ದಕ್ಷಿಣ ಕನ್ನಡ

ಯುವ ಕಂಬಳ ಸಂಘಟಕ ಅಭಿಷೇಕ್‌ ಆಳ್ವ ಶವ ಪಡುಬಿದ್ರೆ ನದಿ ಕಿನಾರೆಯಲ್ಲಿ ಪತ್ತೆ

ಬುಧವಾರ ರಾತ್ರಿಯಿಂದ ನಾಪತ್ತೆಯಾಗಿದ್ದ ಅಭಿಷೇಕ್‌ ಆಳ್ವ ಉಡುಪಿ: ಕಂಬಳ ಸಂಘಟಕ ವಾಮಂಜೂರು ತಿರುವೈಲುಗುತ್ತು ನವೀನ್‌ಚಂದ್ರ ಆಳ್ವ ಅವರ ಪುತ್ರ ಉದ್ಯಮಿ ಅಭಿಷೇಕ್‌ ಆಳ್ವ (29) ಅವರ ಮೃತದೇಹ ಶುಕ್ರವಾರ ಮುಂಜಾನೆ ಕಾಪು ತಾಲೂಕಿನ ಹೆಜಮಾಡಿ ಸಮೀಪ ಶಾಂಭ ವಿ ನದಿ ಕಿನಾರೆಯಲ್ಲಿ ಕಂಡುಬಂದಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ವ್ಯಕ್ತವಾಗಿದೆ. ತಂದೆಯಂತೇ ಅಭಿಷೇಕ್‌ ಆಳ್ವ ಕೂಡ ಕಂಬಳ ಪ್ರೇಮಿಯಾಗಿದ್ದು, ಜೊತೆಗೆ ತಂದೆಯ ಉದ್ಯಮವನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದರು. ವಾಮಂಜೂರು ತಿರುವೈಲು ಕಂಬಳ ಬಹಳ ಪ್ರಸಿದ್ಧವಾಗಿದ್ದು, ಇದನ್ನು ಸಂಘಟಿಸಲು ಅಭಿಷೇಕ್‌ […]

ಯುವ ಕಂಬಳ ಸಂಘಟಕ ಅಭಿಷೇಕ್‌ ಆಳ್ವ ಶವ ಪಡುಬಿದ್ರೆ ನದಿ ಕಿನಾರೆಯಲ್ಲಿ ಪತ್ತೆ Read More »

ಕಡಬ : 14 ವರ್ಷದ ಬಾಲಕ ನೇಣು ಹಾಕಿಕೊಂಡು ಆತ್ಮಹತ್ಯೆ

ಕಡಬ: ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ರಾತ್ರಿ ಕಡಬ ಪೊಲೀಸ್‌ ಠಾಣಾ ವ್ಯಾಪ್ತಿಯ ಕಲ್ಲುಗುಡ್ಡೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಖಂಡಿಗ‌ ಮನೆಯ ಗಗನ್(14) ಎಂದು ಗುರುತಿಸಲಾಗಿದೆ. ಗುರುವಾರ ಎಂದಿನಂತೆ ಶಾಲೆಗೆ ತೆರಳಿದ್ದ ಗಗನ್ ಶಾಲೆಯಿಂದ‌ ಮನೆಗೆ ಬಂದು ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ

ಕಡಬ : 14 ವರ್ಷದ ಬಾಲಕ ನೇಣು ಹಾಕಿಕೊಂಡು ಆತ್ಮಹತ್ಯೆ Read More »

ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್‌ಗಿರಿ ಮಾಡಿದ ಇಬ್ಬರ ಬಂಧನ

ಸಹಪಾಠಿಯ ಆರೋಗ್ಯ ವಿಚಾರಿಸಲು ಹೋಗುತ್ತಿದ್ದ ವಿದ್ಯಾರ್ಥಿಗಳನ್ನು ಅಡ್ಡಗಟ್ಟಿ ಹಲ್ಲೆ ಉಪ್ಪಿನಂಗಡಿ: ಅನಾರೋಗ್ಯದಿಂದ ಬಳಲುತ್ತಿದ್ದ ಸಹಪಾರಿಯ ಆರೋಗ್ಯ ವಿಚಾರಿಸಲು ಆತನ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮುಸ್ತಾಫ ಪೆರಿಯಡ್ಕ ಹಾಗೂ ಮುಸ್ತಾಫ ಬಂಧಿತ ಆರೋಪಿಗಳು ನ.6ರಂದು ಕಾಲೇಜೊಂದರ 9 ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಇತ್ತೀಚೆಗೆ ಅನಾರೋಗ್ಯದಿಂದ ಚಿಕಿತ್ಸೆ ಪಡೆದು ಮನೆಯಲ್ಲಿದ್ದ ತಮ್ಮ ಸಹಪಾಠಿಯ ಆರೋಗ್ಯ ವಿಚಾರಿಸಲು ಬೆಳಗ್ಗೆ ಕಾಲೇಜಿನಿಂದ ಹೊರಟು ಪೆರಿಯಡ್ಕ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಬೈಕ್‌ನಲ್ಲಿ

ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್‌ಗಿರಿ ಮಾಡಿದ ಇಬ್ಬರ ಬಂಧನ Read More »

ಧರ್ಮಸ್ಥಳ ಪ್ರಕರಣ : ಹೈಕೋರ್ಟಿಗೆ ಪಿಐಎಲ್‌ ಹಾಕಿದ ಕುಸುಮಾವತಿ

74 ನಾಪತ್ತೆ ಪ್ರಕರಣ ಕುರಿತು ಎಫ್‌ಐಆರ್‌ ದಾಖಲಿಸಿ ತನಖೆ ನಡೆಸಲು ಆಗ್ರಹ ಧರ್ಮಸ್ಥಳ: ಧರ್ಮಸ್ಥಳ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆ ಸಂಭವಿಸಿದ್ದು, ಕೊಲೆಯಾದ ಸೌಜನ್ಯ ತಾಯಿ ಕುಸುಮಾವತಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿ ಅನಾಥ ಶವ ಮತ್ತು ನಾಪತ್ತೆ ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಿಸಲು ಮನವಿ ಮಾಡಿದ್ದಾರೆ. ಮಾಹಿತಿಗಳ ಪ್ರಕಾರ 74 ನಾಪತ್ತೆ ಪ್ರಕರಣಗಳು ದಾಖಲಾಗಿವೆ. ಈ ಎಲ್ಲ ನಾಪತ್ತೆ ಪ್ರಕರಣಗಳನ್ನು ಎಫ್‌ಐಆರ್‌ ಆಗಿ ಪರಿವರ್ತಿಸಬೇಕು ಎಂದು ಕುಸುಮಾವತಿ ಪಿಐಎಲ್‌ನಲ್ಲಿ ಮನವಿ ಮಾಡಿದ್ದಾರೆ. ಧರ್ಮಸ್ಥಳದಲ್ಲಿ ನೂರಾರು ಮೃತ ದೇಹಗಳನ್ನು

ಧರ್ಮಸ್ಥಳ ಪ್ರಕರಣ : ಹೈಕೋರ್ಟಿಗೆ ಪಿಐಎಲ್‌ ಹಾಕಿದ ಕುಸುಮಾವತಿ Read More »

