ದಕ್ಷಿಣ ಕನ್ನಡ

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸುಳ್ಯದಲ್ಲಿ ವಿಶೇಷ ಕ್ರಮ

ತೋಟಕ್ಕೆ ಭೇಟಿ ಮಾಹಿತಿ ಪಡೆದ ಸಂಸದ ಕ್ಯಾ.ಬ್ರಿಜೇಶ್‌ ಚೌಟ ಸುಳ್ಯ: ಕರಾವಳಿಯಲ್ಲಿ ಅಡಿಕೆ ಬೆಳೆಯನ್ನು ಬಹಳ ಕಾಲದಿಂದ ಬಾಧಿಸುತ್ತಿರುವ ಎಲೆಚುಕ್ಕಿ ರೋಗಕ್ಕೆ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರದ ಮಿಷನ್ ಫಾರ್ ಇಂಟೆಗ್ರೇಟೆಡ್ ಡೆವಲಪ್ಮೆಂಟ್ ಆಫ್ ಹಾರ್ಟಿಕಲ್ಚರ್ ಯೋಜನೆಯಡಿ ಸೆಂಟ್ರಲ್ ಪ್ಲಾಂಟೇಶನ್ ಕ್ರಾಪ್ಸ್ ರಿಸರ್ಚ್ ಇನ್‌ಸ್ಟಿಟ್ಯೂಟ್ ನೇತೃತ್ವದಲ್ಲಿ ದಕ್ಷಿಣ ಕನ್ನಡದಲ್ಲಿ ವ್ಯಾಪಕವಾಗಿರುವ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸುಳ್ಯದ ಗುತ್ತಿಗಾರಿನಲ್ಲಿ ಅಳವಡಿಸಿರುವ ವಿಶೇಷ ಪ್ರಾತಕ್ಷಿಕೆ ಕುರಿತಂತೆ ಬುಧವಾರ ಸಂಸದ ಕ್ಯಾ. ಬ್ರಿಜೇಶ್ ಚೌಟ ತೋಟಕ್ಕೆ ಭೇಟಿ […]

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸುಳ್ಯದಲ್ಲಿ ವಿಶೇಷ ಕ್ರಮ Read More »

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿಯಾಗಿ ವಿದ್ಯಾರ್ಥಿ ಸಾವು

ಉಪ್ಪಿನಂಗಡಿ : ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಕಾರ್ತಿಕ್ (23) ಎಂಬ ಕಾಲೇಜು ವಿದ್ಯಾರ್ಥಿ ಸಾವನ್ನಪ್ಪಿ ಸಹ ಸವಾರೆ ಕಾಲೇಜು ವಿದ್ಯಾರ್ಥಿನಿ ನೇಹಾ ಎಂಬಾಕೆ ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಸಂಭವಿಸಿದೆ. ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳ ತಂಡ ದ್ವಿಚಕ್ರ ವಾಹನಗಳಲ್ಲಿ ಪರಿಚಿತರ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ದ್ವಿಚಕ್ರ ವಾಹನ

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿಯಾಗಿ ವಿದ್ಯಾರ್ಥಿ ಸಾವು Read More »

