ದಕ್ಷಿಣ ಕನ್ನಡ

ಬಂಟ್ವಾಳ : ಅಕ್ರಮ ಕಸಾಯಿಖಾನೆಗೆ ದಾಳಿ, ಓರ್ವ ಆರೋಪಿ ಬಂಧನ

ಮನೆಯ ಶೆಡ್‌ನ್ನು ಕಸಾಯಿಖಾನೆಯಾಗಿ ಪರಿವರ್ತಿಸಿ ಜಾನುವಾರು ವಧೆ ಬಂಟ್ವಾಳ : ಇಲ್ಲಿನ ಅರಳ ಗ್ರಾಮದಲ್ಲಿ ಕಾರ್ಯಾಚರಿಸುತ್ತಿದ್ದ ಅಕ್ರಮ ಕಸಾಯಿಖಾನೆಗೆ ಪೊಲೀಸರು ಭಾನುವಾರ ದಾಳಿ ಮಾಡಿ ನಾಲ್ಕು ಜಾನುವಾರುಗಳನ್ನು ರಕ್ಷಿಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಅರಳ ಗ್ರಾಮದ ನಿವಾಸಿ ಮಯ್ಯದ್ದಿ (57) ಬಂಧಿತ ಆರೋಪಿ. ಇತರ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಮನೆಯ ಆವರಣದಲ್ಲಿರುವ ಶೆಡ್ ಬಳಿ ಜಾನುವಾರುಗಳನ್ನು ವಧೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಸಿಕ್ಕಿದ ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ದಾಳಿ ನಡೆಸಿದ್ದಾರೆ.

ಬಂಟ್ವಾಳ : ಅಕ್ರಮ ಕಸಾಯಿಖಾನೆಗೆ ದಾಳಿ, ಓರ್ವ ಆರೋಪಿ ಬಂಧನ Read More »

ಬೆಳ್ತಂಗಡಿ : ಆಟೋರಿಕ್ಷಾ ಪಲ್ಟಿಯಾಗಿ ಬಾಲಕ ಸಾವು; 5 ಮಂದಿಗೆ ಗಾಯ

ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಓರ್ವ ಬಾಲಕ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಭಾನುವಾರ ರಾತ್ರಿ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕುತ್ರೋಟ್ಟು ಟಿ.ಬಿ.ಕ್ರಾಸ್ ರಸ್ತೆಯ ಹೊಕ್ಕಿಲ ಎಂಬಲ್ಲಿ ನಡೆದಿದೆ. ನಾವೂರಿನ ಶಶಿ ಎಂಬವರ ಆಟೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಆಟೋದಲ್ಲಿದ್ದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುಂಡಡ್ಕ ನಿವಾಸಿ ಗಣೇಶ್ ಪುತ್ರ ತನ್ವಿತ್(12) ಎಂಬ ಬಾಲಕ ಮೃತಪಟ್ಟಿದ್ದಾನೆ. ಆಟೋ ಪಲ್ಟಿಯಾದ ರಭಸಕ್ಕೆ ಗಾಯಗೊಂಡಿದ್ದ ತನ್ವಿತ್‌ನನ್ನು ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ

ಬೆಳ್ತಂಗಡಿ : ಆಟೋರಿಕ್ಷಾ ಪಲ್ಟಿಯಾಗಿ ಬಾಲಕ ಸಾವು; 5 ಮಂದಿಗೆ ಗಾಯ Read More »

