ದಕ್ಷಿಣ ಕನ್ನಡ

ಫೆ.20: ಉಕ್ಕುಡ ಒತ್ತೆಸಾರು ಗೌಡರ ಕುಟುಂಬಸ್ಥರ ತರವಾಡು ಮನೆಯ ಜೀರ್ಣೋದ್ಧಾರ ಪೂರ್ವ ದೈವಗಳ ಬಾಲಾಲಯ ಪ್ರತಿಷ್ಠೆ

ವಿಟ್ಲ: ಉಕ್ಕುಡ ಒತ್ತೆಸಾರು ಗೌಡರ ಕುಟುಂಬಸ್ಥರ ತರವಾಡು ಮನೆಯ ಜೀರ್ಣೋದ್ಧಾರ ಪೂರ್ವ ದೈವಗಳ ಬಾಲಾಲಯ ಪ್ರತಿಷ್ಠಾ ಕಾರ್ಯಕ್ರಮ ಫೆ.20 ರಂದು ನಡೆಯಲಿದೆ. ಸುಮಾರು 300 ವರ್ಷಗಳ ಹಿಂದೆ ವಿಟ್ಲ ಅರಮನೆಯ ರಾಜರ ಆಳ್ವಿಕೆಯ ಕಾಲದಲ್ಲಿ ಜನರಿಗೆ ಹಾಗೂ ಕೃಷಿ ಬೆಳೆಗಳಿಗೆ ಪಕ್ಷಿ ಮೃಗಾದಿಗಳ ಉಪದ್ರವಗಳು ಜಾಸ್ತಿಯಾದಗ ಆಗಿನ ರಾಜರ ಸೂಚನೆ ಮೇರೆಗೆ ಒತ್ತೆಸಾರು ಕುಟುಂಬಸ್ಥರ ಹಿರಿಯರು ಹುಲಿ, ಹಂದಿ, ಪಕ್ಷಿ ಮೃಗಾದಿಗಳನ್ನು ಬೇಟೆಯಾಡಿ ಹಿಡಿದಿದ್ದರಿಂದ ರಾಜರಿಂದ ಪ್ರಶಸ್ತಿ ಲಭಿಸಿದ್ದು ಮತ್ತು ರಾಜರಿಂದ ಮಲರಾಯ, ಕಕ್ಕರಿ ಚಾಮುಂಡಿ ಎಂಬೀ […]

ಫೆ.20: ಉಕ್ಕುಡ ಒತ್ತೆಸಾರು ಗೌಡರ ಕುಟುಂಬಸ್ಥರ ತರವಾಡು ಮನೆಯ ಜೀರ್ಣೋದ್ಧಾರ ಪೂರ್ವ ದೈವಗಳ ಬಾಲಾಲಯ ಪ್ರತಿಷ್ಠೆ Read More »

ಅಕ್ರಮ ಮರಳುಗಾರಿಕೆ : ಇಬ್ಬರ ಬಂಧನ

ಬೆಳ್ತಂಗಡಿ: ಕರಂಬಾರು ಗ್ರಾಮದ ಬೊಟ್ಟೆಲ್ ಮಾರಿನಲ್ಲಿ ಫಲ್ಗುಣಿ ನದಿಯಿಂದ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ವೇಳೆ ವೇಣೂರು ಪೊಲೀಸರು ದಾಳಿ ಮಾಡಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವೇಣೂರು ಪೊಲೀಸ್ ಸಿಬಂದಿ ಬೀರೇಶ್ ಅವರು ಗಸ್ತು ತಿರುಗುತ್ತಿದ್ದ ಸಂದರ್ಭ ಬಂದ ಖಚಿತ ಮಾಹಿತಿಯಂತೆ ಕರಂಬಾರಿನ ಬೊಟ್ಟೆಲ್ ಮಾರಿನ ನದಿ ಕಿನಾರೆಗೆ ತೆರಳಿದಾಗ ಆರೋಪಿಗಳಾದ ವಸಂತ ಹಾಗೂ ರಮೇಶ ಅಕ್ರಮವಾಗಿ ಮರಳುಗಾರಿಕೆ ನಡೆಸಿ ಪಿಕಪ್ ವಾಹನಕ್ಕೆ ತುಂಬಿಸುತ್ತಿದ್ದು, ಪೊಲೀಸರನ್ನು ಕಂಡು ಪರಾರಿಯಾಗಿದ್ದಾರೆ. ಪಿಕಪ್ ವಾಹನದಲ್ಲಿ ಸುಮಾರು 1 ಯುನಿಟ್‌ನಷ್ಟು ಮರಳು

ಅಕ್ರಮ ಮರಳುಗಾರಿಕೆ : ಇಬ್ಬರ ಬಂಧನ Read More »