ನಿಲ್ಲಿಸಿದ್ದ ಆಟೋರಿಕ್ಷಾಕ್ಕೆ ತೂಫಾನ್‌ ವಾಹನ ಡಿಕ್ಕಿಯಾಗಿ ಮಹಿಳೆ ಸಾವು

ಹೆದ್ದಾರಿ ಬದಿ ನೀರು ಕುಡಿಯಲೆಂದು ರಿಕ್ಷಾ ನಿಲ್ಲಿಸಿದಾಗ ಬಂದು ಅಪ್ಪಳಿಸಿದ ತೂಫಾನ್‌ ಉಪ್ಪಿನಂಗಡಿ: ಕೋಣಾಲು ಗ್ರಾಮದ ಕೋಲ್ಪೆ ಎಂಬಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಆಟೋರಿಕ್ಷಾಕ್ಕೆ ತೂಫಾನ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಗಿರಿಜಾ (74) ಎಂಬವರು ಮೃತಪಟ್ಟಿದ್ದು, ಇತರ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ. ತೂಫಾನ್ ವಾಹನವನ್ನು ಅದರ ಚಾಲಕ ಉಪ್ಪಿನಂಗಡಿ ಕಡೆಯಿಂದ ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿಕೊಂಡು ಬಂದು, ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಆಟೋರಿಕ್ಷಾಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾನೆ. ಅಪಘಾತಕ್ಕೀಡಾದ ರಿಕ್ಷಾದಲ್ಲಿ ಬಂಟ್ವಾಳ

ನಿಲ್ಲಿಸಿದ್ದ ಆಟೋರಿಕ್ಷಾಕ್ಕೆ ತೂಫಾನ್‌ ವಾಹನ ಡಿಕ್ಕಿಯಾಗಿ ಮಹಿಳೆ ಸಾವು Read More »

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ : ಉಗ್ರನ ಶಿಕ್ಷೆ ಪ್ರಮಾಣ ಹೆಚ್ಚಿಸಲು ಮೇಲ್ಮನವಿ

ಭೀಕರ ಕೃತ್ಯ ಎಸಗಿದ ಉಗ್ರನಿಗೆ ನೀಡಿದ ಶಿಕ್ಷೆ ಕಡಿಮೆಯಾಯಿತು ಎಂಬ ಅಭಿಪ್ರಾಯ ಬೆಂಗಳೂರು: ಮಂಗಳೂರು ಕುಕ್ಕರ್ ಬಾಂಬ್‌ ಬ್ಲಾಸ್ಟ್ ಪ್ರಕರಣದ ಅಪರಾಧಿ ಉಗ್ರ ಶಾರಿಖ್‌ಗೆ ವಿಧಿಸಲಾದ 10 ವರ್ಷ ಕಠಿಣ ಶಿಕ್ಷೆಯ ಪ್ರಮಾಣವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲು ಎನ್‌ಐಎ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. 10 ವರ್ಷ ಶಿಕ್ಷೆ ತುಂಬಾ ಕಡಿಮೆ ಆಯ್ತು ಎಂದು ಎನ್‌ಐಎ ನಿರ್ಧರಿಸಿದೆ. ಶಾರಿಕ್‌ಗೆ ಈಗ 27 ವರ್ಷ, ಈಗಾಗಲೇ 3 ವರ್ಷ ಜೈಲಿನಲ್ಲಿ ಕಳೆದಿದ್ದಾನೆ. ಇನ್ನೂ 7 ವರ್ಷ ಮಾತ್ರ ಜೈಲು ಶಿಕ್ಷೆ

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ : ಉಗ್ರನ ಶಿಕ್ಷೆ ಪ್ರಮಾಣ ಹೆಚ್ಚಿಸಲು ಮೇಲ್ಮನವಿ Read More »

