ದಕ್ಷಿಣ ಕನ್ನಡ

ಕಡಬ ತಾಲೂಕು ಕೃಷಿಕ ಸಮಾಜದ ಪ್ರಥಮ ಕಾರ್ಯಕಾರಿ ಸಮಿತಿ ಸಭೆ

ಕಡಬ : ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಡಬ ತಾಲೂಕು ಕೃಷಿಕ ಸಮಾಜದ ಪ್ರಥಮ ಕಾರ್ಯಕಾರಿ ಸಮಿತಿ ಸಭೆ ಕಡಬ ರೈತ ಸಂಪರ್ಕ ಕೇಂದ್ರದಲ್ಲಿ ಬುಧವಾರ ನಡೆಯಿತು.   ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ವಿಜಯ ಕುಮಾರ್ ರೈ ಕೋರಂಗ ಮುಖ್ಯ ಅತಿಥಿಯಾಗಿ ಮಾತನಾಡಿ, “ಕೃಷಿಕ ಸಮಾಜ ರೈತರು ಹಾಗೂ ಸರಕಾರದ ಕೊಂಡಿಯಾಗಿ ಕೆಲಸ ಮಾಡಲಿದೆ. ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳಿಂದ ರೈತರಿಗೆ ದೊರೆಯುವ ಸವಲತ್ತುಗಳನ್ನು ಪಡೆಯುವ ನಿಟ್ಟಿನಲ್ಲಿ ಸೂಕ್ತ ಮಾರ್ಗದರ್ಶನ ಹಾಗೂ ಮಾಹಿತಿ ನೀಡಲು ರೈತರಿಗೆ ಕಾರ್ಯಾಗಾರಗಳನ್ನು ಮುಂದಿನ […]

ಕಡಬ ತಾಲೂಕು ಕೃಷಿಕ ಸಮಾಜದ ಪ್ರಥಮ ಕಾರ್ಯಕಾರಿ ಸಮಿತಿ ಸಭೆ Read More »

ಯಕ್ಷಭಾರತಿಯಿಂದ ಸಮಾಜಕ್ಕೆ ಉತ್ತಮ ಕೊಡುಗೆ: ಶರತ್ ಕೃಷ್ಣ ಪಡುವೆಟ್ಣಾಯ

ಬೆಳ್ತಂಗಡಿ : ಉಜಿರೆ ಶ್ರೀ ಜನಾರ್ದನ ಕ್ಷೇತ್ರದ ಪರಿಸರದಲ್ಲಿ   ನಡೆಯುತ್ತಿರುವ ಯಕ್ಷಭಾರತಿಯ ಕಲಾ ಸೇವೆ ಮತ್ತು ಸಾಮಾಜಿಕ ಸೇವಾ ಕಾರ್ಯಗಳು ಅಭಿನಂದನೀಯವಾಗಿದೆ. ಯಕ್ಷಭಾರತಿಯು ಸಮಾಜಕ್ಕೆ ಉತ್ತಮ ಕೊಡುಗೆಯನ್ನು ನೀಡಿದ್ದು ರಾಜ್ಯದಲ್ಲಿ ಗುರುತಿಸುವಂತಾಗಲಿಯೆಂದು ಉಜಿರೆಯ ರಾಮಕೃಷ್ಣ ಸಭಾ ಮಂಟಪದಲ್ಲಿ ಜರಗಿದ ಯಕ್ಷ ಭಾರತಿ ದಶಮಾನೋತ್ಸವ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ದೇವಳದ ಅನುವಂಶೀಯ ಆಡಳಿತ ಮೊಕ್ತೆಸರ  ಶರತ ಕೃಷ್ಣ  ಪಡುವೆಟ್ಣಾಯ  ತಿಳಿಸಿದರು.  ಯಕ್ಷ ಭಾರತಿ ಪ್ರಶಸ್ತಿ ಮತ್ತು ಸೇವಾ ಗೌರವ ಪ್ರದಾನ : ಉಚಿತವಾಗಿ ಯಕ್ಷಗಾನ ನಾಟ್ಯ ತರಬೇತಿ

ಯಕ್ಷಭಾರತಿಯಿಂದ ಸಮಾಜಕ್ಕೆ ಉತ್ತಮ ಕೊಡುಗೆ: ಶರತ್ ಕೃಷ್ಣ ಪಡುವೆಟ್ಣಾಯ Read More »