ಅಪ್ರಾಪ್ತ ವಯಸ್ಸಿನ ಮಗನಿಗೆ ಸ್ಕೂಟಿ ನೀಡಿದ ಮಹಿಳೆಗೆ 26 ಸಾವಿರ ರೂ. ದಂಡ

ಮಂಗಳೂರು : ಅಪ್ರಾಪ್ತ ವಯಸ್ಸಿನ ಮಗನಿಗೆ ಸ್ಕೂಟಿ ಚಲಾಯಿಸಲು ನೀಡಿದ ತಾಯಿಗೆ ಮಂಗಳೂರಿನ 4ನೇ ಜೆ.ಎಂ.ಎಪ್.ಸಿ ನ್ಯಾಯಾಲಯ 26,000 ರೂ. ದಂಡ ವಿಧಿಸಿ ಆದೇಶಿದೆ. ಕಳೆದ ಅಕ್ಟೋಬರ್ 10ರಂದು ಬೈಕಂಪಾಡಿಯಲ್ಲಿ ಹತಿಜಮ್ಮ ಎಂಬ ಮಹಿಳೆ ತನ್ನ ಅಪ್ರಾಪ್ತ ಮಗನಿಗೆ ಸ್ಕೂಟಿ ಚಲಾಯಿಸಲು ನೀಡಿದ್ದಾರೆ. ಈ ಬಗ್ಗೆ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನವೆಂಬರ್ 5ರಂದು ಈ ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 4ನೇ ಜೆ.ಎಂ.ಎಪ್.ಸಿ ನ್ಯಾಯಾಲಯ, ಅಪ್ರಾಪ್ತ ಬಾಲಕನಿಗೆ ಸ್ಕೂಟಿ ಚಲಾಯಿಸಲು ನೀಡಿದ್ದಕ್ಕೆ ವಾಹನದ ಮಾಲೀಕರಿಗೆ

ಅಪ್ರಾಪ್ತ ವಯಸ್ಸಿನ ಮಗನಿಗೆ ಸ್ಕೂಟಿ ನೀಡಿದ ಮಹಿಳೆಗೆ 26 ಸಾವಿರ ರೂ. ದಂಡ Read More »

ಸಿಗರೇಟ್‌ ಚಿಲ್ಲರೆಯಾಗಿ ಮಾರುವ ಅಂಗಡಿಗಳಿಗೆ ಬೀಗ : ಜಿಲ್ಲಾಡಳಿತ ಆದೇಶ

ಸಿಗರೇಟ್‌ ಬಿಡಿಯಾಗಿ ಮಾರಾಟ ಮಾಡಲು ಅವಕಾಶವಿಲ್ಲ ಮಂಗಳೂರು : ಧೂಮಪಾನ ಮಾಡಲು ಮತ್ತು ಸಿಗರೇಟ್ ಚಿಲ್ಲರೆಯಾಗಿ ಮಾರಾಟ ಮಾಡಲು ಅವಕಾಶ ನೀಡುವ ಅಂಗಡಿಗಳು ಮತ್ತು ಹೋಟೆಲ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ, ತಂಬಾಕು ನಿಯಂತ್ರಣ ಕಾನೂನುಗಳನ್ನು ಉಲ್ಲಂಘಿಸುವುದು ಕಂಡುಬಂದರೆ ಅಂತಹ ಅಂಗಡಿಗಳನ್ನು ಮುಚ್ಚುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಸಿ) ರಾಜು ಕೆ.ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ನಡೆದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ನಿರ್ದೇಶನಗಳನ್ನು

ಸಿಗರೇಟ್‌ ಚಿಲ್ಲರೆಯಾಗಿ ಮಾರುವ ಅಂಗಡಿಗಳಿಗೆ ಬೀಗ : ಜಿಲ್ಲಾಡಳಿತ ಆದೇಶ Read More »