ಗುರುವಾಯನಕೆರೆಯಲ್ಲಿ ಯಕ್ಷಗಾನ ಬಣ್ಣಗಾರಿಕೆ ಕಲಿಕಾ ಶಿಬಿರ

ಬೆಳ್ತಂಗಡಿ: ಶ್ರೀ ಶಾರದಾಂಬ ಯಕ್ಷಗಾನ ಕಲಾ ಬಳಗದ ವತಿಯಿಂದ ಯಕ್ಷಗಾನ ಬಣ್ಣಗಾರಿಕೆ ಕಲಿಕಾ ಶಿಬಿರವು ಗುರುವಾಯನಕೆರೆ ಶ್ರೀ ಶಾರದಾಂಬ ಭಜನಾ ಮಂಡಳಿಯಲ್ಲಿ ಜರಗಿತು. ಭಾಗವತ ದೇವಿಪ್ರಸಾದ್, ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ಶ್ರೇಯಸ್ ವಾಮದಪದವು, ಕೇಶವ ಹಿಮ್ಮೇಳದಲ್ಲಿ ಚೌಕಿ ಪೂಜೆ ನಡೆಸಿ, ಯಕ್ಷಗಾನ ಕಲಿಕಾ ವಿದ್ಯಾರ್ಥಿಗಳಿಂದ ಪೂರ್ವರಂಗದ ಪ್ರಾತ್ಯಕ್ಷಿಕೆ ನಡೆಯಿತು. ಕೊಡಮಣಿತ್ತಾಯ ದೈವಸ್ಥಾನ ಅರಮಲೆ ಬೆಟ್ಟ ಅನುವಂಶಿಕ ಮೊಕ್ತೇಸರ ಸುಕೇಶ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಲಾ ಬಳಗದಿಂದ ತರಬೇತಿ ಪಡೆದ ವಿದ್ಯಾರ್ಥಿಗಳು ಉತ್ತಮ ಕಲಾವಿದರಾಗಿ ರೂಪುಗೊಳ್ಳುವಂತಾಗಲು ಶಿಬಿರವು

ಗುರುವಾಯನಕೆರೆಯಲ್ಲಿ ಯಕ್ಷಗಾನ ಬಣ್ಣಗಾರಿಕೆ ಕಲಿಕಾ ಶಿಬಿರ Read More »

ಸ್ಕೂಟಿಗೆ ಡಿಕ್ಕಿಯಾಗಿ ಬೈಕ್ ಸವಾರ ಸಾವು

ಕಾರ್ಕಳ: ಬೈಕ್ ಮತ್ತು ಸ್ಕೂಟಿ ಡಿಕ್ಕಿಯಾಗಿ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಮೃತಪಟ್ಚ ಘಟನೆ ಮಿಯ್ಯಾರು ಕುಂಟಿಬೈಲ್ ರಸ್ತೆಯ ನೀರಿನ ಟ್ಯಾಂಕ್ ಎದುರು ಸಂಭವಿಸಿದೆ. ಕೆರ್ವಾಶೆಯ ಸುಖೇಶ್ ಬಂಗಾರ ಎಂಬವರೇ ಮೃತ ದುರ್ದೈವಿ. ಕುಂಟಿಬೈಲ್ ‌ಮಾರ್ಗದಿಂದ ಕಾರ್ಕಳಕ್ಕೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಪಘಾತ ನಡೆದ ತಕ್ಷಣವೇ ಸುಖೇಶ್ ಅವರನ್ನು ಕಾರ್ಕಳದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅದಾಗಲೇ ಅವರು ಮೃತಪಟ್ಚಿದ್ದರು. ವಿದೇಶದಲ್ಲಿ ಉದ್ಯೋಗ ಮಾಡುತ್ತಿದ್ದ ಅವರು ಕೆಲವು ತಿಂಗಳ ಹಿಂದಷ್ಟೇ ಊರಿಗೆ ಬಂದಿದ್ದರು. ಮೃತರು ಪತ್ನಿ,

ಸ್ಕೂಟಿಗೆ ಡಿಕ್ಕಿಯಾಗಿ ಬೈಕ್ ಸವಾರ ಸಾವು Read More »

