ದಕ್ಷಿಣ ಕನ್ನಡ

ಎಸ್‌ಐಟಿ ವಿರುದ್ಧವೇ ದೂರು ನೀಡಿದ ಜಯಂತ

ಹಲ್ಲೆ ಮಾಡಿ ಬಲವಂತದಿಂದ ಹೇಳಿಕೆ ಪಡೆದಿದ್ದಾರೆ ಎಂದು ಆರೋಪ ಬೆಳ್ತಂಗಡಿ: ಎಸ್.ಐ.ಟಿ‌ ಅಧಿಕಾರಿಗಳು ತನ್ನನ್ನು ವಿಚಾರಣೆಗೆಂದು ಕರೆದು ಹಲ್ಲೆ ಮಾಡಿದ್ದಲ್ಲದೆ ಬೆದರಿಕೆ ಹಾಕಿರುವುದಾಗಿ ಹೋರಾಟಗಾರ ಜಯಂತ್ ಟಿ. ರಾಜ್ಯಪಾಲರಿಗೆ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದಾರೆ. ಎಸ್.ಐ.ಟಿ ಅಧಿಕಾರಿಗಳಾದ ಜಿತೇಂದ್ರ ದಯಾಮ, ಸೈಮನ್, ಮಂಜುನಾಥ್ ಆರ್.ಜೆ, ಮಂಜುನಾಥ ಗೌಡ, ಹಾಗೂ ಗುಣಪಾಲ ಸೇರಿ ತನಗೆ ಬೆದರಿಕೆ ಹಾಕಿದ್ದರು, ಬಳಿಕ ದೂರುದಾರ ಚಿನ್ನಯ್ಯನನ್ನು ಕರೆಸಿ ಆತನ ಮೂಲಕ ತನಗೆ ತೀವ್ರವಾಗಿ ಹಲ್ಲೆ ಮಾಡಿಸಿದರು. ಅದೇ ರೀತಿ ಚಿನ್ನಯ್ಯನ ಮೇಲೆ […]

ಎಸ್‌ಐಟಿ ವಿರುದ್ಧವೇ ದೂರು ನೀಡಿದ ಜಯಂತ Read More »

ಮಂಗಳೂರು: ಮಹಿಳೆಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 1.81 ಕೋ. ರೂ. ದೋಚಿದ ಖದೀಮರು

ಖಾತೆಯಿಂದ ಅಕ್ರಮವಾಗಿ ಹಣ ವರ್ಗಾವಣೆಯಾಗಿದೆ ಎಂದು ಬೆದರಿಸಿ ಡಿಜಿಟಲ್‌ ಅರೆಸ್ಟ್‌ ಮಂಗಳೂರು: ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ 1,81,50,000ರೂ. ವಂಚಿಸಿರುವ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆದೆ. ಈ ಬಗ್ಗೆ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಮಹಿಳೆಯೊಬ್ಬರ ಮೊಬೈಲ್‌ಗೆ ಅ.24ರಂದು ಅಪರಿಚಿತ ವ್ಯಕ್ತಿ ಕರೆ ಮಾಡಿದ್ದು, ಮುಂಬೈನ ಕೊಲಾಬ ಪೊಲೀಸ್ ಠಾಣೆಯಿಂದ ಕರೆ ಮಾಡುತ್ತಿರುವುದಾಗಿ ಮಹಿಳೆಯನ್ನು ನಂಬಿಸಿ ಆಕೆಯ ವಿರುದ್ಧ ಅಕ್ರಮ ಹಣ ವರ್ಗಾವಣೆ ಹಾಗೂ ಮಾನವ ಕಳ್ಳ ಸಾಗಾಣಿಕೆ ಮಾಡಿ ಕಮಿಷನ್ ತೆಗೆದುಕೊಂಡ ಆರೋಪವಿದೆ ಎಂದು

ಮಂಗಳೂರು: ಮಹಿಳೆಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 1.81 ಕೋ. ರೂ. ದೋಚಿದ ಖದೀಮರು Read More »