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಪಾತಕಿ ಸೆರೆ

ಕೊಲೆ, ಗ್ಯಾಂಗ್‌ರೇಪ್‌, ದರೋಡೆ ಸೇರಿ 26 ಪ್ರಕರಣಗಳಲ್ಲಿ ಭಾಗಿ ಮಂಗಳೂರು : ನಗರ ಪೊಲೀಸ್ ಕಮಿಷನರೇಟ್ ಮತ್ತು ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ವಿವಿಧ 26 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮತ್ತು 9 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಹಳೆಯಂಗಡಿಯ ಕೊಪ್ಪಳ ಹೌಸ್‌ನ ಸಫ್ವಾನ್ ಹುಸೈನ್ (42) ಬಂಧಿತ ಆರೋಪಿ. ಆರೋಪಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ಉಡುಪಿ ಜಿಲ್ಲೆ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2 ಕೊಲೆ, 4 ಕೊಲೆಯತ್ನ, ಗ್ಯಾಂಗ್‌ರೇಪ್,

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಪಾತಕಿ ಸೆರೆ Read More »

ಕಾನೂನುಬಾಹಿರ ಮಟ್ಕಾ ಆಟ ಆಡಿಸುತ್ತಿದ್ದ ಆರೋಪಿಯ ಬಂಧನ

ವಿಟ್ಲ: ಕಾನೂನುಬಾಹಿರವಾಗಿ ನಗರದ ಬೇಕರಿಯೊಂದರಲ್ಲಿ ಅದೃಷ್ಟದ ಮಟ್ಕಾ ಆಡಿಸುತ್ತಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಕೇಪು‌ವಿನ ಅಡ್ಯನಡ್ಕ ಎಂಬಲ್ಲಿರುವ ವಿನಾಯಕ ಬೇಕರಿಯಲ್ಲಿ ಮಟ್ಕಾ ಆಟ ನಡೆಯುತ್ತಿರುವ ಖಚಿತ ಮಾಹಿತಿಯ ಮೇಲೆ ಪೊಲೀಸರು ದಾಳಿ ನಡೆಸಿರುವುದಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಬೇಕರಿಯ ಮಾಲೀಕ, ಕುದ್ದುಪದವು ನಿವಾಸಿ ರವೀಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ಮೊಬೈಲ್ ಫೋನ್, ನಗದು ಮತ್ತು ಇತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಕಾನೂನುಬಾಹಿರ ಮಟ್ಕಾ ಆಟ ಆಡಿಸುತ್ತಿದ್ದ ಆರೋಪಿಯ ಬಂಧನ Read More »

ಮೀಟರ್‌ ರೀಡರ್‌ ಸಿಬ್ಬಂದಿ ಮೇಲೆ ನಾಯಿ ದಾಳಿ : ಆಸ್ಪತ್ರೆಗೆ ದಾಖಲು

ಬಂಟ್ವಾಳ : ಮೆಸ್ಕಾಂ ಮೀಟರ್‌ ರೀಡರ್‌ ಮಾಡುವ ವ್ಯಕ್ತಿಯ ಮೇಲೆ ಮನೆಯ ಅಕುನಾಯಿ ದಾಳಿ ಮಾಡಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಹೊರಗುತ್ತಿಗೆ ಆಧಾರದಲ್ಲಿ ಮೀಟರ್‌ ರೀಡಿಂಗ್‌ ಮಾಡುವ ಸಂಪತ್‌ ದಾಳಿಗೊಳಗಾದ ವ್ಯಕ್ತಿ. ಗಂಭೀರವಾಗಿ ಗಾಯಗೊಂಡಿರುವ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳೂರು ತಾಲೂಕಿನ ಮೂಲೂರು ಇರಾ ನಿವಾಸಿ ಸಂಪತ್ ಎಂಬವರ ಮೇಲೆ ನಾಯಿ ದಾಳಿ ಮಾಡಿದೆ. ಸಂಪತ್ ಬಂಟ್ವಾಳ ಮೆಸ್ಕಾಂ ಇಲಾಖೆಯ ಹೊರಗುತ್ತಿಗೆಯಲ್ಲಿ ಸೂಪರ್‌ವೈಸರ್ ವೃತ್ತಿಯಲ್ಲಿದ್ದಾರೆ. ಆದರೆ ಕಳೆದ ಹತ್ತು ತಿಂಗಳಿನಿಂದ ಮೀಟರ್ ರೀಡಿಂಗ್

ಮೀಟರ್‌ ರೀಡರ್‌ ಸಿಬ್ಬಂದಿ ಮೇಲೆ ನಾಯಿ ದಾಳಿ : ಆಸ್ಪತ್ರೆಗೆ ದಾಖಲು Read More »