ಸುಳ್ಯ : ಕಾಡುಹಂದಿ ಅಡ್ಡಬಂದು ಕಾರು ಪಲ್ಟಿ

ಸುಳ್ಯ : ಹಂದಿ ಅಡ್ಡ ಬಂದ ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಸುಳ್ಯ ಸಮೀಪದ ಕೋಲ್ಚಾರಿನ ಕಣಕ್ಕೂರು ಎಂಬಲ್ಲಿ ಭಾನುವಾರ ನಡೆದಿದೆ. ಘಟನೆಯಲ್ಲಿ ಕಾರು ಚಾಲಕ ಗಾಯಗೊಂಡಿದ್ದಾರೆ. ಸುಳ್ಯದಿಂದ ಕೇರಳದ ಬಂದಡ್ಕ ಕಡೆಗೆ ಸಂಚರಿಸುತ್ತಿದ್ದ ಕಾರಿನ ಎದುರು ದಿಢೀರ್‌ ಎಂದು ಕಾಡುಹಂದಿ ರಸ್ತೆಗೆ ಜಿಗಿದು ಅಡ್ಡ ಬಂದಿದೆ. ಈ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಮೋರಿಯ ಕೆಳಗೆ ಉರುಳಿದೆ. ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ.

ಸುಳ್ಯ : ಕಾಡುಹಂದಿ ಅಡ್ಡಬಂದು ಕಾರು ಪಲ್ಟಿ Read More »

ಕಡಬ: ಮಹಿಳೆಗೆ ಕಿರುಕುಳ ನೀಡಿದ ಆರೋಪಿ ಬಂಧನ

ಕಡಬ: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ವ್ಯಕ್ತಿಯನ್ನು ಕಡಬ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಡಬ ನಿವಾಸಿ ಉಮೇಶ್ ಗೌಡ ಬಂಧಿತ ಆರೋಪಿ. ನ.13ರಂದು ರಾತ್ರಿ ಸಂತ್ರಸ್ತ ಮಹಿಳೆ ಮನೆಯ ಹೊರ ಭಾಗದ ಕೊಟ್ಟಿಗೆಯಲ್ಲಿ ನಿದ್ರಿಸುತ್ತಿದ್ದ ವೇಳೆ ಆರೋಪಿ ಅಲ್ಲಿಗೆ ಅಕ್ರಮವಾಗಿ ಪ್ರವೇಶಿಸಿ ಲೈಂಗಿಕ ಕಿರುಕುಳ ನೀಡಲು ಯತ್ನಿಸಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ ಈ ವೇಳೆ ಸಂತ್ರಸ್ತೆ ಸಹಾಯಕ್ಕಾಗಿ ಬೊಬ್ಬೆ ಹೊಡೆದಿದ್ದು, ಮನೆಯೊಳಗಿದ್ದ ಆಕೆಯ ಪತಿ, ಮಕ್ಕಳು ಬಂದು ಆರೋಪಿಯನ್ನು ಹಿಡಿಯಲು ಯತ್ನಿಸಿದಾಗ ಆರೋಪಿ ಹಲ್ಲೆ

ಕಡಬ: ಮಹಿಳೆಗೆ ಕಿರುಕುಳ ನೀಡಿದ ಆರೋಪಿ ಬಂಧನ Read More »

ಎಸ್‌ಐಟಿ ಅಧಿಕಾರಿಗಳ ವಿರುದ್ಧ ಪೊಲೀಸ್‌ ಠಾಣೆಗೆ ದೂರು ನೀಡಿದ ಜಯಂತ್‌ ಟಿ.

ಜಿತೇಂದ್ರ ದಯಾಮ, ಸೈಮನ್‌, ಆರ್‌.ಜಿ.ಮಂಜುನಾಥ ಮತ್ತಿತರರ ವಿರುದ್ಧ ದೂರು ಬೆಳ್ತಂಗಡಿ: ಎಸ್‌ಐಟಿ ತನ್ನ ಮೇಲೆ ಮಾಡಿ, ಬಲವಂತವಾಗಿ ಹೇಳಿಕೆ ಪಡೆದುಕೊಂಡಿದೆ ಎಂದು ಆರೋಪಿಸಿ ರಾಜ್ಯಪಾಲರು ಮತ್ತು ಪೊಲೀಸ್‌ ಮಹಾವರಿಷ್ಠರಿಗೆ ದೂರು ನೀಡಿದ್ದ ಜಯಂತ್‌ ಟಿ. ಈಗ ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತಿಟ್ಟ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳ ವಿರುದ್ಧವೇ ಬೆಳ್ತಂಗಡಿ ಠಾಣೆಗೆ ಜಯಂತ್ ಟಿ. ದೂರು ನೀಡಿದ್ದಾರೆ. ಎಸ್‌ಐಟಿ ಅಧಿಕಾರಿಗಳಾದ ಜಿತೇಂದ್ರ ದಯಾಮ, ಎಸ್.ಪಿ. ಸೈಮನ್, ಡಿವೈಎಸ್ಪಿ ಆರ್ ಜಿ. ಮಂಜುನಾಥ, ಇನ್‌ಸ್ಪೆಕ್ಟ‌ರ್ ಮಂಜುನಾಥ