ಮಂಗಳೂರು: 6 ವರ್ಷದ ಹಿಂದೆ ಸ್ವಾಧಾರ ಕೇಂದ್ರದಿಂದ ಕಾಣೆಯಾದ 3 ಮಹಿಳೆಯರ ಮಾಹಿತಿ ನೀಡಲು ಮನವಿ

ಮಂಗಳೂರು: ನಗರದ ಜಪ್ಪಿನಮೊಗರು ಪ್ರಜ್ಞಾ ಸ್ವಾಧಾರ ಕೇಂದ್ರದಲ್ಲಿದ್ದ ಮೂವರು ಮಹಿಳೆಯರು ಕಾಣೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೋಲೀಸ್ ವರದಿಯ ಪ್ರಕಾರ ಬೆಂಗಳೂರಿನ ಉತ್ತರಹಳ್ಳಿ ನಿವಾಸಿಗಳಾದ ರಾಣಿ (26) ಮತ್ತು ಸೋನಿಯಾ (19) ಹಾಗೂ ವಾರಸುದಾರರಿಲ್ಲದೆ ಆಶ್ರಯ ಕೇಂದ್ರದಲ್ಲಿ ವಾಸಿಸುತ್ತಿದ್ದ ಕೋಲ್ಕತ್ತ ಮೂಲದ ನರ್ಗಿಸ್ (35) ಎಂಬವರು 2019ರ ಫೆಬ್ರವರಿ 4ರಂದು ಸ್ವಾಧಾರ ಕೇಂದ್ರದ ಹಿಂಬದಿಯಿಂದ ಓಡಿ ಹೋಗಿದ್ದಾರೆ. ರಾಣಿಯ ಎತ್ತರ 152 ಸೆಂ.ಮೀ., ಗೋಧಿ ಮೈಬಣ್ಣ,

ಮಂಗಳೂರು: 6 ವರ್ಷದ ಹಿಂದೆ ಸ್ವಾಧಾರ ಕೇಂದ್ರದಿಂದ ಕಾಣೆಯಾದ 3 ಮಹಿಳೆಯರ ಮಾಹಿತಿ ನೀಡಲು ಮನವಿ Read More »

ಮಾಲ್‌ನಲ್ಲಿ ಉದ್ಯೋಗಿಯಾಗಿದ್ದ ಮಹಿಳೆ ನಾಪತ್ತೆ

ಮಂಗಳೂರು: ನಗರದ ಮಾಲ್‌ವೊಂದರಲ್ಲಿ ಉದ್ಯೋಗಿಯಾಗಿರುವ 24 ವರ್ಷದ ವಿವಾಹಿತ ಯೊಬ್ಬರು ನವೆಂಬರ್ 11ರ ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಟವರು ನಾಪತ್ತೆಯಾಗಿರುವ ಕುರಿತು ಅವರ ಪತಿ ದೂರು ದಾಖಲಿಸಿದ್ದಾರೆ. ನಾಪತ್ತೆಯಾದ ಮಹಿಳೆಯನ್ನು ಜಪ್ಪು ಸೂಟರ್‌ಪೇಟೆಯ ನಿವಾಸಿ ಕುಮಾರ್ ಅವರ ಪತ್ನಿ ಸುಮಾ ಎನ್. (24) ಎಂದು ಗುರುತಿಸಲಾಗಿದೆ. ಸುಮಾ ಅವರು ಸೋಮವಾರ ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಟವರು ಕೆಲಸದ ಸ್ಥಳವನ್ನು ತಲುಪಿಲ್ಲ. ಅವರ ಪತಿ ಕುಮಾರ್ ಅವರು ಸುಮಾ ಅವರಿಗೆ ಕರೆ ಮಾಡಲು ಪ್ರಯತ್ನಿಸಿದಾಗ ಅವರ ಮೊಬೈಲ್ ಸ್ವಿಚ್

ಮಾಲ್‌ನಲ್ಲಿ ಉದ್ಯೋಗಿಯಾಗಿದ್ದ ಮಹಿಳೆ ನಾಪತ್ತೆ Read More »

ಉಪ್ಪಿನಂಗಡಿ : ವಿಷ ಸೇವಿಸಿದ್ದ ಬಾಲಕಿ ಚಿಕಿತ್ಸೆ ಫಲಿಸದೆ ಸಾವು

ಉಪ್ಪಿನಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನ.12ರಂದು ನಡೆದಿದೆ. ಮೃತಳನ್ನು ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಪಾರಡ್ಕ ನಿವಾಸಿ ಶ್ರೀಧರ ಕುಂಬಾರ ಅವರ ಪುತ್ರಿ ಹರ್ಷಿತಾ (15) ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿಯ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿದ್ದ ಹರ್ಷಿತಾ ನವೆಂಬರ್ 4ರಂದು ತಲೆನೋವು ಕಾರಣದಿಂದ ಶಾಲೆಗೆ ತೆರಳದೆ ಮನೆಯಲ್ಲಿ ಉಳಿದಿದ್ದಳು. ಈ ವೇಳೆ ಮನೆಯಲ್ಲಿ ತಂದಿಟ್ಟಿದ್ದ ಹುಲ್ಲಿಗೆ ಸಿಂಪಡಿಸುವ ಕೀಟನಾಶಕವನ್ನು ಸೇವಿಸಿದ್ದಾಳೆ. ಕೂಲಿ ಕೆಲಸಕ್ಕೆ ತೆರಳಿದ್ದ ತಾಯಿ ಮನೆಗೆ

