ದಕ್ಷಿಣ ಕನ್ನಡ

ಕಟೀಲು ದೇವಳದಲ್ಲಿ ಮಹಿಳೆಯರಿಗೆ ದೇವರ ಶೇಷವಸ್ತ್ರ ವಿತರಣೆ

ನವರಾತ್ರಿ ಅಂಗವಾಗಿ 25 ಸಾವಿರಕ್ಕೂ ಅಧಿಕ ಮಹಿಳೆಯರಿಗೆ ಸೀರೆ ವಿತರಣೆ ಮಂಗಳೂರು : ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಶನಿವಾರ ಲಲಿತಾ ಪಂಚಮಿಯ ದಿನ ಮಹಿಳೆಯರಿಗೆ ಶೇಷವಸ್ತ್ರವಾಗಿ 25 ಸಾವಿರಕ್ಕೂ ಹೆಚ್ಚು ಸೀರೆಗಳನ್ನು ವಿತರಿಸಲಾಯಿತು. ಸಂಜೆ ಮೂರರಿಂದಲೇ ಭಕ್ತರು ಸರದಿಯಲ್ಲಿ ನಿಂತಿದ್ದು, ಸಂಜೆ 5 ಗಂಟೆಯಿಂದ ಆರಂಭವಾದ ವಿತರಣೆ ತಡರಾತ್ರಿವರೆಗೆ ನಡೆಯಿತು. ಈ ವರ್ಷದಲ್ಲಿ ಒಟ್ಟಾರೆ ಸುಮಾರು 44 ಸಾವಿರ ಸೀರೆಗಳನ್ನು ವಿತರಿಸಲು ದೇವಳ ಪೂರ್ವಸಿದ್ಧತೆ ಮಾಡಿಕೊಂಡಿತ್ತು. ಭಕ್ತರ ಸಾಲಿನಲ್ಲಿ ನೂಕುನುಗ್ಗಲು ತಪ್ಪಿಸಲು […]

ಕಟೀಲು ದೇವಳದಲ್ಲಿ ಮಹಿಳೆಯರಿಗೆ ದೇವರ ಶೇಷವಸ್ತ್ರ ವಿತರಣೆ Read More »

ಫ್ಲ್ಯಾಟ್‌ನಲ್ಲಿ 12.26 ಕೆಜಿ ಗಾಂಜಾ ಪತ್ತೆ : 11 ವಿದ್ಯಾರ್ಥಿಗಳು ಸೆರೆ

ಮಂಗಳೂರಿನಲ್ಲಿ ಮಾರಾಟ ಮಾಡುವ ಸಲುವಾಗಿ ಗಾಂಜಾ ತಂದು ಸಂಗ್ರಹಿಸಿಟ್ಟಿದ್ದ ವಿದ್ಯಾರ್ಥಿಗಳು ಮಂಗಳೂರು: ಗಾಂಜಾ ಸಂಗ್ರಹಿಸಿದ ಮತ್ತು ಮಾರಾಟ ಮಾಡಲು ಯತ್ನಿಸಿದ ಆರೋಪದ ಮೇಲೆ ಕೇರಳದ 11 ವಿದ್ಯಾರ್ಥಿಗಳನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಬಂಧಿತ ವಿದ್ಯಾರ್ಥಿಗಳೆಲ್ಲ ಮಂಗಳೂರಿನ ಪ್ರತಿಷ್ಠಿತ ಕಾಲೇಜೊಂದರ ಎರಡನೇ ವರ್ಷದ ಬಿಬಿಎ ವಿದ್ಯಾರ್ಥಿಗಳು. ಎಲ್ಲ ಆರೋಪಿಗಳು ಕಾಲೇಜು ಅಧ್ಯಯನಕ್ಕಾಗಿ ನಗರದಲ್ಲಿ ತಂಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆದ್ವೈತ್‌ ಶ್ರೀಕಾಂತ್, ಮುಹಮ್ಮದ್ ಆಫ್ಸಿನ್, ಮುಹಮ್ಮದ್ ಸ್ಮಾನೀದ್, ನಿಬಿನ್ ಟಿ ಕುರಿಯನ್, ಮುಹಮ್ಮದ್ ಕೆ.ಕೆ,