ಎಸ್‌ಐಟಿ ಅಧಿಕಾರಿಗಳ ವಿರುದ್ಧ ಪೊಲೀಸ್‌ ಠಾಣೆಗೆ ದೂರು ನೀಡಿದ ಜಯಂತ್‌ ಟಿ. Read More »

ಬಿಹಾರ ಗೆಲುವು ವೋಟ್‌ ಚೋರಿ ಸುಳ್ಳಿಗೆ ಸಿಕ್ಕಿದ ಉತ್ತರ : ಕ್ಯಾ.ಬ್ರಿಜೇಶ್‌ ಚೌಟ

ಅಪಪ್ರಚಾರಕ್ಕೆ ತಕ್ಕ ಪಾಠ ಕಲಿಸಿದ ಬಿಹಾರದ ಮತದಾರರು ಎಂದ ಸಂಸದ ಮಂಗಳೂರು: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಮತ್ತೊಮ್ಮೆ ಐತಿಹಾಸಿಕ ಗೆಲುವು ಸಾಧಿಸಿದ್ದು, ಈ ಫಲಿತಾಂಶವು ಬಿಜೆಪಿಗೆ ಮತ್ತಷ್ಟು ಬಲ ನೀಡಲಿದೆ. ಅಷ್ಟೇಅಲ್ಲ, ಕಾಂಗ್ರೆಸ್ ನಾಯಕರ ಸುಳ್ಳು ವೋಟ್ ಚೋರಿ ಆರೋಪಕ್ಕೆ ಬಿಹಾರದ ಮತದಾರರು ತಕ್ಕ ಪಾಠ ಕಲಿಸಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಒಳಗೊಂಡಿರುವ ಎನ್‌ಡಿಎ ಬಹುಮತ ಸಾಧಿಸಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿರುವ ಸಂಸದರು, ಪ್ರಧಾನಮಂತ್ರಿ

ಬಿಹಾರ ಗೆಲುವು ವೋಟ್‌ ಚೋರಿ ಸುಳ್ಳಿಗೆ ಸಿಕ್ಕಿದ ಉತ್ತರ : ಕ್ಯಾ.ಬ್ರಿಜೇಶ್‌ ಚೌಟ Read More »

ಬಿ.ಸಿ.ರೋಡ್‌ ಅಪಘಾತ : ಮೃತರ ಸಂಖ್ಯೆ ಮೂರಕ್ಕೇರಿಕೆ

ಬೆಳ್ಳಂಬೆಳಗ್ಗೆ ಸರ್ಕಲ್‌ಗೆ ಗುದ್ದಿದ ಇನ್ನೋವಾ ಕಾರು ; ಉಡುಪಿ ಕೃಷ್ಣ ಮಠಕ್ಕೆ ಹೋಗುತ್ತಿದ್ದ ಯಾತ್ರಿಕರು ಮಂಗಳೂರು : ಇಂದು ಮುಂಜಾನೆ ಬಿ.ಸಿ.ರೋಡ್‌ನಲ್ಲಿ ಕಾರು ಸರ್ಕಲ್‌ಗೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಿಂದ ಉಡುಪಿ ಬರುತ್ತಿದ್ದ ಕಾರು ಬೆಳ್ಳಂಬೆಳಗ್ಗೆ ಬಿ.ಸಿ.ರೋಡ್‌ನಲ್ಲಿ ನಾರಾಯಣ ಗುರು ವೃತ್ತಕ್ಕೆ ಡಿಕ್ಕಿ ಹೊಡೆದು ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಡ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸರ್ಕಲ್‌ಗೆ ಗುದ್ದಿದ ರಭಸಕ್ಕೆ