ವಿಟ್ಲ ಮೆಗಿನ ಪೇಟೆ ಶ್ರೀ ಚಂದ್ರನಾಥ ಸ್ವಾಮಿ ಪಂಚ ಕಲ್ಯಾಣ ಮಹೋತ್ಸವ | ಡಾ |ಡಿ.ವೀರೇಂದ್ರ ಹೆಗ್ಗಡೆಯವರಿಂದ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಮತ್ತು ಶೌರ್ಯ ಸದಸ್ಯರ ಕರ್ತವ್ಯಕ್ಕೆ  ಶ್ಲಾಘನೆ

ವಿಟ್ಲ: ಇಲ್ಲಿನ ಮೆಗಿನ ಪೇಟೆ ಶ್ರೀ ಚಂದ್ರನಾಥ ಸ್ವಾಮಿ ಪಂಚ ಕಲ್ಯಾಣ ಮಹೋತ್ಸವದ ಧಾರ್ಮಿಕ ಸಭೆ ಫೆ.13ರಂದು ನಡೆಯಿತು. ವಿಟ್ಲ ಮೆಗಿನ ಪೇಟೆ ಶ್ರೀ ಚಂದ್ರನಾಥ ಸ್ವಾಮಿ ಪಂಚ ಕಲ್ಯಾಣ ಮಹೋತ್ಸವದ ಅಂಗವಾಗಿ ಕರ್ತವ್ಯ ನಿರ್ವಹಿಸಿದ ತಾಲೂಕಿನ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯ ಕರ್ತರು ಹಾಗೂ  ಶೌರ್ಯ ವಿಪತ್ತು ತಂಡದ ಸದಸ್ಯರಿಗೆ  ಪೂಜ್ಯ ವೀರೇಂದ್ರ ಹೆಗ್ಗಡೆಯವರು ಕರ್ತವ್ಯದ ಕುರಿತಾಗಿ ಶ್ಲಾಘನೆಯನ್ನು ವ್ಯಕ್ತಪಡಿಸಿದರು ಮಾತನಾಡಿದ ಅವರು ಶೌರ್ಯ ವಿಪತ್ತು ತಂಡ ಸಮಾಜಕ್ಕೆ  ಉಪಯುಕ್ತ ತಂಡ ಎಂದು ಹೇಳಿದರು. ಬಳಿಕ ಗ್ರಾಮಾಭಿವೃದ್ಧಿ

ವಿಟ್ಲ ಮೆಗಿನ ಪೇಟೆ ಶ್ರೀ ಚಂದ್ರನಾಥ ಸ್ವಾಮಿ ಪಂಚ ಕಲ್ಯಾಣ ಮಹೋತ್ಸವ | ಡಾ |ಡಿ.ವೀರೇಂದ್ರ ಹೆಗ್ಗಡೆಯವರಿಂದ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಮತ್ತು ಶೌರ್ಯ ಸದಸ್ಯರ ಕರ್ತವ್ಯಕ್ಕೆ  ಶ್ಲಾಘನೆ Read More »

ತನ್ನಿಂದ ತಾನೇ ಚಲಿಸಿ ಹೋಟೆಲ್‌ಗೆ ಗುದ್ದಿದ ಟ್ಯಾಂಕರ್‌

ಕಾರು, ಬೈಕ್‌ಗಳು, ಆಟೋರಿಕ್ಷಾ ಜಖಂ ಮಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ ಟ್ಯಾಂಕರ್‌ ತನ್ನಿಂದ ತಾನೇ ಚಲಿಸಿ ರಸ್ತೆ ದಾಟಿ ಹೋಗಿ ಹೋಟೆಲ್‌ಗೆ ನುಗ್ಗಿ ಕಾರು, ಬೈಕ್‌ಗಳನ್ನು ಜಖಂಗೊಳಿಸಿದ ಘಟನೆ ಗುರುವಾರ ರಾತ್ರಿ ಕುಳಾಯಿಯ ಹೊನ್ನಕಟ್ಟೆ ಜಂಕ್ಷನ್‌ನಲ್ಲಿ ನಡೆದಿದೆ. ಕುಳಾಯಿಗುಡ್ಡೆಗೆ ಹೋಗುವ ರಸ್ತೆಯಲ್ಲಿ ಟ್ಯಾಂಕರ್‌ ನಿಲ್ಲಿಸಿ ಚಾಲಕ ಹೊಟೇಲ್‌ಗೆ ತೆರಳಿದ್ದರು. ಈ ವೇಳೆ ಲಾರಿ ಏಕಾಏಕಿ ಇಳಿಜಾರಾಗಿರುವ ರಸ್ತೆಯಲ್ಲಿ ಚಲಿಸಿಕೊಂಡು ಹೋಗಿ ರಾಷ್ಟೀಯ ಹೆದ್ದಾರಿ 66ನ್ನು ದಾಟಿ ಹೊಟೇಲ್‌ಗೆ ಡಿಕ್ಕಿ ಹೊಡೆದಿದೆ. ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಕಾರು, ಆಟೋರಿಕ್ಷಾ