ಫ್ಲ್ಯಾಟ್‌ನಲ್ಲಿ 12.26 ಕೆಜಿ ಗಾಂಜಾ ಪತ್ತೆ : 11 ವಿದ್ಯಾರ್ಥಿಗಳು ಸೆರೆ Read More »

ಚಿನ್ನದ ಅಂಗಡಿಯ ಕೆಲಸಗಾರನನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನದ ಗಟ್ಟಿ ದರೋಡೆ

ಮಂಗಳೂರು ನಗರದಲ್ಲಿ ನಡೆದ ಬೆಚ್ಚಿಬೀಳಿಸುವ ದರೋಡೆ ಕೃತ್ಯ ಮಂಗಳೂರು : ಚಿನ್ನದ ಅಂಗಡಿಯ ಕೆಲಸಗಾರನೊಬ್ಬನಿಂದ ಸುಮಾರು 1.5 ಕೋಟಿ ರೂ. ಬೆಲೆಗಾಳುವ ಚಿನ್ನದ ಗಟ್ಟಿಯನ್ನು ದರೋಡೆ ಮಾಡಿರುವ ಆಘಾತಕಾರಿ ಘಟನೆ ಸೆ.26ರಂದು ರಾತ್ರಿ ಮಂಗಳೂರು ನಗರದ ಮಧ್ಯಭಾಗದಲ್ಲೆ ನಡೆದಿದೆ. ನಗರದ ಹಂಪನಕಟ್ಟೆಯ ಚಿನ್ನದ ಅಂಗಡಿಯೊಂದರ ಕೆಲಸಗಾರ ಮುಸ್ತಫ ಎಂಬವರನ್ನು ದುಷ್ಕರ್ಮಿಗಳು ಅಪಹರಿಸಿ 1.5 ಕೋಟಿ ರೂ. ಮೌಲ್ಯದ 1,650 ಗ್ರಾಂ ಚಿನ್ನದ ಗಟ್ಟಿಯನ್ನು ದೋಚಿದ್ದು, ಈ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ.26ರಂದು ರಾತ್ರಿ 8.30ರ

ಚಿನ್ನದ ಅಂಗಡಿಯ ಕೆಲಸಗಾರನನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನದ ಗಟ್ಟಿ ದರೋಡೆ Read More »

ಸೆ.೨೯: ಎವಿಜಿ ಸೊಸೈಟಿಯ ಲೋಕಾರ್ಪಣೆ

ಎ.ವಿ.ಜಿ ಅಸೋಸಿಯೇಟ್ಸ್, ಎ.ವಿ.ಜಿ. ಕನ್ಸಕ್ಷನ್ಸ್, ಎ.ವಿ.ಜಿ. ಇಂಗ್ಲೀಷ್ ಮೀಡಿಯಂ ಸ್ಕೂಲ್‌ಗಳನ್ನು ಪುತ್ತೂರಿನಲ್ಲಿ ಸ್ಥಾಪಿಸಿ ಮುನ್ನಡೆಸುತ್ತಿರುವ ಆಡಳಿತ ಮಂಡಳಿಯಿಂದ ಸಹಕಾರಿ ಕ್ಷೇತ್ರಕ್ಕೊಂದು ಕೊಡುಗೆಯಾಗಿ ಇದೀಗ ದ.ಕ. ಜಿಲ್ಲಾ ಮಟ್ಟದ ಎ.ವಿ.ಜಿ. ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ ಸೊಸೈಟಿ ಲಿ. ದ.ಕ. ಎಂಬ ಸಂಸ್ಥೆಯು ಪುತ್ತೂರಿನ ನೆಲ್ಲಿಕಟ್ಟೆಯಲ್ಲಿ 29 ಸೆಪ್ಟೆಂಬರ್ 2025ನೆ ಸೋಮವಾರದಂದು ಲೋಕಾರ್ಪಣೆಗೊಳ್ಳುತ್ತಿದೆ. ತನ್ನ ಎಲ್ಲಾ ಸಂಸ್ಥೆಗಳ ಕಾರ್ಯಾಚರಣೆಯಲ್ಲಿ ರಾಷ್ಟ್ರೀಯತೆಯನ್ನು ಪ್ರಮುಖ ಮೌಲ್ಯವಾಗಿ ಅಳವಡಿಸಿಕೊಂಡಿರುವ ಆಡಳಿತ ಮಂಡಳಿಯು ತನ್ನ ನೂತನ ಸಹಕಾರಿ ಸಂಸ್ಥೆಯನ್ನು ‘ಸುಭದ್ರ ಭಾರತಕ್ಕಾಗಿ ಸಮರ್ಥ ಸಹಕಾರಿ ಸಂಸ್ಥೆ’