ತನ್ನಿಂದ ತಾನೇ ತೂಗಿದ ದೈವದ ಮಂಚ : ಮಂಗಳೂರಿನಲ್ಲೊಂದು ವಿಸ್ಮಯದ ಘಟನೆ

ಪಿಲಿಚಂಡಿ ನೇಮೋತ್ಸವದ ವೇಳೆ ಮಹಿಮೆ ಮೆರೆಯಿತು ದೈವ ಮಂಗಳೂರು : ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ವಲಯದ ಕುಡುಂಬೂರು ನಡುಗಿರಿಯಲ್ಲಿರುವ ದೈವಸ್ಥಾನದಲ್ಲಿ ಅಪರೂಪದ ಘಟನೆ ನಡೆದಿದೆ. ಮಂಗಳೂರು ಭಾಗದ ಶ್ರೀ ಜಾರಂದಾಯ ಹಾಗೂ ಸಹಪರಿವಾರ ದೈವಸ್ಥಾನದಲ್ಲಿ ನಡೆದ ಪಿಲಿಚಂಡಿ ದೈವದ ನೇಮೋತ್ಸವದ ವೇಳೆ ದೈವದ ಮಂಚ ತನ್ನಿಂದ ತಾನೇ ತೂಗಿದ ದೃಶ್ಯ ಭಕ್ತರಲ್ಲಿ ಅಚ್ಚರಿ ಮೂಡಿಸಿದೆ. ಇದರ ವಿಡಿಯೋ ಭಾರಿ ವೈರಲ್‌ ಆಗಿದ್ದು, ಇದು ದೈವದ ಮಹಿಮೆ ಎಂದೇ ಜನರು ನಂಬಿದ್ದಾರೆ. ನೇಮೋತ್ಸವ ನಡೆಯುತ್ತಿರುವಾಗಲೇ ಯಾರೋ ಕುಳಿತು ನಿಧಾನವಾಗಿ

ತನ್ನಿಂದ ತಾನೇ ತೂಗಿದ ದೈವದ ಮಂಚ : ಮಂಗಳೂರಿನಲ್ಲೊಂದು ವಿಸ್ಮಯದ ಘಟನೆ Read More »

ನ್ಯಾಯವಾದಿ ಪ್ರದೀಶ್ ಪಿ.ಜೆ. ಕ್ರಿಶ್ಚಿಯನ್‌ ವಿವಾಹ ನೋಂದಣಿ ಅಧಿಕಾರಿಯಾಗಿ ನೇಮಕ

ಕಡಬ: ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆಯ ಯುವ ನ್ಯಾಯವಾದಿ ಪ್ರದೀಶ್ ಪಿ.ಜೆ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ಕ್ರಿಶ್ಚಿಯನ್‌ ವಿವಾಹ ನೋಂದಣಿ ಅಧಿಕಾರಿಯಾಗಿ ಸರ್ಕಾರ ನೇಮಿಸಿದೆ. 1872ರ ಭಾರತೀಯ ಕ್ರಿಶ್ಚಿಯನ್ ವಿವಾಹ ಕಾಯ್ದೆಯ ಕಲಂ 07 (ಕೇಂದ್ರ ಕಾಯ್ದೆ XV) ಹಾಗೂ ಕ್ರಿಶ್ಚಿಯನ್ ವಿವಾಹ (ಕರ್ನಾಟಕ) ನಿಯಮಗಳು 1961ರನ್ವಯ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಲು ವಿವಾಹ ನೋಂದಣಿ ಮಾಡುವ ಉದ್ದೇಶಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಸೀಮಿತಗೊಳಿಸಿ ಕ್ರಿಶ್ಚಿಯನ್ ಜನಾಂಗದ ವಿವಾಹ ವಿಧಿ ನೆರವೇರಿಸಲು ವಿವಾಹ ನೋಂದಣಾಧಿಕಾರಿಯನ್ನಾಗಿ ತಕ್ಷಣದಿಂದ

ನ್ಯಾಯವಾದಿ ಪ್ರದೀಶ್ ಪಿ.ಜೆ. ಕ್ರಿಶ್ಚಿಯನ್‌ ವಿವಾಹ ನೋಂದಣಿ ಅಧಿಕಾರಿಯಾಗಿ ನೇಮಕ Read More »