ತನ್ನಿಂದ ತಾನೇ ಚಲಿಸಿ ಹೋಟೆಲ್‌ಗೆ ಗುದ್ದಿದ ಟ್ಯಾಂಕರ್‌ Read More »

ಶುಕ್ರವಾರ ಊರಿಗೆ ಮರಳುವ ಸಂತೋಷದಲ್ಲಿದ್ದ ಬೆಳ್ತಂಗಡಿಯ ಹಿದಾಯತ್ | ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ  

ಬೆಳ್ತಂಗಡಿ: ಸೌದಿ ಅರೆಬಿಯಾದಿಂದ ಶುಕ್ರವಾರ ಊರಿಗೆ ಮರಳುವ ಸಂತೋಷದಲ್ಲಿದ್ದ ಬೆಳ್ತಂಗಡಿ ಸಂಜಯನಗರ ನಿವಾಸಿ ಹಿದಾಯತ್ ಅವರು ಸೌದಿ ಅರೇಬಿಯಾದಲ್ಲಿ ಗುರುವಾರ ತಡರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದ ಘಟನೆ ನಡೆದಿದೆ. ಊರಿಗೆ ಬರುವ ಸಂತೋಷದಲ್ಲಿದ್ದ ಹಿದಾಯತ್ ತನ್ನ ಸ್ನೇಹಿತ ರಫೀಕ್ ಎಂಬವರಿಗೆ ಕರೆ ಮಾಡಿ ಬೆಳಿಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತನ್ನ ಕಾರನ್ನು ತರಲು ಹೇಳಿ ಜಿದ್ದಾದಿಂದ ರಾತ್ರಿ 10:30 ರ ವಿಮಾನದಲ್ಲಿ ಹೊರಟು ಬೆಳಗಿನ ಜಾವ ಮಂಗಳೂರು ತಲುಪುವವರಿದ್ದರು. ಜಿದ್ದಾ ವಿಮಾನ ನಿಲ್ದಾಣಕ್ಕೆ ಕಾರಲ್ಲಿ ಬಂದು ತಲುಪಿದ್ದಂತೆ

ಶುಕ್ರವಾರ ಊರಿಗೆ ಮರಳುವ ಸಂತೋಷದಲ್ಲಿದ್ದ ಬೆಳ್ತಂಗಡಿಯ ಹಿದಾಯತ್ | ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ   Read More »

ಕಾಣಿಯೂರು ಮಠದಲ್ಲಿ ವಾರ್ಷಿಕ ಉತ್ಸವಾದಿಗಳಿಗೆ ಗೊನೆ ಮುಹೂರ್ತ

ಕಾಣಿಯೂರು :  ಕಾಣಿಯೂರು ಮಠದ ವಾರ್ಷಿಕ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ ಗುರುವಾರ ಬೆಳಿಗ್ಗೆ ನಡೆಯಿತು. ಮೊದಲಿಗೆ ಕಾಣಿಯೂರು ಮಠದಲ್ಲಿ ಪ್ರಾರ್ಥನೆ ನೆರವೇರಿಸಿದ ಬಳಿಕ 9 ಗಂಟೆಗೆ ಗೊನೆ ಮುಹೂರ್ತ ನೆರವೇರಿಸಲಾಯಿತು. ಜಾತ್ರೋತ್ಸವದ ಅಂಗವಾಗಿ ಫೆ.26 ರಂದು ಜಾತ್ರೋತ್ಸವ ಆರಂಭಗೊಳ್ಳಲಿದ್ದು, ಮಾ.4 ರ ವರೆಗೆ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.