ಸೆ.೨೯: ಎವಿಜಿ ಸೊಸೈಟಿಯ ಲೋಕಾರ್ಪಣೆ Read More »

ಕಡಬ : 1.44 ಎಕ್ರೆ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಿದ ಅಧಿಕಾರಿಗಳು

ಅಡಿಕೆ, ಬಾಳೆ, ಗೇರು ಗಿಡಗಳನ್ನು ಕಿತ್ತುಹಾಕಿ ಅರಣ್ಯ ಸಸಿಗಳ ನಾಟಿ ಕಡಬ : ಅರಣ್ಯ ಇಲಾಖೆಯ ಜಾಗವನ್ನು ಅತಿಕ್ರಮಿಸಿ ಮಾಡಿದ್ದ ಕೃಷಿ ಬೆಳೆಯನ್ನು ಅರಣ್ಯ ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಮೇಲ್ಮನವಿ ಪ್ರಾಧಿಕಾರ ಮತ್ತು ಅರಣ್ಯ ಸಂರಕ್ಷಣಾಧಿಕಾರಿ ಮಂಗಳೂರು ವೃತ್ತದ ನಿರ್ದೇಶನದ ಮೇರೆಗೆ ಕಡಬ ತಾಲೂಕಿನ ಏನೆಕಲ್ಲು ಗ್ರಾಮದಲ್ಲಿ ಅತಿಕ್ರಮಣಗೊಂಡಿದ್ದ ಮೀಸಲು ಅರಣ್ಯ ಭೂಮಿಯನ್ನು ಅರಣ್ಯಾಧಿಕಾರಿಗಳು ಶುಕ್ರವಾರ ತೆರವುಗೊಳಿಸಿದ್ದಾರೆ. ಕುಮಾರ್ ಪಿ. ಎಂಬವರು ಏನೆಕಲ್ಲು ಗ್ರಾಮದಲ್ಲಿ 1.44 ಎಕರೆ ಮೀಸಲು ಅರಣ್ಯ ಪ್ರದೇಶವನ್ನು ಅತಿಕ್ರಮಿಸಿ ಕಟ್ಟಡ ನಿರ್ಮಿಸಿದ್ದು, ಕೃಷಿ ಚಟುವಟಿಕೆಗಳನ್ನು

ಕಡಬ : 1.44 ಎಕ್ರೆ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಿದ ಅಧಿಕಾರಿಗಳು Read More »

ಸೆ.29ರಂದು ವಿಚಾರಣೆಗೆ ಹಾಜರಾಗಲು ತಿಮರೋಡಿಗೆ ಕೊನೆಯ ನೋಟಿಸ್‌

ಬಂಧನ ಭೀತಿಯಲ್ಲಿ ತಲೆಮರೆಸಿಕೊಂಡಿರುವ ತಿಮರೋಡಿ ಧರ್ಮಸ್ಥಳ: ವಿಶೇಷ ತನಿಖಾ ತಂಡದ ಶೋಧದ ವೇಳೆ ಅಕ್ರಮವಾಗಿ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆ ಪ್ರಕರಣದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿಗೆ ಬೆಳ್ತಂಗಡಿ ಠಾಣೆಗೆ ವಿಚಾರಣೆಗಾಗಿ ಹಾಜರಾಗುವಂತೆ ಪೊಲೀಸರು ಮೂರನೇ ನೋಟಿಸ್‌ ಜಾರಿ ಮಾಡಿದ್ದಾರೆ. ಎರಡು ನೋಟಿಸ್‌ ಜಾರಿ ಮಾಡಿದ್ದರೂ ಈವರೆಗೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಮತ್ತೆ ಸೆಪ್ಟೆಂಬರ್‌ 26ರಂದು ತಿಮರೋಡಿ ಮನೆಗೆ ಬೆಳ್ತಂಗಡಿ ಪೊಲೀಸರು ಮೂರನೇ ನೋಟಿಸ್‌ ಜಾರಿ ಮಾಡಿದ್ದು, ಸೆಪ್ಟೆಂಬರ್‌ 29ಕ್ಕೆ ವಿಚಾರಣೆಗೆ ಹಾಜರಾಗುಂತೆ ನೋಟಿಸ್‌ನ್ನು ತಿಮರೋಡಿ

