ದಕ್ಷಿಣ ಕನ್ನಡ

ಕಾರಿನಲ್ಲಿ ಚಿನ್ನ, ನಗದು, ಮಾರಕಾಯುಧ ಪತ್ತೆ

ಪಲಾಯನ ಮಾಡಲೆತ್ನಿಸಿದ ಕಾರನ್ನು8 ಕಿ.ಮೀ. ಬೆನ್ನಟ್ಟಿ ಹಿಡಿದ ಪೊಲೀಸರು ಕಾಸರಗೋಡು: ಕಾರೊಂದನ್ನು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದಾಗ ಭಾರಿ ಪ್ರಮಾಣದ ಚಿನ್ನಾಭರಣ, ನಗದು ಮತ್ತು ಮಾರಕಾಯುಧಗಳು ಪತ್ತೆಯಾದ ಘಟನೆ ಕೇರಳ-ಕರ್ನಾಟಕ ಗಡಿಯ ಆದೂರು ಚೆಕ್‌ಪೋಸ್ಟ್‌ ಸಮೀಪ ನಡೆದಿದೆ. ವಾಹನ ತಪಾಸಣೆ ಸಂದರ್ಭದಲ್ಲಿ ನಿಲ್ಲಿಸದೆ ಪರಾರಿಯಾಗಿದ್ದ ಕಾರನ್ನು ಬೆನ್ನಟ್ಟಿ ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ ಚಿನ್ನಾಭರಣ , ಬೆಳ್ಳಿ ಹಾಗೂ ಇನ್ನಿತರ ವಸ್ತುಗಳ ಜೊತೆಗೆ ಮಾರಕಾಯುಧಗಳು ಮತ್ತು ಕಳ್ಳತನಕ್ಕೆ ಬಳಸುವ ಪರಿಕರಗಳು ಸಿಕ್ಕಿವೆ. ಕಾರಿನಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ. ಅಬಕಾರಿ […]

ಕಾರಿನಲ್ಲಿ ಚಿನ್ನ, ನಗದು, ಮಾರಕಾಯುಧ ಪತ್ತೆ Read More »

ಬಾವಿಗೆ ಬಿದ್ದ ಚಿರತೆ | ಅರಣ್ಯಾಧಿಕಾರಿಗಳಿಂದ ರಕ್ಷಣೆ

ಮೂಡುಬಿದಿರೆ: ಚಿರತೆಯೊಂದು ಬಾವಿಗೆ ಬಿದ್ದಿದ್ದರಿಂದ ಅರಣ್ಯಾಧಿಕಾರಿಗಳು ರಕ್ಷಣೆ ಮಾಡಿದ ಘಟನೆ ಮಡುಬಿದಿರೆ ತಾಲೂಕಿನ ಶಿರ್ತಾಡಿ ಗ್ರಾಮದಲ್ಲಿ ನಡೆದಿದೆ. ಮಂಗಳವಾರ ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಮಕ್ಕಿ ನಿವಾಸಿ ರಮೇಶ ಪೂಜಾರಿ ಎಂಬುವರ ಮನೆಯ ಬಾವಿಗೆ ಚಿರತೆಯು ಅಯತಪ್ಪಿ ಬಿದ್ದಿದೆ.  ಇದನ್ನು ರಕ್ಷಿಸಲೆಂದು ಅರಣ್ಯಾಧಿಕಾರಿಗಳು ಮನೆಗೆ ಬಂದಿದ್ದರು. ಮೂಡುಬಿದಿರೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ್‍ ರವರ ನಿರ್ದೇಶನದಂತೆ, ಮೂಡುಬಿದಿರೆ ವಲಯ ಅರಣ್ಯಾಧಿಕಾರಿ ಕಿರಣ್ ಕುಮಾರ್ ಜಿ. ಮಾರ್ಗದರ್ಶನದಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ಕಾವ್ಯಾ ಆರ್., ರಾಘವೇಂದ್ರ ಶೆಟ್ಟಿ, ಬಸಪ್ಪ

ಬಾವಿಗೆ ಬಿದ್ದ ಚಿರತೆ | ಅರಣ್ಯಾಧಿಕಾರಿಗಳಿಂದ ರಕ್ಷಣೆ Read More »