ಉಪ್ಪಿನಂಗಡಿ : ವಿಷ ಸೇವಿಸಿದ್ದ ಬಾಲಕಿ ಚಿಕಿತ್ಸೆ ಫಲಿಸದೆ ಸಾವು Read More »

ಎಸ್‌ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌

ತಿಮರೋಡಿ, ಮಟ್ಟಣ್ಣವರ್‌ ಸೇರಿ ನಾಲ್ವರ ವಿಚಾರಣೆಗೆ ಎಸ್‌ಐಟಿ ಸಿದ್ಧತೆ ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದ ಮುಂದಿನ ಎಲ್ಲ ಪ್ರಕ್ರಿಯೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದ್ದು ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ನಾಲ್ವರ ವಿಚಾರಣೆ ನಡೆಸಲು ಎಸ್.ಐ.ಟಿ ತಂಡ ಸಿದ್ಧತೆ ನಡೆಸುತ್ತಿದೆ. ಹೈಕೋರ್ಟ್ ಬುಧನಾರ ನೀಡಿದ ಈ ಆದೇಶದಿಂದ ಎಸ್‌ಐಟಿ ತನಿಖೆಗೆ ಹಾಗೂ ಮಹೇಶ್ ಶೆಟ್ಟಿ ಹಾಗೂ ಇತರರ ವಿಚಾರಣೆಗೆ ಇದ್ದ ಅಡೆತಡೆ

ಎಸ್‌ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌ Read More »

ಬಂಟ್ವಾಳ : ಅತ್ತೆ ಮನೆಯಲ್ಲಿದ್ದ ಮುಂಬೈಯ ಯುವತಿ ನಾಪತ್ತೆ

ಬಂಟ್ವಾಳ : ಬೆಂಜನಪದವಿನಲ್ಲಿರುವ ಅತ್ತೆಯ ಮನೆಯಲ್ಲಿ ವಾಸವಾಗಿದ್ದ ಮುಂಬೈ ಮೂಲದ ಅವಿವಾಹಿತ ಯುವತಿಯೊಬ್ಬರು ನವೆಂಬರ್ 9ರಿಂದ ಕಾಣೆಯಾಗಿರುವ ಕುರಿತು ದೂರು ದಾಖಲಾಗಿದೆ. ಬೆಂಜನಪದವಿನ ಶಿವಾಜಿನಗರದ ನಿವಾಸಿ ಮರಿಯಾ ಆಲ್ಬರ್ಟ್ ಡಿಸೋಜಾ ನಾಪತ್ತೆಯಾದ ಯುವತಿ. ಮರಿಯಾ ಒಂದು ವರ್ಷದ ಹಿಂದೆ ತನ್ನ ತಾಯಿಯನ್ನು ಕಳೆದುಕೊಂಡಿದ್ದು, ನಂತರ ಬೆಂಜನಪದವಿನಲ್ಲಿರುವ ತನ್ನ ಅತ್ತೆ ಮೊಲ್ಲಿ ಟೆಲ್ಲಿಸ್ ಅವರೊಂದಿಗೆ ವಾಸವಾಗಿದ್ದಳು. ಆಕೆಯ ತಂದೆ ಆಲ್ಬರ್ಟ್ ಡಿಸೋಜಾ ಮುಂಬೈಯಲ್ಲಿ ನೆಲೆಸಿದ್ದಾರೆ. ನವೆಂಬರ್ 9ರಂದು, ಆಕೆಯ ಅತ್ತೆ ಚರ್ಚ್‌ಗೆ ಹೋಗಿದ್ದರು. ಈ ವೇಳೆ ಮರಿಯಾ ಮನೆಯಿಂದ

ಬಂಟ್ವಾಳ : ಅತ್ತೆ ಮನೆಯಲ್ಲಿದ್ದ ಮುಂಬೈಯ ಯುವತಿ ನಾಪತ್ತೆ Read More »