ಕಾಣಿಯೂರು ಮಠದಲ್ಲಿ ವಾರ್ಷಿಕ ಉತ್ಸವಾದಿಗಳಿಗೆ ಗೊನೆ ಮುಹೂರ್ತ Read More »

ಡಿವೈಡರ್‌ಗೆ ಬೈಕ್‌ ಢಿಕ್ಕಿ ಹೊಡೆದು ಯುವಕ ಮೃತ್ಯು

ಬೆಳ್ತಂಗಡಿ : ಡಿವೈಡರ್‌ಗೆ ಬೈಕ್‌ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ-ವೇಣೂರು ರಸ್ತೆಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಸಿದ್ದಕಟ್ಟೆ ಸಮೀಪದ ಉಕ್ಕಿನಡ್ಕ ನಿವಾಸಿ ಪ್ರಶಾಂತ್‌ ಪೂಜಾರಿ ಮೃತ ಪಟ್ಟ ಯುವಕ ಎನ್ನಲಾಗಿದೆ. ಪ್ರಶಾಂತ್‌ ಪೂಜಾರಿ ಗುರುವಾಯನಕೆರೆಯಿಂದ ವೇಣೂರು ಕಡೆಗೆ ಬೈಕ್‌ ಚಲಾಯಿಸಿಕೊಂಡು ಹೋಗಿದ್ದು, ವೇಣೂರು ರಸ್ತೆಯ ದ್ವಾರದಿಂದ ಸ್ವಲ್ಪ ಮುಂದೆ ತಲುಪುತ್ತಿದ್ದಂತೆ ನಿಯಂತ್ರಣ ತಪ್ಪಿ ಬೈಕ್‌ ಡಿವೈಡರ್‌ಗೆ ಢಿಕ್ಕಿ ಹೊಡೆದಿದ್ದಾರೆ. ಢಿಕ್ಕಿಯ ರಭಸಕ್ಕೆ ಬೈಕ್ ಸವಾರನ ತಲೆ

ಡಿವೈಡರ್‌ಗೆ ಬೈಕ್‌ ಢಿಕ್ಕಿ ಹೊಡೆದು ಯುವಕ ಮೃತ್ಯು Read More »

ಕುಖ್ಯಾತ ಬೈಕ್‍ ಕಳ್ಳರ ಬಂಧನ

ಪಡುಬಿದ್ರಿ : ಮುಂಡೂರು ಗ್ರಾಮದ ಪರೀಕ್ಷಿತ್ ಅವರಿಗೆ ಸೇರಿದ ಬುಲೆಟ್ ಬೈಕನ್ನುಜ. 21ರಂದು ಪಡುಬಿದ್ರಿಯಲ್ಲಿ ಪಾರ್ಕ್ ಮಾಡಿದ್ದಲ್ಲಿಂದ ಕಳವು ಮಾಡಿರುವ ಘಟನೆ ನಡೆದಿದೆ. ಬೈಕ್‍ ಕದ್ದವರು ಸೂಳೆಬೈಲು ಶಿವಮೊಗ್ಗದ ಮೊಹಮ್ಮದ್ ರೂಹಾನ್ ಮತ್ತು ಶಿವಮೊಗ್ಗದ ತಾಜುದ್ದೀನ್ ಯಾನೆ ತಾಜು ಇಬ್ಬರು ಅಂತರ್ ಜಿಲ್ಲಾ ಕುಖ್ಯಾತ ಬೈಕ್ ಕಳ್ಳರಾಗಿದ್ದಾರೆ. ಇವರನ್ನು ಪಡುಬಿದ್ರಿ ಪೊಲೀಸರು ಶಿವಮೊಗ್ಗದಿಂದ ಬಂಧಿಸಿದ್ದಾರೆ 4 ಲ.ರೂ. ಮೌಲ್ಯದ ಸೊತ್ತು ವಶಪಡಿಸಿಕೊಳ್ಳಲಾಗಿದೆ. ಕಳವು ಮಾಡಿದ್ದ  ಬುಲೆಟ್ ಹಾಗೂ ಈ ಕೃತ್ಯಕ್ಕೆ ಬಳಸಿದ್ದ ಮಾರುತಿ ರಿಟ್ಸ್ ಕಾರು ಸಹಿತ