ಹೊಸ ಮನೆಯ ಗೃಹ ಪ್ರವೇಶದ ಸಂತಸದಲ್ಲಿದ್ದ ಯಜಮಾನ ಹೃದಯಾಘಾತಕ್ಕೆ ಬಲಿ

ಬಂಟ್ವಾಳ: ಹೊಸ ಮನೆಯ ಗೃಹ ಪ್ರವೇಶದ ಸಂತಸದಲ್ಲಿದ್ದ ಮನೆಯ ಯಜಮಾನ, ಮುಸ್ಲಿಂ ವಿದ್ವಾಂಸರೊಬ್ಬರು ಮೃತಪಟ್ಚ ಘಟನೆ ಸಜೀಪಮುನ್ನೂರಿನ ಆಲಾಡಿ ಕೊಪ್ಪಳದಲ್ಲಿ ‌ನಡೆದಿದೆ. ಅಮೀರ್ ಅರ್ಶದಿ (36) ಹೃದಯಾಘಾತಕ್ಕೆ ತುತ್ತಾಗಿ ಮೃತಪಟ್ಟ ವ್ಯಕ್ತಿ. ಇವರು ಕಾಸರಗೋಡು ತಾಳಿಪಡ್ಪು ಮಸ್ಟಿದುಲ್ ಹುದಾ ಮಸೀದಿಯಲ್ಲಿ ಐದು ವರ್ಷಗಳಿಂದ ಖತೀಬರಾಗಿ ಸೇವೆ ಸಲ್ಲಿಸುತ್ತಿದ್ದರಿ. ಇತ್ತೀಚೆಗಷ್ಟೆ ಕಿಡ್ನಿ ಸಂಬಂಧಿ ಕಾಯಿಲೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರ ಮಧ್ಯರಾತ್ರಿ ಹಠಾತ್ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಬಿ.ಸಿ.ರೋಡ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಅಲ್ಲಿನ ವೈದ್ಯರ

ಹೊಸ ಮನೆಯ ಗೃಹ ಪ್ರವೇಶದ ಸಂತಸದಲ್ಲಿದ್ದ ಯಜಮಾನ ಹೃದಯಾಘಾತಕ್ಕೆ ಬಲಿ Read More »

ಕೊಲೆ ಪ್ರಕರಣದ ಅಪರಾಧಿಗೆ ಜೀವಾವಧಿ ಶಿಕ್ಷೆ

ಉಳ್ಳಾಲದ ಮುಕ್ಕಚ್ಚೇರಿಯಲ್ಲಿ ನಡೆದಿದ್ದ ಕೊಲೆ ಮಂಗಳೂರು : ಉಳ್ಳಾಲದ ಮುಕ್ಕಚ್ಚೇರಿಯಲ್ಲಿ 2017ರ ಅಕ್ಟೋಬರ್ 4ರಂದು ನಡೆದಿದ್ದ ಝಬೇರ್ ಎಂಬವರ ಕೊಲೆ ಮತ್ತು ಇಲ್ಯಾಸ್ ಎಂಬವರ ಕೊಲೆಯತ್ನ ಪ್ರಕರಣ ಅಪರಾಧಿ ಅಬ್ದುಲ್ ರಹ್ಮಾನ್ ಸುಹೇಲ್‌ಗೆ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 2017ರ ಅಕ್ಟೋಬರ್ 4ರಂದು ರಾತ್ರಿ ಜುಬೇರ್ ಮತ್ತು ಇಲ್ಯಾಸ್ ಮಾತನಾಡುತ್ತಿದ್ದಾಗ ಮಾರಕಾಸ್ತ್ರಗಳೊಂದಿಗೆ ಬಂದ ತಂಡವೊಂದು ಅವರ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಜುಬೇರ್ ಕೊಲೆಯಾಗಿದ್ದರು. ಮಧ್ಯಪ್ರವೇಶಿಸಲು

ಕೊಲೆ ಪ್ರಕರಣದ ಅಪರಾಧಿಗೆ ಜೀವಾವಧಿ ಶಿಕ್ಷೆ Read More »