ಮಂಗಳೂರು: ಅಧಿಕ ಲಾಭಾಂಶದ ಆಮಿಷಕ್ಕೆ ಬಲಿಯಾಗಿ 2 ಕೋ. ರೂ. ಕಳೆದುಕೊಂಡ ವ್ಯಕ್ತಿ

ದೂರು ನೀಡಿದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಸಿದ ವಂಚಕರು ಮಂಗಳೂರು : ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿ ಅಧಿಕ ಲಾಭಗಳಿಸಬಹುದು ಎಂದು ಆಮಿಷವೊಡ್ಡಿ 2 ಕೋ.ರೂ. ವಂಚನೆ ಮಾಡಿರುವ ಬಗ್ಗೆ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪರಿಚಿತ ವ್ಯಕ್ತಿಯೊಬ್ಬ 2022ರ ಮೇ 1ರಂದು ವಾಟ್ಸ್‌ಆ್ಯಪ್ ಸಂದೇಶ ಕಳುಹಿಸಿ ತಾನು ಡೆಲ್ಟಿನ್ ರೋಯಲ್ ಕಂಪನಿಯ ಅಂಕಿತ್ ಎಂದು ಪರಿಚಯಿಸಿಕೊಂಡಿದ್ದ. ಆ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ದುಪ್ಪಟ್ಟು ಹಣ ಹಾಗೂ ಲಾಭಾಂಶವನ್ನು ನೀಡುವುದಾಗಿ ತಿಳಿಸಿದ್ದ.

ಮಂಗಳೂರು: ಅಧಿಕ ಲಾಭಾಂಶದ ಆಮಿಷಕ್ಕೆ ಬಲಿಯಾಗಿ 2 ಕೋ. ರೂ. ಕಳೆದುಕೊಂಡ ವ್ಯಕ್ತಿ Read More »

ಡ್ರಗ್ಸ್‌ ದಂಧೆ : ಮೆಡಿಕಲ್‌ ವಿದ್ಯಾರ್ಥಿ ಸೇರಿ ಮೂವರು ಸೆರೆ

ಉಳ್ಳಾಲ: ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಕೋಟೆಕಾರು ಗ್ರಾಮದ ಬಗಂಬಿಲ ಗೌಂಡ್ ಮತ್ತು ಪೆರ್ಮನ್ನೂರು ಗ್ರಾಮದ ಗಂಡಿ ಎಂಬಲ್ಲಿ ನ.9ರಂದು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 59,300 ರೂ. ಬೆಲೆಬಾಳುವ 1.511 ಕೆಜಿ ತೂಕದ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ 2 ತೂಕ ಮಾಪಕ, 2 ಮೊಬೈಲ್, 1 ಸ್ಕೂಟರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಾಸಗಿ ಆಯುರ್ವೇದ ಕಾಲೇಜಿನಲ್ಲಿ ಬಿಎಎಂಎಸ್ ವಿದ್ಯಾರ್ಥಿ ಆಗಿರುವ ಮಹಾರಾಷ್ಟ್ರದ ಧುಲೆ ನಿವಾಸಿ ಮೊಹಮ್ಮದ್ ನಿಗಾರೀಸ್ (22) ವಿಲಾಸಿ ಜೀವನಕ್ಕಾಗಿ

ಡ್ರಗ್ಸ್‌ ದಂಧೆ : ಮೆಡಿಕಲ್‌ ವಿದ್ಯಾರ್ಥಿ ಸೇರಿ ಮೂವರು ಸೆರೆ Read More »

ಜನವರಿ 16ರಿಂದ 25ರ ವರೆಗೆ ಕಾಜೂರು ಉರೂಸ್‌

ಬೆಳ್ತಂಗಡಿ: ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಕಾಜೂರು ಮಖಾಂ ಶರೀಫ್ ಉರೂಸ್ 2026ರ ಜನವರಿ 16 ರಿಂದ 25ರ ವರೆಗೆ ನಡೆಯಲಿದೆ.‌ ಖಾಝಿ ಶೈಖುನಾ ಸುಲ್ತಾನುಲ್ ಉಲಮಾ, ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ನೇತೃತ್ವದಲ್ಲಿ, ಸಯ್ಯಿದ್ ಕಾಜೂರು ತಂಙಳ್ ಮಾರ್ಗದರ್ಶನದೊಂದಿಗೆ ನಡೆಯುವ ಈ ಆಧ್ಯಾತ್ಮಿಕ ಅನುಭೂತಿಯ ಕಾರ್ಯಕ್ರಮಗಳ ಅಧಿಕೃತ ಘೋಷಣೆಯನ್ನು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಗೌರವಾಧ್ಯಕ್ಷರೂ, ಸಮಸ್ತ ಕೇರಳ ಕೇಂದ್ರ ಮುಶಾವರ ಉಪಾಧ್ಯಕ್ಷರೂ ಆದ ಖುದುವತುಸ್ಸಾದಾತ್ ಅಸಯ್ಯಿದ್

ಜನವರಿ 16ರಿಂದ 25ರ ವರೆಗೆ ಕಾಜೂರು ಉರೂಸ್‌ Read More »

error: Content is protected !!
Scroll to Top