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಸಭೆ

ಮಂಗಳೂರು: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ರಿ. ಮೆಲ್ಕಾರ್ ಬಂಟ್ವಾಳ ಇದರ ಕೇಂದ್ರ ಸಮಿತಿಯ ಸಭೆಯು ಇನೋಳಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ವಠಾರದಲ್ಲಿ ಜರಗಿತು. ದೇವಾಲಯದ ಆಡಳಿತ ಸಮಿತಿಯ ಅಧ್ಯಕ್ಷ ಚಂದ್ರಹಾಸ ಪೂಂಜ ದೀಪ ಬೆಳಗಿಸಿ ಸಭೆಯನ್ನು ಉದ್ಘಾಟಿಸಿ ಹಿರಿಯರ ಸೇವಾ ಪ್ರತಿಷ್ಠಾನದ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಪ್ರತಿಷ್ಠಾನದ ಅಧ್ಯಕ್ಷ ಕೆಯ್ಯೂರು ನಾರಾಯಣ ಭಟ್ ವಹಿಸಿದ್ದರು. ಮೇಲ್ಕಾರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಶಂಕರಪತ್ತಿನ ಸಹಕಾರಿ ಸಂಘದ ಶಾಖೆಯನ್ನು ಪುತ್ತೂರು

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಸಭೆ Read More »

ವೃದ್ಧನ ಕೊಲೆ : ಮಗ ಸಹಿತ ಮೂವರ ಬಂಧನ

ನೆಲ್ಯಾಡಿಯ ಕೊಪ್ಪಮಾದೇರಿಯಲ್ಲಿ ಸಂಭವಿಸಿದ ಪ್ರಕರಣ ಉಪ್ಪಿನಂಗಡಿ: ಏಳು ದಿನದ ಹಿಂದೆ ಸಂಭವಿಸಿದ ನೆಲ್ಯಾಡಿ ಗ್ರಾಮದ ಕೊಪ್ಪಮಾದೇರಿ ನಿವಾಸಿ ವೃದ್ಧ ಕೆ.ಸಿ ವರ್ಗೀಸ್ (73) ಅವರ ಅಸಹಜ ಸಾವು ಪ್ರಕರಣ ಕೊಲೆ ಪ್ರಕರಣ‌ ಎಂದು ಖಚಿತ ಪಡಿಸಿದ ಪೊಲೀಸರು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮೃತರ ಮಗ ಹಾಗೂ ಸಂಬಂಧಿಕರಾದ ಕೆ.ವಿ. ತೋಮಸ್ (39), ಸಿ.ಟಿ ರಾಜು (59), ಚಾಕೊಚ್ಚ (51) ಬಂಧಿತರು. ಫೆ.9ರಂದು ಉಪ್ಪಿನಂಗಡಿ ಠಾಣೆಯಲ್ಲಿ ಕೆ.ಸಿ.ವರ್ಗೀಸ್ ಸಾವಿಗೆ ಸಂಬಂಧಪಟ್ಟಂತೆ ಅಸಹಜ ಸಾವು ಪ್ರಕರಣ ದಾಖಲಾಗಿತ್ತು.

ವೃದ್ಧನ ಕೊಲೆ : ಮಗ ಸಹಿತ ಮೂವರ ಬಂಧನ Read More »

ನದಿಯಿಂದ ಆಮೆಗಳನ್ನು ಹಿಡಿದು ಸುಟ್ಟ ನಾಲ್ಕು ಮಂದಿ ಸೆರೆ

ಅಜ್ಜಿಯ ತಿಥಿ ಕಾರ್ಯಕ್ಕೆ ಆಮೆ ಮಾಂಸ ಮಾಡಲು ಮುಂದಾಗಿದ್ದ ಆರೋಪಿಗಳು ಬೆಳ್ತಂಗಡಿ : ನದಿಯಲ್ಲಿ ಆಮೆಗಳನ್ನು ಹಿಡಿದು ಸುಟ್ಟು ಬೇಯಿಸುತ್ತಿದ್ದ ನಾಲ್ಕು ಮಂದಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ತಿಥಿ ಕಾರ್ಯಕ್ರಮಕ್ಕೆ ಪದಾರ್ಥ ಮಾಡಿ ಬಡಿಸಲು ಅಜ್ಜಿಗೆ ಇಷ್ಟವಾದ ಆಮೆಯನ್ನು ಸಂಬಂಧಿಕರು ನದಿಯಲ್ಲಿ ಅಕ್ರಮವಾಗಿ ಹಿಡಿದು ನದಿ ದಡದಲ್ಲೇ ಮಾಂಸ ಮಾಡಿ ಸುಡಲು ಯತ್ನಿಸುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದಾರೆ. ಬೆಳ್ತಂಗಡಿ ನಗರದ ಸೋಮವತಿ ನದಿಯಲ್ಲಿ ನಾಲ್ಕು ಆಮೆಯನ್ನು ಹಿಡಿದು ನದಿ ಬದಿಯಲ್ಲಿ ಮಾಂಸ ಮಾಡಲು ಪ್ರಯತ್ನಿಸುತ್ತಿರುವಾಗ ಫೆ.14ರಂದು

ನದಿಯಿಂದ ಆಮೆಗಳನ್ನು ಹಿಡಿದು ಸುಟ್ಟ ನಾಲ್ಕು ಮಂದಿ ಸೆರೆ Read More »

error: Content is protected !!
Scroll to Top