ಹವಮಾನ ಇಲಾಖೆ ಮುನ್ಸೂಚನೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು, ನಾಳೆ ಎಲ್ಲೋ ಅಲರ್ಟ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳಿಗೆ ನಿನ್ನೆ ಸಂಜೆ ಸುರಿದ ಮಳೆಯಿಂದ ವಾತಾವರಣ ಕೊಂಚ ತಂಪಾಗಿದ್ದು, ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ ಪ್ರದೇಶಗಳಲ್ಲಿ ನಿನ್ನೆ ಗಾಳಿ ಸಹಿತ ಉತ್ತಮ ಮಳೆಯಾಗಿದೆ. ಜಿಲ್ಲೆಯಾದ್ಯಂತ ಬೆಳಗ್ಗೆಯಿಂದಲೇ ಮೋಡದಿಂದ ಕೂಡಿದ ವಾತಾವರಣ ಇತ್ತು.  ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಮುಂದಿನ ಎ.9 ಮತ್ತು 10 ರಂದು “ಎಲ್ಲೋ ಅಲರ್ಟ್” ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

ಹವಮಾನ ಇಲಾಖೆ ಮುನ್ಸೂಚನೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು, ನಾಳೆ ಎಲ್ಲೋ ಅಲರ್ಟ್ Read More »

ನಿಯೋಜಿತ ಎವಿಜಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ನಿ.) ಪುತ್ತೂರು ಇದರ ಕಚೇರಿಯ ಸಾಂಕೇತಿಕ ಆರಂಭ

ನಿಯೋಜಿತ ಎವಿಜಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ನಿ.) ಪುತ್ತೂರು ಇದರ ಕಚೇರಿಯ ಸಾಂಕೇತಿಕ ಪ್ರವೇಶ ಕಾರ್ಯಕ್ರಮವು ನೆಲ್ಲಿಕಟ್ಟೆಯ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ಪ್ರಧಾನ ಕಚೇರಿಯ ಪಕ್ಕದ ಕಟ್ಟಡದ ನೆಲಮಹಡಿಯ ಡೋರ್ ನಂಬರ್ 2-842/ ‘ಎ’ಯಲ್ಲಿ ನಡೆಯಿತು. ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಅಧ್ಯಕ್ಷರಾದ ಕಳುವಾಜೆ ವೆಂಕಟ್ರಮಣ ಗೌಡರು ದೀಪ ಪ್ರಜ್ವಲಿಸಿ ಉದ್ಘಾಟನೆಗೈದು ಸಂಸ್ಥೆಯ ಶ್ರೇಯಸ್ಸಿಗಾಗಿ ಪ್ರಾರ್ಥಿಸಿದರು. ಸಂಸ್ಥೆಯ ಮುಖ್ಯ ಪ್ರವರ್ತಕ ಎ. ವಿ. ನಾರಾಯಣ, ಪ್ರವರ್ತಕರುಗಳಾದ ಉಮೇಶ್ ಮಳುವೇಲು, ಸೀತಾರಾಮ ಕೇವಳ,

ನಿಯೋಜಿತ ಎವಿಜಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ನಿ.) ಪುತ್ತೂರು ಇದರ ಕಚೇರಿಯ ಸಾಂಕೇತಿಕ ಆರಂಭ Read More »

ಚಿನ್ನಕ್ಕಾಗಿ ಸ್ನೇಹಿತರನ್ನೇ ಕೊಂದ ಮೂವರ ಅಪರಾಧ ಸಾಬೀತು

11 ವರ್ಷದ ಹಿಂದೆ ಮಂಗಳೂರಿನ ಬಾಡಿಗೆ ಮನೆಯಲ್ಲಿ ಇಬ್ಬರನ್ನು ಮಲಗಿದ್ದಲ್ಲೇ ಇರಿದು ಸಾಯಿಸಿದ ಪ್ರಕರಣ ಮಂಗಳೂರು: ವಿದೇಶದಿಂದ ಅಕ್ರಮವಾಗಿ ತಂದ ಚಿನ್ನದ ಗಟ್ಟಿ ಮಾರಾಟದಲ್ಲಿ ಉಂಟಾದ ತಕರಾರಿನ ಹಿನ್ನೆಲೆಯಲ್ಲಿ ಇಬ್ಬರನ್ನು ಉಪಾಯದಿಂದ ಮಂಗಳೂರಿನ ಅತ್ತಾವರಕ್ಕೆ ಕರೆಸಿ ಮಲಗಿದಲ್ಲೇ ಚೂರಿಯಿಂದ ಇರಿದು ಕೊಲೆಗೈದ ಪ್ರಕರಣದಲ್ಲಿ ಮೂವರ ವಿರುದ್ಧದ ಆರೋಪ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಬುಧವಾರ ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ.ಕಾಸರಗೋಡು ತಾಲೂಕು ಚೆರ್ಕಳ ಮುಹಮ್ಮದ್ ಮುಹಜೀರ್ ಸನಾಫ್ (34), ಕಾಸರಗೋಡು ಆಣಂಗೂರು ಟಿ.ವಿ.ಸ್ಟೇಷನ್ ರಸ್ತೆ

