇಸ್ಮಾಯಿಲ್ ಅವರ ಪುತ್ರ ಸಲ್ಮಾನುಲ್‌ ಫಾರಿಸ್ ತಕ್ಷಣವೇ

ಚಾಲಕನಿಗೆ ಎದೆನೋವು : ಪ್ರಯಾಣಿಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅಪಘಾತ Read More »

ಬಂಟ್ವಾಳ : ಹಿಟ್‌ & ರನ್‌ ಅಪಘಾತದಲ್ಲಿ ಭಾಗಿಯಾಗಿದ್ದ ರಿಕ್ಷಾ ವಶ

ಸ್ಕೂಟರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ರಿಕ್ಷಾ ಬಂಟ್ವಾಳ : ಹಿಟ್‌ & ರನ್‌ ಅಪಘಾತದಲ್ಲಿ ಭಾಗಿಯಾಗಿದ್ದ ರಿಕ್ಷಾವನ್ನು ಬಂಟ್ವಾಳ ಟ್ರಾಫಿಕ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಾಮಲ್ ಕಟ್ಟೆ ನಿವಾಸಿ ಉಸ್ಮಾನ್ ಎಂಬವರ ಸ್ಕೂಟರ್‌ಗೆ ಅಪರಿಚಿತ ರಿಕ್ಷಾ ಡಿಕ್ಕಿ ಹೊಡೆದು ಬಳಿಕ ಪರಾರಿಯಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದರು. ಆದರೆ ಎರಡು ದಿನ ಹಿಟ್ ರನ್ ಆಗಿದ್ದ ರಿಕ್ಷಾ ಪತ್ತೆಯಾಗಿರಲಿಲ್ಲ. ರಿಕ್ಷಾ ಡಿಕ್ಕಿಯಾಗಿ ಪರಾರಿಯಾಗಿರುವುದನ್ನು

ಬಂಟ್ವಾಳ : ಹಿಟ್‌ & ರನ್‌ ಅಪಘಾತದಲ್ಲಿ ಭಾಗಿಯಾಗಿದ್ದ ರಿಕ್ಷಾ ವಶ Read More »

ಕೌಟುಂಬಿಕ ಜಗಳ : ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಮೂಡುಬಿದಿರೆ : ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಯುವಕನ ಮೃತದೇಹ ಬುಧವಾರ ಸಂಜೆ ನೆತ್ತೋಡಿ ಎಂಬಲ್ಲಿ ಪತ್ತೆಯಾಗಿದೆ. ಕಾರ್ಕಳ ತಾಲೂಕು ಮಿಯ್ಯಾರು ಗ್ರಾಮದ ಲತೀಶ ಪೂಜಾರಿ (42) ಆತ್ಮಹತ್ಯೆ ಮಾಡಿಕೊಂಡವರು. ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ವಿದೇಶದಲ್ಲಿದ್ದ ಲತೀಶ ಪೂಜಾರಿ ಇತ್ತೀಚೆಗಷ್ಟೇ ಊರಿಗೆ ಬಂದಿದ್ದರು. ಭಾನುವಾರ ಮೂಡುಬಿದಿರೆಯ ಹೊಸಂಗಡಿಯಲ್ಲಿರುವ ಹೆಂಡತಿ ಬಂದಿದ್ದರೆನ್ನಲಾಗಿದೆ. ಯಾವುದೋ ವಿಷಯಕ್ಕೆ ಜಗಳ ನಡೆದಿತ್ತೆನ್ನಲಾಗಿದ್ದು ಮಿಯ್ಯಾರಿನಲ್ಲಿರುವ ತನ್ನ ಅಣ್ಣನ ಮೊಬೈಲ್‌ಗೆ ಮೆಸೇಜ್ ಮಾಡಿ ಈ ಬಗ್ಗೆ ಹೇಳಿಕೊಂಡಿದ್ದರು. ಅಣ್ಣ ಸರಿಮಾಡುವ, ಆತುರದ ನಿರ್ಧಾರ ಬೇಡ ಎಂದು

ಕೌಟುಂಬಿಕ ಜಗಳ : ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ Read More »