ಸೆ.29ರಂದು ವಿಚಾರಣೆಗೆ ಹಾಜರಾಗಲು ತಿಮರೋಡಿಗೆ ಕೊನೆಯ ನೋಟಿಸ್‌ Read More »

ಗಣತಿ ಕಾರ್ಯದ ಅವ್ಯವಸ್ಥೆ ಸರಿಪಡಿಸುವಂತೆ ಗಣತಿದಾರ ಶಿಕ್ಷಕರಿಂದ ಪುತ್ತೂರಿನ ಬಿ.ಇ.ಒ.ಗೆ ಮನವಿ

ಪುತ್ತೂರು: ರಾಜ್ಯಾದ್ಯಂತ ಆರಂಭಗೊಂಡ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಕೆಲವು ತಾಂತ್ರಿಕ ತೊಂದರೆಗಳು ಕಾಣಿಸಿಕೊಂಡಿದ್ದು ಸೆ.25ರಂದು ಪುತ್ತೂರು ತಾಲೂಕಿನಲ್ಲಿ ಶಿಕ್ಷಕರು ಗಣತಿ ಕಾರ್ಯಕ್ಕೆ ಹೋಗದೆ ಹಲವಾರು ಶಿಕ್ಷಕರು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮುಂದೆ ಹಾಜರಾಗಿ ತಮ್ಮ ಗಣತಿ ಕಾರ್ಯದಲ್ಲಿನ ಸಮಸ್ಯೆಗಳನ್ನು ಸರಿಪಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ.3 ದಿನಗಳಲ್ಲಿ ಸಮೀಕ್ಷೆಗೆ ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿರುವುದರಿಂದ ನಿರೀಕ್ಷಿತ ಪ್ರಮಾಣದಲ್ಲಿ ಸಮೀಕ್ಷೆ ಕಾರ್ಯ ನಡೆದಿಲ್ಲ. ಸಮೀಕ್ಷೆಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ರೂಪಿಸಿದ ಆ್ಯಪ್ಗೆ ಕಾಡುತ್ತಿರುವ ಸರ್ವರ್ ಸಮಸ್ಯೆ, ನೆಟ್ವರ್ಕ್ ಸಮಸ್ಯೆ,

ಗಣತಿ ಕಾರ್ಯದ ಅವ್ಯವಸ್ಥೆ ಸರಿಪಡಿಸುವಂತೆ ಗಣತಿದಾರ ಶಿಕ್ಷಕರಿಂದ ಪುತ್ತೂರಿನ ಬಿ.ಇ.ಒ.ಗೆ ಮನವಿ Read More »

ಸೆ.28-29: ಪುತ್ತೂರಿನಲ್ಲಿ ಪಿಲಿಗೊಬ್ಬು, ಫುಡ್ ಫೆಸ್ಟ್ ಸಂಭ್ರಮ

ಸಿನಿಮಾ ನಟ-ನಟಿಯರಿಂದ ಕಾರ್ಯಕ್ರಮಕ್ಕೆ ಮೆರುಗು ಪುತ್ತೂರು: ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದ್ದು ಸಮಾಜಮುಖಿ ಸೇವೆ ಮಾಡುತ್ತಿರುವ ಪುತ್ತೂರಿನ ವಿಜಯ ಸಾಮ್ರಾಟ್ ನೇತೃತ್ವದದಲ್ಲಿ ಸೆ.28ರಂದು ಪುತ್ತೂರುದ ಪಿಲಿಗೊಬ್ಬು ಸೀಸನ್ -3 ಕಾರ್ಯಕ್ರಮವು ಬಹಳ ವಿಜೃಂಭಣೆಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ. ಸೆ.27ರಂದು ಫುಡ್ ಫೆಸ್ಟ್‌ಗೆ ಚಾಲನೆ ನೀಡಲಾಗುವುದು. ಪತ್ರಿಕಾಗೋಷ್ಟಿಯಲ್ಲಿ ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ಇದರ ಸ್ಥಾಪಕ ಅಧ್ಯಕ್ಷರೂ ಮತ್ತು ಪುತ್ತೂರು ಪಿಲಿಗೊಬ್ಬು ಸಮಿತಿಯ ಗೌರವಾಧ್ಯಕ್ಷರಾಗಿರುವ ಸಹಜ್ ರೈ ಬಳಜ್ಜ ಅವರು ಮಾತನಾಡಿ, ಕಳೆದ ಎರಡು ವರ್ಷದಿಂದ