ಚಿನ್ನಕ್ಕಾಗಿ ಸ್ನೇಹಿತರನ್ನೇ ಕೊಂದ ಮೂವರ ಅಪರಾಧ ಸಾಬೀತು Read More »

ವಿದ್ಯಾರಶ್ಮಿ ಸ್ವತಂತ್ರ ಪದವಿ ಪೂರ್ವ ಕಾಲೇಜಿಗೆ ದ್ವಿತೀಯ ಪಿಯುಸಿಯಲ್ಲಿ 100% ಫಲಿತಾಂಶ

ಸವಣೂರು : ಈ ಬಾರಿ ಮಾರ್ಚ್ ನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಿಂದ ಹಾಜರಾಗಿದ್ದ ಎಲ್ಲಾ 23 ವಿದ್ಯಾರ್ಥಿಗಳು ತೆರ್ಗಡೆಯಾಗಿದ್ದು ಲಿಖಿತ್ ರಾಜ್  (510/600) ವಿಶಿಷ್ಟ ಶ್ರೇಣಿಯಲ್ಲಿ, 20 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ ಇಬ್ಬರು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾದ್ದಾರೆ. ಹಾಗೆಯೇ ವಾಣಿಜ್ಯ ವಿಭಾಗದ ಎಲ್ಲಾ 22 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಅಪೇಕ್ಷಾ ಜಿ. (575/600), ಅಮೀನಾಥ್ ಐಫಾ (562/600), ಶೈಬಾ (544/600), ನೂರುನ್ನೀಸಾ (530/600), ಶೈಮಾ (525/600) ಮತ್ತು ಯಶಸ್ವಿ ರೈ ಕೆ.

ವಿದ್ಯಾರಶ್ಮಿ ಸ್ವತಂತ್ರ ಪದವಿ ಪೂರ್ವ ಕಾಲೇಜಿಗೆ ದ್ವಿತೀಯ ಪಿಯುಸಿಯಲ್ಲಿ 100% ಫಲಿತಾಂಶ Read More »

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು | ಓರ್ವ ಮಹಿಳೆಗೆ ಗಾಯ

ಬೆಳ್ತಂಗಡಿ : ಮೂಡಿಗೆರೆ ಕಡೆಯಿಂದ ಬೆಳ್ತಂಗಡಿಯ ಕಡೆಗೆ ಬರುತ್ತಿದ್ದ ಅಮ್ಮಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹೊಂಡಕ್ಕೆ ಉರುಳಿ ಮರಕ್ಕೆ ಢಿಕ್ಕಿ ಹೊಡೆದ ಘಟನೆ ಸೋಮವಾರ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಾಲೇಜೊಂದರ ದಾಖಲಾತಿಗೆ ಬರುತ್ತಿದ್ದ ಸಕಲೇಶಪುರ ಕಡೆಯ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.  ಈ ಅಪಘಾತದಲ್ಲಿ ಓರ್ವ ಮಹಿಳೆ ಗಾಯಗೊಂಡಿದ್ದಾರೆ  ಎನ್ನಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು | ಓರ್ವ ಮಹಿಳೆಗೆ ಗಾಯ Read More »