ಬಜಪೆ ಪಟ್ಟಣ ಪಂಚಾಯತ್ ಚುನಾವಣೆ : ಬಿಜೆಪಿ ಜಯಭೇರಿ

19ರಲ್ಲಿ 11 ಸ್ಥಾನ ಗೆದ್ದು ನಿಚ್ಚಳ ಬಹುಮತ ಪಡೆದ ಬಿಜೆಪಿ ಮಂಗಳೂರು : ತಾಲೂಕಿನ ಬಜಪೆ ಪಟ್ಟಣ ಪಂಚಾಯತ್‌ಗೆ ಡಿ.21ರಂದು ನಡೆದ ಚುನಾವಣೆಯಲ್ಲಿ ಬಿಜೆಪಿಗೆ ನಿಚ್ಚಳ ಬಹುಮತ ಲಭಿಸಿದೆ.ಒಟ್ಟು 19 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 11 ಸ್ಥಾನಗಳನ್ನು ಗೆದ್ದುಕೊಂಡು ಬೀಗಿದೆ. ಕಾಂಗ್ರೆಸ್-4, ಎಸ್‌ಡಿಪಿಐ-3 ಮತ್ತು ಪಕ್ಷೇತರರು 1 ಸ್ಥಾನಗಳನ್ನು ಪಡೆದಿದ್ದಾರೆ.ಬುಧವಾರ ಮಂಗಳೂರು ಮಿನಿ ವಿಧಾನಸೌಧದಲ್ಲಿ ಮಾತಗಳ ಎಣಿಕೆ ನಡಯಿತು. ಬಜಪೆಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಿದ ಬಳಿಕ ನಡೆದ ಮೊದಲ ಚುನಾವಣೆ ಇದಾಗಿತ್ತು. ವಿಜೇತರ ವಿವರ:ವಾರ್ಡ್ 1.

ಬಜಪೆ ಪಟ್ಟಣ ಪಂಚಾಯತ್ ಚುನಾವಣೆ : ಬಿಜೆಪಿ ಜಯಭೇರಿ Read More »

ಷೇರು ಮಾರ್ಕೆಟಿಂಗ್ ಹೂಡಿಕೆಯ ನೆಪದಲ್ಲಿ 85.68 ಲ.ರೂ. ಮೋಸ

ಮಂಗಳೂರು : ಷೇರು ಮಾರ್ಕೆಟಿಂಗ್ ಹೂಡಿಕೆಯ ನೆಪದಲ್ಲಿ ವ್ಯಕ್ತಿಯೊಬ್ಬರಿಗೆ ಆನ್‌ಲೈನ್ ಮೂಲಕ ಬರೋಬ್ಬರಿ 85,68,387 ರೂ. ವಂಚನೆ ಮಾಡಿರುವ ಪ್ರಕರಣವೊಂದು ಮಂಗಳೂರಿನಲ್ಲಿ ಬೆಳಕಿಗೆ ಬಂದಿದ್ದು, ಈ ಕುರಿತು ಸೆನ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದ, ಪ್ರಸ್ತುತ ನಿರುದ್ಯೋಗಿಯಾಗಿರುವ ವ್ಯಕ್ತಿ ಮೋಸ ಹೋಗಿದ್ದಾರೆ. ಇನ್‌ಸ್ಟಾಗ್ರಾಂ ನೋಡುತ್ತಿರುವಾಗ ಷೇರು ಮಾರುಕಟ್ಟೆ ಆನ್‌ಲೈನ್ ಟ್ರೇಡಿಂಗ್ ಕ್ಲಾಸ್‌ಗೆ ಲಿಂಕ್ ಮೂಲಕ ಸೇರ್ಪಡೆಗೊಂಡೆ. ಅ.31ರಂದು ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ತನ್ನ ಮೊಬೈಲ್ ನಂಬರ್ ಸೇರ್ಪಡೆಯಾಗಿದೆ. ಬಳಿಕ ಗ್ರೂಪ್‌ನಲ್ಲಿದ್ದ ಕಾವ್ಯ ಎಂಬಾಕೆ ಅಸಿಸ್ಟೆಂಟ್ ಆಗಿ

ಷೇರು ಮಾರ್ಕೆಟಿಂಗ್ ಹೂಡಿಕೆಯ ನೆಪದಲ್ಲಿ 85.68 ಲ.ರೂ. ಮೋಸ Read More »

error: Content is protected !!
Scroll to Top