ಬಿ.ಸಿ.ರೋಡ್‌ ಅಪಘಾತ : ಮೃತರ ಸಂಖ್ಯೆ ಮೂರಕ್ಕೇರಿಕೆ Read More »

ಬಿ.ಸಿ.ರೋಡ್‌ : ಕಾರು ವೃತ್ತಕ್ಕೆ ಡಿಕ್ಕಿ ಹೊಡೆದು ಇಬ್ಬರು ಸಾವು

ಬಂಟ್ವಾಳ : ಇನ್ನೋವಾ ಕಾರೊಂದು ಬಿ.ಸಿ.ರೋಡ್ ಮುಖ್ಯ ವೃತ್ತಕ್ಕೆ ಢಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಶನಿವಾರ ಮುಂಜಾನೆ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿನತ್ತ ಬರುತ್ತಿದ್ದ ಕಾರು ಶನಿವಾರ ಮುಂಜಾನೆ 5ರ ವೇಳೆಗೆ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ನೇರವಾಗಿ ಢಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟು ಐವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಬೆಂಗಳೂರು ಮೂಲದವರು ಎನ್ನಲಾಗಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.

ಬಿ.ಸಿ.ರೋಡ್‌ : ಕಾರು ವೃತ್ತಕ್ಕೆ ಡಿಕ್ಕಿ ಹೊಡೆದು ಇಬ್ಬರು ಸಾವು Read More »

ಸುರತ್ಕಲ್‌ನಲ್ಲಿ ಟ್ಯಾಂಕರ್‌ನಿಂದ ಗ್ಯಾಸ್‌ ಸೋರಿಕೆ

ಹೆದ್ದಾರಿ ಬಂದ್‌ ಮಾಡಿ ಸುರಕ್ಷತಾ ಕ್ರಮ ಕೈಗೊಂಡ ಅಧಿಕಾರಿಗಳು ಮಂಗಳೂರು: ನಗರದ ಹೊರವಲಯದ ಸುರತ್ಕಲ್ ಜಂಕ್ಷನ್‌ನಲ್ಲಿ ಅಥರ್ವಾ ಆಸ್ಪತ್ರೆ ಬಳಿ ಸಿಎನ್‌ಜಿ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಒಂದರಲ್ಲಿ ಶುಕ್ರವಾರ ರಾತ್ರಿ ಸೋರಿಕೆ ಉಂಟಾಗಿ ಪರಿಸರದಲ್ಲಿ ಆತಂಕದ ಪರಿಸ್ಥಿತಿ ಉಂಟಾಯಿತು. ಕೂಡಲೇ ಸುರಕ್ಷತಾ ಕ್ರಮ ಕೈಗೊಂಡು ಪರಿಸ್ಥಿತಿ ನಿಯಂತ್ರಿಸಲಾಯಿತು. ಬೈಕಂಪಾಡಿ ಗೈಲ್ ಪಂಪ್‌ನಿಂದ ಸಿಎನ್‌ಜಿ ತುಂಬಿಸಿಕೊಂಡು ಉಡುಪಿ ಕಡೆ ಹೋಗುತ್ತಿದ್ದ ಟ್ಯಾಂಕರ್ ಸುರತ್ಕಲ್ ತಲುಪುತ್ತಿದ್ದಂತೆ ಸೋರಿಕೆ ಆರಂಭವಾಗಿತ್ತು. ಚಾಲಕ ತಕ್ಷಣ ಟ್ಯಾಂಕರನ್ನು ಹೆದ್ದಾರಿ ಬದಿ ನಿಲ್ಲಿಸಿ ಅಪಾಯದ ಮುನ್ಸೂಚನೆಯನ್ನು

ಸುರತ್ಕಲ್‌ನಲ್ಲಿ ಟ್ಯಾಂಕರ್‌ನಿಂದ ಗ್ಯಾಸ್‌ ಸೋರಿಕೆ Read More »

error: Content is protected !!
Scroll to Top