ಗೋ ಅಕ್ರಮ ಸಾಗಾಟ ಆರೋಪಿಯ ಮನೆ ಮುಟ್ಟುಗೋಲು

ಉಳ್ಳಾಲದಲ್ಲಿರುವ ಮನೆಯನ್ನು ಜಪ್ತಿ ಮಾಡಿದ ಬೆಳ್ತಂಗಡಿ ಪೊಲೀಸರು ಬೆಳ್ತಂಗಡಿ : ಕಾರಿನಲ್ಲಿ ಅಕ್ರಮವಾಗಿ ಮೂರು ದನಗಳನ್ನು ಸಾಗಾಟ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಇಬ್ಬರು ಆರೋಪಿಗಳಲ್ಲಿ ಒಬ್ಬನ ಮನೆಯನ್ನು ಧರ್ಮಸ್ಥಳ ಪೊಲೀಸರು ಮುಟ್ಟುಗೋಲು ಹಾಕಿ ಜಪ್ತಿ ಮಾಡಿದ್ದಾರೆ. ‌ನ.2ರಂದು ಪಟ್ರಮೆ ಗ್ರಾಮದ ಪಟ್ಟೂರು ರಸ್ತೆಯಲ್ಲಿ ಗೋ ಮಾಂಸ ಮಾಡಲು ಅಕ್ರಮವಾಗಿ ಮೂರು ದನಗಳನ್ನು KA-19-MC-5862 ನಂಬರಿನ ರಿಟ್ಜ್ ಕಾರಿನಲ್ಲಿ ಸಾಗಾಟ ಮಾಡುವಾಗ ಉಳ್ಳಾಲ ತಾಲೂಕಿನ ಮಹಮ್ಮದ್ ಖಲೀಲ್ ಅಲಿಯಾಸ್‌ ತೌಸೀಫ್ (38) ಮತ್ತು ಮಹಮ್ಮದ್ ಸಿನಾನ್(25) ಸಿಕ್ಕಿ ಬಿದ್ದಿದ್ದರು.

ಗೋ ಅಕ್ರಮ ಸಾಗಾಟ ಆರೋಪಿಯ ಮನೆ ಮುಟ್ಟುಗೋಲು Read More »

ಮಂಗಳೂರು : ಮಗಳೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ವ್ಯಕ್ತಿಯನ್ನು ರಕ್ಷಿಸಿದ ಪೊಲೀಸರು

ಸಮುದ್ರಕ್ಕೆ ಜಿಗಿಯಲು ಬಂದು ಜನರನ್ನು ನೋಡಿ ವಾಪಸು ಮನೆಗೆ ಹೋಗಿ ನೇಣಿಗೆ ಶರಣಾಗಲು ಯತ್ನ ಪೊಲೀಸರ ಸಕಾಲಿಕ ಕ್ರಮದಿಂದ ಉಳಿದ ತಂದೆ-ಮಗಳ ಜೀವ ಮಂಗಳೂರು: ಕೌಟುಂಬಿಕ ಕಲಹದಿಂದ ಮನನೊಂದು ತನ್ನ ಮಗುವಿನೊಂದಿಗೆ ಆತ್ಮಹತ್ಯೆಗೆ ಮುಂದಾಗಿದ್ದ ಯುವಕನೊಬ್ಬನನ್ನು ಪಣಂಬೂರು ಪೊಲೀಸರು ಸಮಯಪ್ರಜ್ಞೆ ಮೆರೆದು ರಕ್ಷಿಸಿದ ಘಟನೆ ಸೋಮವಾರ ಮುಸ್ಸಂಜೆ ವೇಳೆಗೆ ಸಂಭವಿಸಿದೆ. ಕೂಳೂರು ಪಂಜಿಮೊಗರು ಅಂಬಿಕಾ ನಗರ ನಿವಾಸಿ ರಾಜೇಶ್(35) ಮತ್ತವರ ನಾಲ್ಕು ವರ್ಷದ ಪುತ್ರಿಯನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪತ್ನಿಯೊಂದಿಗೆ ಜಗಳ ಮಾಡಿಕೊಂಡಿದ್ದ ರಾಜೇಶ್

ಮಂಗಳೂರು : ಮಗಳೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ವ್ಯಕ್ತಿಯನ್ನು ರಕ್ಷಿಸಿದ ಪೊಲೀಸರು Read More »