ಕಡಬ: ಕುಮಾರಧಾರಾ ನದಿಯಲ್ಲಿ ಮುಳುಗಿ ಯುವಕ ಸಾವು

ಸ್ನಾನಕ್ಕಾಗಿ ನದಿಗಿಳಿದು ನಾಪತ್ತೆಯಾಗಿದ್ದ ಯುವಕ ಕಡಬ: ಕುಮಾರಧಾರಾ ನದಿಗೆ ಸ್ನಾನಕ್ಕೆ ಇಳಿದಿದ್ದ ಯುವಕನೋರ್ವ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಘಟನೆ ಸೋಮವಾರ ಸಂಜೆ ಸಂಭವಿಸಿದ್ದು, ಯುವಕ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಮೃತ ಯುವಕನನ್ನು ಮರ್ಧಾಳ ನಿವಾಸಿ ಮಂಜು ಎಂಬವರ ಪುತ್ರ ರಕ್ಷಿತ್ (26) ಎಂದು ಗುರುತಿಸಲಾಗಿದೆ. ರಕ್ಷಿತ್ ಸೋಮವಾರ ಸಂಜೆ ತನ್ನ ಸ್ನೇಹಿತರೊಂದಿಗೆ ಐತ್ತೂರು ಗ್ರಾಮದ ಅರಬ್ಬಿ ತೋಡು ಎಂಬಲ್ಲಿ ಸ್ನಾನಕ್ಕಾಗಿ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಈಜಲು ತಿಳಿದಿದ್ದರೂ ನೀರಿನ ಸೆಳೆತಕ್ಕೆ ಸಿಲುಕಿದ

ಕಡಬ: ಕುಮಾರಧಾರಾ ನದಿಯಲ್ಲಿ ಮುಳುಗಿ ಯುವಕ ಸಾವು Read More »

ಬ್ರಹ್ಮರಕೂಟ್ಲು ಟೋಲ್‌ಗೇಟ್‌ ಮುಚ್ಚಲು ಆಗ್ರಹಿಸಿ ಇಂದು ಜನಾಂದೋಲನ ನಡಿಗೆ

ಬಿ.ಸಿ.ರೋಡ್‌ ನಾರಾಯಣಗುರು ವೃತ್ತದಿಂದ ಬ್ರಹ್ಮರಕೂಟ್ಲು ಟೋಲ್‌ಗೇಟ್‌ವರೆಗೆ ನಡಿಗೆ ಮಂಗಳೂರು: ಇಲ್ಲಿನ ಬ್ರಹ್ಮರಕೊಟ್ಲು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರಿಗೆ ಕನಿಷ್ಠ ಮೂಲ ಸೌಕರ್ಯವನ್ನೂ ನೀಡದೆ 23 ವರ್ಷಗಳಿಂದ ಕಾನೂನುಬಾಹಿರವಾಗಿ ಸುಂಕ ವಸೂಲಿ ಮಾಡುತ್ತಿರುವ ಟೋಲ್‌ಗೇಟ್ ಮುಚ್ಚಲು ಆಗ್ರಹಿಸಿ ಇಂದು ಬೃಹತ್‌ ಜನಾಂದೋಲನ ನಡಿಗೆ ನಡೆಯಲಿದೆ. ಮಾಜಿ ಸಚಿವ ಹಾಗೂ ಟೋಲ್‌ಗೇಟ್ ತೆರವು ಹೋರಾಟ ಸಮಿತಿ ಗೌರವಾಧ್ಯಕ್ಷ ಬಿ.ರಮಾನಾಥ ರೈ ನೇತೃತ್ವದಲ್ಲಿ ಹೋರಾಟ ನಡೆಯಲಿದೆ. ಗುರುಪುರ ಬ್ಲಾಕ್‌ ಕಾಂಗ್ರೆಸ್‌ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಬಿ.ಸಿ.

ಬ್ರಹ್ಮರಕೂಟ್ಲು ಟೋಲ್‌ಗೇಟ್‌ ಮುಚ್ಚಲು ಆಗ್ರಹಿಸಿ ಇಂದು ಜನಾಂದೋಲನ ನಡಿಗೆ Read More »

error: Content is protected !!
Scroll to Top