ಕುಖ್ಯಾತ ಬೈಕ್‍ ಕಳ್ಳರ ಬಂಧನ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ   ತಂಡಕ್ಕೆ  ಯಕ್ಷಭಾರತಿ ದಶಮಾನೋತ್ಸವ ಸೇವಾ ಗೌರವ

ಬೆಳ್ತಂಗಡಿ : ಪ್ರಕೃತಿ ವಿಕೋಪದಿಂದ ಉಂಟಾಗುವ ನೆರೆ, ಭೂ ಕುಸಿತ, ಮನೆಗಳ ಕುಸಿತ, ಪ್ರಾಕೃತಿಕ ಅಥವಾ ಮಾನವಕೃತ ಅಗ್ನಿ ದುರಂತಗಳು ಸಂಭವಿಸಿದಾಗ ಉಂಟಾಗುವ ಅಪಾರ ಹಾನಿಯ ತಡೆ ,ಜನ -ಜಾನುವಾರುಗಳ ರಕ್ಷಣೆ, ತೆರವು ಕಾರ್ಯಾಚರಣೆ,ತುರ್ತು ಸೌಲಭ್ಯಗಳನ್ನು ಒದಗಿಸುವ ಉದ್ದೇಶಕ್ಕೆ  ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ಕಲ್ಪನೆ ಮತ್ತು ಶ್ರೀಮತಿ ಹೇಮಾವತಿ ಹೆಗ್ಗಡೆಯವರ ಮಾರ್ಗದರ್ಶನದಂತೆ 2020 ಜೂನ್ 21 ರಂದು ಬೆಳ್ತಂಗಡಿ ಮತ್ತು ಗುರುವಾಯನಕೆರೆ ಘಟಕಗಳೊಂದಿಗೆ ಧರ್ಮಸ್ಥಳದಲ್ಲಿ ಲೋಕಾರ್ಪಣೆಗೊಂಡಿತು.  ಶ್ರೀ ಕ್ಷೇತ್ರ ಧರ್ಮಸ್ಥಳದ ಶೌರ್ಯ ವಿಪತ್ತು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ   ತಂಡಕ್ಕೆ  ಯಕ್ಷಭಾರತಿ ದಶಮಾನೋತ್ಸವ ಸೇವಾ ಗೌರವ Read More »

ವಿಟ್ಲ: ಹಿರಿಯರ ಸೇವಾ ಪ್ರತಿಷ್ಠಾನದ ಸಭೆ

ವಿಟ್ಲ:  ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಮೆಲ್ಕಾರ್ ಬಂಟ್ವಾಳ ಇದರ ಫೆಬ್ರವರಿ ತಿಂಗಳ ಕೇಂದ್ರ ಸಮಿತಿಯ ಸಭೆಯು ವಿಟ್ಲ ಮಂಗಿಲ ಪದವು ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಜರಗಿತು.  ಡಾ. ವಾರಿಜಾ  ನೀರ್ಬೈಲು ಕಾರ್ಯಕ್ರಮವನ್ನು ಉದ್ಘಾಟಿಸಿ ಹಿರಿಯರ ಸೇವಾ ಪ್ರತಿಷ್ಠಾನದ ಕಾರ್ಯಕ್ರಮಗಳು ಉತ್ತಮವಾಗಿದ್ದು ತಾಲೂಕು ಘಟಕಗಳು ಹೆಚ್ಚು ಸಕ್ರಿಯವಾಗಿ ತಳಮಟ್ಟದಲ್ಲಿ ಕಾರ್ಯನಿರ್ವಹಿಸಿದಾಗ ಪ್ರತಿಷ್ಠಾನದ ಕಾರ್ಯಕ್ರಮಗಳು ಪರಿಣಾಮಕಾರಿಯಾಗುವುದೆಂದು ತಿಳಿಸಿದರು . ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರತಿಷ್ಠಾನದ ಅಧ್ಯಕ್ಷ ಕಯ್ಯೂರು  ನಾರಾಯಣ ಭಟ್ ಮಾತನಾಡಿ ಗೋ ಸಂರಕ್ಷಣಾ 

ವಿಟ್ಲ: ಹಿರಿಯರ ಸೇವಾ ಪ್ರತಿಷ್ಠಾನದ ಸಭೆ Read More »

error: Content is protected !!
Scroll to Top