ದಲಿತ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿಗೆ ನಿರೀಕ್ಷಣಾ ಜಾಮೀನು

ಮಂಗಳೂರು: ದಲಿತ ಬಾಲಕಿಗೆ ಕಿರುಕುಳ ನೀಡಿದ ಆರೋಪಕ್ಕೊಳಗಾಗಿರುವ ವಿಟ್ಲ ಮಾಣಿಲದ ಮಹೇಶ್ ಭಟ್‌ಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವಿಶೇಷ ಪೋಕ್ಸೊ ನ್ಯಾಯಾಲಯ ಸೋಮವಾರ ಶರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿದೆ.ಕೃತ್ಯ ಬೆಳಕಿಗೆ ಬಂದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ. ಆತನನ್ನು ಬಂಧಿಸುವಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿರುವಂತೆಯೇ ಆರೋಪಿ ಜಾಮೀನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾನೆ.ತೋಟದ ಕೆಲಸಕ್ಕೆ ಬರುತ್ತಿದ್ದ ದಲಿತ ಸಮುದಾಯದ ಕೂಲಿ ಕಾರ್ಮಿಕನ 16ರ ಹರೆಯದ ಪುತ್ರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಮಹೇಶ್‌ ಭಟ್‌ ವಿರುದ್ಧ

ದಲಿತ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿಗೆ ನಿರೀಕ್ಷಣಾ ಜಾಮೀನು Read More »

ಸವಣೂರು ಗ್ರಾಮ ಬೂತ್ 65 ರಲ್ಲಿ ಬಿಜೆಪಿ ಸಂಸ್ಥಾಪನಾ ದಿನಾಚರಣೆ

ಸವಣೂರು : ಸುಳ್ಯ ಮಂಡಲ, ಕುಟ್ರುಪ್ಪಾಡಿ ಮಹಾಶಕ್ತಿ ಶಕ್ತಿ ಕೇಂದ್ರದ, ಸವಣೂರು ಗ್ರಾಮ ಬೂತ್ ಸಂಖ್ಯೆ 65 ರಲ್ಲಿ ಬಿಜೆಪಿ ಸಂಸ್ಥಾಪನಾ ದಿನವನ್ನು ಬೂತ್ ಅಧ್ಯಕ್ಷರಾದ ತೀರ್ಥರಾಮ ಕೆಡೆಂಜಿಯವರ ಮನೆಯಲ್ಲಿ ಆಚರಿಸಲಾಗಿದೆ. ಪಕ್ಷದ ಧ್ವಜಾರೋಹಣ ಮಾಡುವ ಮೂಲಕ ಬಿಜೆಪಿ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ರಾಕೇಶ್ ರೈ ಕೆಡೆಂಜಿ, ಸವಣೂರು ಶಕ್ತಿ ಕೇಂದ್ರದ ಅಧ್ಯಕ್ಷರಾದ ಚೇತನ್ ಕುಮಾರ್ ಕೋಡಿಬೈಲು, ಗ್ರಾಮಪಂಚಾಯಿತಿ ಸದಸ್ಯರಾದ ರಾಜೀವಿ ವಿ ಶೆಟ್ಟಿ, ಇಂದಿರಾ ಬೇರಿಕೆ,

ಸವಣೂರು ಗ್ರಾಮ ಬೂತ್ 65 ರಲ್ಲಿ ಬಿಜೆಪಿ ಸಂಸ್ಥಾಪನಾ ದಿನಾಚರಣೆ Read More »

ಜೀವನ್ ತಾವ್ರೊ ಆತ್ಮಹತ್ಯೆ ಪ್ರಕರಣ | ಇಬ್ಬರು ಆರೋಪಿಗಳ ಬಂಧನ

ಬಂಟ್ವಾಳ: ಅಮ್ಮಾಡಿ ತನಿಯಮನೆ ನಿವಾಸಿ ಜೀವನ್ ತಾವೊ ಅವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಪ್ರಚೋದನೆ ನೀಡಿದ ಆರೋಪದಲ್ಲಿ ಇಬ್ಬರನ್ನು ಬಂಟ್ವಾಳ ನಗರ ಪೊಲೀಸ್ ಠಾಣೆ ಸಿಬ್ಬಂದಿ ಬಂಧಿಸಿದ್ದಾರೆ. ಕುರಿಯಾಳ ಮೂಲದ ಪ್ರವೀಣ್ ಡೆಸಾ ಮತ್ತು ರೋಹನ್ ಪಿಂಟೊ ಈ ಆರೋಪದಲ್ಲಿ ಬಂಧಿಸಲ್ಪಟ್ಟವರು. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಜೀವನ್ ತಾವ್ರೊ ಆತ್ಮಹತ್ಯೆ ಪ್ರಕರಣ | ಇಬ್ಬರು ಆರೋಪಿಗಳ ಬಂಧನ Read More »

error: Content is protected !!
Scroll to Top