ಸೆ.28-29: ಪುತ್ತೂರಿನಲ್ಲಿ ಪಿಲಿಗೊಬ್ಬು, ಫುಡ್ ಫೆಸ್ಟ್ ಸಂಭ್ರಮ Read More »

ಅ.೧೦: ೨ ವರ್ಷಗಳ ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿ ಪ್ರದಾನ

ಪುತ್ತೂರು: ಕಡಲ ತೀರದ ಭಾರ್ಗವ ಡಾ. ಶಿವರಾಮಕಾರಂತ ಅವರ ೧೨೪ನೇ ಜನ್ಮದಿನೋತ್ಸವ ಹಾಗೂ ಕಾರಂತ ಬಾಲವನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಅ.೧೦ ರಂದು ಕಾರಂತರ ಕರ್ಮಭೂಮಿ ಪುತ್ತೂರಿನ ಪರ್ಲಡ್ಕದ ಬಾಲವನದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ೨೦೨೪ ಹಾಗೂ ೨೫ ಎರಡೂ ವರ್ಷಗಳ ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಶಾಸಕ ಅಶೋಕ್ ರೈ ತಿಳಿಸಿದರು.ಮಂಗಳವಾರ ಉಪವಿಭಾಗಾಧಿಕಾರಿ ಕಛೇರಿ ಸಭಾಂಗಣದಲ್ಲಿ ಡಾ. ಶಿವರಾಮ ಕಾರಂತರ ಜನ್ಮದಿನೋತ್ಸವ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಪೂರ್ವಭಾವಿ ಸಭೆಯ

ಅ.೧೦: ೨ ವರ್ಷಗಳ ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿ ಪ್ರದಾನ Read More »

ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್‌ ವಜಾ : ಸರ್ಕಾರದ ನಡೆಯ ಬಗ್ಗೆ ಜನರಿಗೆ ಅನುಮಾನ

ತನಿಖೆಗೆ ಅರ್ಹವಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದ್ದರೂ ಎಸ್‌ಐಟಿ ರಚನೆ ಮಾಡಿದ್ದೇಕೆ ಎಂಬ ಪ್ರಶ್ನೆ ಧರ್ಮಸ್ಥಳ: ಧರ್ಮಸ್ಥಳದ 1995ರಿಂದ 2004ರ ವರೆಗಿನ ಪ್ರಕರಣಗಳ ತನಿಖೆ ಕೋರಿ ಸುಪ್ರೀಂ ಕೋರ್ಟ್​ಗೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ದಾವೆಯನ್ನು (ಪಿಐಎಲ್‌) ಕಳೆದ ಮೇ 5ರಂದೇ ಸುಪ್ರೀಂ ಕೋರ್ಟ್‌ ವಜಾಗೊಳಿಸಿತ್ತು ಎಂಬ ವಿಚಾರ ಬಯಲಾದ ಬಳಿಕ ಬುರುಡೆ ಗ್ಯಾಂಗಿನ ಷಡ್ಯಂತ್ರಕ್ಕೆ ಇನ್ನಷ್ಟು ಸಾಕ್ಷಿ ಸಿಕ್ಕಂತಾಗಿದೆ. ಪಿಐಎಲ್‌ ವಜಾಗೊಂಡಿರುವ ವಿಷಯವನ್ನು ಮರೆಮಾಚಿ ಚಿನ್ನಯ್ಯನನ್ನು ಮುಂದಿಟ್ಟುಕೊಂಡು ಬುರುಡೆ ಗ್ಯಾಂಗ್‌ ಸರ್ಕಾರಕ್ಕೆ ತನಿಖೆ ಬಗ್ಗೆ ಮನವಿ ಮಾಡಿತ್ತು

ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್‌ ವಜಾ : ಸರ್ಕಾರದ ನಡೆಯ ಬಗ್ಗೆ ಜನರಿಗೆ ಅನುಮಾನ Read More »

error: Content is protected !!
Scroll to Top