ಸುಳ್ಯ : ಬೆನಿಫಿಟ್‌ ಸ್ಕೀಂ ಹೆಸರಿನಲ್ಲಿ ವಂಚಿಸಿದವರಿಗೆ ಜೈಲು ಶಿಕ್ಷೆ

ಶ್ರೀ ತತ್ವಮಸಿ ಹೆಸರಿನಲ್ಲಿ ಸಂಸ್ಥೆ ತೆರೆದು ಕೋಟಿಗಟ್ಟಲೆ ರೂ. ಗುಳುಂ ಮಾಡಿದ ಪ್ರಕರಣ ಸುಳ್ಯ : ಸುಳ್ಯದಲ್ಲಿ ಶ್ರೀ ತತ್ವಮಸಿ ಚಾರಿಟೇಬಲ್ ಟ್ರಸ್ಟ್ (ಆರ್) ಮತ್ತು ಶ್ರೀ ತತ್ವಮಸಿ ಎಂಟರ್‌ಪ್ರೈಸಸ್ (ಆರ್) ಹೆಸರಿನಲ್ಲಿ ‘ಬೆನಿಫಿಟ್ ಸ್ಕೀಮ್’ ಮೂಲಕ ಸಾರ್ವಜನಿಕರನ್ನು ವಂಚಿಸಿದ ಆರೋಪದ ಮೇಲೆ ಮೂವರು ವ್ಯಕ್ತಿಗಳಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಶಿಕ್ಷೆಗೊಳಗಾದ ಅಪರಾಧಿಗಳನ್ನು ಕೆ.ಪಿ. ಗಣೇಶ್, ಗೀತಾ ಕೆ.ಎಸ್. ಮತ್ತು ಭಾರತಿ ಎಂದು ಗುರುತಿಸಲಾಗಿದೆ. ಕೆ.ಪಿ. ಕೃಷ್ಣಪ್ಪ ಗೌಡ, ಗೀತಾ ಗಣೇಶ್, ಎನ್.ಇ.ವೈ. ಕಮಲಾಕ್ಷ ಮತ್ತು ಕೆ.

ಸುಳ್ಯ : ಬೆನಿಫಿಟ್‌ ಸ್ಕೀಂ ಹೆಸರಿನಲ್ಲಿ ವಂಚಿಸಿದವರಿಗೆ ಜೈಲು ಶಿಕ್ಷೆ Read More »

ವಾಯುಭಾರ ಕುಸಿತ : ಕರಾವಳಿಯಲ್ಲಿ ಮತ್ತೆ ಮಳೆ ಸಾಧ್ಯತೆ

ಮಂಗಳೂರು : ಬಂಗಾಲ ಕೊಲ್ಲಿಯಲ್ಲಿ ಮತ್ತೆ ವಾಯಬಾರ ಕುಸಿತದ ಸಾಧ್ಯತೆ ಗೋಚರಿಸಿದ್ದು, ಇದರ ಪರಿಣಾಮವಾಗಿ ಕರಾವಳಿಯ ಕೆಲವೆಡೆ ಒಂದೆರಡು ದಿನ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಬುಧವಾರದಿಂದ 2-3 ದಿನ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಭಾನುವಾರದಿಂದ ಮಳೆ ಕ್ಷೀಣಗೊಂಡಿತ್ತು. ಮಂಗಳವಾರ ಮೋಡ ಕವಿದ ವಾತಾವರಣವಿದ್ದು ಬೆಳಗ್ಗೆ ಅಲ್ಲಲ್ಲಿ ತುಂತುರ ಮಳೆಯಾಗಿದೆ. ಸೆಕೆಯ ತೀವ್ರತೆಯೂ ಇದ್ದು,

ವಾಯುಭಾರ ಕುಸಿತ : ಕರಾವಳಿಯಲ್ಲಿ ಮತ್ತೆ ಮಳೆ ಸಾಧ್ಯತೆ Read More »

error: Content is protected !!
Scroll to Top